Author: kannadanewsnow57

ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ಅವಧಿಯಲ್ಲಿ ನೈತಿಕ ಮೌಲ್ಯದ ಶಿಕ್ಷಣ ಬೋಧನೆಯನ್ನು ಕಡ್ಡಾಯವಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನೈತಿಕ ಮೌಲ್ಯದ ಶಿಕ್ಷಣದ ಜೊತೆಗೆ ಮಕ್ಕಳ ವಯೋಮಾನಕ್ಕೆ ಅನುಗುಣವಾಗಿ 8ರಿಂದ 12ನೇ ತರಗತಿ ಮಕ್ಕಳಿಗೆ ಕಡ್ಡಾಯವಾಗಿ ವಾರದಲ್ಲಿ 2 ದಿನ ಲೈಂಗಿಕ ಶಿಕ್ಷಣ ನೀಡಲಾಗುವುದು. ಲೈಂಗಿಕ ಶಿಕ್ಷಣ ಎಂದರೆ ತಪ್ಪಾಗಿ ಭಾವಿಸುವಂತಿಲ್ಲ. ಮಕ್ಕಳ ವಯಸ್ಸಿಗೆ ಅನುಗುಣವಾಗಿ ದೇಹದಲ್ಲಿ ಬಿಡುಗಡೆಯಾಗುವ ಹಾರ್ಮೋನುಗಳು, ಸಹಜವಾಗಿ ಆಗುವ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳ ಬಗ್ಗೆ ತಿಳಿವಳಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.

Read More

ಹಾವೇರಿ : ಪ್ರಿಯತಮನಿಂದಲೇ ಹತ್ಯೆಗೀಡಾದ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾಹಿತಿ ನೀಡಿದ್ದು, ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಕ್ಷೇತ್ರದ ಶಾಸಕ ಯು.ಬಿ.ಬಣಕಾರ್‌ಅವ ರೊಂದಿಗೆ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಸ್ವಾತಿ ಹತ್ಯೆ ಪ್ರಕರಣ ವಿವರಿಸಿ ಪರಿಹಾರ ಬಿಡುಗಡೆ ಮಾಡಲು ಮನವಿ ಮಾಡಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Read More

ಬೆಂಗಳೂರು : ಬಡ್ತಿ ನಿರೀಕ್ಷೆಯಲ್ಲಿರುವ ರಾಜ್ಯದ ಪ್ರಾಥಾಮಿಕ ಶಾಲಾ ಶಿಕ್ಷರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, 58 ಸಾವಿರ ಶಿಕ್ಷಕರ ಬಡ್ತಿಗೆ ಶೀಘ್ರ ತಿದ್ದುಪಡಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಪದವಿ ಹಾಗೂ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಸುಮಾರು 58 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6ರಿಂದ 8ನೇ ತರಗತಿ ಬೋಧನೆಯ ಪದವೀಧರ ಶಿಕ್ಷಕ ವೃಂದಕ್ಕೆ ಬಡ್ತಿ ನೀಡುವ ಸಂಬಂಧ 2017ರ ಪ್ರಾಥ ಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ (ಸಿಅಂಡ್‌ ಆ‌ರ್) ಶೀಘ್ರ ತಿದ್ದುಪಡಿ ತರಲಾಗುವುದು ಎಂದು ತಿಳಿಸಿದ್ದಾರೆ. ಎನ್‌ಸಿಟಿ ಇಯು ಪ್ರಾಥಮಿಕ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಶಿಕ್ಷಕರಿಗೆ ಪಿಯುಸಿ, ಟಿಸಿಎಸ್/ಡಿಇಡಿ ಮತ್ತು 6 ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಪದವಿ ಮತ್ತು ಟಿಸಿಎಸ್‌ /ಡಿ ಇಡಿ ವಿದ್ಯಾರ್ಹತೆ ನಿಗದಿಪಡಿಸಿರುತ್ತದೆ. ಅದರಂತೆ 2027 ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಿಅಂಡ್‌ಆರ್‌ಗೆ ತಿದ್ದುಪಡಿ…

