Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಮೇ ತಿಂಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಬದಲಾವಣೆಗಳು ಸಂಭವಿಸಲಿವೆ. ಬ್ಯಾಂಕ್ ರಜಾದಿನಗಳಾಗಲಿ ಅಥವಾ ಎಟಿಎಂಗಳಿಂದ ಹಣವನ್ನು ಹಿಂಪಡೆಯಲು ಶುಲ್ಕಗಳಾಗಲಿ, ಬ್ಯಾಂಕಿಂಗ್ಗೆ ಸಂಬಂಧಿಸಿದ ಹಲವು ನಿಯಮಗಳು ಮೇ 1 ರಿಂದ ಬದಲಾಗುತ್ತವೆ. ಸರ್ಕಾರವು ಒಂದು ರಾಜ್ಯ-ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿಸಿದೆ. ಇದರ ಅಡಿಯಲ್ಲಿ, ಈಗ ಮೇ 1 ರಿಂದ 15 ಗ್ರಾಮೀಣ ಬ್ಯಾಂಕುಗಳು ವಿಲೀನಗೊಳ್ಳಲಿವೆ. ಮೇ 1 ರಿಂದ 43 ಆರ್ಆರ್ಬಿ ಬ್ಯಾಂಕುಗಳಲ್ಲಿ 15 ವಿಲೀನಗೊಳ್ಳಲಿವೆ. ಬ್ಯಾಂಕುಗಳನ್ನು ಏಕೆ ವಿಲೀನಗೊಳಿಸಲಾಗುತ್ತಿದೆ? ಈ ವಿಲೀನದೊಂದಿಗೆ, ದೇಶದಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಸಂಖ್ಯೆ 43 ರಿಂದ 28 ಕ್ಕೆ ಇಳಿಯಲಿದೆ. ವಿಲೀನಗೊಳ್ಳಲಿರುವ 15 ಬ್ಯಾಂಕುಗಳಲ್ಲಿ ಆಂಧ್ರಪ್ರದೇಶ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ ಮತ್ತು ರಾಜಸ್ಥಾನದ ಗ್ರಾಮೀಣ ಬ್ಯಾಂಕುಗಳು ಸೇರಿವೆ. ಬ್ಯಾಂಕುಗಳ ವಿಲೀನವು ಬ್ಯಾಂಕಿಂಗ್ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಏಕೀಕೃತ IFSC ಮತ್ತು MICR ಕೋಡ್ಗಳನ್ನು…
ದಾವಣಗೆರೆ : ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ಶ್ರಾವಣಿ (23) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಎಂಬಿಎ ಓದುತ್ತಿದ್ದ ಬಳ್ಳಾರಿಯ ಶ್ರಾವಣಿ, ಹರಿಹರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದರು. ಮೊಬೈಲ್ ನಲ್ಇ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು : ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಆರೋಗ್ಯದ ಕಾಳಜಿ ಬಗ್ಗೆ ನಿಗಾವಹಿಸುವುದು ಅತ್ಯಗತ್ಯವಾಗಿದೆ. ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉರಿ ಬಿಸಿಲು, ಬಿಸಿಗಾಳಿಯಿಂದ ಹಗಲಿನಲ್ಲಿ ಓಡಾಡುವುದು ಕಷ್ಟವೆನಿಸುತ್ತಿದೆ. ತಲೆನೋವು, ಆಯಾಸ, ಮೈಯುರಿಯಂತಹ ಸಮಸ್ಯೆಗಳು ಉದ್ಭವಿಸುತ್ತಿವೆ. ಬಿಸಿಲಾಘಾತದಂತಹ ಗಂಭೀರ ಸಮಸ್ಯೆಗಳು ತಲೆದೋರುತ್ತಿವೆ. ಇಂತಹ ಸಂದರ್ಭದಲ್ಲಿ ಆರೋಗ್ಯದ ಕಾಳಜಿ ಬಗ್ಗೆ ನಿಗಾವಹಿಸುವುದು ಅತ್ಯಗತ್ಯವಾಗಿದೆ. ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ. https://twitter.com/i/status/1917458930793603465
ಬೀದರ್ : ರಾಜ್ಯದಲ್ಲಿ ಮತ್ತೊಂದು ಭೀಕರ ಕೃತ್ಯವೊಂದು ನಡೆದಿದ್ದು, 2 ವರ್ಷದ ಮಗನ ಎದುರಲ್ಲೇ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕೊಹಿನೂರ ಪಹಾಡ್ ಗ್ರಾಮದ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಕತ್ತು ಕೊಯ್ದು ರಾಜು ಕೊಳಸುರೆ(28) ಶಾರದಾ(27) ಅವರನ್ನು ಕೊಲೆ ಮಾಡಲಾಗಿದೆ. ಮೃತಪಟ್ಟ ದಂಪತಿ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜಾಫರ್ ವಾಡಿ ಗ್ರಾಮದ ನಿವಾಸಿಗಳಾಗಿದ್ದಾರೆ. ಜಾಫರವಾಡಿಯ ದತ್ತಾತ್ರೇಯ ಮತ್ತು ತುಕಾರಾಮ ಅವರು ದಂಪತಿ ಕೊಲೆಗೈದ ನಂತರ ಪೊಲೀಸರಿಗೆ ಶರಣಾಗಿದ್ದಾರೆ. ದತ್ತಾತ್ರೇಯ ತಂಗಿಯ ಜೊತೆಗೆ ರಾಜು ಅನೈತಿಕ ಸಂಬಂಧ ಹೊಂದಿದ್ದು, ಇಬ್ಬರು ಜೊತೆಗಿರುವ ಫೋಟೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ. ಇದರಿಂದ ಕೋಪಗೊಂಡು ರಾಜು ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣದ ಮಂಠಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶ್ರೀನಗರ : ಜಮ್ಮು&ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಪಹಲ್ಗಾಮ್ ಭೇಟಿ ನೀಡಿದ್ದು, ಬೈಸರನ್ ಕಣಿವೆಯಲ್ಲಿ 40 ಕಾಟ್ರಿಡ್ಜ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕಣಿವೆಯಲ್ಲಿ ರಾಷ್ಟ್ರೀಯ ತನಿಖಾ ದಳ, ವಿಧಿವಿಜ್ಞಾನ ತಜ್ಞರಿಂದ ತನಿಖೆ ಆರಂಭಿಸಲಾಗಿದೆ. CRPF, ಸ್ಥಳೀಯ ಪೊಲೀಸರಿಂದ ಅರಣ್ಯದಲ್ಲಿ ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ.
ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಮಹತ್ವದ ಸಭೆ ಆರಂಭವಾಗಿದೆ. ಇದರೊಂದಿಗೆ, ಪಿಎಂ ಮೋದಿ ಮತ್ತೊಮ್ಮೆ ಇಂದು ಸಿಸಿಎಸ್ ಸಭೆ ನಡೆಸಲಿದ್ದಾರೆ. ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭೀಕರ ಹತ್ಯೆಯ ನಂತರ ಭದ್ರತಾ ಪರಿಸ್ಥಿತಿಯ ಬಗ್ಗೆ ಆಗಾಗ್ಗೆ ಉನ್ನತ ಮಟ್ಟದ ಸಭೆಗಳು ನಡೆಯುತ್ತಿರುವ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಈ ಹಿಂದೆ, ಭದ್ರತಾ ಕ್ಯಾಬಿನೆಟ್ ಸಮಿತಿಯ (ಸಿಸಿಎಸ್) ಸಭೆ ನಡೆಯಿತು ಮತ್ತು ಮುಂದಿನ ಸಭೆಯನ್ನು ಬುಧವಾರ ನಿಗದಿಪಡಿಸಲಾಗಿದೆ. ಆ ಸಭೆಯ ನಂತರ, ಸಿಂಧೂ ಜಲ ಒಪ್ಪಂದದ ನಿಷೇಧ, ಅಟ್ಟಾರಿ ಗಡಿಯನ್ನು ಮುಚ್ಚುವುದು ಮತ್ತು ವೀಸಾಗಳನ್ನು ರದ್ದುಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಮಿಲಿಟರಿಯೇತರ ಕ್ರಮಗಳನ್ನು ಸರ್ಕಾರ ಘೋಷಿಸಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರೊಂದಿಗಿನ ನಿರ್ಣಾಯಕ ಸಭೆಯ ನಂತರ, ಪ್ರಧಾನಿ ಮೋದಿ ಅವರು ಸೇನೆಗೆ “ವಿಧಾನ, ಗುರಿ ಮತ್ತು…
ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶದ ದಿನಾಂಕದ ಇಂದು ಪರೀಕ್ಷಾ ಮಂಡಳಿ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ. ಪರೀಕ್ಷೆ-1 ರಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕಗಳು ಬರದಿದ್ದರೆ ಪರೀಕ್ಷೆ- 2 ಮತ್ತು 3ರನ್ನು ಬರೆದು ಉತ್ತೀರ್ಣರಾಗಲು ಅವಕಾಶ ನೀಡಲಾಗಿದೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆಯಲಿವೆ. ಒಟ್ಟು 2818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. 6 ವಿಷಯಗಳಿಂದ ವಿದ್ಯಾರ್ಥಿಗಳ 55 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆದಿದೆ. ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಮುಗಿದಿದ್ದು, ಕಂಪ್ಯೂಟರ್ ದಾಖಲೀಕರಣ ಮುಗಿದಿದ್ದು, ಮೇ 2ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲು ಮಂಡಳಿ ಚಿಂತನೆ ನಡೆಸಿದೆ ಎನ್ನಲಾಗಿದೆ.
