Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಪಂಚತಂತ್ರ 2.0 ಮೊಬೈಲ್ ಆಪ್ ಮೂಲಕ ಇ-ಹಾಜರಾತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಸಿಬ್ಬಂದಿಗಳು (ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್/ ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾಗಾರರು, ನೀರುಗಂಟಿಗಳು) ಪ್ರತಿದಿನ ಪಂಚತಂತ್ರ 2.0 ತಂತ್ರಾಂಶದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್- ಹಾಜರಾತಿಯನ್ನು ದಾಖಲಿಸುವಂತೆ ಹಾಗೂ ಸದರಿಯವರ ಪ್ರತಿ ಮಾಹೆಯ ವೇತನವನ್ನು ಬಯೋಮೆಟ್ರಿಕ್ ಹಾಜರಾತಿಯ ಆಧಾರದ ಮೇಲೆ ಪಾವತಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಲಾಗಿತ್ತು. ಮುಂದುವರೆದು, ಕರವಸೂಲಿಗಾರರು, ಸ್ವಚ್ಛತಾಗಾರರು ಮತ್ತು ನೀರುಗಂಟಿಗಳ ಕರ್ತವ್ಯವು ಕ್ಷೇತ್ರದಲ್ಲಿರುವುದರಿಂದ, ಇವರುಗಳು ನಿಗದಿತ ಸಮಯದೊಳಗೆ ಕಚೇರಿಗೆ ಹಾಜರಾಗಿ ಪಂಚತಂತ್ರ 2.0 ತಂತ್ರಾಂಶದಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ದಾಖಲಿಸುವುದು ಸಾಧ್ಯವಾಗದಿರುವುದರಿಂದ, ಇವರುಗಳಿಗೆ ಪಂಚತಂತ್ರ 2.0 ತಂತ್ರಾಂಶದಲ್ಲಿ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ. ಅದರಂತೆ, ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕರವಸೂಲಿಗಾರರು, ಸ್ವಚ್ಛತಾಗಾರರು ಮತ್ತು ನೀರುಗಂಟೆಗಳಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಿ, ಇವರುಗಳಿಗೆ…
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ತುಂತುರು ನೀರಾವರಿಗೆ ಸಹಾಯಧನದಡಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸಡಿಲಿಕೆ ಮಾಡಿದೆ. ಹೌದು, ರಾಜ್ಯ ಸರ್ಕಾರವು ತುಂತುರು ನೀರಾವರಿಗೆ ಸಹಾಯಧನದಡಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸಡಿಲಿಕೆ ಮಾಡಿದ್ದು, ಇನ್ಮುಂದೆ ಎಲ್ಲಾ ವರ್ಗದ ರೈತರಿಗೆ ಸಬ್ಸಿಡಿ ನವೀಕರಣ ಸೌಲಭ್ಯ ವಿಸ್ತರಿಸಿ ಆದೇಶಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡಗಳ ರೈತರು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ಇತರೆ ವರ್ಗದ ರೈತರಿಗೂ ಕೂಡ ಸಬ್ಸಿಡಿ ನವೀಕರಣ ಸೌಲಭ್ಯ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಎಲ್ಲಾ ಜಿಲ್ಲೆಗಳ ಇತರೆ ವರ್ಗದ ರೈತರು ನಿರ್ಬಂಧ ಸಡಿಲಿಸಲು ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಕ್ರಮ ಕೈಗೊಂಡಿದ್ದಾರೆ. ಇತರೆ ವರ್ಗದ ರೈತರ ಮೇಲಿನ ನಿರ್ಬಂಧ ಸಡಿಸಿಸಿ 7 ವರ್ಷದ ನಂತರ ಮತ್ತದೇ ಜಮೀನಿಗೆ ಸಬ್ಸಿಡಿ ನವೀಕರಣದ ಅವಕಾಶ…
ನವದೆಹಲಿ:ಮದುವೆಯಾದ 25 ವರ್ಷಗಳ ಸಂಭ್ರಮಾಚರಣೆಯಲ್ಲಿ ದಂಪತಿಗಳ ನೃತ್ಯವು ಪತಿ ವೇದಿಕೆಯ ಮೇಲೆ ಕುಸಿದು ಬಿದ್ದ ನಂತರ ಶೋಕವಾಗಿ ಮಾರ್ಪಟ್ಟಿತು, ಇದು ಅವರ ಪತ್ನಿ ಮತ್ತು ಅತಿಥಿಗಳನ್ನು ಆಘಾತಕ್ಕೀಡು ಮಾಡಿತು ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹೃದಯಾಘಾತದಿಂದ ನಿಧನರಾದರು.ಉತ್ತರ ಪ್ರದೇಶದ ಬರೇಲಿಯ ಕಲ್ಯಾಣ ಮಂಟಪದಲ್ಲಿ ಶೂ ವ್ಯಾಪಾರಿ 50 ವರ್ಷದ ವಾಸಿಮ್ ಸರ್ವತ್ ತನ್ನ ಪತ್ನಿ ಫರಾಹ್ ಅವರೊಂದಿಗೆ ತಮ್ಮ ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಕ್ತಿಯು ಇದ್ದಕ್ಕಿದ್ದಂತೆ ನೆಲಕ್ಕೆ ಬೀಳುವ ಮೊದಲು ನೃತ್ಯ ಮಾಡುತ್ತಿರುವುದನ್ನು ತೋರಿಸುತ್ತದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. https://twitter.com/i/status/1907748367998005464 ಈಗ ವೈರಲ್ ಆಗಿರುವ ವೀಡಿಯೊದಲ್ಲಿ ದಂಪತಿಗಳು ನೃತ್ಯ ಮಾಡುತ್ತಿರುವುದನ್ನು ತೋರಿಸುತ್ತದೆ. ಕೆಲವು ಕ್ಷಣಗಳ ನಂತರ, ವಾಸಿಮ್ ಬೀಳುತ್ತಾನೆ. ಅವನ ಸುತ್ತಲಿನ ಜನರು ಸಹಾಯಕ್ಕೆ ಧಾವಿಸುತ್ತಾರೆ, ಆದರೆ ಅವನು ಪ್ರತಿಕ್ರಿಯಿಸುವುದಿಲ್ಲ. ಕುಟುಂಬ ಸದಸ್ಯರು ವಾಸಿಮ್ ಅವರನ್ನು ಹತ್ತಿರದ…
ಮಧ್ಯಪ್ರದೇಶ ರಾಜ್ಯದಲ್ಲಿ ಒಂದು ದುರಂತ ಘಟನೆ ನಡೆದಿದೆ. ಖಾಂಡ್ವಾ ಜಿಲ್ಲೆಯ ಕೊಂಡಾವತ್ ಗ್ರಾಮದಲ್ಲಿ ಬಾವಿ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲಗಳನ್ನು ಉಸಿರಾಡಿದ ಎಂಟು ಜನರು ಸಾವನ್ನಪ್ಪಿದ್ದಾರೆ. ಗಂಗೌರ್ ಹಬ್ಬದ ಆಚರಣೆಯ ಭಾಗವಾಗಿ ಗುರುವಾರ ಗ್ರಾಮಸ್ಥರು ವಿಗ್ರಹವನ್ನು ನಿಮಜ್ಜನ ಮಾಡಲು ಬಾವಿಯನ್ನು ಸಿದ್ಧಪಡಿಸುತ್ತಿದ್ದಾಗ ಈ ಘಟನೆ ನಡೆದಿದೆ. 