Author: kannadanewsnow57

ನವದೆಹಲಿ : ಮಾರ್ಚ್ ತಿಂಗಳು ಮುಗಿಯಲು ಇನ್ನೂ 12 ದಿನಗಳು ಬಾಕಿ ಇದ್ದು, ದೇಶದ ಹಲವು ರಾಜ್ಯಗಳಲ್ಲಿ ತಾಪಮಾನ ಹೆಚ್ಚಾಗಲು ಪ್ರಾರಂಭಿಸಿದೆ. ಮಂಗಳವಾರ (ಮಾರ್ಚ್ 18) ರಾಜಧಾನಿ ದೆಹಲಿಯಲ್ಲಿ ಸುಮಾರು 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಭಾರತ ಹವಾಮಾನ ಇಲಾಖೆ (ಐಎಂಡಿ) ಈಗಾಗಲೇ ಹಲವಾರು ರಾಜ್ಯಗಳಿಗೆ ಮುಂಬರುವ ತಿಂಗಳಲ್ಲಿ ಶಾಖದ ಅಲೆಯ ಎಚ್ಚರಿಕೆ ನೀಡಿದೆ. ಮುಂದಿನ ದಿನಗಳಲ್ಲಿ ತಾಪಮಾನವು ವೇಗವಾಗಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳುತ್ತಾರೆ. ಏಪ್ರಿಲ್ ಆರಂಭದಲ್ಲಿ ರಾಜಧಾನಿ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಮುಂದಿನ ಒಂದು ವಾರದಲ್ಲಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಗಮನಾರ್ಹ ಏರಿಕೆಯಾಗುವ ನಿರೀಕ್ಷೆಯಿದೆ. ಹೆಚ್ಚುತ್ತಿರುವ ಉಷ್ಣತೆಯು ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಇಂದಿನಿಂದ ಎಲ್ಲಾ ಜನರು ಜಾಗರೂಕರಾಗಿರಬೇಕು ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಅನುಭವಿಸುವ ಶಾಖವು ಮೇ-ಜೂನ್‌ನಲ್ಲಿ ದಾಖಲೆಗಳನ್ನು ಮುರಿಯಬಹುದು. ತಾಪಮಾನ ಏರಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಸವಾಲಿನ ಸಂಗತಿಯಾಗಿದೆ; ವೈದ್ಯರು ಈಗಾಗಲೇ…

Read More

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ ಖಂಡಿಸಿ ಮಾರ್ಚ್.22ಕ್ಕೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೂ ಮುನ್ನ ಇಂದು ಬಂದ್ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ವಾಟಾಳ್ ನಾಗರಾಜ್ ಮಹತ್ವದ ಸಭೆ ಕರೆದಿದ್ದು, ಸಭೆಯಲ್ಲಿ ಕರ್ನಾಟಕ ಬಂದ್ ಖಚಿತವಾಗಿದೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್ ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡೇ ಮಾಡುತ್ತೇವೆ ಎಂದುಹೇಳಿದ್ದಾರೆ. ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ದಿನಾಂಕ 22-03-2025ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇದಕ್ಕೂ…

