Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದು ನಾಳೆಯಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಿದೆ. ಹೌದು, ಇಂದಿನಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ನಾಳೆಯಿಂದ ಹೆಚ್ಚಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಅದೇ ರೀತಿಯಾಗಿ ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ. ಇಂದು ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ…
ಬೆಂಗಳೂರು : ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ರೈಲ್ವೆ ಮಂಡಳಿ ಬೇಸಿಗೆ ಅವಧಿಯಲ್ಲಿ ವಿಶೇಷ ರೈಲುಗಳ ಓಡಾಟಕ್ಕೆ ಅನುಮೋದನೆ ನೀಡಿದೆ. I. ರೈಲು ಸಂಖ್ಯೆ 06281/06282 ಮೈಸೂರು-ಅಜ್ಮೀರ್ ಎಕ್ಸ್ಪ್ರೆಸ್ ಬೇಸಿಗೆ ವಿಶೇಷ (ಒಟ್ಟು 11 ಟ್ರಿಪ್ ಗಳು): •ರೈಲು ಸಂಖ್ಯೆ 06281: ಮೈಸೂರಿನಿಂದ ಪ್ರತಿ ಶನಿವಾರ ಏಪ್ರಿಲ್ (5,12,19, 26), ಮೇ (3,10,17,24,31), ಮತ್ತು ಜೂನ್ (7,14) ರಂದು ಬೆಳಿಗ್ಗೆ 8:00ಕ್ಕೆ ಹೊರಟು, ಸೋಮವಾರ ಬೆಳಿಗ್ಗೆ 06:55ಕ್ಕೆ ಅಜ್ಮೀರ್ ತಲುಪುತ್ತದೆ. •ರೈಲು ಸಂಖ್ಯೆ 06282: ಅಜ್ಮೀರ್ನಿಂದ ಪ್ರತಿ ಸೋಮವಾರ ಏಪ್ರಿಲ್ (7,14,21,28), ಮೇ (5,12,19,26), ಮತ್ತು ಜೂನ್ (2,9,16) ರಂದು ಸಂಜೆ 06:50ಕ್ಕೆ ಹೊರಟು, ಬುಧವಾರ ಸಂಜೆ 5:30ಕ್ಕೆ ಮೈಸೂರು ತಲುಪುತ್ತದೆ. ಈ ರೈಲುಗಳು ಹಾಸನ, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ಹೊಸಪೇಟೆ ಜಂಕ್ಷನ್, ಕೊಪ್ಪಳ, ಗದಗ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಗೋಕಾಕ್ ರಸ್ತೆ, ಘಟಪ್ರಭಾ, ರಾಯಬಾಗ, ಕುಡಚಿ, ಮಿರಜ್, ಸಾಂಗ್ಲಿ, ಪುಣೆ, ಲೋನಾವಾಲಾ,…
ಬೆಂಗಳೂರು: ಬೆಂಗಳೂರಿನಲ್ಲಿ ಐಸ್ ಕ್ರೀಂ ಮತ್ತು ತಂಪು ಪಾನೀಯಗಳ ತಯಾರಿಕೆಯಲ್ಲಿ ಅಪಾಯಕಾರಿ ಉಲ್ಲಂಘನೆಗಳು ನಡೆದಿವೆ ಎಂದು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (Karnataka’s Food Safety and Drug Administration Department -FDA) ನಡೆಸಿದ ಆಹಾರ ಸುರಕ್ಷತಾ ತನಿಖೆಯಿಂದ ತಿಳಿದುಬಂದಿದೆ. ಹಲವಾರು ಉತ್ಪನ್ನಗಳಲ್ಲಿ ಡಿಟರ್ಜೆಂಟ್ ಪೌಡರ್ ಮತ್ತು ಫಾಸ್ಪರಿಕ್ ಆಮ್ಲದಂತಹ ಅಪಾಯಕಾರಿ ಪದಾರ್ಥಗಳು ಇರುವುದು ಗಂಭೀರ ಆರೋಗ್ಯ ಕಳವಳವನ್ನುಂಟುಮಾಡಿದೆ ಎಂದು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಎಫ್ಡಿಎ ತಪಾಸಣೆಯಿಂದ ಪತ್ತೆ 220 ಚಿಲ್ಲರೆ ಮಾರಾಟ ಮಳಿಗೆಗಳ ತಪಾಸಣೆಯ ಸಮಯದಲ್ಲಿ, ಕಳಪೆ ಶೇಖರಣಾ ಸೌಲಭ್ಯಗಳೊಂದಿಗೆ ನೈರ್ಮಲ್ಯವಿಲ್ಲದ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 97 ಅಂಗಡಿಗಳನ್ನು ಅಧಿಕಾರಿಗಳು ಕಂಡುಹಿಡಿದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಕೆಲವು ತಯಾರಕರು ಐಸ್ ಕ್ರೀಮ್ಗಳಲ್ಲಿ ಡಿಟರ್ಜೆಂಟ್ ಪೌಡರ್ ಅನ್ನು ನಕಲಿ ಕೆನೆ ವಿನ್ಯಾಸವನ್ನು ರಚಿಸಲು ಬಳಸುತ್ತಿದ್ದಾರೆ ಮತ್ತು ಕಾರ್ಬೊನೇಷನ್ ಅನ್ನು ಹೆಚ್ಚಿಸಲು ಫಾಸ್ಪರಿಕ್ ಆಮ್ಲವನ್ನು ಕೂಲ್ ಡ್ರಿಂಕ್ಸ್ಗೆ ಸೇರಿಸಲಾಗುತ್ತಿದೆ ಎಂಬುದು ಹೆಚ್ಚು ಕಳವಳಕಾರಿಯಾಗಿದೆ. ಎಫ್ಡಿಎಯ ಎರಡು ದಿನಗಳ…
ನವದೆಹಲಿ : ಗುರುವಾರ ಮುಂಜಾನೆ ಲೋಕಸಭೆಯು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಿಕೆಯನ್ನು ದೃಢೀಕರಿಸುವ ಶಾಸನಬದ್ಧ ನಿರ್ಣಯವನ್ನು ಅಂಗೀಕರಿಸಿತು, ಇದರಲ್ಲಿ ಪಕ್ಷಾತೀತ ಸದಸ್ಯರು ನಿರ್ಧಾರವನ್ನು ಬೆಂಬಲಿಸಿದರು. ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಕ್ಷುಬ್ಧ ಈಶಾನ್ಯ ರಾಜ್ಯದಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು ಸರ್ಕಾರ ಎಲ್ಲಾ ಸಾಧ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು. ಕಳೆದ ನಾಲ್ಕು ತಿಂಗಳುಗಳಲ್ಲಿ ಮಣಿಪುರದಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ ಎಂದು ಅವರು ಹೇಳಿದರು. ಶಾಂತಿಯುತ ಪರಿಹಾರಕ್ಕಾಗಿ ಮೈಟೈ ಮತ್ತು ಕುಕಿ ಸಮುದಾಯಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಅವರು ಹೇಳಿದರು. “ಸಾಮಾನ್ಯವಾಗಿ ಪರಿಸ್ಥಿತಿ ಶಾಂತಿಯುತವಾಗಿದೆ. ಜನರು ಶಿಬಿರಗಳಲ್ಲಿ ಇರುವವರೆಗೆ, ಪರಿಸ್ಥಿತಿ ತೃಪ್ತಿಕರವಾಗಿದೆ ಎಂದು ನಾನು ಹೇಳುವುದಿಲ್ಲ. ಮಣಿಪುರದಲ್ಲಿ ಶಾಂತಿ ಪುನಃಸ್ಥಾಪಿಸಲು ಸರ್ಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಆದೇಶ ಬಂದ ದಿನ, ನಾವು ಕೇಂದ್ರ ಪಡೆಗಳನ್ನು ವಾಯುಮಾರ್ಗದ ಮೂಲಕ ಕಳುಹಿಸಿದ್ದೇವೆ. (ಕ್ರಮ ಕೈಗೊಳ್ಳುವಲ್ಲಿ) ನಮ್ಮ ಕಡೆಯಿಂದ ಯಾವುದೇ ವಿಳಂಬವಾಗಲಿಲ್ಲ.2023 ರ ಮೇ ತಿಂಗಳಲ್ಲಿ ಪ್ರಾರಂಭವಾದ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 260…
