Author: kannadanewsnow57

ಬೆಂಗಳೂರು : 01.04.2006 ಅಧಿಸೂಚನೆಗಳ ಪೂರ್ವದಲ್ಲಿನ ನೇಮಕಾತಿ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮುಂದುವರೆದ ಆದೇಶ ಹೊರಡಿಸಿದೆ. ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರಿ ಆದೇಶವನ್ನು ಹೊರಡಿಸಲಾಗಿರುತ್ತದೆ. ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ:30.06.2024ರೊಳಗ ಅಭಿಮತವನ್ನು ಪಡೆದು ಕ್ರೋಢೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿತ್ತು. ಮುಂದುವರೆದು, ದಿನಾಂಕ:24.01.2024ರ ಸರ್ಕಾರಿ ಆದೇಶದನ್ವಯ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್‌.ಪಿ.ಎಸ್. ಪ್ರಾನ್ ಖಾತೆಯಲ್ಲಿ ಜಮೆಯಾಗಿರುವ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮೇಲೆ…

Read More

ಬೆಂಗಳೂರು: ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ. ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾದಿsಪತ್ಯ, ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ, ಭೂಕಂದಾಯ ಸಂಗ್ರಹಣೆ, ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ ಪ್ರಮುಖ ಜವಾಬ್ದಾರಿಗಳಾಗಿದ್ದವು. ಪ್ರಾಚೀನ ಭಾರತದಲ್ಲಿ ವಾಸ್ತವವಾಗಿ ಸರ್ಕಾರದಲ್ಲಿ ಎರಡು ಇಲಾಖೆಗಳು ಮಾತ್ರ ಅಸ್ತಿತ್ವದಲ್ಲಿರುತ್ತಿದ್ದವು. ಮೊದಲನೆಯದೆಂದರೆ ಭೂನಿರ್ವಹಣೆ ಮತ್ತು ಭೂಕಂದಾಯ ಇಲಾಖೆ ಮತ್ತು ಎರಡನೆಯದೆಂದರೆ ರಾಜ್ಯವನ್ನು ಬಾಹ್ಯ ದಾಳಿಯ ವಿರುದ್ಧ ಹೋರಾಡಲು ಅಗಾಧವಾದ ಭೂಸೇನೆಯ ರಕ್ಷಣಾ ಇಲಾಖೆ. ಮೊದಲನೇ ಇಲಾಖೆಯು ರಾಜಸ್ವ ಸಂಗ್ರಹಣೆ ಹಾಗೂ ಒಳಾಡಳಿತ ನಿರ್ವಹಣೆಯನ್ನು ಹಾಗೂ ಎರಡನೇ ಇಲಾಖೆಯು ಪ್ರಾಂತ್ಯಗಳ ರಕ್ಷಣೆ ಮತ್ತು ಸಮಗ್ರತೆಯನ್ನು ಬಾಹ್ಯದಾಳಿಗೀಡಾಗುವುದರಿಂದ ರಕ್ಷಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಸಮಾಜವು…

Read More

ಬೆಂಗಳೂರು : ಕರ್ನಾಟಕ ಸರ್ಕಾರದ ಮಂತ್ರಿ, ಶಾಸಕರ ವೇತನ ಹೆಚ್ಚಳ ಮಾಡುವ ಸಂಬಂಧ ವಿಧಾನಸಭೆಯಲ್ಲಿ ಭತ್ಯೆ ತಿದ್ದುಪಡಿ ವಿಧೇಯಕವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಶಾಸಕರು, ಸಚಿವರು, ಸಿಎಂ, ಸಭಾಪತಿಗಳ ಸಂಬಳ ಹೆಚ್ಚಳ ಮಾಡುವ ವಿಧೇಯಕವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ. ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ. ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 2) ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ; ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ రాజ్య ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:- 1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ಅಧಿನಿಯಮ, 2025 ಎಂದು ಕರೆಯತಕ್ಕದ್ದು. (2) ಇದು ಈ…

Read More

ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿಯ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಕೂಡಲೇ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಕೂಡಲೇ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಅಬ್ದುಲ್ ರೆಹಮಾನ್ ನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಜೆಟ್‌ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, 2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ, ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಆಗಿದೆ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್…

Read More

ಬೆಂಗಳೂರು : ಹನಿಟ್ರ್ಯಾಪ್‌ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದಲ್ಲಿ ಯಾರೇ ಆಗಿದ್ದರೂ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ. ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದರು. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ…

Read More

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್.22ರ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯಲ್ಲ, ಬಂದ್ ನಡೆದೇ ನಡೆಯುತ್ತದೆ. ಕೆಲವು ಸಂಘಟನೆಗಳು ಬೆಂಬಲ ನೀಡಿದೆ. ಎಲ್ಲರೂ ಬೆಂಬಲ ಕೊಡಿ. ನಮ್ಮನ್ನು ಬಂಧಿಸಲಿ, ಏನು ಬೇಕಾದರೂ ಮಾಡಲಿ ನಾವು ಬಂದ್ ಮಾಡೇ ಮಾಡುತ್ತೇವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಇರಲಿದೆ ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ…

Read More

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ  ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ ಮತ್ತು ಕರ್ನಾಟಕ II PUC ಪರೀಕ್ಷೆ 1 ಕ್ಕೆ ಹಾಜರಾದ ಅಭ್ಯರ್ಥಿಗಳಿಗೆ ಆಕ್ಷೇಪಣೆ ವಿಂಡೋವನ್ನು ತೆರೆದಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು  ಕೀ ಉತ್ತರಗಳನ್ನು ಪರಿಶೀಲಿಸಲು ಬಯಸಿದರೆ, kseab.karnataka.gov.in ನಲ್ಲಿ KSEAB ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. 35 ವಿಷಯಗಳಿಗೆ ಮಾದರಿ ಉತ್ತರಗಳನ್ನು KSEAB ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಉತ್ತರ ಕೀಲಿಯನ್ನು ಪರಿಶೀಲಿಸಿದ ನಂತರ, ಅಭ್ಯರ್ಥಿಗಳು ಉತ್ತರ ಕೀಲಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳನ್ನು ಹೊಂದಿದ್ದರೆ, ಅಧಿಕಾರಿಗಳು ತೆರೆದಿರುವ ಆಕ್ಷೇಪಣೆ ವಿಂಡೋದ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವರು ಅವಕಾಶವನ್ನು ಬಳಸಿಕೊಳ್ಳಬಹುದು. ಕರ್ನಾಟಕ II PUC ಪರೀಕ್ಷೆ 1 ಕೀ ಉತ್ತರಗಳನ್ನು ಚೆಕ್ ಮಾಡುವುದು ಹೇಗೆ? ಹಂತ 1: ಕೆಎಸ್ಇಎಬಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: kseab.karnataka.gov.in ಹಂತ 2: “2025 ರ ದ್ವಿತೀಯ ಪಿಯು ಪರೀಕ್ಷೆ…

Read More

ಬೆಂಗಳೂರು : ಭಾರತದಲ್ಲಿ 14 ಲಕ್ಷಕ್ಕೂ ಹೆಚ್ಚು ಶಾಲೆಗಳಿವೆ. ಅದು ಬೆಂಗಳೂರು ಆಗಿರಲಿ ಅಥವಾ ದೆಹಲಿ ಆಗಿರಲಿ ಅಥವಾ ಮುಂಬೈ ಆಗಿರಲಿ… ಪ್ರತಿಯೊಂದು ನಗರದಲ್ಲಿಯೂ ಶಾಲೆಗಳ ಸಾಲು ಇರುತ್ತದೆ. ವಿಶೇಷವೆಂದರೆ ಪ್ರತಿಯೊಂದು ಶಾಲೆಯು ಇತರ ಶಾಲೆಗಳಿಗಿಂತ ಉತ್ತಮವಾಗಿರುತ್ತದೆ, ಅಂದರೆ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಖಾತರಿಪಡಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪೋಷಕರಿಗೆ ಉತ್ತಮ ಶಾಲೆಯನ್ನು ಆಯ್ಕೆ ಮಾಡುವುದು ಕಷ್ಟಕರವಾಗುತ್ತದೆ. ಇದಕ್ಕಾಗಿ ಕೆಲವರು ಶಾಲೆಗಳ ಶ್ರೇಯಾಂಕವನ್ನು ಪರಿಶೀಲಿಸುತ್ತಾರೆ ಮತ್ತು ಕೆಲವರು ವೃತ್ತಿ ಸಲಹೆಗಾರರಿಂದ ಸಲಹೆ ಪಡೆಯುತ್ತಾರೆ. ನಿಮ್ಮ ಮಗುವಿಗೆ ಸರಿಯಾದ ಶಾಲೆಯನ್ನು ಹೇಗೆ ಆಯ್ಕೆ ಮಾಡುವುದು? ನಿಮ್ಮ ಮಗುವನ್ನು ನರ್ಸರಿ ಅಥವಾ 6 ನೇ ತರಗತಿಗೆ ಸೇರಿಸುತ್ತಿದ್ದರೂ, ಅವನ ಅಡಿಪಾಯ ಶಾಲೆಯಲ್ಲಿ ಮಾತ್ರ ಬಲಗೊಳ್ಳುತ್ತದೆ ಎಂಬುದನ್ನು ನೆನಪಿನಲ್ಲಿಡಿ. ಆದ್ದರಿಂದ, ನಿಮ್ಮ ಮಗುವನ್ನು ಯಾವುದೇ ಶಾಲೆಗೆ ಸೇರಿಸುವಾಗ, ಶುಲ್ಕಗಳು ಅಥವಾ ಪ್ರವೇಶ ಪರೀಕ್ಷೆಯಂತಹ ಅಂಶಗಳ ಜೊತೆಗೆ ಇತರ ಹಲವು ಅಂಶಗಳನ್ನು ಪರಿಗಣಿಸುವುದು ಮುಖ್ಯ. ನಿಮ್ಮ ಒಂದು ಸಣ್ಣ ತಪ್ಪು ಕೂಡ ಮಗುವಿನ ಭವಿಷ್ಯಕ್ಕೆ ಹಾನಿಕಾರಕವಾಗಬಹುದು. ನಿಮ್ಮ ಮಗುವಿಗೆ…

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿದ್ದು, ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತಿಯೋರ್ವ ಪತ್ನಿಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಬೆಂಗಳೂರಿನ ಸದ್ದುಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿಲ್ಪಾ (39) ಎಂಬ ಮಹಿಳೆಯನ್ನು ಪತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More