Author: kannadanewsnow57

ಕೊಪ್ಪಳ : ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ತಾಯಿ ಹುಲಿಗೆಮ್ಮ ತಮ್ಮ ಹೆಸರಲ್ಲಿರುವ ಜಮೀನನ್ನು ಸರ್ಕಾರಿ ಶಾಲೆಗೆ ನೀಡಿ ಮಾದರಿಯಾಗಿದ್ದಾರೆ. ಹೌದು, ಕನಕಗಿರಿ ವಿಧಾನಸಭಾ ಕ್ಷೇತ್ರದ ನವಲಿ ಹೋಬಳಿಯ ಆದಾಪುರ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ಸರಿಯಾದ ಶೈಕ್ಷಣಿಕ ಸೌಲಭ್ಯಗಳು ಇಲ್ಲದಿರುವುದನ್ನು ಗಮನಿಸಿದ ಹುಲಿಗೆಮ್ಮ, ತಮ್ಮ ಹೆಸರಲಿದ್ದ ಒಂದು ಎಕರೆ ಜಮೀನು ದಾನ ಮಾಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿ ಹೋಬಳಿಯ ಆದಾಪುರ ಸಿಮಾದ ಸರ್ವೆ ನಂ. 86/1/9ರಲ್ಲಿನ 1 ಎಕರೆ ಭೂಮಿಯನ್ನು ಶಾಲೆಗೆ ದಾನ ನೀಡಿದ್ದು, ಈ ಭೂಮಿಯನ್ನು ವರ್ಷದ ಹಿಂದೆ ಸಚಿವ ತಂಗಡಗಿ ಅವರ ತಾಯಿ ಹುಲಿಗೆಮ್ಮ ಅವರು ₹9.50 ಲಕ್ಷ ಕೊಟ್ಟು ಖರೀದಿಸಿದ್ದರು. ಇದೀಗ ಈ ಭೂಮಿಯನ್ನು ಶಾಲೆಗೆ ನೀಡುವ ಮೂಲಕ ಬಡ ಮಕ್ಕಳಿಗೆ ಆಸರೆಯಾಗಿದ್ದಾರೆ. ಹಲವು ವರ್ಷಗಳಿಂದಲೂ ಆದಾಪುರದಲ್ಲಿ ಶಾಲೆ ಇದ್ದರೂ ಜಾಗದ ಕೊರತೆ ಇತ್ತು. ಇದೀಗ ಸಚಿವರ ತಾಯಿ ಹುಲಿಗೆಮ್ಮ…

Read More

ನವದೆಹಲಿ : ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಪ್ರಯತ್ನದ ಫಲವಾಗಿ ಎಫ್‌ʼಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರಕಾರ ತೆಗೆದು ಹಾಕಿದೆ. ಈ ತಂಬಾಕಿನ ಮೇಲೆ ಶೇಕಡ 18ರಷ್ಟು ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ದೂರವೇ ಉಳಿದಿದ್ದರು. ಇದರಿಂದ ಬೆಳೆದ ಬೆಳೆ ಮಾರಾಟವಾಗದೆ ರಾಜ್ಯದ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ. ಕೋಟೆ, ಅರಕಲಗೂಡು ಸೇರಿದಂತೆ ವಿವಿಧ ಭಾಗಗಳಲ್ಲಿನ ತಂಬಾಕು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು. ಬೆಳೆಗಾರರು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತಮ್ಮ ಸಂಕಷ್ಟ ತೋಡಿಕೊಂಡಿದ್ದರು. ಈ ಸಂಬಂಧ ಸಚಿವರು ಬೆಂಗಳೂರಿನ ತಂಬಾಕು ಮಂಡಳಿ ವ್ಯಸ್ಥಾಪಕ ನಿರ್ದೇಶಕರು ಮತ್ತು ವಿಶಾಖಪಟ್ಟಣ ವಿಭಾಗದ ಕೇಂದ್ರೀಯ ಅಬಕಾರಿ ಮತ್ತು ಜಿಎಸ್ಟಿ ಮುಖ್ಯ ಆಯುಕ್ತರ ಜತೆ ನಡೆಸಲಾಗಿದ್ದ ಪತ್ರ ವ್ಯವಹಾರಗಳ ಕುರಿತ ಎಲ್ಲಾ ಮಾಹಿತಿಯನ್ನೂ ಪಡೆದುಕೊಂಡಿದ್ದರು. ನಂತರ ಸಚಿವರು ಈ ವಿಷಯವನ್ನು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರ ಗಮನಕ್ಕೆ ತಂದು, ತಂಬಾಕು…

