Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಸಾರ್ವಜನಿಕರು ಕುಡಿಯುವ ನೀರಿನ ಬಾಟಲ್ಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಬೇಕು. ಹೊರಗಡೆ ದೊರೆಯುವ ನೀರಿನ ಬಾಟಲಿಗಳಲ್ಲಿ ಹಲವು ಅಸುರಕ್ಷಿತವಾಗಿರುವುದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಕೆ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ ಹೋಳಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ 570 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದು, ಇತಿಹಾಸ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ತಂದೆ ಇಲ್ಲದ ಪೃಥ್ವಿಯ ತಾಯಿ ಶ್ಯಾಮಲಾ ಹೋಳಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಅವರಿಗೆ ಬರುವ ಗೃಹಲಕ್ಷ್ಮಿ ಹಣವು ಪೃಥ್ವಿಯ ವಿದ್ಯಾಭ್ಯಾಸಕ್ಕೆ ನೆರವಾಗಿದೆ. ಪ್ರತಿದಿನವೂ ಪರಿಪೂರ್ಣ ಶಿಕ್ಷಣಕ್ಕೆ ಹಂಬಲಿಸಿದ ಹೆಣ್ಣು ಮಗಳ ಕನಸು ಈ ಯೋಜನೆಯ ಮೂಲಕ ಸಾಕಾರಗೊಂಡಿದೆ ಎಂದು ತಿಳಿಸಿದೆ. ಬಡತನ ನಾಡಿನ ಮಕ್ಕಳ ಕಲಿಕಾ ಸಾಧನೆಗೆ ಅಡ್ಡಿಯಾಗಬಾರದು, ಅಂತಹ ವ್ಯವಸ್ಥೆಯೊಂದನ್ನು ನಿರ್ಮಾಣ ಮಾಡಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಾಗಿತ್ತು. ಗೃಹಲಕ್ಷ್ಮಿ ಯೋಜನೆಯು ಆ ಕನಸನ್ನು ಸಾಕಾರಗೊಳಿಸುತ್ತಿದೆ ಎಂದು ಹೇಳಿದೆ.
ಬೆಂಗಳೂರು : ಗಣಿ ಗುತ್ತಿಗೆ ನವೀಕರಣಕ್ಕೆ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿಗೌಡ ಎಂಬುವರು ಪತ್ರ ಬರೆದಿದ್ದಾರೆ. ಗಣಿ ಗುತ್ತಿಗೆಗೆ ಹರಾಜು ಬದಲಿಗೆ ನವೀಕರಣಕ್ಕೆ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬುವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. 2015ರಲ್ಲಿ ಸಿಎಂ ಆಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಿದ್ದರು. ಹಾಗೆ ನವೀಕರಣ ಮಾಡಿಕೊಟ್ಟಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಸುಮಾರು 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದು, ಇದರಿಂದ…
ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಎಟಿಎಂ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಕಲಬುರಗಿಯಲ್ಲಿ ಎಟಿಎಂ ಒಡೆದು ಬರೋಬ್ಬರಿ 18 ಲಕ್ಷ ರೂ. ಕದ್ದು ಖದೀಮರ ಗ್ಯಾಂಗ್ ಪರಾರಿಯಾಗಿದೆ. ಕಲಬುರಗಿಯ ರಿಂಗ್ ರೋಡ್ ಬಳಿಯ ಪೂಜಾರಿ ಚೌಕ್ ನಲ್ಲಿರುವ ಎಸ್ ಬಿಐ ಬ್ಯಾಂಕ್ ನಲ್ಲಿ ತಡರಾತ್ರಿ 3 ಗಂಟೆ ಸುಮಾರಿಗೆ ಖದೀಮರು ಎಟಿಎಂ ಒಡೆದು 18 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಸಿಬ್ಬಂದಿಗಳು ಎಟಿಎಂಗೆ ಹಣ ಹಾಕಿದ್ದರು. ಇದನ್ನು ಗಮನಿಸಿರುವ ಕಳ್ಳರು, ತಡರಾತ್ರಿ 3 ಗಂಟೆ ಸುಮಾರಿಗೆ ಐ20 ಕಾರಿನಲ್ಲಿ ಬಂದು ಗ್ಯಾಸ್ ಬಟರ್ ಬಳಸಿ ಎಟಿಎಂ ಒಡೆದು 18 ಲಕ್ಷ ರೂ. ದೂಚಿ ಪರಾರಿಯಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಅನೇಕ ಜನರು ಸ್ವಾರ್ಥ ತೃಪ್ತಿಗಾಗಿ ಮತ್ತು ತಮ್ಮ ಒಂಟಿ ಕಲ್ಪನೆಗಳನ್ನು ಪೂರೈಸಿಕೊಳ್ಳಲು ವಿಚಿತ್ರವಾದ ಕೆಲಸಗಳನ್ನು ಮಾಡುತ್ತಾರೆ. ಜನರು ಲೈಂಗಿಕವಾಗಿ ತಮ್ಮನ್ನು ತೃಪ್ತಿಪಡಿಸಿಕೊಳ್ಳಲು ವಿವಿಧ ರೀತಿಯ ವಸ್ತುಗಳನ್ನು ತಮ್ಮ ದೇಹಕ್ಕೆ ಸೇರಿಸಿಕೊಳ್ಳುವ ಘಟನೆಗಳನ್ನು ನಾವು ನೋಡುತ್ತಲೇ ಇರುತ್ತೇವೆ. ಇದೇ ರೀತಿಯ ಘಟನೆ ಇತ್ತೀಚೆಗೆ ಫೆಬ್ರವರಿಯಲ್ಲಿ ತೈವಾನ್ನಲ್ಲಿ ಸಂಭವಿಸಿದೆ. ಇಲ್ಲಿ, ಖಾಸಗಿ ಭಾಗಗಳಲ್ಲಿ ವೈಬ್ರೇಟರ್ ಇದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ತೈವಾನ್ನ ಕಾವೋಸಿಯುಂಗ್ನ 24 ವರ್ಷದ ಯುವಕನೊಬ್ಬ ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ. ವೈದ್ಯರು ಅವರ ಗುದನಾಳದಲ್ಲಿ 20 ಸೆಂ.ಮೀ ಆಳದಲ್ಲಿ ವೈಬ್ರೇಟರ್ ಸಿಲುಕಿಕೊಂಡಿರುವುದನ್ನು ಕಂಡುಕೊಂಡರು. ಫೆಬ್ರವರಿ 13 ರಂದು, ಸ್ಥಳೀಯ ಇ-ಡಾ ಆಸ್ಪತ್ರೆಯಲ್ಲಿ ಡಾ. ಚೆನ್ ಚಿಹ್-ಯಿ ಚಿಕಿತ್ಸೆ ನೀಡಿದರು. ಸ್ಥಳೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ, ವೈದ್ಯರು ಹಿಂದಿನ ರಾತ್ರಿ ತಮ್ಮ ಸಂಗಾತಿಯೊಂದಿಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದರು ಎಂದು ಹೇಳಿದರು. ಆದಾಗ್ಯೂ, ಆ ಕ್ರಿಯೆಯ ನಂತರ ಅವನಿಗೆ ಅಸಾಮಾನ್ಯ ಭಾವನೆ ಉಂಟಾಯಿತು. ಅವನಿಗೆ ತನ್ನ ಖಾಸಗಿ ಭಾಗಗಳಲ್ಲಿ ಏನೋ ಸಿಲುಕಿಕೊಂಡಂತೆ ಭಾಸವಾಯಿತು.…
