Author: kannadanewsnow57

ಬೆಂಗಳೂರು: ರಾಜ್ಯದಲ್ಲಿ ಯುವಕರನ್ನೇ ಹೆಚ್ಚಾಗಿ ಕಾಡುತ್ತಿದೆ ಹೃದಯಾಘಾತ ಎನ್ನುವಂತೆ ಹಾರ್ಟ್ ಅಟ್ಯಾಕ್ ನಿಂದ ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಹೌದು ನಿನ್ನೆಒಂದೇ ದಿನ ಶಾಕಿಂಗ್ ನ್ಯೂಸ್ ಎನ್ನುವಂತೆ ರಾಜ್ಯದಲ್ಲಿ ಮೂವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕ್ಯಾಬ್ ಚಾಲಕ ಅಭಿಷೇಕ್ ಎಂಬುವರು ಅರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿದ್ದಾರೆ. ಇನ್ನೂ ಹಾಸನದಲ್ಲಿ 19 ವರ್ಷದ ಸಂಧ್ಯಾ ಎಂಬುವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಾತ್ ರೂಮಿನ ಬಾಗಿಲಿನಲ್ಲೇ ಕುಸಿದು ಬಿದ್ದು ಸಂಧ್ಯಾ ಸಾವನ್ನಪ್ಪಿದ್ದಾರೆ. ಕೊಡಗಿನಲ್ಲಿ ಅರಣ್ಯಾಧಿಕಾರಿಯಾಗಿದ್ದಂತ ದಿನೇಶ್ ಎಂಬುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕುಶಾಲನಗರದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದಂತ ದಿನೇಶ್ ನಿನ್ನೆ ಅರ್ಟ್ ಅಟ್ಯಾಕ್ ನಿಂದ ನಿಧನರಾಗಿದ್ದಾರೆ.

Read More

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೆಶನಾಲಯದ ವಿವಿಧ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಉಲ್ಲೇಖಿತ ಪ್ರವೇಶಾತಿ ಅಧಿಸೂಚನೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಇಲಾಖೆಯ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಸಂಬಂಧ ಸೇವಾಸಿಂಧು ಪೋರ್ಟಲ್ ಮೂಲಕ ಆನ್-ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ:27.04.2025 ರಂದು ನಡೆಸಲಾಗಿದೆ. ಪ್ರಸ್ತುತ ಸದರಿ ಪ್ರವೇಶ ಪರಿಕ್ಷೆಯ ಫಲಿತಾಂಶವನ್ನು ದಿನಾಂಕ:22.05.2025ರಂದು ಪ್ರಕಟಿಸಲಾಗಿದ್ದು, ಪರೀಕ್ಷೆ ಬರೆದ 2 2 https://dom.karnataka.gov.in e https://domgok.in ತಮ್ಮ SATS ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಬಳ್ಳಾರಿ : ನಗರದ ಈದ್ಗಾ ರಸ್ತೆಯ ಹಿರಿಯಾಳ್ ಕುಡಂ ನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6ನೇ ತರಗತಿಗೆ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಯರು ತಿಳಿಸಿದ್ದಾರೆ. ಈಗಾಗಲೇ 6ನೇ ತರಗತಿ ಪ್ರವೇಶ ಪರೀಕ್ಷೆಯ ಮೊದಲನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ದಾಖಲಾತಿ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳ ಪಾಲಕರ ಮೊಬೈಲ್ ಗೆ ಸಂದೇಶ ಕಳುಹಿಸಲಾಗಿದೆ. ದಾಖಲಾತಿ ಹೊಂದಲು ಮೇ 29 ಕೊನೆಯ ದಿನವಾಗಿದೆ. ದಾಖಲೆ: ಪ್ರವೇಶಾತಿ ಅರ್ಜಿ, ವರ್ಗಾವಣೆ ಪ್ರಮಾಣ ಪತ್ರ(ಮೂಲ) ಮತ್ತು 2 ಜೆರಾಕ್ಸ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿ, ತಂದೆ-ತಾಯಿಯ ಆಧಾರ್ ಪ್ರತಿ, ಅಂಗವಿಕಲ ವಿದ್ಯಾರ್ಥಿಯಾಗಿದ್ದಲ್ಲಿ ವೈದ್ಯಕೀಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ(ಬೇರೆ ತಾಲ್ಲೂಕಿನವರಿಗೆ ಮಾತ್ರ), 5ನೇ ತರಗತಿ ಅಂಕಪಟ್ಟಿ ಮೂಲ(ಜೆರಾಕ್ಸ್ ಪ್ರತಿ 2), ಪ್ರವೇಶ ಪರೀಕ್ಷೆಯ ಹಾಲ್‌ಟಿಕೇಟ್, ವಿದ್ಯಾರ್ಥಿಯ ಆರೋಗ್ಯ ಕಾರ್ಡ್, ಇತ್ತೀಚಿನ 4 ಭಾವಚಿತ್ರ, ಮೊಬೈಲ್…

