Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಭೂರಹಿತರ ರೈತರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಈ ಯೋಜನೆಗೆ ಇನ್ನೂ ಸೇರದ ಎಲ್ಲಾ ಅರ್ಹ ರೈತರಿಗೆ ಆದಷ್ಟು ಬೇಗ ಅದರ ಪ್ರಯೋಜನಗಳನ್ನು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದರು. ಅಂತಹ ರೈತರನ್ನು ಗುರುತಿಸಿ, ಯೋಜನೆಯೊಂದಿಗೆ ಸಂಪರ್ಕ ಸಾಧಿಸಲು ಅವರಿಗೆ ಸಹಾಯ ಮಾಡುವಂತೆ ಅವರು ಎಲ್ಲಾ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದರು. ಇಲ್ಲಿಯವರೆಗೆ ಯಾವುದೇ ರೈತನನ್ನು ಈ ಯೋಜನೆಯಿಂದ ಹೊರಗಿಟ್ಟಿದ್ದರೆ, ದಯವಿಟ್ಟು ಅವರನ್ನು ಈ ಯೋಜನೆಗೆ ಸಂಪರ್ಕಿಸಲು ನಮಗೆ ಸಹಾಯ ಮಾಡಿ ಎಂದು ಕೃಷಿ ಸಚಿವ ಚೌಹಾಣ್ ಹೇಳಿದರು. ಅಂತಹ ರೈತರಿಗೆ ಅವರ ಹಿಂದಿನ ಕಂತುಗಳಿಗೂ ಪಾವತಿ ಸಿಗುವಂತೆ ನಾವು ಖಚಿತಪಡಿಸುತ್ತೇವೆ ಎಂದರು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಎಂದರೇನು? ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್ ಸಮ್ಮಾನ್…
ಬೆಂಗಳೂರು: ಬಿಬಿಎಂಪಿಯ 2025-26ನೇ ಸಾಲಿನ ಅಯವ್ಯಯವನ್ನು ಮಾರ್ಚ್ 20 ಅಥವಾ 21 ರಂದು ಮಂಡಿಸುವ ಸಾಧ್ಯತೆ ಇದ್ದು, ಈ ಸಲ ಅಂದಾಜು 18,000 ಕೋಟಿ ರೂ.ಗಾತ್ರದ ಬಜೆಟ್ ಮಂಡಿಸೋ ಸಾಧ್ಯತೆ ಇದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 2025-26ರ ಬಜೆಟ್ 18,000 ಕೋಟಿ ರೂ.ಗಳನ್ನು ತಲುಪುವ ನಿರೀಕ್ಷೆಯಿದೆ, ಸ್ವಂತ ಸಂಪನ್ಮೂಲವನ್ನೇ ನೆಚ್ಚಿಕೊಂಡು ಮಾರ್ಚ್ 20 ಅಥವಾ 21 ರಂದು ಅಯವ್ಯಯ ಮಂಡನೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸತತ 5 ನೇ ವರ್ಷವೂ ಅಧಿಕಾರಿಗಳೇ ಆಯವ್ಯಯ ಮಂಡಿಸಲಿದ್ದಾರೆ. ಬಿಬಿಎಂಪಿ ಬಜೆಟ್ ನಲ್ಲಿ ಬ್ರ್ಯಾಂಡ್ ಬೆಂಗಳೂರಿಗೆ ವಿಶೇಷ ಅನುದಾನ ಮೀಸಲಿಡಲಾಗುತ್ತದೆ. ಕಳೆದ ವರ್ಷ 12,369.50 ಕೋಟಿ ರೂ ಗಾತ್ರದ ಬಜೆಟ್ ಮಂಡಿಸಲಾಗಿತ್ತು.