ಗದಗ : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯವೊಂದು ನಡೆದಿದ್ದು ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ ನಡೆದ ಘಟನೆ ಗದಗದಲ್ಲಿ ನಡೆದಿದೆ. ಆರೋಪಿ ತಂದೆ ರಮೇಶ್ ಎಂಬಾತ ತನ್ನ 16 ವರ್ಷದ ಬಾಲಕಿ ಮೇಲೆ ಕಳೆದ 1 ವರ್ಷದಿಂದ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಈತನ ಮೇಲೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ, ಆರೋಪಿ ತಂದೆ ರಮೇಶ್ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ದೇಶಾದ್ಯಂತ ತಯಾರಾಗುವ 103 ಔಷಧಿಗಳ ಮಾದರಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಿಲ್ಲ. ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಮತ್ತು ರಾಜ್ಯ ಔಷಧ ಪ್ರಾಧಿಕಾರ ಔಷಧ ಎಚ್ಚರಿಕೆಯನ್ನು ನೀಡಿದೆ. ಶೀತ, ಕೆಮ್ಮು, ಜ್ವರ, ಅಲರ್ಜಿ ಮತ್ತು ನೋವು ನಿವಾರಕಗಳಿಗೆ ಬಳಸುವ ಜೀವಸತ್ವಗಳು ಮತ್ತು ಹೃದ್ರೋಗ ಸೇರಿದಂತೆ ಎಲ್ಲಾ ಔಷಧಿಗಳ ಮಾದರಿಗಳು ವಿಫಲವಾಗಿವೆ. ಹಿಮಾಚಲದ ಕೈಗಾರಿಕೆಗಳಲ್ಲಿ 38 ಔಷಧಗಳು ದೋಷಯುಕ್ತವಾಗಿರುವುದು ಕಂಡುಬಂದಿದೆ. ಹಿಮಾಚಲದಿಂದ ಗರಿಷ್ಠ 38 ಔಷಧಿಗಳು, ಉತ್ತರಾಖಂಡದಿಂದ 11, ಗುಜರಾತ್ ಮತ್ತು ಪಂಜಾಬ್ನಿಂದ ತಲಾ ಒಂಬತ್ತು ಔಷಧಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲಿಲ್ಲ. ಬಂಗಾಳ, ಉತ್ತರ ಪ್ರದೇಶ, ಮಧ್ಯಪ್ರದೇಶ, ತೆಲಂಗಾಣ, ಅಸ್ಸಾಂ ಮತ್ತು ತಮಿಳುನಾಡಿನ ಕೈಗಾರಿಕೆಗಳಲ್ಲಿ ತಯಾರಾದ ಔಷಧಿಗಳ ಮಾದರಿಗಳು ಸಹ ವಿಫಲವಾಗಿವೆ. CDSCO ಎಚ್ಚರಿಕೆಯಲ್ಲಿ, 47 ಔಷಧಿಗಳ ಮಾದರಿಗಳು ವಿಫಲವಾಗಿವೆ, ಅವುಗಳಲ್ಲಿ 21 ಔಷಧಿಗಳು ಹಿಮಾಚಲದಲ್ಲಿ ತಯಾರಿಸಲ್ಪಟ್ಟವು. ರಾಜ್ಯ ಔಷಧ ಪ್ರಾಧಿಕಾರ ಹೊರಡಿಸಿದ ಎಚ್ಚರಿಕೆಯಲ್ಲಿ, ದೇಶಾದ್ಯಂತ 56 ಔಷಧಿಗಳ ಗುಣಮಟ್ಟ ಕಳಪೆಯಾಗಿದೆ ಎಂದು ಕಂಡುಬಂದಿದೆ. ಇದರಲ್ಲಿ ಹಿಮಾಚಲದಲ್ಲಿ ತಯಾರಾದ 17 ಔಷಧಿಗಳು…
ಶ್ರೇಷ್ಠ ಜೀವನ ನಡೆಸಲು 18 ನೇ ಹಂತದ ಕಪ್ಪು ಪೂಜೆ ಜೀವನದಲ್ಲಿ ಔದ್ಯೋಗಿಕ ಶತ್ರುಗಳ ಸಮಸ್ಯೆ, ಆಸ್ತಿ ಪ್ರಕರಣ ಬಹಳ ದಿನಗಳಿಂದ ನಡೆಯುತ್ತಿರುವುದು, ಪತಿ-ಪತ್ನಿಯರ ನಡುವೆ ಒಗ್ಗಟ್ಟು ಇಲ್ಲದ ಪರಿಸ್ಥಿತಿ ಉಂಟಾಗುವುದು ಅಥವಾ ಕುಟುಂಬದಲ್ಲಿ ಇರಬಹುದಾದ ಇತರ ಬಂಧುಗಳಿಂದ ಸಮಸ್ಯೆಗಳು ಉಂಟಾಗುವುದು. , ಮತ್ತು ಅನೇಕ ಜನರು ತಮ್ಮ ಸಮಸ್ಯೆಗಳನ್ನು ಅನೇಕ ರೀತಿಯಲ್ಲಿ ಪೇರಿಸುತ್ತಾ ಹೋಗುತ್ತಾರೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಸಮಸ್ಯೆಯನ್ನು ಪರಿಹರಿಸಲು, ನಾವು 18 ನೇ ಹಂತದಲ್ಲಿರುವ ಕಪ್ಪು ಮನುಷ್ಯನನ್ನು ಪೂಜಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ…
