Author: kannadanewsnow57

ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ, ಜಾನುವಾರು ಸಾಕಣೆ ಹೂಡಿಕೆ ಸಹಾಯಕ ಮತ್ತು ಜಾನುವಾರು ಸಾಕಣೆ ಕಾರ್ಯಾಚರಣೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಲ್ಲಿ 2,152 ಹುದ್ದೆಗಳಿಗೆ ನೇಮಕಾತಿ ಅಭಿಯಾನವನ್ನು ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bharatiyapashupalan.com ಮೂಲಕ ಮಾರ್ಚ್ 12, 2025 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 20,000 ದಿಂದ 38,200 ರೂಪಾಯಿಗಳವರೆಗೆ ವೇತನ ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ ಹಂತ 1. ಅಧಿಕೃತ ವೆಬ್‌ಸೈಟ್ bharatiyapashupalan.com ಗೆ ಹೋಗಿ. ಹಂತ 2. “ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ” ಲಿಂಕ್ ತೆರೆಯಿರಿ. ಹಂತ 3. ಯೋಜನೆಯ ಸೂಚನೆಯು ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲ್ಪಡುತ್ತದೆ, ಅರ್ಜಿ ಸಲ್ಲಿಕೆಗಾಗಿ ಹೈಪರ್‌ಲಿಂಕ್ ಅನ್ನು ಕ್ಲಿಕ್ ಮಾಡಿ. ಹಂತ 4. ಬಯಸಿದ ಹುದ್ದೆಯನ್ನು ಆಯ್ಕೆಮಾಡಿ ಮತ್ತು ಪೋರ್ಟಲ್ ಮಾರ್ಗದರ್ಶನದಂತೆ ವಿವರಗಳನ್ನು ಭರ್ತಿ ಮಾಡಿ. ಹಂತ 5. ಫಾರ್ಮ್ ಅನ್ನು ಸಲ್ಲಿಸಿ ಮತ್ತು…

Read More

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೇ; ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ; ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅನುದಾನ ಸರಿಯಾಗಿ ಸದ್ಭಳಕೆ ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್‌ ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿಯಲ್ಲಿ ಇತ್ತು. ಆದರೆ, ಈಗ ಬಹುದೊಡ್ಡ ಗಾತ್ರದ ಬಜೆಟ್‌ನ್ನು ಒಳಗೊಂಡಂತಹ ಇಲಾಖೆಯಾಗಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆ ಬಂದಿರುವುದರಿಂದ ಒಂದು ವರ್ಷಕ್ಕೆ ಸುಮಾರು ೩೨ ಸಾವಿರ ಕೋಟಿ ರೂಪಾಯಿಯಷ್ಟು ಹಣವನ್ನು ಗೃಹಲಕ್ಷ್ಮೀಯವರಿಗೆ ನೀಡಲಾಗುತ್ತಿದೆ. ನಮ್ಮ ಇಲಾಖೆಗೆ ನೀಡಿದ ಅನುದಾನ ಪೈಕಿ ಯಾವುದೇ ಅನುದಾನ ಉಳಿದಿಲ್ಲ. ಎಲ್ಲವೂ ಸರಿಯಾದ ರೀತಿಯಲ್ಲಿ ಖರ್ಚಾಗಿದೆ. ಶೇಕಡ ೧೦ರಷ್ಟು ಮಾತ್ರ ಅನುದಾನ ಮಿಕ್ಕಿರಬಹುದು. ಅದು…

Read More

ಬೆಂಗಲೂರು : ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಕಲ್ಯಾಣ ಕರ್ನಾಟಕ ಸೇರಿದಂತೆ ಒಟ್ಟು 10,000 ಕ್ಕೂ ಹೆಚ್ಚು ಶಿಕ್ಷಕರ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಇಲಾಖೆಯಲ್ಲಿರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಇನ್ನೂ 5 ಸಾವಿರ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್, ಮತ್ತೆ 550 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ರು ಹೆಚ್ಚಳ, ಬಿಸಿಯೂಟ ನೌಕರರ ಗೌರವಧನ 1000 ರು. ಏರಿಕೆ, 10,267 ಶಾಲಾ ಶಿಕ್ಷಕರ ನೇಮಕ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆಗೆ…

