Author: kannadanewsnow57

ನವದೆಹಲಿ : ದೇಶದಲ್ಲಿ ಸಂಚಾರ ನಿಯಮಗಳ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಹಲವು ಪ್ರಮುಖ ಬದಲಾವಣೆಗಳನ್ನು ಸಹ ಮಾಡಲಾಗುತ್ತಿದೆ. ಇದರ ಅಡಿಯಲ್ಲಿ, ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಈಗ ಕೆಲವು ಬದಲಾವಣೆಗಳನ್ನು ಮಾಡಿದೆ. ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡದ ಮೊತ್ತವನ್ನು 10 ಪಟ್ಟು ಹೆಚ್ಚಿಸಲಾಗಿದೆ. ಹೊಸ ನಿಯಮಗಳು ಮಾರ್ಚ್ 1, 2025 ರಿಂದ ಜಾರಿಗೆ ಬಂದಿವೆ. ಸಂಚಾರ ನಿಯಮಗಳಲ್ಲಿ ಬದಲಾವಣೆಗಳು ಅಜಾಗರೂಕ ಚಾಲನೆ ಮತ್ತು ಸಂಚಾರ ಉಲ್ಲಂಘನೆಗಳನ್ನು ತಡೆಯಲು ಭಾರತ ಮಾರ್ಚ್ 1 ರಿಂದ ಕಠಿಣ ಸಂಚಾರ ದಂಡವನ್ನು ವಿಧಿಸಿದೆ. ಈ ಹೊಸ ದಂಡಗಳು ಆರ್ಥಿಕವಾಗಿ ಹೊರೆಯಾಗಿರುವುದು ಮಾತ್ರವಲ್ಲದೆ, ಜೈಲು ಶಿಕ್ಷೆ ಮತ್ತು ಸಮುದಾಯ ಸೇವೆಯನ್ನೂ ಒಳಗೊಂಡಿವೆ. ಕಠಿಣ ಕ್ರಮ ಕೈಗೊಳ್ಳಲಾಗುವುದು ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಸಿಕ್ಕಿಬಿದ್ದರೆ, ವ್ಯಕ್ತಿಗೆ 10,000 ರೂ. ದಂಡ ಅಥವಾ ಆರು ತಿಂಗಳ ಜೈಲು ಶಿಕ್ಷೆ ವಿಧಿಸಬಹುದು. ಪದೇ ಪದೇ ಅಪರಾಧ ಎಸಗಿದರೆ 15,000 ರೂ.…

Read More

ನವದೆಹಲಿ : ದೇಶದಲ್ಲಿರುವ 4,092 ಶಾಸಕರಲ್ಲಿ ಶೇ. 45 ರಷ್ಟು ಶಾಸಕರು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿಕೊಂಡಿದ್ದಾರೆ. ಚುನಾವಣಾ ಹಕ್ಕುಗಳ ಸಂಸ್ಥೆ ಎಡಿಆರ್ ವರದಿಯಲ್ಲಿ ಈ ಮಾಹಿತಿ ಬೆಳಕಿಗೆ ಬಂದಿದೆ. 28 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ 4,123 ಶಾಸಕರ ಪೈಕಿ 4,092 ಶಾಸಕರ ಅಫಿಡವಿಟ್‌ಗಳನ್ನು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವಿಶ್ಲೇಷಿಸಿದೆ. 24 ಶಾಸಕರ ಅಫಿಡವಿಟ್‌ಗಳನ್ನು ಸರಿಯಾಗಿ ಸ್ಕ್ಯಾನ್ ಮಾಡಲಾಗಿಲ್ಲ ಅಥವಾ ಓದಲು ಕಷ್ಟವಾಗಿರುವುದರಿಂದ ಅವುಗಳನ್ನು ವಿಶ್ಲೇಷಿಸಲು ಸಾಧ್ಯವಾಗಲಿಲ್ಲ. ವಿಧಾನಸಭೆಯಲ್ಲಿ 7 ಸ್ಥಾನಗಳು ಖಾಲಿ ಇವೆ. ಎಡಿಆರ್‌ನ ಇತ್ತೀಚಿನ ವರದಿಯ ಪ್ರಕಾರ, 1,861 ಶಾಸಕರು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ. ಈ ಪೈಕಿ 1,205 ಶಾಸಕರು ಕೊಲೆ, ಕೊಲೆಯತ್ನ, ಅಪಹರಣ ಮತ್ತು ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಎಡಿಆರ್ ವಿಶ್ಲೇಷಣೆಯ ಪ್ರಕಾರ, ಆಂಧ್ರಪ್ರದೇಶ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅದರ 138 ಶಾಸಕರು (ಶೇ. 79) ತಮ್ಮ ವಿರುದ್ಧ ಕ್ರಿಮಿನಲ್…

Read More

ನವದೆಹಲಿ : ಹೊಸ ಕಾರು ಖರೀದಿಸುವವರಿಗೆ ಮತ್ತೆ ಬೆಲೆ ಏರಿಕೆ ಶಾಕ್ ಎದುರಾಗಿದ್ದು, ಏಪ್ರಿಲ್ 1 ರಿಂದ ಟಾಟಾ ಮತ್ತು ಮಾರುತಿ ಕಾರುಗಳ ಬೆಲೆ ಏರಿಕೆಯಾಗಲಿವೆ. ಹೌದು, ವಾಹನ ನಿರ್ಮಾಣ ಪರಿಕರಗಳ ಬೆಲೆ ಏರಿಕೆಯ ಪರಿಣಾಮ ಏಪ್ರಿಲ್‌ನಿಂದ ಟಾಟಾ ಮತ್ತು ಮಾರುತಿ ಸುಜುಕಿ ಕಂಪನಿಗಳು ಕಾರು ಮತ್ತು ವಾಣಿಜ್ಯ ವಾಹನಗಳ ಬೆಲೆಯನ್ನು ಏರಿಕೆ ಮಾಡುವುದಾಗಿ 2 ಘೋಷಿಸಿವೆ. ಟಾಟಾ ಮೋಟರ್ಸ್ ತನ್ನ ವಾಣಿಜ್ಯ ವಾಹನಗಳ ಮೇಲಿನ ಬೆಲೆಯನ್ನು ಶೇ.2ರಷ್ಟು ಏರಿಕೆ ಮಾಡುವುದಾಗಿ ಹೇಳಿದೆ. ಮತ್ತೊಂದೆಡೆ ಮಾರುತಿ ಸುಜುಕಿ ಸಹ ಬೆಲೆ ಏರಿಕೆಗೆ ಮುಂದಾಗಿದ್ದು, ಕಾರುಗಳ ಮೇಲಿನ ಬೆಲೆಯನ್ನು ಶೇ.4ರಷ್ಟು ಹೆಚ್ಚಳ ಮಾಡಲಿದೆ. ಇದು ಈ ವರ್ಷದಲ್ಲೇ 2ನೇ ದರ ಏರಿಕೆಯಾಗಿದೆ. ಫೆಬ್ರ ವರಿಯಲ್ಲಿ ಕೂಡಾ ಕಂಪನಿಗಳು ದರ ಹೆಚ್ಚಿಸಿದ್ದವು. ಇದೀಗ ಮತ್ತೊಮ್ಮೆ ದರ ಏರಿಕೆಯಾಗಿದೆ.

Read More

ಬೆಂಗಳೂರು : ಯುವನಿಧಿ ಯೋಜನೆಯಡಿ ಈ ವರ್ಷದ ಮಾ.10ರವರೆಗೆ 2,62,207 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಜನವರಿ ಅಂತ್ಯಕ್ಕೆ 1,74,170 ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೇರನಗದುವರ್ಗಾವಣೆ ಮೂಲಕ ಪಾವತಿಸಲಾಗಿದೆ. ಉಳಿದ ಅರ್ಜಿಗಳ ಭೌತಿಕ ಪರಿಶೀ ಲನೆಯ ನಂತರ ಭತ್ಯೆ ನೀಡಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್ ತಿಳಿಸಿದರು. ಬಿಜೆಪಿಯ ಡಿ.ಎಸ್. ಅರುಣ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪದವಿ ಹಾಗೂ ಡಿಪ್ಲೊಮಾಪಡೆದತಕ್ಷಣಯೋಜನೆಗೆನೋಂದಣಿ ಮಾಡಿಕೊಳ್ಳ ಬಹುದು. ಎಲ್ಲವೂ ಆನ್‌ಲೈನ್‌ ಮೂಲಕ ಪರಿಶೀಲನೆಗೆ ಒಳ ಪಡುತ್ತದೆ. ನೋಂದಣಿಯಾದ ಆರು ತಿಂಗಳವರೆಗೆ ಯಾವುದೇ ಉದ್ಯೋಗ ದೊರೆಯದಿದ್ದಾಗ ಮಾತ್ರ ಅವರು ನಿರುದ್ಯೋಗ ಭತ್ಯೆ ಪಡೆಯಲು ಅರ್ಹರಾಗುತ್ತಾರೆ. ಈ ರೀತಿ ಅರ್ಜಿ ಹಾಕಿದವರ ಸಂಖ್ಯೆ 49,727 ಇದೆ ಎಂದರು. ಕೆಲವು ತಾಂತ್ರಿಕ ಕಾರಣಗಳಿಂದ ಯುವನಿಧಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ನೆರವು ವಿಳಂಬವಾಗಿರಬಹುದು. ಹಾಗೆಂದು ಇದನ್ನು ಸ್ಥಗಿತ ಮಾಡುತ್ತೇವೆ ಎಂದು ಯಾರೂ ಭಾವಿಸಬೇಕಾಗಿಲ್ಲ. ಅನುದಾನದ ಕೊರತೆಯೂ ಇಲ್ಲ. ನಿಯಮಗಳ ಅನುಸಾರವಾಗಿ ನೀಡಬೇಕು ಎಂದು ಸ್ಪಷ್ಟಪಡಿಸಿದರು. ಯುವನಿಧಿಗೆ ಇಂತಿಷ್ಟೇ ಎಂದು…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕರು, ಬೋಧಕೇತರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎಸ್.ವಿ. ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ, ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಸುಮಾರು 2800 ಬೋಧಕ, ಬೋಧಕೇತರ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಹುದ್ದೆಗಳನ್ನು ಭರ್ತಿ ಮಾಡುತ್ತಾ ಬಂದಿದ್ದು, ಹಂತ ಹಂತವಾಗಿ ಎಲ್ಲ ಬೋಧಕರು, ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ಕಲಾಪದ ವೇಳೆಯಲ್ಲಿ ಗೌರವಾನ್ವಿತ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ನಡೆಸಿದ್ದರು. ಆದರೆ ಯಾವುದೇ ಕಾರಣಕ್ಕೂ ಐದು ವರ್ಷಗಳ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಎಸ್ ಸಿ ಪಿ/ಟಿ ಎಸ್ ಪಿ ಯೋಜನೆಯು 2013 ರಲ್ಲಿ ಜಾರಿಗೆ ಬಂದಿದ್ದು, ಈ ಯೋಜನೆಗೆ ಒದಗಿಸಿರುವ ಎಲ್ಲಾ ಅನುದಾನವನ್ನು ಅಧಿಕಾರಿಗಳು ಆ ವರ್ಷದಲ್ಲಿಯೆ ಖರ್ಚು ಮಾಡಬೇಕು. ಸಕಾಲದಲ್ಲಿ ಅನುದಾನ ವೆಚ್ಷವಾಗದ ಪಕ್ಷದಲ್ಲಿ ಮುಂದಿನ ವರ್ಷಕ್ಕೆ ಮುಂದುವರೆಯುವುದು ಇದನ್ನು ಬೇರೆ ಯೋಜನೆಗಳಿಗೆ ವೆಚ್ಚ ಮಾಡುವಂತಿಲ್ಲ ಎಂದರು. ಈ ವರ್ಷದ ಆಯವ್ಯಯದಲ್ಲಿ 3 ಲಕ್ಷದ 71ಸಾವಿರದ 273 ಕೋಟಿ ಇದ್ದು ಇದರಲ್ಲಿ ಎಸ್ ಸಿ ಪಿ/ ಟಿ ಎಸ್…

