Author: kannadanewsnow57

ಬೆಂಗಳೂರು : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ತನಿಖೆ ಸಂಪೂರ್ಣವಾಗಿ ಮುಗಿದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ, ಪೊಲೀಸರು ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.ಹೀಗಾಗಿ ಅದರ ಬಗ್ಗೆ ಹೆಚ್ಚ ಮಾತನಾಡಲ್ಲ. ಬಿಜೆಪಿಯವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Read More

ಬೆಂಗಳೂರು: ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ. ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾದಿsಪತ್ಯ, ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ, ಭೂಕಂದಾಯ ಸಂಗ್ರಹಣೆ, ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ ಪ್ರಮುಖ ಜವಾಬ್ದಾರಿಗಳಾಗಿದ್ದವು. ಪ್ರಾಚೀನ ಭಾರತದಲ್ಲಿ ವಾಸ್ತವವಾಗಿ ಸರ್ಕಾರದಲ್ಲಿ ಎರಡು ಇಲಾಖೆಗಳು ಮಾತ್ರ ಅಸ್ತಿತ್ವದಲ್ಲಿರುತ್ತಿದ್ದವು. ಮೊದಲನೆಯದೆಂದರೆ ಭೂನಿರ್ವಹಣೆ ಮತ್ತು ಭೂಕಂದಾಯ ಇಲಾಖೆ ಮತ್ತು ಎರಡನೆಯದೆಂದರೆ ರಾಜ್ಯವನ್ನು ಬಾಹ್ಯ ದಾಳಿಯ ವಿರುದ್ಧ ಹೋರಾಡಲು ಅಗಾಧವಾದ ಭೂಸೇನೆಯ ರಕ್ಷಣಾ ಇಲಾಖೆ. ಮೊದಲನೇ ಇಲಾಖೆಯು ರಾಜಸ್ವ ಸಂಗ್ರಹಣೆ ಹಾಗೂ ಒಳಾಡಳಿತ ನಿರ್ವಹಣೆಯನ್ನು ಹಾಗೂ ಎರಡನೇ ಇಲಾಖೆಯು ಪ್ರಾಂತ್ಯಗಳ ರಕ್ಷಣೆ ಮತ್ತು ಸಮಗ್ರತೆಯನ್ನು ಬಾಹ್ಯದಾಳಿಗೀಡಾಗುವುದರಿಂದ ರಕ್ಷಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಸಮಾಜವು…

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ರಸ್ತೆಯಲ್ಲಿ ನಿಲ್ಲಿಸಿದ್ದ ಎರಡು ಕ್ರೇನ್ ವಾಹನಗಳು ಹೊತ್ತಿ ಉರಿದಿವೆ. ಬೆಂಗಳೂರಿನ ಕಂಟೋನ್ಮೆಂಟ್ ರಸ್ತೆಯಲ್ಲಿ ನಿಲ್ಲಿಸಿದ್ದ ಎರಡು ಕ್ರೇನ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಪ್ರಕಟಿಸಿದ್ದು, ಈ ಬಾರಿ 3 ಲಕ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವ ನೀರಿಕ್ಷೆಯಿದೆ. ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಅಂದರೆ ಈ ಹಿಂದೆ ಪರೀಕ್ಷೆಯನ್ನು ಏಪ್ರಿಲ್ 18 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಏಪ್ರಿಲ್ 18, ಶುಕ್ರವಾರ ಕ್ರಿಶನ್ ಧಾರ್ಮಿಕ ಹಬ್ಬವಾದ ಗುಡ್ ಫ್ರೈಡೇ ಇರುವುದರಿಂದ ಸರ್ಕಾರ ಪರೀಕ್ಷೆ ದಿನಾಂಕವನ್ನು ಬದಲಿಸಿದೆ. ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸುವ ಸಿಇಟಿ ಪರೀಕ್ಷೆಗೆ ಜನವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಈ ವರ್ಷ 3 ಲಕ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವ ನೀರಿಕ್ಷೆಯಿದೆ. ಏಪ್ರಿಲ್ 15ರಂದು ಕನ್ನಡ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 10ನೇ…

