Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ತನ್ನ ಸದಸ್ಯರಿಗೆ ಹೊಸ ಮತ್ತು ಅತ್ಯಂತ ಉಪಯುಕ್ತ ಸೌಲಭ್ಯವನ್ನು ಪ್ರಾರಂಭಿಸಿದೆ. ಈಗ ಇಪಿಎಫ್ಒ ಸದಸ್ಯರು ಉಮಂಗ್ ಮೊಬೈಲ್ ಅಪ್ಲಿಕೇಶನ್ ಬಳಸಿ ತಮ್ಮ ಮನೆಯಿಂದಲೇ ಆಧಾರ್ ಫೇಸ್ ಅಥೆಂಟಿಕೇಶನ್ ಟೆಕ್ನಾಲಜಿ (ಎಫ್ಎಟಿ) ಮೂಲಕ ಸಾರ್ವತ್ರಿಕ ಖಾತೆ ಸಂಖ್ಯೆ (ಯುಎಎನ್) ಅನ್ನು ರಚಿಸಬಹುದು ಮತ್ತು ಸಕ್ರಿಯಗೊಳಿಸಬಹುದು. ಈ ಹೊಸ ಸೌಲಭ್ಯವು ಉದ್ಯೋಗಿಗಳಿಗೆ ಒದಗಿಸುವ ಪರಿಹಾರವು ಅವರ ಪ್ರಕ್ರಿಯೆಗಳನ್ನು ಸರಳಗೊಳಿಸುವುದಲ್ಲದೆ, ಸಂಪೂರ್ಣವಾಗಿ ಸಂಪರ್ಕರಹಿತ ಮತ್ತು ಸುರಕ್ಷಿತ ವಿಧಾನವಾಗಿರುತ್ತದೆ. ಈಗ UAN ಸಕ್ರಿಯಗೊಳಿಸುವಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ. ಇಲ್ಲಿಯವರೆಗೆ, ಇಪಿಎಫ್ಒದ ಯುಎಎನ್ ಸಂಖ್ಯೆಯನ್ನು ಉದ್ಯೋಗದಾತರೇ ಒದಗಿಸುತ್ತಿದ್ದರು, ಆದರೆ ಹಲವು ಬಾರಿ, ಉದ್ಯೋಗಿ ವಿವರಗಳಲ್ಲಿ ತಪ್ಪು ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ ಅಥವಾ ತಂದೆಯ ಹೆಸರಿನಂತಹ ದೋಷಗಳಿದ್ದವು. ಇದು UAN ಸಕ್ರಿಯಗೊಳಿಸುವಿಕೆಯ ಮೇಲೆ ಪರಿಣಾಮ ಬೀರಿತು ಮತ್ತು ನೌಕರರು ಈ ಸೇವೆಗಳನ್ನು ಪಡೆಯುವಲ್ಲಿ ಸಮಸ್ಯೆಗಳನ್ನು ಎದುರಿಸಿದರು. ಆದಾಗ್ಯೂ ಈಗ ಈ ಪ್ರಕ್ರಿಯೆಯು ಎಂದಿಗಿಂತಲೂ ಸುಲಭ ಮತ್ತು ವೇಗವಾಗಿದೆ. EPFO…
ಬೆಂಗಳೂರು : ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ಸೂಕ್ಷ್ಮವಾಗಿ, ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಏಪ್ರಿಲ್ 16ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮೊದಲು ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇರುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯುವ ಮತ್ತು…
