Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿ ಮತ್ತು ಆಧ್ಯಾತ್ಮಿಕತೆಯ ಜೀವಂತ ಉದಾಹರಣೆಯಾಗಿದ್ದ ರಾಜಯೋಗಿನಿ ಡಾ. ದಾದಿ ರತನಮೋಹಿನಿ ನಿಧನರಾಗಿದ್ದಾರೆ. ಬುಧವಾರ ಬೆಳಗಿನ ಜಾವ 1:20 ರ ಸುಮಾರಿಗೆ ಅಹಮದಾಬಾದ್ನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅವರು ಅಸ್ವಸ್ಥರಾಗಿದ್ದರು ಮತ್ತು ಚಿಕಿತ್ಸೆಗಾಗಿ ದಾಖಲಾಗಿದ್ದರು. ರತನಮೋಹಿನಿ 13 ನೇ ವಯಸ್ಸಿನಲ್ಲಿ ಆಧ್ಯಾತ್ಮಿಕ ಜೀವನವನ್ನು ಸ್ವೀಕರಿಸಿದರು ಮತ್ತು ಕಳೆದ 88 ವರ್ಷಗಳಿಂದ ದೈವಿಕ ಸೇವೆಗೆ ಸಮರ್ಪಿತರಾಗಿದ್ದಾರೆ. ಅವರು ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಲಕ್ಷಾಂತರ ಜನರ ಜೀವನಕ್ಕೆ ನಿರ್ದೇಶನ ನೀಡಿದರು, ಅವರಿಗೆ ಶಾಂತಿ ಮತ್ತು ಆಧ್ಯಾತ್ಮಿಕ ಸಮತೋಲನದ ಮಾರ್ಗವನ್ನು ತೋರಿಸಿದರು. ಮಾರ್ಚ್ 25 ರಂದು ಅವರ 101 ನೇ ಹುಟ್ಟುಹಬ್ಬವನ್ನು ಪೂರ್ಣ ಭಕ್ತಿ ಮತ್ತು ಸರಳತೆಯಿಂದ ಆಚರಿಸಲಾಯಿತು. ಅವರ ಪಾರ್ಥಿವ ಶರೀರವನ್ನು ವೈಕುಂಠಿಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು, ಇದರಲ್ಲಿ ಸಾವಿರಾರು ಭಕ್ತರು ಸೇರಿದ್ದರು. ಅವರ ಅಂತ್ಯಕ್ರಿಯೆಯನ್ನು ಬ್ರಹ್ಮಕುಮಾರಿ ಸಂಸ್ಥೆಯ ಶಾಂತಿವನ ಆವರಣದಲ್ಲಿ ನಡೆಸಲಾಗುವುದು. ರಾಷ್ಟ್ರೀಯ ಶೋಕದ ಅಲೆ ರಾಷ್ಟ್ರಪತಿ ದ್ರೌಪದಿ…
ಬೆಂಗಳೂರು : ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್-1957 ಕಾಯ್ದೆಯಲ್ಲಿ ನವೀಕರಣವು 20 ವರ್ಷಗಳ ಅವಧಿಗೆ ಅನ್ವಯವಾಗುತ್ತಿತ್ತು. ಅದರ ಪ್ರಕಾರ ಸರ್ಕಾರವು “ಗಣಿ ಗುತ್ತಿಗೆಯ ನವೀಕರಣಕ್ಕೆ ಫಾರೆಸ್ಟ್ ಕ್ಲಿಯರೆನ್ಸ್ನ್ನು ಪಡೆದುಕೊಳ್ಳುವ ಸಲುವಾಗಿ ಮಾತ್ರ ಷರತ್ತುಬದ್ಧ ತಾತ್ವಿಕ ಅನುಮೋದನೆ ನೀಡಲಾಗಿದೆ. ದಿನಾಂಕ: 12.01.2015 ರಂದು ಕೇಂದ್ರ ಸರ್ಕಾರವು ಎಂಎಂಡಿಆರ್ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿಯನ್ನು ತಂದ ಕಾರಣ ವಿವಿಧ ಹಂತದ ಪರಿಶೀಲನೆಗಳನ್ನು ನಡೆಸಿ, ದಿನಾಂಕ: 09.02.2015 ರಂದು ಗಣಿ ಗುತ್ತಿಗೆ ನವೀಕರಣಕ್ಕಾಗಿ ನೀಡಿದ್ದ ಷರತ್ತುಬದ್ಧ 8 ಕಂಪನಿಗಳ ತಾತ್ವಿಕ ಅನುಮತಿ ಪತ್ರಗಳು ಊರ್ಜಿತವಲ್ಲ ಎಂದು ತೀರ್ಮಾನಿಕಸಿ ಅವುಗಳನ್ನು ರದ್ದುಪಡಿಸಿ ತಿದ್ದುಪಡಿ ಕಾಯ್ದೆಯಂತೆ ಕ್ರಮವಹಿಸಲು ಸೂಚಿಸಲಾಯಿತು. https://twitter.com/siddaramaiah/status/1909997301827031405?ref_src=twsrc%5Egoogle%7Ctwcamp%5Eserp%7Ctwgr%5Etweet ನಂತರ, ಗಣಿ ಇಲಾಖೆಯು…
