Subscribe to Updates
Get the latest creative news from FooBar about art, design and business.
Author: kannadanewsnow57
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ಸೂಕ್ಷ್ಮವಾಗಿ, ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಏಪ್ರಿಲ್ 16ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮೊದಲು ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇರುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡ್ಯೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ಬೇಕಾಗಿರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವುದು ಮತ್ತು…
ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ಶಾಕ್. ಕಾವೇರಿ ಕುಡಿಯುವ ನೀರಿನ ದರವನ್ನು ಬೆಂಗಳೂರು ಜಲಮಂಡಳಿಯು ಏರಿಕೆ ಮಾಡಿದೆ. ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡುವುದನ್ನ ಮನಗಾಣಿಸುವ ಅಂಶಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನೀರಿನ ದರವನ್ನು ಏರಿಕೆ ಮಾಡಲು ಉದ್ದೇಶಿಸಲಾಗಿದೆ. ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ಈ ಕುರಿತು ಮಾಹಿತಿ ನೀಡಿದ್ದು, ವಿವಿಧ ಸ್ಲಾಬ್ ಗಳಿಗೆ ಆಧಾರಿತವಾಗಿ ಗೃಹ ಬಳಕೆಗೆ ಪ್ರತಿ ಲೀಟರ್ ನೀರಿಗೆ ಕನಿಷ್ಠ 0.15 ಪೈಸೆ (ಒಂದು ಪೈಸೆಗಿಂತಲೂ ಕಡಿಮೆ) ಹಾಗೂ ಗರಿಷ್ಠ 1 ಪೈಸೆ, ದೊಡ್ಡ ಅಪಾರ್ಟ್ಮೆಂಟ್ಗಳಿಗೆ ಕನಿಷ್ಠ 0.30 ಪೈಸೆ ಹಾಗೂ ಗರಿಷ್ಠ 1 ಪೈಸೆಯಷ್ಟು ಏರಿಕೆ ಮಾಡಲಾಗಿದೆ ಹಾಗೂ ವಾಣಿಜ್ಯ ಉದ್ದೇಶಕ್ಕೆ ಕನಿಷ್ಠ ದರವನ್ನು ಪ್ರತಿ ಲೀ.0.90 ಪೈಸೆ ಹಾಗೂ ಗರಿಷ್ಠ 1.20 ಪೈಸೆ ಹೆಚ್ಚಳ ಮಾಡಲಾಗಿದ್ದು ಕಾವೇರಿ ನೀರಿನ ಬಳಕೆಗೆ ಅನುಗುಣವಾಗಿ ದರ ಏರಿಕೆ ಮಾಡಲಾಗಿದೆ. ಈ ಬಗ್ಗೆ ಏ.10ರ ಇಂದು ಅಧಿಕೃತವಾಗಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.…
ಬೆಂಗಳೂರು : ರಾಜ್ಯದಲ್ಲಿ 1ನೇ ತರಗತಿ ಪ್ರವೇಶಕ್ಕೆ ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬ ವಯೋಮಿತಿ ನಿಗಿದಿ ಮಾಡಿರುವುದನ್ನು ಸಡಿಲಿಕೆ ಮಾಡುವ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿ ಪ್ರವೇಶಕ್ಕೆ ಜೂ.1ಕ್ಕೆ ಆರು ವರ್ಷ ತುಂಬಿರ ಬೇಕು ಎಂಬ ವಯೋಮಿತಿ ನಿಗದಿ ಮಾಡಿರುವುದನ್ನು ಸಡಿಲಿಕೆ ಮಾಡುವಂತೆ ಪಾಲಕರು ಒತ್ತಾಯಿಸಿದ್ದಾರೆ. ಈ ವಿಚಾರವನ್ನು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ರವಾನೆ ಮಾಡಿದ್ದೇವೆ. ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ರಾಜ್ಯದಲ್ಲಿ ಕೊರತೆ ಇರುವ ಶಿಕ್ಷಕರ ಪ್ರಮಾಣವನ್ನು ಕಡಿಮೆ ಮಾಡಲು ಶೀಘ್ರದಲ್ಲೇ ನೇಮಕಾತಿ ನಡೆಸುತ್ತೇವೆ. ಅತಿಥಿ ಉಪನ್ಯಾಸಕರಿಂದ ಹೆಚ್ಚಿನ ಗುಣಮಟ್ಟ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದೇವೆ. ಫಲಿತಾಂಶ ಕುಸಿತಕ್ಕಾಗಿ ಹಿಂದಿನವರನ್ನು ನಾವು ದೂಷಿಸುವುದಿಲ್ಲ. ಬದಲಾಗಿ ನಾವು ಮುಂದಿನ ಪರೀಕ್ಷೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸುತ್ತೇವೆ. ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷ ಣದ ಸುಧಾರಣೆಗೆ ಕ್ರಮ…
ಬೆಂಗಳೂರು : ರಾಜ್ಯದಲ್ಲಿ ಆನ್ ಲೈನ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ನೂತನ ಕಾನೂನು ಜಾರಿ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನ್ ಲೈನ್ ಬೆಟ್ಟಿಂಗ್ ಕೇವಲ ನಗರ ಪ್ರದೇಶಗಳಿಗಷ್ಟೇ ಸೀಮಿತ ಅಲ್ಲದೇ ಗ್ರಾಮೀಣ ಪ್ರದೇಶದಲ್ಲೂ ಹರಡುತ್ತಾ ಇದೆ. ಆನ್ ಲೈನ್ ಗೇಮ್ ನಿಂದ ಜನರನ್ನು ಹೇಗೆ ಕಾನೂನಾತ್ಮಕವಾಗಿ ರಕ್ಷಣೆ ಮಾಡಬಹುದು ಎಂಬುದರ ಕುರಿತು ಚರ್ಚೆ ನಡೆಸಲಾಗಿದೆ ಎಂದರು. ಗೇಮಿಂಗ್ ಫೆಡ್ರೇಷನ್ಸ್, ಇಂಡಸ್ಟ್ರೀಸ್ ನವರು ಹಾಗೂ ಗೃಹ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಸೇರಿ ಜಂಟಿಯಾಗಿ ಆನ್ ಲೈನ್ ಬೆಟ್ಟಿಂಗ್ ತಡೆಗೆ ಯಾವುದಾದರೂ ಹೊಸ ಕಾನೂನು ಜಾರಿಗೆ ತರಬಹುದಾ ಎಂದು ನೋಡುತ್ತಾ ಇದ್ದೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಕಾನೂನು ತರಲು ಪ್ರಯತ್ನ ಮಾಡಲಾಗುತ್ತಿದೆ. ಹೀಗಾಗಿ ಜನರಿಗೆ ಒಳ್ಳೆದಾಗುವಂತೆ ಒಂದು ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳು, ಆನ್ಲೈನ್ ಗೇಮಿಂಗ್ ಫೆಡರೇಶನ್ಗಳ ಸದಸ್ಯರು ಮತ್ತು ಉದ್ಯಮ ತಜ್ಞರೊಂದಿಗೆ…
ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಲಿಕಾ ಮಟ್ಟ ಉತ್ತಮ ಪಡಿಸಲು ವಿಶಿಷ್ಟ ಯೋಜನೆ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ದಾಖಲಾತಿ ಸ್ಥಿತಿ ಮತ್ತು ಅವರ ಮೂಲಭೂತ ಓದುವಿಕೆ ಹಾಗೂ ಅಂಕಗಣಿತದ ಕೌಶಲ್ಯ ಕುರಿತು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಅಂದಾಜನ್ನು ಶೈಕ್ಷಣಿಕ ವರದಿ ನೀಡಿದೆ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಕಲಿಕೆಯನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ಮುಂದಿನ ಶೈಕ್ಷಣಿಕ ವರ್ಷದಲ್ಲಿ ʼಕಲಿಕಾ ಮಟ್ಟಕ್ಕೆ ಅನುಗುಣವಾಗಿ ಬೋಧನೆʼ ಪರಿಕಲ್ಪನೆ ಜಾರಿಗೆ ತರಲು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1909236555316944905