Read More

ಬೆಂಗಳೂರು : ಕೇಂದ್ರ ಸರ್ಕಾರದ ನೂತನ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ವಿಧಾನಸಭಾ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ  ಮಂಡಿಸಿದ ನಿರ್ಣಯ ಪ್ರಸ್ತಾವನೆ: ಈ ಸದನವು, ಭಾರತದ ಪ್ರಜಾಸತ್ತೆಯ ಭದ್ರಬುನಾದಿಯಾದ ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ಅಧಿಕಾರ ವಿಕೇಂದ್ರೀಕರಣದ ತತ್ತ್ವಗಳಿಗೆ ತನ್ನ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಗ್ರಾಮೀಣ ಬಡವರ ಪಾಲಿನ ‘ಸಂಜೀವಿನಿ’ಯಾಗಿದ್ದ ಮತ್ತು ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿದ್ದ “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ”ಯನ್ನು (MGNREGA) ರದ್ದುಗೊಳಿಸಿರುವುದನ್ನು ಈ ಸದನವು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತದೆ. ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ಜಾರಿಗೆ ತಂದಿರುವ ಹೊಸ ‘ವಿಬಿ-ಗ್ರಾಮ್ ಜಿ’ (VB-GRAM-G) ಕಾಯ್ದೆಯು ಒಕ್ಕೂಟ ವ್ಯವಸ್ಥೆಯ ಮೂಲ ಆಶಯಗಳಿಗೆ ಮತ್ತು ಗ್ರಾಮೀಣ ಜನರ ಜೀವನೋಪಾಯದ ಹಕ್ಕಿಗೆ ಮಾರಕವಾಗಿದೆ. ಗ್ರಾಮೀಣ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡುವ ಸಲುವಾಗಿ 2005 ರಲ್ಲಿ ಅಂದಿನ…

Read More

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹಿಂಗಾರು ಹಂಗಾಮಿನ ಕಡಲೆಕಾಳು ಉತ್ಪನ್ನ ಖರೀದಿಸುವ ಮತ್ತು ಖರೀದಿ ಕೇಂದ್ರಗಳನ್ನು ಆರಂಭಿಸುವ ಕುರಿತು ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಗೆ ರೂ.5,875 ದಂತೆ ಫ್ರೂಟ್ಸ್ ತಂತ್ರಾAಶದಲ್ಲಿ ನೊಂದಣಿಯಾಗಿರುವ ರೈತರಿಂದ ಕಡಲೆಕಾಳು ಬೆಳೆದ ವಿಸ್ತೀರ್ಣಕ್ಕೆ ಅನುಗುಣವಾಗಿ ಉತ್ಪನ್ನ ಖರೀದಿಸಲಾಗುತ್ತದೆ. ಬೆಂಬಲ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಫ್ರೂಟ್ಸ್ ತಂತ್ರಾAಶದ ಆಧಾರದ ಮೇಲೆ ರೈತರಿಂದ ಖರೀದಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ…

Read More

ಬೆಂಗಳೂರು: ಅಬಕಾರಿ ಇಲಾಖೆ ಹಗರಣದಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸಿದ್ದು, ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ. ಅಹೋರಾತ್ರಿ ಧರಣಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅಶೋಕ್ ಪಟ್ಟಣ್ ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ನಿರ್ಗಮಿಸುವಾಗ ಅಹೋರಾತ್ರಿ ಧರಣಿ ಬಗ್ಗೆ ಮಾಹಿತಿ ನೀಡಲಾಗಿದೆ. ಈ ಕುರಿತು ಬಿಜೆಪಿ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದು, ಅಬಕಾರಿ ಸಚಿವರ ಮೇಲೆ ನೇರ ಆರೋಪವಿದ್ದರೂ ರಾಜೀನಾಮೆ ಪಡೆಯದೆ ಸಚಿವರ ಬೆನ್ನಿಗೆ ನಿಂತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಅಬಕಾರಿ ಸಚಿವರ ರಾಜೀನಾಮೆ ಪಡೆಯುವಂತೆ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಮತ್ತು ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಶಾಸಕರು ಸದನದ ಬಾವಿಗಿಳಿದು ಪ್ರತಿಭಟಿಸಿದರು‌. ಅಬಕಾರಿ…

