Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದು ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ ಮೂರು ದಿನಕ್ಕೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್, ಮೈಸೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮುಂಗಾರು ಮಳೆ ಪದಾರ್ಪಣೆಯಾಗಿ ಒಂದೇ ದಿನಕ್ಕೆ ಕರಾವಳಿ, ಮಲೆನಾಡು ಸೇರಿ ಒಳನಾಡಿನ ವಿವಿಧ ಜಿಲ್ಲೆಗಳನ್ನು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಿನ್ನೆ ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಸೇರಿ ಮೊದಲಾದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಮುಂಗಾರು ಮಾರುತಗಳು ಪ್ರಬಲವಾಗಿರುವುದರಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.
ಬೆಂಗಳೂರು : ರಾಜ್ಯದಲ್ಲಿ ಮೇ.29 2025-26ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷ ಹಾಗೂ ತರಗತಿ ಚಟುವಟಿಕೆಗಳು ಆರಂಭವಾಗಲಿವೆ. ಮೇ 29 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವದ ಮೂಲಕ ಮಕ್ಕಳನ್ನು ಸ್ವಾಗತಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಶಾಲೆ ಆರಂಭದ ದಿನದಿಂದಲೇ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭಿಸಿ ಜೂ.30ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಪುಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ. ಮೊದಲನೇ ಅವಧಿ – ದಿನಾಂಕ: 29-05-2025 ರಿಂದ ದಿನಾಂಕ: 19-09-2025 ರವರೆಗೆ ಎರಡನೇ ಅವಧಿ – ದಿನಾಂಕ: 08-10-2025 ರಿಂದ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮೇ.26ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ…
ಮೊರಾದಾಬಾದ್ : ಮದುವೆಯಾದ ಕೇವಲ ನಾಲ್ಕು ತಿಂಗಳ ನಂತರ, ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ 22 ವರ್ಷದ ಅಮ್ರೀನ್ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಮಾವ ಮತ್ತು ಅತ್ತಿಗೆಯನ್ನು ದೂಷಿಸುವ ವೀಡಿಯೊವನ್ನು ರೆಕಾರ್ಡ್ ಮಾಡಿದ ನಂತರ, ಅವರು ಕೋಣೆಯಲ್ಲಿ ನೇಣು ಹಾಕಿಕೊಂಡರು. 35 ಸೆಕೆಂಡುಗಳ ಕ್ಲಿಪ್ ಕಾಣಿಸಿಕೊಂಡಿದ್ದು, ಅದರಲ್ಲಿ ಸಂತ್ರಸ್ತೆ ತನ್ನ ಪತಿ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾಗ ತನ್ನ ಮಾವ ಮತ್ತು ಅತ್ತಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ. ತನ್ನ ಸಾವಿಗೆ ಕೆಲವು ಕ್ಷಣಗಳ ಮೊದಲು ಅವಳು ತನ್ನ ತಂದೆಗೆ ವೀಡಿಯೊ ಕರೆ ಮಾಡಿ, ದೌರ್ಜನ್ಯದ ಬಗ್ಗೆ ತಿಳಿಸಿದಳು, ಆದರೆ ಅವರು ಬರುವ ಹೊತ್ತಿಗೆ, ಅವಳು ಈಗಾಗಲೇ ಸಾವನ್ನಪ್ಪಿದ್ದಳು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಔಪಚಾರಿಕ ದೂರಿಗಾಗಿ ಕಾಯುತ್ತಿದ್ದಾರೆ. https://twitter.com/priyarajputlive/status/1926518375699657173?ref_src=twsrc%5Etfw%7Ctwcamp%5Etweetembed%7Ctwterm%5E1926518375699657173%7Ctwgr%5E3408c9d3ba7181bccfeb4dfa44b79ced4478b030%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fenglish%2Flatestly-epaper-dh91bfc27fb6cf46a58e6b6df12965bd61%2Fmoradabadwomandiesbysuicideblamesinlawsinfinalvideobeforehangingherselfinuttarpradesh-newsid-n665729599
ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಜೂನ್ 1 ರಿಂದ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರಾದ ಕೆ.ಎ. ದಯಾನಂದ ಈ ಬಗ್ಗೆ ಮಾಹಿತಿ ನೀಡಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಜೂನ್ 1ರಿಂದಲೇ ರಜಾ ದಿನಗಳಲ್ಲಿಯೂ ಸಬ್ ರಿಜಿಸ್ಟರ್ ಕಚೇರಿಗಳನ್ನು ತೆರೆಯಲು ನಿರ್ಧರಿಸಿವೆ. ರಾಜ್ಯದ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಒಂದು ಕಚೇರಿ ಮಾತ್ರ ಕಾರ್ಯನಿರ್ವಹಿಸಲಿದೆ. ಪ್ರತಿ ಸಬ್ ರಿಜಿಸ್ಟ್ರಾರ್ ಕಚೇರಿಗಳು ಸರದಿ ಆಧಾರದ ಮೇಲೆ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನದಂದು ಕಾರ್ಯ ನಿರ್ವಹಿಸಬೇಕು.ರಜಾ ದಿನ ಕಾರ್ಯನಿರ್ವಹಿಸಿದ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ರಜಾ ದಿನವೆಂದು ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳ ರಜಾ ದಿನ ಕರ್ತವ್ಯ ನಿರ್ವಹಿಸುವ ವೇಳಾಪಟ್ಟಿಯನ್ನು ಕಾವೇರಿ 2.0 ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಏನಾದರೂ…
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತ ವಸತಿ, ವಾಣಿಜ್ಯ ಕಟ್ಟಡ ನಿರ್ಮಾಣ ನಿರ್ಬಂಧಿಸಲು ಮಾರ್ಗಸೂಚಿ ಹೊರಡಿಸಿ ರುವ ರಾಜ್ಯ ಸರಕಾರವು, ಸಾರ್ವಜನಿಕ ಆಸ್ತಿಗಳಲ್ಲಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡಗಳ ನೆಲಸಮಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರ, ಸಾರ್ವಜನಿಕ ಸ್ವತ್ತಿನ ಹಾಗೂ ಕರೆ ಕುಂಟೆ, ಕಾಲುವೆ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಸ್ವತ್ತಿನಲ್ಲಿ ನಿರ್ಮಾಣ ಮಾಡಿರುವಂತ ಕಟ್ಟಡ ನೆಲ ಸಮಗೊಳಿಸಲು ಎಲ್ಲಾ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಉಲ್ಲೇಖಿತ (1)ರ ಟಿಪ್ಪಣಿಯೊಡನೆ ಲಗತ್ತಿಸಿರುವ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಉಲ್ಲೇಖ (2) ರಲ್ಲಿನ ತೀರ್ಪಿನಲ್ಲಿ, ಅನಧಿಕೃತವಾಗಿ ನಿರ್ಮಿಸುತ್ತಿರುವ ಹಾಗೂ ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ, ನಿರ್ಮಿಸುತ್ತಿರುವ…
