Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರು ನಿವಾಸದಲ್ಲಿ ಬಹು ಭಾಷಾ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ನಿಧನರಾಗಿದ್ದಾರೆ. ಕನ್ನಡ ತಮಿಳು ತೆಲುಗು ಹಿಂದಿ ಚಿತ್ರಗಳಲ್ಲಿ ಬಿ ಸರೋಜಾದೇವಿ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ಹೌದು ಇಂದು ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ.ಡಾ.ರಾಜಕುಮಾರ್, ಕಲ್ಯಾಣ್ ಕುಮಾರ್ ಸೇರಿದಂತೆ ಅನೇಕ ಹಿರಿಯ ನಟರೊಂದಿಗೆ ಬಿ ಸರೋಜಾ ದೇವಿ ಅದ್ಭುತವಾಗಿ ನಟಿಸಿದ್ದರು.ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬಹುದೊಡ್ಡ ನಷ್ಟ ಉಂಟಾಗಿದೆ. ಹೀಗಿವೆ ನಟಿ ಬಿ.ಸರೋಜಾದೇವಿ ಅವರು ನಟಿಸಿರುವ ಸಿನಿಮಾಗಳು ಕಿತ್ತೂರುರಾಣಿ ಚೆನ್ನಮ್ಮ, ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್ಮಾಸ್ಟರ್, ಪಂಚರತ್ನ, ಲಕ್ಷ್ಮೀಸರಸ್ವತಿ, ಚಿಂತಾಮಣಿ,…
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಎಸ್ಕಾಂಗಳ ಆದಾಯ ಅಂತರ ಸರಿದೂಗಿಸಲು ಜನರ ಜೇಬಿಗೆ ಕತ್ತರಿ ಹಾಕಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದಬಂದಿದೆ. ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ತಮ್ಮ 4,620 ಕೋಟಿ ರೂ.ಗಳ ಆದಾಯದ ಅಂತರವನ್ನು ತುಂಬಲು ವಿದ್ಯುತ್ ಸರಬರಾಜು ನಿಗಮ ನಿಯಮಿತ ಕರ್ನಾಟಕ ವಿದ್ಯುತ್ ನಿಯಂ ತ್ರಣ ಆಯೋಗದಿಂದ (ಕೆಇ ಆರ್ಸಿ) ತಿದ್ದುಪಡಿ ಕೋರಿದೆ. ತಮ್ಮ ಆದಾಯದ ಅಂತರವನ್ನು ಸರಿದೂಗಿಸಲು ಎಸ್ಕಾಂಗಳು ಮಾರ್ಚ್ 23, 2025 ರಂದು ಮೊದಲ ಬಾರಿಗೆ KERC ಮುಂದೆ ಮೇಲ್ಮನವಿ ಸಲ್ಲಿಸಿದವು. ಈ ಕುರಿತ ಚರ್ಚೆಯನ್ನು ಜುಲೈ 8 ರಂದು ನಡೆಸಲಾಯಿತು. 30 ದಿನಗಳ ಒಳಗೆ ಎಲ್ಲಾ ಪಾಲುದಾರರಿಂದ ಸಾರ್ವಜನಿಕ ಅಭಿಪ್ರಾಯವನ್ನು ಪಡೆಯಲು ಮತ್ತು ಅಫಿಡವಿಟ್ ಮೂಲಕ ಆಯೋಗಕ್ಕೆ ವಿವರಗಳನ್ನು ಸಲ್ಲಿಸಲು ವಿದ್ಯುತ್ ಸರಬರಾಜು ನಿಗಮ ನಿಯಮಿತಕ್ಕೆ ಅನುಮತಿ ನೀಡಿದೆ.
SHOCKING : ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂದೂಗಳ ಮೇಲಿನ ದೌರ್ಜನ್ಯ : ಹಿಂದೂ ವ್ಯಾಪಾರಿಯನ್ನು ಹೊಡೆದು ಕೊಂದು ವಿಕೃತಿ.!
