Author: kannadanewsnow57

ಬೆಂಗಳೂರು: ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಮಳೆ, ಜು.15ರ ಬಳಿಕ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕಳೆದ ಎರಡೂರು ದಿನದಿಂದ ಮುಂಗಾರು ಮಳೆ ದುರ್ಬಲವಾಗಿದ್ದು, ಜು.15ರ ಬಳಿಕ ಚುರುಕುಗೊಳ್ಳಲಿದೆ. ಜು.3 ರಿಂದ ಜು.9ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.23ರಷ್ಟು ಹೆಚ್ಚಿನ ಮಳೆಯಾಗಿದೆ. ಒಟ್ಟಾರೆ ಮುಂಗಾರು ಅವಧಿಯಲ್ಲಿ ಶೇ.9 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Read More

ಇತ್ತೀಚಿನ ದಿನಗಳಲ್ಲಿ, ಭಾರತದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹೊಸ ಮತ್ತು ವಿಚಿತ್ರ ಪ್ರವೃತ್ತಿಯೊಂದು ಆವರಿಸಿಕೊಂಡಿದೆ – ಫೇಕ್ ವೆಡ್ಡಿಂಗ್. ಆದರೆ ನಕಲಿ ಮದುವೆ ಎಂದರೇನು, ಮತ್ತು ಅದು ಜನರಲ್ ಝಡ್ ಜನರಲ್ಲಿ ಏಕೆ ಜನಪ್ರಿಯವಾಗುತ್ತಿದೆ? ಫೇಕ್ ವೆಡ್ಡಿಂಗ್ ಎಂದರೇನು? ಫೇಕ್ ವೆಡ್ಡಿಂಗ್ ಅಥವಾ ನಕಲಿ ಮದುವೆ ಎಂದರೆ ನಿಖರವಾಗಿ ಹಾಗೆ ತೋರುತ್ತದೆ – ಎಲ್ಲಾ ವಿನೋದ ಮತ್ತು ಹಬ್ಬಗಳೊಂದಿಗೆ ವಿವಾಹ ಆಚರಣೆ, ಆದರೆ ನಿಜವಾದ ಮದುವೆ ನಡೆಯುವುದಿಲ್ಲ. ಯಾವುದೇ ಕಾನೂನು ಸಮಾರಂಭವಿಲ್ಲ, ನಿಜವಾದ ದಂಪತಿಗಳು ಮದುವೆಯಾಗುವುದಿಲ್ಲ – ಸ್ನೇಹಿತರು ಒಟ್ಟಿಗೆ ಸೇರಿ ಆಚರಿಸಲು, ನೃತ್ಯ ಮಾಡಲು, ಉಡುಗೆ ತೊಡಲು ಮತ್ತು ನಿಜವಾದ ಮದುವೆಯಂತೆ ಪಾರ್ಟಿ ಮಾಡಲು ಒಂದು ವೇದಿಕೆಯ ಕಾರ್ಯಕ್ರಮ. ಹಲ್ದಿ ಮತ್ತು ಮೆಹೆಂದಿ ಕಾರ್ಯಕ್ರಮಗಳಿಂದ ಹಿಡಿದು ಸಂಗೀತ ರಾತ್ರಿಗಳು ಮತ್ತು ಪೂರ್ಣ ಪ್ರಮಾಣದ ಬರಾತ್ಗಳವರೆಗೆ, ಎಲ್ಲವನ್ನೂ ಸಾಂಪ್ರದಾಯಿಕ ಭಾರತೀಯ ವಿವಾಹದಂತೆಯೇ ಯೋಜಿಸಲಾಗಿದೆ ಮತ್ತು ನಡೆಸಲಾಗುತ್ತದೆ. ಒಂದೇ ವ್ಯತ್ಯಾಸ? ಯಾರೂ ನಿಜವಾಗಿಯೂ ಗಂಟು ಕಟ್ಟುತ್ತಿಲ್ಲ. ಜನರಲ್ ಝಡ್ ಅದರ ಬಗ್ಗೆ ಏಕೆ ಗೀಳನ್ನು…

