Author: kannadanewsnow57

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಯುಪಿಐ ಮೂಲಕವೇ ಇನ್ಮುಂದೆ ಆಸ್ತೆ ತೆರಿಗೆ ಪಾವತಿಸಬಹುದು. ನಿಮ್ಮ ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಕ್ಕೆ ಭೇಟಿ ನೀಡಿ. ಅಥವಾ ಬಾಪೂಜಿ ಸೇವಾ ಕೇಂದ್ರದ ವೆಬೈಟ್ ಮೂಲಕ ಪಾವತಿಸಿ. ಅಥವಾ Google Pay, PhonePe, Paytm ಅಥವಾ BHIM ಆ್ಯಪ್ ಮೂಲಕ ತೆರಿಗೆ ಪಾವತಿಸಬಹುದು. ಹೆಚ್ಚಿನ ಮಾಹಿತಿಗಾಗಿ https://bsk.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಿ. ಮೊಬೈಲ್ ಆ್ಯಪ್ ಈ ರೀತಿ ಬಳಸಿ ಬಾಪೂಜಿ ಸೇವಾ ಕೇಂದ್ರ ಮೊಬೈಲ್ ಅಪ್ಲಿಕೇಷನ್ ಇದೀಗ ಅಂಡ್ರಾಯ್ಡ್ ಮೊಬೈಲ್’ಗಳಲ್ಲಿ ಲಭ್ಯವಿದೆ. ನಿಮ್ಮ ಅಂಡ್ರಾಯ್ಡ್ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮೂಲಕ Bapuji Seva Kendra ಎಂದು ಸರ್ಚ್ ಮಾಡಿ ಮತ್ತು ಅಪ್ಲಿಕೇಷನ್ ಡೌನ್ಹೋಡ್ ಮಾಡಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ನೀಡಿ ಲಾಗಿನ್‌ಆಗಿ ಮತ್ತು ಬಾಪೂಜಿ ಸೇವಾ ಕೇಂದ್ರದ ಸೇವೆಗಳನ್ನು ಪಡೆಯಿರಿ ನಿಮ್ಮ ಆಸ್ತಿ ರಸೀದಿ ಪಡೆಯಲು ಹೀಗೆ ಮಾಡಿ 1.…

Read More

ಲೈಂಗಿಕತೆಯು ಮಾನವ ಜೀವನದ ಒಂದು ಪ್ರಮುಖ ಭಾಗವಾಗಿದೆ. ಇದು ಲೈಂಗಿಕ ತೃಪ್ತಿಗೆ ಮಾತ್ರವಲ್ಲ, ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೂ ಮುಖ್ಯವೆಂದು ಪರಿಗಣಿಸಲಾಗಿದೆ. ಆದಾಗ್ಯೂ, ಕೆಲವು ಜನರು ವೈಯಕ್ತಿಕ, ಸಾಮಾಜಿಕ ಅಥವಾ ದೈಹಿಕ ಕಾರಣಗಳಿಗಾಗಿ ದೀರ್ಘಕಾಲದವರೆಗೆ ಲೈಂಗಿಕತೆಯನ್ನು ಹೊಂದಿರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅದು ದೇಹ ಮತ್ತು ಮನಸ್ಸಿನ ಮೇಲೆ ಕೆಲವು ಸಕಾರಾತ್ಮಕ ಮತ್ತು ನಕಾರಾತ್ಮಕ ಪರಿಣಾಮಗಳನ್ನು ಬೀರಬಹುದು. ಒತ್ತಡ ಮತ್ತು ಮಾನಸಿಕ ಒತ್ತಡ ಹೆಚ್ಚಾಗುತ್ತದೆ ಲೈಂಗಿಕ ಸಮಯದಲ್ಲಿ, ದೇಹವು ಆಕ್ಸಿಟೋಸಿನ್ ಮತ್ತು ಎಂಡಾರ್ಫಿನ್ ಎಂಬ ‘ಸಂತೋಷದ ಹಾರ್ಮೋನುಗಳು’ ಉತ್ಪಾದಿಸುತ್ತದೆ. ಈ ಹಾರ್ಮೋನುಗಳು ಸ್ವಾಭಾವಿಕವಾಗಿ ಒತ್ತಡವನ್ನು ಕಡಿಮೆ ಮಾಡಿ ಮನಸ್ಥಿತಿಯನ್ನು ಸುಧಾರಿಸುತ್ತವೆ. ದೀರ್ಘಕಾಲದವರೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳದಿರುವುದು ಒತ್ತಡದ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ರೋಗನಿರೋಧಕ ಶಕ್ತಿ ದುರ್ಬಲಗೊಳ್ಳಬಹುದು. ಸಂಶೋಧನೆಯ ಪ್ರಕಾರ, ನಿಯಮಿತವಾಗಿ ಲೈಂಗಿಕ ಕ್ರಿಯೆ ನಡೆಸುವ ಜನರಲ್ಲಿ ರೋಗನಿರೋಧಕ ಶಕ್ತಿ ಉತ್ತಮವಾಗಿರುತ್ತದೆ. ಏಕೆಂದರೆ ಸಂಭೋಗದ ಸಮಯದಲ್ಲಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ದೇಹದಲ್ಲಿ ಸಕ್ರಿಯಗೊಳ್ಳುತ್ತವೆ. ನೀವು…