Read More

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ. ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸಿದ್ದು, ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ. ಅಹೋರಾತ್ರಿ ಧರಣಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅಶೋಕ್ ಪಟ್ಟಣ್ ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ನಿರ್ಗಮಿಸುವಾಗ ಅಹೋರಾತ್ರಿ ಧರಣಿ ಬಗ್ಗೆ ಮಾಹಿತಿ ನೀಡಲಾಗಿದೆ. ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಸಚಿವ ಆರ್ ಬಿ ತಿಮ್ಮಾಪುರ್ ಇದರಲ್ಲಿ ನನ್ನದು ಏನೂ ತಪ್ಪು ಇಲ್ಲ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ತಿಳಿಸಿದರು.

Read More

ಗದಗ : ಗದಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮನೆಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಗೋಡೆ ಕುಸಿದು ನಾಗಪ್ಪ ದೊಡ್ಡಮನಿ (60), ಶೇಖರಪ್ಪ ಪರಸಪ್ಪನವರ್ (55) ಸಾವನ್ನಪ್ಪಿದ್ದಾರೆ. ಯಲ್ಲಪ್ಪ ಕೆಳಗೇರಿಯವರ ಹಳೆಯ ಮನೆ ಗೋಡೆ ತೆರವು ವೇಳೆ ಏಕಾಏಕಿ ಕಾರ್ಮಿಕರ ಮೇಲೆ ಗೋಡೆ ಕುಸಿದಿದೆ. ಅವಶೇಷಗಳಡಿ ಸಿಲುಕಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಕಡಿತದಿಂದಾಗಿ ಮನೆಗಳು ಮತ್ತು ಕಚೇರಿಗಳಲ್ಲಿ ಇನ್ವರ್ಟರ್ಗಳ ಬಳಕೆ ಹೆಚ್ಚಾಗಿದೆ. ಇನ್ವರ್ಟರ್ ಇಲ್ಲದೆ, ವಿದ್ಯುತ್ ಸಮಸ್ಯೆಗಳು ಮತ್ತು ಅನಾನುಕೂಲತೆ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಆದರೆ ಇನ್ವರ್ಟರ್ ಬ್ಯಾಟರಿಯನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ, ಅದು ಸ್ಫೋಟಗೊಳ್ಳಬಹುದು. ನಿಮ್ಮ ಮನೆ ಮತ್ತು ಕುಟುಂಬವನ್ನು ಯಾವುದೇ ಸಂಭಾವ್ಯ ಅಪಾಯದಿಂದ ರಕ್ಷಿಸಲು ನಿಮ್ಮ ಇನ್ವರ್ಟರ್ ಬ್ಯಾಟರಿಯನ್ನು ರಕ್ಷಿಸಲು ತಪ್ಪಿಸಬೇಕಾದ ಮೂರು ದೊಡ್ಡ ತಪ್ಪುಗಳು ಯಾವುವು ಎಂಬುದನ್ನು ತಿಳಿಯಿರಿ. ಇನ್ವರ್ಟರ್ ಬ್ಯಾಟರಿ ಸ್ಫೋಟದ ಸಮಸ್ಯೆ ಏಕೆ ಸಂಭವಿಸುತ್ತದೆ? ಇನ್ವರ್ಟರ್ ಬ್ಯಾಟರಿಗಳು ಹೆಚ್ಚಾಗಿ ಸೀಸದ ಆಮ್ಲ ಆಧಾರಿತವಾಗಿದ್ದು, ಸರಿಯಾದ ಬಳಕೆ ಮತ್ತು ನಿಯಮಿತ ನಿರ್ವಹಣೆ ಅಗತ್ಯವಿರುತ್ತದೆ. ತಪ್ಪಾಗಿ ಬಳಸಿದರೆ, ಬ್ಯಾಟರಿಯು ಅನಿಲವನ್ನು ಉತ್ಪಾದಿಸಲು, ಆಮ್ಲವನ್ನು ಸೋರಿಕೆ ಮಾಡಲು ಅಥವಾ ಅಂತಿಮವಾಗಿ ಸ್ಫೋಟಗೊಳ್ಳಲು ಪ್ರಾರಂಭಿಸಬಹುದು. ಬ್ಯಾಟರಿ ಸ್ಫೋಟವು ಆರ್ಥಿಕ ನಷ್ಟವನ್ನುಂಟುಮಾಡುವುದಲ್ಲದೆ, ಮನೆಯಲ್ಲಿ ಬೆಂಕಿ ಮತ್ತು ಸ್ಫೋಟಕ್ಕೂ ಕಾರಣವಾಗಬಹುದು. ಈ 3 ತಪ್ಪುಗಳನ್ನು ಮಾಡಬೇಡಿ 1. ಬ್ಯಾಟರಿಯನ್ನು ಅತಿಯಾಗಿ ಚಾರ್ಜ್ ಮಾಡುವುದು ಇನ್ವರ್ಟರ್ ಬ್ಯಾಟರಿಯನ್ನು ಚಾರ್ಜ್ ಮಾಡುವಾಗ ಮಾಡುವ ದೊಡ್ಡ ತಪ್ಪು ಎಂದರೆ…

