Subscribe to Updates
Get the latest creative news from FooBar about art, design and business.
Author: kannadanewsnow57
BREAKING : 24 ಗಂಟೆಗಳಲ್ಲಿ ಕೇರಳಕ್ಕೆ `ಮುಂಗಾರು ಪ್ರವೇಶ’ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ | Monsoon rain
ಬೆಂಗಳೂರು : 24 ಗಂಟೆಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದ್ದು, 16 ವರ್ಷಗಳ ನಂತರ ಮೊದಲಬಾರಿಗೆ ಅವಧಿಗಿಂತ ಮೊದಲು ರಾಜ್ಯದಲ್ಲಿ ಮಳೆಯಾಗಲಿದೆ. ಕೇರಳಕ್ಕೆ ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಮೂರೂ ಜಿಲ್ಲೆಗಳಿಗೆ ಶನಿವಾರದಿಂದ ಒಂದು ವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುದಂತೆ ಸೂಚಿಸಲಾಗಿದೆ. ಹೀಗಾಗಿ ಮೀನುಗಾರರು ವಾಪಸಾಗಿದ್ದಾರೆ. ಇಂದಿನಿಂದ ಮೇ 28ರ ವರೆಗೆ ಶಿವಮೊಗ್ಗ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮುಂದಿನ ಐದು ದಿನ ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರವಾಗಿ ಗುಡುಗು ಸಹಿತ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಉಡುಪಿ, ಶಿವಮೊಗ್ಗ, ಬೆಳಗಾವಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಭಾರೀ ಮಳೆಯಾಗಲಿದ್ದು, ಗುಡುಗು ಮಿಂಚು ಸಮೇತ ಮಳೆ…
ಬೆಂಗಳೂರು : ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಮುಂದಾಗಿರುವ ಸರ್ಕಾರದ ಪ್ರಸ್ತಾವ ವಿರೋಧಿಸಿ ಮದ್ಯ ಮಾರಾಟಗಾರರು ಮೇ. 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ. ರಾಜ್ಯ ಸರ್ಕಾರವು ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ. ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಕರುಣಾಕರ್ ಹೆಗ್ಡೆ ತಿಳಿಸಿದ್ದಾರೆ. ರಾಜ್ಯದಲ್ಲಿ ಜುಲೈನಿಂದ ಅಬಕಾರಿ ವರ್ಷ ಆರಂಭವಾಗಲಿದ್ದು, ಆಗ ರಾಜ್ಯದ ಎಲ್ಲಾ 13 ಸಾವಿರಕ್ಕೂ ಅಧಿಕ ಅಬಕಾರಿ ಸನ್ನದುದಾರರು ತಮ್ಮ ಲೈಸೆನ್ಸ್ ನವೀಕರಿಸಿಕೊಳ್ಳಬೇಕಿದೆ.…
ಮುಂಬೈ : ದೇಶಾದ್ಯಂತ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿದ್ದು, ಇದೀಗ ಮಹಾರಾಷ್ಟ್ರದಲ್ಲಿ ಒಂದೇ ದಿನ 41 ಕೊರೊನಾ ಕೇಸ್ ಪತ್ತೆ, ಮೂವರು ಬಲಿ ಬಲಿಯಾಗಿದ್ದಾರೆ. ಈ ವರ್ಷದ ಜನವರಿಯಿಂದ ಮಹಾರಾಷ್ಟ್ರದಲ್ಲಿ ಎರಡು COVID-19 ಸಂಬಂಧಿತ ಸಾವುಗಳು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಇಲಾಖೆಯು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಎರಡೂ ಸಾವುಗಳು ಮುಂಬೈನಿಂದ ವರದಿಯಾಗಿವೆ ಮತ್ತು ಅವು ಕೊಮೊರ್ಬಿಡಿಟಿಗಳನ್ನು ಹೊಂದಿರುವ ರೋಗಿಗಳನ್ನು ಒಳಗೊಂಡಿವೆ. ಮೃತರಲ್ಲಿ ಒಬ್ಬರಿಗೆ ಹೈಪೋಕಾಲ್ಸೆಮಿಯಾ ರೋಗಗ್ರಸ್ತವಾಗುವಿಕೆಯೊಂದಿಗೆ ನೆಫ್ರೋಟಿಕ್ ಸಿಂಡ್ರೋಮ್ ಇತ್ತು, ಆದರೆ ಇನ್ನೊಬ್ಬರು ಕ್ಯಾನ್ಸರ್ ರೋಗಿ ಎಂದು ಅದು ಹೇಳಿದೆ.
