Author: kannadanewsnow57

ಬೆಂಗಳೂರು : ಸಾರ್ವಜನಿಕರೇ ನೀವು ಸ್ಥಳೀಯವಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಜಸ್ಟ್ ಈ ಕೆಲಸ ಮಾಡಿ ಸಾಕು. ಹೌದು,ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕ್ಯಾತಗಾನಗಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಮುಂದುವರೆದು ವರದಿಯಲ್ಲಿ ತಿಳಿಸಲಾಗಿರುವ ಮಾಹಿತಿಯು ಸುಳ್ಳಾಗಿದ್ದು, ಸದರಿ ಗ್ರಾಮದಲ್ಲಿ ಕೊರತೆಗಳು ಇರುವುದಿಲ್ಲ. ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಈಗಾಗಲೇ ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಪಾವಗಡ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. https://twitter.com/KarnatakaVarthe/status/1898992950018978228

Read More

ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯುವ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯಿತಿ ರಾಜ್‌ (ತಿದ್ದುಪಡಿ) ವಿಧೇಯಕ -2025ಕ್ಕೆ ಒಪ್ಪಿಗೆ ನೀಡಿದ್ದು, ಇದರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅನಧಿಕೃತ ಆಸ್ತಿಗಳಿಗೆ ‘ಬಿ-ಖಾತಾ’ ನೀಡಿ, ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ಮೂಲಕ ಪಂಚಾಯಿತಿಗಳಿಗೆ ವಾರ್ಷಿಕ ಸಾವಿರಾರು ಕೋಟಿ ರೂ. ತೆರಿಗೆ ಸಂಗ್ರಹವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾರಿಯಲ್ಲಿರುವಂತೆ ಗ್ರಾಮೀಣ ಪ್ರದೇಶಗಳಲ್ಲೂ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಬಡಾವಣೆಗಳು, ನಿವೇಶನಗಳು, ಕಟ್ಟಡಗಳಿಗೆ ‘ಬಿ-ಖಾತಾ’ ನೀಡಿ ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅನಧಿಕೃತ ಬಡಾವಣೆಗಳ ರಚನೆ ತಡೆಗಟ್ಟಲು ಇ-ಸ್ವತ್ತು ತಂತ್ರಾಂಶವನ್ನು 2013 ರ ಜೂನ್ 15 ರಿಂದ ಜಾರಿಗೊಳಿಸಿದ್ದು, ಪಂಚತಂತ್ರ ತಂತ್ರಾಂಶದಲ್ಲಿ 1.40 ಕೋಟಿ ಆಸ್ತಿಗಳ ವಿವರ ನಮೂದಾಗಿದೆ. ಆದರೆ ಇ-ಸ್ವತ್ತು ತಂತ್ರಾಂಶದಲ್ಲಿ 40 ಲಕ್ಷ ಆಸ್ತಿಗಳಷ್ಟೇ ನೋಂದಣಿಯಾಗಿದ್ದು, ಬಾಕಿ…

Read More

ಇತ್ತೀಚಿನ ದಿನಗಳಲ್ಲಿ, ದೇಶಾದ್ಯಂತ ಹವಾಮಾನದಲ್ಲಿ ಬಹಳಷ್ಟು ಏರಿಳಿತಗಳು ಕಂಡುಬರುತ್ತಿವೆ. ಮಾರ್ಚ್ ತಿಂಗಳ ಅರ್ಧ ಭಾಗ ಮಾತ್ರ ಕಳೆದಿದೆ ಮತ್ತು ಅನೇಕ ಸ್ಥಳಗಳಲ್ಲಿ, ಶಾಖವು ಈಗಾಗಲೇ ತುಂಬಾ ಬಿಸಿಯಾಗಲು ಪ್ರಾರಂಭಿಸಿದೆ, ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತಿದೆ ಮತ್ತು ಇತರ ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ರಾಷ್ಟ್ರ ರಾಜಧಾನಿ ದೆಹಲಿ-ಎನ್‌ಸಿಆರ್‌ನಲ್ಲಿ ಬಲವಾದ ಶೀತ ಗಾಳಿ ಬೀಸುತ್ತಿದ್ದು, ಕಳೆದ ಎರಡು ದಿನಗಳಿಂದ ಮಳೆಯ ಎಚ್ಚರಿಕೆ ನೀಡಲಾಗಿದೆ. ಐಎಂಡಿಯ ಇತ್ತೀಚಿನ ಮಾಹಿತಿಯ ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ದೇಶದ ಕೆಲವು ಭಾಗಗಳಲ್ಲಿ ತೀವ್ರ ಶಾಖದ ಅಲೆಗಳು ಬೀಸುವ ಸಾಧ್ಯತೆಯಿದೆ, ಆದರೆ ಹಲವು ರಾಜ್ಯಗಳಲ್ಲಿ ಆಲಿಕಲ್ಲು ಮಳೆ ಮತ್ತು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಾಸ್ತವವಾಗಿ, ಪೂರ್ವ ಬಾಂಗ್ಲಾದೇಶದಲ್ಲಿ ಚಂಡಮಾರುತದ ಪರಿಚಲನೆ ರೂಪುಗೊಳ್ಳುತ್ತದೆ, ಆದರೆ ಅದು ಕ್ರಮೇಣ ದುರ್ಬಲಗೊಳ್ಳಬಹುದು. ಅಸ್ಸಾಂ ಮತ್ತು ರಾಜಸ್ಥಾನದಲ್ಲೂ ಚಂಡಮಾರುತದ ಪ್ರಸರಣವಿದೆ. ಇದರಿಂದಾಗಿ, ರಾಜಸ್ಥಾನದಿಂದ ಪಂಜಾಬ್ ವರೆಗೆ ಒಂದು ತಗ್ಗು ರೇಖೆ ರೂಪುಗೊಂಡಿದೆ. ಇದರಿಂದಾಗಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇಲ್ಲಿ…

Read More

ನವದೆಹಲಿ : ಪಾಕಿಸ್ತಾನದಲ್ಲಿ ಮತ್ತೊಬ್ಬ ಭಾರತದ ವಿರೋಧಿ ಉಗ್ರ ಅಬು ಖತಲ್ ಸಿಂಧಿ ಹತ್ಯೆಯಾಗಿದೆ. ಇವನು ಲಷ್ಕರ್-ಎ-ತೈಬಾದ ದೊಡ್ಡ ಭಯೋತ್ಪಾದಕ ಹಫೀಜ್ ಸಯೀದ್‌ ಆಪ್ತನಾಗಿದ್ದಾನೆ. ಜೂನ್ 9 ರಂದು, ರಿಯಾಸಿಯ ಶಿವ-ಖೋಡಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದರು. ಆ ದಾಳಿಯ ಸೂತ್ರಧಾರಿಗಳಲ್ಲಿ ಒಬ್ಬ ಅಬು ಕಟಲ್ ಸಿಂಧಿ ಕೂಡ ಒಬ್ಬ. ಆತನನ್ನು NIA ಯ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಬಂದಿರುವ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ 8 ಗಂಟೆಗೆ ಝೇಲಂ ಜಿಲ್ಲೆಯಲ್ಲಿ ಅವರನ್ನು ಕೊಲೆ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ, ಪಾಕಿಸ್ತಾನದಲ್ಲಿ ಅನೇಕ ಕುಖ್ಯಾತ ಭಾರತ ವಿರೋಧಿ ಭಯೋತ್ಪಾದಕರು ನಿಗೂಢ ಸಂದರ್ಭಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಈ ಪೈಕಿ ಮೊದಲ ಹೆಸರು ರಿಯಾಜ್ ಅಹ್ಮದ್ ಅಲಿಯಾಸ್ ಅಬು ಖಾಸಿಮ್. ಲಷ್ಕರ್‌ನ ಈ ಉನ್ನತ ಕಮಾಂಡರ್ ಕರಾಚಿಯಲ್ಲಿ ಕೊಲ್ಲಲ್ಪಟ್ಟರು. ಇದಾದ ನಂತರ, ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಮಾಸ್ಟರ್ ಮೈಂಡ್ ಬಶೀರ್ ಅಹ್ಮದ್ ಪೀರ್ 2023 ರ ಫೆಬ್ರವರಿಯಲ್ಲಿ ಪಾಕಿಸ್ತಾನದಲ್ಲಿ…

