Author: kannadanewsnow57

ಬೆಂಗಳೂರು: ತನ್ನ ಇನ್ಸ್ಟಾ ಗ್ರಾಂನಲ್ಲಿ ಮಹಿಳೆಯೊಬ್ಬರು ತಾನು ಮಾಜಿ ಸಂಸದ ಡಿ.ಕೆ ಸುರೇಶ್ ಅವರ ಪತ್ನಿ ಎಂಬುದಾಗಿ ವೀಡಿಯೋ ಹರಿಬಿಟ್ಟಿದ್ದರು. ಇದು ವೈರಲ್ ಆಗಿ ತೀವ್ರ ವಿವಾದಕ್ಕೂ ಕಾರಣವಾಗಿತ್ತು. ಈ ಬಳಿಕ ಆಕೆಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ನಾನು ಮಾಜಿ ಸಂಸದ ಡಿ.ಕೆ ಸುರೇಶ್ ಪತ್ನಿ ಎಂಬುದಾಗಿ ವೀಡಿಯೋ ಹರಿಬಿಟ್ಟಂತ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಸಂಸದ ಡಿ.ಕೆ ಸುರೇಶ್ ಪತ್ನಿ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಬಿಟ್ಟ ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿ ಗ್ರಾಮದ ಪವಿತ್ರ ಎಂಬುವರ ವಿರುದ್ಧ ರಾಮನಗರ ಸೆನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮಾಜಿ ಸಂಸದ ಡಿ.ಕೆ ಸುರೇಶ್ ಪೋಟೋ ಜೊತೆಗೆ ತನ್ನ ಪೋಟೋ ಎಡಿಟ್ ಮಾಡಿ ಏಪ್ರಿಲ್.8ರಂದು ತಮ್ಮ ಫೇಸ್ ಬುಕ್, ಇನ್ ಸ್ಟಾಗ್ರಾಮ್ ನಲ್ಲಿ ಪವಿತ್ರ ಪೋಸ್ಟ್ ಮಾಡಿದ್ದರು. ಈ ಸಂಬಂಧ ವಕೀಲ ಪ್ರದೀಪ್ ಎಂಬುವರು ಡಿಕೆ ಸುರೇಶ್ ವಿರುದ್ಧ ದುರುದ್ದೇಶದಿಂದ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ…

Read More

ಬೆಂಗಳೂರು: ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ಇಂದು ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ( Karnataka SSLC Exam-1 Results ) ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.…

Read More

ನವದೆಹಲಿ : ಅಕ್ಟೋಬರ್‌ನಲ್ಲಿ ಪ್ರಾರಂಭವಾಗುವ ಋತುವಿನಲ್ಲಿ ಸಕ್ಕರೆ ಕಾರ್ಖಾನೆಗಳು ರೈತರಿಂದ ಕಬ್ಬು ಖರೀದಿಸಬೇಕಾದ ಬೆಲೆಯಲ್ಲಿ ಶೇ. 4.41 ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಹಿಂದೆ ₹340 ರಿಂದ ಕ್ವಿಂಟಲ್‌ಗೆ ₹355 ಕ್ಕೆ ಏರಿಸಲಾಗಿದೆ. ಕಬ್ಬಿನ ನ್ಯಾಯಯುತ ಮತ್ತು ಸಂಭಾವನಾ ಬೆಲೆ (FRP) ಹೆಚ್ಚಳವು 50 ಮಿಲಿಯನ್ ಕಬ್ಬು ರೈತರಿಗೆ ಹಾಗೂ ಸಕ್ಕರೆ ಕಾರ್ಖಾನೆಗಳು ಮತ್ತು ಸಂಬಂಧಿತ ಪೂರಕ ಚಟುವಟಿಕೆಗಳಲ್ಲಿ ಕೆಲಸ ಮಾಡುತ್ತಿರುವ 500,000 ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಸರ್ಕಾರ ತಿಳಿಸಿದೆ. ಹೊಸ FRP 10.25% ಮೂಲ ಚೇತರಿಕೆ ದರಕ್ಕೆ ಅನ್ವಯಿಸುತ್ತದೆ, ಇದು 10.25% ಕ್ಕಿಂತ ಹೆಚ್ಚಿನ ಚೇತರಿಕೆಯಲ್ಲಿ ಪ್ರತಿ 0.1% ಹೆಚ್ಚಳಕ್ಕೆ ಕ್ವಿಂಟಲ್‌ಗೆ ₹3.46 ಪ್ರೀಮಿಯಂ ಅನ್ನು ಒದಗಿಸುತ್ತದೆ ಮತ್ತು ಚೇತರಿಕೆಯಲ್ಲಿ ಪ್ರತಿ 0.1% ಇಳಿಕೆಗೆ ಕ್ವಿಂಟಲ್‌ಗೆ FRPಯಲ್ಲಿ ₹3.46 ರಷ್ಟು ಕಡಿತವನ್ನು ಒದಗಿಸುತ್ತದೆ. ಆದಾಗ್ಯೂ, ಚೇತರಿಕೆ 9.5% ಕ್ಕಿಂತ ಕಡಿಮೆ ಇರುವ ಸಂದರ್ಭಗಳಲ್ಲಿ ಯಾವುದೇ ಕಡಿತವಿರುವುದಿಲ್ಲ. ಅಂತಹ ರೈತರು 2025-26 ರ ಸಕ್ಕರೆ ಹಂಗಾಮಿನಲ್ಲಿ…

