Subscribe to Updates
Get the latest creative news from FooBar about art, design and business.
Author: kannadanewsnow57
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಿಕೆಯನ್ನು ದೃಢೀಕರಿಸುವ ಸಾಂವಿಧಾನಿಕ ನಿರ್ಣಯವನ್ನು ಸಂಸತ್ತು ಶುಕ್ರವಾರ ಮುಂಜಾನೆ ಅಂಗೀಕರಿಸಿತು. ಫೆಬ್ರವರಿ 13 ರಂದು ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಯಿತು. ಸುಪ್ರೀಂ ಕೋರ್ಟ್ ಆದೇಶದಂತೆ ಎರಡು ತಿಂಗಳೊಳಗೆ ರಾಷ್ಟ್ರಪತಿ ಆಳ್ವಿಕೆ ಹೇರುವುದನ್ನು ದೃಢಪಡಿಸುವ ಸಾಂವಿಧಾನಿಕ ನಿರ್ಣಯವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿ ಚರ್ಚೆ ಮತ್ತು ಅಂಗೀಕಾರಕ್ಕೆ ಅವಕಾಶ ನೀಡಿದರು. ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮೇಲ್ಮನೆಯು ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಿತು. ಲೋಕಸಭೆ ಈಗಾಗಲೇ ಅದನ್ನು ಅಂಗೀಕರಿಸಿದೆ. ಮಣಿಪುರದ ಮುಖ್ಯಮಂತ್ರಿ ರಾಜೀನಾಮೆ ನೀಡಿದ ನಂತರ ರಾಜ್ಯಪಾಲರು ಶಾಸಕರೊಂದಿಗೆ ಚರ್ಚಿಸಿದರು ಮತ್ತು ಬಹುಮತದ ಸದಸ್ಯರು ಸರ್ಕಾರ ರಚಿಸುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದರು ಎಂದು ಅವರು ಸದನದಲ್ಲಿ ಹೇಳಿದರು. ಇದಾದ ನಂತರ ಸಚಿವ ಸಂಪುಟವು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿತು, ಅದನ್ನು ರಾಷ್ಟ್ರಪತಿಗಳು ಅಂಗೀಕರಿಸಿದರು ಎಂದು ಶಾ ಹೇಳಿದರು. ಸುಪ್ರೀಂ ಕೋರ್ಟ್ನ ತೀರ್ಪಿನ ಪ್ರಕಾರ, ಎರಡು ತಿಂಗಳೊಳಗೆ…
ನವದೆಹಲಿ : ರಾಜ್ಯದ ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಅಡುಗೆ ಎಣ್ಣೆ, ಬೇಳೆ, ಗೋಧಿ ನೀಡುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಹೌದು, ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಅಡುಗೆ ಎಣ್ಣೆ, ಬೇಳೆ, ಗೋಧಿ ನೀಡುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವರಾದ ಪ್ರಲ್ಹಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ, ಕರ್ನಾಟಕದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಅಕ್ಕಿಯೊಂದಿಗೆ ಎಣ್ಣೆ ಹಾಗೂ ಬೇಳೆ ವಿತರಣೆ ಮಾಡಲು ಕ್ರಮ ವಹಿಸುವಂತೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಇಂದು ಚಾಲನೆ ನೀಡಲಾಗುತ್ತಿದ್ದು, ಏಪ್ರಿಲ್ 4 ರಿಂದ ಏಪ್ರಿಲ್ 14ರವರೆಗೆ ನಡೆಯಲಿದ್ದು, ಈ ಬಾರಿ 20 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ. ಇಂದಿನಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ. ಕಳೆದ 12 ವರ್ಷಗಳಿಂದ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ. ‘ಕರಗ’ ಎಂಬ ಹೆಸರು ಹೂವಿನ ದಿಂಡು ಮತ್ತು ದೇವಿಯ ವಿಗ್ರಹವನ್ನು ಹೊಂದಿರುವ ಕಲಶದ ಅನುರೂಪವಾಗಿದೆ. ಕರಗವನ್ನು ಮುಟ್ಟದೆ ಅಂದರೆ ಹೂವಿನ ದಿಂಡಿನಿಂದ ಅಲಂಕೃತಗೊಂಡ ಮಣ್ಣಿನ ಮಡಿಕೆ ಅದರಲ್ಲಿರುವ ಕಲಶವನ್ನು ಕೈಯಲ್ಲಿ ಮುಟ್ಟದೆ ಆ ಕಲಶವನ್ನು ಹೊರುವ ವ್ಯಕ್ತಿಯ ತಲೆ ಮೇಲೆ ಇಡಲಾಗುತ್ತದೆ. ಕರಗವನ್ನು ಹೊರುವವನು ಮಹಿಳೆಯಂತೆ ಕಂಕಣ, ಮಂಗಳ-ಸೂತ್ರ ಮತ್ತು ಹಣೆಯ ಮೇಲೆ ಸಿಂಧೂರವನ್ನು ಇಟ್ಟುಕೊಂಡಿರುತ್ತಾನೆ. ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲೂ ನಾವು…
2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿಗಳ ಹಾಗೂ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದರ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ 31, 2025 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ bcwdhelpline@gmail.com ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೇಸಿಗೆ ಕಾರಣದಿಂದ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ದಾಖಲೆಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಆದರೆ ಬೇಡಿಕೆಗೆ ತಕ್ಕಂತೆ ಪೂರೈಸಲು ಸಾಧ್ಯವಾಗದ ಕಾರಣ ಎಸ್ಕಾಂಗಳು ಅನಿಯಮಿತ ವಿದ್ಯುತ್ ಕಡಿತದ ಮೊರೆ ಹೋಗಿವೆ. ಇದರ ಪರಿಣಾಮ ರಾಜ್ಯಾದ್ಯಂತ ವಿದ್ಯುತ್ ಕಡಿತ ಶುರು ಆಗಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ವಿದ್ಯುತ್ ಗರಿಷ್ಠ ಬೇಡಿಕೆ 18,350 ಮೆಗಾ ವ್ಯಾಟ್ ಇದ್ದು, ಈ ವರ್ಷದ ಮಾರ್ಚ್ 7 ರಂದು 18,395ರಷ್ಟು ಇದೆ. ಕಳೆದ ವರ್ಷಕ್ಕಿಂತ 2000 ಮೆಗಾ ವ್ಯಾಟ್ ನಷ್ಟು ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಇದರ ಪರಿಣಾಮ ಕಳೆದ ಒಂದು ವಾರದಿಂದ ಎಸ್ಕಾಂಗಳು ಅನಿಯಮಿತ ವಿದ್ಯುತ್ ಕಡಿತ ಮಾಡುತ್ತಿವೆ. ವಿದ್ಯುತ್ ಮಾರ್ಗ ನಿರ್ವಹಣೆ, ಮಳೆ, ಗಾಳಿ, ಇತರೆ ಕಾರಣ ನೀಡಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಅಧಿಕೃತವಾಗಿ ವಿದ್ಯುತ್ ಕಡಿತ ಬದಲು ಅನಿಯಮಿತ ಕಡಿತ ಮಾಡಲಾಗುತ್ತಿದೆ. ಬಳಿಕವೂಬೇಡಿಕೆ ಹೆಚ್ಚಾಗುತ್ತಿದೆ. ಪ್ರಸ್ತುತ ಬೇಡಿಕೆ 18,500 ಮೆ.ವ್ಯಾಟ್ ಗಿಂತಲೂ ಹೆಚ್ಚಾಗಿದ್ದರೂ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತಿಲ್ಲ. 16000 ಮೆ. ವ್ಯಾಟ್ನಿಂದ 17300 ಮೆ.ವ್ಯಾಟ್ನಷ್ಟು…
