Author: kannadanewsnow57

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಫಲಾನುಭವಿಗಳ ನೋಂದಣಿಗಾಗಿ ವಿಶೇಷ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ. ಈ ಸಂಬಂಧ 2023, 2024 ಹಾಗೂ 2025ನೇ ವರ್ಷದಲ್ಲಿ ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ http://sevasindhugs.karnataka.gov.in ನಲ್ಲಿ ಆಗಸ್ಟ್ 7 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಜಿಲ್ಲೆಯ ಎಲ್ಲಾ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಅನುದಾನಿತ ಪದವಿ ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿ, ತಾಲ್ಲೂಕು ಕಛೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಪದವೀಧರರಿಗೆ ಪ್ರತಿ ತಿಂಗಳು ರೂ. 3000/- ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ. 1500/- ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿ, ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಂತರ ಮಾಹೆವಾರು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಪ್ರತಿ ತಿಂಗಳು 25ನೇ ದಿನಾಂಕದೊಳಗಾಗಿ ತಾನು…

Read More

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಜುಲೈ 12 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಕೆ.ವೇಲಾ ತಿಳಿಸಿದರು. ಅವರು ಬುಧವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಲೋಕ್ ಅದಾಲತ್ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜಿ, ಸಂಧಾನ ನಡೆಸಲು ನ್ಯಾಯಾಂಗ ಇಲಾಖೆ ಮತ್ತು ವಕೀಲರ ಕಡೆಯಿಂದಲೂ ಪ್ರತ್ಯೇಕವಾಗಿ ಮಧ್ಯಸ್ಥಗಾರರು ಇರುವರು. ರಾಜಿ, ಸಂಧಾನ ನಡೆಸುವ ಅಧಿಕಾರವನ್ನು ಕಾನ್ಸಿಲೇಟರ್ಗಡಳಿಗೆ ನೀಡಲಾಗಿರುತ್ತದೆ. ಅದಾಲತ್ನಿಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದಾಲತ್ನಗಲ್ಲಿ ಇತ್ಯರ್ಥವಾಗುವ ಪ್ರಕರಣಗಳು ನ್ಯಾಯಾಲಯದಲ್ಲಿನ ತೀರ್ಪುಗಳಂತೆ ಇರುತ್ತದೆ. ಅದಾಲತ್ನುಲ್ಲಿ ಇತ್ಯರ್ಥ ಮಾಡಿಕೊಂಡಲ್ಲಿ ಮತ್ತೆ ಅಪೀಲು ಹೋಗಲು ಅವಕಾಶ ಇರುವುದಿಲ್ಲ ಎಂದರು. ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ…

Read More

ಬೆಂಗಳೂರು : ವಿದ್ಯುತ್ ಸಂಪರ್ಕಕ್ಕೆ ಕಾಯುತ್ತಿರುವ 4 ಲಕ್ಷ ಬಡ, ಮಧ್ಯಮ ವರ್ಗದವರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಮನೆ, ಕಟ್ಟಡಗಳಿಗೆ ಕೂಡಲೇ ವಿದ್ಯುತ್ ನೀಡಲು ನ್ಯಾ. ನಾಗಮೋಹನದಾಸ್ ಆಯೋಗ ಶಿಫಾರಸು ಮಾಡಿದೆ. ಹೌದು, ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವ ಮೂರರಿಂದ ನಾಲ್ಕು ಲಕ್ಷ ಬಡ, ಮಧ್ಯಮ ವರ್ಗದ ಕುಟುಂಬದವರಿಗೆ ತೊಂದರೆಯಾಗಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಆಯೋಗ ಶಿಫಾರಸು ಮಾಡಿದೆ. ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ವತಿಯಿಂದ ಆಯೋಗಕ್ಕೆ ಈ ಕುರಿತು ಮನವಿ ಸಲ್ಲಿಸಲಾಗಿದ್ದು, ಮನವಿಗೆ ಸ್ಪಂದಿಸಿದ ಆಯೋಗ ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಸಂಬಂಧಿಸಿದವರಿಗೆ ಪತ್ರ ಬರೆದಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಎಸ್ಕಾಂಗಳು ಏಪ್ರಿಲ್ 4ರಿಂದ ಮನೆ, ವಾಣಿಜ್ಯ ಕಟ್ಟಡ, ಕೈಗಾರಿಕೆಗಳು ಸೇರಿ ಎಲ್ಲರಿಗೂ ತಾತ್ಕಾಲಿಕ, ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ, ಸಿಸಿ ಕಡ್ಡಾಯಗೊಳಿಸುತ್ತಿವೆ. ಇದರಿಂದ ಬಡವರಿಗೆ ವಿಶೇಷವಾಗಿ ಮಕ್ಕಳ ಶಿಕ್ಷಣ, ಗ್ರಾಮೀಣ…

Read More

ಬೆಂಗಳೂರು: ಗೋಲ್ಡನ್ ಸ್ಟಾರ್‌ಗಣೇಶ್ ತಮ್ಮ ನಟನೆಯ ‘ನಿದ್ರಾದೇವಿ ನೆಕ್ಸ್ ಡೋರ್’ ಚಿತ್ರದಿಂದ ಕನ್ನಡದ ಬಗ್ಗೆ ಆಕ್ಷೇಪಾರ್ಹ ಮಾತು ಆಡಿದ ಗಾಯಕ ಸೋನು ನಿಗಂ ಹಾಡಿದ ಗೀತೆ ತೆಗೆಯಲು ಸೂಚಿಸಿದ್ದಾರೆ. ‘ನಿದ್ರಾದೇವಿ ನೆಕ್ ಡೋರ್’ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಈ ಸಿನಿಮಾದಲ್ಲಿರುವ ಸೋನು ನಿಗಮ್ ಹಾಡು ತೆಗೆದು ಹಾಕುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಗಣೇಶ್, ‘ಈ ಹಾಡಿನಲ್ಲಿ ನಾನೇ ನಟಿಸಿದ್ದರೂ ಪ್ರಾಮಾಣಿಕವಾಗಿ ಈ ಪ್ರಶ್ನೆ ಕೇಳುತ್ತಿದ್ದೆ. ನಮ್ಮಿಂದಲ್ಲ ಭಾಷೆ, ಭಾಷೆಯಿಂದ ನಾವು. ಭಾಷೆ ಉಳಿದರಷ್ಟೇ ನಾವು. ಭಾಷೆಯೇ ಇಲ್ಲಾಂದ್ರೆ ನಾವು ಏನು ಮಾಡೋದಕ್ಕಾಗುತ್ತೆ. ನಮ್ಮ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ನಮ್ಮಂಥವರು ಸಾವಿರಾರು ಜನ ಬಂದು ಹೋಗ್ತಾರೆ, ಆದರೆ ಉಳಿಯೋದು ಭಾಷೆ ಒಂದೇ. ಭಾಷೆಯನ್ನು ಬೆಳೆಸುತ್ತೇವೆ ಅನ್ನೋದಲ್ಲ, ಇರುವ ಭಾಷೆಯನ್ನು ಉಳಿಸಿಕೊಂಡು ಹೋಗಬೇಕು’ ಎಂಬ ಮಾತನ್ನು ಹೇಳಿದ್ದಾರೆ. ‘ಭಾಷೆನೇ ಇಲ್ಲಾಂದ್ರೆ ನಾವೇನು ಮಾಡೋಕಾಗುತ್ತೆ? ಸಾವಿರಾರು ವರ್ಷಗಳ ಇತಿಹಾಸ ಇದೆ. ಅದರಿಂದ ನಾವಷ್ಟೇ, ನಮ್ಮಿಂದ…