Read More

ಆಧುನಿಕ ಜೀವನ ಶೈಲಿಗೆ ಒಗ್ಗಿಕೊಂಡ ಹೆಚ್ಚಿನ ಜನರು ಸ್ಮಾರ್ಟ್ಫೋನ್ಗಳನ್ನು ಬಳಸುತ್ತಾರೆ. ಸ್ಮಾರ್ಟ್ ಫೋನ್ ಬಳಸುವವರು ಸದಾ ಕಿವಿಯಲ್ಲಿ ಇಯರ್ ಫೋನ್ ಇಟ್ಟುಕೊಂಡಿರುತ್ತಾರೆ. ನೀವು ಇದೇ ರೀತಿಯ ಕೆಲಸವನ್ನು ಮಾಡಿದರೆ, ಅದನ್ನು ಮಾಡಬೇಡಿ, ಏಕೆಂದರೆ ಇಯರ್‌ಫೋನ್‌ಗಳ ಅತಿಯಾದ ಬಳಕೆಯು ನಿಮ್ಮ ಕಿವಿಗೆ ಹಾನಿ ಮಾಡುತ್ತದೆ. ಇದು ನಿಮ್ಮನ್ನು ಕಿವುಡರನ್ನಾಗಿಯೂ ಮಾಡಬಹುದು. ಇಯರ್‌ಫೋನ್‌ಗಳನ್ನು ಬಳಸುವುದರಿಂದ ಆಗುವ ಅನಾನುಕೂಲಗಳನ್ನು ನಿಮಗೆ ತಿಳಿಸುತ್ತೇವೆ ಇಲ್ಲಿದೆ ಓದಿ ಶ್ರವಣ ದೋಷ: ಎಲ್ಲಾ ಇಯರ್‌ಫೋನ್‌ಗಳು ಹೆಚ್ಚಿನ ಡೆಸಿಬಲ್ ತರಂಗಗಳನ್ನು ಹೊಂದಿರುತ್ತವೆ. ಇದನ್ನು ಬಳಸುವುದರಿಂದ ನೀವು ಶಾಶ್ವತವಾಗಿ ಕೇಳುವ ಸಾಮರ್ಥ್ಯವನ್ನು ಕಳೆದುಕೊಳ್ಳಬಹುದು. ಮೆದುಳಿಗೆ ಹಾನಿ: ಇಯರ್‌ಫೋನ್‌ ಮೂಲಕ ಹೆಚ್ಚು ಹೊತ್ತು ಸಂಗೀತ ಕೇಳುವುದರಿಂದ ಮೆದುಳಿನ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಈ ಗಂಭೀರ ಸಮಸ್ಯೆಗಳನ್ನು ತಪ್ಪಿಸಲು ಇಯರ್‌ಫೋನ್‌ಗಳನ್ನು ಮಿತವಾಗಿ ಬಳಸಿ. ಕಿವಿಯ ಸೋಂಕಿಗೆ ಕಾರಣ : ದೀರ್ಘಕಾಲದವರೆಗೆ ಸಂಗೀತವನ್ನು ಕೇಳುವುದು ಸಹ ಕಿವಿ ಸೋಂಕಿಗೆ ಕಾರಣವಾಗಬಹುದು. ನೀವು ಯಾರೊಂದಿಗಾದರೂ ಇಯರ್‌ಫೋನ್‌ಗಳನ್ನು ಹಂಚಿಕೊಂಡಾಗ, ನಂತರ ಅವುಗಳನ್ನು ಸ್ಯಾನಿಟೈಜರ್‌ನಿಂದ ಸ್ವಚ್ಛಗೊಳಿಸಿ. ಹೃದ್ರೋಗ ಮತ್ತು ಕ್ಯಾನ್ಸರ್:…