ನವದೆಹಲಿ: ಭಾರತೀಯ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು ಎಂದು ಪರಿಗಣಿಸಲಾದ ಔಷಧಿಗಳ ಗುಣಮಟ್ಟದ ಬಗ್ಗೆ ಮತ್ತೊಮ್ಮೆ ಕಳವಳಗಳು ವ್ಯಕ್ತವಾಗಿವೆ. ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO)ಯ ಏಪ್ರಿಲ್ 2025 ರ ವರದಿಯು ದೇಶಾದ್ಯಂತ ತೆಗೆದುಕೊಂಡ ಸುಮಾರು 3000 ಔಷಧ ಮಾದರಿಗಳಲ್ಲಿ 196 ಮಾದರಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಿಲ್ಲ ಎಂದು ಬಹಿರಂಗಪಡಿಸಿದೆ. CDSCO ಪ್ರತಿ ತಿಂಗಳು ವಿವಿಧ ರಾಜ್ಯಗಳಿಂದ ಔಷಧಿಗಳ ಮಾದರಿಗಳನ್ನು ಸಂಗ್ರಹಿಸಿ ಅವುಗಳ ಗುಣಮಟ್ಟವನ್ನು ಪರಿಶೀಲಿಸುತ್ತದೆ. ಈ ಬಾರಿ ಕೇಂದ್ರ ಪ್ರಯೋಗಾಲಯದಲ್ಲಿ 60 ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿರುವುದು ಕಂಡುಬಂದಿದ್ದು, ರಾಜ್ಯದ ಪ್ರಯೋಗಾಲಯಗಳಲ್ಲಿ 136 ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿರುವುದು ಕಂಡುಬಂದಿದೆ. ಈ ಮಾದರಿಗಳನ್ನು ‘ಪ್ರಮಾಣಿತ ಗುಣಮಟ್ಟವಲ್ಲದ’ (NSQ) ವರ್ಗದಲ್ಲಿ ಇರಿಸಲಾಗಿದೆ, ಅಂದರೆ ಅವು ಸಂಪೂರ್ಣವಾಗಿ ಹಾನಿಕಾರಕವಲ್ಲ, ಆದರೆ ಅಗತ್ಯವಿರುವ ಗುಣಮಟ್ಟದ ಮಾನದಂಡಗಳಲ್ಲಿ ಕೊರತೆ ಕಂಡುಬಂದಿದೆ. ಯಾವ ಔಷಧಿಗಳು ವಿಫಲವಾದವು? ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವುದು ಕಂಡುಬಂದ ಔಷಧಿಗಳಲ್ಲಿ ಸಾಮಾನ್ಯವಾಗಿ ಬಳಸುವ ಪ್ಯಾರಸಿಟಮಾಲ್ 500 ಮಿಗ್ರಾಂ, ಗ್ಲಿಮೆಪಿರೈಡ್ (ಮಧುಮೇಹಕ್ಕೆ), ಟೆಲ್ಮಿಸಾರ್ಟನ್ (ಅಧಿಕ ರಕ್ತದೊತ್ತಡ), ಮೆಟ್ರೋನಿಡಜೋಲ್ (ಸೋಂಕುಗಳಿಗೆ),…
ಮುಂಬೈ : ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದ ನಾಯಕನಾಗಿ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ..ಉಪನಾಯಕನಾಗಿ ರಿಷಬ್ ಪಂತ್ ನೇಮಕ ಗೊಂಡಿದ್ದಾರೆ. ಇಂದು ಬಿಸಿಸಿಐ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟಿಸುತ್ತಿದ್ದು, ಮೊದಲಿಗೆ ಟೀಂ ಇಂಡಿಯಾದ ನಾಯಕರಾಗಿ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ. ಭಾರತ ಪುರುಷರ ಟೆಸ್ಟ್ ತಂಡ ಶುಭಮನ್ ಗಿಲ್ ಸಿ ರಿಷಭ್ ಪಂತ್ ವಿಸಿ ಡಬ್ಲ್ಯೂಕೆ ಯಶಸ್ವಿ ಜೈಸ್ವಾಲ್ ಕೆಎಲ್ ರಾಹುಲ್ ಸಾಯಿ ಸುದರ್ಶನ್ ಅಭಿಮನ್ಯು ಈಶ್ವರನ್ ಕರುಣ್ ನಾಯರ್ ನಿತೀಶ್ ಕುಮಾರ್ ರೆಡ್ಡಿ ರವೀಂದ್ರ ಜಡೇಜಾ ಧ್ರುವ್ ಜುರೆಲ್ WK ವಾಷಿಂಗ್ಟನ್ ಸುಂದರ್ ಶಾರ್ದೂಲ್ ಠಾಕೂರ್ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ಪ್ರಸಿದ್ಧ್ ಕೃಷ್ಣ ಆಕಾಶ್ ದೀಪ್ ಅರ್ಷದೀಪ್ ಸಿಂಗ್ ಕುಲದೀಪ್ ಯಾದವ್ https://twitter.com/BCCI/status/1926187959910269166?ref_src=twsrc%5Egoogle%7Ctwcamp%5Eserp%7Ctwgr%5Etweet
ಬಳ್ಳಾರಿ : ವಿಜಯನಗರದ ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಟೆಸ್ಟಿಂಗ್ ಮಾಡಿದಾಗ ಮಹಿಳೆಗೆ ಕೊರೊನಾ ಇರುವುದು ಪತ್ತೆಯಾಗಿದೆ. ವಿಜಯನಗರದಲ್ಲಿ 54 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36 ಕ್ಕೆ ಏರಿಕೆಯಾಗಿದೆ.