Read More

ಬೆಂಗಳೂರು : ಕ್ಷಮಿಸಿ ಅಕ್ಕಿ ಖಾಲಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟ್ವಿಟರ್ ನಲ್ಲಿ ಕಿಡಿಕಾರಿದೆ. ಈ ಕುರಿತು ಪೋಸ್ಟರ್ ರಿಲೀಸ್ ಮಾಡಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ತೀರ್ಮಾನಗಳಿಂದ ರಾಜ್ಯದ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. 10 ಕೆ.ಜಿ. ಅಕ್ಕಿ ಬೇಕೋ ಬೇಡ್ವೋ ಎಂದು ಕೇಳಿದ್ದ ಭ್ರಷ್ಟ ಸಿದ್ದರಾಮಯ್ಯ ಅವರು ಇಂದು ಪಡಿತರ ಅಂಗಡಿ ಬಳಿ ನೋ ಸ್ಟಾಕ್ ಬೋರ್ಡ್ ಹಾಕಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಹಂಚಿಕೆ ಮಾಡಲಾಗುತ್ತಿರುವ ಅಕ್ಕಿ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪಡಿತರ ವಿತರಣಾ ಕೇಂದ್ರಗಳ ಮುಂದೆ ಸ್ಟಾಕ್ ಇಲ್ಲ ಎಂದು ಬೋರ್ಡ್ ಹಾಕಲಾಗುತ್ತಿದೆ. ಹಲವೆಡೆ ಶೇ. 30 ಕ್ಕೂ ಹೆಚ್ಚು ಫಲಾನುಭವಿಗಳು ಒಂದು ಕೆಜಿ ಅಕ್ಕಿಯನ್ನೂ ಪಡೆದಿಲ್ಲ. ಅವೈಜ್ಞಾನಿಕ ಗ್ಯಾರಂಟಿಗಳನ್ನು ಘೋಷಿಸಿ ಅವುಗಳನ್ನು ನೀಡಲು ಯೋಗ್ಯತೆ ಇಲ್ಲದ‌ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ಕಳ್ಳ ನೆಪವೊಡ್ಡಿ ತಪ್ಪಿಸಿಕೊಳ್ಳಲು ವಾಮಮಾರ್ಗ ಹಿಡಿದಿದೆ ಎಂದು ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯನವರೇ, ಇಲ್ಲಿಯ ತನಕ ಕೊಡುತ್ತಿದ್ದ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ ಕಾಯ್ದೆ 2011 ಹಾಗೂ ಕಾಲ ಕಾಲಕ್ಕೆ ಆದ ತಿದ್ದುಪಡಿ ನಿಯಮಗಳಂತೆ 2025-26ನೇ ಸಾಲಿನ ವರ್ಗಾವಣೆಯನ್ನು ವರ್ಗಾವಣೆ ಕೈಗೊಳ್ಳಲು ಬಿ.ಸಿ&ಡಿ ವೃಂದದ ಆಧಿಕಾರಿ ಮತ್ತು ನೌಕರರ ಅಗತ್ಯ ಮಾಹಿತಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿ ಮತ್ತು ನೌಕರರುಗಳ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ನಾಗರೀಕ ಸೇವಾ (ವೈದ್ಯಾಧಿಕಾರಿಗಳ ಹಾಗೂ ಇತರೆ ಸಿಬ್ಬಂದಿಯ ವರ್ಗಾವಣೆ) ಕಾಯ್ದೆ 2011 ಹಾಗೂ ಕಾಲಕಾಲಕ್ಕೆ ಹೊರಡಿಸಲಾದ ತಿದ್ದುಪಡಿ ಕಾಯ್ದೆಯಡಿ ರಚಿಸಲಾಗಿರುವ ಸಮಾಲೋಚನಾ ನಿಯಮಗಳನ್ವಯ ಆಯಾ ವರ್ಷದ ಎಪ್ರಿಲ್ ಮತ್ತು ಮೇ ಮಾಹೆಯಲ್ಲಿ ನಡೆಸಬೇಕಾಗಿರುತ್ತದೆ. ಅದರಂತೆ 2025-26ನೇ ಸಾಲಿನಲ್ಲಿ ಸಾರ್ವಜನಿಕ ಹಿತದೃಷ್ಟಿಯ ವರ್ಗಾವಣೆ ನಡೆಸಲು ವರ್ಗಾವಣೆ ಕಾಯ್ದೆ ಮತ್ತು ನಿಯಮ 6 ರಲ್ಲಿ ನಿಗದಿಪಡಿಸಿರುವ ಕನಿಷ್ಠ ಸೇವಾವಧಿಯನ್ನು ದಿನಾಂಕ 31-03-2025 ರ ಅಂತಿಮ ದಿನಾಂಕಕ್ಕೆ ಲೆಕ್ಕಹಾಕಿದಾಗ ಪೂರೈಸಿರುವ ವೃಂದ ಬಿ.ಸಿ & ಡಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದ್ದು, ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಟೌನ್ ನಲ್ಲಿ 19 ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಮಂಜುನಾಥ್ ಎಂಬಾತ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಗಳೇ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಮಂಜುನಾಥ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಂಜುನಾಥ್ ಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಓರ್ವ ಪುತ್ರನಿದ್ದಾನೆ. ಹಿರಿಯ ಮಗಳ ಮೇಲೆ ತಂದೆ ಮಂಜುನಾಥ್ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ಣಾಟಕದಲ್ಲಿ ಅತೀ ಶೀಘ್ರದಲ್ಲಿ ಬೃಹತ್ ಉದ್ಯೋಗಮೇಳ” ಆಯೋಜಿಸಲಾಗುವುದು. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲ್ಯಾಣ ಕರ್ನಾಟಕದಲ್ಲಿ ಅತೀ ಶೀಘ್ರದಲ್ಲಿ ಬೃಹತ್ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 250 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಇರುವ ನಿರುದ್ಯೋಗಿಗಳು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು https://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂದರೆ ಮಂಗಳವಾರ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿ ಸದನದಲ್ಲಿ ಮಹಾ ಕುಂಭ ಮೇಳದ ಕುರಿತು ಮಾತನಾಡುತ್ತಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಅವರು ಉತ್ತರ ಪ್ರದೇಶದ ಜನರಿಗೆ ಧನ್ಯವಾದ ಅರ್ಪಿಸಿದರು. ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ಜನರಿಗೆ, ವಿಶೇಷವಾಗಿ ಪ್ರಯಾಗ್‌ರಾಜ್‌ಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸಿದರು. ಮಹಾ ಕುಂಭ ಮೇಳವು ಸಾಮಾನ್ಯ ಜನರ ಸಹಕಾರದಿಂದ ಯಶಸ್ವಿಯಾಯಿತು. ಮಹಾ ಕುಂಭಮೇಳವು ತನ್ನ ಬೃಹತ್ ಸ್ವರೂಪವನ್ನು ಜಗತ್ತಿಗೆ ತೋರಿಸಿತು. ಸಮಾಜದ ಎಲ್ಲಾ ಕರ್ಮಯೋಗಿಗಳಿಗೆ ಧನ್ಯವಾದಗಳು. ಇದಕ್ಕೂ ಮೊದಲು, ಪ್ರಧಾನಿ ಮೋದಿ ಫೆಬ್ರವರಿ 4 ರಂದು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಪ್ರಧಾನಿ ಮೋದಿ ಅವರು ಧನ್ಯವಾದ ನಿರ್ಣಯಕ್ಕೆ ಪ್ರತಿಕ್ರಿಯಿಸಿದ್ದರು. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಬಗ್ಗೆ ಮಾತನಾಡಿದರು. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.…

