Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್ ಗೌಡ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಪಟ್ಟು ಹಿಡಿದಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ವಿನಯ್ ಸೋಮಯ್ಯ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿನಯ್ ಸೋಮಯ್ಯ ಡೆತ್ ನೋಟ್ ಬರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದು, ಸದ್ಯ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಬಿಗಿ ಪಟ್ಟು ಹಿಡಿದಿದೆ. ಕೊಡಗಿನಲ್ಲಿ ಬಿಜೆಪಿ ಉಗ್ರ ಹೋರಾಟಕ್ಕೆ ಮುಂದಾಗಿದ್ದು, ಇಂದು ಬಿಜೆಪಿ ನಾಯಕರ ದಂಡೇ ಭೇಟಿ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಂಎಲ್ ಸಿ ರವೀಂದ್ರ, ಸಂಸದ ಯದುವೀರ್ ಸೇರಿದಂತೆ ಹಲವು ನಾಯಕರು ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಡೆತ್ನೋಟಿನಲ್ಲಿ ಇರುವ ಎಲ್ಲರ ಹೆಸರನ್ನೂ…
ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು, ಏಪ್ರಿಲ್ 15ರಿಂದ ರಾಜ್ಯಾದ್ಯಂತ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.21ರಿಂದ ಆರಂಭಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ಏ.4ಕ್ಕೆ ಮುಕ್ತಾಯಗೊಂಡಿವೆ. ಏ.11ರಿಂದ ಕೋಡಿಂಗ್ ಹಾಗೂ ಡಿಕೋಡಿಂಗ್ ಪ್ರಕ್ರಿಯೆ ನಡೆದ ನಂತರ ಏ.15ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಒಟ್ಟು 2818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. 6 ವಿಷಯಗಳಿಂದ ವಿದ್ಯಾರ್ಥಿಗಳ 55 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕೆ ಈ ಬಾರಿ 75 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲ ಶಿಕ್ಷಕರೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ.