Read More

ನವದೆಹಲಿ: ಭಾರತದ ಅತ್ಯಂತ ಶ್ರೀಮಂತ ಮತ್ತು ಬಡ ಶಾಸಕರು ಯಾರು ಎಂದು ನಿಮಗೆ ತಿಳಿದಿದೆಯೇ? ಈ ಸಂಬಂಧ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯನ್ನು ಬಿಡುಗಡೆ ಮಾಡಿದೆ. ಎಡಿಆರ್ ವರದಿಯ ಪ್ರಕಾರ, ಮುಂಬೈನ ಘಾಟ್ಕೋಪರ್ ಪೂರ್ವದ ಬಿಜೆಪಿ ಶಾಸಕ ಪರಾಗ್ ಶಾ ಭಾರತದ ಅತ್ಯಂತ ಶ್ರೀಮಂತ ಶಾಸಕ. ಇವರ ಆಸ್ತಿಯ ಮೌಲ್ಯ ಸುಮಾರು 3400 ಕೋಟಿ ರೂ. ಅವರ ನಂತರ ಕರ್ನಾಟಕದ ಕನಕಪುರದ ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಅವರ ಆಸ್ತಿ 1,413 ಕೋಟಿ ರೂ.ಗಳಿಗಿಂತ ಹೆಚ್ಚು. ಪರಾಗ್ ಶಾ ಅತ್ಯಂತ ಶ್ರೀಮಂತ ಶಾಸಕ ಎಡಿಆರ್ ವರದಿಯು ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುವ ಮೊದಲು ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸುತ್ತದೆ. ಈ ಸಂಶೋಧನೆಯು 28 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ 4092 ಶಾಸಕರನ್ನು ಒಳಗೊಂಡಿದೆ. ಈ ವರದಿಯ ಪ್ರಕಾರ, ಬಿಜೆಪಿಯ ಪರಾಗ್ ಶಾ ಅತ್ಯಂತ ಶ್ರೀಮಂತ ಶಾಸಕರು. ಪಶ್ಚಿಮ ಬಂಗಾಳದ ನಿರ್ಮಲ್ ಕುಮಾರ್ ಧಾರಾ ಅತಿ ಕಡಿಮೆ ಆಸ್ತಿ ಹೊಂದಿರುವ ಶಾಸಕರಾಗಿದ್ದಾರೆ.…

Read More

ಬೆಂಗಳೂರು : ನಕಲಿ ದಾಖಲೆ ನೀಡಿ ಪಡಿತರ ಚೀಟಿ ಪಡೆದುಕೊಂಡ ಅನರ್ಹರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 21,980 ಪಡಿತರ ಕಾರ್ಡ್ ಗಳನ್ನು ರದ್ದು ಪಡಿಸಿದೆ. ಹೌದು, ಆದಾಯ ತೆರಿಗೆ ಕಟ್ಟುವ ಹಾಗೂ ಸರ್ಕಾರಿ ನೌಕರಿ ಹೊಂದಿರುವ ಕುಟುಂಬದವರು ಬಿಪಿಎಲ್‌ ಕಾರ್ಡನ್ನು ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿರುವ ಕಾರ್ಡಗಳನ್ನು ಪತ್ತೆ ಹಚ್ಚುವ ಮೂಲಕ ಆಹಾರ ಇಲಾಖೆ 2024-20250 21.980 ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಬೆಳಗಾವಿಯಲ್ಲಿ 1482, ಬೀದರ 814, ಹಾಸನ 1030, ಬಾಗಲಕೋಟೆಯಲ್ಲಿ 995, ಬಳ್ಳಾರಿಯಲ್ಲಿ 256, ಬೆಂಗಳೂರು ಈಸ್ಟ್ 531, ಹಾವೇರಿ 333, ಕಲಬುರಗಿ 1497, ಮೈಸೂರು 2441, ತುಮಕೂರು 1044, ಕೊಪ್ಪಳ 506, ಮಂಡ್ಯ 1168, ವಿಜಯನಗರ 204, ವಿಜಯಪುರ 654, ಯಾದಗಿರಿ 139 ಸೇರಿದಂತೆ ಒಟ್ಟು 35 ಜಿಲ್ಲೆಗಳಲ್ಲಿ 21,980 ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇನ್ನು ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ.…

