Author: kannadanewsnow57

ಬೆಂಗಳೂರು ಅರಣ್ಯ ಒತ್ತುವರಿ ತೆರವು ಕಾನೂನು ಪ್ರಕ್ರಿಯೆಯಾಗಿದ್ದು, ದೊಡ್ಡ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮಲೆನಾಡು ಮತ್ತು ಕರಾವಳಿಯಲ್ಲಿ ಕೆಲವರು ಅರಣ್ಯ ಒತ್ತುವರಿ ತೆರವಿಗೆ ವಿರೋಧಿಸುತ್ತಿದ್ದು, ಈ ವಿಚಾರದಲ್ಲಿ ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ಬಡವರ ಭೂಮಿ ಒತ್ತುವರಿ ತೆರವು ಮಾಡಿಸುತ್ತಿಲ್ಲ ಬದಲಾಗಿ ದೊಡ್ಡ ಒತ್ತುವರಿ ಮತ್ತು 2015ರ ನಂತರದ ಒತ್ತುವರಿಯನ್ನು ಮಾತ್ರ ತೆರವು ಮಾಡಲು ಸೂಚಿಸಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಶಿರೂರಿನಲ್ಲಿ ಗುಡ್ಡ ಕುಸಿದು 11 ಜನರು ಸಾವಿಗೀಡಾಗಿದ್ದರೆ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 316ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಎರಡು ಘಟನೆಗಳು ಎಚ್ಚರಿಕೆಯ ಗಂಟೆಯಾಗಿದ್ದು, ನದಿಗಳ ಮೂಲ ಮತ್ತು ಜೀವವೈವಿಧ್ಯದ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಅವರು…

Read More

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಲಾಗಿದೆ. ಈ ಜಿಲ್ಲೆಗಳಲ್ಲಿ 12 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಳಗಾವಿ, ವಿಜಯಪುರ, ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Read More

ಮೂಗು ಕಶೇರುಕಗಳಲ್ಲಿ ಕಂಡುಬರುವ ರಂಧ್ರವಾಗಿದೆ. ಇದರ ಮೂಲಕ, ಉಸಿರಾಟದಲ್ಲಿ ಬಳಸುವ ಗಾಳಿಯು ದೇಹವನ್ನು ಪ್ರವೇಶಿಸುತ್ತದೆ. ನಮ್ಮ ದೇಹದ ವಿವಿಧ ಭಾಗಗಳಲ್ಲಿ ಬೆಳೆಯುವ ಕೂದಲು ವಿಭಿನ್ನ ಕಾರ್ಯಗಳನ್ನು ನಿರ್ವಹಿಸುತ್ತದೆ. ಹಾಗೆಯೇ ನಮ್ಮ ಮೂಗಿನಲ್ಲಿಯೂ ಕೂದಲು ಇರುತ್ತದೆ. ಇಂದಿನ ಕಾಲದಲ್ಲಿ ತಲೆ, ಗಡ್ಡ, ಕಣ್ಣು, ಹುಬ್ಬು, ಮೀಸೆ ಬಿಟ್ಟರೆ ದೇಹದ ಎಲ್ಲೆಲ್ಲೂ ಕೂದಲು ಇಷ್ಟವಾಗುವುದಿಲ್ಲ. ಆದರೆ ಈ ಕೂದಲುಗಳು ನಮ್ಮ ರಕ್ಷಣೆಗೆ ಮಾತ್ರ ಎಂದು ಅವರಿಗೆ ತಿಳಿದಿಲ್ಲ. ಸಾಮಾನ್ಯವಾಗಿ, ಸುಂದರವಾಗಿ ಕಾಣಲು, ಮಹಿಳೆಯರು ವ್ಯಾಕ್ಸಿಂಗ್ ಮೂಲಕ ತಮ್ಮ ದೇಹದ ಎಲ್ಲಾ ಕೂದಲನ್ನು ತೆಗೆದುಹಾಕುತ್ತಾರೆ. ಆದರೆ ಪುರುಷರು ಇದನ್ನು ಮಾಡಬಾರದು. ಏಕೆಂದರೆ ಕೂದಲು ಪುರುಷರ ಹೆಮ್ಮೆ. ಇಂದು ನಾವು ಮೂಗಿನ ಕೂದಲಿನ ಬಗ್ಗೆ ಕಲಿಯುತ್ತೇವೆ. ಮೂಗಿನ ಕೂದಲನ್ನು ಕತ್ತರಿಸಬೇಕೆ ಅಥವಾ ಬೇಡವೇ. ಇದರ ಪ್ರಯೋಜನಗಳು ಮತ್ತು ಅನಾನುಕೂಲಗಳು ಯಾವುವು? ಮತ್ತು ನೀವು ಮೂಗಿನ ಕೂದಲನ್ನು ಕತ್ತರಿಸಲು ಬಯಸಿದರೆ, ಉತ್ತಮ ಮತ್ತು ಸುಲಭವಾದ ಮಾರ್ಗ ಯಾವುದು? ಇಂದು ನಾವು ಈ ಎಲ್ಲಾ ವಿಷಯಗಳ ಬಗ್ಗೆ ತಿಳಿಯಲಿದ್ದೇವೆ. ಮತ್ತು…