Read More

ಬೆಂಗಳೂರು : ಮಾರ್ಚ್ 4 ರ ನಾಳೆ 6.00 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ “ಹೋಟೆಲ್ ಯಾಡಿಸನ್ ಬ್ಲೂ (ಏಟ್ರಿಯಾ)” ಇಲ್ಲಿ ಕರೆಯಲಾಗಿದ್ದ ‘ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ದಿನಾಂಕ: 04-03-2025ರ ಮಂಗಳವಾರದಂದು ಕರೆಯಲಾಗಿದ್ದ ಸಭೆಯನ್ನು ದಿನಾಂಕ 10-03-2025ರ ಸೋಮವಾರ ಸಂಜೆ 6.00 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ “ಹೋಟೆಲ್ ಲ್ಯಾಡಿಸನ್ ಬ್ಲೂ (ಏಟ್ರಿಯಾ)” ಇಲ್ಲಿ ಕರೆಯಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ತಿಳಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಸಿಎಂ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ರಾಜ್ಯ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ತಿನ ಸಭಾ ನಾಯಕರಾದ ಎನ್.ಎಸ್. ಭೋಸರಾಜು ರವರು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಈ ಸಭೆಯಲ್ಲಿ ಉಪಸ್ಥಿತರಿರುತ್ತಾರೆ.

Read More

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರ‌ರಹಿತ ಆರೋಪ‌ ಎಂದರು. ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ… ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು. ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ‌ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Read More