ಚಲಿಸುವ ರೈಲಿನಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡಿ ಅಪಘಾತಗಳಿಗೆ ಒಳಗಾಗುವ ಯುವಕ-ಯುವತಿಯರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಕಾಸ್ಗಂಜ್ ಮತ್ತು ಕಾನ್ಪುರ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. ಚಲಿಸುವ ರೈಲಿನ ಕಿಟಕಿಗೆ ನೇತಾಡುವ ಮೂಲಕ ಯುವಕನೊಬ್ಬ ಅಪಾಯಕಾರಿ ಸಾಹಸ ಪ್ರದರ್ಶಿಸಿದ್ದಾನೆ. ನಂತರ, ರೈಲು ನಿಧಾನವಾಗುತ್ತಿದ್ದಂತೆ, ಅವನು ಮತ್ತೆ ನೆಲಕ್ಕೆ ಬಿದ್ದನು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ. ಈ ಮಧ್ಯೆ, ಯುವಕನ ಈ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂತಹ ಕೆಲಸಗಳನ್ನು ಮಾಡುವ ಮೊದಲು ಜನರು ತಮ್ಮನ್ನು ಬೆಳೆಸಿದ ಪೋಷಕರನ್ನು ನೆನಪಿಸಿಕೊಳ್ಳಬೇಕೆಂದು ಅವರು ಸಲಹೆ ನೀಡುತ್ತಾರೆ. https://twitter.com/i/status/1899302084778053782 https://twitter.com/ChotaNewsApp/status/1899302084778053782?ref_src=twsrc%5Etfw%7Ctwcamp%5Etweetembed%7Ctwterm%5E1899302084778053782%7Ctwgr%5E8ecc98891a995268623358b3bf8fad2fccf365b5%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Ftelugu%2Flatestlytelugu-epaper-dhb0d4e671cd9a46c8859850cab97c45bf%2Fdangerousstuntonmovingtrainkadulutunnarailukitikipattukunivelaadutuyuvakudipramaadakarastanttarvaataemjarigindividiyo-newsid-n655470184
ಬೆಂಗಳೂರು : ಶಕ್ತಿ ಯೋಜನೆಯ ಫಲದಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಆದಾಯ ಈ ವರ್ಷವೂ ಭರ್ಜರಿ ಏರಿಕೆಯಾಗಿದೆ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ಮುಜರಾಯಿ ಇಲಾಖೆಯ ಕೇವಲ 10 ದೇವಾಲಯಗಳಿಂದ ಈ ವರ್ಷದ ಆರಂಭದಲ್ಲಿ, ಜನವರಿ – ಫೆಬ್ರವರಿ ಎರಡೇ ತಿಂಗಳಲ್ಲಿ ಬರೋಬ್ಬರಿ ₹70 ಕೋಟಿ ಆದಾಯ ಹರಿದು ಬಂದಿದೆ. ‘ಶಕ್ತಿ’ ಯೋಜನೆಯ ಫಲದಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಆದಾಯ ಈ ವರ್ಷವೂ ಭರ್ಜರಿ ಏರಿಕೆಯಾಗಿದೆ. ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಆದಾಯ ‘ಶಕ್ತಿ’ ಯೋಜನೆ ಜಾರಿಯಾದ ನಂತರ ಎರಡು – ಮೂರು ಪಟ್ಟು ಏರಿಕೆಯಾಗುತ್ತಾ ಬಂದಿದ್ದು, ಈಗ ದಾಖಲಾರ್ಹ ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಶನಿವಾರ ಆಂಜನೇಯ ಸ್ವಾಮಿಗೆ ವಿಶೇಷ ದಿನವಾಗಿದ್ದು ಈ ದಿನ ಈ ಆರು ಪವರ್ ಫುಲ್ ಮಂತ್ರಗಳನ್ನು ಹೇಳಿದರೆ ನಿಮ್ಮ ಕಷ್ಟಗಳು ದೂರವಾಗುವುದು. ಆ ಮಂತ್ರಗಳು ಯಾವುವು ನೋಡಿ.