Read More

ಮಧ್ಯಪ್ರದೇಶದ ರೇವಾ ಜಿಲ್ಲೆಯ ಬಹಾದಿಯಾ ಗ್ರಾಮದ ನಿತಿನ್ ನಾಥ್ ಎಂಬ 14 ವರ್ಷದ ಬಾಲಕ ಬೀದಿನಾಯಿ ಕಚ್ಚಿದ ನಂತರ ರೇಬೀಸ್ ವೈರಸ್ ಸೋಂಕಿನಿಂದ ದುರಂತವಾಗಿ ಸಾವನ್ನಪ್ಪಿದ್ದಾನೆ. ಜೂನ್ 16 ರಂದು, ರಾಜೇಂದ್ರ ನಗರ ಪ್ರದೇಶದಲ್ಲಿರುವ ತನ್ನ ಚಿಕ್ಕಮ್ಮನ ಮನೆಯಲ್ಲಿ ಬಾಲಕ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ, ಬೀದಿನಾಯಿಯೊಂದು ಅವನ ಕುತ್ತಿಗೆಗೆ ಕಚ್ಚಿದೆ. ಆ ಬಾಲಕನನ್ನು ತಕ್ಷಣ ಪಿಚಿಯಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ, ಮೂರು ಡೋಸ್ ರೇಬೀಸ್ ಲಸಿಕೆಗಳನ್ನು ನೀಡಲಾಯಿತು. ಜುಲೈ 14 ರಂದು ನಾಲ್ಕನೇ ಲಸಿಕೆಯನ್ನು ನೀಡಲು ನಿರ್ಧರಿಸಲಾಗಿತ್ತು. ಈ ಪರಿಸ್ಥಿತಿಯಲ್ಲಿ, ನಿತಿನ್ ಸ್ಥಿತಿ ಹದಗೆಡುತ್ತಲೇ ಇತ್ತು ಮತ್ತು ಹುಡುಗ ನಾಯಿಯಂತೆ ವರ್ತಿಸಲು ಮತ್ತು ಬೊಗಳಲು ಪ್ರಾರಂಭಿಸಿದನು. ನಂತರ, ಬಾಲಕನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಹಿಂತಿರುಗಿಸಿದಾಗ, ಅವನಿಗೆ ಸಂಪೂರ್ಣವಾಗಿ ಲಸಿಕೆ ಹಾಕಲಾಗಿದೆ ಮತ್ತು ಪ್ರಸ್ತುತ ಅವನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದರು. ಬಾಲಕನ ಮೆದುಳಿಗೆ ರೇಬೀಸ್ ತೀವ್ರವಾಗಿ ಪರಿಣಾಮ ಬೀರಿದೆ ಎಂದು ಹೇಳಲಾಗಿದ್ದು, ವೈದ್ಯರು ಅವನನ್ನು ಮನೆಗೆ ಕಳುಹಿಸಲು…