ಇಂದಿನ ಸನ್ನಿವೇಶದಲ್ಲಿ ಉದ್ಯೋಗ ಪಡೆಯುವುದು ವ್ಯಕ್ತಿಯ ಸಮಸ್ಯೆ ಎಂದು ಪರಿಗಣಿಸಲಾಗುವುದಿಲ್ಲ. ಎಲ್ಲಿ ನೋಡಿದರೂ ಓದು ಮುಗಿಸಿ ನಿರುದ್ಯೋಗಿಗಳೇ ಹೆಚ್ಚು. ಅದೂ ಅಲ್ಲದೆ, ಯಾವುದೇ ಕೆಲಸ ಸಿಗದಿರುವುದು, ಕಡಿಮೆ ಸಂಬಳಕ್ಕೆ ಕೆಲಸ ಮಾಡುವುದು ಅಥವಾ ಕೌಶಲ್ಯಕ್ಕೆ ಅನುಗುಣವಾಗಿ ಬಡ್ತಿ ಸಿಗದಿರುವ ಸಮಸ್ಯೆಗಳಿಗೆ ನಾಲ್ಕು ಆಧ್ಯಾತ್ಮಿಕ ಪರಿಹಾರಗಳನ್ನು ಈ ಪೋಸ್ಟ್ನಲ್ಲಿ ನೀಡಲಾಗಿದೆ. ಬನ್ನಿ ಆ ಪರಿಹಾರಗಳ ಬಗ್ಗೆ ತಿಳಿಯೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಬಡ್ತಿ ಪಡೆಯಲು ಪರಿಹಾರ ವೇತನ ಹೆಚ್ಚಳ: ಆಂಜನೇಯನೇ ಹೆಚ್ಚಿನವರಿಗೆ ಸಹಾಯ ಮಾಡುವ ದೇವರು, ಮೊದಲು ಉದ್ಯೋಗಾಕಾಂಕ್ಷಿಗಳಾಗಲಿ, ಬಡ್ತಿ ಸಿಗಲಿ. ಈತನನ್ನು ಪೂಜಿಸಿ ಹನುಮಾನ್ ಚಾಲೀಸವನ್ನು ಪ್ರತಿನಿತ್ಯ ಪಠಿಸಿದರೆ ನಮ್ಮ ಎಲ್ಲಾ ಕೆಲಸ ಸಮಸ್ಯೆಗಳು ಬೇಗ ಪರಿಹಾರವಾಗುತ್ತವೆ ಎಂದು ಹೇಳಲಾಗುತ್ತದೆ. ಮಂಗಳವಾರದಂದು ಹನುಮಾನ್ ಚಾಲೀಸಾವನ್ನು ಪಠಿಸಲು ಸಾಧ್ಯವಾಗದವರು ಮಂಗಳವಾರದಂದು ಮಾತ್ರ ಅದನ್ನು ಓದಬೇಕು ಎಂದು ಹೇಳಲಾಗುತ್ತದೆ. ಮಂಗಳವಾರದಂದು ದೇವಸ್ಥಾನಕ್ಕೆ ಹೋಗಿ ಊಟವಿಲ್ಲದೆ ದೇವಸ್ಥಾನದ ಬಳಿ ಕುಳಿತುಕೊಳ್ಳುವವರಿಗೆ ಹಳದಿ ಸಿಪ್ಪೆ…
ಇಂದಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ವೃದ್ಧರವರೆಗೂ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ, ನೀವು ಕೆಲವು ಸಲಹೆಗಳನ್ನು ಅನುಸರಿಸಿದರೆ, ನೀವು ಅದನ್ನು ಶಾಶ್ವತವಾಗಿ ಬಿಳಿ ಕೂದಲನ್ನು ತೆಗೆಯಬಹುದು. ಮಾರುಕಟ್ಟೆಯಲ್ಲಿ ಲಭ್ಯವಿರುವ ಉತ್ಪನ್ನಗಳನ್ನು ಬಳಸುವುದರಿಂದ ಅಡ್ಡಪರಿಣಾಮಗಳು ಉಂಟಾಗುವ ಸಾಧ್ಯತೆ ಹೆಚ್ಚು. ಆದಾಗ್ಯೂ, ಕೆಲವು ಮನೆಮದ್ದುಗಳನ್ನು ಬಳಸುವುದರಿಂದ ಬಿಳಿ ಕೂದಲಿಗೆ ಶಾಶ್ವತ ಪರಿಹಾರವಾಗಬಹುದು. ಎಳ್ಳು ಎಣ್ಣೆ ಔಷಧೀಯ ಗುಣಗಳನ್ನು ಹೊಂದಿದ್ದು, ಹಲವು ವರ್ಷಗಳಿಂದ ಬಳಸಲಾಗುತ್ತಿದೆ. ಆದಾಗ್ಯೂ, ಇದು ಬಿಳಿ ಕೂದಲನ್ನು ಶಾಶ್ವತವಾಗಿ ನಿಯಂತ್ರಿಸುತ್ತದೆ. ಎಳ್ಳು ಎಣ್ಣೆ ಕೂದಲಿಗೆ ಉತ್ತಮ ಪೋಷಣೆ ನೀಡುತ್ತದೆ. ಇದು ಮೃದುವಾಗುವಂತೆ ಮಾಡುತ್ತದೆ. ಕೂದಲು ಉದುರುವಿಕೆಗೆ ಉತ್ತಮ ಪರಿಹಾರ. ಆದರೆ, ಹೇರ್ ಡೈ ಬಳಸದೆ ಎಳ್ಳೆಣ್ಣೆಯನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ. ಇದಲ್ಲದೆ, ಈ ಎಳ್ಳೆಣ್ಣೆಯನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ದಪ್ಪವಾಗಿ ಬೆಳೆಯುತ್ತದೆ. ಅದು ಒಳಗಿನಿಂದ ಹೊರಗೆ ಆರೋಗ್ಯಕರವಾಗಿರುತ್ತದೆ. ಉತ್ತಮ ಪೋಷಕಾಂಶಗಳು ದೊರೆಯುತ್ತವೆ. ನಮ್ಮ ಅಜ್ಜಿಯ ಕಾಲದಿಂದಲೂ ಕೂದಲಿಗೆ ಎಳ್ಳೆಣ್ಣೆಯನ್ನು ಬಳಸುತ್ತಿದ್ದೇವೆ. ಕೂದಲು ಉದುರುವಿಕೆಯ ಸಮಸ್ಯೆಗೆ ಇದು ಉತ್ತಮ ಪರಿಹಾರವಾಗಿದೆ.…
ದಾವಣಗೆರೆ : ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯ ಅತ್ತಿಗೆರೆ ಗ್ರಾಮದ ಬಳಿ ಮಾರುತಿ ಇಕೋ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬಸವರಾಜಪ್ಪ (38) ಶ್ರೀಧರ್ (32) ಹಾಗೂ ವಿಜಯ್ ಕುಮಾರ್ (35) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತರು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪ ನಿವಾಸಿಗಳು. ದಾವಣಗೆರೆ ಕಡೆಯಿಂದ ಸತ್ತೆಬೆನ್ನೂರು ಕಡೆ ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನವರಾತ್ರಿಯ ಎರಡು ದಿನಗಳನ್ನು ಅತ್ಯಂತ ಪ್ರಮುಖವೆಂದು ಪರಿಗಣಿಸಲಾಗುತ್ತದೆ, ಅಷ್ಟಮಿ ಮತ್ತು ನವಮಿ ತಿಥಿ. ಚೈತ್ರ ನವರಾತ್ರಿಯ ಮಹಾ ಅಷ್ಟಮಿಯ ಕನ್ಯಾ ಪೂಜೆಯು ಏಪ್ರಿಲ್ 5 ರಂದು ಅಂದರೆ ಇಂದು ನಡೆಯಲಿದೆ ಮತ್ತು ಇದನ್ನು ದುರ್ಗಾ ಅಷ್ಟಮಿ ಎಂದೂ ಕರೆಯುತ್ತಾರೆ. ದುರ್ಗಾಷ್ಟಮಿಯ ದಿನದಂದು, ದುರ್ಗಾ ದೇವಿಯ ಮಹಾಗೌರಿ ರೂಪವನ್ನು ಪೂಜಿಸಲಾಗುತ್ತದೆ. ಅದಕ್ಕಾಗಿಯೇ ಇದನ್ನು ಮಹಾ ಅಷ್ಟಮಿ ಎಂದೂ ಕರೆಯುತ್ತಾರೆ. ಮಹಾಗೌರಿ ದೇವಿಯನ್ನು ಪೂಜಿಸುವುದರಿಂದ ಜೀವನದಲ್ಲಿ ಬರುವ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ. ಮಹಾ ಅಷ್ಟಮಿಯನ್ನು ದುರ್ಗಾ ಪೂಜೆಯ ಪ್ರಮುಖ ದಿನವೆಂದು ಪರಿಗಣಿಸಲಾಗುತ್ತದೆ. ಹಾಗಾದರೆ ಇಂದು ಕನ್ಯಾ ಪೂಜೆಗೆ ಶುಭ ಸಮಯ ಯಾವುದು ಎಂದು ತಿಳಿಯೋಣ. ಮಹಾ ಅಷ್ಟಮಿಯ ಶುಭ ಸಮಯ (ಮಹಾಷ್ಟಮಿ 2025 ಶುಭ ಮುಹೂರ್ತ) ಮಹಾ ಅಷ್ಟಮಿಯನ್ನು ದುರ್ಗಾ ಅಷ್ಟಮಿ ಎಂದೂ ಕರೆಯುತ್ತಾರೆ. ಅಷ್ಟಮಿ ತಿಥಿ ಏಪ್ರಿಲ್ 4 ರಂದು ಅಂದರೆ ನಿನ್ನೆ ರಾತ್ರಿ 8:12 ಕ್ಕೆ ಪ್ರಾರಂಭವಾಗಿದೆ ಮತ್ತು ತಿಥಿ ಏಪ್ರಿಲ್ 5 ರಂದು ಅಂದರೆ ಇಂದು ಸಂಜೆ 7:26 ಕ್ಕೆ…