Read More

ಸರ್ಕಾರದ ನಿಯಮಗಳ ಪ್ರಕಾರ, ಯಾವುದೇ ಉತ್ಪನ್ನದ ಗರಿಷ್ಠ ಚಿಲ್ಲರೆ ಬೆಲೆಯನ್ನು (MRP) ಸ್ಪಷ್ಟವಾಗಿ ಪ್ರದರ್ಶಿಸಬೇಕು ಮತ್ತು ಗ್ರಾಹಕರು ಆ ಬೆಲೆಯನ್ನು ಮಾತ್ರ ಪಾವತಿಸಬೇಕು. ಆದರೆ ಅಂಗಡಿಕಾರರು ಸ್ವಲ್ಪ ಹೆಚ್ಚುವರಿ ಹಣವನ್ನು ಚಾರ್ಜ್ ಮಾಡುತ್ತಾರೆ ಅಥವಾ ಬದಲಾವಣೆಗೆ ಬದಲಾಗಿ ಚಾಕೊಲೇಟ್ಗಳನ್ನು ನೀಡುತ್ತಾರೆ. ಗ್ರಾಹಕರ ಮಾಹಿತಿ ಅಥವಾ ಅರಿವಿನ ಕೊರತೆಯಿಂದಾಗಿ ಈ ಪರಿಸ್ಥಿತಿಯು ಹೆಚ್ಚಾಗಿ ಸಂಭವಿಸುತ್ತದೆ. ಆದರೆ ಈಗ ಗ್ರಾಹಕರು ಈ ರೀತಿಯ ಚೇತರಿಕೆಯನ್ನು ಕಾನೂನುಬದ್ಧವಾಗಿ ವಿರೋಧಿಸಬಹುದು. ಸುಪ್ರೀಂ ಕೋರ್ಟ್‌ನ ನಿಯಮಗಳ ಪ್ರಕಾರ, ಅಂಗಡಿಯವರು ಎಂಆರ್‌ಪಿಗಿಂತ ಹೆಚ್ಚಿನ ಶುಲ್ಕ ವಿಧಿಸುವುದು ಕಾನೂನುಬಾಹಿರವಾಗಿದೆ. ಆದಾಗ್ಯೂ, ರೆಸ್ಟೋರೆಂಟ್‌ಗಳು ಮತ್ತು ಕೆಫೆಗಳು MRP ಜೊತೆಗೆ ಸೇವಾ ಶುಲ್ಕವನ್ನು ವಿಧಿಸಬಹುದು. ಇದಲ್ಲದೆ, ಗ್ರಾಹಕರು ಖರೀದಿಸಿದ ವಸ್ತುವಿನ ಕಡಿಮೆ ತೂಕವನ್ನು ಕಂಡುಕೊಂಡರೆ, ಅವರು ತಮ್ಮ ಬೇಡಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಇರಿಸಬಹುದು. ಎಲ್ಲಿ ದೂರು ನೀಡಬೇಕು? ಅಂಗಡಿಯವನು MRP ಗಿಂತ ಹೆಚ್ಚಿನ ಶುಲ್ಕವನ್ನು ವಿಧಿಸಿದರೆ, ಅದನ್ನು ಗ್ರಾಹಕ ಸಂರಕ್ಷಣಾ ಕಾಯಿದೆಯಡಿಯಲ್ಲಿ “ಮೋಸಗೊಳಿಸುವ ವಿಧಾನದಿಂದ ಅಧಿಕ ಶುಲ್ಕ ವಿಧಿಸುವುದು” ಎಂದು ಪರಿಗಣಿಸಲಾಗುತ್ತದೆ. ಗ್ರಾಹಕರು ಗ್ರಾಹಕ…