Read More

ಬೆಂಗಳೂರು; ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ 7ನೇ ವೇತನ ಆಯೋಗದ ವೇತನ ಶ್ರೇಣಿಯಂತೆ ವೇತನ ಜಾರಿಗೊಳಿಸಲಾಗಿತ್ತು. ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವ ಬಗ್ಗೆಯೂ ಸಮಿತಿಯನ್ನು ರಚಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಎನ್ನುವಂತೆ ವೈದ್ಯಕೀಯ ಭತ್ಯೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ.  ಅದರಂತೆ, ಸರ್ಕಾರದ ನೀತಿಯಲ್ಲಿ ವಿವರಿಸಿರುವಂತೆ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಸ್ತೃತವಾದ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ದಿನಾಂಕ 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ ದಿನಾಂಕ 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ…

Read More

ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಶಾಲೆಗಳ ಮೊದಲ ಮಾನ್ಯತೆಯನ್ನು 10 ವರ್ಷಗಳ ಅವಧಿಗೆ ಅನ್ವಯಿಸಿ ನವೀಕರಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರವು ಖಾಸಗಿ ಶಾಲೆಯ ಮಾನ್ಯತೆ ಅವಧಿಯನ್ನು 10 ವರ್ಷಗಳ ಅವಧಿಗೆ ಅನ್ವಯಿಸಿ ನವೀಕರಿಸಲು ನಿರ್ಧರಿಸಿದೆ. ನಿಬಂಧನೆಗಳನ್ನು ಅನುಸರಿಸಿ ಶಾಶ್ವತ ಮಾನ್ಯತೆ ನೀಡಲು ಸರ್ಕಾರದಿಂದ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಆರ್‌ಟಿಇ ಕಾಯ್ದೆ ಜಾರಿಗೆ ಮೊದಲು ಇದ್ದಂತೆ ಮಾನ್ಯತೆ ನವೀಕರಣ, ಶಾಶ್ವತ ನವೀಕರಣಕ್ಕೆ ಅವಕಾಶ ಕಲ್ಪಿಸಲಿದೆ. ಕರ್ನಾಟಕ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಾವಳಿಗಳಿಗೆ ಸರ್ಕಾರ ತಿದ್ದುಪಡಿ ಮಾಡಿದ್ದು, ರಾಜ್ಯದಲ್ಲಿ ಆರಂಭಿಸಲು ನಿಯಮಾನಸಾರ ಮೊದಲ ವರ್ಷ ಅನುಮತಿ ನೀಡಲಾಗುವುದು. ನಂತರ ನಿಬಂಧನೆ ಅನುಸರಿಸಿ 10 ವರ್ಷ ಅವಧಿಗೆ ಮಾನ್ಯತೆ ನವೀಕರಿಸುವುದು, ಬಳಿಕ ಶಾಶ್ವತ ಮಾನ್ಯತೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಖಾಸಗಿ ಶಾಲೆ ಆರಂಭವಾದ ಒಂದು ವರ್ಷದ ನಂತರ 15 ವರ್ಷಗಳಿಗೆ ಅನ್ವಯಿಸಿ ಮಾನ್ಯತೆ ಶಾಶ್ವತ ನವೀಕರಣ…

