Author: kannadanewsnow57

ಚೆಕ್ ಮೂಲಕ ಪಾವತಿ ತುಂಬಾ ಅನುಕೂಲಕರವಾಗಿದೆ. ಆದ್ರೆ, ಇದು ಕೆಲವು ವಿಶೇಷ ನಿಯಮಗಳನ್ನ ಹೊಂದಿದೆ. ಈ ನಿಯಮಗಳನ್ನ ಅನುಸರಿಸದಿರುವುದು ನಿಮಗೆ ಹೆಚ್ಚು ವೆಚ್ಚವಾಗುತ್ತದೆ. ಕೆಲವೊಮ್ಮೆ ನಿಮ್ಮ ಸಣ್ಣ ತಪ್ಪು ನಿಮ್ಮನ್ನ 2 ವರ್ಷಗಳವರೆಗೆ ಜೈಲಿಗೆ ಕಳುಹಿಸಬಹುದು. ನೀವು ಚೆಕ್ ಮೂಲಕ ವ್ಯವಹಾರಗಳನ್ನ ಮಾಡಲು ಆರಾಮದಾಯಕವಾಗಿದ್ದರೆ, ಅದಕ್ಕೆ ಸಂಬಂಧಿಸಿದ ಕೆಲವು ನಿಯಮಗಳನ್ನ ನೀವು ತಿಳಿದಿರಬೇಕು. ಆದಾಗ್ಯೂ, ಚೆಕ್‌’ಗಳ ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತವೆ. ಚೆಕ್ ಮೂಲಕ ಪಾವತಿಸುವಾಗ ಮೊದಲು ಒಂದು ವಿಷಯವನ್ನ ನೆನಪಿಡಿ. ಚೆಕ್‌’ಗೆ ಲಿಂಕ್ ಮಾಡಲಾದ ಖಾತೆಯಲ್ಲಿ ಸಾಕಷ್ಟು ಹಣವಿದೆಯೇ ಎಂದು ಖಚಿತಪಡಿಸಿಕೊಳ್ಳಿ. ನಿಮ್ಮ ಖಾತೆಯು ಚೆಕ್‌’ನಲ್ಲಿ ಬರೆದ ಮೊತ್ತವನ್ನ ಹೊಂದಿಲ್ಲದಿದ್ದರೆ, ಅದು ಬೌನ್ಸ್ ಆಗುತ್ತದೆ ಮತ್ತು ಚೆಕ್ ಬೌನ್ಸ್ ತುಂಬಾ ಅಪಾಯಕಾರಿ ಪರಿಸ್ಥಿತಿಯಾಗಿದೆ. ನೀವು ಚೆಕ್ ಮೂಲಕ ವಹಿವಾಟು ನಡೆಸುತ್ತಿದ್ದರೆ, ನೀವು ವಿಶೇಷವಾಗಿ ಈ 5 ವಿಷಯಗಳನ್ನ ನೆನಪಿನಲ್ಲಿಟ್ಟುಕೊಳ್ಳಬೇಕು. ನಿಮ್ಮ ಚೆಕ್‌’ನಲ್ಲಿನ ವಿವರಗಳನ್ನ ನೀವು ಸರಿಯಾಗಿ ಭರ್ತಿ ಮಾಡಬೇಕಾಗುತ್ತದೆ. ಉದಾಹರಣೆಗೆ, ಹಣವನ್ನ ಬರೆದ ನಂತರ, ಅದನ್ನು (/-) ಚಿಹ್ನೆಯೊಂದಿಗೆ ಕೊನೆಗೊಳಿಸಿ ಮತ್ತು…

