Author: kannadanewsnow57

ಶಿವಮೊಗ್ಗ : 2015ರ ಹಿಂದೆ ಅರಣ್ಯ ಅಥವಾ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಹಾಗೂ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಶೀಘ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಅವರು ಇಂದು ಸೊರಬದ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2015ರ ಹಿಂದೆ ಅರಣ್ಯ ಅಥವಾ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಹಾಗೂ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಶೀಘ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಈ ನಿರ್ಧಾರ ಬರುವವರೆಗೆ ಅಧಿಕಾರಿಗಳು ಒಕ್ಕಲೆಬ್ಬಿಸದಂತೆ ಸೂಚಿಸಿದ ಅವರು, 2015ರಿಂದೀಚೆಗೆ ಸಾಗುವಳಿ ಮಾಡುತ್ತಿರುವವರ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಅವರು, ಬೆಳೆದ ಪೈರು ಅಥವಾ ಬೆಳೆಯನ್ನು ನಾಶಪಡಿಸದಂತೆಯೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದ ಅವರು ಅಧಿಕಾರಿಗಳು…

Read More

ಬೆಂಗಳೂರು : ರಾಜ್ಯದ ಶಾಲೆಗಳಿಗೆ 2025-26ನೇ ಸಾಲಿನ ಪಠ್ಯಪುಸ್ತಕಗಳನ್ನು ವಿತರಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಶೈಕ್ಷಣಿಕ ಸಾಲಿಗೆ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ ದಿನಚರಿಗಳ ನಿರ್ವಹಣೆ ಕುರಿತು ಈಗಾಗಲೇ ಉಲ್ಲೇಖ (1) ರ ಸುತ್ತೋಲೆಯಲ್ಲಿ ಸೂಚಿಸಲಾಗಿರುತ್ತದೆ. ಶಾಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಸಕಾಲದಲ್ಲಿ ಲಭ್ಯಗೊಳಿಸಬೇಕಾಗಿರುವುದರಿಂದ ಈಗಾಗಲೇ ತಾಲ್ಲೂಕು ಹಂತಕ್ಕೆ ಶೇ.50 ರಷ್ಟು ಪಠ್ಯಪುಸ್ತಕಗಳು ಸರಬರಾಜಾಗಿದ್ದಲ್ಲಿ ಅಂತಹ ತಾಲ್ಲೂಕುಗಳಲ್ಲಿ ಎಲ್ಲಾ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ ದಿನಚರಿಗಳನ್ನು ಆಯಾ ಶಾಲಾ ಬೇಡಿಕೆಗೆ ಅನುಗುಣವಾಗಿ ದಿನಾಂಕ:23.04.2025 ರಿಂದ ಆಯಾ ಶಾಲೆಗಳಿಗೆ ಸಾಗಾಣಿಕೆ ಮಾಡಿ ನಿಯಮಾನುಸಾರ ವಿತರಿಸಲು ಕ್ರಮವಹಿಸಲು ತಿಳಿಸಿದೆ. ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲು ಸಾಗಾಣಿಕ ವೆಚ್ಚವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲು ಕ್ರಮವಹಿಸಲಾಗುವುದು. ಮಾರಾಟ ಪಠ್ಯಪುಸ್ತಕಗಳನ್ನು ಆಯಾ ಶಾಲೆಗಳ ಬೇಡಿಕೆಯನ್ವಯ ಶೇ.10 ರಷ್ಟು ಮುಂಗಡ ಹಣ ಪಾವತಿಸಿರುವ ಶಾಲೆಗಳು ಶೇ.100 ರಷ್ಟು ಹಣ ಪಾವತಿಸಿದ ನಂತರ ಹಾಗೂ ಉಲ್ಲೇಖ (2) ರ ಜ್ಞಾಪನ ಪತ್ರಗಳಲ್ಲಿ ತಿಳಿಸಿರುವಂತೆ ಹಿಂದಿನ ಸಾಲುಗಳ ಬಾಕಿ…

Read More

ಬೆಂಗಳೂರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ದಿನಾಂಕ: 18-4-2023ರ ಅಧಿಕೃತ ಜ್ಞಾಪನ ಪತ್ರದಲ್ಲಿ ಸರ್ಕಾರಿ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳ ಜೊತೆಗೆ ಖಾಸಗಿ ಆಸ್ಪತ್ರೆ / ಆರೋಗ್ಯ ಸಂಸ್ಥೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ ನೋಂದಾವಣಿ ಮಾಡಿಕೊಳ್ಳಲು ಅವಕಾಶ ನೀಡಿ ಮಾರ್ಗಸೂಚಿ (SOP) ಯನ್ನು ಬಿಡುಗಡೆಗೊಳಿಸಿ ಜಿಲ್ಲಾವಾರು ಸಂಯೋಜಕರನ್ನು ನೇಮಕಗೊಳಿಸಲಾಗಿದೆ. ಆದ್ದರಿಂದ ತಾವು ತಮ್ಮ ಜಿಲ್ಲಾ / ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗುರುತಿಸಿರುವ ಖಾಸಗಿ ಆಸ್ಪತ್ರೆ /ಆರೋಗ್ಯ ಸಂಸ್ಥೆಗಳೂ ಸೇರಿದಂತೆ (ಆಸ್ಪತ್ರೆಗಳ ಪಟ್ಟಿ ಲಗತ್ತಿಸಿದೆ) ಇನ್ನಾವುದೇ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳಿದ್ದಲ್ಲಿ ಅಂತಹ ಆಸ್ಪತ್ರೆಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳುವ ಸಂಬಂಧ ತಮ್ಮ ಜಿಲ್ಲಾ ಸಂಯೋಜಕರು (District Coordinators of SATS) ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ದಿನಾಂಕ: 28-04-2028ರೊಳಗಾಗಿ ನೋಂದಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ತುರ್ತು ಕ್ರಮವಹಿಸಲು ಸೂಚಿಸಿದೆ.