Read More

ಬೆಂಬಲ ಯೋಜನೆಯಡಿ 2024-25 ನೇ ಸಾಲಿನ  ಹಿಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲಾಗುವುದು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲ ಯೋಜನೆಯಡಿ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.7,280 ರಂತೆ ರೈತರಿಂದ ಖರೀದಿಸಲಾಗುವುದು. ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ವತಿಯಿಂದ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಖರೀದಿ ಕೇಂದ್ರಗಳ ವಿವರ: ಬಳ್ಳಾರಿ ಎಪಿಎಂಸಿ ಯ ಆಡಳಿತ ಕಚೇರಿ(ಮೊ.8722047273, 6366975388). ಬಳ್ಳಾರಿ ತಾಲ್ಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತ(ಮೊ.7353155205). ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತವು ಖರೀದಿ ಏಜೆನ್ಸಿಯಾಗಿರುತ್ತದೆ. ಬೇಕಾದ ದಾಖಲೆ: ಆಧಾರ್‌ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್‌ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ. ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್…

Read More

ನಿರ್ಲಕ್ಷಿಸಿದರೆ ಅಪಾಯಕಾರಿಯಾಗುವ ದಡಾರ ರೋಗ ತಡೆಯಲು ಮಗುವಿನ ವಯಸ್ಸು ಒಂಬತ್ತು ತಿಂಗಳು ತುಂಬಿದ ನಂತರ ತಪ್ಪದೇ ದಡಾರ-ರೂಬೆಲ್ಲಾ ಲಸಿಕೆ ಹಾಕಿಸಬೇಕು ಎಂದು ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕ ಡಾ.ಶರಣಬಸಪ್ಪ ಗಣಜಲಖೇಡ ಅವರು ಹೇಳಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ವೈದ್ಯಾಧಿಕಾರಿಗಳ ಜಾಗೃತಿ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಬೇಸಿಗೆಯಲ್ಲಿ ಬೆವರುಸಾಲೆಯಿಂದ ದೇಹದ ಮೇಲೆ ನುಚ್ಚು ಗುಳ್ಳೆಗಳು ಕಂಡು ಬರುವುದು ಸಹಜ. ದಡಾರ ಸೋಂಕು ಸಹ ನೋಡಲು ಇದೇ ರೀತಿ ಕಂಡು ಬರುತ್ತದೆ. ಮುಂಜಾಗೃತೆ ಕ್ರಮವಾಗಿ ಯಾವುದೇ ತಪ್ಪು ನಂಬಿಕೆಗಳನ್ನು ನಂಬದೆ  ಮಕ್ಕಳಿಗೆ ದಡಾರ- ರೂಬೆಲ್ಲಾ ಲಸಿಕೆ ಹಾಕಿಸಬೇಕು ಎಂದರು. ಮೇ 26 ರಿಂದ ಒಂದು ವಾರ ಜರಗುವ ವಿಶೇಷ ಲಸಿಕಾ ಕಾರ್ಯಕ್ರಮದಲ್ಲಿ ದಡಾರ ಪ್ರಕರಣಗಳು ಈ ಪೂರ್ವದಲ್ಲಿ ವರದಿಯಾದ ಗ್ರಾಮ, ಬಡಾವಣೆಗಳನ್ನು ಗುರಿಯಾಗಿಟ್ಟುಕೊಂಡು ಸಮುದಾಯದಲ್ಲಿ ಅಮ್ಮ, ತಟ್ಟು, ಗಂಜೀನಿ ಎಂದು ಕರೆಯಲ್ಪಡುವ ದಡಾರ ರೋಗ ಕುರಿತು ಜಾಗೃತಿ…