Read More

ನವದೆಹಲಿ : UPSC ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಕೇಂದ್ರ ಲೋಕಸೇವಾ ಆಯೋಗ (UPSC) ಈಗ ಸೇವೆಯಲ್ಲಿರುವಾಗ ನಾಗರಿಕ ಸೇವೆಗಳ ಪರೀಕ್ಷೆಗೆ ಪದೇ ಪದೇ ಹಾಜರಾಗುವ ಅವಕಾಶವನ್ನು ರದ್ದುಗೊಳಿಸಿದೆ. ಈಗ, ಒಮ್ಮೆ IAS, IPS ಅಥವಾ IFS ಅಭ್ಯರ್ಥಿಯನ್ನು ನೇಮಿಸಿದ ನಂತರ, ಅವರು ಇನ್ನು ಮುಂದೆ UPSC ಪರೀಕ್ಷೆಗೆ ಪದೇ ಪದೇ ಹಾಜರಾಗಲು ಸಾಧ್ಯವಾಗುವುದಿಲ್ಲ. ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ CSE 2026 ಅಧಿಸೂಚನೆಯನ್ನು ಪರಿಶೀಲಿಸಬಹುದು. UPSC ಪರೀಕ್ಷೆಗೆ ಅರ್ಜಿ ಸಲ್ಲಿಸುವ ನಿರ್ಬಂಧದ ಬಗ್ಗೆ ನಿಯಮವೇನು? ಹೊಸ UPSC ನಿಯಮದ ಪ್ರಕಾರ, ನಾಗರಿಕ ಸೇವೆಗಳಿಗೆ ಸೇರುವ ಅಭ್ಯರ್ಥಿಗಳಿಗೆ ಕೇವಲ ಒಂದು ಪ್ರಯತ್ನವಿರುತ್ತದೆ. ಅವರು ಮೂರನೇ ಬಾರಿಗೆ UPSC ನಾಗರಿಕ ಸೇವೆಗಳ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಹೊಸ ನಿಯಮಗಳು ಹೀಗಿವೆ: ಇನ್ನೂ ಒಂದೇ ಒಂದು ಅವಕಾಶ: CSE-2025 ಅಥವಾ ಹಿಂದಿನ ವರ್ಷಗಳ ಆಧಾರದ ಮೇಲೆ ಯಾವುದೇ ಸೇವೆಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳಿಗೆ, ಅವರ…

Read More

ಬಳ್ಳಾರಿ : ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಿ.ಇಡಿ ಪದವಿಯ ಮೌಲ್ಯಮಾಪನ ಮುಗಿದ ಒಂದು ದಿನದಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಿ ಐತಿಹಾಸಿಕ ಸಾಧನೆ ಮೆರೆದಿದೆ. ಕಳೆದ ತಿಂಗಳು ಮುಕ್ತಾಯಗೊಂಡಿದ್ದ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ನ ಬಿ.ಇಡಿ ಪದವಿ ಮೌಲ್ಯಮಾಪನವನ್ನು ಸತತ 10 ದಿನಗಳಲ್ಲಿ ಪೂರೈಸಿ ಫಲಿತಾಂಶವನ್ನು ಯುಯುಸಿಎಂಎಸ್ನಲ್ಲಿ ಗುರುವಾರ ಪ್ರಕಟಿಸಿದೆ. ವಿವಿ ಅಧೀನದಲ್ಲಿರುವ 14 ಕಾಲೇಜುಗಳ ಸುಮಾರು 2,500 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಅವರು ಬರೆದಿದ್ದ 15,000 ಉತ್ತರ ಪತ್ರಿಕೆಗಳನ್ನು ಬಿ.ಇಡಿ ಕೋರ್ಸಿನ 42 ಮೌಲ್ಯಮಾಪಕರು ಎಡೆಬಿಡದೆ ಮೌಲ್ಯಮಾಪನ ನಡೆಸಿದ್ದರು. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ ಮುನಿರಾಜು ಅವರು ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಇದೊಂದು ಮೈಲಿಗಲ್ಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೀಘ್ರ ಫಲಿತಾಂಶ ಪ್ರಕಟಿಸಲು ಆದ್ಯ ಕ್ರಮಗಳನ್ನು ವಿಶ್ವವಿದ್ಯಾಲಯವು ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ. ಪರೀಕ್ಷಾಂಗ ಕುಲಸಚಿವ ಪ್ರೊ.ಎನ್ ಎಂ ಸಾಲಿ ಅವರು ಫಲಿತಾಂಶ ಪ್ರಕಟಿಸಲು ಮಾರ್ಗದರ್ಶನ ನೀಡಿರುವ ಕುಲಪತಿಗಳಿಗೆ, ಮೌಲ್ಯಮಾಪನ ಮೇಲ್ವಿಚಾರಕರಿಗೆ, ಮೌಲ್ಯಮಾಪಕರಿಗೆ, ಕಚೇರಿ ಸಿಬ್ಬಂದಿಗೆ ಅಭಿನಂದಿಸಿದ್ದಾರೆ. ಬಿ.ಇಡಿ ಪದವಿಯ ಪರೀಕ್ಷಾ ಫಲಿತಾಂಶಗಳನ್ನು ತುರ್ತಾಗಿ…

