Author: kannadanewsnow57

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಪಂಚತಂತ್ರ 2.0 ತಂತ್ರಾಂಶದ ಮೂಲಕ ಅರ್ಜಿಗಳನ್ನು ಸ್ವೀಕಾರ ಮಾಡಲಾಗುತ್ತದೆ. ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯು ನಾಗರಿಕರಿಗೆ ವಿವಿಧ ಸೇವೆಗಳನ್ನು ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಮೂಲಕ ಸುಲಭವಾಗಿ ತಲುಪಿಸುವ ಗುರಿಯನ್ನು ಹೊಂದಿದೆ. ಆನ್ಲೈನ್ ​​ಪೋರ್ಟಲ್ ಮೂಲಕ ಕೆಲವು ಸೇವೆಗಳು ಸಹ ಲಭ್ಯವಿವೆ. ಇದು ಸೇವೆಗಳ ವಿತರಣೆಯನ್ನು ಸಕ್ರಿಯಗೊಳಿಸಲು ಬ್ಯಾಕೆಂಡ್ ಕಂಪ್ಯೂಟರೀಕರಣವನ್ನು ಬಳಸುತ್ತದೆ ಮತ್ತು ಪಾರದರ್ಶಕತೆ ಮತ್ತು ನಿಯಮಗಳ ಏಕರೂಪದ ಅನ್ವಯವನ್ನು ಖಾತ್ರಿಗೊಳಿಸುತ್ತದೆ. ಸೇವೆಗಳ ಎಲೆಕ್ಟ್ರಾನಿಕ್ ವಿತರಣೆಯು ನಾಗರಿಕರಿಗೆ ತಮ್ಮ ಅರ್ಜಿಯ ಸ್ಥಿತಿ ಪರಿಶೀಲಿಸಲು ಹಾಗೂ ಸರ್ಕಾರಕ್ಕೆ ಅರ್ಜಿಗಳ ವಿಲೆವಾರಿಯನ್ನು ಮಾನಿಟರ್ ಮಾಡಲು ಅನುವು ಮಾಡಿಕೊಡುತ್ತದೆ. ಇದರಿಂದಾಗಿ ಪ್ರಕ್ರಿಯೆಯ ಒಟ್ಟಾರೆ ದಕ್ಷತೆ ಸುಧಾರಣೆಯಾಗಿದೆ ಮತ್ತು ಸಾರ್ವಜನಿಕರಿಗೆ ಸಕಾಲದಲ್ಲಿ ಪರಿಣಾಮಕಾರಿ ಸೇವೆಗಳನ್ನು ಒದಗಿಸಲು ಇಲಾಖೆಯನ್ನು ಶಕ್ತಗೊಳಿಸುತ್ತದೆ. ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯು ಜಾತಿ ಮತ್ತು ಆದಾಯ, ಭೂಮಿ ಮತ್ತು ಕೃಷಿಕರಿಗೆ ಸಂಬಂಧಿಸಿದ…

Read More

ಬೆಂಗಳೂರು : ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ- ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖಿತ ಸರ್ಕಾರದ ಆದೇಶದಲ್ಲಿ, ಖಜಾನೆ-2ರ ತಂತ್ರಾಂಶದ ಮುಖಾಂತರ ಪ್ರಾಯೋಗಿಕವಾಗಿ, ಏಪ್ರಿಲ್ 2025 ರಿಂದ ಮೂರು ತಿಂಗಳ ಕಾಲ ರಾಜ್ಯದ ಎಲ್ಲಾ ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಗಳು (ಡಿಡಿಓ), ವಯೋನಿವೃತ್ತಿ /ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿಗೆ ಸಂಬಂಧಿಸಿದ ಅರ್ಜಿಗಳನ್ನು ಆನ್ಲೈನ್ ನಲ್ಲಿ ದಾಖಲಿಸಿ ಮಂಜೂರು ಮಾಡುವುದು ಮತ್ತು ಭೌತಿಕವಾಗಿ ಸಿದ್ಧಪಡಿಸಿರುವ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಮಹಾಲೇಖಪಾಲರಿಗೆ ನಿಯಮಾನುಸಾರ ಸಲ್ಲಿಸಲು ಆದೇಶಿಸಿದೆ. ಪ್ರಾಯೋಗಿಕ ಹಂತವು ಯಶಸ್ವಿಯಾದಲ್ಲಿ, ಖಜಾನೆ-2ರ ತಂತ್ರಾಂಶದ ಮುಖಾಂತರ ಪಿಂಚಣಿ ಅರ್ಜಿಗಳನ್ನು ಮಹಾಲೇಖಪಾಲರಿಗೆ ಸಲ್ಲಿಸಲು ಮುಂದುವರೆಸುವುದು ಎಂದು ಸಹ ಆದೇಶಿಸಿದೆ. 2. ಆದಾಗ್ಯೂ, ಸರ್ಕಾರ ನೀಡಿದ ಸ್ಪಷ್ಟ ಸೂಚನೆಗಳ ಹೊರತಾಗಿಯೂ, ಗಮನಾರ್ಹ ಸಂಖ್ಯೆಯ ಡಿಡಿಓಗಳು ಪಿಂಚಣಿ ದಾಖಲೆಗಳನ್ನು ಭೌತಿಕವಾಗಿ ಸಲ್ಲಿಸುವುದನ್ನು ಮುಂದುವರೆಸಿರುವುದನ್ನು ಗಮನಿಸಲಾಗಿದೆ. ಇದು…