ನವದೆಹಲಿ : ಭಾರತೀಯ ವಿದೇಶಾಂಗ ಸಚಿವಾಲಯವು ಪಾಸ್ಪೋರ್ಟ್ಗೆ ಸಂಬಂಧಿಸಿದ ಪ್ರಮುಖ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಈಗ ಪಾಸ್ಪೋರ್ಟ್ನಲ್ಲಿ ಗಂಡ ಅಥವಾ ಹೆಂಡತಿಯ ಹೆಸರನ್ನು ಸೇರಿಸಲು ಮದುವೆ ಪ್ರಮಾಣಪತ್ರವನ್ನು ನೀಡುವುದು ಕಡ್ಡಾಯವಲ್ಲ. ಅದರ ಸ್ಥಾನದಲ್ಲಿ, ಈಗ ಅನೆಕ್ಸರ್-ಜೆ ಎಂಬ ಹೊಸ ನಿಯಮವನ್ನು ಜಾರಿಗೆ ತರಲಾಗಿದ್ದು, ಇದರ ಮೂಲಕ ದಂಪತಿಗಳು ಕೇವಲ ಅಫಿಡವಿಟ್ ಮತ್ತು ಜಂಟಿ ಫೋಟೋ ಮೂಲಕ ಪಾಸ್ಪೋರ್ಟ್ಗೆ ತಮ್ಮ ಹೆಸರುಗಳನ್ನು ಸೇರಿಸಿಕೊಳ್ಳಬಹುದು. ಈ ಹೊಸ ನಿಯಮದ ಪ್ರಕಾರ, ಗಂಡ ಮತ್ತು ಹೆಂಡತಿ ಒಟ್ಟಿಗೆ ಅಫಿಡವಿಟ್ ಮಾಡಬೇಕು, ಅದಕ್ಕೆ ಇಬ್ಬರೂ ಸಹಿ ಹಾಕುತ್ತಾರೆ. ಜೊತೆಗೆ ಒಟ್ಟಿಗೆ ತೆಗೆದ ಫೋಟೋವನ್ನು ಲಗತ್ತಿಸಬೇಕು. ಈ ಅಫಿಡವಿಟ್ ಅನ್ನು ಮದುವೆಯ ಪುರಾವೆಯಾಗಿ ಪರಿಗಣಿಸಲಾಗುತ್ತದೆ ಮತ್ತು ಈ ಆಧಾರದ ಮೇಲೆ ಸಂಗಾತಿಯ ಹೆಸರನ್ನು ಪಾಸ್ಪೋರ್ಟ್ನಲ್ಲಿ ನವೀಕರಿಸಲಾಗುತ್ತದೆ. ಹಿಂದಿನ ನಿಯಮ ಏನಾಗಿತ್ತು? ಈ ಹಿಂದೆ ಪಾಸ್ಪೋರ್ಟ್ನಲ್ಲಿ ಸಂಗಾತಿಯ ಹೆಸರನ್ನು ಸೇರಿಸಲು ವಿವಾಹ ಪ್ರಮಾಣಪತ್ರ ಕಡ್ಡಾಯವಾಗಿತ್ತು. ಇದು ಹೆಚ್ಚಾಗಿ ದಂಪತಿಗಳು ಉದ್ಯೋಗ, ವೀಸಾ ಅಥವಾ ವಿದೇಶ ಪ್ರಯಾಣಕ್ಕೆ ಸಿದ್ಧತೆಗೆ ಅಡ್ಡಿಯಾಗಬಹುದಾದ ದೀರ್ಘ ಪ್ರಕ್ರಿಯೆಯ…
ಬೆಂಗಳೂರು : ರಾಜ್ಯಾದ್ಯಂತ ಈಗಷ್ಟೇ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಗಿದಿದ್ದು, ಇನ್ನೇನು ಕೆಲವು ದಿನಗಳಲ್ಲಿ ಪರೀಕ್ಷೆಯ ಫಲಿತಾಂಶ ಬರುತ್ತದೆ. ಹೀಗಾಗಿ SSLC ಪಾಸಾದ ವಿದ್ಯಾರ್ಥಿಗಳು ಯಾವ ಕೋರ್ಸ್ ಆಯ್ಕೆ ಮಾಡಬಹುದು, ಯಾವ ಕೋರ್ಸ್ ಆಯ್ಕೆ ಮಾಡಿದರೆ ಉತ್ತಮ. SSLC ನಂತರ ಯಾವೆಲ್ಲಾ ಕೋರ್ಸ್ ಗಳು ಲಭ್ಯವಿದೆ ಎಂಬುದರ ಕುರಿತು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಬೆಂಗಳೂರು : ರಾಜ್ಯದಲ್ಲಿ ‘ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ’ ಆಯೋಜಿಸಲು ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ. ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳಿಗೆ ಬೇಸಿಗೆ ರಜೆ ಸಮಯವನ್ನು ಪರಿಣಾಮಕಾರಿಯಾಗಿ ಉಪಯೋಗಿಸಿ ಮಕ್ಕಳ ಬೌದ್ಧಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮೂಲಕ 9 ದಿನಗಳ ಮಕ್ಕಳ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಮಕ್ಕಳ ಬೇಸಿಗೆ ಶಿಬಿರವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯದ ಗ್ರಂಥಾಲಯ ಮೇಲ್ವಿಚಾರಕರ ಸುಗಮಗಾರಿಕೆಯಲ್ಲಿ ಆಯಾ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದ ಶಾಲೆ ಅಥವಾ ಗ್ರಂಥಾಲಯದಲ್ಲಿ ಹಮ್ಮಿಕೊಳ್ಳುವುದು. ಏನಿದೆ ಮಾರ್ಗಸೂಚಿಯಲ್ಲಿ.? ಎರಡು ವಾರದ ಬೇಸಿಗೆ ಶಿಬಿರದ ಮೂಲಕ ಮಕ್ಕಳಲ್ಲಿ ಓದುವ ಹವ್ಯಾಸ, ಅಂಕಿಸಂಖ್ಯೆ ಮತ್ತು ವಿಜ್ಞಾನ ವಿಷಯಗಳು, ನೈತಿಕತೆ ಮತ್ತು ನಾಯಕತ್ವ ವಿಷಯಗಳು ಮತ್ತು ಕಾರ್ಯಯೋಜನೆಗಳನ್ನು ರೂಪಿಸುವ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಚಟುವಟಿಕೆಗಳನ್ನು ಕೈಗೊಳ್ಳುವುದು. ಹೀಗೆ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವುದು, ಗ್ರಾಮೀಣ ಬದುಕಿನ ದೈನಂದಿನ ಆರ್ಥಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಅರ್ಥಮಾಡಿಸುವುದು ಇತ್ಯಾದಿಗಳ ಜೊತೆಗೆ…
ಗುರುಪುರ : ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದ್ವಿತೀಯ ವರ್ಷದ ಹೊನಲು ಬೆಳಕಿನ ಮೂಳೂರು- ಅಡ್ಡೂರು ಜೋಡುಕೆರೆ ಕಂಬಳ ಸಮಾರಂಭದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು. “ಈ ಬಾರಿಯ ದಸರಾ ಸಮಿತಿಯ ಉಪಾಧ್ಯಕ್ಷನಾಗಿದ್ದೇನೆ. ದಸರಾ ಹಬ್ಬದಲ್ಲಿ ಇನ್ನು ಮುಂದೆ ಕಂಬಳ ದಕ್ಷಿಣ ಕನ್ನಡದ ಪರಂಪರೆಯಗಿ ಮುಂದುವರೆಯಲಿದೆ. ಮೂರು ಎಕರೆ ಪ್ರದೇಶದಲ್ಲಿ ಕಂಬಳ ಕೆರೆ ನಿರ್ಮಾಣ ಮಾಡುವ ಆಲೋಚನೆಯಿದೆ. ಇದರಿಂದ 25 ಸಾವಿರಕ್ಕೂ ಹೆಚ್ಚು ಜನ ಕಂಬಳ ವೀಕ್ಷಣೆ ಮಾಡಬಹುದು. ನೀವೆಲ್ಲರು ಸೇರಿದರೆ ಸರ್ಕಾರದಿಂದ ಸಹಕಾರ ನೀಡಲಾಗುವುದು. ಕಂಬಳವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಎಲ್ಲರು ಬೆಳೆಸೋಣ” ಎಂದು ಹೇಳಿದರು. “ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಾಪನೆಯಾದ ಬ್ಯಾಂಕ್ ಗಳಿಂದ ಇಡೀ ದೇಶಕ್ಕೆ ಆರ್ಥಿಕ ಅಡಿಪಾಯ ಸೃಷ್ಟಿಯಾಯಿತು. ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕವಾದ ಶ್ರೀಮಂತಿಕೆ ಯಾವ…