Read More

ಬೆಂಗಳೂರು : ಅರಣ್ಯ ಒತ್ತುವರಿ ತೆರವು ಕಾನೂನು ಪ್ರಕ್ರಿಯೆಯಾಗಿದ್ದು, ದೊಡ್ಡ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಮಲೆನಾಡು ಮತ್ತು ಕರಾವಳಿಯಲ್ಲಿ ಕೆಲವರು ಅರಣ್ಯ ಒತ್ತುವರಿ ತೆರವಿಗೆ ವಿರೋಧಿಸುತ್ತಿದ್ದು, ಈ ವಿಚಾರದಲ್ಲಿ ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ಬಡವರ ಭೂಮಿ ಒತ್ತುವರಿ ತೆರವು ಮಾಡಿಸುತ್ತಿಲ್ಲ ಬದಲಾಗಿ ದೊಡ್ಡ ಒತ್ತುವರಿ ಮತ್ತು 2015ರ ನಂತರದ ಒತ್ತುವರಿಯನ್ನು ಮಾತ್ರ ತೆರವು ಮಾಡಲು ಸೂಚಿಸಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಶಿರೂರಿನಲ್ಲಿ ಗುಡ್ಡ ಕುಸಿದು 11 ಜನರು ಸಾವಿಗೀಡಾಗಿದ್ದರೆ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 316ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಎರಡು ಘಟನೆಗಳು ಎಚ್ಚರಿಕೆಯ ಗಂಟೆಯಾಗಿದ್ದು, ನದಿಗಳ ಮೂಲ ಮತ್ತು ಜೀವವೈವಿಧ್ಯದ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು…

Read More

ಬೆಂಗಳೂರು: 20/66/11ಕೆವಿ ಹೆಬ್ಬಾಳ  ಎಂ ಯು ಎಸ್ ಎಸ್ ದಿನಾಂಕ  28.08.2024 ರ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 2*100 MVA ಟ್ರಾನ್ಸ್‌ಫಾರ್ಮರ್, ಟ್ರಾನ್ಸ್‌ಫಾರ್ಮರ್ ಬೇಸ್ ಮತ್ತು ಬ್ರೇಕರ್ ನಿರ್ವಹಣೆ  ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 28-08-2024ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಪವರ್ ಕಟ್ ಆಗಲಿದೆ ಎಂದು ಹೇಳಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್…