ವಿಜಯಪುರ : ಹುಬ್ಬಳ್ಳಿಯಲ್ಲಿ ನಡೆದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಪ್ರಕರಣ ದಾಖಲಾಗಿದೆ. ಏಪ್ರಿಲ್ 7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದಿದ್ದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಶಾಂತಿ ಸೌಹಾರ್ದನೆ, ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರದ ನಿವಾಸಿ ಮೊಹಮ್ಮದ್ ಹನ್ನಾನ್ ಎಂಬುವರು ವಿಜಯಪುರದ ಗೋಲ್ ಗುಂಬಜ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆಧುನಿಕ ಜೀವನಶೈಲಿಯ ಪ್ರಮುಖ ಭಾಗವೆಂದರೆ ಫೋನ್ ಮತ್ತು ಸಾಮಾಜಿಕ ಮಾಧ್ಯಮಗಳು. ಇವೆರಡೂ ಇಲ್ಲದೆ ಜನರು ತಮ್ಮ ಜೀವನದಲ್ಲಿ ಅಪೂರ್ಣರು. ಜನರು ಸಾಮಾಜಿಕ ಮಾಧ್ಯಮದಲ್ಲಿ ಹಗಲು ರಾತ್ರಿ ಎನ್ನದೆ ಸಮಯ ಕಳೆಯುವುದರಿಂದ ಅವರ ಮಾನಸಿಕ ಆರೋಗ್ಯ ಹದಗೆಡುತ್ತಿದೆ. ರೀಲ್ಗಳನ್ನು ನೋಡುವ ಅಭ್ಯಾಸವು ಜನರು, ಮಕ್ಕಳು ಮತ್ತು ವೃದ್ಧರ ಮೇಲೆ ಎಷ್ಟರ ಮಟ್ಟಿಗೆ ಪರಿಣಾಮ ಬೀರಿದೆ ಎಂದರೆ, ಮಾಡಲು ಕೆಲಸವಿಲ್ಲದಿದ್ದರೆ, ಸಮಯ ಕಳೆಯಲು ರೀಲ್ಗಳನ್ನು ನೋಡುವುದು ನಮ್ಮ ದೈನಂದಿನ ದಿನಚರಿಯ ಭಾಗವಾಗಿದೆ. ರೀಲ್ ಪ್ರೇರಿತ ಕಣ್ಣಿನ ಹಾನಿಯು ಕಣ್ಣುಗಳ ಮೇಲೆ ಪರಿಣಾಮ ಬೀರುವ ಒಂದು ಕಾಯಿಲೆಯಾಗಿದ್ದು, ರೀಲ್ಗಳನ್ನು ನೋಡುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಇದಲ್ಲದೆ, ರೀಲ್ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಸಮಯ ಕಳೆಯುವುದರಿಂದ ಉಂಟಾಗುವ ಅನೇಕ ರೋಗಗಳಿವೆ. ಈ ರೋಗಗಳು ಮತ್ತು ಅವುಗಳ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ. ರೀಲ್ ಹೇಗೆ ರೋಗಕ್ಕೆ ಕಾರಣವಾಗುತ್ತಿದೆ? ಸಾಮಾಜಿಕ ಮಾಧ್ಯಮಗಳಲ್ಲಿ ಸಮಯ ಕಳೆಯುವುದು, ಗಂಟೆಗಟ್ಟಲೆ ಸ್ಕ್ರೀನ್ ಟೈಮ್ಗೆ ಒಡ್ಡಿಕೊಳ್ಳುವುದು, ವಿಶೇಷವಾಗಿ ಇನ್ಸ್ಟಾಗ್ರಾಮ್, ಟಿಕ್ಟಾಕ್, ಫೇಸ್ಬುಕ್ ಮತ್ತು ಯೂಟ್ಯೂಬ್ನಂತಹ ಸಾಮಾಜಿಕ…