150 ವರ್ಷ ಹಳೆಯದಾದ ಬಾವಿಯಲ್ಲಿ ಸಂಗ್ರಹವಾಗಿದ್ದ ಹೂಳನ್ನು ತೆಗೆಯಲು ಐದು ಗ್ರಾಮಸ್ಥರು ಮೊದಲು ಅದರೊಳಗೆ ಇಳಿದರು. ಆದರೆ, ಅದರಲ್ಲಿರುವ ವಿಷಕಾರಿ ಅನಿಲಗಳಿಂದಾಗಿ ಅವರು ಪ್ರಜ್ಞೆ ಕಳೆದುಕೊಂಡರು. ನಂತರ ಅವರು ಕೆಸರಿನಲ್ಲಿ ಮುಳುಗಲು ಪ್ರಾರಂಭಿಸಿದರು. ಅವರನ್ನು ರಕ್ಷಿಸಲು ಇತರ ಮೂವರು ಗ್ರಾಮಸ್ಥರು ಬಾವಿಗೆ ಇಳಿದರು. ಆದರೆ, ವಿಷಕಾರಿ ಅನಿಲಗಳ ಪರಿಣಾಮದಿಂದಾಗಿ ಅವರೂ ಅದರಲ್ಲಿ ಸಿಕ್ಕಿಹಾಕಿಕೊಂಡರು. ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಜಿಲ್ಲಾಡಳಿತ, ಪೊಲೀಸರು ಮತ್ತು ಎಸ್ಡಿಆರ್ಎಫ್ ತಂಡಗಳು ಬಾವಿಗೆ ಧಾವಿಸಿದವು. ನಾಲ್ಕು ಗಂಟೆಗಳ ರಕ್ಷಣಾ ಪ್ರಯತ್ನದ ನಂತರ, ಎಂಟು ಶವಗಳನ್ನು ಒಂದೊಂದಾಗಿ ಬಾವಿಯಿಂದ ಹೊರತೆಗೆಯಲಾಯಿತು. ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ…
ನವದೆಹಲಿ : ಸುಧೀರ್ಘ ಚರ್ಚೆಯ ನಂತರ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾದಳ ಯುನೈಟೆಡ್ ಪಕ್ಷ ಕೂಡ ವಕ್ಫ್ ಮಸೂದೆಗೆ ಬೆಂಬಲ ನೀಡಿತು. ವಕ್ಫ್ ಮಸೂದೆಗೆ ಬೆಂಬಲ ನೀಡಿದ್ದಕ್ಕೆ ಜೆಡಿಯುನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಜೆಡಿಯುನ ಮೂವರು ಮುಸ್ಲಿಂ ನಾಯಕರು ರಾಜೀನಾಮೆ ನೀಡಿದ್ದಾಎ. ಜೆಡಿಯುನಿಂದ ಡಾ. ಮೊಹಮ್ಮದ್ ಖಾಸಿಂ ಅನ್ಸಾರಿ ನಂತರ, ಶಹನವಾಜ್ ಮಲಿಕ್ ಕೂಡ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ವಕ್ಫ್ ಮಸೂದೆಗೆ ಬೆಂಬಲ ನೀಡಿದ್ದರ ಬಗ್ಗೆ ಅಸಮಾಧಾನವೇ ಅವರು ರಾಜೀನಾಮೆ ನೀಡಲು ಕಾರಣ ಎಂದು ಹೇಳಿದ್ದಾರೆ.
BREAKING : ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಇಂದಿನಿಂದ ಕ್ಯಾಬ್, ಟ್ಯಾಕ್ಸಿ ದರ ಹೆಚ್ಚಳ | Cab, taxi fares hiked
ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಡೀಸೆಲ್ ದರ ಹೆಚ್ಚಳಗಳ ಪರಿಣಾಮ ಇದೀಗ ಇಂದಿನಿಂದ ಟ್ಯಾಕ್ಸಿ, ಕ್ಯಾಬ್ ದರ ಹೆಚ್ಚಳವಾಗಿದೆ. ಹೌದು, ಇಂದಿನಿಂದ ಟ್ಯಾಕ್ಸಿ, ಕ್ಯಾಬ್ ದರಗಳು ಹೆಚ್ಚಳವಾಗಿದ್ದು, ಪ್ರತಿ ಕಿ.ಮೀ ಮೇಲೆ 3 ರೂ ನಿಂದ 5 ರೂವರೆಗೆ ದರ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರ ಟೋಲ್ ದರ ಶೇ.5ರಷ್ಟು ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರವೂ ವಾಹನ ತಯಾರಿಕಾ ಕಂಪನಿಗಳು ಪ್ರತಿ ಕಾರಿನ ಮೇಲೆ ಶೇ. 3ರಿಂದ ಶೇ.4ರಷ್ಟು ದರ ಹೆಚ್ಚಳ ಮಾಡಿದೆ. ಎಲ್ಲಾ ದರ ಹೆಚ್ಚಳಗಳಿಂದಗಿ ಟೂರ್ಸ್ ಆಂಡ್ ಟ್ರಾವಲ್ಸ್ ಅಸೋಸಿಯೇಷನ್ ತಮ್ಮ ಕ್ಯಾಬ್ ಗಳ ಕಿ.