Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದು, ಇಂದು ಮಧ್ಯಾಹ್ನ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮ ತೋಟದಲ್ಲಿ ಇಂದು ಮಧ್ಯಾಹ್ನ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ, ತಾಯಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ನಿನ್ನೆ ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಪತಿ ಹರ್ಷ ಸಮಾಧಿ ಪಕ್ಕದಲ್ಲಿ ಮಾಡಿಕೊಳ್ಳಲಾಗಿದೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಮತ್ತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿಯಾಗಿ ಅಕ್ಷಯ್ ಮಚೀಂದ್ರ ಸೇರಿದಂತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಚಾರ ಅನೂಪ್ ಶೆಟ್ಟಿ ಬೆಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಶಿವಪ್ರಕಾಶ್ ದೇವರಾಜು ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿಯಾಗಿ ಜಯಪ್ರಕಾಶ್ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿಯಾಗಿ ಎಂ. ನಾರಾಯಣ್ ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿಯಾಗಿ ಅನಿತಾ ಬಿ. ಹದ್ದಣ್ಣನವರ್ ಧಾರವಾಡ ಎಸ್ಪಿಯಾಗಿ ಗುಂಜನ್ ಆರ್ಯ ಬಾಗಲಕೋಟೆ ಎಸ್ಪಿಯಾಗಿ ಸಿದ್ದಾರ್ಥ ಗೋಯಲ್ ಗದಗ ಎಸ್ಪಿಯಾಗಿ ರೋಹನ್ ಜಗದೀಶ್ ಕೆಜಿಎಫ್ ಎಸ್ಪಿಯಾಗಿ ಶಿವಾಂಶು ರಜಪೂತ್ ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಜಿತೇಂದ್ರ ಕುಮಾರ್. ಉತ್ತರ ಕನ್ನಡ ಎಸ್ಪಿಯಾಗಿ ಎಂ.ಎನ್.…
ನವದೆಹಲಿ : ಭಾರತದಲ್ಲಿ ವೇಗವಾಗಿ ಹೆಚ್ಚುತ್ತಿರುವ ಬೊಜ್ಜು ಮತ್ತು ಜೀವನಶೈಲಿ ಕಾಯಿಲೆಗಳನ್ನು ಎದುರಿಸಲು ಕೇಂದ್ರ ಸರ್ಕಾರ ಹೊಸ ಉಪಕ್ರಮವನ್ನು ಕೈಗೊಂಡಿದೆ. ಸಮೋಸಾ, ಕಚೋರಿ, ಫ್ರೆಂಚ್ ಫ್ರೈಸ್, ವಡಾ ಪಾವ್ನಂತಹ ಭಾರತೀಯ ತಿಂಡಿಗಳಲ್ಲಿ ಎಷ್ಟು ಎಣ್ಣೆ ಮತ್ತು ಸಕ್ಕರೆ ಇದೆ ಎಂಬುದನ್ನು ತೈಲ ಮತ್ತು ಸಕ್ಕರೆ ಮಂಡಳಿಗಳ ಮೂಲಕ ಸ್ಪಷ್ಟವಾಗಿ ಪ್ರದರ್ಶಿಸಲು ಆರೋಗ್ಯ ಸಚಿವಾಲಯವು ಎಲ್ಲಾ ಸಚಿವಾಲಯಗಳು, ಇಲಾಖೆಗಳು ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಆಹಾರ ಪದಾರ್ಥಗಳಲ್ಲಿ ಅಡಗಿರುವ ಎಣ್ಣೆ ಮತ್ತು ಸಕ್ಕರೆಯ ಪ್ರಮಾಣದ ಬಗ್ಗೆ ಮಾಹಿತಿಯನ್ನು ಕಚೇರಿಗಳು, ಶಾಲೆಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ನೀಡಬೇಕೆಂದು ಆರೋಗ್ಯ ಸಚಿವಾಲಯ ಬಯಸುತ್ತದೆ. ಇದಕ್ಕಾಗಿ, ಜನರಿಗೆ ಈ ಮಾಹಿತಿಯನ್ನು ನೀಡುವ ಮತ್ತು ಆರೋಗ್ಯಕರ ಆಯ್ಕೆಗಳನ್ನು ಆಯ್ಕೆ ಮಾಡಲು ಪ್ರೇರೇಪಿಸುವ ಫಲಕ ಅಥವಾ ಡಿಜಿಟಲ್ ಪೋಸ್ಟರ್ ಅನ್ನು ಸ್ಥಾಪಿಸಬೇಕು. ಕಚೇರಿಗಳಲ್ಲಿ ಆರೋಗ್ಯಕರ ಆಹಾರವನ್ನು ಲಭ್ಯವಾಗುವಂತೆ ಮಾಡುವುದು – ಇದರಲ್ಲಿ ಕಡಿಮೆ ಕೊಬ್ಬಿನ ಆಹಾರ, ಹೆಚ್ಚಿನ ಹಣ್ಣುಗಳು ಮತ್ತು ತರಕಾರಿಗಳು, ಸಿಹಿ ಪಾನೀಯಗಳು ಮತ್ತು ಹೆಚ್ಚಿನ ಕೊಬ್ಬಿನ…