ನವದೆಹಲಿ: ಇಂದು ಪ್ರಧಾನಿ ಮೋದಿ ಅವರ 3 ದಿನಗಳ ಗುಜರಾತ್ ಭೇಟಿಯ ಕೊನೆಯ ದಿನ. ‘ವಿಶ್ವ ವನ್ಯಜೀವಿ ದಿನ’ದ ಸಂದರ್ಭದಲ್ಲಿ ಪ್ರಧಾನಿ ಮೋದಿ ಇಲ್ಲಿ ಜಂಗಲ್ ಸಫಾರಿಯನ್ನು ಆನಂದಿಸಿದರು. ಮೂರು ದಿನಗಳ ಈ ಭೇಟಿಗಾಗಿ ಪ್ರಧಾನಿ ಮೋದಿ ಶನಿವಾರ (ಮಾರ್ಚ್ 1) ಸಂಜೆ ಜಾಮ್‌ನಗರ ತಲುಪಿದರು. ಅವರು ಇಲ್ಲಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಭಾನುವಾರ, ಅವರು ಸೋಮನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಾದ ನಂತರ, ಇಂದು ಅವರು ಜಂಗಲ್ ಸಫಾರಿಯನ್ನು ಆನಂದಿಸುತ್ತಿರುವುದು ಕಂಡುಬಂದಿತು. ಪ್ರಧಾನಿ ಮೋದಿ ಅವರ ಜಂಗಲ್ ಸಫಾರಿಯ ಫೋಟೋಗಳು https://twitter.com/ANI/status/1896426909841637845?ref_src=twsrc%5Etfw%7Ctwcamp%5Etweetembed%7Ctwterm%5E1896426909841637845%7Ctwgr%5E2b0796977ed384e019e3ba244c4a04ba60afabad%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Frepublicbharat-epaper-dh03a36d2e942d472fbdd41e14f2464b5e%2Fpmmodinegirneshanalparkmekijangalsapharihathomekaimarathamekuchyusherokakaratedikhedidar-newsid-n654321911 ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ, ಪ್ರಧಾನಿ ಮೋದಿ ಭಾನುವಾರ ರಾತ್ರಿಯೇ ಗಿರ್ ರಾಷ್ಟ್ರೀಯ ಉದ್ಯಾನವನದಲ್ಲಿರುವ ರಾಜ್ಯ ಅರಣ್ಯ ಇಲಾಖೆಯ ಅತಿಥಿ ಗೃಹವಾದ ಸಿಂಗ್ ಸದನವನ್ನು ತಲುಪಿದರು. ಅವನು ಇಲ್ಲಿ ರಾತ್ರಿ ವಿಶ್ರಾಂತಿ ಪಡೆದನು. ಇದಾದ ನಂತರ ನಾವು ಇಂದು (ಮಾರ್ಚ್ 2) ಬೆಳಿಗ್ಗೆ ಜಂಗಲ್ ಸಫಾರಿಗೆ ಹೋದೆವು. ಪ್ರಧಾನಿ ಮೋದಿಯವರ ಜಂಗಲ್ ಸಫಾರಿಯ ಕೆಲವು ಚಿತ್ರಗಳು…

Read More

ಬೆಂಗಳೂರು : ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದು, ರಾಜ್ಯ ಸರ್ಕಾರ ಜಿಎಸ್‌ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು. ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ ಎಂದು ತಿಳಿಸಿದರು. ಹೀಗಿದೆ ರಾಜ್ಯಪಾಲರ ಭಾಷಣದ ಮುಖ್ಯಾಂಶಗಳು 1. ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ತಮ್ಮೆಲ್ಲರಿಗೂ ನಾನು ಹಾರ್ದಿಕ ಸ್ವಾಗತವನ್ನು ಕೋರುತ್ತೇನೆ. ಕರ್ನಾಟಕ ವಿಧಾನ ಮಂಡಲದ ಮತ್ತೊಂದು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ನನಗೆ ಅತೀವ ಹರ್ಷವಾಗುತ್ತಿದೆ. ನನ್ನ ಸರ್ಕಾರ ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಸರಕಾರದ ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೆಮ್ಮೆಯಿಂದ ತಿಳಿಸ ಬಯಸುತ್ತೇನೆ. ಮಹಾತ್ಮಾ ಗಾಂಧಿಯವರು ಹೇಳಿದಂತೆ…

Read More

ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಾಕಿ ಇರುವ 2 ತಿಂಗಳ ಹಣ ಹಾಕುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಹಣ ಹಾಕೋದು ಸ್ವಲ್ಪ ವಿಳಂಬವಾಗಿದೆ. ಈಗ ಎಲ್ಲಾ ಸರಿಯಾಗಿದೆ. ಬಾಕಿ ಇರುವ 2 ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುವುದು. ಯಾವುದೇ ಫಿಲ್ಟರ್ ಮಾಡಿಲ್ಲ. ಎಲ್ಲರಿಗೂ ಹಣ ಸಿಗುತ್ತೆ. ಯಾವುದೇ ಗೊಂದಲ ಬೇಡ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಶೀಘ್ರವೇ 2 ತಿಂಗಳ ಗೃಹ ಲಕ್ಷ್ಮಿ ಹಣ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದಾರೆ.

