Subscribe to Updates
Get the latest creative news from FooBar about art, design and business.
Author: kannadanewsnow57
ತುಮಕೂರು: ರಾಸಲೀಲೆ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಯ ಮೆಟ್ಟಿಲು ಏರಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕ್ಷೇತ್ರ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿತ್ತು. ಅಲ್ಲದೇ ಡಿವೈಎಸ್ಪಿ ರಾಸಲೀಲೆ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ತುಮಕೂರಿನ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. ಪಾವಗಡದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿತ್ತು. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವಂತ ಡಿಜಿ ಮತ್ತು…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ತಡರಾತ್ರಿ ಜೆಡಿಎಸ್ ಮುಖಂಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಭಿಯಾನಿಯನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಬೈಕ್ ನಲ್ಲಿ ಬುರತ್ತಿದ್ದ ಜೆಡಿಎಸ್ ಮುಖಂಡ ವೆಂಕಟೇಶ್ ನನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಜೆಡಿಎಸ್ ಮುಖಂಡ, ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಟಿವಿಎಸ್ ಎಲೆಕ್ಟ್ರಿಕ್ ಬೈಕ್ನಲ್ಲಿ ತಮ್ಮನಾಯಕನಹಳ್ಳಿ ಗೇಟ್ನಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ, ಲಾಂಗಿನಿಂದ ಕೊಚ್ಚಿ ವೆಂಕಟೇಶ್ರನ್ನು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳುರು : ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರಲ್ಲಿ ಪುರುಷರೇ ಹೆಚ್ಚು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹೌದು ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ ಬರೋಬ್ಬರಿ 28,324 ಮಂದಿ ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದರೆ, 8,159 ಮಹಿಳೆಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ಉಳಿದಂತೆ ಬೆಳಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ತಲಾ 1 ಸಾವಿರಕ್ಕೂ ಅಧಿಕವಾಗಿದೆ. ಬೆಂಗಳೂರು ನಗರದಲ್ಲಿ 4,839 ಪುರುಷರು, 1778 ಮಹಿಳೆಯರು, ಬೆಳಗಾವಿಯಲ್ಲಿ 1,896 ಪುರುಷರು, 462 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1159 ಪುರುಷರು, 379 ಮಹಿಳೆಯರು, ಶಿವಮೊಗ್ಗ ಜಿಲ್ಲೆಯಲ್ಲಿ 1,142 ಪುರುಷರು, 329 ಮಹಿಳೆಯರು, ತುಮಕೂರು ಜಿಲ್ಲೆಯಲ್ಲಿ 1006 ಪುರುಷರು, 337 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಇನ್ನು ಆತ್ಮಹತ್ಯೆಗೆ ಸಾಲಬಾಧೆ, ಕಿರುಕುಳ ಕಾರಣ ಎನ್ನಲಾಗಿದ್ದು, ಕೃಷಿ ಸಾಲ, ಮಕ್ಕಳ ಶಿಕ್ಷಣ, ಮದುವೆ,…