Read More

ಮ್ಯಾನ್ಮಾರ್ : ಮ್ಯಾನ್ಮಾರ್ ಸೇನೆಯು ಪ್ರಜಾಪ್ರಭುತ್ವ ಪರ ಪ್ರತಿರೋಧ ಗುಂಪಿನ ನಿಯಂತ್ರಣದಲ್ಲಿರುವ ಹಳ್ಳಿಯನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿತು. ಈ ದಾಳಿಯಲ್ಲಿ ಕನಿಷ್ಠ 27 ನಾಗರಿಕರು ಸಾವನ್ನಪ್ಪಿ, 30 ಮಂದಿ ಗಾಯಗೊಂಡರು ಎಂದು ವಿರೋಧ ಪಕ್ಷಗಳು ಶನಿವಾರ ಈ ಹೇಳಿಕೆ ನೀಡಿವೆ. ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮ್ಯಾನ್ಮಾರ್ ಸೇನೆಯು ಸಿಂಗು ಟೌನ್‌ಶಿಪ್‌ನಲ್ಲಿರುವ ಲೆಟ್ ಪ್ಯಾನ್ ಹ್ಲಾ ಗ್ರಾಮದ ಮೇಲೆ ವೈಮಾನಿಕ ದಾಳಿ ನಡೆಸಿತು. ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ ಮಂಡಲೆಯಿಂದ ಈ ಗ್ರಾಮವು ಸುಮಾರು 65 ಕಿ.ಮೀ ದೂರದಲ್ಲಿದೆ ಎಂದು ಮಂಡಲೆ ಪೀಪಲ್ಸ್ ಡಿಫೆನ್ಸ್ ಫೋರ್ಸ್‌ನ ವಕ್ತಾರರು ತಿಳಿಸಿದ್ದಾರೆ. ಆದರೆ, ಈ ವಾಯುದಾಳಿಯ ಬಗ್ಗೆ ಸೇನೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಫೆಬ್ರವರಿ 1, 2021 ರಂದು, ಮ್ಯಾನ್ಮಾರ್‌ನಲ್ಲಿ ಸೇನೆಯು ಆಂಗ್ ಸಾನ್ ಸೂಕಿ ಅವರ ಚುನಾಯಿತ ಸರ್ಕಾರವನ್ನು ಪದಚ್ಯುತಗೊಳಿಸಿತು, ನಂತರ ದೇಶದಲ್ಲಿ ಬೃಹತ್ ಪ್ರತಿಭಟನೆಗಳು ಪ್ರಾರಂಭವಾದವು. ಶಾಂತಿಯುತ ಪ್ರದರ್ಶನಗಳನ್ನು ಸೇನೆಯು ಬಲಪ್ರಯೋಗದಿಂದ ಹತ್ತಿಕ್ಕಿತು ಮತ್ತು ಅನೇಕ ಜನರು ಶಸ್ತ್ರಾಸ್ತ್ರಗಳನ್ನು…

Read More

ಬೆಂಗಳೂರು : ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದ್ದಾರೆ. ಸಿಐಡಿ ಹಾಗೂ ಸೈಬರ್ ಕ್ರೈಂ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ CIDECODE, ‘ ಅಪರಾಧ ಶೃಂಗಸಭೆ-2025’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿವೆ. ಜಗತ್ತಿನಲ್ಲಿ ನಡೆಯುತ್ತಿರುವ ಸೈಬರ್ ಅಪರಾಧಗಳ ಕುರಿತು ಪೊಲೀಸರಿಗೂ ಅರಿವು ಇರಬೇಕು ಹಾಗೂ ಪ್ರಕರಣಗಳ ಪರಿ ಣಾಮಕಾರಿ ತನಿಖೆಗೆ ಸಜ್ಜುಗೊಳಿಸಬೇಕೆಂಬ ಉದ್ದೇಶದಿಂದ ಸಿಸಿಐಟಿಆರ್ ಸ್ಥಾಪಿಸಲಾಗಿದೆ. ಇದುವರೆಗೂ 46 ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದರು. ಒಟಿಪಿ ಪಡೆದು ಬ್ಯಾಂಕ್ ಖಾತೆಗಳಿಂದ ಹಣ ದೋಚುವುದು, ಡೇಟಾ ಹ್ಯಾಕ್, ಸರಕಾರದ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡುವುದು ಸೇರಿದಂತೆ ನಾನಾ ಬಗೆಯ ಸೈಬರ್ ಅಪರಾಧಗಳು ನಡೆಯು ತ್ತಿವೆ. ಬೆಂಗಳೂರು…

Read More

ಬೆಂಗಳೂರು: ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸಬರು, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯವ್ಯಾಪಿ ಪರೀಕ್ಷೆಗೆ 15881 ಶಿಕ್ಷಣ ಸಂಸ್ಥೆಗಳು ನೋಂದಾಯಿಸಿಕೊಂಡಿವೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲ 2818 ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್‌ ಅಳವಡಿಸಲಾಗಿದೆ. ಇಡೀ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಎಲ್ಲ ಅಕ್ರಮಗಳು ಕಂಪ್ಯೂಟರ್ ಪರದೆಯಲ್ಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ…

