Author: kannadanewsnow57

ಬೆಂಗಳೂರು : ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕಯುಕ್ತ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡದೇ, ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಎಂದು ಸರ್ಕಾರ ತಿಳಿಸಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಭೌತಿಕ ಹಾಗೂ ರಾಸಾಯನಿಕ ಗುಣ ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ. ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೂ ಅಪಾಯವಾಗುವುದಲ್ಲದೇ ಸಾರ್ವಜನಿಕರ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ…

Read More

ಬಳ್ಳಾರಿ : ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ ವಿದ್ಯುತ್ ಗ್ರಾಹಕರು ಜನವರಿ-2023 ರಿಂದ ಡಿಸೆಂಬರ್-23 ವರೆಗೆ ಬಳಸಲಾದ ಒಟ್ಟು ವಿದ್ಯುತ್ ಬಿಲ್ಲಿನ ಸರಾಸರಿ ಮೊತ್ತದ ಎರಡು ಪಟ್ಟು ಮೊತ್ತವನ್ನು ಖಾತೆಯಲ್ಲಿ ಠೇವಣಿ ರೂಪದಲ್ಲಿ ಇರಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ವಿದ್ಯುತ್ ಗ್ರಾಹಕರು ತಮ್ಮ ಖಾತೆಯಲ್ಲಿ ಈಗಾಗಲೇ ಇರುವಂತಹ ಠೇವಣಿ, ಈ ಮೊತ್ತಕ್ಕಿಂತ ಕಡಿಮೆ ಇದ್ದಲ್ಲಿ ಅದನ್ನು ನಿಗಮವು ಅಧಿಕ ಭದ್ರತಾ ಠೇವಣಿ(ಎಎಸ್‌ಡಿ) ರೂಪದಲ್ಲಿ ವಸೂಲಿ ಮಾಡುವ ಹಕ್ಕು ಹೊಂದಿರುತ್ತದೆ. ತಮ್ಮ ವಿದ್ಯುತ್ ಬಿಲ್ಲಿನ ಕೆಳ ಭಾಗದಲ್ಲಿ ಎಎಸ್‌ಡಿ ಎಂದು ನಮೂದಾಗಿರುವ ಮೊತ್ತವನ್ನು ಆ.31 ರೊಳಗೆ ಪಾವತಿಸಬೇಕು. ಮೊತ್ತವನ್ನು ಜೆಸ್ಕಾಂ ಕಚೇರಿ ಅಥವಾ ಆನ್‌ಲೈನ್ www.gescom.online.payment ಮೂಲಕ ಪಾವತಿಸಬಹುದು. ಇಲ್ಲದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎನಿವೇರ್ ಆಸ್ತಿ ನೋಂದಣಿ ಯೋಜನೆಯನ್ನು ಸೆಪ್ಟೆಂಬರ್ . 02 ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು ನೋಂದಣಿ ಇಲಾಖೆ ನೀಡುವ ‘ಎನಿವೇರ್ ನೋಂದಣಿ’ ಸೇವೆಯನ್ನು ರಾಜ್ಯ ಮಟ್ಟದ ಕಾರ್ಯವಿಧಾನವಾಗಿ ವಿಸ್ತರಿಸುವುದಕ್ಕೆ ಮುಂದಾಗಿದೆ. ಸಾರ್ವಜನಿಕರು ಸ್ಥಿರಾಸ್ತಿ ನೋಂದಣಿಗಾಗಿ ನಿರ್ದಿಷ್ಟ ಉಪ ನೋಂದಣಿ ಕಚೇರಿಗೆ ಭೇಟಿ ನೀಡದೇ, ಮತ್ತಾವುದೇ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದಾದ ‘ಎನಿವೇರ್‌ ನೋಂದಣಿ’ ವ್ಯವಸ್ಥೆ ಸೆಪ್ಟೆಂಬರ್‌ 2 ರಿಂದ ರಾಜಾದ್ಯಂತ ಜಾರಿಯಾಗಲಿದೆ. ಎನಿವೇರ್ ನೋಂದಣಿ ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ‘ ಎನಿವೇರ್‌ ನೋಂದಣಿ ‘ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಬಹು ಕಚೇರಿ ಆಯ್ಕೆ ಸಿಗಲಿದ್ದು, ಒಂದೇ ಕಚೇರಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇರುವುದಿಲ್ಲ. ಏನಿದು ಏನಿವೇರ್‌ ರಿಜಿಸ್ಟ್ರೇಷನ್? ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು…