Read More

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ 2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದವರು ಶೇ. 24.1ರಷ್ಟಿದ್ದು, ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಲಾಗಿತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ಕಲಾಪದ ವೇಳೆಯಲ್ಲಿ ಗೌರವಾನ್ವಿತ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್ ಸಿ ಪಿ/ಟಿ ಎಸ್ ಪಿ ಯೋಜನೆಯು 2013 ರಲ್ಲಿ ಜಾರಿಗೆ ಬಂದಿದ್ದು, ಈ ಯೋಜನೆಗೆ ಒದಗಿಸಿರುವ ಎಲ್ಲಾ ಅನುದಾನವನ್ನು ಅಧಿಕಾರಿಗಳು ಆ ವರ್ಷದಲ್ಲಿಯೆ ಖರ್ಚು ಮಾಡಬೇಕು. ಸಕಾಲದಲ್ಲಿ ಅನುದಾನ ವೆಚ್ಷವಾಗದ ಪಕ್ಷದಲ್ಲಿ ಮುಂದಿನ ವರ್ಷಕ್ಕೆ ಮುಂದುವರೆಯುವುದು ಇದನ್ನು ಬೇರೆ ಯೋಜನೆಗಳಿಗೆ ವೆಚ್ಚ ಮಾಡುವಂತಿಲ್ಲ ಎಂದರು. ಈ ವರ್ಷದ ಆಯವ್ಯಯದಲ್ಲಿ 3 ಲಕ್ಷದ 71ಸಾವಿರದ 273 ಕೋಟಿ ಇದ್ದು ಇದರಲ್ಲಿ ಎಸ್ ಸಿ ಪಿ/ ಟಿ ಎಸ್ ಪಿ ಯೋಜನೆಗೆ 27 ಸಾವಿರದ 674 ಕೋಟಿ ಒದಗಿಸಲಾಗಿದೆ ಎಂದರು. ಎಸ್ ಸಿ ಪಿ/ ಟಿ ಎಸ್ ಪಿ ಯೋಜನೆ ಕಾಯಿದೆ ಜಾರಿಗೆ ಬಂದ…

Read More

ಬೆಂಗಳೂರು : 2025-26 ನೇ ಸಾಲಿಗೆ ಆದರ್ಶ ವಿದ್ಯಾಲಯಗಳ 6ನೇ ತರಗತಿಯ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆಗೆ ವಿವಿಧ ಹಂತದ ಅಧಿಕಾರಿಗಳು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳು. 2010-11 ನೇ ಸಾಲಿನಿಂದ ಆದರ್ಶ ವಿದ್ಯಾಲಯಗಳು ಪ್ರಾರಂಭವಾಗಿದ್ದು, ಪ್ರತಿ ವರ್ಷದಂತೆ 2025-26ನೇ ಸಾಲಿನಲ್ಲೂ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ವಿದ್ಯಾರ್ಥಿಗಳ ದಾಖಲಾತಿಗಾಗಿ ರಾಜ್ಯದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪ್ರವೇಶ ಪರೀಕ್ಷೆಯು ದಿನಾಂಕ:23.03.2025 ರ ಭಾನುವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ (2 ಗಂಟೆ 30 ನಿಮಿಷಗಳು) ನಡೆಯುತ್ತಿದ್ದು, ಸದರಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ವಿವಿಧ ಹಂತದ ಅಧಿಕಾರಿಗಳು ಮಾಡಿಕೊಳ್ಳಬೇಕಾಗಿದೆ. ಪ್ರವೇಶ ಪರೀಕ್ಷೆಯ ವಿಧಾನ ಪ್ರಶ್ನೆಪತ್ರಿಕೆ ಮತ್ತು ಒ.ಎಂ.ಆರ್‌ನ ಸ್ವರೂಪ:- • ಪ್ರಶ್ನೆಪತ್ರಿಕೆಯು ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಮುದ್ರಿತವಾಗಿರುತ್ತದೆ. ಇದು 100 ಪ್ರಶ್ನೆಗಳನ್ನೊಳಗೊಂಡ ಪ್ರಶ್ನೆಪತ್ರಿಕೆಯಾಗಿದ್ದು, ಪ್ರತಿ ಪ್ರಶ್ನೆಗೆ 1 ಅಂಕದಂತೆ 100 ಅಂಕಗಳನ್ನು ಹೊಂದಿರುತ್ತದೆ. ಪ್ರಶ್ನೆಪತ್ರಿಕೆಯು…