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಗಳು ನಿಲ್ಲುತ್ತಿಲ್ಲ. ಕೆಲವರು ಹಿಂದೂ ವ್ಯಾಪಾರಿಯ ಮೇಲೆ ದಾಳಿ ಮಾಡಿದ್ದಾರೆ. ಕಾಂಕ್ರೀಟ್ ಚಪ್ಪಡಿಯಿಂದ ಹೊಡೆದು ಕೊಂದಿದ್ದಾರೆ. ಅವರ ಸಾವನ್ನು ಖಚಿತಪಡಿಸಿದ ನಂತರ, ಅವರು ಅವರ ದೇಹದ ಮೇಲೆ ನೃತ್ಯ ಮಾಡಿದ್ದಾರೆ. ಬಾಂಗ್ಲಾದೇಶದ ಹಿಂದೂಗಳು ಈ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜುಲೈ 9 ರಂದು ಓಲ್ಡ್ ಢಾಕಾ ಪ್ರದೇಶದ ಮಿಟ್ಫೋರ್ಡ್ ಆಸ್ಪತ್ರೆಯ ಮುಂದೆ ಈ ಘಟನೆ ನಡೆದಿತ್ತು. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್ಪಿ) ಯುವ ಮೋರ್ಚಾದ ಕಾರ್ಯಕರ್ತರು ಹಿಂದೂ ಸ್ಕ್ರ್ಯಾಪ್ ವ್ಯಾಪಾರಿ ಲಾಲ್ ಚಂದ್ ಸೊಹಾಗ್ ಮೇಲೆ ದಾಳಿ ಮಾಡಿದ್ದಾರೆ. ಅವರನ್ನು ಕಾಂಕ್ರೀಟ್ ಚಪ್ಪಡಿಯಿಂದ ಕೊಂದಿದ್ದಾರೆ. ಅವರ ಸಾವನ್ನು ದೃಢಪಡಿಸಿದ ನಂತರ, ಅವರು ಸೊಹಾಗ್ ಅವರ ದೇಹದ ಮೇಲೆ ನೃತ್ಯ ಮಾಡಿದ್ದಾರೆ. ಈ ವೀಡಿಯೊ ಕ್ಲಿಪ್ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಏತನ್ಮಧ್ಯೆ, ಬಾಂಗ್ಲಾದೇಶದ ಹಿಂದೂಗಳು ಈ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶನಿವಾರ, ಹಲವಾರು ವಿಶ್ವವಿದ್ಯಾಲಯಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದರು.…
ಚೆನ್ನೈ: ತಮಿಳಿನ ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಂ’ ಸೆಟ್ನಲ್ಲಿ ನಡೆದ ಅಪಘಾತದಲ್ಲಿ ಸ್ಟಂಟ್ ಮಾಸ್ಟರ್ ಮೋಹನರಾಜ್ ಸಾವನ್ನಪ್ಪಿದ್ದಾರೆ. ಕಾರು ಹಾರಿ ಕೆಳಗೆ ಬಿದ್ದಾಗ ಸ್ಟಂಟ್ ಮಾಸ್ಟರ್ ಪ್ರಜ್ಞಾಹೀನರಾಗಿದ್ದರು, ಮತ್ತು ಹತ್ತಿರದ ಚಿತ್ರತಂಡ ಅವರನ್ನು ರಕ್ಷಿಸುತ್ತಿರುವ ದೃಶ್ಯಗಳು ಬಿಡುಗಡೆಯಾಗಿದ್ದು ಹೃದಯವಿದ್ರಾವಕವಾಗಿವೆ. ರಾಜು ಕಾರು ಸ್ಟಂಟ್ ಮಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಸುದ್ದಿಯನ್ನು ತಮಿಳು ನಟ ವಿಶಾಲ್ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ದೃಢಪಡಿಸಿದ್ದಾರೆ. https://twitter.com/sekartweets/status/1944589430867861789?ref_src=twsrc%5Etfw%7Ctwcamp%5Etweetembed%7Ctwterm%5E1944589430867861789%7Ctwgr%5E1a631716ea129fbbcbe077a058d5518bba1b784a%7Ctwcon%5Es1_c10&ref_url=https%3A%2F%2Fapi-news.dailyhunt.in%2F ರಾಜು ಅವರೊಂದಿಗೆ ಹಲವಾರು ಯೋಜನೆಗಳಲ್ಲಿ ಕೆಲಸ ಮಾಡಿರುವ ವಿಶಾಲ್, ಈ ನಷ್ಟದ ಬಗ್ಗೆ ತಮ್ಮ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. “ಇಂದು ಬೆಳಿಗ್ಗೆ ಜಾಮಿ @arya_offl ಮತ್ತು @beemji ರಂಜಿತ್ ಅವರ ಚಿತ್ರಕ್ಕಾಗಿ ಕಾರು ಉರುಳಿಸುವ ದೃಶ್ಯವನ್ನು ಮಾಡುವಾಗ ಸ್ಟಂಟ್ ಕಲಾವಿದ ರಾಜು ನಿಧನರಾದರು ಎಂಬ ಅಂಶವನ್ನು ಅರಗಿಸಿಕೊಳ್ಳಲು ತುಂಬಾ ಕಷ್ಟ. ನನಗೆ ರಾಜು ತುಂಬಾ ವರ್ಷಗಳಿಂದ ಪರಿಚಿತ. ಅವರು ನನ್ನ ಚಿತ್ರಗಳಲ್ಲಿ ಪದೇ ಪದೇ ಅನೇಕ ಅಪಾಯಕಾರಿ ಸಾಹಸಗಳನ್ನು ಮಾಡಿದ್ದಾರೆ ಏಕೆಂದರೆ ಅವರು ತುಂಬಾ…
ಯಾದಗಿರಿ: ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಯಾದಗಿರಿ ಜಿಲ್ಲೆಯ ಹೋರುಂಚ ತಾಂಡಾದ ವ್ಯಕ್ತಿಯೊಬ್ಬ ಎರಡನೇ ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧನ್ನು ಚವ್ಹಾಣ್(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 20 ವರ್ಷದ ಹಿಂದೆ ಸಕ್ರಿಬಾಯಿ ಮದುವೆಯಾಗಿದ್ದರೂ ಸೋನುಬಾಯಿ ಜತೆಗೆ ಸಹಜೀವನ ನಡೆಸುತ್ತಿದ್ದರು. ಪತಿಯ ಆತ್ಮಹತ್ಯೆಗೆ ಎರಡನೇ ಪತ್ನಿಯ ಕಿರುಕುಳವೇ ಕಾರಣ ಎಂದು ಮೊದಲ ಪತ್ನಿ ಸಕ್ರಿಬಾಯಿ ದೂರು ನೀಡಿದ್ದಾರೆ. ಸೋನು ಬಾಯಿ, ತಾಯಿ ತಾರಿಬಾಯಿ, ಸಹೋದರ ಕಾಂತಿಲಾಲ ರಾಥೋಡ್, ಸಂಬಂಧಿಕರಾದ ದೇವಿಬಾಯಿ, ಸುನಿತಾ ಬಾಯಿ ವಿರುದ್ಧ ಪ್ರಕರಣ ದಾಖಲಾಗಿದೆ. ಸೋನುಬಾಯಿ ಕಿರುಕುಳದಿಂದ ಧನ್ನು ಚವ್ಹಾಣ್ ನೇಣಿಗೆ ಶರಣಾಗಿದ್ದಾನೆ ಎಂದು ದೂರು ನೀಡಲಾಗಿದೆ.