Read More

ಇಂದಿನ ಯುಗವನ್ನು ಪ್ಲಾಸ್ಟಿಕ್ ಯುಗ ಎಂದು ಕರೆದರೆ, ಬಹುಶಃ ಅದನ್ನು ಅತಿಶಯೋಕ್ತಿ ಎಂದು ಕರೆಯಲಾಗುವುದಿಲ್ಲ. ಮಕ್ಕಳ ಆಟಿಕೆಗಳಿಂದ ಹಿಡಿದು ತರಕಾರಿ ತರುವವರೆಗೆ ಇಂದು ಪ್ಲಾಸ್ಟಿಕ್ ಬಳಸಲಾಗುತ್ತಿದೆ. ವೈಜ್ಞಾನಿಕ ಸಂಶೋಧನೆಯಿಂದ ಪ್ಲಾಸ್ಟಿಕ್ ಬಳಕೆಯಿಂದ ಬೆಳಕಿಗೆ ಬಂದಿರುವ ಆಘಾತಕಾರಿ ಸಂಗತಿಗಳು ಆಶ್ಚರ್ಯಕರ ಸಂಗತಿಗಳು ಮಾತ್ರವಲ್ಲದೆ ಇಡೀ ಪ್ರಪಂಚದ ಮಾನವರಿಗೆ ಎಚ್ಚರಿಕೆಯಾಗಿದೆ, ಅವರ ಪಾಲಿಸದಿರುವುದು ದುರಂತ ಪರಿಣಾಮಗಳಿಗೆ ಕಾರಣವಾಗಬಹುದು. ಪರಿಸರವಾದಿಗಳು ಭೂಮಿಯ ಮೇಲೆ ಹರಡಿರುವ ಕೃತಕ ಕಸವು ದ್ಯುತಿಸಂಶ್ಲೇಷಣೆಯ ಪ್ರಮುಖ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಬಹುದು, ಇಂಗಾಲದ ಡೈಆಕ್ಸೈಡ್, ಕಾರ್ಬೋಹೈಡ್ರೇಟ್ಗಳು ಮತ್ತು ಸಸ್ಯಗಳ ಮೇಲೆ ಪರಿಣಾಮ ಬೀರಬಹುದು ಎಂದು ಭಯಪಡುತ್ತಾರೆ. ಪರಿಣಾಮವಾಗಿ, ಮನುಷ್ಯ ಅನೇಕ ಗಂಭೀರ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಪ್ಲಾಸ್ಟಿಕ್ ಒಂದು ವಸ್ತುವಾಗಿದ್ದು ಅದು ನೀರಿನಲ್ಲಿ ಬೆರೆತಾಗಲೀ ಅಥವಾ ನೆಲದಲ್ಲಿ ಹೂತಾಗಲೀ ನಾಶವಾಗುವುದಿಲ್ಲ. ತೈಲ ಮತ್ತು ವಿಷಕಾರಿ ರಾಸಾಯನಿಕಗಳು ಸಾಗರಕ್ಕೆ ಹರಿಯುವಷ್ಟು ಅಪಾಯಕಾರಿ ಪ್ಲಾಸ್ಟಿಕ್ ಎಂದು ಅಮೆರಿಕದ ವೈದ್ಯ ಡಿ.ಲಿಸ್ಟ್ ನಂಬಿದ್ದಾರೆ. ಎಲ್ಲೆಂದರಲ್ಲಿ, ಮೂಲೆ ಮೂಲೆಯಿಂದ ಕಸದ ರಾಶಿಯಲ್ಲಿ ಪ್ಲಾಸ್ಟಿಕ್ ಕಾಣಿಸಿಕೊಳ್ಳಲಾರಂಭಿಸಿದೆ. ಭೂಮಿಯ ಮಣ್ಣಿನಲ್ಲಿ ಕರಗುವುದಿಲ್ಲ,…