Read More

ಶ್ರೀನಗರ : ದಕ್ಷಿಣ ಕಾಶ್ಮೀರದ ಪ್ರಮುಖ ಪ್ರವಾಸಿ ತಾಣವಾದ ಪಹಲ್ಗಾಮ್ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ಇಡೀ ದೇಶವೇ ಆಕ್ರೋಶಗೊಂಡಿದೆ. ಈ ದಾಳಿಯಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಏತನ್ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರೀನಗರದಲ್ಲಿದ್ದಾರೆ. ಅವರು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಅವರು ಇಂದು ಪೊಲೀಸ್ ನಿಯಂತ್ರಣ ಕೊಠಡಿಯನ್ನು ತಲುಪಿದರು, ಅಲ್ಲಿ ಅವರು ಮೃತರಿಗೆ ಗೌರವ ಸಲ್ಲಿಸಿದರು. ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರ ಶವಗಳನ್ನು ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಇರಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರ ಕುಟುಂಬಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪಹಲ್ಗಾಮ್ ಸ್ಥಳಕ್ಕೆ ಭೇಟಿ ನೀಡಲಿದ್ದು, ಗಾಯಾಳುಗಳ ಸ್ಥಿತಿಗತಿ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇದಾದ ನಂತರ ಅವರು ದೆಹಲಿಗೆ ಹಿಂತಿರುಗಲಿದ್ದಾರೆ. ನಿನ್ನೆಯ ದಾಳಿಯ ನಂತರ, ಶಾ, ‘ಜಮ್ಮು…

Read More

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದು, ಉಗ್ರರ ದಾಳಿಯಲ್ಲಿ ಭಾಗಿಯಾಗಿರುವ ಆರೋಪದಡಿ 250 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪಹಲ್ಗಾಮ್ ಉಗ್ರ ದಾಳಿಯ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳಿಗೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಪಾಕಿಸ್ತಾನದ ಉಗ್ರರಿಗೆ ಇಬ್ಬರು ಸ್ಥಳೀಯ ಉಗ್ರರು ಸಹಾಯ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಫೋಟೋಗಳನ್ನು ಬಿಡುಗಡೆ ಮಾಡಲಾಗಿದ್ದು, ಇವರು ಎಲ್ ಇಟಿ ಉಗ್ರ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಶಂಕಿಸಲಾಗಿದೆ. ಇವರನ್ನು ಆಸೀಫ್, ಸುಲೇಮಾನ್, ಅಬು ಎಂದು ಗುರುತಿಸಲಾಗಿದೆ. ಘಟನೆಯ ನಂತರ, ಭದ್ರತಾ ಪಡೆಗಳು ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ದಾಳಿಕೋರರನ್ನು ಇನ್ನೂ ಗುರುತಿಸಲಾಗಿಲ್ಲ, ಆದರೆ ದಾಳಿಯ ಹಿಂದಿನ ಉದ್ದೇಶ ಮತ್ತು ಜಾಲವನ್ನು ಪತ್ತೆಹಚ್ಚಲು ಗುಪ್ತಚರ ಸಂಸ್ಥೆಗಳು ಪ್ರತಿಯೊಂದು ಕೋನವನ್ನೂ ಪರಿಶೀಲಿಸುತ್ತಿವೆ. ಜೊತೆಗೆ ಕಾಶ್ಮೀರದಲ್ಲಿ 250 ಕ್ಕೂ ಹೆಚ್ಚು ಜನರನ್ನು…