ಬೆಂಗಳೂರು: ಸಿಶಿವಮೊಗ್ಗ ಜಿಲ್ಲೆಯ ಸಾಗರದ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿ, ಬೇರೊಂದು ದಿನ ಆಯೋಜಿಸಬೇಕು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನನ್ನ ಪತ್ರದ ಸಾರಾಂಶ ಇಂತಿದೆ; ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ…
ಬೆಂಗಳೂರು : ಬೆಂಗಳೂರು: ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದ್ದು, ಈ ಹೊತ್ತಿನಲ್ಲಿ ಬರೋಬ್ಬರಿ 500 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 500ನೇ ಕೋಟಿಯ ವಿಶೇಷ ಟಿಕೆಟ್ ನ್ನು ವಿತರಣೆ ಮಾಡಲಿದ್ದಾರೆ. ಬಿಎಂಟಿಸಿ ವತಿಯಿಂದ ಕುಮಾರಪಾರ್ಕ್ ಈಸ್ಟ್ ಬಳಿಯ ವಿಂಡ್ಲರ್ ವೃತ್ತದ ಬಳಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಉಚಿತ ಪ್ರಯಾಣ ಸ್ಕಿಮ್ಗೆ 2023ರ ಜೂ.11ರಂದು ಚಾಲನೆ ನೀಡಲಾಗಿತ್ತು, ಯೋಜನೆ ಆರಂಭವಾದ 2 ವರ್ಷದಲ್ಲೇ 500 ಕೋಟಿ ಟಿಕೆಟ್ ವಿತರಣೆಯಾಗಿದೆ. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ…
ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೆ ಇಬ್ಬರು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ, ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸಮೀಪ ಘಟನೆ ನಡೆದಿದ್ದು, ದೇವನಹಳ್ಳಿಯಿಂದ ದೊಡ್ಡಾಪುರ ಕಡೆ ಬರುತ್ತಿದ್ದ ಬುಲೆಟ್ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಘಟನೆ ಬಳಿಕ ಸ್ಥಳದಿಂದ ಕಾರು ಚಾಲಕ ಪರಾರಿಯಾಗಿದ್ದಾನೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಯಚೂರು: ರಾಜ್ಯದಲ್ಲಿ ಭಾರೀ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮನೆಯ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಾತರಕಿ ಗ್ರಾಮದಲ್ಲಿ ತಾಯಮ್ಮ(38) ಮನೆಯ ಗೋಡೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತರ ಸಂಬಂಧಿ 16 ವರ್ಷದ ಬಾಲಕಿ ಸಮಿತ್ರಾ ಗಾಯಗೊಂಡಿದ್ದಾರೆ.ಮಾನ್ವಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಿರಂತರ ಮಳೆಯಿಂದಾಗಿ ತಾಯಮ್ಮ ಅವರ ಹಳೆ ಮನೆ ಗೋಡೆ ತೇವಗೊಂಡು ಶಿಥಿಲವಾಗಿತ್ತು. ಮನೆ ಗೋಡೆ ಕುಸಿತಗೊಂಡು ತಾಯಮ್ಮ ಸಾವನ್ನಪ್ಪಿದ್ದು, ಬಾಲಕಿ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಶಿವಮೊಗ್ಗ : ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆ ಆಗಲಿದೆ. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆ ಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಇಂದು ಲೋಕಾರ್ಪಣೆ ಮಾಡಲಿದ್ದಾರೆ. ಸೇತುವೆಯು 2.44 ಕಿ.ಮೀ. ಉದ್ದವಿದ್ದು, ವಿಜಯಪುರದ ಕೊಲ್ಲಾರ ಬ್ರಿಜ್ (3 ಕಿ.ಮೀ.) ನಂತರ ರಾಜ್ಯದ 2ನೇ ಉದ್ದದ ಸೇತುವೆಯಾಗಿದೆ. ಕೇಬಲ್ ಬ್ರಿಜ್ 740 ಮೀ.ಉದ್ದವಿದ್ದು, ಇದು ರಾಜ್ಯದ ಅತಿ ಉದ್ದದ ಒಳನಾಡ ತೂಗು ಸೇತುವೆ. ದೇಶದಲ್ಲೇ 2ನೆಯದ್ದು ಆಗಿದೆ. ಸೇತುವೆ ನಿರ್ಮಾಣಕ್ಕೆ 473 ಕೋಟಿ ರೂ. ವೆಚ್ಚವಾಗಿದೆ. ಸಾಗರದಿಂದ ತುಮರಿ ಅಥವಾ ಸಿಗಂದೂರಿಗೆ ತೆರಳಲು ರಸ್ತೆ ಮಾರ್ಗವಾಗಿ 100 ಕಿ.ಮೀ. ಸುತ್ತಿ ಬಳಸಿ ಹೋಗಬೇಕಿತ್ತು. ಇಲ್ಲವೇ ಲಾಂಚ್ನಲ್ಲಿ ತೆರಳಬೇಕಿತ್ತು. ಹೊಸ ಸೇತುವೆಯಿಂದ ಅಂತರ ಅರ್ಧದಷ್ಟು ತಗ್ಗಲಿದೆ. ಶರಾವತಿ ಹಿನ್ನೀರ ಪ್ರದೇಶದ ಜನರ ಬವಣೆ…