Read More

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ‌.ಜಿ.ಪರಮೇಶ್ಚರ್ ತಿಳಿಸಿದರು. ವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ 68 ರಡಿ ಮೈಕ್ರೋ ಫೈನಾನ್ಸ್ ಹಾವಳಿ , ಮೈಸೂರಿನ ಉದಯಗಿರಿ ಪ್ರಕರಣ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರ ಕೈಗೊಂಡ ಕ್ರಮ ಕುರಿತು ಮಂಡಿಸಿದ ಸೂಚನೆಗೆ ಉತ್ತರಿಸಿದ ಸಚಿವರು,ಸರ್ಕಾರ ‘ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ಅನ್ನು ಜಾರಿಗೆ ತಂದಿದೆ. ನೋಂದಣಿಯಾಗದ, ಸುರಕ್ಷತಾ ಕ್ರಮಗಳನ್ನು ಅನುಸರಿಸದ, ಸಾರ್ವಜನಿಕರೊಂದಿಗೆ ನಿಯಮಬಾಹಿರವಾಗು ನಡೆದುಕೊಳ್ಳುವ ಮೈಕ್ರೋಫ್ ಫೈನಾನ್ಸ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದರು. ಸಾಲ ನೀಡುವ ಸಂಸ್ಥೆಗಳು ಆರ್ ಬಿ ಐ ಮಾರ್ಗಸೂಚಿ ಅನ್ವಯ ಕ್ರಮ ಕೈಗೊಳ್ಳಬೇಕು ಮತ್ತು ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಬೇಕೆಂದರು. ಇಂತಹ ಕಂಪೆನಿಗಳಿಂದ ಸಾಲಗಾರರಿಗೆ ತೊಂದರೆಯಾದಲ್ಲಿ ನಿರ್ಭೀತಿಯಿಂದ ಸಂಬಂಧಿಸಿದ ಠಾಣೆಗಳಲದಲಿ ದೂರು…

Read More

ಜಕಾರ್ತಾ: ಇಂಡೋನೇಷ್ಯಾದ ಮಲೋಕುವಿನ ಮಲೋಹಿ, ಕಬುಪಟೆನ್ ಮಲುಕು ತೆಂಗಾಹ್ ಬಳಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂಡೋನೇಷ್ಯಾದ ಹವಾಮಾನಶಾಸ್ತ್ರ, ಹವಾಮಾನಶಾಸ್ತ್ರ ಮತ್ತು ಭೂಭೌತ ಸಂಸ್ಥೆ (BMKG) ಪ್ರಕಾರ, ಮಂಗಳವಾರ ಮುಂಜಾನೆ ಇಂಡೋನೇಷ್ಯಾದ ಮಾಲುಕುವಿನ ಮಸೋಹಿ, ಕಬುಪಟೆನ್ ಮಾಲುಕು ಟೆಂಗಾ ಬಳಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು ಸ್ಥಳೀಯ ಸಮಯ 2:32 ಕ್ಕೆ 10 ಕಿ.ಮೀ ಆಳದಲ್ಲಿ ಸಂಭವಿಸಿದ್ದು, ಪೀಡಿತ ಪ್ರದೇಶಗಳಲ್ಲಿ ವಾಸಿಸುವವರಿಗೆ ಇದು ಬಲವಾಗಿ ಅನುಭವವಾಗುವ ಸಾಧ್ಯತೆ ಹೆಚ್ಚು. ಯುರೋಪಿಯನ್-ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರ (EMSC) ಮತ್ತು ಜರ್ಮನ್ ಸಂಶೋಧನಾ ಕೇಂದ್ರ ಫಾರ್ ಜಿಯೋಸೈನ್ಸಸ್ (GFZ) ಸೇರಿದಂತೆ ಬಹು ಭೂಕಂಪ ಮೇಲ್ವಿಚಾರಣಾ ಸಂಸ್ಥೆಗಳ ವರದಿಗಳು ಸಹ 6.0 ತೀವ್ರತೆಯ ಭೂಕಂಪವನ್ನು ದಾಖಲಿಸಿವೆ. ಆದಾಗ್ಯೂ, ಭೂಕಂಪಶಾಸ್ತ್ರಜ್ಞರು ಹೆಚ್ಚುವರಿ ಡೇಟಾವನ್ನು ವಿಶ್ಲೇಷಿಸುವುದರಿಂದ ಕೇಂದ್ರಬಿಂದು, ಆಳ ಮತ್ತು ಪ್ರಮಾಣವನ್ನು ಪರಿಷ್ಕರಿಸಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಭೂಕಂಪವು ಕೇಂದ್ರಬಿಂದುವಿನ ಬಳಿ ವ್ಯಾಪಕವಾಗಿ ಅನುಭವಿಸಿದ್ದರೂ, ಅದು ಗಮನಾರ್ಹ ಹಾನಿಯನ್ನುಂಟುಮಾಡಿದೆ ಎಂದು ನಿರೀಕ್ಷಿಸಲಾಗಿಲ್ಲ. ಮಸೋಹಿ (ಕೇಂದ್ರಕೇಂದ್ರದಿಂದ 138 ಕಿ.ಮೀ., ಜನಸಂಖ್ಯೆ:…

Read More