Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಸೀಗೆಹಳ್ಳಿಯಲ್ಲಿ ಜಾರ್ಖಂಡ್ ನ ಪವನ್ (40) ಹತ್ಯೆ ಮಾಡಲಾಗಿದೆ. ಮದ್ಯ ಸೇವನೆ ವೇಳೆ ಮಾತಿಗೆ ಮಾತುಬೆಳೆದು ಗಣೇಶ್ ಎಂಬಾತ ಪವನ್ ನನ್ನು ಹತ್ಯೆ ಮಾಡಿದ್ದಾನೆ. ಜಾರ್ಖಂಡ್ ಮೂಲದ ಪವನ್, ಗಣೇಶ್ ಕೂಲಿ ಮಾಡುತ್ತಿದ್ದರು. ಪವನ್ ಎದೆಗೆ ಚಾಕುವಿನಿಂದ ಇರಿದು ಗಣೇಶ್ ಕೊಲೆ ಮಾಡಿದ್ದಾನೆ. ಸದ್ಯ ಗಣೇಶ್ ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.
ನವದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) 2025 ರ ಶೈಕ್ಷಣಿಕ ಅಧಿವೇಶನದಿಂದ ಜಾರಿಗೆ ಬರುವಂತೆ ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ಕೋರ್ಸ್ಗಳಿಗೆ ಹೆಗ್ಗುರುತು ಸುಧಾರಣೆಗಳನ್ನು ಘೋಷಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020 ರಲ್ಲಿ ಬೇರೂರಿರುವ ಈ ಬದಲಾವಣೆಗಳನ್ನು ಭಾರತದಲ್ಲಿ ಉನ್ನತ ಶಿಕ್ಷಣವನ್ನು ಹೆಚ್ಚು ಹೊಂದಿಕೊಳ್ಳುವ, ಪ್ರವೇಶಿಸಬಹುದಾದ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸಲು ವಿನ್ಯಾಸಗೊಳಿಸಲಾಗಿದೆ. ಬಹು ಪ್ರವೇಶ ಮತ್ತು ನಿರ್ಗಮನ ಅಂಕಗಳು, ಅಂತರಶಿಸ್ತೀಯ ಕಲಿಕೆ ಮತ್ತು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯುವ ಸಾಮರ್ಥ್ಯದಂತಹ ಆಯ್ಕೆಗಳೊಂದಿಗೆ ವಿದ್ಯಾರ್ಥಿಗಳು ಈಗ ತಮ್ಮ ಶೈಕ್ಷಣಿಕ ಪ್ರಯಾಣವನ್ನು ಕಸ್ಟಮೈಸ್ ಮಾಡುವ ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ. ಅತ್ಯಂತ ಮಹತ್ವದ ಬದಲಾವಣೆಗಳಲ್ಲಿ ಮಲ್ಟಿಪಲ್ ಎಂಟ್ರಿ ಮತ್ತು ಎಕ್ಸಿಟ್ ಸಿಸ್ಟಮ್ ಒಂದಾಗಿದೆ, ಇದು ವಿದ್ಯಾರ್ಥಿಗಳಿಗೆ ಪೂರ್ಣಗೊಳಿಸಿದ ಕ್ರೆಡಿಟ್ ಗಳನ್ನು ಅವಲಂಬಿಸಿ ಪ್ರಮಾಣಪತ್ರ, ಡಿಪ್ಲೊಮಾ ಅಥವಾ ಪದವಿಯನ್ನು ಗಳಿಸಲು ಮತ್ತು ಪ್ರಗತಿಯನ್ನು ಕಳೆದುಕೊಳ್ಳದೆ ನಂತರ ಅಧ್ಯಯನಕ್ಕೆ ಮತ್ತೆ ಸೇರಲು ಅನುವು ಮಾಡಿಕೊಡುತ್ತದೆ. ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ (ಎಬಿಸಿ) ಕ್ರೆಡಿಟ್ ಗಳನ್ನು ಡಿಜಿಟಲ್ ರೂಪದಲ್ಲಿ…
ನವದೆಹಲಿ : ಭಾರತದ ಸೇನಾ ಶಾಲೆಗಳಿಗೆ ಪಾಕ್ ಸೈಬರ್ ಹ್ಯಾಕರ್ ಗಳು ದಾಳಿ ನಡೆಸಿದ್ದು, ಭಾರತೀಯ ಆರ್ಮಿ ಪಬ್ಲಿಕ್ ಸ್ಕೂಲ್ ವೆಬ್ ಸೈಟ್ ಗಳು ಹ್ಯಾಕ್ ಆಗಿವೆ. ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನವು ಇದೀಗ ಭಾರತೀಯ ಶಾಲೆಗಳ ವೆಬ್ ಸೈಟ್ ಹ್ಯಾಕ್ ಮಾಡುತ್ತಿದ್ದಾರೆ. ಇದೀಗ ಭಾರತೀಯ ಆರ್ಮಿ ಪಬ್ಲಿಕ್ ಸ್ಕೂಲ್ ನ ವೆಬ್ ಸೈಟ್ ಗಳನ್ನು ಸೈಬರ್ ವಂಚಕರು ಹ್ಯಾಕ್ ಮಾಡಿದ್ದಾರೆ ಎಂದು ವರದಿಯಾಗಿದೆ. ಇನ್ನು ಪಾಕಿಸ್ತಾನದ ಹ್ಯಾಕರ್ಗಳು ರಾಜಸ್ಥಾನ ಸರ್ಕಾರದ ಮೂರು ವೆಬ್ಸೈಟ್ಗಳನ್ನು ಗುರಿಯಾಗಿಸಿಕೊಂಡು ಭಾರತ ವಿರೋಧಿ ಸಂದೇಶಗಳನ್ನು ವಿರೂಪಗೊಳಿಸಿದ್ದಾರೆ. ಪಾಕಿಸ್ತಾನದ ಸೈಬರ್ ಅಪರಾಧಿಗಳು ರಾಜಸ್ಥಾನದ ಅನೇಕ ಸರ್ಕಾರಿ ವೆಬ್ಸೈಟ್ಗಳನ್ನು ಗುರಿಯಾಗಿಸಿಕೊಂಡಿದ್ದಾರೆ, ಇತ್ತೀಚಿನದು ಶಿಕ್ಷಣ ಇಲಾಖೆಯ ಅಧಿಕೃತ ಪೋರ್ಟಲ್ ಆಗಿದೆ. ಮಂಗಳವಾರ, ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಈ ಘಟನೆಯನ್ನು ಅರಿತುಕೊಂಡು ಇಲಾಖೆಯ ಮಾಹಿತಿ ತಂತ್ರಜ್ಞಾನ ವಿಭಾಗವನ್ನು ಸಕ್ರಿಯಗೊಳಿಸಿದರು.
