Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರೋಟಿನ್ ಚೆಕಪ್ ಗಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ತಮ್ಮ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.
ದಾವಣಗೆರೆ :ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕಾಭಿವೃದ್ದಿಯಾಗುತ್ತಿದ್ದು ಯೋಜನೆಗಳ ಅನುಷ್ಟಾನಕ್ಕೆ ಅಪಸ್ವರವೆತ್ತಿದವರು ರಾಜ್ಯಕ್ಕೆ ಬಂದು ಗ್ಯಾರಂಟಿ ಯೋಜನೆಗಳ ಅಧ್ಯಯನ ಮಾಡುವಂತಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು. ಅವರು ಸೋಮವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಇಂಧನ, ಸಾರಿಗೆ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳಿಂದ ಏರ್ಪಡಿಸಲಾದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕಚೇರಿ ಉದ್ಘಾಟನೆ ನೆರವೇರಿಸಿ ಸಮಾರಂಭದಲ್ಲಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದು ಕಷ್ಟ, ಇದರಿಂದ ಆರ್ಥಿಕ ನಷ್ಟವಾಗಿ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ವಿರೋಧ ಪಕ್ಷದವರು ಮಾತನಾಡುತ್ತಿದ್ದರು. ಆದರೆ ಯೋಜನೆಗಳನ್ನು ಕಳೆದೆರಡು ವರ್ಷಗಳಿಂದ ಯಶಸ್ವಿಯಾಗಿ ಅನುಷ್ಟಾನ ಮಾಡಲಾಗಿದೆ. ಯಶಸ್ವಿಯಾದ ಯೋಜನೆಗಳ ಕುರಿತು ವಿವಿಧ ರಾಜ್ಯಗಳು ಕರ್ನಾಟಕಕ್ಕೆ ಬಂದು ಅಧ್ಯಯನ ಮಾಡುವಂತಾಗಿದೆ. ಪ್ರತಿ ಕುಟುಂಬಕ್ಕೆ 4 ರಿಂದ 6 ಸಾವಿರದಷ್ಟು ಯೋಜನೆಗಳ ಲಾಭ ಸಿಗುತ್ತಿರುವುದರಿಂದ ಜನರ…
ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ದಾಖಲಿಸುತ್ತಿರುವ ಸ್ವಯಂ ಘೋಷಣೆಯನ್ನು ಇನ್ನೂ ಮುಂದೆ ಮೂರು ತಿಂಗಳಿಗೊಮ್ಮೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ. 2023 ಅಥವಾ 2024ನೇ ಸಾಲಿನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮ್ ನಲ್ಲಿ ತೇರ್ಗಡೆಯಾಗಿ, ಇನ್ನೂ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸದೇ ಇರುವ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ ವೆಬ್ಸೈಟ್ https://sevasindhugs.karnataka.gov.in ಮೂಲಕ ಗ್ರಾಮ್ ಒನ್ , ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೆ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಯುವನಿಧಿ ಸಹಾಯವಾಣಿ ಸಂಖ್ಯೆ : 18005997154ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪ್ರಕಟಣೆ ತಿಳಿಸಿದೆ.
ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಒಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಒಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಹತ್ಯೆಯಾಗಿದ್ದು, ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ವಾಬಸಂದ್ರ ಬಳಿ ನಡೆದಿದೆ. ಪ್ರಿಯದರ್ಶಿನಿ (21) ಎಂಬ ಮಹಿಳೆಯನ್ನು ಪತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಕಳೆದ ಒಂದು ವಾರದ ಹಿಂದೆ ದಂಪತಿಗಳು ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರು. ಇವರಿಗೆ ಒಂದು ಮಗು ಕೂಡ ಇತ್ತು. ಹೆಂಡತಿಯನ್ನು ಕೊಂದ ಗಂಡ ಎಸ್ಕೇಪ್ ಆಗಿದ್ದನು. ಮಗು ಅಳುತ್ತಿದ್ದ ಶಬ್ದ ಕೇಳಿ ಮನೆಯೊಳಗೆ ಬಂದ ಮನೆ ಮಾಲೀಕಿ ಕೊಲೆ ನಡೆದಿದ್ದನ್ನು ಕಂಡು ಬೆಚ್ಚಿಬಿದ್ದು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, ಅನ್ನ ಸುವಿಧಾ ಯೋಜನೆಯಡಿ 75 ವರ್ಷ ಮೇಲ್ಪಟ್ಟವರಿಗೇ ಮನೆ ಬಾಗಿಲಿಗೆ ಪಡಿತರ ವಿತರಣೆ ಮಾಡಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಆಹಾರ ಇಲಾಖೆ ಪ್ರಗತಿ ಪರಿಶೀಲನೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮಾತನಾಡಿದ ಅವರು, ಮನೆ ಬಾಗಿಲಿಗೆ ಪಡಿತರ ತಲುಪಿಸುವ ಅನ್ನ ಸುವಿಧಾ ಯೋಜನೆಯನ್ನು ವಿಸ್ತರಿಸಲು ಆಹಾರ ಇಲಾಖೆ ತೀರ್ಮಾನಿಸಿದ್ದು, 75 ವರ್ಷ ಮೇಲ್ಪಟ್ಟವರು ಯೋಜನೆಯ ಫಲಾನುಭವಿಗಳಾಗಲಿದ್ದಾರೆ. 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ‘ಅನ್ನ-ಸುವಿಧಾ’ ಯೋಜನೆ ಜಾರಿಗೊಳಿಸಲಾಗಿತ್ತು. ಇದೀಗ 75 ವರ್ಷ ಮೇಲ್ಪಟ್ಟವರ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ. 2023ರ ಮಾರ್ಚ್ ಅಂತ್ಯದವರೆಗೆ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಂಡು ಅರ್ಹರಿಗೆ ಹೊಸ ಪಡಿತರ ಚೀಟಿ ವಿತರಿಸಬೇಕು. ಸರ್ಕಾರದ ಅನುಮತಿ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ…
ನವದೆಹಲಿ : ಪಹಲ್ಗಾಮ ಭಯೋತ್ಪಾದಕ ದಾಳಿ ಬಳಿಕ ಭರ್ಜರಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಯು ಇದೀಗ ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ನಾಕಾ ಚೆಕ್ ಕಾರ್ಯಾಚರಣೆಯ ಸಮಯದಲ್ಲಿ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿವೆ. ಹೌದು, ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದ್ದು, ಬಂಧಿತರಿಂದ ಒಂದು ಪಿಸ್ತೂಲ್, ಒಂದು ಗ್ರೆನೇಡ್ ಮತ್ತು 15 ಜೀವಂತ ಸುತ್ತುಗಳು ಸೇರಿದಂತೆ ಗಣನೀಯ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲು ಕಾರಣವಾಯಿತು. ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ಭಯೋತ್ಪಾದಕರಿಂದ 26 ಜನರು ಸಾವನ್ನಪ್ಪಿದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪಡೆಗಳು ಭದ್ರತೆಯನ್ನು ಹೆಚ್ಚಿಸಿವೆ ಮತ್ತು ಪ್ರದೇಶದಾದ್ಯಂತ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಬೈಸರನ್ ಕಣಿವೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಮೂವರು ಭಯೋತ್ಪಾದಕರು ನಡೆಸಿದ ಪಹಲ್ಗಾಮ್ ದಾಳಿಯು 2008 ರ ಮುಂಬೈ ದಾಳಿಯ ನಂತರ ಭಾರತದಲ್ಲಿ ನಾಗರಿಕರ ಮೇಲೆ ನಡೆದ…
ರಾಶಿ – ದಿಕ್ಕು – ಗ್ರಹ 1.ಮೇಷ-ಪೂರ್ವ-ಮಂಗಳ. 2.ವೃಷಭ-ಪೂರ್ವ-ಶುಕ್ರ. 3.ಮಿಥುನ-ಆಗ್ನೇಯ-ಬುಧ. 4.ಕರ್ಕಾಟಕ-ದಕ್ಷಿಣ-ಚಂದ್ರ . 5.ಸಿಂಹ-ದಕ್ಷಿಣ-ಸೂರ್ಯ. 6.ಕನ್ಯಾ-ನ್ಯೆರುತ್ಯ-ಬುಧ. 7.ತುಲಾ-ಪಶ್ಚಿಮ-ಶುಕ್ರ. 8.ವೃಶ್ಚಿಕ-ಪಶ್ಚಿಮ-ಮಂಗಳ. 9.ಧನಸ್ಸು-ವಾಯುವ್ಯ-ಗುರು. 10.ಮಕರ-ಉತ್ತರ-ಶನಿ. 11.ಕುಂಭ-ಉತ್ತರ-ಶನಿ. 12.ಮೀನ-ಈಶಾನ್ಯ-ಗುರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ…
ನವದೆಹಲಿ : ಗೃಹ ವ್ಯವಹಾರಗಳ ಸಚಿವಾಲಯ (MHA) ಮೇ 7 ರಂದು ದೇಶದ 244 ವರ್ಗೀಕೃತ ಜಿಲ್ಲೆಗಳಲ್ಲಿ ಅಣಕು ಕವಾಯತುಗಳೊಂದಿಗೆ ಸನ್ನದ್ಧತೆಯನ್ನು ಹೆಚ್ಚಿಸುತ್ತಿದೆ, ವಾಯುದಾಳಿ ಎಚ್ಚರಿಕೆ ಸೈರನ್ಗಳಿಂದ ಹಿಡಿದು ಸ್ಥಳಾಂತರಿಸುವ ಸಿದ್ಧತೆಯವರೆಗೆ, 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗಿನ ಉದ್ವಿಗ್ನತೆ ಕುದಿಯುತ್ತಿರುವುದರಿಂದ, ಬ್ಲ್ಯಾಕೌಟ್ ಕ್ರಮಗಳವರೆಗೆ ಎಲ್ಲವನ್ನೂ ಪರೀಕ್ಷಿಸುತ್ತಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (UTs)ಾದ್ಯಂತ ನಾಗರಿಕ ರಕ್ಷಣಾ ಕಾರ್ಯವಿಧಾನಗಳ ಸನ್ನದ್ಧತೆಯನ್ನು ನಿರ್ಣಯಿಸುವುದು ಮತ್ತು ಹೆಚ್ಚಿಸುವುದು ಈ ವ್ಯಾಯಾಮದ ಗುರಿಯಾಗಿದೆ ಎಂದು ಕೇಂದ್ರ ಗೃಹ ಸಚಿವರು ಮೇ 5 ರ ಸೋಮವಾರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. “ಪ್ರಸ್ತುತ ಭೌಗೋಳಿಕ-ರಾಜಕೀಯ ಸನ್ನಿವೇಶದಲ್ಲಿ, ಹೊಸ ಮತ್ತು ಸಂಕೀರ್ಣ ಬೆದರಿಕೆಗಳು/ಸವಾಲುಗಳು ಹೊರಹೊಮ್ಮಿವೆ, ಆದ್ದರಿಂದ, ರಾಜ್ಯಗಳು/UTs ನಲ್ಲಿ ಅತ್ಯುತ್ತಮ ನಾಗರಿಕ ರಕ್ಷಣಾ ಸನ್ನದ್ಧತೆಯನ್ನು ಎಲ್ಲಾ ಸಮಯದಲ್ಲೂ ನಿರ್ವಹಿಸುವುದು ವಿವೇಕಯುತವಾಗಿದೆ” ಎಂದು ಡೈರೆಕ್ಟರೇಟ್ ಜನರಲ್ ಅಗ್ನಿಶಾಮಕ ಸೇವೆ, ನಾಗರಿಕ ರಕ್ಷಣಾ ಮತ್ತು ಗೃಹರಕ್ಷಕ ದಳದ ಸಂವಹನ ತಿಳಿಸಿದೆ. “ಗೃಹ ಸಚಿವಾಲಯವು ಮೇ 7, 2025…