Read More

ನವದೆಹಲಿ: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಮೂರನೇ ದಿನವೂ ಕುಸಿದಿವೆ. ಎಂಸಿಎಕ್ಸ್ನಲ್ಲಿ ಇಂದು ಆರಂಭಿಕ ವಹಿವಾಟಿನಲ್ಲಿ ಬೆಳ್ಳಿ ಬೆಲೆ ಸುಮಾರು ₹16,000 ರಷ್ಟು ಕುಸಿದಿದೆ. ಚಿನ್ನದ ಬೆಲೆಯೂ ₹4,500 ರಷ್ಟು ಕುಸಿದಿದೆ. ಮಾರ್ಚ್ 5 ರ ವಿತರಣೆಯ ಬೆಳ್ಳಿ ಹಿಂದಿನ ವಹಿವಾಟಿನಲ್ಲಿ ಪ್ರತಿ ಕೆಜಿಗೆ ₹2,65,652 ಕ್ಕೆ ಕೊನೆಗೊಂಡಿತು. ಇಂದು, ಇದು ₹2,67,501 ಕ್ಕೆ ಪ್ರಾರಂಭವಾಯಿತು ಆದರೆ ತ್ವರಿತವಾಗಿ ಕುಸಿಯಿತು. ಬೆಳಿಗ್ಗೆ 9:30 ಕ್ಕೆ, ಇದು ₹15,939 ಅಥವಾ 6% ರಷ್ಟು ಕಡಿಮೆಯಾಗಿ ₹2,49,713 ಕ್ಕೆ ವಹಿವಾಟು ನಡೆಸುತ್ತಿತ್ತು. ಬೆಳ್ಳಿ ಬೆಲೆ ಮೂರು ದಿನಗಳಲ್ಲಿ ₹1.5 ಲಕ್ಷಕ್ಕೂ ಹೆಚ್ಚು ಕುಸಿದಿದೆ. ಏತನ್ಮಧ್ಯೆ, ಚಿನ್ನದ ಬೆಲೆಗಳು ಸಹ ಕುಸಿದಿವೆ. ಏಪ್ರಿಲ್ 2 ರ ವಿತರಣೆಯ ಚಿನ್ನದ ಬೆಲೆ ಸುಮಾರು ₹4,500 ಅಥವಾ 3% ರಷ್ಟು ಕುಸಿದಿದೆ. ಇದು ಹಿಂದಿನ ವಹಿವಾಟಿನಲ್ಲಿ 10 ಗ್ರಾಂಗೆ ₹1,47,753 ಕ್ಕೆ ಮುಕ್ತಾಯವಾಯಿತು ಮತ್ತು ಇಂದು ₹1,46,000 ಕ್ಕೆ ಪ್ರಾರಂಭವಾಯಿತು. ಬೆಳಿಗ್ಗೆ 9:39 ಗಂಟೆಗೆ ₹4,432 ಇಳಿಕೆಯಾಗಿ…

Read More