ಓಂ ಹನುಮತೇ ನಮಃ- ಈ ಮಂತ್ರ ಹೇಳುವುದರಿಂದ ನಿಮಗೆ ಕಾನೂನಿನ ವಿವಾದಗಳು, ಸಂಕಷ್ಟಗಳಿದ್ದರೆ ನಿವಾರಣೆಯಾಗುವುದು. ಓಂ ಹಂ ಹನುಮತೇ ರುದ್ರಾತ್ಮಕಾಯಂ ಹಮ್ ಫಟ್- ಈ ಮಂತ್ರವು ನಿಮ್ಮನ್ನು ಮೃತ್ಯುಭಯದಿಂದ ದೂರ ಮಾಡುತ್ತದೆ. ಅಕಾಲ ಮೃತ್ಯು ಭಯವಿದ್ದರೆ ತಪ್ಪದೇ ಈ ಮಂತ್ರವನ್ನು ಜಪಿಸಿ. ಓಂ ಹಂ ಪವನ ನಂದನಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಹನುಮಂತನ ಆಶೀರ್ವಾದ ಪಡೆಯುತ್ತೀರಿ. ವಿಶೇಷವಾಗಿ ಇದನ್ನು ಬ್ರಹ್ಮಚಾರಿಗಳು ಹೇಳಿದರೆ ಉತ್ತಮ. ಓಂ ನಮೊ ಹರಿ ಮರ್ಕಟ ಮರ್ಕಟಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಶತ್ರುಭಯ ನಾಶವಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ…
ನವದೆಹಲಿ : ರಾಷ್ಟ್ರೀಯ ಆರೋಗ್ಯ ಮಿಷನ್ನ ಮಿಷನ್ ಸ್ಟೀರಿಂಗ್ ಗ್ರೂಪ್ ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನವನ್ನು ಹೆಚ್ಚಿಸಲು ನಿರ್ಧರಿಸಿದೆ ಮತ್ತು ಸರ್ಕಾರ ಈ ನಿಟ್ಟಿನಲ್ಲಿ ಮುಂದುವರಿಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದರು. ಆಶಾ ಕಾರ್ಯಕರ್ತರ ಸಂಭಾವನೆ ಹೆಚ್ಚಿಸುವಂತೆ ಕೆಲವು ರಾಜ್ಯಗಳಿಂದ ಬಂದ ಬೇಡಿಕೆಗಳ ಮಧ್ಯೆ ಇದನ್ನು ಹೇಳಲಾಗಿದೆ. ಮಿಷನ್ ಸ್ಟೀರಿಂಗ್ ಗ್ರೂಪ್ (MSG) ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ನೀತಿ ನಿರೂಪಣೆ ಮತ್ತು ಕಾರ್ಯಾಚರಣಾ ಸಂಸ್ಥೆಯಾಗಿದೆ. ಪ್ರಶ್ನೋತ್ತರ ಅವಧಿಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ನಡ್ಡಾ, ದೇಶಾದ್ಯಂತ ಶಿಶು ಮತ್ತು ತಾಯಂದಿರ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಆಶಾ ಕಾರ್ಯಕರ್ತರು ಮಾಡುತ್ತಿರುವ ಕಾರ್ಯವನ್ನು ಶ್ಲಾಘಿಸಿದರು ಮತ್ತು ಸರ್ಕಾರವು ತಳಮಟ್ಟದಲ್ಲಿ ಅವರ ಪಾತ್ರವನ್ನು ಗುರುತಿಸುತ್ತದೆ ಎಂದು ಹೇಳಿದರು. ಆರೋಗ್ಯ ಸಚಿವರು ಮೇಲ್ಮನೆಗೆ ತಿಳಿಸಿದರು, “ಆಶಾ ಕಾರ್ಯಕರ್ತರು ಉತ್ತಮ ಕೆಲಸ ಮಾಡುತ್ತಿದ್ದಾರೆ ಮತ್ತು ತಳಮಟ್ಟದಲ್ಲಿ ಅವರ ಪ್ರಯತ್ನಗಳು ತಾಯಂದಿರ ಮರಣ ಪ್ರಮಾಣ, ಶಿಶು ಮರಣ ಪ್ರಮಾಣ…
ಬೆಂಗಳೂರು : ರಾಜ್ಯದಲ್ಲಿ ಈ ವರ್ಷ 1,533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆಯಾಗಿವೆ ಎಂದು ಸದನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಕ್ಕಳಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಂಡುಬರುತ್ತಿರುವುದು ಆತಂಕಕಾರಿ ವಿಷಯವಾಗಿದ್ದು, ಪ್ರತೀ ವರ್ಷ 14 ವರ್ಷದೊಳಗಿನ 876 ಗಂಡು ಮಕ್ಕಳು, 657 ಹೆಣ್ಣು ಮಕ್ಕಳು ಸಹಿತ 1,533 ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಸರಕಾರದ ಮಟ್ಟದಲ್ಲೂ ಪ್ರತೀ ವರ್ಷ ಕಾರ್ಯಕ್ರ ಮಗಳನ್ನು ಆಯೋಜಿಸುತ್ತೇವೆ. ಆದರೂ ಕ್ಯಾನ್ಸರ್ ಹೆಚ್ಚಳವಾಗುತ್ತಿರುವುದು ಆತಂಕ ಸೃಷ್ಟಿಸಿದೆ ಎಂದರು. ಮಕ್ಕಳಲ್ಲಿ ಪ್ರಾರಂಭಿಕ ಹಂತದಲ್ಲೇ ಅರಿವು ಮೂಡಿಸುವ ಕೆಲಸವಾಗಬೇಕು. ಕೇವಲ ಸರಕಾರದಿಂದ ಮಾತ್ರವಲ್ಲದೆ ಸಂಘ-ಸಂಸ್ಥೆಗಳು, ಸರಕಾರೇತರ ಸಂಸ್ಥೆಗಳು, ಸಾರ್ವಜನಿಕರು ಕೈಜೋಡಿಸುವ ಮೂಲಕ ತಡೆಗಟ್ಟಬಹುದು, ಮಕ್ಕಳಲ್ಲಿ ಕ್ಯಾನ್ಸರ್ ಕಂಡುಬರುತ್ತಿರುವ ಬಗ್ಗೆ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಸಾರ್ವಜನಿಕರಿಗೆ ಶಿಬಿರಗಳನ್ನು ಆಯೋಜಿಸುವ ಮೂಲಕ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿಯ ದೊಡ್ಡಬನಹಳ್ಳಿಯಲ್ಲಿ ವಾಸವಾಗಿದ್ದ ನಕಲಿ ವರ್ಗಾವಣೆ ಪತ್ರದ ಮೂಲಕ ಭಾರತದ ದಾಖಲೆ ಪಡೆದಿದ್ದ ಬಾಂಗ್ಲಾದೇಶದ ಮೊಹಮ್ಮದ್ ಸಿದ್ಧಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮಬಂಗಾಳದ ಶಾಲೆಯೊಂದರಲ್ಲಿ ನಕಲಿ ವರ್ಗಾವಣೆ ಪತ್ರದ ಮೂಲಕ ಭಾರತದ ಪಾಸ್ ಪೋರ್ಟ್, ವೋಟರ್ ಐಡಿ, ಪಾನ್ ಕಾರ್ಡ್ ಪಡೆದಿದ್ದ ಸಿದ್ದಿಕ್ ನನ್ನು ಇದೀಗ ಕಾಡಗೋಡಿಯ ಪೊಲೀಸರು ಎಫ್ ಐಆರ್ ದಾಖಲಿಸಿ ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್, 31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: ದೂರವಾಣಿ ಸಂಖ್ಯೆ 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ 2020ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಅತ್ಯುತ್ತಮ ನಟ ಪ್ರಶಸ್ತಿಗೆ ಪ್ರಜ್ವಲ್ ದೇವರಾಜ್ ಭಾಜನರಾಗಿದ್ದರೇ, ಅತ್ಯುತ್ತಮ ನಟಿ ಪ್ರಶಸ್ತಿಗೆ ಅಕ್ಷತಾ ಪಾಂಡವಪುರ ಬಾಜನರಾಗಿದ್ದಾರೆ. ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರದ ಆದೇಶ ಮತ್ತು ತಿದ್ದುಪಡಿ/ಸೇರ್ಪಡೆ ಆದೇಶಗಳಲ್ಲಿ, ಶ್ರೀ ಬಿ.ಎಸ್.ಲಿಂಗದೇವರು, ನಿರ್ದೇಶಕರು ಇವರ ಅಧ್ಯಕ್ಷತೆಯಲ್ಲಿ 2020ನೇ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳಿಗಾಗಿ ಚಲವಚಿತ್ರಗಳನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ರಚಿಸಲಾಗಿತ್ತು ಎಂದಿದ್ದಾರೆ. ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಪತ್ರದಲ್ಲಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು 2020ನೇ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿಯ ಅಂತಿಮ ವರದಿಯನ್ನು ಸರ್ಕಾರಕ್ಕೆ ಕಳುಹಿಸುತ್ತಾ, ಅಂಗೀಕರಿಸಿ ಅನುಮೋದನೆ ನೀಡಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ. 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ…