ಬೆಂಗಳೂರು : ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತಿನ ಆಡಳಿತ ಮಂಡಳಿಯನ್ನು ರದ್ದುಗೊಳಿಸಿ, ಆಡಳಿತಾಧಿಕಾರಿಯನ್ನು ನೇಮಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಆಯುಕ್ತರ ಏಕ ಕಡತದಲ್ಲಿ, ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತಿಗೆ ಸುಮಾರು 16 ವರ್ಷವಾದರೂ ಸಹ ಇದುವರೆಗೂ ಚುನಾವಣೆಯನ್ನು ನಡೆಸದೆ ಹಿಂದೆ ಚುನಾಯಿಸಲ್ಪಟ್ಟ 06 ಸದಸ್ಯರ ಪೈಕಿ ಇಬ್ಬರು ಸುಮಾರು 20 ವರ್ಷಗಳಿಂದ ಸದಸ್ಯರುಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು ಅದೇ ರೀತಿ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ 05 ಜನ ಸದಸ್ಯರ ಅವಧಿ 2021ಕ್ಕೆ ಮುಗಿದಿದ್ದರೂ ಸಹ ಸರ್ಕಾರದ ಯಾವುದೇ ಆದೇಶವನ್ನು ಪಡೆಯದೇ ಅಧಿಕಾರದಲ್ಲಿ ಮುಂದುವರೆದಿರುತ್ತಾರೆ. ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತಿನ ವಿರುದ್ಧ ಹಲವಾರು Chemist & Druggist ಸಂಘಟನೆಗಳು ಹಾಗೂ ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತಿನ ಸದಸ್ಯರಾದ ಸದರಿ ಪರಿಷತ್ತಿನ ಕಾರ್ಯವೈಖರಿ, ಕರ್ತವ್ಯ ಲೋಪ ಹಾಗೂ ಅಧಿಕಾರ ದುರ್ಬಳಕೆ ಕುರಿತು ದೂರುಗಳನ್ನು ಶ್ರೀ ನಾಗರಾಜು, ಎಂ.ಎಸ್, ರವರು ಸಹ ದಿನಾಂಕ: 03.03.2023ರಲ್ಲಿ ನೀಡಿದ್ದು, ಅವುಗಳಲ್ಲಿ ವುಮುಖವಾಗಿ ಸದರಿ ಪರಿಷತ್ತಿನ…
ಬೆಂಗಳೂರು : ಏಪ್ರಿಲ್ 11 ರ ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಬೆಯಲ್ಲಿ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ ವರದಿ-2015) ವರದಿ ಮಂಡನೆಯಾಗಲಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬರೋಬ್ಬರಿ 169 ಕೋಟಿ ರೂ.ಗಳ ವೆಚ್ಚದಲ್ಲಿ ಸಿದ್ದಪಡಿಸಿರುವ ಜಾತಿಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಲಿದ್ದಾರೆ. ದತ್ತಾಂಶಗಳ ಅಧ್ಯಯನ ವರದಿ ಪರಿಶೀಲನೆ ಬಳಿಕ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ಯಾವ ನಿರ್ಧಾರ ಕೈಗೊಲ್ಳಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಗಾಬರಿಗೊಳಿಸದೆ, ಅವರೊಂದಿಗೆ ಶಾಂತವಾಗಿ ವರ್ತಿಸಿ, ಹತ್ತಿರದ ಆಸ್ಪತ್ರೆಗೆ ತಕ್ಷಣವೇ ಕರೆದುಕೊಂಡು ಬಂದು ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿಯಾಗದಂತೆ ಮಾಡಲು ಕೈ ಜೋಡಿಸಿ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಶಿಡಿಗಿನಮೊಳ ಇವರ ಸಂಯುಕ್ತಾಶ್ರಯದಲ್ಲಿ “ಹಾವು ಕಡಿತ ಕುರಿತು ಜಾಗೃತಿ” ಕಾರ್ಯಕ್ರಮದಲ್ಲಿ ಮಾತನಾಡಿದರು. ಹಾವು ಕಚ್ಚಿದಾಗ ಗಾಬರಿಯಾಗುವುದು ಸಾಮಾನ್ಯವಾಗಿದ್ದು, ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು ಎಂದರು. ವೈದ್ಯಾಧಿಕಾರಿ ಡಾ.ಸಂತೋಷ್ ಹೆಬ್ಬಾಳ್ ಮಾತನಾಡಿ, ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆಯನ್ನು ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ…