ಬೆಂಗಳೂರು : ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮುಂದುವರೆದಿದ್ದು, ಬೈಕ್ ನಿಧಾನವಾಗಿ ಓಡಿಸು ಅಂದಿದಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದೆ. ಬೆಂಗಳೂರಿನ ಬಸವೇಶ್ವರ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರೀಲ್ 1 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಿರಂಜೀವಿ ಎಂಬ ಯುವಕ ಅತ್ತೆ ಮನೆಗೆ ಊಟ ಕೊಟ್ಟು ವಾಪಸ್ ಬರುವಾಗ ಪುಡಿ ರೌಡಿಗಳ ಅಟ್ಟಹಾಸ ಮೆರೆದಿದ್ದಾರೆ. ಬೈಕ್ ನಿಧಾನವಾಗಿ ಓಡಿಸಿ ಎಂದು ಹೇಳಿದಕ್ಕೆ ಚಿರಂಜೀವಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಸದ್ಯ ಚಿರಂಜೀವಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
20 ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ, ಮಾನವ ಚಟುವಟಿಕೆಗಳು, ವಿಶೇಷವಾಗಿ ಅಂತರ್ಜಲವನ್ನು ಪಂಪ್ ಮಾಡುವುದರಿಂದ ಭೂಮಿಯ ಅಕ್ಷವು ಸುಮಾರು 31.5 ಇಂಚುಗಳಷ್ಟು (ಅಥವಾ 80 ಸೆಂಟಿಮೀಟರ್ಗಳಷ್ಟು) ಬದಲಾಗಿದೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. ಈ ಚಲನೆಯು ಚಿಕ್ಕದಾಗಿ ಕಾಣಿಸಬಹುದು, ಆದರೆ ನೈಸರ್ಗಿಕ ಸಂಪನ್ಮೂಲಗಳ ನಮ್ಮ ಬಳಕೆಯು ಗ್ರಹವು ಹೇಗೆ ತಿರುಗುತ್ತದೆ ಎಂಬುದನ್ನು ವಾಸ್ತವವಾಗಿ ಬದಲಾಯಿಸಬಹುದು ಎಂಬುದನ್ನು ಇದು ತೋರಿಸುತ್ತದೆ. ಸಿಯೋಲ್ ರಾಷ್ಟ್ರೀಯ ವಿಶ್ವವಿದ್ಯಾಲಯದ ಕಿ-ವಿಯೋನ್ ಸಿಯೋ ನೇತೃತ್ವದ ಮತ್ತು ಜಿಯೋಫಿಸಿಕಲ್ ರಿಸರ್ಚ್ ಲೆಟರ್ಸ್ನಲ್ಲಿ ಪ್ರಕಟವಾದ ಸಂಶೋಧನೆಯು, 1993 ಮತ್ತು 2010 ರ ನಡುವೆ, ಸುಮಾರು 2,150 ಗಿಗಾಟನ್ಗಳಷ್ಟು ಅಂತರ್ಜಲವನ್ನು ಭೂಗತ ಮೀಸಲುಗಳಿಂದ ತೆಗೆದುಕೊಳ್ಳಲಾಗಿದೆ ಎಂದು ಕಂಡುಹಿಡಿದಿದೆ, ಹೆಚ್ಚಾಗಿ ಕೃಷಿ ಮತ್ತು ದೈನಂದಿನ ಮಾನವ ಬಳಕೆಗಾಗಿ. ಬಳಸಿದ ನಂತರ, ಈ ನೀರು ಸಾಮಾನ್ಯವಾಗಿ ಸಾಗರಗಳಲ್ಲಿ ಕೊನೆಗೊಳ್ಳುತ್ತದೆ, ಮತ್ತು ದ್ರವ್ಯರಾಶಿಯಲ್ಲಿನ ಆ ಬದಲಾವಣೆಯು ಜಾಗತಿಕ ಸಮುದ್ರ ಮಟ್ಟವನ್ನು ಸ್ವಲ್ಪ ಹೆಚ್ಚಿಸಿದೆ (ಸುಮಾರು 0.24 ಇಂಚುಗಳಷ್ಟು) ಮತ್ತು ಭೂಮಿಯ ಸಮತೋಲನವನ್ನು ಬದಲಾಯಿಸಿದೆ. ಭೂಗತ ನೀರಿನ ಈ ಬೃಹತ್…
