Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ (MSSC) ಮಹಿಳೆಯರಿಗೆ ಮಾತ್ರ ಲಭ್ಯವಿರುವ ವಿಶೇಷ ಉಳಿತಾಯ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ, ನೀವು ಗರಿಷ್ಠ ₹2 ಲಕ್ಷ ಠೇವಣಿ ಇಡಬಹುದು ಮತ್ತು ಅದರ ಮೇಲೆ ವಾರ್ಷಿಕ 7.5% ಬಡ್ಡಿಯನ್ನು ಪಡೆಯಬಹುದು. ಹೀಗಾಗಿ, ಮುಕ್ತಾಯದ ಒಟ್ಟು ಮೊತ್ತ ₹2,32,044 ಆಗಿರುತ್ತದೆ, ಇದರಲ್ಲಿ ₹32,044 ರ ಖಾತರಿ ಬಡ್ಡಿಯೂ ಸೇರಿದೆ. ಮಹಿಳೆಯರಿಗೆ ಅತ್ಯುತ್ತಮ ಉಳಿತಾಯ ಯೋಜನೆಗಳು ಭಾರತ ಸರ್ಕಾರವು ವಿವಿಧ ವರ್ಗಗಳಿಗೆ ವಿವಿಧ ರೀತಿಯ ಉಳಿತಾಯ ಯೋಜನೆಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ, ವಿಶೇಷವಾಗಿ ಮಹಿಳೆಯರಿಗಾಗಿ ಕೆಲವು ಯೋಜನೆಗಳನ್ನು ನಡೆಸಲಾಗುತ್ತಿದ್ದು, ಇದರಲ್ಲಿ ಹೂಡಿಕೆ ಮಾಡುವುದರಿಂದ ಹೆಚ್ಚಿನ ಬಡ್ಡಿ ಗಳಿಸಬಹುದು. ನೀವು ವಿವಾಹಿತರಾಗಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದು. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ 2023 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿತು. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆಯ ಪ್ರಯೋಜನಗಳು ಈ ಯೋಜನೆಯಡಿಯಲ್ಲಿ, ಮಹಿಳೆಯರ ಹೆಸರಿನಲ್ಲಿ ಮಾತ್ರ ಖಾತೆ ತೆರೆಯಬಹುದು. ಕನಿಷ್ಠ ₹1,000 ಮತ್ತು ಗರಿಷ್ಠ ₹2,00,000…
ಬೆಂಗಳೂರು: ಮುಸ್ಲಿಂ ಗುತ್ತಿಗೆದಾರರಿಗೆ ಟೆಂಡರ್ ಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡುವ ಉದ್ದೇಶದಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಕುರಿತಾಗಿ ವಿಧೇಯಕ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದೇ ಅಧಿವೇಶನದಲ್ಲಿ ಬಿಲ್ ಮಂಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಒಂದು ಕೋಟಿಯವರೆಗಿನ ಕಾಮಗಾರಿಗಳಲ್ಲಿ ಮುಸ್ಲೀಮರಿಗೆ ಮೀಸಲಾತಿ, ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿ, ಮುಸ್ಲೀಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ನೀಡಲಾಗಿದೆ. ಎಸ್.ಸಿ ಎಸ್.ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿಯವರೆಗಿನ ಮೊತ್ತ ವಿಸ್ತರಿಸಿ 2 ಕೋಟಿಯವರೆಗೆ ಮೀಸಲಾತಿ ಅವಕಾಶ ನೀಡಲಾಗಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಂಪುಟ ಅನುಮೋದನೆ ನೀಡಿದೆ.
BREAKING : ಬೆಳಗಾವಿ ಹೆದ್ದಾರಿಯಲ್ಲಿ ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ : ಇಬ್ಬರು ಪ್ರಯಾಣಿಕರ ರಕ್ಷಣೆ.!
ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದಿರುವ ಘಟನೆ ನಡೆದಿದೆ. ಬೆಳಗಾವಿಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗವಾಗಿ ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರು ನಜ್ಜು ಗುಜ್ಜಾಗಿದ್ದು, ಅದೃಷ್ಟವಶಾತ್ ವ್ಯಾಗನರ್ ಕಾರಿನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿ ದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ. ಉತ್ತಮ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ನಮ್ಮ ಅನುಭವಿ ವೈದ್ಯರ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಲು, ನಾನು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ವಿಷಯವನ್ನು ಚರ್ಚಿಸುತ್ತೇನೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿನ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.