Read More

ಬೆಂಗಳೂರು : ದುಬೈ, ಸೌದಿ ಅರೇಬಿಯಾಕ್ಕೆ ನಂದಿನಿ ತುಪ್ಪ ಈಗಾಗಲೇ ಮಾರಾಟ ಮಾಡಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾ, ಕೆನಡಾ ದೇಶಗಳಿಗೂ ಪೂರೈಸಲಾಗುವುದು. ಆಗಸ್ಟ್ನಲ್ಲಿ ಅಲ್ಲಿ ನಡೆಯುವ ಉತ್ಸವಕ್ಕೆ 3 ಸಾವಿರ ಟನ್ಗೆ ಬೇಡಿಕೆ ಬಂದಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾದ ಬಿ. ಶಿವಸ್ವಾಮಿ ತಿಳಿಸಿದ್ದಾರೆ. ತಿರುಪತಿ ದೇವಾಲಯಕ್ಕೆ ಈಗಾಗಲೇ 2000 ಮೆಟ್ರಿಕ್ ಟನ್ ನಂದಿನಿ ತುಪ್ಪ ಪೂರೈಕೆ ಮಾಡಲಾಗಿದೆ. ಹೆಚ್ಚುವರಿಯಾಗಿ 2000 ಮೆಟ್ರಿಕ್ ಟನ್ ತುಪ್ಪಕ್ಕೆ ಕಾರ್ಯಾದೇಶ ಬಂದಿದ್ದು, 500 ಮೆಟ್ರಿಕ್ ಟನ್ ತುಪ್ಪವನ್ನು ಪೂರೈಸಲಾಗಿದೆ ಎಂದು ಹೇಳಿದ್ದಾರೆ. ರಾಜ್ಯ, ಹೊರ ರಾಜ್ಯ ಮಾತ್ರವಲ್ಲದೆ ಸೌದಿ ಅರೇಬಿಯಾ, ದುಬೈನಲ್ಲಿಯೂ ನಂದಿನಿ ಔಟ್ಲೆಟ್ ಗಳಿವೆ. ಆಸ್ಟ್ರೇಲಿಯಾ, ಕೆನಾಡಾದಿಂದ ಮೂರು ಸಾವಿರ ಟನ್ ತುಪ್ಪಕ್ಕೆ ಬೇಡಿಕೆ ಬಂದಿದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ನಟ ಯುವ ರಾಜ್ ಕುಮಾರ್ ಅವರು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಜುಲೈ 18 ರಂದು ತೆರೆ ಕಾಣಲಿರುವ ತಾವು ನಾಯಕನಟನಾಗಿ ಅಭಿನಯಿಸಿರುವ “ಎಕ್ಕ” ಸಿನಿಮಾ ಪ್ರೀಮಿಯರ್ ಶೋ ವೀಕ್ಷಣೆಗೆ ಆಗಮಿಸುವಂತೆ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಿದ್ದಾರೆ. ರಾಜ್ಕುಮಾರ್ ಅವರ ಕುಟುಂಬದ ಜೊತೆಗಿನ ನನ್ನ ಒಡನಾಟ ನಾಲ್ಕೈದು ದಶಕಗಳಷ್ಟು ಹಳೆಯದು. ರಾಘವೇಂದ್ರ ರಾಜ್ಕುಮಾರ್, ಶಿವಣ್ಣ ಮತ್ತು ಅಪ್ಪು ತಮ್ಮ ತಂದೆಯಂತೆ ಅಭಿನಯದಲ್ಲಿ ಮಾತ್ರವಲ್ಲ, ಸಾಮಾಜಿಕ ಕಳಕಳಿಯಲ್ಲೂ ಎತ್ತಿದಕೈ. ರಾಜಣ್ಣನ ಕುಟುಂಬದ ಮೂರನೇ ತಲೆಮಾರು ಅದೇ ಹಾದಿಯಲ್ಲಿ ಹೆಜ್ಜೆಹಾಕಲು ಆರಂಭಿಸಿದ್ದು ಕಂಡು ಖುಷಿಯಾಯಿತು. ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ. https://twitter.com/siddaramaiah/status/1943693020924133569?ref_src=twsrc%5Etfw%7Ctwcamp%5Etweetembed%7Ctwterm%5E1943693020924133569%7Ctwgr%5E65f962ba20b456ea5f29f6b031761966b9d02632%7Ctwcon%5Es1_c10&ref_url=https%3A%2F%2Fkannadadunia.com%2Fcm-meets-ekka-team-invites-them-to-the-premiere-show-siddaramaiah-wishes-them-well%2F