Read More

ನವದೆಹಲಿ : ಕೆಂಪು ಸಮುದ್ರದ ಹಡಗು ಸಾಗಣೆಯ ಮೇಲಿನ ದಾಳಿಗೆ ಪ್ರತೀಕಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ಬಂಡುಕೋರರ ವಿರುದ್ಧ ಬೃಹತ್ ಮಿಲಿಟರಿ ದಾಳಿ ನಡೆಸಿದರು. ಈ ದಾಳಿಯಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ. ಅವರು ನಿಲ್ಲಿಸದಿದ್ದರೆ, ಅವರ ಪರಿಸ್ಥಿತಿ ನರಕಕ್ಕಿಂತ ಕೆಟ್ಟದಾಗಿರುತ್ತದೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಹೌತಿ ಪ್ರತಿಭಟನಾಕಾರರನ್ನು ಬೆಂಬಲಿಸುವ ಇರಾನ್‌ಗೆ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಹೌತಿಗಳಿಗೆ ಬೆಂಬಲ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕಾಗುತ್ತದೆ ಎಂದು ಟ್ರಂಪ್ ಹೇಳಿದ್ದಾರೆ. “ಇರಾನ್ ಅಮೆರಿಕಕ್ಕೆ ಬೆದರಿಕೆ ಹಾಕಿದರೆ, ಅಮೆರಿಕ ಯಾವುದೇ ವಿನಮ್ರತೆಯನ್ನು ತೋರಿಸುವುದಿಲ್ಲ” ಎಂದು ಅವರು ಹೇಳಿದರು. ಈ ದಾಳಿಗಳ ಬಗ್ಗೆ ಮಾಹಿತಿ ನೀಡುವ ಅಧಿಕಾರಿಯೊಬ್ಬರು, ಬಹುಶಃ ಇದು ವಾರಗಳವರೆಗೆ ಮುಂದುವರಿಯಬಹುದು ಎಂದು ಹೇಳಿದರು. ಜನವರಿಯಲ್ಲಿ ಟ್ರಂಪ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮಧ್ಯಪ್ರಾಚ್ಯದಲ್ಲಿ ಅಮೆರಿಕ ಸೇನೆ ನಡೆಸಿದ ಅತಿದೊಡ್ಡ ಮಿಲಿಟರಿ ದಾಳಿ ಇದಾಗಿದೆ. ಅಮೆರಿಕವು ಟೆಹ್ರಾನ್ ಮೇಲೆ ಆರ್ಥಿಕ ಒತ್ತಡವನ್ನು ಹೆಚ್ಚಿಸುತ್ತಿರುವ ಮತ್ತು ತನ್ನ ಪರಮಾಣು…

Read More

ಬೆಂಗಳೂರು : ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಇರುವ ಅರ್ಹತೆಗಳು, ನಿಯಮಗಳೇನು ಎಂಬುದರ ಕುರಿತಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ 14)ರ 8ನೇ ಪ್ರಕರಣದೊಂದಿಗೆ ಓದಲಾದ 3ನೇ ಪ್ರಕರಣದ (2)ನೇ ಉಪ-ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ, ಕರ್ನಾಟಕ ಸಿವಿಲ್ ಸೇವೆಗಳ (ಅನುಕಂಪ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ಕರಡನ್ನು, ಅಧಿಸೂಚನೆ ಸಂಖ್ಯೆ. ಡಿಪಿಎಆರ್ 100 ಎಸ್‌ಸಿಎ 95. ದಿನಾಂಕ: 23ನೇ ಮಾರ್ಚ್, 1966ರಲ್ಲಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯ 2ಸಿ(1) ನೇ ಪ್ರಕರಣದ ಭಾಗ IV ರಲ್ಲಿ ದಿನಾಂಕ 23ನೇ ಮಾರ್ಚ್ 1996ರಂದು, ಸರ್ಕಾರಿ ರಾಜ್ಯಪತ್ರದಲ್ಲಿ ಕರಡನ್ನು ಪ್ರಕಟಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗೆ ಇದರಿಂದ ಬಾಧಿತರಾಗಬಹುದಾದ ಎಲ್ಲ ವ್ಯಕ್ತಿಗಳಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿ ಪ್ರಕಟಿಸಿರುವುದರಿಂದ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ 14) ರ 8ನೇ ಪ್ರಕರಣದೊಂದಿಗೆ…

Read More

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾರ್ಚ್.18 ಮತ್ತು 19ರಂದು ಬಿಸಿ ಗಾಳಿಯ ಪರಿಸ್ಥಿತಿ ಹೆಚ್ಚಾಗಿರಲಿದೆ. ಜನರನ್ನು ಎಚ್ಚರಿಸುವ ಸಲುವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳ ಕಲಬುರಗಿ ಜಿಲ್ಲೆಯ ಐನಾಪುರ ಹೋಬಳಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 42.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿ, ಬೀದರ್, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಹಲವೆಡೆ ಮತ್ತು ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಕೆಲವು ಸ್ಥಳಗಳು ಮತ್ತು ತುಮಕೂರು, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ಕನ್ನಡ, ವಿಜಯನಗರ, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 40 ° C ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. https://twitter.com/KarnatakaSNDMC/status/1900868481785954763?ref_src=twsrc%5Etfw%7Ctwcamp%5Etweetembed%7Ctwterm%5E1900868481785954763%7Ctwgr%5Ecd5d1e3f7ab19da9e1a1cb80ab336e32a61639a6%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fyellow-alert-issued-in-north-interior-districts-of-the-state-on-march-18-19%2F

Read More