ಭೋಪಾಲ್ : ಮಧ್ಯಪ್ರದೇಶದ ಮಂಡ್ಸೌರ್ನ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕಡ್ ರಾಷ್ಟೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕನೋರ್ವ ಮಹಿಳೆ ಜೊತೆ ನಡು ರಸ್ತೆಯಲ್ಲೇ ಸೆಕ್ಸ್ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಡ್ಸೌರ್ ಜಿಲ್ಲೆಯ ಬನಿ ಗ್ರಾಮದ ನಿವಾಸಿಯಾಗಿರುವ ಮನೋಹರ್ ಲಾಲ್ ಧಾಕಡ್, ಹೊಸದಾಗಿ ನಿರ್ಮಿಸಿದ 8 ಪಥದ ಹೆದ್ದಾರಿಯಲ್ಲಿ ಆಕ್ಷೇಪಾರ್ಹ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಮಹಿಳೆಯೊಂದಿಗೆ ಆಕ್ಷೇಪಾರ್ಹ ಕೃತ್ಯ ಎಸಗಿದ ಸುಮಾರು ಮೂರೂವರೆ ನಿಮಿಷಗಳ ವಿಡಿಯೋ ವೈರಲ್ ಆಗಿದೆ. ಏತನ್ಮಧ್ಯೆ, ಧಕಾಡ್ ಮಹಾಸಭಾ ಯುವ ಸಂಘ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಿದೆ. ಬಿಜೆಪಿ ಕೂಡ ಧಕಾಡ್ನಿಂದ ದೂರ ಸರಿದಿದೆ. ಅವರು ಪಕ್ಷದ ಪ್ರಾಥಮಿಕ ಸದಸ್ಯರಲ್ಲ ಮತ್ತು ಆನ್ಲೈನ್ ನೋಂದಣಿ ಮೂಲಕ ಸೇರಿದ್ದಾರೆ ಎಂದು ಪಕ್ಷ ಸ್ಪಷ್ಟನೆನೀಡಿದೆ.…
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ತುಂಬಾ ಹೆಚ್ಚಾಗಿದೆ. ಆಟವಾಡುತ್ತಾ, ಹಾಡುತ್ತ ಇರುವಾಗಲೇ ಸಣ್ಣ ಮಕ್ಕಳು ಕೂಡ ಹೃದಯಾಘಾತದಿಂದ ಸಾಯುತ್ತಿದ್ದಾರೆ. ಹೃದಯಾಘಾತ ಸಾವುಗಳು.. ಒಂದು ಜಿಲ್ಲೆ ಅಥವಾ ಒಂದು ರಾಜ್ಯಕ್ಕೆ ಸೀಮಿತವಾಗಿಲ್ಲ. ದೇಶಾದ್ಯಂತ ಹಲವು ಅಧ್ಯಯನಗಳು ನಡೆದಿವೆ..ಇದು ಏಕೆ ಹೀಗೆ.. ಇತ್ತೀಚಿನ ಅಧ್ಯಯನವೊಂದು ಬಹಿರಂಗಪಡಿಸಿದ್ದು..ಭಾರತದಲ್ಲಿ ಶೇಕಡಾ 66 ರಷ್ಟು ಹೃದಯಾಘಾತಕ್ಕೆ ಕಾರಣ.. ಕಡಿಮೆ ಹೋಮೋಸಿಸ್ಟೈನ್ ಮಟ್ಟಗಳು ಹೌದು, ರಕ್ತದಲ್ಲಿ ಹೋಮೋಸಿಸ್ಟೈನ್ ಹೆಚ್ಚಿನ ಮಟ್ಟದಲ್ಲಿರುವುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಟಾಟಾ 1MG ಲ್ಯಾಬ್ಸ್ ಪ್ರಕಟಿಸಿದ ವರದಿಯ ಪ್ರಕಾರ, 66% ಭಾರತೀಯರ ರಕ್ತದಲ್ಲಿ ಹೆಚ್ಚಿನ ಮಟ್ಟದ ಹೋಮೋಸಿಸ್ಟೈನ್ ಇದ್ದು, ಇದು ವಿವಿಧ ಹೃದಯ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ಹೃದ್ರೋಗ ತಜ್ಞರು ಹೇಳಿದ್ದಾರೆ. ಹೋಮೋಸಿಸ್ಟೈನ್ ಒಂದು ಅಮೈನೋ ಆಮ್ಲ. ಈ ಆಮ್ಲ ಪೂರಕವು ಮೂರು ಪ್ರಮುಖ ಜೀವಸತ್ವಗಳ ಕೊರತೆಯನ್ನು ಸೂಚಿಸುತ್ತದೆ: ವಿಟಮಿನ್ ಬಿ 12, ವಿಟಮಿನ್ ಬಿ 6 ಮತ್ತು ವಿಟಮಿನ್ ಬಿ 9. ಒಬ್ಬ ವ್ಯಕ್ತಿಗೆ ಸರಾಸರಿ ಪ್ರತಿ ಲೀಟರ್ಗೆ 5 ರಿಂದ 15 ಮೈಕ್ರೋಮೋಲ್ಗಳ…
ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ಬಳಿ ಕಳೆದ 2024 ಜನೆವರಿ 8 ರಂದು ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿಗಳು ವಿಜಯೋತ್ಸವ ಮಾಡಿದ್ದು, ಜಾಮೀನು ನಿಯಮ ಉಲ್ಲಂಘಿಸಿದ ಆರೋಪದಡಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹಾನಗಲ್ ತಾಲ್ಲೂಕಿನ ಅಕ್ಕಿಆಲೂರ ಕಮಾಟಿಗೇರ ಓಣಿಯ ಸಮೀವುಲ್ಲಾ ಅಬ್ದುಲ್ವಾಹೀದ್ ಲಾಲಾನವರ (28), ಇಮಾಮನಗರದ ಮಹ್ಮದಸಾದಿಕ್ ಬಾಬುಸಾಬ ಅಗಸಿಮನಿ (30), ಹಳ್ಳೂರ ಓಣಿಯ ಶೋಹಿಬ ನಿಯಜಅಹ್ಮದ್ ಮುಲ್ಲಾ ಉರುಫ್ ಶೋಯಬ್ (20) ಹಾಗೂ ಇಸ್ಲಾಂಪುರ ಓಣಿಯ ರಿಯಾಜ್ ಅಬ್ದುಲ್ರಫೀಕ್ ಸಾವಿಕೇರಿ (32) ಎಂದು ತಿಳಿದುಬಂದಿದೆ. 2024ರ ಜನವರಿಯಲ್ಲಿ ಹಾನಗಲ್ ಠಾಣೆ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಕೃತ್ಯದಲ್ಲಿ ಭಾಗಿಯಾಗಿದ್ದ 19 ಆರೋಪಿಗಳನ್ನು ಬಂಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ 12 ಜನರಿಗೆ ಈ ಹಿಂದೆಯೇ ಜಾಮೀನು ಮಂಜೂರಾಗಿತ್ತು. ಬಾಕಿ ಉಳಿದ 7 ಜನರಿಗೆ ಮೇ 20ರಂದು ಜಾಮೀನು ಮಂಜೂರಾಗಿತ್ತು. ಜಾಮೀನು ಮೇಲೆ ಜೈಲಿನಿಂದ ಹೊರಬಂದ 7 ಆರೋಪಿಗಳು, ಹಾವೇರಿಯಿಂದ ಅಕ್ಕಿಆಲೂರುವರೆಗೂ ಕಾರು-ಬೈಕ್ಗಳಲ್ಲಿ…
ನವದೆಹಲಿ: ಇಂದಿನಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮುಂಗಾರು ಸಕ್ರಿಯವಾಗಲಿದೆ. ಈ ಮಾನ್ಸೂನ್ ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ರಾಜ್ಯಗಳನ್ನು ಸಹ ಆವರಿಸುತ್ತದೆ. ಜೂನ್ 4 ಮತ್ತು 5 ರ ವೇಳೆಗೆ ಮಧ್ಯ ಮತ್ತು ಪೂರ್ವ ಭಾರತವನ್ನು ತಲುಪುವ ನಿರೀಕ್ಷೆಯಿದೆ. ಈ ಕಾರಣದಿಂದಾಗಿ, ದೇಶದ ಹೆಚ್ಚಿನ ಭಾಗಗಳಲ್ಲಿ ಪರಿಹಾರ ದೊರೆಯುವ ನಿರೀಕ್ಷೆಯಿದೆ. ಪಶ್ಚಿಮ ಕರಾವಳಿ (ಗುಜರಾತ್, ಕೊಂಕಣ, ಗೋವಾ, ಕರ್ನಾಟಕ ಮತ್ತು ಕೇರಳ) ಮುಂದಿನ 24 ಗಂಟೆಗಳಲ್ಲಿ 200 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 7 ದಿನಗಳವರೆಗೆ ಈ ರಾಜ್ಯಗಳಲ್ಲಿ ಭಾರೀ ಮಳೆಯಾಗಬಹುದು. ಕೇರಳ, ಕರ್ನಾಟಕ, ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಎಲ್ಲಾ ಈಶಾನ್ಯ ರಾಜ್ಯಗಳು, ಒಡಿಶಾ, ಬಿಹಾರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನ ಸೇರಿದಂತೆ 29…
ಹೈದರಾಬಾದ್ : ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಪ್ರಕಾಶಂ ಜಿಲ್ಲೆಯ ಕೊಮರೋಲು ಮಂಡಲದ ಅನಂತಪುರ-ಅಮರಾವತಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಥಟಿಚೆರ್ಲಾ ಮೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮೃತರೆಲ್ಲರೂ ಬಾಪಟ್ಲಾ ಜಿಲ್ಲೆಯ ಸ್ಟುವರ್ಟ್ಪುರಂ ಮೂಲದವರು. ಸ್ಟುವರ್ಟ್ಪುರಂನ ಗಜ್ಜೇಲಾ ಭವಾನಿ (22) ಮತ್ತು ಅವರ ಮಗಳು ಸಿರಿಶಾ ಮತ್ತು ಮಗ ಸಿಧು, ಗಜ್ಜೆಲ ನರಸಿಂಹ (22), ಕರದ್ದುಲ ದಿವಾಕರ್ (26), ಗಜ್ಜೆಲ ಅಂಕಲು (45), ಬಚ್ಚು ಸಂದೀಪ್ (25), ಗಜ್ಜೆಲ ಬಬ್ಬುಲು ಅಲಿಯಾಸ್ ಜೋಸೆಫ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೆಂಗಳೂರು : ಭೂದಾನ ವಿದ್ಯಾದಾನದಡಿ ಯೋಜನೆಯಡಿ ಸರ್ಕಾರಿ ಶಾಲೆಗೆ ಭೂಮಿ ದಾನ ನೀಡಿರುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹಲವು ದಶಕಗಳ ಹಿಂದೆ ಭೂದಾನ/ವಿದ್ಯಾದಾನದಡಿ ಶಾಲೆಗೆ ಭೂಮಿಯನ್ನು ದಾನವಾಗಿ ನೀಡಿದ್ದು, ಸದರಿ ಜಮೀನುಗಳನ್ನು ಕೆಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮ್ಮ ಹೆಸರಿಗೆ ಅಕ್ರಮವಾಗಿ ಖಾತೆ ಮಾಡಿಕೊಂಡು ಸ್ವಾಧೀನದಲ್ಲಿರುವುದು, ಅಕ್ರಮವಾಗಿ ಶಾಲೆಯ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದು, ಸದರಿ ಜಮೀನನ್ನು