Read More

ಬೆಳಗಾವಿ : ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಇಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣನ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಭಾರಿ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ. ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು.…

Read More

ನವದೆಹಲಿ : ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದೆ. ಇವುಗಳಲ್ಲಿ ದೆಹಲಿಯಲ್ಲಿ 8 ಮತ್ತು ಕರ್ನಾಟಕದಲ್ಲಿ ಒಂದು ನಕಲಿ ವಿಶ್ವವಿದ್ಯಾಲಯಗಳಿವೆ. ಕಳೆದ ವರ್ಷ 20 ನಕಲಿ ವಿಶ್ವವಿದ್ಯಾಲಯಗಳಿದ್ದು, ಈ ವರ್ಷ ಅವುಗಳ ಸಂಖ್ಯೆ 21ಕ್ಕೆ ತಲುಪಿದೆ. ಈ ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಮಾನ್ಯವಾಗಿಲ್ಲ ಎಂದು ಹೇಳಿದೆ. ಮೇಲಾಗಿ, ಈ ನಕಲಿ ವಿಶ್ವವಿದ್ಯಾನಿಲಯಗಳು ಪದವಿಗಳನ್ನು ನೀಡಿದ್ದರೂ, ಉದ್ಯೋಗದ ಉದ್ದೇಶಕ್ಕಾಗಿ ಅವುಗಳನ್ನು ಗುರುತಿಸಲಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ. ದೇಶದಲ್ಲಿ ಅತಿ ಹೆಚ್ಚು ನಕಲಿ ವಿಶ್ವವಿದ್ಯಾನಿಲಯಗಳು ದೆಹಲಿಯಲ್ಲಿವೆ ಎಂದು ಅದು ಕಂಡುಹಿಡಿದಿದೆ. ದೆಹಲಿಯಲ್ಲಿ 8 ನಕಲಿ ವಿಶ್ವವಿದ್ಯಾಲಯಗಳು ದೆಹಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಂಡ್ ಫಿಸಿಕಲ್ ಹೆಲ್ತ್ ಸೈನ್ಸಸ್ ಯೂನಿವರ್ಸಿಟಿ, ದೆಹಲಿ ವಾಣಿಜ್ಯ ವಿಶ್ವವಿದ್ಯಾಲಯ ಲಿಮಿಟೆಡ್ ದರಿಯಾಗಂಜ್, ದೆಹಲಿ ಯುನೈಟೆಡ್ ನೇಷನ್ಸ್ ವಿಶ್ವವಿದ್ಯಾಲಯ, ದೆಹಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ದೆಹಲಿ ವೃತ್ತಿಪರ ವಿಶ್ವವಿದ್ಯಾಲಯ, ದೆಹಲಿ ಆಧ್ಯಾತ್ಮಿಕ ವಿಶ್ವವಿದ್ಯಾಲಯ, ದೆಹಲಿ ವಿಶ್ವಕರ್ಮ ಸ್ವಯಂ ಉದ್ಯೋಗಕ್ಕಾಗಿ…