Read More

ಬೆಂಗಳೂರು :ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಜನಾ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ಬಸ್ ನಲ್ಲಿ 40 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ. ಹೆದ್ದಾರಿ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹನುಮಂತಪುರ ಗೇಟ್ ಬಳಿ ಬಸ್ ಹೊತ್ತಿ ಉರಿದಿದ್ದು, ಬೆಂಕಿಯಿಂದ ಖಾಸಗಿ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿದು ನೆಲಮಂಗಲ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ…

Read More

ಬೆಂಗಳೂರು :ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಜನಾ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹನುಮಂತಪುರ ಗೇಟ್ ಬಳಿ ಬಸ್ ಹೊತ್ತಿ ಉರಿದಿದ್ದು, ಬೆಂಕಿಯಿಂದ ಖಾಸಗಿ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿದು ನೆಲಮಂಗಲ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ನೀಡಿದ್ದು, ಭೂಮಿ ತಂತ್ರಾಂಶದಲ್ಲಿ ಆಕ್ಷೇಪಣೆ ಇಲ್ಲದ ಪ್ರಕರಣಗಳಲ್ಲಿ ಮ್ಯುಟೇಶನ್ ಅನುಮೋದನೆಯನ್ನು ಸ್ವಯಂಚಾಲಿತವಾಗಿ ನಿರ್ವಹಿಸುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಭೂಕಂದಾಯ ನಿಯಮಗಳು 1966 ರ ನಿಯಮ 66ರ ಅಡಿಯಲ್ಲಿ ಹಕ್ಕುಬದಲಾವಣೆಯ ನಮೂದನ್ನು ಪ್ರಸ್ತಾಪಿಸಿದ್ದು, ಈ ಕುರಿತು ಉಲ್ಲೇಖಿತ ಸರ್ಕಾರದ ಅಧಿಸೂಚನೆಯಲ್ಲಿ ಆಕ್ಷೇಪಣೆ ಇಲ್ಲದ ಪ್ರಕರಣಗಳಲ್ಲಿ ಹಕ್ಕುಬದಲಾವಣೆಯ ನಮೂದುಗಳು ಸ್ವಯಂಚಾಲಿತವಾಗಿ ಜಾರಿಯಾಗತಕ್ಕದ್ದು ಎಂದು ಆದೇಶಿಸಲಾಗಿರುತ್ತದೆ. ಅದರಂತೆ ನೋಂದಾಯಿತ ಮ್ಯುಟೇಶನ್‌ಗಳಿಗೆ ಅಂದರೆ ಕ್ರಯ, ವಿಭಾಗ,ದಾನ ಇತ್ಯಾದಿ ಮ್ಯುಟೇಶನ್‌ ಗಳಿಗೆ ಸಂಬಂಧಿಸಿದಂತೆ 7 ದಿನಗಳ ನೋಟೀಸು ಅವಧಿ ಹಾಗೂ ನೋಂದಾಯಿತವಲ್ಲದ ಮುಟೇಶನ್‌ಗಳಿಗೆ ಅಂದರೆ ಪೌತಿ ಮ್ಯುಟೇಶನ್ ಗಳಿಗೆ ಸಂಬಂಧಿಸಿದಂತೆ 15 ದಿನಗಳ ನೋಟೀಸು ಅವಧಿ ಇರುತ್ತದೆ. ಪ್ರಸ್ತುತ ತಂತ್ರಾಂಶದಲ್ಲಿ ಸದರಿ ನೋಟೀಸು ಅವಧಿಯ ನಂತರ ಹೋಬಳಿಯ ರಾಜಸ್ವ ನಿರೀಕ್ಷಕರು ಮುಟೇಶನ್ ಅನುಮೋದನೆ ಮಾಡುತ್ತಿದ್ದಾರೆ. ಆದರೆ ಉಲ್ಲೇಖಿತ ಸರ್ಕಾರದ ಅಧಿಸೂಚನೆಯಂತೆ ಸ್ವಯಂಚಾಲಿತ ಮುಟೇಶನ್ ಅನುಮೋದನೆ ಜಾರಿಗೊಳಿಸಿದ್ದು,…