ನವದೆಹಲಿ : UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ 2025 ಮೇ 26 ರಂದು ನಡೆಯಲಿದ್ದು, ಪ್ರವೇಶ ಪತ್ರಗಳು ಈಗಾಗಲೇ upsc.gov.in ನಲ್ಲಿ ಲೈವ್ ಆಗಿವೆ. ಸಾವಿರಾರು ಆಕಾಂಕ್ಷಿಗಳು ಪರೀಕ್ಷೆಗೆ ಹಾಜರಾಗಲು ಸಿದ್ಧರಿರುವುದರಿಂದ, ಕೇಂದ್ರಕ್ಕೆ ಏನು ತರಬೇಕು ಮತ್ತು ಏನು ತರಬಾರದು ಎಂಬುದನ್ನು ನಿಖರವಾಗಿ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಪರೀಕ್ಷೆಯನ್ನು ಎರಡು ಪಾಳಿಗಳಲ್ಲಿ ನಡೆಸಲಾಗುತ್ತದೆ – ಮೊದಲ ಪಾಳಿ ಬೆಳಿಗ್ಗೆ 9:30 ರಿಂದ ಮತ್ತು ಎರಡನೆಯ ಪಾಳಿ ಮಧ್ಯಾಹ್ನ 2:30 ರಿಂದ. ಆದರೆ ನೆನಪಿಡಿ, ಶಿಫ್ಟ್ ಪ್ರಾರಂಭವಾಗುವ ಕನಿಷ್ಠ 30 ನಿಮಿಷಗಳ ಮೊದಲು ನೀವು ಕೇಂದ್ರವನ್ನು ತಲುಪಬೇಕು, ಏಕೆಂದರೆ ಆಗ ಪ್ರವೇಶ ಮುಗಿಯುತ್ತದೆ. UPSC ಪ್ರಿಲಿಮ್ಸ್ 2025 ಗೆ ಏನು ತರಬೇಕು ಅಗತ್ಯ ವಸ್ತುಗಳನ್ನು ಮಾತ್ರ ತನ್ನಿ: ನಿಮ್ಮ ಪ್ರವೇಶ ಪತ್ರದ ಮುದ್ರಣ (ಡಿಜಿಟಲ್ ಪ್ರತಿಗಳಿಲ್ಲ) ಕಪ್ಪು ಬಾಲ್ ಪಾಯಿಂಟ್ ಪೆನ್ – ಬೇರೆ ಯಾವುದೇ ಪೆನ್ ಅನ್ನು ಸ್ವೀಕರಿಸಲಾಗುವುದಿಲ್ಲ ನಿಮ್ಮ ಪ್ರವೇಶ ಪತ್ರದಲ್ಲಿ ನಮೂದಿಸಲಾದ ಐಡಿಗೆ ಹೊಂದಿಕೆಯಾಗುವ ಫೋಟೋ ಐಡಿ ನಿಮ್ಮ…