Read More

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಹೊಸ ಸದಸ್ಯರ ಸೇರ್ಪಡೆ * ಪೋಟೋ ಬದಲಾವಣೆ * ಹೆಸರು ಡಿಲೆಟ್ * ಅಂಗಡಿ. ನಂ. ಬದಲಾವಣೆ * ಹೆಸರು ತಿದ್ದುಪಡಿ * ಮುಖ್ಯಸ್ಥರ ಬದಲಾವಣೆ ಅರ್ಜಿ ಸಲ್ಲಿಸಲು ದಾಖಲಾತಿಗಳು 1. ಸದಸ್ಯರ ಆಧಾರ ಕಾರ್ಡ್ ಕಡ್ಡಾಯ 2. ಸದಸ್ಯರ ಜಾತಿ ಮತ್ತು ಆದಾಯ…

Read More

ಬೆಂಗಳೂರು: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 4,500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ರೆನಾಲ್ಟ್ ನಿಸ್ಸಾನ್ ಟೆಕ್ನಾಲಜಿ ಮತ್ತು ಬಿಸಿನೆಸ್ ಸೆಂಟರ್ ಇಂಡಿಯಾ ಸಂಸ್ಥೆಯ ಸಹಯೋಗದಲ್ಲಿ ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ ‘ಹೈಜಿನ್ ಆನ್ ಗೋ’ ವಾಹನಗಳ ಹಸ್ತಾಂತರ ಹಾಗೂ ಪೊಲೀಸ್ ಇಲಾಖೆಯ ‘ಪ್ರಗತಿಯ ಸ್ತಂಭಗಳು’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಒಳ ಮೀಸಲಾತಿ ಪ್ರಕ್ರಿಯೆ ಕಾರಣ ಸುಮಾರು 75 ಸಾವಿರ ಹುದ್ದೆ ಭರ್ತಿ ಸಾಧ್ಯವಾಗಿರಲಿಲ್ಲ. ಇದೀಗ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ನಿರ್ಧಾರ ಅಂತಿಮವಾದಲ್ಲಿ ಎರಡನೇ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯದಲ್ಲಿ 4500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ನೇಮಕಾತಿ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಇನ್ನು ಬೆಂಗಳೂರು ನಗರದಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನ ಆಯವ್ಯಯ ಕಂಡಿಕ ಸಂಖ್ಯೆ 111(i) ರಂತೆ ರಾಜ್ಯದಲ್ಲಿ, ಪೂರ್ವ ಪ್ರಾಥಮಿಕ ತರಗತಿಗಳನ್ನು(LKG ಮತ್ತು UKG) ಪ್ರಾರಂಭಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಈ ಆಯವ್ಯಯ ಭಾಷಣದ ಘೋಷಣೆಯ ಅನ್ವಯ ಸರ್ಕಾರದ ಆದೇಶ ಸಂಖ್ಯೆ: ಇಪಿ176 ಪಿಬಿಎಸ್ 2025, ಬೆಂಗಳೂರು, ದಿನಾಂಕ:14.11.2025ರ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 111(1)ರಲ್ಲಿ ಘೋಷಿಸಿರುವಂತೆ ಅನುಬಂಧ- 1 ರಂತೆ ರಾಜ್ಯದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 1105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ ಯೋಜನೆಯಡಿ 1126 ಶಾಲೆಗಳು ಮತ್ತು 1699 ಮ್ಯಾಗ್ನೆಟ್ ಶಾಲೆಗಳು ಸೇರಿದಂತೆ ಒಟ್ಟಾರೆ 4056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ 2025-26ನೇ ಸಾಲಿಗೆ LKG ಹಾಗೂ 2026-27ನೇ ಸಾಲಿಗೆ UKG ಪ್ರತ್ಯೇಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಿದೆ. ಪೂರ್ವ ಪ್ರಾಥಮಿಕ ತರಗತಿಗಳನ್ನು ನಿರ್ವಹಿಸಲು ಸೂಚನೆಗಳು ಉಲ್ಲೇಖ(3)ರನ್ವಯ ಆಯ್ಕೆಯಾದ ಶಾಲೆಗಳಲ್ಲಿ, 2025-26ನೇ ಸಾಲಿಗೆ ಪೂರ್ವ ಪ್ರಾಥಮಿಕ…