Read More

ಲೈನ್ಮನೆಗಳಲ್ಲಿ ವಾಸಿಸುವ ಬುಡಕಟ್ಟು ಆದಿವಾಸಿಯ 2000 ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರವನ್ನು ಎರಡು ಮೂರು ತಿಂಗಳಲ್ಲಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಿವೇಶನ ಹಕ್ಕು ಪತ್ರ ನೀಡುವ ಸಂಬಂಧ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ ಹಕ್ಕುಪತ್ರ ವಿತರಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಬುಡಕಟ್ಟು ಸಮಾಜದವರು ಬಡವರಿದ್ದು, ಇವರಿಗೆ ನಿವೇಶನ ಇಲ್ಲದವರಿಗೆ ಹಕ್ಕು ಪತ್ರ ನೀಡಲು ಅಭಿಯಾನ ಮಾದರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 1500 ಕ್ಕೂ ಹೆಚ್ಚು ನಿವೇಶನ ರಹಿತರಿದ್ದು, ನಿವೇಶನ ಹಕ್ಕುಪತ್ರ ನೀಡಲು ಮುಂದಾಗಲಾಗಿದೆ. ಈಗಾಗಲೇ ಸರ್ಕಾರಿ ಜಾಗ ಗುರುತಿಸಲಾಗಿದೆ ಎಂದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ, ಪೊನ್ನಂಪೇಟೆ,…

Read More

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ, ಚಿಕೂನ್ ಗುನ್ಯಾಗೆ ಕಡಿವಾಣ ಹಾಕುವ ಸಲುವಾಗಿ ಸೊಳ್ಳೆ ನಿರ್ಮೂಲನೆಗೆ ಆರೋಗ್ಯ ಇಲಾಖೆ ಮುಂದಾಗಿದ್ದು, ರಾಜ್ಯಾದ್ಯಂತ 1500 ಸ್ವಯಂಸೇವಕರನ್ನು ನೇಮಿಸಿಕೊಳ್ಳಲಿದೆ. ನೀರಿನ ಮೂಲಗಳಲ್ಲಿಯೇ ಲಾರ್ವಾ ನಿರ್ಮೂಲನೆಗೆ ರಾಜ್ಯಾದ್ಯಂತ 1500 ಸ್ವಯಂಸೇವಕರನ್ನು ನೇಮಿಸಿ ಪ್ರತಿದಿನ 400 ರೂಪಾಯಿ ಕೂಲಿ ನೀಡಲು ಆರು ಕೋಟಿ ರೂಪಾಯಿ ವೆಚ್ಚ ಸೇರಿದಂತೆ ರೋಗ ನಿಯಂತ್ರಣಕ್ಕೆ ವಿವಿಧ ಕ್ರಮಗಳಿಗೆ ಒಟ್ಟು 7.25 ಕೋಟಿ ರೂಪಾಯಿ ವೆಚ್ಚ ಮಾಡುವ ಪ್ರಸ್ತಾಪಕ್ಕೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ. ಸಾಂಕ್ರಾಮಿಕ ರೋಗಗಳಾದ ಚಿಕನ್ ಗುನ್ಯ, ಡೆಂಗ್ಯೂ ಖಾಯಿಲೆಗಳ ಪರಿಣಾಮಕಾರಿಯಾಗಿ ನಿಯಂತ್ರಣಕ್ಕಾಗಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಕುರಿತ ಸರ್ಕಾರ ಆದೇಶ ಹೊರಡಿಸಿದೆ. ಈ ಯೋಜನೆಯಡಿ ನೀರಿನಲ್ಲಿರುವ ಲಾರ್ವಾ ನಿರ್ಮೂಲನೆಗೆ 100 ದಿನದ ಮಟ್ಟಿಗೆ 1,500 ಸ್ವಯಂಸೇವಕರನ್ನು ನೇಮಕ ಮಾಡಿಕೊಳ್ಳಲು 6 ಕೋಟಿ ರೂ. ವೆಚ್ಚಕ್ಕೆ ಅವಕಾಶ ನೀಡಲಾಗಿದೆ. ಸ್ಥಳೀಯ ಸಂಸ್ಥೆಗಳು, ಜಿಲ್ಲೆ, ತಾಲೂಕು ಮಟ್ಟದಲ್ಲಿ ಪ್ರತಿದಿನ 400 ರೂ. ಕೂಲಿಯಂತೆ ಸ್ವಯಂ ಸೇವಕರು…

