Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್.8ರಂದು ರಾಜ್ಯಾಧ್ಯಂತ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು…
ಬೆಂಗಳೂರು : ಹಕ್ಕಿ ಜ್ವರದ ಆತಂಕದಲ್ಲಿದ್ದ ಚಿಕನ್ ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಮೊಟ್ಟೆ, ಮಾಂಸ ಸೇವಿಸಿದ್ರೆ ಯಾವುದೇ ಅಪಾಯವಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ. #ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ. ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ. https://twitter.com/dineshgrao/status/1897154599750131749?s=08
ಸಾಮಾಜಿಕ ಮಾಧ್ಯಮ ಬಂದ ನಂತರ, ಪ್ರತಿದಿನ ನೂರಾರು ವೀಡಿಯೊಗಳು ನಮ್ಮ ಕಣ್ಣಿಗೆ ಬೀಳುತ್ತಿವೆ. ಅವುಗಳಲ್ಲಿ ಕೆಲವು ಆಸಕ್ತಿದಾಯಕವಾಗಿವೆ, ಇನ್ನು ಕೆಲವು ತಮಾಷೆಯಾಗಿವೆ, ಮತ್ತು ಅವು ಎಲ್ಲರನ್ನೂ ಮೆಚ್ಚಿಸುತ್ತವೆ. ವಿಶೇಷವಾಗಿ ವನ್ಯಜೀವಿಗಳಿಗೆ ಸಂಬಂಧಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಿನ ಗಮನ ಸೆಳೆಯುತ್ತಿವೆ. ಇತ್ತೀಚೆಗೆ, ಇದೇ ರೀತಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆಘಾತಕಾರಿ ಅನುಭವವನ್ನು ಅನುಭವಿಸಿದರು. ಈ ವೀಡಿಯೊವನ್ನು @paragenetics ಎಂಬ ಟ್ವಿಟರ್ ಹ್ಯಾಂಡಲ್ನಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ಆಗುತ್ತಿರುವ ವಿಡಿಯೋದ ಪ್ರಕಾರ, ಒಬ್ಬ ವ್ಯಕ್ತಿ ನಿರ್ಜನ ರಸ್ತೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದಾನೆ. ಆ ಕ್ಷಣದಲ್ಲಿ, ರಸ್ತೆಯ ಪಕ್ಕದ ಪೊದೆಗಳಿಂದ ಹುಲಿಯೊಂದು ಇದ್ದಕ್ಕಿದ್ದಂತೆ ಹೊರಬಂದಿತು. ಅದು ರಸ್ತೆಯಲ್ಲಿ ನಿಂತಿತು. ಇದರೊಂದಿಗೆ, ಬೈಕರ್ ಭಯದಿಂದ ರಸ್ತೆಯನ್ನೇ ನೋಡುತ್ತಾ ರಸ್ತೆಯಲ್ಲಿ ನಿಲ್ಲಿಸಿದನು. ಹುಲಿ ಅವನನ್ನು ನೋಡಿ ನಿಧಾನವಾಗಿ ಮುಂದೆ ನಡೆದಿತು. ಹುಲಿ ರಸ್ತೆಯನ್ನು ಸಂಪೂರ್ಣವಾಗಿ ದಾಟುವವರೆಗೆ ಅವನು ಕಾಯುತ್ತಿದ್ದನು ಮತ್ತು ನಂತರ ಮುಂದುವರೆದನು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…