Read More

ನವದೆಹಲಿ : ಸಾಮಾಜಿಕ ಜಾಲತಾಣ ವಾಟ್ಸ್ಆ್ಯಪ್ನಲ್ಲಿ ನಕಲಿ ಸಂದೇಶವೊಂದು ಹರಿದಾಡುತ್ತಿದೆ. ತಂಪು ಪಾನೀಯಗಳನ್ನು ಕುಡಿಯುವ ಮೂಲಕ ಜನರು ಎಬೋಲಾ ವೈರಸ್ ಸೋಂಕಿಗೆ ಒಳಗಾಗಬಹುದು ಎಂದು ಸಂದೇಶದಲ್ಲಿ ಹೇಳಲಾಗುತ್ತಿದೆ. ಈ ಸಂದೇಶವನ್ನು ಸರ್ಕಾರ ಕಳುಹಿಸುತ್ತಿದೆ ಎಂದು ಸಂದೇಶದಲ್ಲಿ ಹೇಳಲಾಗಿದೆ. ಈ ಸಂದೇಶದ ಬಗ್ಗೆ ಸರ್ಕಾರ ಎಚ್ಚರಿಕೆ ನೀಡಿದೆ. ಪಿಐಬಿ ಫ್ಯಾಕ್ಟ್ ಚೆಕ್ ಈ ಸಂದೇಶವನ್ನು ನಕಲಿ ಎಂದು ಬಣ್ಣಿಸಿದೆ. ಬಳಕೆದಾರರು ಈ ಸಂದೇಶವನ್ನು ನಂಬಬಾರದು ಎಂದು ಸರ್ಕಾರ ಹೇಳಿದೆ. ತಂಪು ಪಾನೀಯಗಳನ್ನು ಕುಡಿಯದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಳಕೆದಾರರಿಗೆ ಯಾವುದೇ ಸಲಹೆ ನೀಡಿಲ್ಲ ಎಂದು ಪಿಐಬಿ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ನಕಲಿ ಸಂದೇಶದಲ್ಲಿ ಏನು ಬರೆಯಲಾಗಿದೆ? ಮಾಹಿತಿಯ ಪ್ರಕಾರ, ಈ ಸಂದೇಶವನ್ನು ಹೈದರಾಬಾದ್ನಿಂದ ದೇಶಾದ್ಯಂತ ಹರಡಲಾಗುತ್ತಿದೆ. ನಕಲಿ ಸಂದೇಶದ ಪ್ರಕಾರ, ಕೋಕಾ ಕೋಲಾ, 7ಅಪ್, ಪೆಪ್ಸಿಯಂತಹ ತಂಪು ಪಾನೀಯಗಳನ್ನು ತಯಾರಿಸುವ ಕಂಪನಿಯ ಕಾರ್ಮಿಕರೊಬ್ಬರು ಅವುಗಳಲ್ಲಿ ಎಬೋಲಾ ವೈರಸ್ ಸೋಂಕಿತ ರಕ್ತವನ್ನು ಬೆರೆಸಿದ್ದಾರೆ. https://twitter.com/PIBFactCheck/status/1826920105361412239?ref_src=twsrc%5Etfw%7Ctwcamp%5Etweetembed%7Ctwterm%5E1826920105361412239%7Ctwgr%5E09779e3794a53f1612bee40d372125e26b1a1edb%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fdainikjagran-epaper-dh8f289d060ef1400296ad0c47fd86406b%2Fkolddrinkmevayaraswhatsappmesejselogomemachahadakampsarakarnebataisacchai-newsid-n627905097

Read More

ನವದೆಹಲಿ : ಹೆಣ್ಣು ಮಕ್ಕಳ ವಿದ್ಯಾಭ್ಯಾಸ, ಮದುವೆಗೆ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದು ಸುಕನ್ಯಾ ಸಮೃದ್ಧಿ ಯೋಜನೆ (SSY) ಅನ್ನು ಸಹ ಒಳಗೊಂಡಿದೆ. ಸರ್ಕಾರದ ಈ ಯೋಜನೆಯಲ್ಲಿ ದಿನಕ್ಕೆ ರೂ. ಪ್ರತಿ ಠೇವಣಿಗೆ 35, ನಿಮ್ಮ ಮಗಳು 21 ವರ್ಷ ತುಂಬುವ ಹೊತ್ತಿಗೆ ರೂ. 5 ಲಕ್ಷ ಪಡೆಯಬಹುದು. ಹೇಗೆ ಎಂದು ಕಂಡುಹಿಡಿಯೋಣ. ಸುಕನ್ಯಾ ಸಮೃದ್ಧಿ ಯೋಜನೆಯನ್ನು ಕೇಂದ್ರ ಸರ್ಕಾರವು 2015 ರಲ್ಲಿ ಪ್ರಾರಂಭಿಸಿತು. ಈ ಯೋಜನೆಯಡಿ, ಮಗಳ ತಂದೆ ಯಾವುದೇ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಮಗಳ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯುತ್ತಾರೆ. ಮಗಳ ಶಿಕ್ಷಣ ಮತ್ತು ಮದುವೆಗೆ ಹಣವನ್ನು ಠೇವಣಿ ಮಾಡಲು ಬಯಸುವ ಎಲ್ಲಾ ಜನರು ಈ ಯೋಜನೆಯಡಿ ಬ್ಯಾಂಕ್ ಖಾತೆಯನ್ನು ತೆರೆಯಬಹುದು. ಈ ಯೋಜನೆಯಡಿ ಖಾತೆ ತೆರೆಯಲು ಕನಿಷ್ಠ ಮೊತ್ತವನ್ನು ರೂ.250 ಎಂದು ನಿಗದಿಪಡಿಸಲಾಗಿದೆ. ಈ ಖಾತೆಯಲ್ಲಿ ಪ್ರತಿ ತಿಂಗಳು ರೂ. 250 ರಿಂದ 5,000 ಠೇವಣಿ ಇಡಬಹುದು. ಇದರ…

Read More

ನವದೆಹಲಿ : ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಘೋಷಣೆಯ ನಂತರ ಸರ್ಕಾರಿ ನೌಕರರು ಈಗ ನಿವೃತ್ತಿಯಾದರೆ, ಯುಪಿಎಸ್ ಅಡಿಯಲ್ಲಿ ಎಷ್ಟು ಪಿಂಚಣಿ ಪಡೆಯುತ್ತಾರೆ? ಎಂಬುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ಇಲ್ಲಿ ಕೇಂದ್ರ ಸರ್ಕಾರಿ ನೌಕರರ ಸಂಬಳ 60, 70 ಮತ್ತು 80 ಸಾವಿರ ರೂಪಾಯಿಗಳಾಗಿದ್ದರೆ ಅವರಿಗೆ ಎಷ್ಟು ಪಿಂಚಣಿ ಬರುತ್ತದೆ ಎಂದು ಕೆಲವು ಮೂಲ ವೇತನದ ಲೆಕ್ಕಾಚಾರಗಳನ್ನು ನೀಡಲಾಗಿದೆ. ನಾವು ಸರಳ ಭಾಷೆಯಲ್ಲಿ ಅರ್ಥಮಾಡಿಕೊಳ್ಳೋಣ, ಆದರೆ ಅದಕ್ಕೂ ಮೊದಲು ಈ ಯೋಜನೆಯ ಅಡಿಯಲ್ಲಿ ಘೋಷಣೆ ಮತ್ತು ನಿಯಮಗಳು ಮತ್ತು ಷರತ್ತುಗಳನ್ನು ವಿವರವಾಗಿ ತಿಳಿಸಿ. ಏಕೀಕೃತ ಪಿಂಚಣಿ ಯೋಜನೆ (UPS) ಅಡಿಯಲ್ಲಿ ಘೋಷಣೆ ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ಯೋಜನೆಯನ್ನು ಆಗಸ್ಟ್ 24, 2024 ರಂದು ಘೋಷಿಸಿತು, ಇದು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆ. ಈ ಯೋಜನೆಯು ಸರ್ಕಾರಿ ನೌಕರರ ಕೊಡುಗೆಯ ಮೇಲೆ ಪಿಂಚಣಿ ಪ್ರಯೋಜನಗಳನ್ನು ಒದಗಿಸುತ್ತದೆ. ಈ ಯೋಜನೆಯಡಿ ನೀವು ಸ್ಥಿರ ಪಿಂಚಣಿ ಪಡೆಯುತ್ತೀರಿ.…