ಕಾರ್ಮಿಕ ಇಲಾಖೆಯು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಯಡಿ 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಪ್ರೌಢ ಶಾಲಾಯಿಂದ ಸ್ನಾತಕೋತ್ತರ ಪದವಿಯವರಿಗೆ ಹಾಗೂ ವೈದ್ಯಕೀಯ/ಇಂಜಿಯಿಯರಿಗ್ ವ್ಯಾಸಂಗ ಮಾಡುತ್ತಿರುವ ಹಾಗೂ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50 ರಷ್ಟು, ಪ.ಜಾ/ಪ.ಪಂ ಶೇ. 45% ರಷ್ಟು ಅಂಕ ಪಡೆದು ತೇರ್ಗಡೆಯೊಂದಿರುವ ಮತ್ತು ಕಾರ್ಮಿಕನ ಮಾಸಿಕ ವೇತನ ರೂ. 35,000/- ಗಳಿಗಿಂತ ಕಡಿಮೆಯಿರುವ ಜಿಲ್ಲೆಯ ಸಂಘಟಿತ ಕಾರ್ಮಿಕರ ಇಬ್ಬರು ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಮಂಡಳಿಯ ವೆಬ್ಸೈಟ್ www.klwbapps.karnataka.gov.in ರಲ್ಲಿ ದಿ: 31/12/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ. 48, 1 ಮತ್ತು 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂ.ಸಂ.:…
ಮದ್ಯ ಪ್ರಿಯರಿಗೆ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದು ನೀಡಿದ್ದು,ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆಯನ್ನು ಪ್ರತಿ ಬಾಟಲಿಗೆ 10 ರಿಂದ 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ಇದರಿಂದ ಮದ್ಯದ ಗ್ರಾಹಕರಿಗೆ ಪ್ರತಿ ತಿಂಗಳು ಸುಮಾರು 116 ಕೋಟಿ ರೂ.ಗಳಷ್ಟು ಉಳಿತಾಯವಾಗುತ್ತದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮದ್ಯದ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ, ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮದ್ಯ ನೀತಿಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಕೈಗೆಟುಕುವ ಬೆಲೆಗಳನ್ನು ಕಾಯ್ದುಕೊಳ್ಳಲು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ನಿರ್ದೇಶನ ನೀಡಿದರು. ನಕಲಿ ಅಥವಾ ಕಳಪೆ ಗುಣಮಟ್ಟದ ಮದ್ಯದ ಬ್ರಾಂಡ್ಗಳ ಮಾರಾಟವನ್ನು ನಿಲ್ಲಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ರಾಜ್ಯದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗುಣಮಟ್ಟದ ಬ್ರ್ಯಾಂಡ್ಗಳನ್ನು ಮಾತ್ರ ಅನುಮತಿಸಲು ಮತ್ತು ಪಾವತಿಸದ, ಅಕ್ರಮ ಅಥವಾ ಹಾನಿಕಾರಕ ಮದ್ಯದ ಮಾರಾಟವನ್ನು ನಿಷೇಧಿಸಲು ನಾಯ್ಡು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹೊಸ ಮದ್ಯ ನೀತಿಯು ರಾಜ್ಯದ ಆದಾಯವನ್ನು ಹೆಚ್ಚಿಸಿದೆ, ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಕಳೆದುಹೋದ ವ್ಯವಹಾರವನ್ನು…