Read More

ನವದೆಹಲಿ : ಭಾರತ ಸರ್ಕಾರವು ಏಪ್ರಿಲ್ 1, 2025 ರಿಂದ ಇನ್‌ಪುಟ್ ಸೇವಾ ವಿತರಕ (ISD) ಚೌಕಟ್ಟನ್ನು ಕಡ್ಡಾಯಗೊಳಿಸಿದೆ. ಈ ಅವಶ್ಯಕತೆಯು ಕೇಂದ್ರೀಕೃತ ಇನ್‌ಪುಟ್ ಸೇವಾ ಇನ್‌ವಾಯ್ಸ್‌ಗಳನ್ನು ಸ್ವೀಕರಿಸುವ ಮತ್ತು ವಿವಿಧ ಸ್ಥಳಗಳಲ್ಲಿ ಇನ್‌ಪುಟ್ ತೆರಿಗೆ ಕ್ರೆಡಿಟ್ (ಐಟಿಸಿ) ವಿತರಿಸುವ ಕೈಗಾರಿಕೆಗಳನ್ನು ಗುರಿಯಾಗಿರಿಸಿಕೊಂಡಿದೆ. ಹಿಂದೆ ಐಚ್ಛಿಕವಾಗಿದ್ದ ಐಎಸ್‌ಡಿ ನೋಂದಣಿ ಈಗ ಎಲ್ಲಾ ವ್ಯವಹಾರಗಳಿಗೆ ಕಡ್ಡಾಯವಾಗಿದೆ. ಇನ್‌ಪುಟ್ ಸೇವಾ ವಿತರಕರು GST-ನೋಂದಾಯಿತ ಘಟಕವಾಗಿದ್ದು ಅದು ಇನ್‌ಪುಟ್ ಸೇವಾ ಇನ್‌ವಾಯ್ಸ್‌ಗಳನ್ನು ನಿರ್ವಹಿಸುತ್ತದೆ. ಇದು ಸಂಸ್ಥೆಯೊಳಗಿನ ವಿವಿಧ ಶಾಖೆಗಳು ಅಥವಾ ಘಟಕಗಳಿಗೆ ಇನ್‌ಪುಟ್ ತೆರಿಗೆ ಕ್ರೆಡಿಟ್ ಅನ್ನು ಹಂಚುತ್ತದೆ. ಮೂಲಭೂತವಾಗಿ ಐಎಸ್‌ಡಿ ವಿವಿಧ ಕಚೇರಿಗಳು ಬಳಸುವ ಸೇವೆಗಳಿಗೆ ಪಡೆದ ಐಟಿಸಿಯನ್ನು ಆ ಕಚೇರಿಗಳ ನಡುವೆ ಸರಿಯಾಗಿ ವಿತರಿಸಲಾಗಿದೆಯೆ ಎಂದು ಖಚಿತಪಡಿಸುತ್ತದೆ. ಜಿಎಸ್ಟಿಯಲ್ಲಿ ಐಎಸ್ಡಿಯ ಪಾತ್ರ ಕೆಲವು ಸೇವೆಗಳಿಗೆ ಕೇಂದ್ರೀಯವಾಗಿ GST ಪಾವತಿಸುವ ಬಹು ಕಚೇರಿಗಳನ್ನು ಹೊಂದಿರುವ ಸಂಸ್ಥೆಗಳಿಗೆ ISDಗಳು ಮುಖ್ಯವಾಗಿವೆ. ವಿವಿಧ ಕಂಪನಿ ಕಚೇರಿಗಳು ಪಡೆಯುವ ಸೇವೆಗಳಿಗೆ ಐಟಿಸಿ ಹಂಚಿಕೆ ಮಾಡುವುದು ಅವರ ಪ್ರಾಥಮಿಕ ಪಾತ್ರವಾಗಿದೆ.…

Read More

ಬೆಂಗಳೂರು : ಖಜಾನೆ-2ರ ತಂತ್ರಾಂಶದ ಮುಖಾಂತರ ವಯೋ ನಿವೃತ್ರ/ ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿ ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿ ವಿವಿಧ ಪಾತ್ರದಾರಿಗಳು ಅನುಸರಿಸಬೇಕಾದ ಕ್ರಮಗಳು ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 1. DDO a. ಡಿಡಿಓ ರವರು ನಿವೃತ್ರ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಖಜಾನೆ-2 ರ ತಂತ್ರಾಂಶದ ಮುಖಾಂತರ ಮಂಜೂರು ಮಾಡುವುದು ಮತ್ತು ನಿಯಮಗಳ ಅನುಸಾರ ಭೌತಿಕ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಹಾಲೇಖಪಾಲರಿಗೆ ಸಲ್ಲಿಸುವುದು. ಭೌತಿಕ ಅರ್ಜಿಗಳನ್ನು ಸಲ್ಲಿಸುವ ಮುಖ ಪುಟದಲ್ಲಿ ಖಜಾನೆ-2 ರಲ್ಲಿ ಸೃಜನೆಗೊಳ್ಳುವ Case Number ನಮೂದಿಸಿ ಹಾಗೂ Form-7 ಮತ್ತು Form 7A ಅನ್ನು ಕಡ್ಡಾಯವಾಗಿ ಲಗತ್ತಿಸಿ ಸಲ್ಲಿಸಬೇಕಾಗಿರುತ್ತದೆ. b. ಡಿಡಿಓ ರವರು ಮೇಲಿನ ಕ್ರ.ಸಂ 1(a) ಪಿಂಚಣಿ ಅರ್ಜಿಗಳನ್ನು ಹೊರತುಪಡಿಸಿ ಇತರೆ ಪಿಂಚಣಿ ಅರ್ಜಿಗಳನ್ನು (ಉದಾ: ಕುಟುಂಬ ಪಿಂಚಣಿ) ನಿಯಮಾನುಸಾರ ಈ ಹಿಂದಿನಂತೆ ಮಹಾಲೇಖಪಾಲರಿಗೆ ಸಲ್ಲಿಸುವುದು. c. ಡಿಡಿಓ ರವರಿಗೆ ಖಜಾನೆ-2 ರ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ಕೆಲವೊಂದು ಇಲಾಖೆ/ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಗೆ ಅರ್ಹ ಅವಲಂಬಿತರು ಯಾರು? ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ನಿಯಮ 2ರಲ್ಲಿನ “ಕುಟುಂಬ” (Family) ಅಂದರೆ, ಸರ್ಕಾರಿ ನೌಕರರ ಪತಿ ಅಥವಾ ಪತ್ನಿ b. ತಂದೆ ಮತ್ತು ತಾಯಿ (ಮಲತಾಯಿಯನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ -ಕುಟುಂಬ ಪಿಂಚಣಿ ರೂ. 8,500/- ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರಬಾರದು. C. ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರಬೇಕು ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡತೆ) 3. KASS ಯೋಜನೆಗೆ ಒಳಪಡದ ನೌಕರರ ವರ್ಗ ಸಾರ್ವಜನಿಕ ವಲಯದ (public sector…