ನವದೆಹಲಿ : ಚೀನಾದಲ್ಲಿ HMPV (ಹ್ಯೂಮನ್ ಮೆಟಾಪ್ನ್ಯುಮೋವೈರಸ್) ಹರಡುವ ಬಗ್ಗೆ ಊಹಾಪೋಹಗಳ ಮಧ್ಯೆ, ಆರೋಗ್ಯ ಸೇವೆಗಳ ನಿರ್ದೇಶನಾಲಯವು “ಆತಂಕಪಡುವ ಅಗತ್ಯವಿಲ್ಲ” ಎಂದು ಹೇಳಿದೆ ಎಂದು ದೂರದರ್ಶನ ವರದಿ ಮಾಡಿದೆ. ಸಂಸ್ಥೆಯ ಮಹಾನಿರ್ದೇಶಕ ಅತುಲ್ ಗೋಯೆಲ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೇಶದಲ್ಲಿ ಉಸಿರಾಟದ ಕಾಯಿಲೆಯಾದ ಎಚ್ಎಂಪಿವಿಯ ಯಾವುದೇ ಪ್ರಕರಣಗಳು ಇನ್ನೂ ವರದಿಯಾಗಿಲ್ಲ ಎಂದು ಹೇಳಿದರು. ಎಚ್ಎಂಪಿವಿ ಇತರ ವೈರಸ್ಗಳಂತೆ ಎಂದು ಗೋಯೆಲ್ ಹೇಳಿದರು, ಇದನ್ನು “ಸಾಮಾನ್ಯ ಶೀತಕ್ಕೆ ಕಾರಣವಾಗುವ ಸಾಮಾನ್ಯ ಉಸಿರಾಟದ ಸಮಸ್ಯೆ” ಎಂದು ಹೇಳಿದರು. ಕೇಂದ್ರ ಆರೋಗ್ಯ ಸಚಿವಾಲಯದ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ದೇಶದಲ್ಲಿ ಉಸಿರಾಟದ ಮತ್ತು ಕಾಲೋಚಿತ ಇನ್ಫ್ಲುಯೆನ್ಸ ಪ್ರಕರಣಗಳನ್ನ ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ವರದಿಯಾಗಿದೆ. ಚೀನಾ ಎಚ್ಎಂಪಿವಿ ಏಕಾಏಕಿ ವರದಿಗಳನ್ನ ಅಧಿಕೃತವಾಗಿ ದೃಢಪಡಿಸಲಾಗಿಲ್ಲವಾದರೂ, ಎನ್ಸಿಡಿಸಿ ಈ ವಿಷಯಕ್ಕಾಗಿ ಅಂತರರಾಷ್ಟ್ರೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ವರದಿಯಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಯುವಕನೊಬ್ಬ ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಲಿಂಗರಾಜಪುರದ ಮನೆಯೊಂದರಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಗಿ ಕಂಪನಿ ಉದ್ಯೋಗಿ ಸತೀಶ್ ಕುಮಾರ್ (25) ಆತ್ಮಹತ್ಯೆಗೆ ಶರಣಾಗಿದ್ದಾನೆ. ಸತೀಶ್ ಕುಮಾರ್ ತಾಯಿ ಸಂಗೀತಾ ಗುರುವಾರ ರಾತ್ರಿ 10.30ಕ್ಕೆ ಆತನ ರೂಮ್ ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸತೀಶ್ ಪದವಿ ಓದುತ್ತಿದ್ದಾಗ ತನ್ನ ಸಹಪಾಠಿಇ ಯುವತಿಯನ್ನು ಪ್ರೀತಿಸುತ್ತಿದ್ದ. ಕಳೆದ 2 ವರ್ಷಗಳಿಂದ ಇಬ್ಬರೂ ಬೆಳ್ಳಂದೂರಿನ ಸ್ಟಾರ್ಟಪ್ ಸಾಫ್ಟ್ ವೇರ್ ಸಂಸ್ಥೆಯಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಒಂದು ವರ್ಷದಿಂದ ಯುವತಿ ಸತೀಶ್ ನಿಂದ ದೂರವಾಗಿದ್ದಳು ಎನ್ನಲಾಗಿದೆ. ಈ ನಡುವೆ ಹೊಸ ವರ್ಷಕ್ಕೆ ಶುಭ ಕೋರಲು ಸತೀಶ್ ಕರೆ ಮಾಡಿದ್ದು, ಆಕೆ ಕರೆ ಪ್ರತಿಕ್ರಿಯಿಸಿಲಿಲ್ಲ ಎಂಬ ಕಾರಣಕ್ಕೆ ಮನನೊಂದು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಗಳೂರು : ಹಿರಿಯ ವಿದ್ವಾಂಸ, ಲೇಖಕ ಪ್ರೊ.ಮುಝಫರ್ ಹುಸೇನ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಿನ್ನೆ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರೋ. ಮುಝಫರ್ ಹುಸೇನ್ ಅಸ್ಸಾದಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ವಿದ್ವಾಂಸ, ಚಿಂತಕ, ಲೇಖಕ , ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದ ಪ್ರೊ.ಮುಝಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ.