Read More

ಬೆಂಗಳೂರು : ನೋಂದಾಯಿತ ಫಲಾನುಭವಿ ಹಾಗೂ ಅವರ ಅವಲಂಬಿತರಿಗೆ ಮಂಡಳಿಯು ವೈದ್ಯಕೀಯ ಸಹಾಯಧನವನ್ನು ನೀಡುತ್ತದೆ. ಆಸ್ಪತ್ರೆಗೆ ದಾಖಲಾದ ದಿನಾಂಕದಿಂದ ಆರು ತಿಂಗಳೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ವೈದ್ಯಕೀಯ ಸಹಾಯಧನ ನೋಂದಾಯಿತ ಫಲಾನುಭವಿ ಹಾಗೂ ಅವರ ಅವಲಂಬಿತರಿಗೆ ಮಂಡಳಿಯು ವೈದ್ಯಕೀಯ ಸಹಾಯಧನವನ್ನು ನೀಡುತ್ತದೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು * ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ * ರೇಷನ್ ಕಾರ್ಡ್ ಪ್ರತಿ * ನಮೂನೆ 22A, ಆಸ್ಪತ್ರೆಯಿಂದ ಭರ್ತಿ ಮಾಡಿದ ಅರ್ಜಿ * ಬ್ಯಾಂಕ್ ಪಾಸ್ ಬುಕ್ ಪ್ರತಿ * ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ * ಆಸ್ಪತ್ರೆಯ ಬಿಲ್ಲುಗಳು * ಬಿಡುಗಡೆ ಪ್ರಮಾಣ ಪತ್ರ

Read More

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಪ್ರಖರತೆ ಹೆಚ್ಚಾಗಿದೆ. ಕರ್ನಾಟಕ ದಿನೇ ದಿನೇ ಕುದಿಯಲಾರಂಭಿಸಿದೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವಾಡಿಕೆಗಿಂತ 2-4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆ ಆಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ. ರಾಜ್ಯದ ಶೇ.75ರಷ್ಟು ಭೌಗೋಳಿಕ ಪ್ರದೇಶಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ ನಿಂದ 42.8 ಡಿಗ್ರಿ ಸೆಲ್ಸಿಯಸ್ ವರೆಗೂ ಉಷ್ಣಾಂಶ ದಾಖಲಾಗುತ್ತಿದೆ. ಇದರಿಂದ ಬಿಸಿಗಾಳಿ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ತೀವ್ರಗೊಂಡಿದೆ. ಬೀದರ್, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಕೊಪ್ಪಳ, ಯಾದಗಿರಿ, ರಾಯಚೂರಿನಲ್ಲಿ 40 ರಿಂದ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿದೆ. ರಾಜ್ಯದ ಅತೀ ಹೆಚ್ಚು ಮಳೆ ಬೀಳುವ ಆಗುಂಬೆಯಲ್ಲೂ ಈ ಬಾರಿ ಗರಿಷ್ಠ ತಾಪಮಾನ ದಾಖಲಾಗಿದೆ. ಭಾರತದ ಅತೀ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯೂ ಒಂದು. ಪಶ್ಚಿಮ ಘಟ್ಟದ ಸಹ್ಯಾದ್ರಿ ತಪ್ಪಲಿನಲ್ಲಿರುವ ಆಗುಂಬೆ ಸದಾ ಹಸಿರಿನಿಂದ ಕೂಡಿರುತ್ತದೆ. ಆದರೇ ಈಗ ಗರಿಷ್ಠ ತಾಪಮಾನ 36…

Read More