Read More

ಕರ್ನಾಟಕ ಅರ್ಹತಾ ಪರೀಕ್ಷೆ 2025ರ ಅರ್ಹತಾ ಪರೀಕ್ಷೆಯು ಡಿಸೆಂಬರ್ 07, 2025 ರಂದು ನಡೆಯಲಿದ್ದು, ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯುತ್ತದೆ ಬೆಳಿಗ್ಗೆ 9. 30 ರಿಂದ 12 ಗಂಟೆವರೆಗೆ ಮತ್ತು ಮದ್ಯಾಹ್ನದ 2 ರಿಂದ 4.30 ರ ವರೆಗೆ ಪರೀಕ್ಷೆಯು ನಡೆಯುತ್ತದೆ. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಯು ಉದ್ಯೋಗ ಪಡೆಯುದಕ್ಕಾಗಿ ಅರ್ಹತಾ ಪರೀಕ್ಷೆಯಾಗಿದೆ. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ಹಾಗೂ ಮೊಬೈಲ್, ಬ್ಲೂಟೂತ್, ಸ್ಮಾರ್ಟ್ ವಾಚ್ ಸೇರಿದಂತೆ ಅತ್ಯಾಧುನಿಕ ತಾಂತ್ರಿಕ ಸಾಧನ ಸಲಕರಣೆಗಳನ್ನು ಪರೀಕ್ಷಾ ಕೊಠಡಿಗೆ ತರದಂತೆ ಮತ್ತು ಬಳಸದಂತೆ ಮುಂಜಾಗೃತೆ ವಹಿಸಬೇಕೆಂದು ತಿಳಿಸಲಾಗಿದೆ. ಪರೀಕ್ಷೆಗಾಗಿ ಸೂಕ್ತ ಭದ್ರಯೆ ಇರುವಂತೆ ಹಾಗೂ ನಿಗಧಿತ ಅವಧಿಗೆ ಪರೀಕ್ಷೆಗಳನ್ನು ಆರಂಭಿಸಿ, ನಿಗಧಿತ ಸಮಯಕ್ಕೆ ಮುಕ್ತಾಯಗೊಳಿಸಬೇಕು. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಗೊಂದಲ, ಒತ್ತಡಗಳಾಗದಂತೆ ಪರೀಕ್ಷಾ ಪೂರ್ವದಲ್ಲಿಯೆ ಪರೀಕ್ಷಾ ನಿಯಮಗಳನ್ನು ತಿಳಿಸಬೇಕು. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಶಾಂತಿಯುತವಾಗಿ ಜರುಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ಟಿಇಟಿ ಪರೀಕ್ಷೆಗೆ ಹಾಜರಾಗುವಂತ…