ಮಾಂಸಾಹಾರಿಗಳು ಚಿಕನ್, ಮಟನ್ ಸೇವಿಸುತ್ತಾರೆ. ಆದರೆ ಅನೇಕ ಮಾಂಸಾಹಾರಿಗಳು ಮೀನುಗಳನ್ನು ತಿನ್ನಲು ಬಯಸುತ್ತಾರೆ ಮತ್ತು ಮೀನನ್ನು ಸೇವಿಸುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ಮೀನು ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ ಎಂದು ಎಲ್ಲರಿಗೂ ತಿಳಿದಿದೆ, ಆದರೆ ಮೀನಿನ ತಲೆಯನ್ನು ಸೇವಿಸುವುದರಿಂದ ದೇಹಕ್ಕೆ ಎಷ್ಟು ಒಳ್ಳೆಯದು ಎಂದು ಅನೇಕರಿಗೆ ತಿಳಿದಿಲ್ಲ. ಹಾಗಾಗಿ ಇಂದು ಮೀನಿನ ತಲೆಗಳನ್ನು ತಿನ್ನುವ ಪ್ರಯೋಜನಗಳ ಬಗ್ಗೆ ತಿಳಿದುಕೋಳ್ಳಿ. ಕಣ್ಣುಗಳಿಗೆ ತುಂಬಾ ಉಪಯುಕ್ತ ಮಕ್ಕಳು ಮತ್ತು ವೃದ್ಧರು ಮೀನಿನ ತಲೆ ತಿನ್ನಬೇಕು. ಮೀನಿನ ತಲೆಯು ವಿಟಮಿನ್ ಎ ಯಲ್ಲಿ ಸಮೃದ್ಧವಾಗಿದೆ, ಇದು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ, ಮೀನಿನ ತಲೆಯನ್ನು ಸೇವಿಸುವುದರಿಂದ ಕಣ್ಣಿನ ಸಂಬಂಧಿತ ಇತರ ಸಮಸ್ಯೆಗಳನ್ನು ಸಹ ಗುಣಪಡಿಸಬಹುದು. ಹಾಗಾಗಿ ವಾರಕ್ಕೊಮ್ಮೆ ಮೀನಿನ ತಲೆ ತಿನ್ನಿ. ನಿಮ್ಮ ಮೆದುಳನ್ನು ಚುರುಕುಗೊಳಿಸಿ ಮೀನಿನ ತಲೆಯನ್ನು ತಿನ್ನುವುದರಿಂದ ದೇಹಕ್ಕೆ ಮತ್ತು ನಿಮ್ಮ ಮೆದುಳಿಗೆ ಅನೇಕ ಪ್ರಯೋಜನಗಳಿವೆ. ನೀವು ಆಗಾಗ್ಗೆ ಮರೆವಿನ ಸಮಸ್ಯೆಯಿಂದ ಬಳಲುತ್ತಿದ್ದರೆ, ನೀವು ಮೀನಿನ ತಲೆಯನ್ನು ತಿನ್ನಬೇಕು ಏಕೆಂದರೆ ಇದರಲ್ಲಿ ಒಮೆಗಾ 3…
ನವದೆಹಲಿ : ಆಸ್ತಿಯ ಹಕ್ಕು ಸಾಂವಿಧಾನಿಕ ಹಕ್ಕಾಗಿದ್ದು, ಕಾನೂನಿನ ಪ್ರಕಾರ ಸೂಕ್ತ ಪರಿಹಾರವನ್ನು ನೀಡದೆ ವ್ಯಕ್ತಿಯೊಬ್ಬನ ಆಸ್ತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠವು ಸಂವಿಧಾನದ (ನಲವತ್ನಾಲ್ಕನೇ ತಿದ್ದುಪಡಿ) ಕಾಯಿದೆ, 1978 ರ ಕಾರಣದಿಂದಾಗಿ ಆಸ್ತಿಯ ಹಕ್ಕು ಮೂಲಭೂತ ಹಕ್ಕಾಗಿದೆ ಎಂದು ಹೇಳಿದೆ, ಆದಾಗ್ಯೂ, ಇದು ಕಲ್ಯಾಣ ರಾಜ್ಯದಲ್ಲಿ ಮತ್ತು ಸಾಂವಿಧಾನಿಕವಾಗಿ ಮಾನವ ಹಕ್ಕು ಎಂದು ಮುಂದುವರಿಯುತ್ತದೆ. ಸಂವಿಧಾನದ ಆರ್ಟಿಕಲ್ 300-ಎ ಅಡಿಯಲ್ಲಿ ಹಕ್ಕು. ಸಂವಿಧಾನದ 300-ಎ ವಿಧಿಯು ಕಾನೂನಿನ ಅಧಿಕಾರವನ್ನು ಹೊರತುಪಡಿಸಿ, ಯಾವುದೇ ವ್ಯಕ್ತಿ ತನ್ನ ಆಸ್ತಿಯಿಂದ ವಂಚಿತರಾಗಬಾರದು ಎಂದು ಒದಗಿಸುತ್ತದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಗೆ (ಬಿಎಂಐಸಿಪಿ) ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನವೆಂಬರ್ 2022 ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯ ಮೇಲೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ನೀಡಿದೆ. ಇಲ್ಲಿ ಚರ್ಚಿಸಿದಂತೆ, ಆಸ್ತಿಯ ಹಕ್ಕು…