ಬೆಂಗಳೂರು: 2025ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ಅರ್ಹ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ದಿನಾಂಕ: 31-03-2025 ಕ್ಕೆ 17 ವರ್ಷ ತುಂಬಿದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಸ್ತುತ ಪಿಯು ಪರೀಕ್ಷೆ – 2 ಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗಕ್ಕೆ ಆಯ್ತ ಸಂಯೋಜನೆಗಳೊಂದಿಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಅರ್ಹರಿದ್ದು, ಅವರುಗಳು ಮಂಡಲಿಯ ನಿಯಮಾನುಸಾರ ತಾವು ಅಭ್ಯಸಿಸಿದ ಕಾಲೇಜಿನಲ್ಲಿಯೇ ನೋಂದಾಯಿಸಿಕೊಳ್ಳಲು ಉಲ್ಲೇಖಿತ ಇ-ಕಛೇರಿ ಕಡತದಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ ಎಂದಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ ಕರ್ನಾಟಕ ಶಾಲಾ…
ಬೆಂಗಳೂರು : ವಿವಿಧ ಇಲಾಖೆಗಳ ಅಧಿಕೃತ ಪತ್ರ ವ್ಯವಹಾರಗಳಲ್ಲಿ “ಡಾ॥ ಬಿ.ಆರ್. ಅಂಬೇಡ್ಕರ್ ವೀದಿ” ಎಂಬ ವಿಳಾಸವನ್ನು ಬಳಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಸಚಿವಾಲಯವು ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡಗಳು ಡಾ॥ ಬಿ.ಆರ್. ಅಂಬೇಡ್ಕರ್ ವೀದಿಯಲ್ಲಿದೆ. ವಿವಿಧ ಇಲಾಖೆಗಳ ಅಧಿಕೃತ ಪತ್ರವ್ಯವಹಾರಗಳಲ್ಲಿ “ಡಾ॥ ಬಿ.ಆರ್. ಅಂಬೇಡ್ಕರ್ ವೀದಿ” ಎಂಬ ವಿಳಾಸವನ್ನು ಬಳಸದೇ ಕೈಬಿಟ್ಟಿರುವುದು ಸರ್ಕಾರದ ಗೆಮನಕ್ಕೆ ಬಂದಿದೆ. ಗೌರವಾನ್ವಿತ ನಾಯಕರು ಹಾಗೂ ಭಾರತದ ಸಂವಿಧಾನ ಶಿಲ್ಪಿ ಆಗಿರುವ ಡಾ|| ಬಿ.ಆರ್. ಅಂಬೇಡ್ಕರ್ ರವರ ಹೆಸರಿನ ವೀದಿಯನ್ನು ಅಧಿಕೃತ ಪತ್ರ ವ್ಯವಹಾರಗಳ ವಿಳಾಸದಲ್ಲಿ ಬಳಸದಿರುವುದು ಅಪೂರ್ಣ ಹಾಗೂ ಅಸಮಂಜಸವಾಗುತ್ತದೆ. ಆದ್ದರಿಂದ, ಕರ್ನಾಟಕ ಸರ್ಕಾರ ಸಚಿವಾಲಯದ ಎಲ್ಲಾ ಅಧಿಕೃತ ಪತ್ರ ವ್ಯವಹಾರಗಳಲ್ಲಿ “ಡಾ॥ ಬಿ.ಆರ್. ಅಂಬೇಡ್ಕರ್ ವೀದಿ” ಎಂದು ವಿಳಾಸವನ್ನು ನಮೂದಿಸಬೇಕೆಂದು ಈ ಮೂಲಕ ತಿಳಿಸಿದೆ. ಕರ್ನಾಟಕ ಸರ್ಕಾರ ಸಚಿವಾಲಯದ ಎಲ್ಲಾ ಇಲಾಖೆಗಳು ಈ ನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅನುಸರಿಸಲು ಈ…
ಬೆಂಗಳೂರು : ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಬೇಕು. ಹೊರಗಡೆ ದೊರೆಯುವ ನೀರಿನ ಬಾಟಲಿಗಳಲ್ಲಿ ಹಲವು ಅಸುರಕ್ಷಿತವಾಗಿರುವುದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ. ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ಸೈಬರ್ ಕಮಾಂಡ್ ಘಟಕವನ್ನು (Cyber Command Unit) ಸ್ಥಾಪಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಪತ್ರಗಳಲ್ಲಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ವಿಜ್ಞಾನ ಹಾಗೂ ತಂತ್ರಜ್ಞಾನದ ಬಳಕೆಯು ಮಾನವನ ಜೀವನ ಶೈಲಿಯನ್ನು ಅತ್ಯಂತ ಸರಳೀಕರಣಗೊಳಿಸಿದ್ದು, ದೈನಂದಿನ ಜೀವನದಲ್ಲಿ ತಂತ್ರಜ್ಞಾನದ ಅತಿಯಾದ ಬಳಕೆ ಹಾಗೂ ಅವಲಂಬನೆಯಿಂದಾಗಿ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿದ್ದು, ಹಳೆಯ ವೃತ್ತಿಪರ ಅಪರಾಧಗಳಾದ ಡಕಾಯಿತಿ, ರಾಬರಿ ಹಾಗೂ ಇತರೆ ಭೌತಿಕ ಕಳ್ಳತನಗಳನ್ನು ಹಿಂದಿಕ್ಕಿ ಅತಿ ಹೆಚ್ಚು ಸೈಬರ್ ಅಪರಾಧಗಳು ವರದಿಯಾಗುತ್ತಿದ್ದು, ಮಹಾನಗರಗಳಲ್ಲಿ ದಾಖಲಾಗುವ ಅಪರಾಧ ಪ್ರಕರಣಗಳಲ್ಲಿ ಶೇ.20ರಷ್ಟು ಸೈಬರ್ ಪ್ರಕರಣಗಳಾಗಿದ್ದು, ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ ಒಟ್ಟಾರೆಯಾಗಿ 52,000 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿದ್ದು, ಕರ್ನಾಟಕ ರಾಜ್ಯವು ದಕ್ಷಿಣ ಭಾರತದ ಇತರ ರಾಜ್ಯಗಳಲ್ಲಿ ದಾಖಲಾಗುವ ಸೈಬರ್ ಅಪರಾಧಗಳ ಸಂಖ್ಯೆಯಲ್ಲಿ ಮಂಚೂಣಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು…
ಚಿತ್ರದುರ್ಗ : ಪ್ರತಿವರ್ಷದಂತೆ ಈ ವರ್ಷವೂ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಜಿಲ್ಲಾಮಟ್ಟದಲ್ಲಿ ಇದೇ ಏಪ್ರಿಲ್ 15 ಮತ್ತು 16ರಂದು ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಏಪ್ರಿಲ್ 15 ಮತ್ತು 16ರಂದು ನಡೆಯುವ ಚಿತ್ರದುರ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಆಯಾ ಇಲಾಖಾ ಮುಖ್ಯಸ್ಥರು ಶೇ.50ರಷ್ಟು ಸಿಬ್ಬಂದಿಗಳಿಗೆ ಮೀರದಂತೆ ಭಾಗವಹಿಸು ಅನುಮತಿ ನೀಡತಕ್ಕದ್ದು. ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅಧಿಕಾರಿ, ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣ ಪತ್ರ ಹಾಜರು ಪಡಿಸುವ ಷರತ್ತಿಗೊಳಪಡಿಸಿ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವುದು ಮತ್ತು ಕ್ರೀಡಾಕೂಟ ನಡೆಯುವ ದಿನಗಳ ಪ್ರಯಾಣಭತ್ಯೆಯನ್ನು ಮಾತೃ ಇಲಾಖೆಯಿಂದಲೇ ಭರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಸಮಿತಿ ಅಧ್ಯಕ್ಷರಾದ ಟಿ.ವೆಂಕಟೇಶ್ ತಿಳಿಸಿದ್ದಾರೆ.