Read More

ಬೆಂಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ ಖಂಡಿಸಿ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ರಾಜಭವನಕ್ಕೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ರಾಜಭವನಕ್ಕೆ ಮುತ್ತಿಗೆಗೆ ಯತ್ನಿಸಿದ್ದು, ಈ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿಯೇ ಖಂಡಿಸಿದ್ದವು. ಈ ಬೆನ್ನಲ್ಲೇ ಇಂತಹ ಘಟನೆ ಖಂಡಿಸಿ ಮಾರ್ಚ್.22ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದಾವೆ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದೆ. ಅಲ್ಲದೇ ಕರ್ನಾಟಕದ ಬಸ್ ಗಳಿಗೆ ಮಸಿ ಕೂಡ ಬಳಿಯಲಾಗಿದೆ. ಈ ಎಲ್ಲವನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದಾವೆ. ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲಿನ ಹಲ್ಲೆ, ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡಿಗರ…

Read More

ಬೆಂಗಳೂರು: ಈ ವರ್ಷದ ಮೊದಲ ಎರಡು ತಿಂಗಳಲ್ಲಿ ಕರ್ನಾಟಕದಲ್ಲಿ ಸುಮಾರು 66,489 ನಾಯಿ ಕಡಿತ ಪ್ರಕರಣಗಳು ಮತ್ತು ಎಂಟು ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ. ಆರೋಗ್ಯ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿರುವ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದ ಬಳಿಯ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿ ಮೂರು ಸಾವುಗಳು ಸಂಭವಿಸಿವೆ, ಇದು ಶಂಕಿತ ರೇಬೀಸ್ ಪ್ರಕರಣಗಳಿಗೆ ಗೊತ್ತುಪಡಿಸಿದ ಪ್ರತ್ಯೇಕ ಕೇಂದ್ರವಾಗಿದೆ, ಬಲಿಯಾದವರಲ್ಲಿ ಹರಿಯಾಣ ಮೂಲದ 38 ವರ್ಷದ ವ್ಯಕ್ತಿ, ಚಿತ್ರದುರ್ಗದ 36 ವರ್ಷದ ವ್ಯಕ್ತಿ ಮತ್ತು ತುಮಕೂರಿನ 26 ವರ್ಷದ ವ್ಯಕ್ತಿ ಸೇರಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕನೇ ಸಾವು ಜನವರಿ 5 ರಂದು ಇಂದಿರಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ (ಐಜಿಐಸಿಎಚ್) ನಲ್ಲಿ ನಿಧನರಾದ ನಾಲ್ಕು ವರ್ಷದ ಬಾಲಕನ ಸಾವು. ಹೆಚ್ಚುವರಿಯಾಗಿ, ಬೆಳಗಾವಿಯಲ್ಲಿ ಎರಡು ಸಾವುಗಳು ಮತ್ತು ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ತಲಾ ಒಂದು ಸಾವುಗಳು ನಾಯಿ ಮಧ್ಯಸ್ಥಿಕೆಯಿಂದ ಸಂಭವಿಸಿದ ರೇಬೀಸ್‌ನಿಂದ ವರದಿಯಾಗಿವೆ. ಫೆಬ್ರವರಿ 23, 2025 ರ ಹೊತ್ತಿಗೆ,…

Read More

ಬೆಂಗಳೂರು : ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಆರಂಭಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯಪಾಲರಾದಂತಹ ಥಾವರ್ ಚಂದ್ ಗೆಹ್ಲೊಟ್ ಅವರು, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿದರು ಈ ವೇಳೆ ರಾಜ್ಯ ಸರ್ಕಾರ ಜಿಎಸ್‌ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು. ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ ಎಂದು ತಿಳಿಸಿದರು. ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ…

Read More