Read More

ಕಾಲಿನಲ್ಲಿ ಕಾಣಿಸಿಕೊಳ್ಳುವ ಆಣಿ ನೋಡಲು ದೊಡ್ಡ ಸಮಸ್ಯೆಯಾಗಿ ಕಾಣಿಸದಿದ್ದರೂ, ಅವು ದೈನಂದಿನ ಚಟುವಟಿಕೆಗಳಲ್ಲಿ, ವಿಶೇಷವಾಗಿ ನಡೆಯುವಾಗ ಗಂಭೀರ ಅಸ್ವಸ್ಥತೆ ಮತ್ತು ನೋವನ್ನು ಉಂಟುಮಾಡಬಹುದು. ಆಣಿ ವಾಸ್ತವವಾಗಿ ಯಾವುವು, ಅವು ಏಕೆ ಸಂಭವಿಸುತ್ತವೆ, ಅವುಗಳನ್ನು ಹೇಗೆ ಗುರುತಿಸುವುದು, ಚಿಕಿತ್ಸೆ ಮತ್ತು ತಡೆಗಟ್ಟುವ ವಿಧಾನಗಳನ್ನು ಸ್ಪಷ್ಟವಾಗಿ ನೋಡೋಣ. ಆಣಿ ಎಂದರೇನು? ಆಣಿ ದೇಹದ ಮೇಲಿನ ಚರ್ಮದ ದಪ್ಪವಾಗುವುದರಿಂದ ಗಡ್ಡೆಯನ್ನು ರೂಪಿಸುತ್ತವೆ. ಅವು ಸಾಮಾನ್ಯವಾಗಿ ಪಾದಗಳ ಮೇಲೆ ಕಂಡುಬರುತ್ತವೆ, ಆದರೆ ಕೆಲವೊಮ್ಮೆ ಕೈಗಳ ಮೇಲೂ ರೂಪುಗೊಳ್ಳಬಹುದು. ಇದಕ್ಕೆ ಮುಖ್ಯ ಕಾರಣವೆಂದರೆ ಚರ್ಮದ ಮೇಲಿನ ನಿರಂತರ ಒತ್ತಡ ಅಥವಾ ಘರ್ಷಣೆಯಿಂದಾಗಿ ಚರ್ಮವು ರಕ್ಷಣೆಗಾಗಿ ದಪ್ಪವಾಗುತ್ತದೆ. ಆಣಿ ಗೆ ಕಾರಣಗಳು: ಅತಿಯಾದ ಒತ್ತಡ: ಪಾದಗಳ ಮೇಲಿನ ಯಾವುದೇ ಒಂದು ಬಿಂದುವಿನ ಮೇಲೆ ದೀರ್ಘಕಾಲದವರೆಗೆ ಅತಿಯಾದ ಒತ್ತಡವು ಚರ್ಮವನ್ನು ಗಟ್ಟಿಯಾಗಿಸುತ್ತದೆ. ನಡೆಯುವಾಗ ಪಾದಗಳ ಮೇಲೆ ಸಾಕಷ್ಟು ಒತ್ತಡವಿರುತ್ತದೆ. ಬರಿಗಾಲಿನಲ್ಲಿ ನಡೆಯುವುದು: ಒರಟಾದ ಮೇಲ್ಮೈಗಳಲ್ಲಿ ಬರಿಗಾಲಿನಲ್ಲಿ ನಡೆಯುವುದರಿಂದ ಪಾದಗಳ ಮೇಲಿನ ಒತ್ತಡ ಹೆಚ್ಚಾಗುತ್ತದೆ ಮತ್ತು ಆಣಿಗಳು ಉಂಟಾಗುತ್ತವೆ. ಅಧಿಕ ತೂಕ: ಅಧಿಕ…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಜನನ-ಮರಣ ನೋಂದಣಿಗೆ ಅವಕಾಶ ನೀಡಲಾಗಿದ್ದು, ಅಲ್ಲಿಯೇ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ಜನನ, ಮರಣ ಪ್ರಮಾಣ ಪತ್ರಕ್ಕಾಗಿ ಅಲೆದಾಡುತ್ತಿದ್ದೀರಾ? ಇನ್ನೀಗ ಆ ಚಿಂತೆ ಬೇಡ. ನಿಮ್ಮ ಹತ್ತಿರದ ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಅಥವಾ bsk.karnataka.gov.in ನಲ್ಲಿ ಅರ್ಜಿ ಸಲ್ಲಿಸಿ ಜನನ,ಮರಣ ಪ್ರಮಾಣ ಪತ್ರ ಪಡೆಯಿರಿ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ಈಗ ಮರಣ ನೋಂದಣಿ ಸಾಧ್ಯವಿದೆ. ಮೊದಲ ಪ್ರಮಾಣ ಪತ್ರ ಉಚಿತವಾಗಿರುತ್ತದೆ ಎಂದಿದೆ. ನಿಮಗಿದು ತಿಳಿದಿರಲಿ ಜನನ, ಮರಣ, ನಿರ್ಜೀವ ಜನನಗಳನ್ನು ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ನೋಂದಣಿ ಮಾಡಿಸಿ, ಮೊದಲ ಪ್ರಮಾಣ ಪತ್ರವನ್ನು ಇಚಿತವಾಗಿ ಪಡೆಯಬಹುದಾಗಿದೆ. ಈ ಮೂಲಕ ಪ್ರತಿಯೊಂದು ಜನನ, ಮರಣ ನೋಂದಣಿಯನ್ನು ಖಚಿತಪಡಿಸಿಕೊಳ್ಳಿ ಅಂತ ತಿಳಿಸಿದೆ. ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಪಡಿತರ ಚೀಟಿ ವಾಹನ ಚಾಲನಾ ಪರವಾನಗಿ ಚುನಾವಣಾ…