Read More

ಬೆಂಗಳೂರು : ಬಿಯಾಂಡ್ ಬೆಂಗಳೂರು ಕ್ಲಸ್ಟರ್‌ಗಳಿಗೆ ಭಾರಿ ಪ್ರೋತ್ಸಾಹ- ₹1000 ಕೋಟಿ ಅನುದಾನದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ ಕಾರ್ಯಕ್ರಮ (ಲೀಪ್) ಪ್ರಾರಂಭಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡರುವ ಸಚಿವರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿಯಂತಹ ಕ್ಲಸ್ಟರ್‌ಗಳಲ್ಲಿ ಸ್ಟಾರ್ಟ್‌ಅಪ್ ಇಕೋ ಸಿಸ್ಟಂ ಅಭಿವೃದ್ಧಿ, ಇನ್ಕ್ಯೂಬೇಟರ್‌ಗಳು, ಆಕ್ಸಿಲರೇಟರ್‌ಗಳು, ಉತ್ಕೃಷ್ಟತಾ ಕೇಂದ್ರಗಳು ಹಾಗೂ ಜಾಗತಿಕ ತಂತ್ರಜ್ಞಾನ ಕೇಂದ್ರಗಳ (ಜಿಟಿಸಿ) ಮೂಲಕ ಬೆಂಬಲ. ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ ನೀಡಲು ₹300 ಕೋಟಿ ಫಂಡ್ ಆಫ್ ಫಂಡ್ಸ್. ಡೀಪ್‌ಟೆಕ್ ಅಭಿವೃದ್ಧಿಗಾಗಿ ₹100 ಕೋಟಿ ಕಾರ್ಪಸ್ ಫಂಡ್ ನಿಂದಾಗಿ ಕರ್ನಾಟಕದಾದ್ಯಂತ 5 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಡ್ಯೂಟಿ ಬದಲಿಸಿದ್ದಕ್ಕೆ ಬಸ್ ನಲ್ಲಿಯೇ ಕೆಎಸ್ ಆರ್ ಟಿಸಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿ ಡಿಪೋ 1ರ ಅಳ್ನಾವರ ಬಸ್ ನಲ್ಲಿ ಡ್ಯೂಟಿ ಬದಲಿಸಿದ್ದಕ್ಕೆ ಬಸ್ ಒಳಗೆ ನೇಣು ಬಿಗಿದುಕೊಂಡು ನೌಕರ ಕೇಶವ ಕಮಡೋಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಶವ ಅವರು ಬೆಳಗಾವಿಯ ಹಳೆ ಗಾಂಧಿನಗರ ನಿವಾಸಿಯಾಗಿದ್ದು, ಬಸ್ ವಾಷಿಂಗ್ ಬದಲು ಪಂಕ್ಚರ್ ಕೆಲಸಕ್ಕೆ ಡ್ಯೂಟಿ ಬದಲಿಸಿದ್ದರು ಎಂದು ಅಧಿಕಾರಿಗಳ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು ಶವ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 85 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ಹಾಗೂ 27 ಮಂದಿ ಡಿವೈಎಸ್ ಪಿ (ಸಿವಿಲ್) ವರ್ಗಾವಣೆ ಆದೇಶ ಹೊರಡಿಸಿದೆ. ಉಲ್ಲೇಖಿತ (4) ರ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶಿಸಲಾಗಿದೆ. ವರ್ಗಾವಣೆಗೊಂಡ ಪೊಲೀಸ್ ಇನ್ಸ್ ಪೆಕ್ಟರ್ ಗಳು