ಬೆಂಗಳೂರು: ರಾಜ್ಯಾಧ್ಯಂತ ಭಗವಾನ್ ಬುದ್ಧ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸಹಕಾರ ಸಂಘಗಳ ಅಪರ ನಿಬಂಧಕರು (ನಿ), ಮೈಸೂರು ಇವರು ದಿನಾಂಕ:19.08.2023ರ ಪತ್ರದಲ್ಲಿ, ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು, ಏಷ್ಯಾ ಖಂಡದ ಹಲವಾರು ರಾಷ್ಟ್ರಗಳು ಬುದ್ದ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ವೈಭವದಿಂದ ಆಚರಿಸುತ್ತಿದ್ದು, ವಿಶ್ವದ ಪ್ರಥಮ ಹಾಗೂ ಶ್ರೇಷ್ಠ ದಾರ್ಶನಿಕರಾದ ಬುದ್ಧರ ಜಯಂತಿಯನ್ನು ಅವರು ಜನಿಸಿದ ಭಾರತದಲ್ಲಿ ಸರ್ಕಾರದ ವತಿಯಿಂದ ಆಚರಿಸುವುದು ಸೂಕ್ತ ಎಂದು ತಿಳಿಸುತ್ತಾ, ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಸರ್ಕಾರದ ವತಿಯಿಂದ ಪ್ರತಿವರ್ಷ ಆಯೋಜಿಸಿ ಆಚರಿಸಲು ಸರ್ಕಾರದ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದಿದ್ದಾರೆ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಈಗಾಗಲೇ ವಾರ್ಷಿಕವಾಗಿ ವಿವಿಧ ಮಹಾಪುರುಷರ…
ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿಸುದ್ದಿ ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿಯು ಹಲವಾರು ವಲಯ ರೈಲ್ವೆಗಳಲ್ಲಿ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ ಒಟ್ಟು 9,970 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸಂಬಂಧಪಟ್ಟ ವಿಷಯದಲ್ಲಿ ಐಟಿಐ ಪದವಿ ಪಡೆದಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಎಂಜಿನಿಯರಿಂಗ್ ಡಿಪ್ಲೊಮಾ/ಪದವಿ ಹೊಂದಿರಬೇಕು. ಅಭ್ಯರ್ಥಿಗಳು 18 ರಿಂದ 30 ವರ್ಷ ವಯಸ್ಸಿನವರಾಗಿರಬೇಕು. ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳಿಗೆ ಸೇರಿದವರಿಗೆ ಸಡಿಲಿಕೆ ಇರುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಸಿಬಿಟಿ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಇತ್ಯಾದಿಗಳ ಆಧಾರದ ಮೇಲೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ರೂ. ಪ್ರತಿ ತಿಂಗಳು. ಸಂಬಳ 19,900 ಆಗಿರುತ್ತದೆ. ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500 ಪಾವತಿಸಬೇಕು. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕರಿಗೆ ರೂ. 250 ಪಾವತಿಸಬೇಕು. ಏಪ್ರಿಲ್ 10 ರಿಂದ ಅರ್ಜಿ…
ಬೆಂಗಳೂರು : ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. 1. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 (ಸಂಕ್ಷಿಪ್ತವಾಗಿ ‘2021ರ ನಿಯಮಗಳು), ದಿನಾಂಕ: 07-01-2021 ರಿಂದ ಜಾರಿಗೆ ಬಂದಿರುತ್ತದೆ. 2. 2021ರ ನಿಯಮಗಳ ನಿಯಮ 24(3) ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ. ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗೆ, ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ. ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದಲ್ಲಿ ಅಥವಾ ಎಲೇ ಮಾಡಿದ್ದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ…