Read More

ಬೆಂಗಳೂರು : 2025-26ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ. ಅಥವಾ ತತ್ಸಮಾನ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳತಕ್ಕದ್ದು ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಾನ್ವಯವಾಗಿ, ರಾಜ್ಯ ನೀತಿ ಆಯೋಗದ ಶಿಫಾರಸು / ಅಭಿಪ್ರಾಯವನ್ನು ಪರಿಗಣಿಸಿ ಸರ್ಕಾರದ ಆದೇಶ ಸಂಖ್ಯೆ : ಇಪಿ 250 ಪಿಜಿಸಿ 2021, ದಿನಾಂಕ: 26.07.2022ರಲ್ಲಿ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ 5 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವುದಕ್ಕೆ ಒಂದು ಬಾರಿಯ ಕ್ರಮವಾಗಿ ಸಡಿಲಿಕೆಯನ್ನು ನೀಡಿ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿರುವ ಕಾರಣಗಳಿಂದ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿರುವ ಹಾಗೂ ಜೂನ್ 1 ನೇ ತಾರೀಖಿಗೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಿದ. ಮುಂದುವರೆದು, 2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ ಒಂದನೇ…

Read More

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ- ಕಾರ್ಮಿಕರ ದಿನಾಚರಣೆ ಅಂಗವಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು 12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಖಾಯಂ ನೇಮಕಾತಿ ಪತ್ರ ವಿತರಣೆ ಮಾಡಿದರು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಗುರುವಾರ ನಡೆದ ಪೌರ- ಕಾರ್ಮಿಕರ ದಿನಾಚರಣೆ ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸಮಾಜ ಸುಭದ್ರವಾಗಿರಲು ನಾಲ್ಕು ಆಧಾರ ಸ್ತಂಭಗಳಿರಬೇಕು. ಅವುಗಳೆಂದರೆ ಕೃಷಿಕ, ಕಾರ್ಮಿಕ, ಸೈನಿಕ ಹಾಗೂ ಶಿಕ್ಷಕ. ಕಾರ್ಮಿಕರು ಈ ಸಮಾಜದ ಆಧಾರಸ್ತಂಭ. ನಮ್ಮ ಸರ್ಕಾರ ಪೌರಕಾರ್ಮಿಕರನ್ನು ದೇವರ ಮಕ್ಕಳು, ಸ್ವಚ್ಛತಾ ರಾಯಭಾರಿಗಳು ಎಂದು ಭಾವಿಸುತ್ತಿದೆ. ನೀವು ಸಮಾಜದ ಆರೋಗ್ಯ ಕಾಪಾಡುತ್ತಿರುವ ವೈದ್ಯರು, ನೀವು ಬೆಂಗಳೂರು ನಗರವನ್ನು ಸುಂದರವಾಗಿಟ್ಟು ಸೇವೆ ಮಾಡಿರುವುದಕ್ಕೆ ಈ ನಗರಕ್ಕೆ ವಿಶ್ವ ಮಟ್ಟದ ಹೆಸರು…