Read More

ವ್ಯಕ್ತಿತ್ವ ಪರೀಕ್ಷೆಯು ಅಂತಹ ಒಂದು ವಿಧಾನವಾಗಿದೆ. ಇದರ ಮೂಲಕ ನಾವು ಯಾವುದೇ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಸುಲಭವಾಗಿ ತಿಳಿದುಕೊಳ್ಳಬಹುದು. ಒಬ್ಬ ವ್ಯಕ್ತಿಯ ಸ್ವಭಾವ ಹೇಗಿರುತ್ತದೆ ಎಂದು ನಾವು ತಿಳಿದುಕೊಳ್ಳಲು ಬಯಸಿದರೆ. ವಸ್ತುಗಳ ಬಗ್ಗೆ ಅವನ ಮನೋಭಾವ ಏನು ಮತ್ತು ಅವನೊಳಗೆ ಯಾವ ರಹಸ್ಯಗಳು ಅಡಗಿವೆ, ಆಗ ಕೆಲವು ಸರಳ ವಿಧಾನಗಳನ್ನು ಬಳಸಬಹುದು. ಯಾವುದೇ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ನಮಗೆ ಯಾವುದೇ ಮಾಹಿತಿ ಬೇಕಾದರೆ ಅಥವಾ ಯಾರಾದರೂ ಅವರು ಹೇಗಿದ್ದಾರೆ ಎಂದು ನಮ್ಮನ್ನು ಕೇಳಿದರೆ, ನಾವು ಅವರ ಸ್ವಭಾವವನ್ನು ನೋಡುತ್ತೇವೆ. ಅವನ ಒಳ್ಳೆಯ ಮತ್ತು ಕೆಟ್ಟ ಸ್ವಭಾವದ ಆಧಾರದ ಮೇಲೆ ನಾವು ಅವನ ವ್ಯಕ್ತಿತ್ವವನ್ನು ನಿರ್ಧರಿಸುತ್ತೇವೆ. ಆದಾಗ್ಯೂ, ಒಬ್ಬ ವ್ಯಕ್ತಿಯ ಸ್ವಭಾವವನ್ನು ಸಂಪೂರ್ಣವಾಗಿ ತಿಳಿದುಕೊಳ್ಳುವುದು ಸ್ವಲ್ಪ ಕಷ್ಟಕರವಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ವ್ಯಕ್ತಿತ್ವದ ಬಗ್ಗೆ ತಿಳಿದುಕೊಳ್ಳಲು ಇತರ ಮಾರ್ಗಗಳಿವೆ. ಮೂಗಿನಿಂದ ವ್ಯಕ್ತಿತ್ವ ಪರೀಕ್ಷೆ ಸಾಮಾನ್ಯವಾಗಿ ನಾವು ಒಬ್ಬ ವ್ಯಕ್ತಿಯನ್ನು ಅವನ ಸ್ವಭಾವದ ಆಧಾರದ ಮೇಲೆ ಒಳ್ಳೆಯವನು ಅಥವಾ ಕೆಟ್ಟವನು ಎಂದು ಪರಿಗಣಿಸುತ್ತೇವೆ. ಇದಲ್ಲದೆ, ದೇಹದ…