Read More

ಬೆಂಗಳೂರು : ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಹಿಳೆಯರು ಮತ್ತು ಮಕ್ಕಳಿಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದು, ಈ ಯೋಜನೆಗಳಡಿ ಮಹಿಳೆಯರು ಮತ್ತು ಮಕ್ಕಳಿಗೆ ಈ ಎಲ್ಲಾ ಸೌಲಭ್ಯಗಳು ಸಿಗಲಿವೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ 6 ತಿಂಗಳಿನಿಂದ 6 ವರ್ಷದವರೆಗಿನ ಮಕ್ಕಳಿಗೆ, ಬಾಣಂತಿಯರಿಗೆ, ಪ್ರಾಯ ಪೂರ್ವ ಬಾಲಕಿಯರಿಗೆ ಪೂರಕ ಪೌಷ್ಠಿಕ ಆಹಾರ, ಆರೋಗ್ಯ ಸೇವೆಗಳು. (ಹಾಲು, ಕಾಳು, ಧಾನ್ಯಗಳು) ಭಾಗ್ಯಲಕ್ಷ್ಮೀ ಯೋಜನೆ ಬಿಪಿಎಲ್ ಕುಟುಂಬದಲ್ಲಿ ಜನಿಸುವ ಮೊದಲ ಇಬ್ಬರು ಹೆಣ್ಣು ಮಕ್ಕಳಿಗೆ ಆರೋಗ್ಯ ವಿಮೆ ಮತ್ತು 18 ವರ್ಷ ತುಂಬಿದ ನಂತರ ರೂ. 1 ಲಕ್ಷ ಮೊತ್ತ ಪಾವತಿ ಸೌಲಭ್ಯ. ಸ್ತ್ರೀ ಶಕ್ತಿ ಯೋಜನೆ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸರಕಾರದಿಂದ ಸುತ್ತು ನಿಧಿ, ತರಬೇತಿ, ಬಡ್ಡಿ ಸಹಾಯ ಧನ ಮತ್ತು ಪ್ರೋತ್ಸಾಹ ಧನ ವಿತರಣೆ. ಉದ್ಯೋಗಿನಿ ಯೋಜನೆ ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ 3 ಲಕ್ಷದವರೆಗೆ ಬ್ಯಾಂಕಿನಿಂದ ಸಾಲವನ್ನು ಪಡೆಯಬಹುದಾಗಿದೆ. ಪಡೆಯುವ ಸಾಲಕ್ಕೆ ಸಾಮಾನ್ಯ ವರ್ಗಕ್ಕೆ 30%…

Read More

ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗಣೇಶ್ ಗೌಡ ಅವರ ಸಾವಿನಿಂದ ಅವರ ಕುಟುಂಬ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕೊಲೆಗೈದ ಪಾತಕಿಗಳು ಮತ್ತು ಅವರ ಹಿಂದಿರುವ ದುಷ್ಟಶಕ್ತಿಗಳನ್ನು ಪತ್ತೆಮಾಡಿ, ಕಾನೂನಿನ ಪ್ರಕಾರ ಗರಿಷ್ಠ ಶಿಕ್ಷೆಗೆ ಒಳಪಡಿಸುವಂತೆ ನೋಡಿಕೊಳ್ಳುವ ಮೂಲಕ‌ ಅವರ ಸಾವಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ಶಾಂತಿ, ಸಾಮರಸ್ಯ ಬಯಸುವ ಜನರ ವಿರುದ್ಧ ಶಸ್ತ್ರ ಹಿಡಿದು ಬರುವ ಪ್ರತಿ ಭಯೋತ್ಪಾದಕನನ್ನು ಕಾನೂನಿನ ಮೂಲಕವೇ ಹೆಡೆಮುರಿ ಕಟ್ಟುತ್ತೇವೆ. ಮೃತ ಗಣೇಶ್ ಕುಟುಂಬದ ಜೊತೆ ನಮ್ಮ ಪಕ್ಷ ಮತ್ತು ಸರ್ಕಾರ ದೃಢವಾಗಿ ನಿಲ್ಲಲಿದೆ. https://twitter.com/siddaramaiah/status/1997333996662120766?s=20