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಭಾರತವು ಮತ್ತೊಂದು ಕ್ರಮ ಕೈಗೊಂಡಿದ್ದು, ಪಾಕಿಸ್ತಾನದ ರಕ್ಷಣಾ ಸಚಿವ ಆಸಿಫ್ ಖವಾಜಾ ಅವರ ‘X’ ಖಾತೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು” ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳನ್ನು ಭಾರತದಲ್ಲಿ ನಿಷೇಧಿಸಿದ ಬೆನ್ನಲ್ಲೇ ಇದೀಗ ಪಾಕಿಸ್ತಾನದ ರಕ್ಷಣಾ ಸಚಿವ ಆಸಿಫ್ ಖವಾಜಾ ಅವರ ‘X’ ಖಾತೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. https://twitter.com/ani_digital/status/1917122754274353472?ref_src=twsrc%5Etfw%7Ctwcamp%5Etweetembed%7Ctwterm%5E1917122754274353472%7Ctwgr%5E3cf2d917fd46bd66b0bc8a3cea8084d29331127f%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalangchange%3Dtruelaunch%3Dtrue ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಗೃಹ ಸಚಿವಾಲಯದ ಶಿಫಾರಸುಗಳನ್ನು ಅನುಸರಿಸಿ ಯೂಟ್ಯೂಬ್ ಚಾನೆಲ್ಗಳನ್ನು ನಿಷೇಧಿದೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇ ಶ ಪತ್ರಗಳನ್ನು ನೀಡಿದರು. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ಹಂತದಲ್ಲಿ 1,000 ಜನರನ್ನು ಗ್ರಾಮ ಆಡಳಿತ ಅಧಿಕಾರಿಗಳಾಗಿ ನೇಮಕಾತಿ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಒಂದು ಪೈಸೆಯೂ ಲಂಚಕ್ಕೆ ಆಸ್ಪದವಿಲ್ಲದೆ ಎಲ್ಲರಿಗೂ ಕೆಲಸ ನೀಡಲಾಗಿದೆ ಎಂಬುದು ಇಲಾಖೆಯ-ಸರ್ಕಾರದ ಹೆಚ್ಚುಗಾರಿಕೆ. ಅಲ್ಲದೆ, ಇಂದು 4,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ಸಹ ವಿತರಿಸುವ ಮೂಲಕ ಇಲಾಖೆಯನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆಯಲಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ, ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಮಾನತೆಯಿರಬೇಕು. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರೂ ಒತ್ತಿ ಹೇಳಿದ್ದರು. ಅದರಲ್ಲಿ ನಮಗೆ ನಂಬಿಕೆ ಇದೆ. ನಮ್ಮ ಸಂವಿಧಾನ ಹೇಳಿರುವುದೇ ಅದು. ಸಂವಿಧಾನದ ಧ್ಯೇಯೋದ್ದೇಶಗಳನ್ನು, ಆಶಯಗಳನ್ನು ಜಾರಿ ಮಾಡುತ್ತೇವೆಯೇ ಹೊರತು ಯಾರನ್ನೂ ಓಲೈಸುವ ಕೆಲಸ ಮಾಡೋಲ್ಲ.…