ಮುಂಬೈ: ಜನದಟ್ಟಣೆಯ ರೈಲಿನಲ್ಲಿ ಬಲವಂತವಾಗಿ ಯುವಕನಿಗೆ ಮುತ್ತಿಟ್ಟ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಥಳಿಸಿದ ವಿಚಿತ್ರ ಘಟನೆ ನಡೆದಿದೆ. ಯುವಕರು ಈ ಘಟನೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ಯುವಕನು ರೈಲಿನೊಳಗೆ ತನಗೆ ಮುತ್ತಿಟ್ಟ ವ್ಯಕ್ತಿಯನ್ನು ಎದುರಿಸುವುದನ್ನು ಮತ್ತು ನಂತರ ಅವನನ್ನು ತನ್ನ ಸೀಟಿನಿಂದ ಎಳೆದು ಹೊಡೆಯುವುದನ್ನು ಕಾಣಬಹುದು. ವೈರಲ್ ವಿಡಿಯೋದ ಸ್ಥಳ ಮತ್ತು ಸಮಯ ಇನ್ನೂ ತಿಳಿದುಬಂದಿಲ್ಲ. ಇಂಟರ್ನೆಟ್ಗೆ ಬಂದ ನಂತರ, ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಬಲಿಪಶುವೇ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನದಟ್ಟಣೆಯಿಂದ ತುಂಬಿದ್ದ ಪ್ಯಾಸೆಂಜರ್ ರೈಲಿನಲ್ಲಿ ಬಲವಂತವಾಗಿ ಮುತ್ತಿಟ್ಟ ವ್ಯಕ್ತಿಯೊಂದಿಗೆ ಯುವಕ ಮುಖಾಮುಖಿಯಾಗುವುದನ್ನು ವೀಡಿಯೊ ತೋರಿಸುತ್ತದೆ. ರೈಲು ಪ್ರಯಾಣಿಕರಿಂದ ತುಂಬಿರುವುದನ್ನು ಕಾಣಬಹುದು. https://twitter.com/i/status/1896872167708745783 ಆ ವ್ಯಕ್ತಿ ತನ್ನ ಕೆಳಗಿನ ಬರ್ತ್ನಲ್ಲಿ ಕುಳಿತಿರುವುದು ಕಂಡುಬರುತ್ತದೆ, ಆದರೆ ಮಹಿಳೆ ಎದುರೇ ಯುವಕನಿಗೆ ವ್ಯಕ್ತಿ ಮುತ್ತಿಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ, ಅದು ಕೂಡ ರೈಲಿನಲ್ಲಿ ಜನಸಮೂಹದ ಮುಂದೆ. ಆದರೆ, ಯುವಕ…
ಬೆಂಗಳೂರು : ನಿಮ್ಮ ಮಕ್ಕಳನ್ನು ಕೇಂದ್ರೀಯ ಶಾಲೆಗೆ ಸೇರಿಸಲು ನೀವು ಬಯಸಿದರೆ, ನೀವು ತಿಳಿದುಕೊಳ್ಳಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ಅನೇಕ ಪೋಷಕರು ತಮ್ಮ ಮಕ್ಕಳು ಕೇಂದ್ರೀಯ ವಿದ್ಯಾಲಯಗಳಲ್ಲಿ (ಕೆವಿ) ಓದಬೇಕೆಂದು ಬಯಸುತ್ತಾರೆ. ಏಕೆಂದರೆ ಈ ಶಾಲೆಗಳು ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣವನ್ನು ನೀಡುತ್ತವೆ. ಖಾಸಗಿ ಶಾಲೆಗಳಂತೆ ಸಾವಿರ ಸಾವಿರ ಶುಲ್ಕವಿಲ್ಲ. ಅದಕ್ಕಾಗಿಯೇ ಕೇವಿಗಳು ಅನೇಕ ಕುಟುಂಬಗಳಿಗೆ ಅತ್ಯುತ್ತಮ ಆಯ್ಕೆಯಾಗಿದೆ. ಇನ್ನೊಂದು ಪ್ಲಸ್ ಪಾಯಿಂಟ್ ಎಂದರೆ ನೀವು ಇಲ್ಲಿ 10 ನೇ ತರಗತಿಯವರೆಗೆ ಮಾತ್ರವಲ್ಲದೆ, ಮಧ್ಯಂತರವನ್ನೂ ಸಹ ಅಧ್ಯಯನ ಮಾಡಬಹುದು. ಆದರೆ ಸೀಟುಗಳು ಕಡಿಮೆ ಇರುವುದರಿಂದ ಪ್ರವೇಶ ಪಡೆಯುವುದು ಸ್ವಲ್ಪ ಕಷ್ಟ. ಆಯ್ಕೆ ಪ್ರಕ್ರಿಯೆಯು ಪಾರದರ್ಶಕವಾಗಿರುವುದರಿಂದ, ಅನೇಕ ಪೋಷಕರು ಪ್ರತಿ ವರ್ಷ ಪ್ರವೇಶ ಅಧಿಸೂಚನೆಗಾಗಿ ಕಾಯುತ್ತಾರೆ. ಕೇಂದ್ರೀಯ ವಿದ್ಯಾಲಯಗಳು ವಿಶೇಷವಾಗಿವೆ ಏಕೆಂದರೆ… ದೇಶಾದ್ಯಂತ 1,256 ಕೇಂದ್ರೀಯ ವಿದ್ಯಾಲಯಗಳಿವೆ. ಇವುಗಳನ್ನು ಕೇಂದ್ರ ಶಿಕ್ಷಣ ಸಚಿವಾಲಯದ ಆಶ್ರಯದಲ್ಲಿ ಕೇಂದ್ರೀಯ ವಿದ್ಯಾಲಯ ಸಂಘಟನ್ (ಕೆವಿಎಸ್) ನಡೆಸುತ್ತಿದೆ. ಈ ಶಾಲೆಗಳು ನಿಯಮಿತ ಅಧ್ಯಯನದ ಜೊತೆಗೆ ಕೌಶಲ್ಯ ಆಧಾರಿತ ಕಲಿಕೆಯ…
ಬಂಟ್ವಾಳ : ರಾಜ್ಯದಲ್ಲಿ ದಿನಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು , ಈ ನಡುವೆ ಬಿಸಿಲಿನ ಝಳಕ್ಕೆ ಕಲ್ಲು ಒಡೆಯಲು ತಂಡಿಟ್ಟಿದ್ದ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಮೂಡ್ನೂರು ಗ್ರಾಮದಲ್ಲಿ ಬಿಸಿಲಿನ ಝಳಕ್ಕೆ ಜಿಲಿಟೆನ್ ಕಡ್ಡಿ ಸ್ಪೋಟಗೊಂಡ ಪರಿಣಾಮ 15 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಕ್ವಾರಿಯಲ್ಲಿ ಕಲ್ಲು ಒಡೆಯಲೆಂದು ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಿಡಲಾಗಿತ್ತು. ಬಿಸಿಲಿನಿಂದ ಜಿಲೆಟಿನ್ ಕಡ್ಡಿಗಳು ಏಕಾಏಕಿ ಸ್ಫೋಟಗೊಂಡಿವೆ. ಸ್ಪೋಟದಿಂದಾಗಿ ಸುಮಾರು 4 ಕಿ.ಮೀ ವ್ಯಾಪ್ತಿಯಲ್ಲಿದ್ದ ಮನೆಗಳು ಹಾನಿಯಾಗಿದ್ದು, ಗೋಡೆಗಳಲ್ಲಿ ಬಿರುಕು ಬಿಟ್ಟಿವೆ. ಕಿಟಕಿ, ಛಾವಣಿಗಳು ಹಾನಿಯಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಎಸ್ ಪಿ ಯತೀಶ್ ಕುಮಾರ್ ಸೂಚನೆ ಮೇರೆಗೆ ಕ್ವಾರಿ ಮ್ಯಾನೇಜರ್ ನನ್ನು ವಿಟ್ಲ ಪೊಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಖಜಾನೆಗಳಿಗೆ ಬಿಲ್ಲುಗಳನ್ನು ಸಲ್ಲಿಸುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆರ್ಥಿಕ ಇಲಾಖೆಯ ಎಲ್ಲಾ ಶಾಖೆಗಳು ದಿನಾಂಕ:15.03.2025 ರೊಳಗಾಗಿ ಹೊರಡಿಸುವ ಹೆಚ್ಚುವರಿ / ಪುನರ್ವಿನಿಯೋಗ ಆದೇಶಗಳನ್ನು ಒಳಗೊಂಡಂತೆ ಯಾವುದೇ ಹಣ ಬಿಡುಗಡೆಗೆ ಅನುಮತಿಸುವ ಸಂಧರ್ಭಗಳಲ್ಲಿ ತತ್ಸಂಬಂಧ ಬಿಲ್ಲುಗಳನ್ನು, ಆರ್ಥಿಕ ಇಲಾಖೆಯಿಂದ ಹೊರಡಿಸಲಾಗುವ ಹಿಂಬರಹದ ದಿನಾಂಕದಿಂದ 10 ದಿನಗಳೊಳಗಾಗಿ ಖಜಾನೆಗೆ ಸಲ್ಲಿಸುವಂತೆ ಹಿಂಬರಹದಲ್ಲಿ ನಮೂದಿಸುವುದು. ಅದೇ ರೀತಿ, ದಿನಾಂಕ:15.03.2025 ರ ನಂತರ ಹೊರಡಿಸಲಾಗುವ ಇಂತಹ ಹಿಂಬರಹಗಳಲ್ಲಿ, ಹಿಂಬರಹದ ದಿನಾಂಕದಿಂದ 07 ದಿನಗಳೊಳಗಾಗಿ ಖಜಾನೆಗೆ ಬಿಲ್ಲುಗಳನ್ನು ಸಲ್ಲಿಸಲು ಸೂಚಿಸುವಂತೆ ತಿಳಿಸಿದೆ. (ಉದಾ: ಹಿಂಬರಹ ದಿನಾಂಕ:16.03.2025 ಬಿಲ್ಲು ಸಲ್ಲಿಕೆ ದಿ.23.03.2025 ರೊಳಗೆ) ಇದರಿಂದ ಖಜಾನೆಯಲ್ಲಿ ಬಿಲ್ಲನ್ನು ಸ್ವೀಕರಿಸಲು ಯಾವುದೇ ಗೊಂದಲವಾಗುವುದಿಲ್ಲವಾದ್ದರಿಂದ ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಲಾಗಿದೆ.
ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಗೆ ರೂ.153.53 ಲಕ್ಷಗಳ ಅನುದಾನ ಲಭ್ಯವಿದ್ದು, ಶೇ.90 ರಂತೆ ಗರಿಷ್ಠ 2.00 ಹೆಕ್ಟೇರ್ ವರೆಗೆ ಸಹಾಯಧನ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ. ಆಸಕ್ತ ರೈತ ಭಾಂದವರು ಅರ್ಜಿ ಸಲ್ಲಿಸಿ ಸಹಾಯಧನ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ…
ನವದೆಹಲಿ : ಭಾರತದಲ್ಲಿ ಹಂದಿ ಜ್ವರ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದಿದೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ, ಡಿಸೆಂಬರ್ 2024 ರ ಹೊತ್ತಿಗೆ, 20,000 ಕ್ಕೂ ಹೆಚ್ಚು ಜನರು ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಕನಿಷ್ಠ 347 ಜನರು ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ 3,141 ಪ್ರಕರಣಗಳು ವರದಿಯಾಗಿವೆ, ಆದರೆ ಇತರ ರಾಜ್ಯಗಳಿಗೂ ವೈರಸ್ ಹರಡಿದ ವರದಿಗಳು ಬಂದಿವೆ. ಕೇರಳದಲ್ಲಿ 2,846, ತಮಿಳುನಾಡಿನಲ್ಲಿ 