Read More

ಒಂದು ದಿನದಲ್ಲಿ ನೀವು ಎಷ್ಟು ಹೆಜ್ಜೆಗಳನ್ನು ಇಡುತ್ತೀರೋ ಅಷ್ಟೇ ನಮ್ಮ ನಡಿಗೆಯ ವೇಗವು ( walking speed ) ಅಷ್ಟೇ ಮುಖ್ಯ ಎಂದು ಹೊಸ ಸಂಶೋಧನೆ (new research )ಯು ಸೂಚಿಸುತ್ತದೆ. ದಿನಕ್ಕೆ 10,000 ಹೆಜ್ಜೆಗಳನ್ನು ನಡೆಯುವುದು ಬುದ್ಧಿಮಾಂದ್ಯತೆ (dementia), ಹೃದ್ರೋಗ (heart disease), ಕ್ಯಾನ್ಸರ್ (cancer), ಸಾವಿನ ಅಪಾಯವನ್ನು ಕಡಿಮೆ ಮಾಡುತ್ತದೆ. ಆದರೆ ಪವರ್ ವಾಕ್ ( power walk) ನಂತಹ ವೇಗದ ನದಿಗೆಯೂ ವೇಗವು ಎಷ್ಟು ಹಂತಗಳನ್ನು ದಾಖಲಿಸಲಾಗುತ್ತದೆ ಎಂಬುದನ್ನು ಮೀರಿದ ಪ್ರಯೋಜನಗಳನ್ನು ತೋರಿಸುತ್ತದೆ ಎಂದು ತಜ್ಞರು ಈಗ ಕಂಡುಕೊಂಡಿದ್ದಾರೆ. “ಆರೋಗ್ಯ ಪ್ರಯೋಜನಗಳಿಗಾಗಿ ಜನರು ದಿನಕ್ಕೆ 10,000 ಹೆಜ್ಜೆಗಳನ್ನು ಇಡುವುದು ಮಾತ್ರವಲ್ಲದೆ ವೇಗವಾಗಿ ನಡೆಯುವ ಗುರಿಯನ್ನು ಹೊಂದಬಹುದು” ಎಂದು ಸಿಡ್ನಿ ವಿಶ್ವವಿದ್ಯಾಲಯದ ಚಾರ್ಲ್ಸ್ ಪರ್ಕಿನ್ಸ್ ಸೆಂಟರ್ ಮತ್ತು ಫ್ಯಾಕಲ್ಟಿ ಆಫ್ ಮೆಡಿಸಿನ್ ಅಂಡ್ ಹೆಲ್ತ್ನ ಸಂಶೋಧನಾ ಫೆಲೋ ಡಾ ಮ್ಯಾಥ್ಯೂ ಅಹ್ಮದಿ ಹೇಳಿದ್ದಾರೆ. ಇದರಿಂದ ವ್ಯಕ್ತಿಗಳು ಆರೋಗ್ಯ ಪ್ರಯೋಜನಗಳನ್ನು ಸಹ ಪಡೆಯಬಹುದು. ಕ್ಯಾಡಿಜ್ ವಿಶ್ವವಿದ್ಯಾಲಯದ ಆರೋಗ್ಯದಲ್ಲಿ ಹಿರಿಯ ಸಂಶೋಧಕರೂ…

Read More

ಬೆಂಗಳೂರು : ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಕಲ್ಯಾಣ ಕರ್ನಾಟಕ ಸೇರಿದಂತೆ ಒಟ್ಟು 10,000 ಕ್ಕೂ ಹೆಚ್ಚು ಶಿಕ್ಷಕರ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಇಲಾಖೆಯಲ್ಲಿರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಇನ್ನೂ 5 ಸಾವಿರ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಒಟ್ಟು 5000 ಶಾಲೆಗಳಿಗೆ ಎಲ್‌ಕೆಜಿ, ಯುಕೆಜಿ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಸದ್ಯ 2619 ಸರ್ಕಾರಿ ಶಾಲೆಗಳಲ್ಲಿರುವ ಎಲ್‌ ಕೆಜಿ, ಯುಕೆಜಿ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 90,195 ಮಕ್ಕಳು ಕಲಿಯುತ್ತಿದ್ದಾರೆ. ಇದನ್ನು 70 ಕೋಟಿ ರು. ವೆಚ್ಚದಲ್ಲಿ ಒಟ್ಟಾರೆ 5000 ಶಾಲೆಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ. `ಗಣಿತ ಗಣಕ ‘ಕಾರ್ಯಕ್ರಮ ದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ಬೋಧನೆಗೆ ಬುನಾದಿ ಗಣಿತ ಕೌಶಲ್ಯ ಕಾರ್ಯಕ್ರಮ ರಾಜ್ಯಾದ್ಯಂತ ವಿಸ್ತರಣೆ. ‘ಓದು ಕರ್ನಾಟಕ’ ಯೋಜನೆ ಯಡಿ 4 ಮತ್ತು 5ನೇ ಕ್ಲಾಸ್ ಮಕ್ಕಳಿಗೆ ಬುನಾದಿ ಸಾಕ್ಷರತೆ, ಕೌಶಲ್ಯ ಅಭಿವೃದ್ಧಿ. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ.…

Read More