ಶಾಲಾ ಸುಪರ್ದಿಗೆ ಪಡೆದು ಒತ್ತುವರಿದಾರರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯವಾಗಿರುತ್ತದೆ. ಆದ್ದರಿಂದ, ಶಾಲೆಗಳ ಜಾಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿ ಸದರಿ ಜಾಗವನ್ನು ಶಾಲೆಯ ಹೆಸರಿಗೆ ಖಾತೆ ಮಾಡಿಸುವಂತೆ ಹಾಗೂ ಕಾನೂನುಬಾಹಿರವಾಗಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿಯಮಾನುಸಾರ ಸಂಬಂಧಪಟ್ಟ ಪ್ರಾಧಿಕಾರದಿಂದ ಸರ್ವೆ ಮಾಡಿಸಿ ಒತ್ತುವರಿಯನ್ನು ತೆರವುಗೊಳಿಸಿ ಜಿಲ್ಲಾಧಿಕಾರಿಗಳಿಂದ ನಿಯಮಗಳಂತೆ ಜಾಗವನ್ನು ಶಾಲೆಗಳ ಹೆಸರಿಗೆ ಖಾತೆ ಮಾಡಿಸಲು ಅಗತ್ಯ ಕ್ರಮವಹಿಸುವಂತೆ ಕೋರಿದೆ.
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (RBI) 2024-25ನೇ ಹಣಕಾಸು ವರ್ಷಕ್ಕೆ ಕೇಂದ್ರ ಸರ್ಕಾರಕ್ಕೆ 2.69 ಲಕ್ಷ ಕೋಟಿ ರೂಪಾಯಿಗಳ ದಾಖಲೆಯ ಲಾಭಾಂಶವನ್ನು ಘೋಷಿಸಿದೆ. ಇದುವರೆಗಿನ ಅತಿದೊಡ್ಡ ಹೆಚ್ಚುವರಿ ವರ್ಗಾವಣೆಯಾಗಿದ್ದು, ಇದು ಹಿಂದಿನ ಹಣಕಾಸು ವರ್ಷ 2023-24 ರ ಲಾಭಾಂಶ ಪಾವತಿಗಿಂತ 27.4% ಹೆಚ್ಚಾಗಿದೆ. ಈ ಕ್ರಮವು ಸರ್ಕಾರದ ಹಣಕಾಸಿನ ಕೊರತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 2024-25 ರಲ್ಲಿ ಅತಿದೊಡ್ಡ ಹೆಚ್ಚುವರಿ ವರ್ಗಾವಣೆ ಆರ್ಬಿಐನ ಕೇಂದ್ರೀಯ ನಿರ್ದೇಶಕರ ಮಂಡಳಿಯ 616 ನೇ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಭೆಯ ಅಧ್ಯಕ್ಷತೆಯನ್ನು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ವಹಿಸಿದ್ದರು. ಕೇಂದ್ರ ಸರ್ಕಾರಕ್ಕೆ 2,68,590.07 ಕೋಟಿ ರೂಪಾಯಿಗಳ ಹೆಚ್ಚುವರಿ ಹಣವನ್ನು ನೀಡುವುದಾಗಿ ಆರ್ಬಿಐ ತಿಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ದೊಡ್ಡ ಜಿಗಿತ 2023-24 ರಲ್ಲಿ: 2.10 ಲಕ್ಷ ಕೋಟಿ ರೂ., 2022-23 ರಲ್ಲಿ: 87,416 ಕೋಟಿ ರೂ., ಈ ವರ್ಷದ ಲಾಭಾಂಶವು ಈ ಎರಡೂ ವರ್ಷಗಳಿಗಿಂತ ಹೆಚ್ಚಿನದಾಗಿದೆ, ಇದು ಸರ್ಕಾರದ ಆರ್ಥಿಕ…