Read More

ಬೆಂಗಳೂರು : 2024-25ನೇ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಎಸ್.ಎಸ್.ಪಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಕುರಿತಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದ ಅನ್ವಯ 2024-25ನೇ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇಲಾಖೆಯಿಂದ ಮಂಜೂರು ಮಾಡುತ್ತಿರುವ ಸಂಚಿ ಹೊನ್ನಮ್ಮ, ಸರ್.ಸಿ.ವಿ.ರಾಮನ್ ವಿದ್ಯಾರ್ಥಿವೇತನ, ಹೆಚ್.ಐ.ವಿ/ಲೆಪ್ರಸಿ ವಿದ್ಯಾರ್ಥಿವೇತನ, ಹೆಣ್ಣು ಮಕ್ಕಳ ಶುಲ್ಕ ಮರುಪಾವತಿ, ಪದವಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸೈನಿಕ ಸಿಬ್ಬಂದಿ ಮಕ್ಕಳ ಕಾಲೇಜು ಶುಲ್ಕ ಮರುಪಾವತಿ ಮಂಜೂರಾತಿಗಾಗಿ ಎಸ್.ಎಸ್.ಪಿ ಪೋರ್ಟಲ್‌ನ ಈ ಮುಂದಿನ ಲಿಂಕ್ Link: https://ssp.postmatric.karnataka.gov.in/  ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಷರತ್ತುಗಳು ಮತ್ತು ನಿಬಂಧನೆಗಳು 1. ಸಂಚಿ ಹೊನ್ನಮ್ಮ ಪ್ರತಿಭಾ ವಿದ್ಯಾರ್ಥಿವೇತನ:- * 2024-25 ನೇ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ (ಅನುದಾನರಹಿತ ಕೋರ್ಸ್…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ 7ನೇ ವೇತನ ಶ್ರೇಣಿಯನ್ನು ಜಾರಿಗೊಳಿಸಲಾಗಿತ್ತು.ಈ ಬೆನ್ನಲ್ಲೇ 2024ರ ಹೊಸ ವೇತನ ಶ್ರೇಣಿಯ ಪರಿಷ್ಕೃತ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರವು ಶಿಕ್ಷಕರಿಗೆ 7 ನೇ ವೇತನ ಪರಿಷ್ಕರಣೆ ಮಾಡಿದ್ದು, ನೇಮಕಾತಿ ವರ್ಷವಾರು ಈ ಕೆಳಗಿನ ವೇತನ ಪರಿಷ್ಕರಣೆಯ ದಿನಾಂಕ 01-08-2024 ರಂದು ಪಡೆಯುವ ಒಟ್ಟು ಅಂದಾಜು ಮಾಡಲಾಗಿದೆ. ರಾಜ್ಯ ಸರ್ಕಾರಿ ಶಿಕ್ಷಕರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಡಿಎ, ಹೆಚ್ಆರ್ ಎ ಸೇರಿದಂತೆ ಇತರೆ ವೇತನ ಶ್ರೇಣಿಯನ್ನು ಪರಿಷ್ಕರಿಸಲಾಗಿದೆ. ಹಾಗಾದ್ರೇ ವೇತನ ಶ್ರೇಣಿ ಪರಿಷ್ಕರಣೆಯ DA,HRA, MA ಸೇರಿ ವಿಸ್ತ್ರುತವಾದ ಇತರೆ ಸಂಪೂರ್ಣ ಮಾಹಿತಿ ಈ ಕೆಳಕಂಡಂತೆ ಇದೆ. ಹೀಗಿದೆ ರಾಜ್ಯ ಸರ್ಕಾರಿ ಶಿಕ್ಷಕರಿಗೆ 7ನೇ ವೇತನ ಆಯೋಗದಂತೆ ಪರಿಷ್ಕೃತ ವೇತನ ಸರಣಿಗಳು

Read More

ಬೆಂಗಳೂರು : ಅಂಚೆ ಇಲಾಖೆಯಿಂದ ದೀನ್ ದಯಾಳ್ ಸ್ಪರ್ಶ್ ಯೋಜನೆಗೆ 6ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾರತೀಯ ಅಂಚೆ ಇಲಾಖೆ ಅಧೀಕ್ಷಕರು ತಿಳಿಸಿದ್ದಾರೆ. 9ನೇ ತರಗತಿಯ ಶಾಲಾ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸಲು ದೀನ್ ದಯಾಳ್ ಸ್ಪರ್ಶ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುವುದು. ಸ್ಪರ್ಷ ಎಂದರೆ ಸ್ಟಾಂಪ್‌ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು, ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸುವುದು ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ವಿಶ್ರಾಂತಿ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ. ಯೋಜನೆಯಡಿಯಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ 60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ, ಫಿಲಾಟೆಲಿಕ್ ಕ್ಲಬ್‌ನ ಸದಸ್ಯ ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ 6000 ರೂ. ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ…

Read More