Read More

ಮಂಗಳೂರು : ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ ಬಂದ್ ಮಾಡಲು ಕರೆ ನೀಡಲಾಗಿದೆ. ಸುಹಾಸ್ ಶೆಟ್ಟಿ ಮತ್ತು ಐವರು ಸಹಚರರು ಕಾರ್ ನಲ್ಲಿ ಹೋಗುತ್ತಿದ್ದರು. ಜಿಹಾದ್ ಇಸ್ಲಾಮಿಕ್ ಉಗ್ರ ಮುಸಲ್ಮಾನರು ಹತ್ಯೆ ಮಾಡಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದು ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಮಂಗಳೂರಿನ ಬಜ್ಪೆ ಬಳಿಯಲ್ಲಿ ಜುಲೈ 22, 2022ರಂದು ಸುರತ್ಕಲ್ ಫಾಜಿಲ್ ಕೊಲೆಯಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ…

Read More

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಹೈಕೋರ್ಟ್ ಆದೇಶದಂತೆ 185 ಅಭ್ಯರ್ಥಿಗಳಿಗೆ ಕೆಎಎಸ್ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಗದ ಉಲೆಖಿತ ಪ್ರಕಟಣೆಯನ್ನು ಮುಂದುವರೆಸುತ್ತಾ, Petitioner is permitted to appear and take the main examination as scheduled subject to outcome of the petition. Petitioner shall not plead any equity” ಮಧ್ಯಂತರ ಆದೇಶ ನೀಡಿದ್ದು, ಸದರಿ ಪ್ರಕರಣಗಳು ಮತ್ತು ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ A.No:1503-1514/1493-1501/1489-1491/1486/1487/20250 ಅರ್ಜಿದಾರರು/ಅರ್ಜಿದಾರರಾದ ಕೆಳಕಂಡ ಅಭ್ಯರ್ಥಿಗಳಿಗೆ ಮಾನ 144 0 ನ್ಯಾಯಾಲಯಗಳು ಹೊರಡಿಸುವ ಅಂತಿಮ ತೀರ್ಪಿಗೊಳಪಟ್ಟಂತೆ ಆಯೋಗವು ಮುಖ್ಯಪರೀಕ್ಷೆ ಬರೆಯಲು ಆಫ್ಲೈನ್ ನಲ್ಲಿ ಆಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿರುತ್ತದೆ. ಸದರಿ ಪ್ರಕಟಣೆಗಳನ್ವಯ ಮುಖ್ಯಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮುಖ್ಯ…

Read More

ಬೆಂಗಳೂರು : ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7,000 ರೂ. ದೊರೆಯುತ್ತಿದ್ದ ಸಂಬಳವನ್ನು 17,000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯ ರಣಾರ್ಭಟಕ್ಕೆ ಮರ ಬಿದ್ದು ಆಟೋ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಕತ್ರಿಗುಪ್ಪೆಯ ಎಂ.ಎಂ ಬಾರ್ ಬಳಿ ಭಾರೀ ಮಳೆಗೆ ಮರಬಿದ್ದು ಆಟೋ ಅಪ್ಪಚ್ಚಿಯಾಗಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಆಟೋ ಚಾಲಕನ ಇಟ್ಟಮಡು ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಬಂಕ್ ನಲ್ಲಿ ಗ್ಯಾಸ್ ತುಂಬಿಸಿಕೊಂಡು ಬರುತ್ತಿದ್ದ ವೇಳೆ ಆಟೋ ಮೇಲೆ ಮರ ಬಿದ್ದು ಚಾಲಕ ಮಹೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. ಚೆನ್ನಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು: ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ಇಂದು ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ( Karnataka SSLC Exam-1 Results ) ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.…

Read More