ನವದೆಹಲಿ : ಶುಕ್ರವಾರದಂದು ನಡೆದ ‘ರಕ್ತ ಚಂದ್ರ’ ಅಂದರೆ ಸಂಪೂರ್ಣ ಚಂದ್ರಗ್ರಹಣವನ್ನು ಭೂಮಿಯ ಮೇಲಿನ ಕೋಟ್ಯಂತರ ಜನರು ವೀಕ್ಷಿಸಿದರು. ಈ ಸಮಯದಲ್ಲಿ, ಚಂದ್ರನ ಮೇಲಿದ್ದ ಬಾಹ್ಯಾಕಾಶ ನೌಕೆಯೂ ಈ ಗ್ರಹಣವನ್ನು ಕಂಡಿತು. ಟೆಕ್ಸಾಸ್ ಮೂಲದ ಫೈರ್ಫ್ಲೈ ಏರೋಸ್ಪೇಸ್ ಈ ಅದ್ಭುತ ವಿದ್ಯಮಾನದ ಫೋಟೋಗಳು ಮತ್ತು ಟೈಮ್-ಲ್ಯಾಪ್ಸ್ ವೀಡಿಯೊವನ್ನು ಹಂಚಿಕೊಂಡಿದ್ದು, ಸೂರ್ಯ ನಿಧಾನವಾಗಿ ಭೂಮಿಯ ನೆರಳಿನಲ್ಲಿ ಕಣ್ಮರೆಯಾಗುವುದನ್ನು ತೋರಿಸುತ್ತದೆ. ಫೈರ್ಫ್ಲೈ ಏರೋಸ್ಪೇಸ್ನ ಬ್ಲೂ ಘೋಸ್ಟ್ ಲ್ಯಾಂಡರ್ ಮಾರ್ಚ್ 2 ರಂದು ಚಂದ್ರನ ಹತ್ತಿರದ ಭಾಗದಲ್ಲಿ ಯಶಸ್ವಿಯಾಗಿ ಇಳಿಯಿತು. ಮಾರ್ಚ್ 13-14ರ ರಾತ್ರಿ, ಭೂಮಿಯು ಸೂರ್ಯನನ್ನು ಆವರಿಸುತ್ತಿದ್ದ ಈ ವಿದ್ಯಮಾನವನ್ನು ಅದು ಸೆರೆಹಿಡಿಯಿತು. https://twitter.com/i/status/1900619346788929541 ಭೂಮಿ ಚಂದ್ರ ಮತ್ತು ಸೂರ್ಯನ ನಡುವೆ ಬಂದಾಗ ಚಂದ್ರ ಗ್ರಹಣ ಸಂಭವಿಸುತ್ತದೆ. ಈ ಸಮಯದಲ್ಲಿ ಭೂಮಿಯ ನೆರಳು ಚಂದ್ರನ ಮೇಲೆ ಬೀಳುತ್ತದೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಏಕೆಂದರೆ ಈ ಸಮಯದಲ್ಲಿ ಸೂರ್ಯನ ಬೆಳಕು ಭೂಮಿಯನ್ನು ತಲುಪುವುದಿಲ್ಲ. ಆದರೆ ಬಾಹ್ಯಾಕಾಶದಲ್ಲಿ ಪರಿಸ್ಥಿತಿ ವಿಭಿನ್ನವಾಗುತ್ತದೆ.…
ಬೆಂಗಳೂರು : ಎಟಿಎಂಗಳಿಂದ ಹಣ ತೆಗೆಯುವಾಗ ಹರಿದ ನೋಟುಗಳು ಬಂದ್ರೆ ಗ್ರಾಹಕರು ಟೆನ್ಷನ್ ಆಗುತ್ತಾರೆ. ಹರಿದ ನೋಟುಗಳು ಅಮಾನ್ಯವಾಗಿದ್ದು, ಅವುಗಳನ್ನ ಬದಲಾಯಿಸಿಕೊಳ್ಳುವುದು ಹೇಗೆ.? ಎಂಬ ಚಿಂತೆ ಅವ್ರನ್ನ ಕಾಡುತ್ತೆ. ಇಷ್ಟಕ್ಕೂ ನಕಲಿ ನೋಟು ಮತ್ತು ಹರಿದ ನೋಟುಗಳಿಗೆ ಪರ್ಯಾಯವೇನು? ನೀವು ಕೂಡ ಇಂತಹ ಪರಿಸ್ಥಿತಿ ಅನುಭವಿಸಿದ್ರೆ, ಸುಲಭವಾಗಿ ಅವುಗಳನ್ನು ಬದಲಾಯಿಸಿಕೊಳ್ಳಬಹುದು. ಇಂದು ಸಹ ನಗದು ನೋಟುಗಳ ಅಗತ್ಯವು ಇನ್ನೂ ಗಮನಾರ್ಹವಾಗಿದೆ, ವಿಶೇಷವಾಗಿ ಮಾರುಕಟ್ಟೆ ಖರೀದಿಗಳು ಮತ್ತು ವಿವಿಧ ಸೇವೆಗಳಿಗೆ ಪಾವತಿ. ಅನೇಕ ಬಾರಿ, ಎಟಿಎಂನಿಂದ ಹಣವನ್ನು ಹಿಂಪಡೆಯುವಾಗ, ಕೆಲವು ಹರಿದ ನೋಟುಗಳು ಸಹ ಹೊರಬರುತ್ತವೆ, ಅದನ್ನು ಸ್ವೀಕರಿಸಲು ಜನರು ಹಿಂಜರಿಯುತ್ತಾರೆ. ನೀವು ಎಟಿಎಂನಿಂದ ಹರಿದ ನೋಟುಗಳನ್ನು ಪಡೆದಿದ್ದರೆ ಚಿಂತಿಸಬೇಡಿ ಏಕೆಂದರೆ ನೀವು ಬ್ಯಾಂಕ್ಗೆ ಹೋಗಿ ಅವುಗಳನ್ನು ಸುಲಭವಾಗಿ ವಿನಿಮಯ ಮಾಡಿಕೊಳ್ಳಬಹುದು. ಬ್ಯಾಂಕ್ನಲ್ಲಿ ನೋಟುಗಳನ್ನು ಬದಲಾಯಿಸುವ ಪ್ರಕ್ರಿಯೆ ನೀವು ಎಟಿಎಂನಿಂದ ಹರಿದ ನೋಟುಗಳನ್ನು ತೆಗೆದುಕೊಂಡಾಗ ಮತ್ತು ಅವುಗಳನ್ನು ಬ್ಯಾಂಕ್ನಲ್ಲಿ ಬದಲಾಯಿಸಲು ನಿರ್ಧರಿಸಿದಾಗ, ಅನುಸರಿಸಬೇಕಾದ ಕೆಲವು ಸರಳ ಹಂತಗಳಿವೆ. ಬ್ಯಾಂಕ್ ಎಟಿಎಂನಿಂದ ತೆಗೆದ ಹರಿದ…
ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 6 ನೇ ತರಗತಿ ಪ್ರವೇಶ ಸಂಬಂಧ ಸೇವಾ ಸಿಂಧು ಪೋರ್ಟಲ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿನ 6 ನೇತರಗತಿ ಪ್ರವೇಶ ಪ್ರಕ್ರಿಯೆಯನ್ನು ಸೇವಾ ಸಿಂಧು ಪೋರ್ಟಲ್ ತಂತ್ರಾಂಶದ ಮೂಲಕ ಪ್ರಾರಂಭಿಸಲಾಗಿದ್ದು, ಅದರಂತೆ ಸೇವಾ ಸಿಂಧು Admission for Morarji Desai Residential Schools ಸೇವೆಯ ವೆಬ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ನಿರ್ದೇಶನಾಲಯದ ವತಿಯಿಂದ ಪ್ರವೇಶಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಈ ಕೆಳಕಂಡ ದಿನಾಂಕಗಳನ್ನು ತಿಳಿಸಲಾಗಿತ್ತು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 31.01.2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10.03.2025. ಪ್ರಸ್ತುತ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ದಿನಾಂಕ:25.03.2025…
ಹೃದಯವು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದು ನಿರಂತರವಾಗಿ ರಕ್ತವನ್ನು ಪಂಪ್ ಮಾಡುತ್ತದೆ, ದೇಹದ ಎಲ್ಲಾ ಭಾಗಗಳಿಗೆ ಆಮ್ಲಜನಕ ಮತ್ತು ಪೋಷಕಾಂಶಗಳನ್ನು ತಲುಪಿಸುತ್ತದೆ. ಆದಾಗ್ಯೂ, ಕೆಲವೊಮ್ಮೆ ಹೃದಯಕ್ಕೆ ರಕ್ತ ಪೂರೈಸುವ ಅಪಧಮನಿಗಳು ಕೊಬ್ಬು, ಕೊಲೆಸ್ಟ್ರಾಲ್ ಮತ್ತು ಇತರ ವಸ್ತುಗಳಿಂದ ಮುಚ್ಚಿಹೋಗುತ್ತವೆ. ಇದನ್ನು ವೈದ್ಯಕೀಯ ಪರಿಭಾಷೆಯಲ್ಲಿ ‘ಅಪಧಮನಿಕಾಠಿಣ್ಯ’ ಎಂದು ಕರೆಯಲಾಗುತ್ತದೆ. ಈ ಸ್ಥಿತಿಯು ತುಂಬಾ ಅಪಾಯಕಾರಿ, ಏಕೆಂದರೆ ಇದು ಹೃದಯಾಘಾತ, ಪಾರ್ಶ್ವವಾಯು ಮತ್ತು ಇತರ ಜೀವಕ್ಕೆ ಅಪಾಯಕಾರಿ ತೊಡಕುಗಳಿಗೆ ಕಾರಣವಾಗಬಹುದು. ಹೃದಯ ಅಪಧಮನಿಗಳ ಅಡಚಣೆಯು ನಿಧಾನ ಪ್ರಕ್ರಿಯೆಯಾಗಿದ್ದು, ಇದನ್ನು ಹೆಚ್ಚಾಗಿ “ಮೂಕ ಕೊಲೆಗಾರ” ಎಂದು ಕರೆಯಲಾಗುತ್ತದೆ. ಏಕೆಂದರೆ ಹಲವು ವರ್ಷಗಳವರೆಗೆ ಯಾವುದೇ ಲಕ್ಷಣಗಳು ಕಾಣಿಸದೇ ಇರಬಹುದು, ಆದರೆ ಇದು ಇದ್ದಕ್ಕಿದ್ದಂತೆ ಹೃದಯಾಘಾತ ಅಥವಾ ಹಠಾತ್ ಸಾವಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಆರಂಭಿಕ ಚಿಹ್ನೆಗಳನ್ನು ಗುರುತಿಸುವುದು ತುಂಬಾ ಮುಖ್ಯವಾಗಿದೆ. ನಿಮ್ಮ ದೇಹವು ಕಳುಹಿಸುವ ಸಂಕೇತಗಳನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಬೇಗನೆ ವೈದ್ಯಕೀಯ ಚಿಕಿತ್ಸೆ ಪಡೆಯಬಹುದು, ಹೀಗಾಗಿ ಜೀವಕ್ಕೆ ಅಪಾಯಕಾರಿ ತೊಡಕುಗಳನ್ನು ತಡೆಯಬಹುದು. ಹೃದಯ ಅಪಧಮನಿ…
ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ 1 ಲಕ್ಷದವರೆಗೆ ವಿಮೆ ಸೌಲಭ್ಯವಿದೆ. 1 ವರ್ಷಕ್ಕೆ 1 ಲಕ್ಷದವರೆಗೂ ವಿಮೆ ಸೌಲಭ್ಯವಿದೆ ಮುಂಬರುವ ದಿನಗಳಲ್ಲಿ 5 ಲಕ್ಷಕ್ಕೆ ವಿಮೆ ಮೊತ್ತ ಏರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಪರಿಷತ್ ನಲ್ಲಿ ಎಲ್ಲ ರೀತಿಯ ಅಂಗವೈಕಲ್ಯ ಒಳಗೊಂಡ ವಿಮೆ ಯೋಜನೆಗಳಿವೆಯೇ? ವಿಶೇಷವೇತನರಿಗೆ ಯಾವ ರೀತಿಯ ಸೌಲಭ್ಯಗಳಿವೆ ಎಂದು ವೈ.ಎಂ ಸತೀಶ ಪ್ರಶ್ನಿಸಿದರು.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರ ನೀಡಿದ್ದು ಅಂಗವಿಕಲತಾ ನಿವಾರಣ ವೈದ್ಯಕೀಯ ಪರಿಹಾರ ನಿಧಿ ಹಾಗು ನಿರಾಮಯ ಆರೋಗ್ಯ ವಿಮಾ ಯೋಜನೆ ಇದೆ. ಆದರೆ ಈ ಯೋಜನೆಯನ್ನು ಇನ್ನಷ್ಟು ವಿಸ್ತರಿಸುವ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು. ವಿಮೆ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಎಂದು ಇದೆ ವೇಳೆ ವೈ.ಎಂ ಸತೀಶ್ ಕೇಳಿದಾಗ ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ 1 ಲಕ್ಷದವರೆಗೆ ವಿಮೆ ಸೌಲಭ್ಯವಿದೆ. 1 ವರ್ಷಕ್ಕೆ 1 ಲಕ್ಷದವರೆಗೂ ವಿಮೆ ಸೌಲಭ್ಯವಿದೆ…
ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರು, ತಮ್ಮ ಕಾರ್ಡ್ ಗೆ ಹೊಸದಾಗಿ ಸದಸ್ಯರ ಹೆಸರು ಸೇರ್ಪಡೆ, ತೆಗೆದು ಹಾಕೋದಕ್ಕೆ, ಹೆಸರು ತಿದ್ದುಪಡಿ ಮಾಡೋದಕ್ಕೆ ಆಹಾರ ಇಲಾಖೆಯಿಂದ ಅವಕಾಶ ನೀಡಲಾಗಿದೆ. ಇದೇ ಮಾರ್ಚ್ 31ರವರೆಗೆ ಅವಕಾಶ ನೀಡಲಾಗಿದೆ. ಹೌದು, ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ ತಿಂಗಳ ಅಂತ್ಯದವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಮಾರ್ಚ್ 31ರ ಅಂತ್ಯದವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ…