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ‘ಮಾತನಾಡುವ ಇಂಗ್ಲೀಷ್’ (ಸ್ಪೋಕನ್ ಇಂಗ್ಲೀಷ್) ತರಗತಿಗಳು ಆರಂಭವಾಗಲಿವೆ. ಹೌದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪೂರ್ಣಪ್ರಮಾಣದಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ನಡೆಸಲು ನಿರ್ಧರಿಸಿದ್ದು, ಈ ಸಂಬಂಧ ಇಲಾಖೆಯು ಅತ್ಯುತ್ತಮ ಸಂಪನ್ಮೂಲವುಳ್ಳ ವ್ಯವಸ್ಥೆ ಜಾರಿಗೆ ಯೋಜನೆ ರೂಪಿಸಿದೆ. ಇಲಾಖೆ ಕಳೆದ ವರ್ಷ ವಾರಾಂತ್ಯದಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ನಡೆಸುವುದಕ್ಕೆ ಚಾಲನೆ ನೀಡಿತ್ತು. ರಿಜನಲ್ ಇನ್ ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸಂಸ್ಥೆಯು ಬೋಧಕರಿಗೆ ರಾಜ್ಯ ಮಟ್ಟದ ತರಬೇತಿ ನೀಡಲು ಸೂಚಿಸಲಾಗಿತ್ತು. ಆದರೆ, ಈ ಕಾರ್ಯಕ್ರಮ ಜಾರಿಯೇ ಆಗಿರಲಿಲ್ಲ. ಇದೀಗ ಈ ಬಗ್ಗೆ ಎಚ್ಚೆತ್ತುಕೊಂಡಿರುವ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ವರ್ಷ ವ್ಯವಸ್ಥಿತವಾಗಿ ಯೋಜನೆ ಜಾರಿಗೆ ಮುಂದಾಗಿದೆ. ಈ ಹೊಸ ಯೋಜನೆಯನ್ವಯ ವರ್ಷಕ್ಕೆ 180 ಗಂಟೆಗಳ ಕಾಲ ಸ್ಪೋಕನ್ ಇಂಗ್ಲೀಷ್…
ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದಾರೆ. ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಡುವುದಾಗಿ ಸಂದೇಶದಲ್ಲಿ ಹೇಳಿದ್ದಾರೆ. ಬೆಂಗಳೂರಿನ ಆಚಾರ್ಯ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇ-ಮೇಲ್ ಪರಿಶೀಲನೆ ವೇಳೆ ಸಂದೇಶ ಗಮನಕ್ಕೆ ಬಂದಿದೆ. ಘಟನೆ ಸಂಬಂಧ ಎನ್ ಸಿ ಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಂಗಳೂರಿನ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಬಿಬಿಎಂಪಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಸೈಕಲ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೌದು, ಹೆಚ್.ಡಿ. ಕುಮಾರಸ್ವಾಮಿ ಮತ್ತು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಸರ್ಕಾರಿ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ ಸೈಕಲ್ ವಿತರಿಸುವ ಕಾರ್ಯಕ್ರಮ ಜಾರಿಗೊಳಿಸಲಾಗಿತ್ತು. ನಂತರ ಬಾಲಕರಿಗೂ ಯೋಜನೆಯನ್ನು ವಿಸ್ತರಿಸಲಾಗಿತ್ತು. ಬಳಿಕ ಸೈಕಲ್ ವಿತರಣೆ ಯೋಜನೆ ಮುಂದುವರೆಸಲಿಲ್ಲ. ಇದೀಗ ಬಿಬಿಎಂಪಿ ವ್ಯಾಪ್ತಿಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. 2025- 26ರ ಬಜೆಟ್ ನಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ 721.41 ಕೋಟಿ ರೂ. ಮೀಸಲಿಟ್ಟಿದ್ದು, ಸರ್ಕಾರಿ ಖಾಸಗಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ತೀರ್ಮಾನಿಸಲಾಗಿದೆ. ಬಿಬಿಎಂಪಿ ಶಾಲಾ ವಿದ್ಯಾರ್ಥಿಗಳ ಜೊತೆಗೆ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲೆಯ ವಿದ್ಯಾರ್ಥಿಗಲೂ ಕೂಡ ಬಿಬಿಎಂಪಿಗೆ ಅರ್ಜಿ ಸಲ್ಲಿಸಿ ಸೈಕಲ್ ಪಡೆದುಕೊಳ್ಳಬಹುದ.