Read More

ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಿರುವ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಕೆ.ಎಸ್‌. ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿ ಇಂದು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಲಿದೆ. ಹೌದು, ರಾಜ್ಯಾದ್ಯಂತ ಹಠಾತ್ ಹೃದಯಾಘಾತ ದಿಂದ ನಿಧನ ಹೊಂದುತ್ತಿದ್ದ ಕಾರಣದಿಂದ ಕೊರೋನಾ ಸೋಂಕು ಹಾಗೂ ಲಸಿಕೆ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ರವೀಂದ್ರನಾಥ್ ಸಮಿತಿ ರಚಿಸಿತ್ತು. ಮೇ-ಜೂನ್ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳು ಹೆಚ್ಚಾಗಿದ್ದರಿಂದ ಜು.2 ರಂದು ಇದೇ ತಜ್ಞರ ಸಮಿತಿಗೆ ಹಾಸನ ಪ್ರಕರಣಗಳ ಕುರಿತು ವರದಿ ನೀಡಲು ತಿಳಿಸಲಾಗಿತ್ತು. ಸಮಿತಿ ಮೃತಪಟ್ಟಿರುವವರ ಮರಣೋತ್ತರ ವರದಿ ಸೇರಿ ಚಿಕಿತ್ಸಾ ವಿವರ ಸಂಗ್ರಹಿಸಿ ಅಧ್ಯಯನ ನಡೆಸಿದೆ. ಅಂತಿಮವಾಗಿ ಇಂದು ಹಾಸನದ ಪ್ರಕರಣಗಳ ವರದಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Read More

ನವದೆಹಲಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ ಉದ್ದೇಶದಿಂದ ಯಾವುದೇ ವಾಟ್ಸಾಪ್ ಗ್ರೂಪ್ ರಚನೆಯಾಗಿದ್ದರೆ ಅದನ್ನು ರ‍್ಯಾಗಿಂಗ್ ಎಂದು ಪರಿಗಣಿಸಲು ಯುಜಿಸಿ ಸೂಚಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಾಟ್ಸಾಪ್ ಗುಂಪುಗಳ ಮೂಲಕ ಜೂನಿಯರ್ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದರೆ ಅದನ್ನು ರ್ಯಾ ಗ್ಗಿಂಗ್ ಎಂದು ಪರಿಗಣಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೇಳಿದೆ. ಅಂತಹ ಸಂದರ್ಭಗಳಲ್ಲಿ, ರ್ಯಾ ಗ್ಗಿಂಗ್ ವಿರೋಧಿ ನಿಯಮಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅನೌಪಚಾರಿಕ ವಾಟ್ಸಾಪ್ ಗುಂಪುಗಳನ್ನು ಮೇಲ್ವಿಚಾರಣೆ ಮಾಡಲು ಯುಜಿಸಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಅನೇಕ ಸಂದರ್ಭಗಳಲ್ಲಿ ಹಿರಿಯ ವಿದ್ಯಾರ್ಥಿಗಳು ಅನೌಪಚಾರಿಕ ವಾಟ್ಸಾಪ್ ಗುಂಪುಗಳನ್ನು ರಚಿಸುತ್ತಾರೆ, ಜೂನಿಯರ್ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಕಿರುಕುಳ ನೀಡುತ್ತಾರೆ ಎಂದು ಯುಜಿಸಿ ನಿರ್ದೇಶನದಲ್ಲಿ ತಿಳಿಸಿದೆ. ಇದು ರ್ಯಾ ಗ್ಗಿಂಗ್‌ನಂತೆಯೇ ಇರುತ್ತದೆ ಮತ್ತು ಇದಕ್ಕಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಅತ್ಯಂತ ಮುಖ್ಯ ಎಂದು ಯುಜಿಸಿ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದೆ.…

Read More

ಧಾರವಾಡ : ಕನ್ನಡಕ್ಕಾಗಿ ಹೋರಾಟ ನಡೆಸಿದವರ ಮೇಲೆ ಪೊಲೀಸ್ ಪ್ರಕರಣಗಳು ದಾಖಲಾಗಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು. ಪೊಲೀಸ್ ಮತ್ತು ಜಿಲ್ಲಾಡಳಿತ ಈ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಹೇಳಿದರು. ಅವರು ಇಂದು (ಜುಲೈ 9) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಗೋಕಾಕ ಚಳುವಳಿಯ ಸ್ಮರಣೆಗಾಗಿ ಹುಬ್ಬಳ್ಳಿಯ ಗಬ್ಬೂರ ಬೈಪಾಸ್ ಹತ್ತಿರ ಇರುವ ಸರ್ಕಲ್‍ನಲ್ಲಿ ಡಾ. ರಾಜಕುಮಾರ ಅವರ ಸ್ಮಾರಕವನ್ನು ನಿರ್ಮಿಸಬೇಕು ಎಂಬುದು ಕನ್ನಡಪರ ಹೋರಾಟಗಾರರ ಬೇಡಿಕೆಯಾಗಿದೆ. ಈ ಕುರಿತು ಸರ್ಕಾರಕ್ಕೆ ನಿಯಮಾನುಸಾರ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತದೆ ಎಂದು ಹೇಳಿದರು. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಕನ್ನಡ ಉದ್ಯೋಗಿಗಳ ಸಂಖ್ಯೆ ಕಡಿಮೆ ಇರುವದರಿಂದ ಗ್ರಾಹಕರಿಗೆ ಭಾಷೆ ಸಮಸ್ಯೆ ಉಂಟಾಗುತ್ತಿದೆ. ಕೇಂದ್ರ ಸರ್ಕಾರ ಸ್ಥಳೀಯ ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಬ್ಯಾಂಕ್ ಉದ್ಯೋಗಿಗಳಿಗೆ ಸ್ಥಳೀಯ ಭಾಷೆ, ವಿಶೇಷವಾಗಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಿದೆ. ರಾಜ್ಯ ಸರ್ಕಾರ…