ಹಾವೇರಿ : ಹಾಲು ಉತ್ಪಾದಕರಿಗೆ ಸಿಹಿಸುದ್ದಿ, ಹಾಲು ಉತ್ಪಾದಕರಿಗೆ ದರ ಕಡಿತ ಮಾಡಿದ್ದ ಹಾವೇರಿ ಹಾಲು ಒಕ್ಕೂಟ (ಹಾವೆಮುಲ್) ಕೊನೆಗೂ ಲೀಟರ್ಗೆ 4 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ 4 ರೂ. ಹೆಚ್ಚಳ ಮಾಡಿದ್ದರೂ ಒಕ್ಕೂಟ, ಹಾಲು ಉತ್ಪಾದಕರಿಗೆ ಕೊಡುವ ದರದಲ್ಲಿ 3.50 ಕಡಿತಗೊಳಿಸಿ, ನಂತರ ಕೇವಲ 50 ಪೈಸೆ ಹೆಚ್ಚಿಸುವ ಮೂಲಕ ರೈತರ ಕೆಂಗಣ್ಣಿಗೆ ಗುರಿಯಾಗಿತ್ತು. ಬಳಿಕ ಎಚ್ಚೆತ್ತ ಒಕ್ಕೂಟ 2.50 ರೂ. ಹೆಚ್ಚಿಸಿತ್ತು. ಆದರೆ, ಸಂಪೂರ್ಣವಾಗಿ 4 ರೂ. ಹೆಚ್ಚಿಸುವಂತೆ ರೈತ ಸಂಘ ಪ್ರತಿಭಟನೆ ನಡೆಸಿತ್ತು. ಹೀಗಾಗಿ 4 ರೂ. ಸಂಪೂರ್ಣವಾಗಿ ರೈತರಿಗೆ ಕೊಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದು ವರೆದಿದ್ದು, ಇನ್ನೂ ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಉತ್ತರ ಒಳನಾಡಿ ನಲ್ಲಿ ಸಾಧಾರಣ ಮಳೆಯಾಗಲಿದೆ. ಸೋಮವಾರದಿಂದ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಲಿದೆ. ಗುರುವಾರದಿಂದ ಶನಿವಾರವರೆಗೆ ಹೆಚ್ಚಿನ ಮಳೆ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಏ.17 ರವರೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ , ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸೂಚನೆ ನೀಡಿದೆ. ಲೋಕಾಯುಕ್ತ ಕಾಯ್ದೆ 1984 ಹಾಗೂ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 ರಡಿ ಪ್ರಾಧಿಕರಿಸಲ್ಪಟ್ಟ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರ ಚರಾಸ್ತಿ/ಸ್ಮಿರಾಸ್ತಿಗಳ ಮಾಹಿತಿ ಹಾಗೂ ವಿವರಗಳನ್ನು ಕೋರಿದ ಸಂದರ್ಭದಲ್ಲಿ ಅವುಗಳನ್ನು ಕೆಲವು