ಮೀ ದರ ಏರಿಕೆ ಮಾಡಿವೆ ಎನ್ನಲಾಗಿದೆ. ಕೇಂದ್ರ ಸರ್ಕಾರ ಕಳೆದ ವಾರ ಟೋಲ್ ದರವನ್ನು ಸರಾಸರಿ 5%ರಷ್ಟು ಹೆಚ್ಚಿಸಿದೆ. ಅದೇ ಸಮಯದಲ್ಲಿ ಆಟೋಮೊಬೈಲ್ ಕಂಪನಿಗಳು ವಾಹನಗಳ ಬೆಲೆಯನ್ನೂ 3% ರಿಂದ 4%ರಷ್ಟು ಹೆಚ್ಚಿಸಿವೆ. ಈ ಎಲ್ಲದಕ್ಕೂ ಮೇಲುಗೈವಾಗಿ, ರಾಜ್ಯ ಸರ್ಕಾರ 2025ನೇ ಸಾಲಿನ ಬಜೆಟ್ನಲ್ಲಿ ಡಿಸೇಲ್ ಮೇಲೆ ಮಾರಾಟ ತೆರಿಗೆಯನ್ನು…
ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ವಿನಯ್ ಸೋಮಯ್ಯ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿನಯ್ ಸೋಮಯ್ಯ ಡೆತ್ ನೋಟ್ ಬರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ, ವಿನಯ್ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಬಂಧನವಾಗಿತ್ತು. ಇದರಿಂದ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು :2025-26ನೇ ಸಾಲಿನಲ್ಲಿ ಏಪ್ರಿಲ್-2025 ರಿಂದ ಜೂನ್-2025 ವರೆಗಿನ ತ್ರೈಮಾಸಿಕ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಅಧಿಕಾರ ಪ್ರತ್ಯಾಯೋಜನೆಯ ಬಗ್ಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳ ಮೂಲಕ ಆಡಳಿತ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಹಣ ಬಿಡುಗಡೆ ಮಾಡಲು ಆರ್ಥಿಕ ಅಧಿಕಾರ ಪ್ರತ್ಯಾಯೋಜಿಸಲಾಗುತ್ತಿದೆ. 2025-26ನೇ ಸಾಲಿಗೆ ಪ್ರತ್ಯಾಯೋಜಿಸಿರುವ ಈ ಆರ್ಥಿಕ ಅಧಿಕಾರಗಳ ಆದೇಶವು, 2025-26ನೇ ಸಾಲಿನ ರಾಜಸ್ವ ವೆಚ್ಚ ಮತ್ತು ಬಂಡವಾಳ ವೆಚ್ಚಗಳನ್ನು ಬಿಡುಗಡೆ ಮಾಡುವುದಕ್ಕೆ ಅನ್ವಯವಾಗುತ್ತದೆ. ಈ ಆದೇಶದಲ್ಲಿರುವ ಅಧಿಕಾರ ಪ್ರತ್ಯಾಯೋಜನೆಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳು ಚಲಾಯಿಸತಕ್ಕದ್ದೇ ಹೊರತು ಪುನರ್ ಪ್ರತ್ಯಾಯೋಜನೆ ಮಾಡತಕ್ಕದ್ದಲ್ಲ. ಸರ್ಕಾರದ ಆದೇಶ ಸಂ: ಎಫ್ಡಿ 1 ಟಿಎಫ್ಪಿ: 2025, ಬೆಂಗಳೂರು, ದಿನಾಂಕ:02.04.2025 ಭಾಗ-I ಆಡಳಿತಾತ್ಮಕ ಅನುಮೋದನೆ: 1. ಒಂದು ಆರ್ಥಿಕ ವರ್ಷದಲ್ಲಿ ಮುಂದುವರಿದ ಅಥವಾ ಹೊಸ ಯೋಜನೆಗಳೆಂದು ಅನುಮೋದನೆಗೊಂಡಿರುವ ಯೋಜನೆಗಳಿಗೆ ಮಾತ್ರ ಹಣವನ್ನು ಆಡಳಿತ ಇಲಾಖೆಗಳು ಬಿಡುಗಡೆಗೊಳಿಸಬಹುದಾಗಿದೆ.…