ನವದೆಹಲಿ : ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. ಹವಾಮಾನ ಇಲಾಖೆಯ ಪ್ರಕಾರ, ಮಧ್ಯ ಮಹಾರಾಷ್ಟ್ರದಿಂದ ಕೆಳಮಟ್ಟದ ಮೂಲಕ ಕೊಮೊರಿನ್ ಪ್ರದೇಶದವರೆಗೆ ಚಂಡಮಾರುತದ ಪ್ರಸರಣದ ರೂಪದಲ್ಲಿ ಉತ್ತರ-ದಕ್ಷಿಣ ತಗ್ಗು ಗಾಳಿ ಮುಂದುವರಿಯುತ್ತದೆ. ಇದರಿಂದಾಗಿ, ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಿಂದ ಬೀಸುವ ತೇವಾಂಶವುಳ್ಳ ಗಾಳಿಯು ಕೆಳ ಮಟ್ಟದಲ್ಲಿ ಪರಸ್ಪರ ಡಿಕ್ಕಿ ಹೊಡೆಯುತ್ತಿದೆ. ಈ ಹವಾಮಾನ ಚಟುವಟಿಕೆಗಳಿಂದಾಗಿ, ಛತ್ತೀಸ್ಗಢ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ತೆಲಂಗಾಣದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅದೇ ರೀತಿ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ ಮತ್ತು ಮಾಹೆಯ ವಿವಿಧ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮತ್ತು ಮಿಂಚು ಬೀಳುವ ಸಾಧ್ಯತೆಯಿದೆ. ಮಧ್ಯಪ್ರದೇಶ, ವಿದರ್ಭ, ಮಧ್ಯ ಮಹಾರಾಷ್ಟ್ರ, ಮರಾಠವಾಡದ…
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲಿಕರು, ಸಾರ್ವಜನಿಕರು ಶೇ.5ರ ರಿಯಾಯಿತಿಯೊಂದಿಗೆ ತಮ್ಮ ಆಸ್ತಿಗಳ ತೆರಿಗೆಯನ್ನು ಪಾವತಿಸುವಂತೆ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ. ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲಿಕರು ಸನ್ 2025-2026ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 30ರ ಒಳಗೆ ಪಾವತಿ ಮಾಡಿದಲ್ಲಿ ಶೇ 5 ರಷ್ಟು ರಿಯಾಯಿತಿ ಇರುತ್ತದೆ ಹಾಗೂ ಮೇ-2025 ಹಾಗೂ ಜೂನ್-2025 ತಿಂಗಳಿನಲ್ಲಿ ಆಸ್ತಿ ತೆರಿಗೆ ಪಾವತಿಸಿದಲ್ಲಿ ಯಾವುದೇ ರೀತಿಯ ದಂಡ ಇರುವುದಿಲ್ಲ. ಜುಲೈ-2025 ತಿಂಗಳಿನಿಂದ ಪ್ರತಿ ತಿಂಗಳಿಗೆ ಶೇ.2 ರಷ್ಟು ದಂಡದೊಂದಿಗೆ ಆಸ್ತಿಕರ ಪಾವತಿಸಬೇಕಾಗಿರುತ್ತದೆ. ಆಸ್ತಿ ಮಾಲಿಕರು, ಸಾರ್ವಜನಿಕರು ತಮ್ಮ ತಮ್ಮ ನಿವೇಶನಗಳು ಹಾಗೂ ಕಟ್ಟಡಗಳ ಆಸ್ತಿಕರವನ್ನು ಮೇ-2025ರ ಒಳಗಾಗಿ ತೆರಿಗೆಯನ್ನು ಪಾವತಿ ಮಾಡಿ ರಿಯಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳಬೇಕು. ನೀರಿನ ತೆರಿಗೆ ಕಡ್ಡಾಯವಾಗಿ ಪಾವತಿಸಬೇಕು. ಅಲ್ಲದೇ ನಗರದಲ್ಲಿ ವಿವಿಧ ಉದ್ದಿಮೆಗಳನ್ನು ನಡೆಸುತ್ತಿರುವ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕು ಹಾಗೂ ಉದ್ದಿಮೆ ಪರವಾನಿಗೆ ಪಡೆದುಕೊಂಡವರು 2025-2026ನೇ ಸಾಲಿಗೆ ನವೀಕರಣ ಮಾಡಿಕೊಳ್ಳಲು ಈ ಮೂಲಕ ಸೂಚಿಸಲಾಗಿದೆ. ಖಾಲಿ ನಿವೇಶನಗಳ…