Read More

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಜೊತೆಗಿನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರೌಡಿ ಶೀಟರ್ ಜನಾರ್ಧನ್ ಪುತ್ರ ಸತ್ಯ ಇದೀಗ ಬ್ಯಾಡರಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೌಡಿ ಶೀಟರ್ ಧರ್ಮ ಜೊತೆ ವಿಡಿಯೋ ಕಾಲ್ ಮಾಡುವಾಗ ಸತ್ಯ ನಟ ದರ್ಶನ್ ಜೊತೆ ಕೂಡ ಮಾತನಾಡಿದ್ದನು. ಬ್ಯಾಡರಹಳ್ಳಿ ರೌಡಿಶೀಟರ್ ಜನಾರ್ಧನ ಪುತ್ರ ಈ ಸತ್ಯ ದರ್ಶನ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದನು. ಈ ಹಿನ್ನೆಲೆ ಆತನನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದರು. ಆದರೆ ಸತ್ಯ ಪರಾರಿಯಾಗಿದ್ದ. ಬಳಿಕ ಇದೀಗ ವಶಕ್ಕೆ ಪಡೆಯಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆ ಎನ್ನಲಾಗಿದೆ. ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದರೂ ಜೈಲಿನಲ್ಲಿ ದರ್ಶನ್ ಸಕಲ ಸೌಲಭ್ಯಗಳೊಂದಿಗೆ ಕಾಲಕಳೆಯುತ್ತಿರುವಂತಿದೆ. ಜೈಲಿನಲ್ಲಿ ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ದರ್ಶನ್ ಫೋಟೊ ವೈರಲ್ ಆಗಿದ್ದು, ಸಾಕಷ್ಟು ಅಚ್ಚರಿ, ಅನುಮಾನಗಳಿಗೆ…

Read More

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಜೊತೆಗಿನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರೌಡಿ ಶೀಟರ್ ಜನಾರ್ಧನ್ ಪುತ್ರ ಸತ್ಯ ಇದೀಗ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೌಡಿ ಶೀಟರ್ ಧರ್ಮ ಜೊತೆ ವಿಡಿಯೋ ಕಾಲ್ ಮಾಡುವಾಗ ಸತ್ಯ ನಟ ದರ್ಶನ್ ಜೊತೆ ಕೂಡ ಮಾತನಾಡಿದ್ದನು. ಬ್ಯಾಡರಹಳ್ಳಿ ರೌಡಿಶೀಟರ್ ಜನಾರ್ಧನ ಪುತ್ರ ಈ ಸತ್ಯ ದರ್ಶನ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದನು. ಈ ಹಿನ್ನೆಲೆ ಆತನನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದರು. ಆದರೆ ಸತ್ಯ ಇದೀಗ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆ ಎನ್ನಲಾಗಿದೆ. ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದರೂ ಜೈಲಿನಲ್ಲಿ ದರ್ಶನ್ ಸಕಲ ಸೌಲಭ್ಯಗಳೊಂದಿಗೆ ಕಾಲಕಳೆಯುತ್ತಿರುವಂತಿದೆ. ಜೈಲಿನಲ್ಲಿ ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ದರ್ಶನ್ ಫೋಟೊ ವೈರಲ್ ಆಗಿದ್ದು, ಸಾಕಷ್ಟು ಅಚ್ಚರಿ,…

Read More