Read More

ಗುರುವಾರ ಮುಂಜಾನೆ ಸ್ಯಾನ್ ಡಿಯಾಗೋ ಪ್ರದೇಶದಲ್ಲಿ ಖಾಸಗಿ ವಿಮಾನ ಪತನವಾಗಿದ್ದು ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ವಿಮಾನವು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ಪತನಗೊಂಡಿತು. ಅಧಿಕಾರಿಗಳು ಇದನ್ನು ದೃಢೀಕರಿಸುತ್ತಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಸಹಾಯಕ ಅಗ್ನಿಶಾಮಕ ಇಲಾಖೆಯ ಮುಖ್ಯಸ್ಥ ಡ್ಯಾನ್ ಎಡ್ಡಿ ಹೇಳಿದ್ದಾರೆ. ಈ ವಿಮಾನವು ಎಂಟರಿಂದ ಹತ್ತು ಜನರನ್ನು ಹೊತ್ತೊಯ್ಯಬಲ್ಲದು. ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಎಷ್ಟು ಜನರಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಸ್ಯಾನ್ ಡಿಯಾಗೋ ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಕೂಡ ಅದನ್ನೇ ಹೇಳುತ್ತಿದ್ದಾರೆ. ಅಪಘಾತದ ಸುತ್ತಮುತ್ತಲ ಪ್ರದೇಶದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಹೇಳಲಾಗಿದೆ. ಅಪಘಾತದಲ್ಲಿ ಕಾರುಗಳು ಸುಟ್ಟು ಕರಕಲಾಗಿವೆ. ಸುಮಾರು 15 ಮನೆಗಳು ನಾಶವಾಗಿವೆ. “ಆ ವಿಮಾನ ಅಪಘಾತಕ್ಕೀಡಾದಾಗಿನಿಂದ ಎಲ್ಲೆಡೆ ಜೆಟ್ ಇಂಧನವಿದೆ” ಎಂದು ಎಡ್ಡಿ ಹೇಳಿದರು. ಮನೆಗಳನ್ನು ಪರಿಶೀಲಿಸುವ ಮತ್ತು ಅವಶೇಷಗಳಲ್ಲಿ ಸಿಲುಕಿರುವವರನ್ನು ಹೊರತರುವತ್ತ ಗಮನಹರಿಸಲಾಗಿದೆ ಎಂದು ಅಧಿಕಾರಿಗಳು…

Read More

ಇಂಡೋನೇಷ್ಯಾ: ಇಂಡೋನೇಷ್ಯಾದಲ್ಲಿ ಮತ್ತೊಮ್ಮೆ ಭೂಕಂಪನದ ಅನುಭವವಾಗಿದೆ. ಇಂಡೋನೇಷ್ಯಾದ ದಕ್ಷಿಣ ಸುಮಾತ್ರದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರ ತಿಳಿಸಿದೆ. 10 ಕಿಲೋಮೀಟರ್ (6.21 ಮೈಲುಗಳು) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು GFZ ಶುಕ್ರವಾರ ತಿಳಿಸಿದೆ. ಅದೇ ಸಮಯದಲ್ಲಿ, ಈ ಭೂಕಂಪದಿಂದ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟವಾದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅದೇ ಸಮಯದಲ್ಲಿ, ನೇಪಾಳದಲ್ಲಿಯೂ ಲಘು ಭೂಕಂಪನದ ಅನುಭವವಾಯಿತು. ನೇಪಾಳದಲ್ಲಿ ಭೂಕಂಪದ ತೀವ್ರತೆ 4.3 ರಷ್ಟಿತ್ತು. ಈ ಭೂಕಂಪದಿಂದ ಯಾವುದೇ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ.