Read More

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ನಿನ್ನೆ ಒಂದೇ ದಿನ ಓರ್ವ ಬಾಲಕ ಸೇರಿದಂತೆ 8 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಗೂಡ್ಸ್ ವಾಹನ ಚಾಲಕ ಸಾವು ಬೆಳಗಾವಿ ಜಿಲ್ಲೆಯ ಸೌದತ್ತಿ ಪಟ್ಟಣದ ಎಪಿಎಂಸಿಯಲ್ಲಿ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಅಶೋಕ್ ಜೀರಿಗವಾಡ (40) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ಅಶೋಕ್ ಸೌದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸೌದತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಅಶೋಕ್ ಹೆಸರು ಕಾಳು ತಂದಿದ್ದರು. ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದು ಚಾಲಕ ಅಶೋಕ್ ಸಾವನಪ್ಪಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆಯಲ್ಲಿ 22 ವರ್ಷದ ಯುವಕ ಸಾವು ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್ ನನ್ನು…

Read More

ಜಿರಳೆಗಳು ಅಡುಗೆಮನೆಯಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಬಹುತೇಕ ಎಲ್ಲರಿಗೂ ಮನೆಯಲ್ಲಿ ಸಮಸ್ಯೆ ಇರುತ್ತದೆ. ಜಿರಳೆ ಬಂದ ತಕ್ಷಣ ಮಾರುಕಟ್ಟೆಯಲ್ಲಿ ಸಿಗುವ ಸ್ಪ್ರೇಗಳನ್ನ ಖರೀದಿಸುತ್ತೇವೆ. ಆದರೆ ಅವುಗಳ ಬೆಲೆ ಹೆಚ್ಚು. ನಿತ್ಯವೂ ಹೀಗೆ ಹಣ ಕೊಟ್ಟು ಕೊಳ್ಳಲು ಆಗುವುದಿಲ್ಲ. ಹಾಗಂತ, ಜಿರಳೆಗಳೂ ಹಾಗೆ ಬಿಡದ ಪರಿಸ್ಥಿತಿ. ಅಕಸ್ಮಾತ್ ನಾವು ತಿನ್ನುವ ಆಹಾರದ ಮೇಲೆ ಓಡಾಡಿದ್ರೆ ನಾವು ಭಾರೀ ಬೆಲೆ ತೆರುತ್ತೇವೆ. ಹಾಗಿದ್ರೆ, ಜಿರಳೆಗಳನ್ನ ನೈಸರ್ಗಿಕವಾಗಿ ಹೋಗಲಾಡಿಸುವುದು ಹೇಗೆ ಎಂದು ತಿಳಿಯೋಣ. * ಲವಂಗ ಮತ್ತು ಬೇವಿನ ಎಣ್ಣೆಯಿಂದ ಮಾಡಿದ ವಸ್ತುವು ಜಿರಳೆಗಳನ್ನ ಹಿಮ್ಮೆಟ್ಟಿಸುತ್ತದೆ. ಇದಕ್ಕಾಗಿ ಮೊದಲು ಸ್ವಲ್ಪ ಲವಂಗವನ್ನ ತೆಗೆದುಕೊಂಡು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ನಂತರ ಅದರಲ್ಲಿ ಬೇವಿನ ಎಣ್ಣೆಯನ್ನು ಸುರಿಯಿರಿ. ಜಿರಳೆಗಳು ಬದಿಗೆ ಬರದಂತೆ ಜಿರಳೆಗಳು ಓಡಾಡುವ ಕಡೆ ಈ ಮಿಶ್ರಣವನ್ನ ಹಾಕಬೇಕು. * ಪುದೀನಾ ಎಣ್ಣೆ ಕೂಡ ಜಿರಳೆಗಳನ್ನು ಹಿಮ್ಮೆಟ್ಟಿಸುತ್ತದೆ. ಇದಕ್ಕಾಗಿ, ಪುದೀನಾ ಎಣ್ಣೆಯಲ್ಲಿ ಉಪ್ಪು ಮತ್ತು ನೀರನ್ನು ಸಿಂಪಡಿಸಬೇಕು. ಇದರಿಂದಾಗಿ ಜಿರಳೆಗಳು ಆ ಕಡೆ ಬರುವುದಿಲ್ಲ. * ಜಿರಳೆಗಳಿಗೆ ಸೀಮೆ ಎಣ್ಣೆಯ…

