Author: kannadanewsnow57

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಭಾರತ ಸರ್ಕಾರದ ಮಿನಿಸ್ಟ್ರೀ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫರ್ಮಷನ್  ಟೆಕ್ನಾಲಜಿರವರು ಅಭಿವೃದ್ಧಿ ಪಡಿಸಿರುವ ನ್ಯಾಷನಲ್ ಸ್ಕಾಲರ್‌ಷಿಪ್ ಪೋರ್ಟಲ್‌ನಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆದು, ನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವೆಬ್‌ಸೈಟ್ https://scholarships.gov.in ರಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆಯುವಂತೆ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ.ವ.ಕ.ಇಲಾಖೆಯ ಕಚೇರಿ ಹಾಗೂ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

Read More

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2025-26ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುತ್ತದೆ.  ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ ಕಂಪನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ…

Read More

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ 4689 ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.  ಉಲ್ಲೇಖಿತ (01) ರ ಸರ್ಕಾರದ ಆದೇಶದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ. ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರು ಒಟ್ಟು 4689 ಉಪನ್ಯಾಸಕರ ಹುದ್ದೆಗಳಿಗೆ ಮಾಸಿಕ ರೂ. 14,000/- (ಹದಿನಾಲ್ಕು ಸಾವಿರ ಮಾತ್ರ) ರಂತೆ ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದ್ದು, ಮಾರ್ಚ್-2026 ಅಂತ್ಯದವರೆಗೂ ಖಾಲಿಯಾಗುವ ಹುದ್ದೆಗಳಿಗೆ, ಕಾರ್ಯಭಾರ ಕಡಿಮೆ ಇರುವ ವಿವಿಧ ವಿಷಯಗಳ ಉಪನ್ಯಾಸಕರುಗಳನ್ನು ಸರಿದೂಗಿಸಿದ ನಂತರ ಲಭ್ಯವಾಗುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅನುಮತಿಸಿದೆ. ಸರ್ಕಾರಿ ಪದವಿ ಪೂರ್ವ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧೀನ ಸಂಸ್ಥೆಗಳ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರು / ಮನವಿಗಳನ್ನು ತ್ವರಿತ/ಗುಣಾತ್ಮಕ ವಿಲೇವಾರಿಗೆ ಕಾಲಮಿತಿಯನ್ನು ನಿಗಧಿಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮಾಂಕ (1)ರಲ್ಲಿನ ಸರ್ಕಾರದ ಆದೇಶದಲ್ಲಿ, ಸಾರ್ವಜನಿಕ ಕುಂದುಕೊರತೆಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ರಾಂಶ (Integrated Public Grievances Redressal System) ಅನುಷ್ಠಾನಗೊಳಿಸಲಾಗಿದ್ದು, ಸದರಿ ಆದೇಶದಲ್ಲಿ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದಂತ ಸ್ವೀಕೃತವಾಗುವ ಮನವಿಗಳನ್ನು ವಿಲೇವಾರಿಗೊಳಿಸಲು ಮೂರು ಹಂತದಲ್ಲಿ ಅನುಷ್ಠಾನಾಧಿಕಾರಿಗಳನ್ನು ಈ. ಕೆಳಕಂಡಂತೆ ನೇಮಿಸಲಾಗಿದೆ. ಸದರಿ ಅನುಷ್ಠಾನಾಧಿಕಾರಿಗಳು ಸರ್ಕಾರವು ನಿಗಧಿಪಡಿಸಿರುವ ಅವಧಿಯೊಳಗೆ ದೂರು/ಮನವಿಗಳನ್ನು ವಿಲೇವಾರಿಗೊಳಿಸಲು ಆದೇಶಿಸಲಾಗಿದೆ. 1. Last Mile Functionaries- LMF (Caseworker) 07 ದಿನಗಳು 2. Level-2 Officer – L2 (Gazetted Officer) 07 ದಿನಗಳು 3. Level-1 Officer- L3 (Group-A Officer) 07…

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವು ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು. ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ. ಪ್ರೀತಿ -…

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. https://twitter.com/ANI/status/1930265839942435175?ref_src=twsrc%5Egoogle%7Ctwcamp%5Eserp%7Ctwgr%5Etweet ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಅವರು, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. https://twitter.com/PTI_News/status/1930260527554670621?ref_src=twsrc%5Egoogle%7Ctwcamp%5Eserp%7Ctwgr%5Etweet ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

Read More

ನವದೆಹಲಿ  : ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಕಾಲ್ತುಳಿತ ಸಂಭವಿಸಿದ ಬಗ್ಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಪ್ರತಿಕ್ರಿಯೆ ನೀಡಿದ್ದು,”ಕಾಲ್ತುಳಿತ ಅಥವಾ ಅಂತಹ ಯಾವುದೇ ಪರಿಸ್ಥಿತಿಯನ್ನು ತಪ್ಪಿಸಲು ಸರ್ಕಾರ ರೋಡ್ ಶೋ ಅನ್ನು ನಿಲ್ಲಿಸಿತು. ಆದರೆ, ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಸಂಭವಿಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಹಾನಿ ನಿಯಂತ್ರಣದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು” ಎಂದು ಹೇಳಿದ್ದಾರೆ. https://twitter.com/ANI/status/1930258933563674803?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು :ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು. ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು. https://twitter.com/hd_kumaraswamy/status/1930247765902405876?ref_src=twsrc%5Etfw%7Ctwcamp%5Etweetembed%7Ctwterm%5E1930247765902405876%7Ctwgr%5Eb893564685e4bd90a9ee5b34ce2fea0244c8c3c6%7Ctwcon%5Es1_&ref_url=https%3A%2F%2Fkannadadunia.com%2Fbreaking-11-killed-in-stampede-during-rcb-victory-celebrations-hdk-shocked-urges-immediate-help%2F

Read More

ಬೆಂಗಳೂರು : ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಇದರಲ್ಲಿ 8 ವರ್ಷದ ಮಗು, 14 ವರ್ಷದ ಬಾಲಕಿಯೂ ಸೇರಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ 8 ವರ್ಷದ ಮಗು, 14 ವರ್ಷದ ಬಾಲಕಿ ದಿವ್ಯಾಂಶಿ ಮೃತಪಟ್ಟಿದ್ದಾರೆ. ಯಲಹಂಕ ಕಣ್ಣೂರಿನ ನಿವಾಸಿ ಶಿವಕುಮಾ‌ರ್, ಅಶ್ವಿನಿ ದಂಪತಿ ಮಗಳಾದ ದಿವ್ಯಾಂಶಿ ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದಳು. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು…

Read More