ಬೆಂಗಳೂರು : ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯದ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ವ್ಯಕ್ತಿಯನ್ನು ಗುಂಪೊಂದು ಕೊಲೆ ಮಾಡಲಾಗಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೇ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದರೂ ಅದು ತಪ್ಪು – ಅದು ದೇಶದ್ರೋಹದ ಕೃತ್ಯ, ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹಲ್ಲೆ ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಮತ್ತು ಈ ಪ್ರಕರಣದಲ್ಲಿ 15 ಜನರನ್ನು ಬಂಧಿಸಲಾಗಿದೆ” ಎಂದು ಹೇಳಿದ್ದಾರೆ. ಏಪ್ರಿಲ್ 27 ರಂದು ಕುಡುಪು ಪ್ರದೇಶದ ಕಲ್ಲುರ್ಟಿ ದೇವಸ್ಥಾನದ ಬಳಿ ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ “ಪಾಕಿಸ್ತಾನ ಜಿಂದಾಬಾದ್” ಎಂದು ಕೂಗಿದ ಬಳಿಕ ಆ ವ್ಯಕ್ತಿಯನ್ನು ಒಂದು ಗುಂಪು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. https://twitter.com/ANI/status/1917459668265492842?ref_src=twsrc%5Egoogle%7Ctwcamp%5Eserp%7Ctwgr%5Etweet
ನವದೆಹಲಿ : ಇ-ಕೆವೈಸಿ (ಡಿಜಿಟಲ್ ನೋ ಯುವರ್ ಕಸ್ಟಮರ್) ಪ್ರಕ್ರಿಯೆಯನ್ನು ಅಂಗವಿಕಲ ವ್ಯಕ್ತಿಗಳಿಗೂ ಲಭ್ಯವಾಗುವಂತೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆಸಿಡ್ ದಾಳಿಯ ಬಲಿಪಶುಗಳು ಮತ್ತು ಅಂಧರು ಅಥವಾ ಕಡಿಮೆ ದೃಷ್ಟಿ ಹೊಂದಿರುವ ವ್ಯಕ್ತಿಗಳು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ ಎದುರಿಸುವ ಸಮಸ್ಯೆಗಳಿಗೆ ಸಂಬಂಧಿಸಿದ ಪಿಐಎಲ್ ಅರ್ಜಿಗಳ ಕುರಿತು ತೀರ್ಪು ನೀಡುತ್ತಾ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು, ಡಿಜಿಟಲ್ ಪ್ರವೇಶದ ಹಕ್ಕು ಭಾರತದ ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಜೀವಿಸುವ ಹಕ್ಕಿನಲ್ಲಿ ಅಂತರ್ಗತವಾಗಿದೆ ಎಂದು ಹೇಳಿದೆ. https://twitter.com/ANI/status/1917458412922888700?ref_src=twsrc%5Egoogle%7Ctwcamp%5Eserp%7Ctwgr%5Etweet
ನವದೆಹಲಿ : ಪಹಲ್ಗಾಮ್ ಉಗ್ರ ದಾಳಿ ಬೆನ್ನಲ್ಲೇ ಭಾರತದ ದಾಳಿ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮೇ.2 ರವರೆಗೆ ನೋ ಫ್ಲೈಜೋನ್ ಅನ್ನು ಪಾಕಿಸ್ತಾನ ಘೋಷಣೆ ಮಾಡಿದೆ. ಹೌದು, ಮೇ.2ರವರೆಗೆ ಇಸ್ಲಮಾಬಾದ್, ಲಾಹೋರ್ ನಲ್ಲಿ ನೋ ಫ್ಲೈ ಜೋನ್ ಘೋಷಣೆ ಮಾಡಲಾಗಿದ್ದು, ವಿಮಾನ ಹಾರಾಟಕ್ಕೆ ನಿರ್ಬಂಧ ವಿಧಿಸಿ ಪಾಕ್ ಸರ್ಕಾರ ಆದೇಶ ಹೊರಡಿಸಿದೆ.