Read More

ಬೆಂಗಳೂರು : ಹಾಸನದಲ್ಲಿ ಸರಣಿ ಹೃದಯಘಾತ ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಾಂತ್ರಿಕ ಸಲಹಾ ಸಮಿತಿಯನ್ನು ನೇಮಕ ಮಾಡಿತ್ತು. ನಿನ್ನೆ ಈ ಒಂದು ಸಮಿತಿ ರಜೆ ಸರ್ಕಾರಕ್ಕೆ ಸಂಪೂರ್ಣ ವರದಿ ಸಲಿಸಿದ್ದು ವರದಿಯಲ್ಲಿ ಚಾಲಕರಿಗೆ ಅತಿ ಹೆಚ್ಚು ಹೃದಯಘಾತ ಆಗಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಒಟ್ಟು 8 ಲಕ್ಷ ಚಾಲಕರಿಗೆ ಹೆಲ್ತ್ ಕ್ಯಾಂಪ್ ಆಯೋಜನೆ ಮಾಡಿ ಆರೋಗ್ಯ ತಪಾಸಣೆ ಮಾಡಲು ನಿರ್ಧಾರ ಕೈಗೊಂಡಿದೆ. ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಹೃದಯಾಘಾತದ ವರದಿಯನ್ನು ಬುಧವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಹಿರಂಗಪಡಿಸಿದ್ದಾರೆ. ಈ ವೇಳೆ ವಾಹನ ಚಾಲಕರ ಬಗ್ಗೆ ಆಘಾತಕಾರಿ ಅಂಶವೊಂದನ್ನು ತಿಳಿಸಿದ್ದು, ಹೃದಯಾಘಾತದಿಂದ ಮೃತಪಟ್ಟವರ ಪೈಕಿ ಶೇ.30ರಷ್ಟು ಮಂದಿ ಅಂದರೆ ಆರು ಜನ ಆಟೋ ಹಾಗೂ ಕ್ಯಾಬ್ ಚಾಲಕರು ಎಂದಿದ್ದಾರೆ. ಪ್ರಮುಖವಾಗಿ ವಾಯುಮಾಲಿನ್ಯ, ಹೊರಗಿನ ತಿಂಡಿ, ಕುಳಿತಲ್ಲೇ ಕುಳಿತಿರುವುದು ಮೊದಲಾದ ಕಾರಣಗಳಿಂದ ಹೃದಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ…

Read More

ಬೆಂಗಳೂರು : ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಾಲ್ಕು ಹಂತದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಲಾಗುತ್ತಿದೆ. ಈ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಮಾಹಿತಿ ನೀಡಿದ್ದು, ಅನ್ನಭಾಗ್ಯ ಯೋಜನೆಯ ಕುರಿತು ಜನರಲ್ಲಿ ಅರಿವು ಮೂಡಿಸಲು, ಕಾಳಸಂತೆ ಮಾರಾಟಕ್ಕೆ ಕಡಿವಾಣ ಹಾಕಲು ನಾಲ್ಕು ಹಂತದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಲಾಗುತ್ತಿದೆ. ಈಗಾಗಲೇ ರಾಜ್ಯಮಟ್ಟದ ಸಮಿತಿ ರಚಿಸಲಾಗಿದೆ. ಜಿಲ್ಲಾ, ತಾಲೂಕು ಸಮಿತಿಗಳನ್ನು ರಚಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ನ್ಯಾಯಬೆಲೆ ಅಂಗಡಿಗಳ ಮಟ್ಟದ ಸಮಿತಿಗಳನ್ನು ಪುನರ್ ರಚಿಸಲಾಗಿದೆ. ಈ ಸಮಿತಿಗಳ ಕಾರ್ಯನಿರ್ವಹಣೆ, ಅಧಿಕಾರ ವ್ಯಾಪ್ತಿ ನಿಗದಿಪಡಿಸಲು ನಿಯಮಗಳನ್ನು ರೂಪಿಸಲಾಗಿದೆ. ರಾಜ್ಯಮಟ್ಟದ ಸಮಿತಿಗೆ ಆಹಾರ ಸಚಿವರೇ ಅಧ್ಯಕ್ಷರಾಗಿರುತ್ತಾರೆ. ನ್ಯಾಯಬೆಲೆ ಅಂಗಡಿ ಹಂತದ ಜಾಗೃತಿ ಸಮಿತಿಗೆ ಆ ವ್ಯಾಪ್ತಿಯಲ್ಲಿ ಪಡಿತರ ಹೊಂದಿರುವ ಮೂವರು ಮಹಿಳೆಯರ ಪ್ರಾತಿನಿಧ್ಯವನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Read More