1,777, ಮಹಾರಾಷ್ಟ್ರದಲ್ಲಿ 2,027, ಗುಜರಾತ್ನಲ್ಲಿ 1,711 ಮತ್ತು ರಾಜಸ್ಥಾನದಲ್ಲಿ 1,149 ಪ್ರಕರಣಗಳು ದೃಢಪಟ್ಟಿವೆ. ಮುಂಬರುವ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನಷ್ಟು ವೇಗವಾಗಿ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಅದರ ಲಕ್ಷಣಗಳು ಮತ್ತು ತಡೆಗಟ್ಟುವ ಕ್ರಮಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಹಂದಿ ಜ್ವರ ಎಂದರೇನು? ಹಂದಿ ಜ್ವರವು H1N1 ವೈರಸ್ನಿಂದ ಉಂಟಾಗುವ ಉಸಿರಾಟದ ಸೋಂಕು. ಈ ವೈರಸ್ ಮೂಲತಃ ಹಂದಿಗಳಿಂದ ಹುಟ್ಟಿಕೊಂಡಿತು, ಆದರೆ ಈಗ ಅದು ಮನುಷ್ಯರಲ್ಲಿಯೂ ಹರಡಲು ಪ್ರಾರಂಭಿಸಿದೆ. ಹಂದಿ ಜ್ವರದ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು, ಗಂಟಲು ನೋವು,…
ಬೆಂಗಳೂರು : ಸರ್ಕಾರಿ ನೌಕರರ ಸೇವೆಗೆ ಸೇರಿದ ನಂತರ ನಡೆದುಕೊಳ್ಳಬೇಕಾದ ಕಡ್ಡಾಯ ಸೇವಾ ನಿಯಮಗಳನ್ನು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 ರಲ್ಲಿ ಪ್ರಕಟಿಸಲಾಗಿದ್ದು, ಇಲ್ಲಿದೆ ಸರ್ಕಾರಿ ಸೇವೆಗೆ ಸೇರಿದ ನಂತರ ನೌಕರರು ಪಾಲಿಸಬೇಕಾದ ಸಂಪೂರ್ಣ ಮಾಹಿತಿ. ಸರ್ಕಾರಿ ನೌಕರ ಎಂದರೆ. ಕರ್ನಾಟಕ ರಾಜ್ಯದ ನಾಗರಿಕ ಸೇವಾ ಸದಸ್ಯನಾಗಿರುವ ಅಥವಾ ಕರ್ನಾಟಕ ರಾಜ್ಯದ ವ್ಯವಹಾರಗಳಿಗೆ ಸಂಬಂಧಪಟ್ಟ ನಾಗರಿಕ ಹುದ್ದೆಯನ್ನು ಧಾರಣ ಮಾಡಿರುವಂಥ ಯಾರೇ ವ್ಯಕ್ತಿ ಎಂದು ಅರ್ಥ ಹಾಗೂ ಅದು, ಯಾವ ವ್ಯಕ್ತಿಯ ಸೇವೆಗಳನ್ನು ತಾತ್ಕಾಲಿಕವಾಗಿ ಭಾರತ ಸರ್ಕಾರ, ಮತ್ತೊಂದು ರಾಜ್ಯ ಸರ್ಕಾರ, ಕಂಪನಿ, ನಿಗಮ, ನಿಗಮಿತವಾಗಿರುವ ಮಂಡಳಿ. ಸಂಸ್ಥೆ ಅಥವಾ ನಿಗಮಿತವಾಗಿಲ್ಲದಿರುವ ಸ್ಥಳೀಯ ಪ್ರಾಧಿಕಾರದ ಸೇವೆಗೆ ನಿಯೋಜಿಸಲಾಗಿದೆಯೋ ಅಂಥ ವ್ಯಕ್ತಿಯು ರಾಜ್ಯದ ಸಂಚಿತ ನಿಧಿಯ ಹೊರತಾದ ಇತರ ಯಾವುದೇ ಮೂಲಗಳಿಂದ ವೇತನ ಪಡೆದುಕೊಳ್ಳುತ್ತಿರುವುದು ಏನೇ ಇದ್ದರೂ ಅಂಥ ವ್ಯಕ್ತಿಯನ್ನು ಒಳಗೊಳ್ಳುತ್ತದೆ: ವಿವರಣೆ: ಈ ನಿಯಮಗಳಲ್ಲಿ ಉಲ್ಲೇಖಿಸಲಾಗಿರುವ ‘ಸರ್ಕಾರಿ ನೌಕರ” ಎಂದರೆ ಈ ನಿಯಮಗಳು ಅನ್ವಯವಾಗುವ ಯಾವುದೇ ವರ್ಗ…