ಮೈಸೂರು : ಹೊಸ ವರ್ಷದ ಕೇಕ್ ತಿಂದು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೋಳನಹಳ್ಳಿಯಲ್ಲಿ ನಡೆದಿದೆ. ಬೋಳನಹಳ್ಳಿ ಗ್ರಾಮದ ಶ್ರೀಮಂಜುನಾಥ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕೇಕ್ ತಿಂದ ಪರಿಣಾಮ ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದು, ಕೂಡಲೇ ವಿದ್ಯಾರ್ಥಿಗಳನ್ನು ಬೋಳನಹಳ್ಳಿ ಆಯುಷ್ಮಾನ್ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸ ವರ್ಷದ ದಿನ ಕೇಕ್ ಕಟ್ ಮಾಡಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿತ್ತು. ಎರಡು ದಿನಗಳ ಬಳಿಕ ಉಳಿದ ಕೇಕ್ ತಿಂದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅಪಾಯದಿಂದ ಎಲ್ಲಾ ವಿದ್ಯಾರ್ಥಿಗಳು ಪಾರಾಗಿದ್ದಾರೆ.
BIG NEWS : ವಿಶ್ವ ಬ್ರೈಲ್ ದಿನಾಚರಣೆ : ಇಂದು ಈ `ಸರ್ಕಾರಿ ನೌಕರರಿಗೆ’ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶ.!
ಬೆಂಗಳೂರು: ವಿಶ್ವ ಬ್ರೈಲ್ ದಿನಾಚರಣೆಯಂದು ದೃಷ್ಟಿದೋಷವುಳ್ಳ ವಿಕಲಚೇತನರ ಸರ್ಕಾರಿ ನೌಕರರಿಗೆ ದಿನಾಂಕ 04-01-2025ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ನಿರ್ದೇಶಕರು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆರವರ ಪುಸ್ತಾವನೆಯಲ್ಲಿ ಪ್ರತಿ ವರ್ಷ ದಿವಂಗತ ಲೂಯಿ ಬೈಲ್ ರವರ ಜನ್ಮ ದಿನದ ಅಂಗವಾಗಿ ಜನವರಿ 04ರಂದು ನಡೆಯುವ ವಿಶ್ವ ಬ್ರೆಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ದೃಷ್ಟಿದೋಷವುಳ್ಳ ವಿಕಲಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಒದಗಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ರೌಂಡ್, ಬೆಂಗಳೂರು ಇವರು ಕೋರಿದ್ದು, ಅದರಂತೆ ದಿನಾಂಕ: 04.01.2025 ರಂದು ದಿವಂಗತ ಲೂಯಿ ಬೈಲ್ ಅವರ ಜನ್ಮ ದಿನದ ಅಂಗವಾಗಿ ನಡೆಯುವ ವಿಶ್ವ ಬೈಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಅಂಧ ಸರ್ಕಾರಿ ನೌಕರರಿಗೆ ಒಂದು ದಿನ ವಿಶೇಷ…