ಬೆಂಗಳೂರು: ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೂರು ನೀಡಲು ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ. ವಿದ್ಯುತ್ ಪೂರೈಕೆಯ ವ್ಯತ್ಯಯಕ್ಕೆ ಸಂಬಂಧಿಸಿದ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕು. ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್ ಪೂರೈಕೆಗೆ ಸಂಬಂಧಿಸಿದ ದೂರುಗಳ ಫೋಟೋ ಹಾಗೂ ವಿಡಿಯೋಗಳನ್ನು ಕಳುಹಿಸಬಹುದು. https://twitter.com/KarnatakaVarthe/status/1908118880972689543 ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್ಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ. ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲ ಸಂದರ್ಭದಲ್ಲಿ ಸಹಾಯವಾಣಿಗೆ ಕರೆಗಳ ಮಹಾಪೂರವೇ ಹರಿದು ಬರುತ್ತಿರುವುದರಿಂದ ಗ್ರಾಹಕರಿಗೆ ಸಹಾಯವಾಣಿ ಸಂಪರ್ಕಿಸಲು ಇಂತಹ ಸಂದರ್ಭಗಳಲ್ಲಿ ಸಾಧ್ಯವಾಗುತ್ತಿಲ್ಲ. ಗ್ರಾಹಕರುಗಳು ಬೆಸ್ಕಾಂನ 11 ವಾಟ್ಸ್ಪ್ ಸಹಾಯವಾಣಿ ಸಂಖ್ಯೆಗಳಿಗೆ…
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಹಳೇ ದ್ವೇಷಕ್ಕೆ ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಸವಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು, ಜ್ಯೋತಿ ಹಾಗೂ ಪೂರ್ಣಿಮಾ ಎಂಬುವವರ ಮೇಲೆ ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಬಸವಪುರ ನಿವಾಸಿಗಳಾದ ಶಿವು ಹಾಗೂ ದರ್ಶನ್ ಎಂಬುವವರು ಈ ಹಲ್ಲೆ ನಡೆಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 2 ವರ್ಷದ ಹಿಂದೆ ಜ್ಯೋತಿಯನ್ನು ಇವರು ಚುಡಾಯಿಸಿದ್ದರು. ಈ ವಿಚಾರವಾಗಿ ಊರಿನ ದೊಡ್ಡವರು ಪಂಚಾಯಿತಿ ನಡೆಸಿದ್ದರು. ಈ ದ್ವೇಷದ ಹಿನ್ನೆಲೆ ಶಿವು ಹಾಗೂ ದರ್ಶನ್ ಏಕಾಏಕಿ ಗುಂಪು ಕಟ್ಟಿಕೊಂಡು ಬಂದು ಜ್ಯೋತಿ ಹಾಗೂ ಪೂರ್ಣಿಮಾ ಎಂಬುವವರ ಮೇಲೆ ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.