Read More

ಶ್ರೀನಗರ  : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಪಹಲ್ಗಾಮ್ ಉಗ್ರ ದಾಲಿಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಘೋಷಿಸಿದೆ. “ನಿನ್ನೆ ಪಹಲ್ಗಾಮ್‌ನಲ್ಲಿ ನಡೆದ ಹೇಯ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಮುಗ್ಧ ನಾಗರಿಕರ ವಿರುದ್ಧದ ಈ ಅನಾಗರಿಕ ಮತ್ತು ಅರ್ಥಹೀನ ಕ್ರೌರ್ಯದ ಕೃತ್ಯಕ್ಕೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ. ನಾವು ಇದನ್ನು ಸಾಧ್ಯವಾದಷ್ಟು ಪ್ರಬಲವಾಗಿ ಖಂಡಿಸುತ್ತೇವೆ. ಕಳೆದುಕೊಂಡ ಅಮೂಲ್ಯ ಜೀವಗಳಿಗೆ ನಾವು ಶೋಕಿಸುತ್ತೇವೆ. ಪ್ರೀತಿಪಾತ್ರರ ನಷ್ಟಕ್ಕೆ ಯಾವುದೇ ಹಣವು ಎಂದಿಗೂ ಸರಿದೂಗಿಸಲು ಸಾಧ್ಯವಿಲ್ಲ, ಆದರೆ ಬೆಂಬಲ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಮೃತರ…

Read More

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದು, ಪಾಕಿಸ್ತಾನದ ಉಗ್ರರಿಗೆ ಇಬ್ಬರು ಸ್ಥಳೀಯ ಉಗ್ರರು ಸಹಾಯ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪಹಲ್ಗಾಮ್ ಉಗ್ರ ದಾಳಿಯ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳಿಗೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಪಾಕಿಸ್ತಾನದ ಉಗ್ರರಿಗೆ ಇಬ್ಬರು ಸ್ಥಳೀಯ ಉಗ್ರರು ಸಹಾಯ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಫೋಟೋಗಳನ್ನು ಬಿಡುಗಡೆ ಮಾಡಲಾಗಿದ್ದು, ಇವರು ಎಲ್ ಇಟಿ ಉಗ್ರ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಶಂಕಿಸಲಾಗಿದೆ. ಇವರನ್ನು ಆಸೀಫ್, ಸುಲೇಮಾನ್, ಅಬು ಎಂದು ಗುರುತಿಸಲಾಗಿದೆ. ಘಟನೆಯ ನಂತರ, ಭದ್ರತಾ ಪಡೆಗಳು ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ದಾಳಿಕೋರರನ್ನು ಇನ್ನೂ ಗುರುತಿಸಲಾಗಿಲ್ಲ, ಆದರೆ ದಾಳಿಯ ಹಿಂದಿನ ಉದ್ದೇಶ ಮತ್ತು ಜಾಲವನ್ನು ಪತ್ತೆಹಚ್ಚಲು ಗುಪ್ತಚರ ಸಂಸ್ಥೆಗಳು ಪ್ರತಿಯೊಂದು ಕೋನವನ್ನೂ ಪರಿಶೀಲಿಸುತ್ತಿವೆ.

Read More

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಫೋಟೋಗಳನ್ನು ಬಿಡುಗಡೆ ಮಾಡಲಾಗಿದ್ದು, ಇವರು ಎಲ್ ಇಟಿ ಉಗ್ರ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಶಂಕಿಸಲಾಗಿದೆ. ಉಗ್ರರನ್ನು ಅಬು, ಆಸೀಫ್. ಸುಲೇಮಾನ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ, ಭದ್ರತಾ ಪಡೆಗಳು ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ದಾಳಿಕೋರರನ್ನು ಇನ್ನೂ ಗುರುತಿಸಲಾಗಿಲ್ಲ, ಆದರೆ ದಾಳಿಯ ಹಿಂದಿನ ಉದ್ದೇಶ ಮತ್ತು ಜಾಲವನ್ನು ಪತ್ತೆಹಚ್ಚಲು ಗುಪ್ತಚರ ಸಂಸ್ಥೆಗಳು ಪ್ರತಿಯೊಂದು ಕೋನವನ್ನೂ ಪರಿಶೀಲಿಸುತ್ತಿವೆ. https://twitter.com/ANI/status/1914938576879444179?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಫೋಟೋಗಳನ್ನು ಬಿಡುಗಡೆ ಮಾಡಲಾಗಿದ್ದು, ಇವರು ಎಲ್ ಇಟಿ ಉಗ್ರ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಶಂಕಿಸಲಾಗಿದೆ. ಉಗ್ರರನ್ನು ಅಬು, ಆಸೀಫ್. ಸುಲೇಮಾನ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ, ಭದ್ರತಾ ಪಡೆಗಳು ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ದಾಳಿಕೋರರನ್ನು ಇನ್ನೂ ಗುರುತಿಸಲಾಗಿಲ್ಲ, ಆದರೆ ದಾಳಿಯ ಹಿಂದಿನ ಉದ್ದೇಶ ಮತ್ತು ಜಾಲವನ್ನು ಪತ್ತೆಹಚ್ಚಲು ಗುಪ್ತಚರ ಸಂಸ್ಥೆಗಳು ಪ್ರತಿಯೊಂದು ಕೋನವನ್ನೂ ಪರಿಶೀಲಿಸುತ್ತಿವೆ. https://twitter.com/ANI/status/1914938576879444179?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಕನ್ನಡಿಗರ ರಕ್ಷಣೆಗೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. https://twitter.com/siddaramaiah/status/1914931790285869134?ref_src=twsrc%5Etfw

Read More