Read More

ಬೆಂಗಳೂರು: ಹಾವು ಕಡಿದಿದೆ ಅಂದ್ರೆ ಸಾವೇ ಗ್ಯಾರಂಟಿ ಎನ್ನುವು ಒಂದು ಕಾಲದ ಮಾತಾಗಿತ್ತು. ಈಗ ಅದು ಬದಲಾಗಿದೆ. ಹಾವು ಕಡಿತಕ್ಕು ಔಷಧಿ ಬಂದಿದೆ. ಹೀಗಾಗಿ ಹಾವು ಕಡಿದಿದೆ ಎಂದ ಮಾತ್ರಕ್ಕೆ ಆತಂಕ ಬೇಡ. ಅದರ ಬದಲಾಗಿ ಕೆಲ ಮುನ್ನೆಚ್ಚರಿಕೆ ವಹಿಸಿದ್ರೇ ಖಂಡಿತವಾಗಿ ಜೀವ ಉಳಿಸಬಹುದು. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಹಾವು ಕಡಿತವು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ, ಸೆಕ್ಷನ್ 3ರ ಅಡಿಯಲ್ಲಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಿರುವುದಾಗಿ ತಿಳಿಸಿದೆ. ಹಾವು ಕಟ್ಟಿದ ಸಂದರ್ಭದಲ್ಲಿ ಏನು ಮಾಡಬೇಕು? ಹೆದರದಿರಿ ಹಾವು ಕಚ್ಚಿದ ವ್ಯಕ್ತಿಯನ್ನು ಸಮಾಧಾನವಾಗಿರಿಸಿ ಹಾವಿನಿಂದ ನಿಧಾನವಾಗಿ ದೂರ ಸರಿಯಿರಿ ಹಾವು ಕಚ್ಚಿದ ದೇಹದ ಭಾಗವನ್ನು ಏನೂ ಮಾಡದಿರಿ ಹಾವು ಕಚ್ಚಿದ ದೇಹದ ಭಾಗದಲ್ಲಿರುವ ಪಾದರಕ್ಷೆ, ಕಾಲುಂಗುರ, ಬೆಲ್ಟ್ ಆಭರಣಗಳು, ವಾಚ್, ಬಿಗಿಯಾದ ಬಟ್ಟೆಯನ್ನು ಕಳಚಿರಿ. ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ ಹಾವು ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಿ.…

Read More

ನವದೆಹಲಿ : ಕಚೇರಿ ಸಮಯದ ಹೊರಗೆ ಕೆಲಸಕ್ಕೆ ಸಂಬಂಧಿಸಿದ ಕರೆಗಳು ಮತ್ತು ಇಮೇಲ್ಗಳಿಗೆ ಹಾಜರಾಗುವುದನ್ನು ತಡೆಯಲು ನೌಕರರಿಗೆ ಅವಕಾಶ ನೀಡುವ ಗುರಿಯನ್ನು ಹೊಂದಿರುವ ಖಾಸಗಿ ಸದಸ್ಯರ ಮಸೂದೆಯನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಲೋಕಸಭೆ ಮತ್ತು ರಾಜ್ಯಸಭೆಯ ಎರಡೂ ಸದಸ್ಯರು ಸರ್ಕಾರಿ ಶಾಸನದ ಅಗತ್ಯವಿದೆ ಎಂದು ಅವರು ನಂಬುವ ವಿಷಯಗಳ ಕುರಿತು ಮಸೂದೆಗಳನ್ನು ಮಂಡಿಸಬಹುದು. ಆದಾಗ್ಯೂ, ಹೆಚ್ಚಿನ ಸಂದರ್ಭಗಳಲ್ಲಿ, ಸರ್ಕಾರವು ಪ್ರಸ್ತಾವಿತ ಕಾನೂನಿಗೆ ಪ್ರತಿಕ್ರಿಯಿಸಿದ ನಂತರ ಖಾಸಗಿ ಸದಸ್ಯರ ಮಸೂದೆಗಳನ್ನು ಹಿಂಪಡೆಯಲಾಗುತ್ತದೆ. ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ “ಸಂಪರ್ಕ ಕಡಿತಗೊಳಿಸುವ ಹಕ್ಕು ಮಸೂದೆ, 2025” ಅನ್ನು ಮಂಡಿಸಿದರು, ಇದು ನೌಕರರ ಕಲ್ಯಾಣ ಪ್ರಾಧಿಕಾರವನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ. ಅಧಿಕೃತ ಕೆಲಸದ ಸಮಯವನ್ನು ಮೀರಿ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು ಮತ್ತು ಇಮೇಲ್ಗಳಿಂದ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಪ್ರತಿ ಉದ್ಯೋಗಿಗೆ ನೀಡಲು ಮಸೂದೆ ಪ್ರಸ್ತಾಪಿಸುತ್ತದೆ. ಖಾಸಗಿ ಸದಸ್ಯರ ಮಸೂದೆಯಡಿ ಈ ಮಸೂದೆಯನ್ನು ಮಂಡಿಸಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಸರ್ಕಾರವು ಕಾನೂನುಗಳನ್ನು ತರಬೇಕು ಎಂದು…

Read More