ಎರಡು ತಿಂಗಳ ಮಗುವೊಂದು ವೈದ್ಯಕೀಯ ಲೋಕದಲ್ಲಿ ಸಂಚಲನವನ್ನೇ ಸೃಷ್ಟಿಸಿತು. ಮಗುವಿನ ಹೊಟ್ಟೆ ಊದಿಕೊಂಡಿದ್ದನ್ನು ನೋಡಿದ ಪೋಷಕರು ಅವನನ್ನು ವೈದ್ಯರ ಬಳಿಗೆ ಕರೆದೊಯ್ದರು. ಅಲ್ಲಿ ವೈದ್ಯರು ಮೊದಲು ಮೂತ್ರಪಿಂಡದ ಸಮಸ್ಯೆ ಎಂದು ಅರ್ಥಮಾಡಿಕೊಂಡು ಚಿಕಿತ್ಸೆ ಆರಂಭಿಸಿದರು. ಆದರೆ ಹೊಟ್ಟೆ ಉಬ್ಬರಕ್ಕೆ ನಿಜವಾದ ಕಾರಣ ತಿಳಿದುಬಂದಾಗ ಎಲ್ಲರೂ ಆಘಾತಕ್ಕೊಳಗಾದರು. ಈ ಎರಡು ತಿಂಗಳ ಮಗುವಿನ ಗರ್ಭದಲ್ಲಿ ಇನ್ನೊಂದು ಮಗು ಇತ್ತು. ಅತ್ಯಂತ ಆಶ್ಚರ್ಯಕರ ಸಂಗತಿಯೆಂದರೆ ಗರ್ಭದಲ್ಲಿ ಬೆಳೆಯುತ್ತಿರುವ ಮಗು ಅರ್ಧ ಬೆಳೆದಿತ್ತು. ಭ್ರೂಣದ ಬೆನ್ನುಮೂಳೆ ಮತ್ತು ಮುಖದ ಮೂಳೆಗಳು ರೂಪುಗೊಂಡಿದ್ದವು. ಮಗುವಿಗೆ ಹೊಟ್ಟೆ ಊತ ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ವೈದ್ಯರು ಅದನ್ನು ವಿಲ್ಮ್ಸ್ ಗೆಡ್ಡೆ ಎಂದು ಭಾವಿಸಿದ್ದರು. ಮೂತ್ರಪಿಂಡದಲ್ಲಿನ ಸಮಸ್ಯೆಯಿಂದ ಇದು ಸಂಭವಿಸುತ್ತದೆ. ಆದರೆ ನಂತರ ಸತ್ಯ ಹೊರಬಂದಿತು. ಸಿಟಿ ಸ್ಕ್ಯಾನ್ ನಂತರ, ವೈದ್ಯರು ಅವರ ಹೊಟ್ಟೆಯಲ್ಲಿ ಮೃದು ಅಂಗಾಂಶ ಇರುವುದನ್ನು ನೋಡಿದರು. ಇದು ಕೊಬ್ಬು ಮತ್ತು ಮೂಳೆಗಳನ್ನು ಸಹ ಹೊಂದಿದೆ. ಈ ಚಿತ್ರದಲ್ಲಿ, ಅವನು ಮಾನವ ಮಗುವಿನಂತಹ ಬೆನ್ನುಮೂಳೆಯನ್ನು ನೋಡಿದನು.…
ವಾಷಿಂಗ್ಟನ್ : ಅಮೆರಿಕದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ನಿನ್ನೆ ತಡರಾತ್ರಿ, ಯುಎಸ್ ಮಾರುಕಟ್ಟೆ ಸಾಮಾನ್ಯ ದಿನಗಳಿಗಿಂತ 3 ರಿಂದ 4 ಪಟ್ಟು ಹೆಚ್ಚು ಕುಸಿದಿದ್ದು, ಇದಕ್ಕೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕವೇ ಕಾರಣ ಎಂದು ಹೇಳಲಾಗುತ್ತಿದೆ. ಯುಎಸ್ ಮಾರುಕಟ್ಟೆಯಲ್ಲಿ, ನಾಸ್ಡಾಕ್ ದಿನದ ವಹಿವಾಟಿನಲ್ಲಿ 1000 ಪಾಯಿಂಟ್ಗಳಿಗಿಂತ ಹೆಚ್ಚು ಅಥವಾ 5 ಪ್ರತಿಶತದಷ್ಟು ಕುಸಿದರೆ, ಡೌ ಜೋನ್ಸ್ ಸೂಚ್ಯಂಕವು 1600 ಪಾಯಿಂಟ್ಗಳ ಕುಸಿತ ಅಥವಾ ಸುಮಾರು 4 ಪ್ರತಿಶತದಷ್ಟು ಕಂಡಿತು. ಟ್ರಂಪ್ ಅವರ ನೀತಿಯಿಂದಾಗಿ, ಗುರುವಾರ ಅಮೆರಿಕದ ಮಾರುಕಟ್ಟೆಯು 2020 ರ ನಂತರದ ಅತಿದೊಡ್ಡ ಒಂದು ದಿನದ ಕುಸಿತವನ್ನು ದಾಖಲಿಸಿದೆ. ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಮಧ್ಯೆ ಜಾಗತಿಕ ಮಾರುಕಟ್ಟೆ ಕುಸಿತದ ನಂತರ, ಮಾರ್ಚ್ 16, 2020 ರಿಂದ ಎಸ್ & ಪಿ 500 ಕಂಪನಿಗಳು ಷೇರು ಮಾರುಕಟ್ಟೆ ಮೌಲ್ಯಮಾಪನದಲ್ಲಿ $2.4 ಟ್ರಿಲಿಯನ್ ಕಳೆದುಕೊಂಡಿವೆ. ಡೌ ಜೋನ್ಸ್ ಶೇ.4 ರಷ್ಟು ಕುಸಿದರೆ, ಎಸ್ & ಪಿ 500 ಶೇ.5…