ನವದೆಹಲಿ : ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ವಿಷಯಗಳ ಸ್ಟ್ರೀಮಿಂಗ್ ಅನ್ನು ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಪ್ರೈಮ್ ವಿಡಿಯೋ, ನೆಟ್ಫ್ಲಿಕ್ಸ್, ಎಎಲ್ಟಿಟಿ, ಉಲ್ಲು ಮತ್ತು ಸಾಮಾಜಿಕ ವೇದಿಕೆಗಳಿಗೆ ನೋಟಿಸ್ ಜಾರಿ ಮಾಡಿದೆ. ಒಟಿಟಿ ವೇದಿಕೆಗಳಲ್ಲಿ ಅಶ್ಲೀಲ ವಿಷಯಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರದಿಂದ ನಿರ್ದೇಶನ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ನಂತರ ಇದು ಬಂದಿದೆ. ಅಂತಹ ವಿಷಯವು ಗಮನಾರ್ಹ ಕಳವಳವನ್ನು ಉಂಟುಮಾಡಿದೆ ಎಂದು ನ್ಯಾಯಾಲಯವು ಕೇಂದ್ರವನ್ನು ಒತ್ತಾಯಿಸಿತು, “ನೀವು ಅದರ ಬಗ್ಗೆ ಏನಾದರೂ ಮಾಡಬೇಕು” ಎಂದು ಒತ್ತಾಯಿಸಿದೆ.
ಬೆಂಗಳೂರು : ಆರ್.ಆರ್. ನಗರ ಶಾಸಕ ಮುನಿರತ್ನ ಮೇಲಿನ ಅತ್ಯಾಚಾರ ಅರೋಪ ಪ್ರಕರಣ ಸಂಬಂಧ ಇದೀಗ ಅಧಿಕಾರಿಗಳು ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮುನಿರತ್ನ ಸೇರಿದಂತೆ ಏಳು ಜನರ ವಿರುದ್ಧ 3000 ಪುಟಗಳ ಚಾರ್ಜ್ ಶೀಟ್ ನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಧಿಕಾರಿಗಳು ಸಲ್ಲಿಸಲಾಗಿದ್ದು, ಚಾರ್ಜ್ ಶೀಟ್ ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರ್ಣ ಕುಮಾಅರ್, ಮಂಜುನಾಥ್ ಹೆಸರನ್ನು ಉಲ್ಲೇಖಿಸಲಾಗಿದೆ. ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ವಿಡಿಯೋ, ಫೋಟೊ ಮಾಡಿರುವುದು ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ. ತಮ್ಮ ಪರ ಕೆಲ್ಸ ಮಾಡುವಂತೆ ಮಾಡಲು ಬ್ಲ್ಯಾಕ್ ಮೇಲ್ ಮಾದಿ ಬೆದರಿಕೆ ಹಾಕುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ವಿಚಾರಣೆಯ ವೇಳೆ 63 ಪ್ರಶ್ನೆಗಳನ್ನು ಮುನಿರತ್ನಗೆ ಕೇಳಲಾಗಿತ್ತು. ಸದ್ಯ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.