Read More

ಬೆಂಗಳೂರು : ವಡೋದರಾದ ಕೊತಾಂಬಿ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದಿದೆ. ಎರಡೇ ಬಾರಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ನಲ್ಲಿ ಟ್ರೋಫಿ ಗೆದ್ದ ಆರ್ ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಮತ್ತೊಮ್ಮೆ ಆರ್.ಸಿ.ಬಿ ಮಹಿಳೆಯರ ತಂಡ ಡಬ್ಲ್ಯೂ.ಪಿ.ಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಉತ್ಕೃಷ್ಟ ಪ್ರದರ್ಶನ ನೀಡುತ್ತಾ ಬಂದ ನಮ್ಮ ಆರ್ ಸಿಬಿ ತಂಡ, ಇಂದಿನ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ನೋಡಿ ಖುಷಿಯಾಯಿತು. ಸಂಘಟಿತ ಹೋರಾಟದ ಮೂಲಕ ಟ್ರೋಫಿ ಗೆದ್ದ ನಮ್ಮ ಆರ್.ಸಿ.ಬಿ ಯ ಹೆಣ್ಣುಮಕ್ಕಳಿಗೆ ಅಭಿನಂದನೆಗಳು. ಪಂದ್ಯದ ಕೊನೆಯವರೆಗೂ ಗೆಲುವಿಗಾಗಿ ಸಾಕಷ್ಟು ಸೆಣೆಸಿದ ಡೆಲ್ಲಿ ತಂಡದ ಆಟ ಕೂಡ ಶ್ಲಾಘನೀಯ ಎಂದು ಹೇಳಿದ್ದಾರೆ. ಫೈನಲ್ ಪಂದ್ಯದಲ್ಲಿ ಟಾಸ್…

Read More

ವಡೋದರಾ : ವಡೋದರಾದ ಕೊತಾಂಬಿ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದಿದೆ. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆರಿಸಿಕೊಂಡಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 203 ರನ್ ಕಲೆಹಾಕಿತು.204 ರನ್ಗಳ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 19.4 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಕಲೆಹಾಕಿ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಫೈನಲ್ನಲ್ಲಿ ಅತಿದೊಡ್ಡ ಚೇಸ್ ಮಾಡಿದ ದಾಖಲೆ ಬರೆದಿದೆ. 2026 ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ ತಂಡವು 203…

Read More