Read More

ಬೆಂಗಳೂರು : ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ 21 ರ ನಾಳೆಯಿಂದ ಆರಂಭವಾಗಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು ಅನುಸರಿಬೇಕಾದ ಸೂಚನೆಗಳು ಇಲ್ಲಿದೆ. ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸಬರು, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯವ್ಯಾಪಿ ಪರೀಕ್ಷೆಗೆ 15881 ಶಿಕ್ಷಣ ಸಂಸ್ಥೆಗಳು ನೋಂದಾಯಿಸಿಕೊಂಡಿವೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲ 2818 ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್‌ ಅಳವಡಿಸಲಾಗಿದೆ. ಇಡೀ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಎಲ್ಲ ಅಕ್ರಮಗಳು ಕಂಪ್ಯೂಟರ್ ಪರದೆಯಲ್ಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

Read More

ನವದೆಹಲಿ : ಅನುದಾನಿತ ಶಾಲೆಗಳ ಆಡಳಿತ ಮಂಡಳಿ ಸರ್ಕಾರದ ಅನುಮತಿಯಿಲ್ಲದೆ ಅನುದಾನಿತ ಖಾಸಗಿ ಶಾಲೆಗಳ ಶಿಕ್ಷಕರನ್ನು ಅವರ ಕೆಲಸದಿಂದ ತೆಗೆದುಹಾಕಲಾಗುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಹೇಳಿಕೆಯೊಂದಿಗೆ ಮಹೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಮೇಲ್ಮನವಿಯನ್ನು ಹೈಕೋರ್ಟ್‌ನ ಇಂದೋರ್ ಪೀಠ ವಜಾಗೊಳಿಸಿತು. ಈ ಪ್ರಕರಣವು ಜೀವಶಾಸ್ತ್ರ ವಿಭಾಗದ ಶಿಕ್ಷಕ ಎಸ್.ಕೆ. ವ್ಯಾಸ್ ಅವರದ್ದಾಗಿದೆ. ನವೆಂಬರ್ 1974 ರಲ್ಲಿ, ಅವರನ್ನು ಶಾಲೆಯಲ್ಲಿ ಹಿರಿಯ ತರಗತಿ ಶಿಕ್ಷಕರಾಗಿ ನೇಮಿಸಲಾಯಿತು. 1991 ರಲ್ಲಿ, ಸರ್ಕಾರಿ ನಿಯಮಗಳ ಅಡಿಯಲ್ಲಿ ಅವರಿಗೆ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲಾಯಿತು. ಈ ಬಡ್ತಿಯನ್ನು ವ್ಯಾಸ್ ಅವರಿಗೆ ಮಧ್ಯಪ್ರದೇಶ ಸರ್ಕಾರೇತರ ಶಿಕ್ಷಣ ಸಂಸ್ಥೆ ಕಾಯ್ದೆಯಡಿಯಲ್ಲಿ ನೀಡಲಾಗಿದೆ. 2005 ರಲ್ಲಿ, ಶಾಲೆಯಲ್ಲಿ 11 ಮತ್ತು 12 ನೇ ತರಗತಿಗಳಲ್ಲಿ ಜೀವಶಾಸ್ತ್ರ ವಿಭಾಗದಲ್ಲಿ ಯಾವುದೇ ಪ್ರವೇಶವಿಲ್ಲ ಎಂದು ಹೇಳಿ, ಶಾಲೆಯು ವ್ಯಾಸ್ ಅವರನ್ನು ಕೆಲಸದಿಂದ ಹಠಾತ್ತನೆ ವಜಾಗೊಳಿಸಿತು. ಶಾಲಾ ಆಡಳಿತ ಮಂಡಳಿಯ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಶಾಲಾ ಆಡಳಿತ ಮಂಡಳಿಯ ವಿರುದ್ಧ ವ್ಯಾಸ್…

Read More