ಬೆಂಗಳೂರು : ಎಟಿಎಂಗಳಿಂದ ಹಣ ತೆಗೆಯುವಾಗ ಹರಿದ ನೋಟುಗಳು ಬಂದ್ರೆ ಗ್ರಾಹಕರು ಟೆನ್ಷನ್ ಆಗುತ್ತಾರೆ. ಹರಿದ ನೋಟುಗಳು ಅಮಾನ್ಯವಾಗಿದ್ದು, ಅವುಗಳನ್ನ ಬದಲಾಯಿಸಿಕೊಳ್ಳುವುದು ಹೇಗೆ.? ಎಂಬ ಚಿಂತೆ ಅವ್ರನ್ನ ಕಾಡುತ್ತೆ. ಇಷ್ಟಕ್ಕೂ ನಕಲಿ ನೋಟು ಮತ್ತು ಹರಿದ ನೋಟುಗಳಿಗೆ ಪರ್ಯಾಯವೇನು? ನೀವು ಕೂಡ ಇಂತಹ ಪರಿಸ್ಥಿತಿ ಅನುಭವಿಸಿದ್ರೆ, ಸುಲಭವಾಗಿ ಅವುಗಳನ್ನು ಬದಲಾಯಿಸಿಕೊಳ್ಳಬಹುದು. ಇಂದು ಸಹ ನಗದು ನೋಟುಗಳ ಅಗತ್ಯವು ಇನ್ನೂ ಗಮನಾರ್ಹವಾಗಿದೆ, ವಿಶೇಷವಾಗಿ ಮಾರುಕಟ್ಟೆ ಖರೀದಿಗಳು ಮತ್ತು ವಿವಿಧ ಸೇವೆಗಳಿಗೆ ಪಾವತಿ. ಅನೇಕ ಬಾರಿ, ಎಟಿಎಂನಿಂದ ಹಣವನ್ನು ಹಿಂಪಡೆಯುವಾಗ, ಕೆಲವು ಹರಿದ ನೋಟುಗಳು ಸಹ ಹೊರಬರುತ್ತವೆ, ಅದನ್ನು ಸ್ವೀಕರಿಸಲು ಜನರು ಹಿಂಜರಿಯುತ್ತಾರೆ. ನೀವು ಎಟಿಎಂನಿಂದ ಹರಿದ ನೋಟುಗಳನ್ನು ಪಡೆದಿದ್ದರೆ ಚಿಂತಿಸಬೇಡಿ ಏಕೆಂದರೆ ನೀವು ಬ್ಯಾಂಕ್ಗೆ ಹೋಗಿ ಅವುಗಳನ್ನು ಸುಲಭವಾಗಿ ವಿನಿಮಯ ಮಾಡಿಕೊಳ್ಳಬಹುದು. ಬ್ಯಾಂಕ್ನಲ್ಲಿ ನೋಟುಗಳನ್ನು ಬದಲಾಯಿಸುವ ಪ್ರಕ್ರಿಯೆ ನೀವು ಎಟಿಎಂನಿಂದ ಹರಿದ ನೋಟುಗಳನ್ನು ತೆಗೆದುಕೊಂಡಾಗ ಮತ್ತು ಅವುಗಳನ್ನು ಬ್ಯಾಂಕ್ನಲ್ಲಿ ಬದಲಾಯಿಸಲು ನಿರ್ಧರಿಸಿದಾಗ, ಅನುಸರಿಸಬೇಕಾದ ಕೆಲವು ಸರಳ ಹಂತಗಳಿವೆ. ಬ್ಯಾಂಕ್ ಎಟಿಎಂನಿಂದ ತೆಗೆದ ಹರಿದ…
ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ..? ಆದರೆ ನೀವು ಅಪಾಯದಲ್ಲಿದ್ದೀರಿ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಫೋನ್ಗಳಿಂದ ನೀಲಿ ಬೆಳಕು ಹೆಚ್ಚಾಗಿ ನಿದ್ರೆಗೆ ಅಡ್ಡಿಪಡಿಸುತ್ತದೆ. ತಲೆಯ ಬಳಿ ಫೋನ್ ಇಟ್ಟುಕೊಂಡು ಮಲಗಿದ್ರೆ ಪುರುಷ ಫಲವತ್ತತೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಅಲ್ಲದೆ, ಕ್ಯಾನ್ಸರ್ ಮತ್ತು ಹೃದ್ರೋಗದ ಅಪಾಯವು ಹೆಚ್ಚು. ಇದು ತಲೆನೋವು, ಸ್ನಾಯು ನೋವು ಇತ್ಯಾದಿ ಸಮಸ್ಯೆಗಳನ್ನೂ ಉಂಟುಮಾಡುತ್ತದೆ. ಹಾಗಾಗಿ ರಾತ್ರಿ ಮಲಗುವಾಗ ಫೋನ್ ಅನ್ನು ಆದಷ್ಟು ದೂರವಿಡಲು ಸೂಚಿಸಲಾಗಿದೆ. ನಿದ್ರಾ ಭಂಗ : ಸ್ಮಾರ್ಟ್ಫೋನ್’ಗಳಿಂದ ನೀಲಿ ಬೆಳಕು ಮೆಲಟೋನಿನ್ ಉತ್ಪಾದನೆಯನ್ನ ಅಡ್ಡಿಪಡಿಸುತ್ತದೆ. ನಿದ್ರೆಯ ಗುಣಮಟ್ಟವನ್ನ ಕಡಿಮೆ ಮಾಡುತ್ತದೆ. ಇದಲ್ಲದೇ, ಫೋನ್ ನೋಟಿಫಿಕೇಶನ್ ಮತ್ತು ಅಲರ್ಟ್’ಗಳು ನಿದ್ರೆಗೆ ಭಂಗ ತರಬಹುದು. ಸ್ಪೋಟದ ಅಪಾಯ : ಸ್ಮಾರ್ಟ್ಫೋನ್ ದಿಂಬಿನ ಕೆಳಗೆ ಇಡುವುದರಿಂದ ಶಾಖದ ಶೇಖರಣೆಗೆ ಕಾರಣವಾಗಬಹುದು. ಇದು ಫೋನ್ ಅತಿಯಾಗಿ ಬಿಸಿಯಾಗಲು ಕಾರಣವಾಗುತ್ತದೆ, ಸ್ಪೋಟದ ಅಪಾಯವನ್ನ ಹೆಚ್ಚಿಸುತ್ತದೆ. ಇದಲ್ಲದೇ ಫೋನ್ ನೋಟಿಫಿಕೇಶನ್’ಗಳ ಕಂಪನವು ನಿಮ್ಮನ್ನು ಎಚ್ಚರಗೊಳಿಸುತ್ತದೆ. ಇದು ಮಾನಸಿಕ ಅಂತಕಕ್ಕೂ ಕಾರಣವಾಗುತ್ತದೆ. ಮಾನಸಿಕ…