ನವದೆಹಲಿ : ಭವಿಷ್ಯ ನಿಧಿ (ಪಿಎಫ್) ಖಾತೆಯಿಂದ ಆನ್ಲೈನ್ನಲ್ಲಿ ಹಣವನ್ನು ಹಿಂಪಡೆಯಲು ಬಯಸುವ ಅರ್ಜಿದಾರರು ರದ್ದಾದ ಚೆಕ್ನ ಫೋಟೋವನ್ನು ‘ಅಪ್ಲೋಡ್’ ಮಾಡುವ ಅಗತ್ಯವಿಲ್ಲ ಮತ್ತು ಅವರ ಬ್ಯಾಂಕ್ ಖಾತೆಯನ್ನು ಉದ್ಯೋಗದಾತರು ಪರಿಶೀಲಿಸುವ ಅಗತ್ಯವಿಲ್ಲ ಎಂದು ಇಪಿಎಫ್ಒ ಗುರುವಾರ ತಿಳಿಸಿದೆ. ಈ ಕ್ರಮವು ಸುಮಾರು 8 ಕೋಟಿ ಷೇರುದಾರರ ಕ್ಲೈಮ್ ಇತ್ಯರ್ಥ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಮತ್ತು ಉದ್ಯೋಗದಾತರಿಗೆ ವ್ಯವಹಾರ ಮಾಡುವ ಸುಲಭತೆಯನ್ನು ಖಚಿತಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ, ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸದಸ್ಯರು ತಮ್ಮ ಪಿಎಫ್ ಖಾತೆಗಳಿಂದ ಆನ್ಲೈನ್ನಲ್ಲಿ ಹಣವನ್ನು ಹಿಂಪಡೆಯಲು ಅರ್ಜಿ ಸಲ್ಲಿಸುವಾಗ ಯುಎಎನ್ ಅಂದರೆ ಯೂನಿವರ್ಸಲ್ ಖಾತೆ ಸಂಖ್ಯೆ ಅಥವಾ ಪಿಎಫ್ ಸಂಖ್ಯೆಯೊಂದಿಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಯ ರದ್ದಾದ ಚೆಕ್ ಅಥವಾ ಪಾಸ್ಬುಕ್ನ ಪರಿಶೀಲಿಸಿದ ಛಾಯಾಚಿತ್ರವನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ಉದ್ಯೋಗದಾತರು ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳನ್ನು ಸಹ ಅನುಮೋದಿಸಬೇಕಾಗುತ್ತದೆ. ಆನ್ಲೈನ್ನಲ್ಲಿ ಹಕ್ಕು ಸಲ್ಲಿಸುವಾಗ ಚೆಕ್ ಅಥವಾ ಪರಿಶೀಲಿಸಿದ ಬ್ಯಾಂಕ್ ಪಾಸ್ಬುಕ್ನ ಫೋಟೋವನ್ನು ಅಪ್ಲೋಡ್ ಮಾಡುವ ಅಗತ್ಯವನ್ನು…
ಕೊಪ್ಪಳ: 2024-25 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಒಟ್ಟು 21,786 ರೈತರಿಗೆ ರೂ. 30.05 ಕೋಟಿ ಬೆಳೆವಿಮೆ ಪರಿಹಾರ ಮಂಜೂರಾಗಿದ್ದು, ಹಂತ ಹಂತವಾಗಿ ರೈತರ ಖಾತೆಗೆ ಬೆಳೆವಿಮೆ ಪರಿಹಾರ ಜಮಾ ಆಗುವುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ, ರೈತರು ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ರಾಘವೇಂದ್ರ(9148442314) ಇವರನ್ನು ದೂರವಾಣಿ ಮೂಲಕ ಅಥವಾ ಕೊಪ್ಪಳದ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಸಂಪರ್ಕಿಸಬಹುದು. ರೈತರು ತಮ್ಮ ಮೊಬೈಲ್ ಒಳಗಡೆ ಗೂಗಲ್ನಲ್ಲಿ(Google) ಸಂರಕ್ಷಣೆ ಪೋರ್ಟಲ್ ನಲ್ಲಿಯೂ ಬೆಳೆವಿಮೆ ಅರ್ಜಿ ಸಂಖ್ಯೆ ಅಥವಾ ರೈತರು ಬೆಳೆವಿಮೆ ನೋಂದಣಿಯಲ್ಲಿ ನೀಡಿರುವ ಮೊಬೈಲ್ ನಂಬರ್ ನಿಂದ ಮಾಹಿತಿ ಪರಿಶೀಲಿಸಬಹುದು. ಅಲ್ಲದೇ, ರೈತರು ತಮ್ಮ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದು ಕೊಪ್ಪಳ ಕೃಷಿ ಇಲಾಖೆಯ ಪ್ರಕಟಣೆ…