Read More

ವಾಷಿಂಗ್ಟನ್ : ಅಮೆರಿಕದಲ್ಲಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡಾಗಿನಿಂದ, ವಿದೇಶಿ ವಲಸಿಗರು ಮತ್ತು ವಿದೇಶಿ ವಿದ್ಯಾರ್ಥಿಗಳ ವಿರುದ್ಧ ಪೂರ್ವಾಗ್ರಹ ಪೀಡಿತ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಡೊನಾಲ್ಡ್ ಟ್ರಂಪ್, ಈ ಕ್ರಮದಲ್ಲಿ ಅವರಿಗೆ ಹಲವಾರು ಆಘಾತಗಳನ್ನು ನೀಡುತ್ತಿದ್ದಾರೆ. ಅಸ್ತಿತ್ವದಲ್ಲಿರುವ ವೀಸಾಗಳ ಮೇಲಿನ ನಿರ್ಬಂಧಗಳನ್ನು ವಿಧಿಸುವ ಮತ್ತು ತೆಗೆದುಹಾಕುವುದರ ಜೊತೆಗೆ, ಹೊಸ ವೀಸಾಗಳನ್ನು ನೀಡುವ ನಿಯಮಗಳನ್ನು ಸಹ ಅವರು ಕಠಿಣಗೊಳಿಸಿದ್ದಾರೆ. ಈ ರೀತಿಯಾಗಿ, ಟ್ರಂಪ್ ತಮ್ಮ ‘ಅಮೇರಿಕಾ ಫಸ್ಟ್’ ಘೋಷಣೆಯನ್ನು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಅದೇ ಆದೇಶದಲ್ಲಿ, ಟ್ರಂಪ್ ಸರ್ಕಾರವು ಭಾರತೀಯ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ನೀಡಲಾಗುವ F1 ವೀಸಾಗಳಲ್ಲಿ ಭಾರಿ ಕಡಿತವನ್ನು ಮಾಡುತ್ತಿದೆ. ಪರಿಣಾಮವಾಗಿ, ಸಾವಿರಾರು ವಿದ್ಯಾರ್ಥಿಗಳು ಮತ್ತು ವೃತ್ತಿಪರರು ಈಗಾಗಲೇ ತಮ್ಮ ವೀಸಾಗಳನ್ನು ಕಳೆದುಕೊಂಡಿದ್ದಾರೆ. ಇತ್ತೀಚಿನ US ಅಧಿಕಾರಿಗಳು ಈ ಸಂಖ್ಯೆಯ ಮಟ್ಟದ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಇದರ ಪ್ರಕಾರ, ಕಳೆದ ವರ್ಷ ಭಾರತೀಯ ವಿದ್ಯಾರ್ಥಿಗಳಿಗೆ ನೀಡಲಾದ F1 ವೀಸಾಗಳಿಗೆ ಹೋಲಿಸಿದರೆ ಈ ವರ್ಷ ಶೇಕಡಾ 27 ರಷ್ಟು ಕಡಿಮೆ ವೀಸಾಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.…

Read More