ಇಲಾಖಾ ಅಧಿಕಾರಿಗಳು ಮತ್ತು ಸಕ್ಷಮ ಪ್ರಾಧಿಕಾರಿಗಳು ಒದಗಿಸದಿರುವ ಬಗ್ಗೆ ಉಲ್ಲೇಖ (1) ರ ಅರ ಸರ್ಕಾರದ ಪತ್ರದಲ್ಲಿ ನಿಬಂಧಕರು ಕರ್ನಾಟಕ ಲೋಕಾಯುಕ್ತ ಇವರು ಸರ್ಕಾರದ ಗಮನ ಸೆಳೆದಿದ್ದು, ಇಂತಹ ಮಾಹಿತಿಯನ್ನು (ಅವುಗಳ ಅರಸಿಕೆಗೆ (access) ಕೆಲವು ಸುರಕ್ಷತೆ ಮತ್ತು ಇತಿಮಿತಿಗಳನ್ನು ನಿಗದಿಪಡಿಸುವುದಕ್ಕೆ ಒಳಪಟ್ಟು) ಜಾಲತಾಣದಲ್ಲಿ ಪ್ರಕಟಿಸಿದಲ್ಲಿ (web host) ಅದು ಲೋಕಾಯುಕ್ತ ಸಂಸ್ಥೆಗೂ ಲಭ್ಯವಾಗುತ್ತದೆಯೆಂದು ಅಭಿಪ್ರಾಯ ಪಡುತ್ತಾ, ಇಂತಹ ಮಾಹಿತಿಯನ್ನು ಜಾಲತಾಣದಲ್ಲಿ ಪ್ರಕಟಪಡಿಸುವ ಸಂಬಂಧ ಎಲ್ಲಾ ಇಲಾಖಾ ಮುಖ್ಯಸ್ಮರಿಗೆ ಸೂಕ್ತ ನಿರ್ದೇಶನಗಳನ್ನು…
ನವದೆಹಲಿ : ರಾಜ್ಯಪಾಲ ರವಿ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿತು. ತಮಿಳುನಾಡು ಸರ್ಕಾರವು ವಿಧಾನಸಭೆಯಲ್ಲಿ ಅಂಗೀಕಾರವಾದ ಮಸೂದೆಗಳನ್ನು ಅಂಗೀಕರಿಸದೆ ತಡೆದಿದೆ ಎಂದು ಆರೋಪಿಸಿದ ನಂತರ ಈ ಪ್ರಕರಣವು ಇತ್ತೀಚೆಗೆ ವಿಚಾರಣೆಗೆ ಬಂದಿತು. ಆ ಸಂದರ್ಭದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯಪಾಲರ ಕ್ರಮಗಳು ಕಾನೂನುಬಾಹಿರ ಮತ್ತು ಅವರಿಗೆ ಪ್ರತ್ಯೇಕ ಅಧಿಕಾರವಿಲ್ಲ ಎಂದು ತೀರ್ಪು ನೀಡಿತು ಮತ್ತು ರಾಷ್ಟ್ರಪತಿಗಳಿಗೆ ಕಳುಹಿಸಲಾದ ಮಸೂದೆಗಳು ಅಸಿಂಧು ಎಂದು ತೀರ್ಪು ನೀಡಿತು. ಇದರ ಜೊತೆಗೆ, ತಮಿಳುನಾಡು ಸರ್ಕಾರವು ಆ ಮಸೂದೆಗಳನ್ನು ಅನುಮೋದಿಸಲು ತಮ್ಮ ವಿಶೇಷ ಅಧಿಕಾರವನ್ನು ಬಳಸುವುದಾಗಿ ಘೋಷಿಸಿದ ನಂತರ, ಎಲ್ಲಾ 10 ಮಸೂದೆಗಳು ಇಂದು ಕಾನೂನುಗಳಾಗಿ ಜಾರಿಗೆ ಬಂದಿವೆ ಎಂದು ಘೋಷಿಸಿತು. ಈ ಪರಿಸ್ಥಿತಿಯಲ್ಲಿ, ತಮಿಳುನಾಡು ಸರ್ಕಾರ ಸಲ್ಲಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಸಂಪೂರ್ಣ ವಿವರಗಳನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ಒಂದು ತೀರ್ಪಿನಲ್ಲಿ ರಾಜ್ಯಪಾಲರು ಅಪ್ರಾಮಾಣಿಕವಾಗಿ ವರ್ತಿಸಿದ್ದಾರೆ ಮತ್ತು ಸುಪ್ರೀಂ ಕೋರ್ಟ್ನ ತೀರ್ಪನ್ನು ಗೌರವಿಸದೆ ಅಗೌರವ ತೋರಿಸಿದ್ದಾರೆ…