ಧಾರವಾಡ : ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ. ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ಧಗೊಳಸುವ ಮಾಗಿ ಉಳುಮೆ ಪಾರಂಪರಿಕ ಕೃಷಿ ವಿಧಾನ. ಈ ವಿಧಾನ ವೈಜ್ಞಾನಿಕವೂ ಆಗಿದೆ. ಮಾಗಿ ಉಳುಮೆ ಅಂದರೆ ಸರಿ ಸುಮಾರು ಹಿಂಗಾರು ಬೆಳೆಗಳ ಕಟಾವು ಮಾಡಿ ಮುಗಿಸಿದ ಕೃಷಿ ಜಮೀನನ್ನು ಆಳವಾಗಿ ಉಳುಮೆ ಮಾಡಿ ಮುಂದಿನ ಎರಡು ತಿಂಗಳಿನಲ್ಲಿ ಸೂರ್ಯನ ಬಿಸಿಲಿನ ತಾಪಕ್ಕೆ ಭೂಮಿಯನ್ನು ಒಡ್ಡುವ ಪದ್ಧತಿಯೇ ಮಾಗಿ ಉಳುಮೆಯಾಗಿದೆ. ಸಾಮಾನ್ಯವಾಗಿ ಇದನ್ನು ಇಳುಕಲಿಗೆ ಅಡ್ಡವಾಗಿ ಮಾಡಲಾಗುವುದು. ಇದನ್ನು ಸ್ಥಳೀಯವಾಗಿ ಮಾಗಿ ಬಿಡುವುದು, ನೆಲ ಕಾಯಸಿವುದು, ಬಿಸಿಲು ತಿನ್ನಿಸುವುದು ಎಂದೆಲ್ಲಾ ಕರೆಯಲಾಗುತ್ತದೆ. ಮಾಗಿ ಉಳುಮೆ ಮಾಡುವ ಮೊದಲು ರೈತರು ತಮ್ಮ ಹೊಲಗಳಿಗೆ ಹೆಕ್ಟೇರಿಗೆ 10 ಟನ್ಗಳಷ್ಟು ಕೊಟ್ಟಿಗೆ ಅಥವಾ ಸಗಣಿ ಗೊಬ್ಬರವನ್ನು ಸಮನಾಗಿ ಹರಡಿ ನಂತರ ನೇಗಿಲಿನಿಂದ ಉಳುಮೆ ಮಾಡಿ ಗೊಬ್ಬರವನ್ನು ಮಣ್ಣಿನಲ್ಲಿ ಸೇರಿಸಬಹುದು. ಮಾಗಿ ಉಳುಮೆ ಪ್ರಯೋಜನಗಳು: ಮಾಗಿ ಉಳುಮೆಯಿಂದ…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಇಂದಿನಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಿದೆ. ಹೌದು, ಇಂದಿನಿಂದ ಮೂರು ದಿನ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ಇಂದಿನಿಂದ ಹೆಚ್ಚಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಅದೇ ರೀತಿಯಾಗಿ ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ…
ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು. ಇಂದು ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಅವರು ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದರು. ಸಭೆ ಫಲಪ್ರದವಾಗಿದ್ದು “ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ” ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ. ಸಂಬಂಧಿತ ಸಂಸ್ಥೆಗಳಿಂದ ಶೇ5 ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ…