Read More

ಬೆಂಗಳೂರು: ರಾಜ್ಯದ ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಕ್ಯಾನ್ಸರ್ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ಸಮೀಪದ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಲಭವಾಗಿ, ಗುಣಮಟ್ಟದ ಕೀಮೋಥೇರಪಿ ಮತ್ತು ಬೆಂಬಲ ಸೇವೆಗಳನ್ನು ಒದಗಿಸುವ ಉದೇಶದಿಂದ SAST ನೊಂದಯಿತ ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದ ನಂತರ ಮುಂದುವರೆದ ಕೀಮೋಥೆರಪಿ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಹಬ್- ಅಂಡ್-ಸ್ಟೋಕ್ ಮಾದರಿಯಲ್ಲಿ ಪ್ರಾರಂಭಿಸಲಾಗುವುದು. ಹಿನ್ನೆಲೆ ವಾರ್ಷಿಕವಾಗಿ ಕರ್ನಾಟಕ ರಾಜ್ಯದಲ್ಲಿ ICMR-NCRP 2023 ವರದಿಯ ಪ್ರಕಾರ ಸುಮಾರು 70,000 ಹೊಸ ಕ್ಯಾನ್ಸರ್ ಪ್ರಕರಣಗಳನ್ನು ವರದಿಯಾಗುತ್ತಿದೆ. ಪ್ರಮುಖ ಕ್ಯಾನ್ಸರ್‌ಗಳು: ಸ್ತನ ಕ್ಯಾನ್ಸರ್ (18%), ಗರ್ಭಕಂಠದ ಕ್ಯಾನ್ಸರ್ (14%), ಬಾಯಿ ಕ್ಯಾನ್ಸರ್ (12%), ಶ್ವಾಸಕೋಶ ಕ್ಯಾನ್ಸರ್ (8%), ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್ (6%). ಬಾಯಿಯ ಕ್ಯಾನ್ಸರ್ ಸಂಭವ: 12 ಪುಕರಣಗಳು /1…

Read More

ಮುಂಬೈ : ಬಾಲಿವುಡ್ ನಟಿ ನಟಿ ನಿಕಿತಾ ದತ್ತಾಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ನಟಿ ನಿಕಿತಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು,, ತಮಗೆ ಮಾತ್ರವಲ್ಲದೆ ತಮ್ಮ ತಾಯಿಗೂ ಸಹ ವೈರಸ್ ತಗುಲಿದೆ ಎಂದು ಬಹಿರಂಗಪಡಿಸಿದ್ದಾರೆ. ಕೋವಿಡ್ ನನ್ನ ಅಮ್ಮ ಮತ್ತು ನನಗೆ ಹಲೋ ಹೇಳಲು ಬಂದಿದ್ದಾರೆ. ಆಹ್ವಾನಿಸದ ಈ ಅತಿಥಿ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಆಶಿಸುತ್ತೇನೆ. ಈ ಸಣ್ಣ ಕ್ವಾರಂಟೈನ್ ನಂತರ ನಿಮ್ಮನ್ನು ಭೇಟಿಯಾಗುತ್ತೇನೆ. ಎಲ್ಲರೂ ಸುರಕ್ಷಿತವಾಗಿರಿ.” ಪ್ರಸ್ತುತ ಹೋಮ್ ಕ್ವಾರಂಟೈನ್ ನಲ್ಲಿರುವ ದತ್ತಾ ಅವರಿಗೆ ಸೌಮ್ಯ ಲಕ್ಷಣಗಳು ಮಾತ್ರ ಇವೆ, ಆದರೆ ಅವರು ಚೇತರಿಸಿಕೊಳ್ಳುವವರೆಗೆ ಎಲ್ಲಾ ಕೆಲಸದ ಬದ್ಧತೆಗಳನ್ನು ವಿರಾಮಗೊಳಿಸಲು ನಿರ್ಧರಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮೇ.24, 25 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ  ಕರಾವಳಿಯ ಮೂರು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮೇ 24 ರ ನಾಳೆಯಿಂದ ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬೀದ‌ರ್, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ,…

Read More