ಸಮಾಜ ಕಲ್ಯಾಣ ಇಲಾಖೆಯಿಂದ ಐಐಎಸ್ಸಿ, ಐಐಟಿ ಮತ್ತು ನೀಟ್ ಸಂಸ್ಥೆಗಳ ಮೂಲಕ ಆರ್ಟಿಫೀಷಿಯಲ್ ಇನ್ಟೆಲಿಜೆನ್ಸ್ & ಮಷಿನ್ ಲರ್ನಿಂಗ್ (Artificial Intelligence and Machine Learning) ವೃತ್ತಿಪರ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ, ತರಬೇತಿ ನೀಡುವ ಸಂಬಂಧ ಅರ್ಜಿ ಸಲ್ಲಿಸಲಾಗಿದೆ. ಐಐಎಸ್ಸಿ, ಐಐಟಿ ಮತ್ತು ನೀಟ್ ಸಂಸ್ಥೆಗಳ ಮೂಲಕ ಆರ್ಟಿಫೀಷಿಯಲ್ ಇನ್ಟೆಲಿಜೆನ್ಸ್ & ಮಷಿನ್ ಲರ್ನಿಂಗ್ ವೃತ್ತಿಪರ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ರೂ. 15,000 ಗಳ ಶಿಷ್ಯವೇತನ ನೀಡಲಾಗುವುದೆಂದು ಕೆಲವು ಷರತ್ತುಗಳಿಗೊಳಪಟ್ಟು ನಿರ್ದೇಶಕರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ರವರು ಮಂಜೂರಾತಿ ನೀಡಿ ಆದೇಶಿಸಿರುತ್ತಾರೆ. ಕೊಪ್ಪಳ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಏಪ್ರಿಲ್ 11 ರವರೆಗೆ ಅರ್ಜಿಗಳನ್ನು ಸ್ವೀಕರಿಸಿ ಪರಿಶೀಲಿಸಿ ಕೇಂದ್ರ ಕಛೇರಿಗೆ ಸಲ್ಲಿಸಬೇಕಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿಗಳಿಗಾಗಿ ಕೊಪ್ಪಳ ಜಿಲ್ಲೆಯ ಆಯಾ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ…
ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯ ಗಾಬರಿ ಲೇಔಟ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಪತ್ನಿ ಶ್ರುತಿ(35) ಮಕ್ಕಳಾದ ಮನೀಶ್(9), ಮೂರು ತಿಂಗಳ ಮಗು ಅನೀಶ್ ನನ್ನು ಕೊಲೆ ಮಾಡಿ ಸಂತೋಷ್(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಸ್ಕಾಂನಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಸಂತೋಷ್ ಕಾರ್ಯನಿರ್ವಹಿಸುತ್ತಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಅವರು ನೇಣು ಹಾಕಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಸಂತೋಷ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಭೇಟಿ ನೀಡಿ ಪರಿಶೀಲಿಸಿದ್ದು, ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿತ್ರದುರ್ಗ : ಆಶಾ ಕಿರಣ ಯೋಜನೆ ಅಡಿಯಲ್ಲಿ 40 ವರ್ಷ ದಾಟಿದ ದೃಷ್ಟಿ ದೋಷವಿರುವ ನಾಗರೀಕರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮಟ್ಟದ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಆಶಾ ಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಿ.ಓ.ನಾಗರಾಜ್ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಶಾ ಕಿರಣ ಯೋಜನೆಯಡಿ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಶಾ ಕಿರಣ ಯೋಜನೆಯಡಿ ಮೊದಲ ಹಂತದಲ್ಲಿ ಮನೆ ಮನೆ ಭೇಟಿ, ಅಂಧತ್ವ ದೃಷ್ಟಿ ದೋಷ ತಪಾಸಣೆ ನಡೆಸಿ, ಜಿಲ್ಲೆಯಲ್ಲಿ 40ವರ್ಷ ಮೇಲ್ಪಟ್ಟ ಒಟ್ಟು 55000 ಫಲಾನುಭವಿಗಳನ್ನು ಮತ್ತು ಶಾಲಾ ವಿದ್ಯಾರ್ಥಿಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 3600 ಫಲಾನುಭವಿಗಳು ಪತ್ತೆ ಹಚ್ಚಿ, ಗುರುತಿಸಿ ಗಣಕೀಕೃತ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಈಗ ಆಶಾ ಕಿರಣ ಎರಡನೇಯ ಹಂತದಲ್ಲಿ ಉಚಿತ…
ನವದೆಹಲಿ : ವಿವಿಧ ವಿರೋಧ ಪಕ್ಷಗಳ ಸದಸ್ಯರ ತೀವ್ರ ವಿರೋಧದ ನಡುವೆಯೂ ಲೋಕಸಭೆಯು ಬುಧವಾರ ವಕ್ಫ್ (ತಿದ್ದುಪಡಿ) ಮಸೂದೆ, 2025 ಅನ್ನು ಅಂಗೀಕರಿಸಿತು. ಕಳೆದ ವರ್ಷ ಆಗಸ್ಟ್ 8 ರಂದು ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಆಗಸ್ಟ್ 8, 2024 ರಂದು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಉಲ್ಲೇಖಿಸಲಾಯಿತು. ಸಂಸತ್ತಿನ ಜಂಟಿ ಸಮಿತಿ (ಜೆಪಿಸಿ) ಪ್ರಸ್ತಾಪಿಸಿದ 14 ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿತು. ಈ ಮಸೂದೆಯ ಪರವಾಗಿ 288 ಮತಗಳು ಚಲಾವಣೆಗೊಂಡರೆ, 232 ಸಂಸದರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದರು. ಬಿಜೆಪಿ ಸಂಸದೆ ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿ ವರದಿಯನ್ನು ಫೆಬ್ರವರಿ 13 ರಂದು ವಿರೋಧ ಪಕ್ಷಗಳ ಗದ್ದಲ ಮತ್ತು ಸಭಾತ್ಯಾಗದ ನಡುವೆಯೂ ಸಂಸತ್ತಿನಲ್ಲಿ ಮಂಡಿಸಲಾಯಿತು. ಕೇಂದ್ರ ಸಚಿವ ಸಂಪುಟದ ಅನುಮೋದನೆಯ ನಂತರ, ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಮಸೂದೆಯನ್ನು ಸಂಸತ್ತಿನಲ್ಲಿ ಪರಿಚಯಿಸುವ ಸಾಧ್ಯತೆಯಿದೆ. ಬಜೆಟ್ ಅಧಿವೇಶನದ ಎರಡನೇ ಹಂತವನ್ನು ಮಾರ್ಚ್ 10 ರಿಂದ ಏಪ್ರಿಲ್…