ನವದೆಹಲಿ : ಭಾರತದ ಇದುವರೆಗಿನ ಅತ್ಯಂತ ಭೀಕರ ವಿಮಾನ ಅಪಘಾತಗಳಲ್ಲಿ ಒಂದಾದ ಏರ್ ಇಂಡಿಯಾ ಫ್ಲೈಟ್ 171 ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಶನಿವಾರ ಮಧ್ಯರಾತ್ರಿಯ ನಂತರ ತನ್ನ ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿತು. 260 ಜನರು ಸಾವನ್ನಪ್ಪಿದ ವಿಮಾನ ಅಪಘಾತದ ಒಂದು ತಿಂಗಳ ನಂತರ ಈ ವರದಿ ಬಂದಿದೆ. ಕಾಕ್ಪಿಟ್ ಧ್ವನಿ ರೆಕಾರ್ಡರ್ನಲ್ಲಿ (CVR) ಕಂಡುಬರುವ ಆಘಾತಕಾರಿ ಸಂಭಾಷಣೆಗಳನ್ನು ವರದಿ ಬಹಿರಂಗಪಡಿಸಿದೆ. ವರದಿಯಲ್ಲಿ ದಾಖಲಾಗಿರುವ ಕಾಕ್ಪಿಟ್ ಸಂಭಾಷಣೆಯ ಪ್ರಕಾರ, ಹಾರಾಟದ ಸ್ವಲ್ಪ ಸಮಯದ ನಂತರ, ಎರಡೂ ಎಂಜಿನ್ಗಳಲ್ಲಿ ಹಠಾತ್ ಇಂಧನ ಕಡಿತವಾಯಿತು. ನಂತರ ಒಬ್ಬ ಪೈಲಟ್ ಇನ್ನೊಬ್ಬರನ್ನು “ನೀವು ಇಂಧನವನ್ನು ಏಕೆ ಕಡಿತಗೊಳಿಸಿದ್ದೀರಿ?” ಎಂದು ಕೇಳಿದರು, ಇನ್ನೊಬ್ಬ ಪೈಲಟ್, “ನಾನು ಹಾಗೆ ಮಾಡಲಿಲ್ಲ” ಎಂದು ಉತ್ತರಿಸಿದರು. ವಿಮಾನವು ಟೇಕ್ ಆಫ್ ಆದ ತಕ್ಷಣ ಗರಿಷ್ಠ 180 ಗಂಟುಗಳ ವೇಗವನ್ನು ತಲುಪಿತು. ಅದೇ ಸಮಯದಲ್ಲಿ, ಎರಡೂ ಎಂಜಿನ್ಗಳ ಇಂಧನ ಕಡಿತ ಸ್ವಿಚ್ಗಳು 1 ಸೆಕೆಂಡ್ ವ್ಯತ್ಯಾಸದೊಂದಿಗೆ “RUN”…

Read More