ದಾವಣಗೆರೆ : ದಾವಣಗೆರೆಯಲ್ಲಿ ಚಾಕೊಲೇಟ್ ನಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ರಾಜು ಅಲಿಯಾಸ್ ಪ್ಯಾರಿಲಾಲ್(40) ಬಂಧಿತ ಆರೋಪಿ. ಈತ ಹಲವು ವರ್ಷಗಳಿಂದ ಬೀಡಾ ಅಂಗಡಿ ಇಟ್ಟುಕೊಂಡಿದ್ದ ಚಾಕೊಲೇಟ್, ಇತರೆ ವಸ್ತುಗಳಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿತ್ತು, ಖಚಿತ ಮಾಹಿತಿ ಮೇರೆಗೆ ದಾವಣಗೆರೆಯ ಬಡಾವಣೆ ಪೊಲೀಸರು ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ದಾವಣಗೆರೆಯ ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ಬೀಡಾ ಅಂಗಡಿಯಲ್ಲಿ ಚಾಕೊಲೇಟ್ ನಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ,ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ಗಾಂಜಾ ಮಿಶ್ರಿತ ಚಾಕೋಲೇಟ್ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಮತ್ತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿಯಾಗಿ ಅಕ್ಷಯ್ ಮಚೀಂದ್ರ ಸೇರಿದಂತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಚಾರ ಅನೂಪ್ ಶೆಟ್ಟಿ ಬೆಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಶಿವಪ್ರಕಾಶ್ ದೇವರಾಜು ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿಯಾಗಿ ಜಯಪ್ರಕಾಶ್ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿಯಾಗಿ ಎಂ. ನಾರಾಯಣ್ ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿಯಾಗಿ ಅನಿತಾ ಬಿ. ಹದ್ದಣ್ಣನವರ್ ಧಾರವಾಡ ಎಸ್ಪಿಯಾಗಿ ಗುಂಜನ್ ಆರ್ಯ ಬಾಗಲಕೋಟೆ ಎಸ್ಪಿಯಾಗಿ ಸಿದ್ದಾರ್ಥ ಗೋಯಲ್ ಗದಗ ಎಸ್ಪಿಯಾಗಿ ರೋಹನ್ ಜಗದೀಶ್ ಕೆಜಿಎಫ್ ಎಸ್ಪಿಯಾಗಿ ಶಿವಾಂಶು ರಜಪೂತ್ ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಜಿತೇಂದ್ರ ಕುಮಾರ್. ಉತ್ತರ ಕನ್ನಡ ಎಸ್ಪಿಯಾಗಿ ಎಂ.ಎನ್.…
ಬೆಂಗಳೂರು : ಅಂಧರ ಅನುಕೂಲಕ್ಕಾಗಿ ಬಿಎಂಟಿಸಿಯ 125 ಬಸ್ಗಳಲ್ಲಿ ಆನ್ಬೋರ್ಡ್ ತಂತ್ರಜ್ಞಾನ ಪರಿಚಯಿಸಲಾಗಿದ್ದು, ಆಗಸ್ಟ್ ಅಂತ್ಯದ ಒಳಗೆ 500 ಬಸ್ಗಳಲ್ಲಿ, ಅನಂತರ ಎಲ್ಲ ಬಸ್ಗಳಲ್ಲಿ ಅಳವಡಿಸಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಅಂಧರ ಅನುಕೂಲಕ್ಕಾಗಿ ಬಿಎಂಟಿಸಿಯ 125 ಬಸ್ಗಳಲ್ಲಿ ಆನ್ಬೋರ್ಡ್ ತಂತ್ರಜ್ಞಾನ ಪರಿಚಯಿಸಲಾಗಿದೆ.ಆನ್ಬೋರ್ಡ್ ಸಾಧನವು ದೃಷ್ಟಿ ಸಮಸ್ಯೆಯ ವ್ಯಕ್ತಿಗಳಿಗೆ ಬಸ್ ಮಾರ್ಗ ಸಂಖ್ಯೆಗಳನ್ನು ಗುರುತಿಸಲು ಸಹಾಯ ಮಾಡುತ್ತದೆ. ಅವರು ಆ ಸಾಧನದಲ್ಲಿ ಸಂಖ್ಯೆ ಒತ್ತಿದಾಗ ಬಸ್ನಲ್ಲಿ ಅಳವಡಿಸಿದ್ದ ಮೌಂಟೆಡ್ ಸ್ಪೀಕರ್ ಧ್ವನಿ ಹೊರಡಿಸುತ್ತದೆ. ಇದು ಬಸ್ನ ಚಾಲಕ ಮತ್ತು ನಿರ್ವಾಹಕರಿಗೂ ಮಾಹಿತಿ ನೀಡುವುದರಿಂದ ಅವರನ್ನು ಬಸ್ ಹತ್ತಿಸಲು ಸಹಾಯ ಮಾಡುತ್ತಾರೆ. ಅಲ್ಲದೇ ಇದೇ ಧ್ವನಿಯ ಆಧಾರದಲ್ಲಿ ಆ ವ್ಯಕ್ತಿಗಳು ಕೂಡ ಬಸ್ನ ಬಾಗಿಲಿನತ್ತ ಬರಲು ಉಪಯೋಗವಾಗುತ್ತದೆ. ಇಳಿಯಬೇಕಾದ ಸ್ಥಳದಲ್ಲಿಯೂ ಬಟನ್ ಒತ್ತಿದರೆ ಅವರನ್ನು ಸುರಕ್ಷಿತವಾಗಿ ಇಳಿಸಲು ಅನುಕೂಲ.
ಜುಲೈ 2025ರ ಮಾಹೆಗೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಆಹಾರಧಾನ್ಯ ಹಂಚಿಕೆ ಮಾಡಲಾಗಿದೆ.ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ 2.ಕೆ.ಜಿ ಅಕ್ಕಿಯನ್ನು ಹಾಗೂ 3 ಕೆ.ಜಿ ರಾಗಿಯನ್ನು ಜುಲೈ 31 ರವರೆಗೆ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸುವುದರೊಂದಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತದೆ. ಅಂತ್ಯೋದಯ(ಎಎವೈ) ಪಡಿತರದಾರರಿಗೆ 1 ರಿಂದ 3 ಸದಸ್ಯರಿರುವ ಪಡಿತರ ಚೀಟಿಗಳಿಗೆ 21 ಕೆಜಿ ಅಕ್ಕಿ ಮತ್ತು ರಾಗಿ, ಹಂಚಿಕೆ. ಆದ್ಯತಾ(ಪಿಹೆಚ್ಹೆಚ್ ಸೆಂಟ್ರಲ್) ಕಾರ್ಡ್ದಾರರರಿಗೆ 7ಕೆಜಿ ಅಕ್ಕಿ ಹಾಗೂ 3 ಕೆಜಿ ರಾಗಿ, ಆದ್ಯತಾ(ಪಿಹೆಚ್ಹೆಚ್ ಸ್ಟೇಟ್) ಪ್ರತಿ ಸದಸ್ಯರಿಗೆ ತಲಾ 10 ಕೆಜಿ, ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಪಡಿತರ ಪಡೆಯಲು ಅವಕಾಶವಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಮಧುಸೂದನ್ ತಿಳಿಸಿದ್ದಾರೆ.
01,🕉️ಮೇಷ ರಾಶಿ🕉️ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಹೊಸ ವಸ್ತುಗಳನ್ನು ಖರೀದಿಸಲಾಗುತ್ತದೆ. ಹಳೆಯ ಸ್ನೇಹಿತರಿಂದ ಪಡೆದ ಮಾಹಿತಿಯು ಸಂತೋಷಕರವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಪಡೆಯುತ್ತೀರಿ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ, 9980060275 ಅನಿರುದ್ಧ ಜೋಶಿ 02,🕉️ವೃಷಭ ರಾಶಿ🕉️ ಪ್ರಮುಖ ವ್ಯವಹಾರಗಳಲ್ಲಿ ಪ್ರಯತ್ನಗಳಿಗೆ ತಕ್ಕ ಫಲಿತಾಂಶ ದೊರೆಯುತ್ತದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ಆಸ್ತಿ ವಿವಾದಗಳಿಗೆ ಸಂಬಂಧಿಸಿದಂತೆ ಸಂಬಂಧಿಕರಿಂದ ಮಹತ್ವದ ಮಾಹಿತಿ ಸಿಗುತ್ತದೆ. ನಿರುದ್ಯೋಗಿಗಳ ಪ್ರಯತ್ನ ಫಲ ನೀಡುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳ ಫಲಿತಾಂಶಗಳು ತೃಪ್ತಿಕರವಾಗಿರುತ್ತವೆ, 03,🕉️ಮಿಥುನ ರಾಶಿ🕉️ ಕೌಟುಂಬಿಕ ವಿಷಯಗಳ ಬಗ್ಗೆ ಸ್ಥಿರ ಆಲೋಚನೆಗಳನ್ನು ಹೊಂದಿರುವುದಿಲ್ಲ. ಆತ್ಮೀಯ ಸ್ನೇಹಿತರೊಂದಿಗೆ ವಿವಾದಗಳು ಉಂಟಾಗುತ್ತವೆ. ಕೈಗೊಂಡ ಕೆಲಸಗಳು ಮಧ್ಯದಲ್ಲಿ ನಿಲ್ಲುತ್ತವೆ. ಇತರರ ವ್ಯವಹಾರಗಳಿಂದ ದೂರವಿರುವುದು ಉತ್ತಮ. ವೃತ್ತಿಪರ ವ್ಯವಹಾರಗಳು ಸೀಮಿತವಾಗಿರುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಒತ್ತಡ ಹೆಚ್ಚಾಗುತ್ತದೆ, 04,🕉️ಕರ್ಕ ರಾಶಿ🕉️ ದೀರ್ಘಾವಧಿಯ ಸಾಲಗಳನ್ನು ತೀರಿಸಲು ಹೊಸ ಸಾಲಗಳನ್ನು ತೆಗೆದುಕೊಳ್ಳಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಸ್ವಲ್ಪ ನಿಧಾನವಾಗುತ್ತದೆ. ದೂರದ ಪ್ರಯಾಣದ ಸೂಚನೆಗಳಿವೆ.…