Read More

ಕುಶಾಲನಗರ : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸ್ಥಳೀಯ ಪೊಲೀಸರ ಮೇಲೆ ನಂಬಿಕೆ ಇಲ್ಲ. ವಿನಯ್ ಸಾವಿಗೆ ನ್ಯಾಯ ಸಿಗಬೇಕು ಎಂದರೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ಹೇಳಿದ್ದಾರೆ. ಹೈಕೋರ್ಟ್ ನಿಂದ ತಡೆಯಾಜ್ಞೆ ಬಳಿಕವೂ ವಿನಯ್ ಗೆ ಕಿರುಕುಳ ನೀಡಲಾಗಿದೆ. ಇದರಿಂದ ಮನನೊಂದು ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಆತ್ಮಹತ್ಯೆಗೆ ಕಾರಣ ಯಾರು ಎಂದು ಉಲ್ಲೇಖಿಸಲಾಗಿದೆ. ಬೆಂಗಳೂರಿನಲ್ಲಿ ದಾಖಲಾದ ಕೇಸ್ ನಲ್ಲಿ ಶಾಸಕರ ಹೆಸರು ಸೇರಿಸಲಾಗಿಲ್ಲ. ಪೊಲೀಸರ ಮೇಲೆ ಎಷ್ಟು ಒತ್ತಡ ಇರಬಹುದೆಂದು ಇದರಿಂದ ಗೊತ್ತಾಗುತ್ತದೆ. ಪೊನ್ನಣ್ಣ ಸಿಎಂ ಕಾನೂನು ಸಲಹೆಗಾರ, ಮಂತರ್ ಪ್ರಭಾವಿ ಶಾಸಕ, ಇವರಿಬ್ಬರ ಕಿರುಕುಳದಿಂದ ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು, ಏಪ್ರಿಲ್ 15ರಿಂದ ರಾಜ್ಯಾದ್ಯಂತ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.21ರಿಂದ ಆರಂಭಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ಏ.4ಕ್ಕೆ ಮುಕ್ತಾಯಗೊಂಡಿವೆ. ಏ.11ರಿಂದ ಕೋಡಿಂಗ್ ಹಾಗೂ ಡಿಕೋಡಿಂಗ್ ಪ್ರಕ್ರಿಯೆ ನಡೆದ ನಂತರ ಏ.15ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಒಟ್ಟು 2818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. 6 ವಿಷಯಗಳಿಂದ ವಿದ್ಯಾರ್ಥಿಗಳ 55 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕೆ ಈ ಬಾರಿ 75 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲ ಶಿಕ್ಷಕರೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ. ಇನ್ನೂ ಮೌಲ್ಯಮಾಪನ ಮುಕ್ತಾಯವಾದ ನಂತರ 10ನೇ ತರಗತಿ ಫಲಿತಾಂಶ ಮಂಡಳಿಯಿಂದ ಅಧಿಕೃತವಾಗಿ ಪ್ರಕಟಣೆ ಆಗಲಿದೆ ಇದಕ್ಕೆ ದಿನಾಂಕವನ್ನು ಕೂಡ ಮಂಡಳಿಯು ಅಧಿಕೃತವಾಗಿ ಪ್ರಕಟಿಸುತ್ತದೆ ಸಾಮಾನ್ಯವಾಗಿ ಮೌಲ್ಯಮಾಪನ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್ ಗೌಡ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಪಟ್ಟು ಹಿಡಿದಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ವಿನಯ್ ಸೋಮಯ್ಯ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿನಯ್ ಸೋಮಯ್ಯ ಡೆತ್ ನೋಟ್ ಬರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದು, ಸದ್ಯ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಬಿಗಿ ಪಟ್ಟು ಹಿಡಿದಿದೆ. ಕೊಡಗಿನಲ್ಲಿ ಬಿಜೆಪಿ ಉಗ್ರ ಹೋರಾಟಕ್ಕೆ ಮುಂದಾಗಿದ್ದು, ಇಂದು ಬಿಜೆಪಿ ನಾಯಕರ ದಂಡೇ ಭೇಟಿ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಂಎಲ್ ಸಿ ರವೀಂದ್ರ, ಸಂಸದ ಯದುವೀರ್ ಸೇರಿದಂತೆ ಹಲವು ನಾಯಕರು ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಡೆತ್‍ನೋಟಿನಲ್ಲಿ ಇರುವ ಎಲ್ಲರ ಹೆಸರನ್ನೂ…

Read More

ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು, ಏಪ್ರಿಲ್ 15ರಿಂದ ರಾಜ್ಯಾದ್ಯಂತ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.21ರಿಂದ ಆರಂಭಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ಏ.4ಕ್ಕೆ ಮುಕ್ತಾಯಗೊಂಡಿವೆ. ಏ.11ರಿಂದ ಕೋಡಿಂಗ್ ಹಾಗೂ ಡಿಕೋಡಿಂಗ್ ಪ್ರಕ್ರಿಯೆ ನಡೆದ ನಂತರ ಏ.15ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಒಟ್ಟು 2818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. 6 ವಿಷಯಗಳಿಂದ ವಿದ್ಯಾರ್ಥಿಗಳ 55 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕೆ ಈ ಬಾರಿ 75 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲ ಶಿಕ್ಷಕರೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

Read More

ಇಂದಿನ ಸನ್ನಿವೇಶದಲ್ಲಿ ಉದ್ಯೋಗ ಪಡೆಯುವುದು ವ್ಯಕ್ತಿಯ ಸಮಸ್ಯೆ ಎಂದು ಪರಿಗಣಿಸಲಾಗುವುದಿಲ್ಲ. ಎಲ್ಲಿ ನೋಡಿದರೂ ಓದು ಮುಗಿಸಿ ನಿರುದ್ಯೋಗಿಗಳೇ ಹೆಚ್ಚು. ಅದೂ ಅಲ್ಲದೆ, ಯಾವುದೇ ಕೆಲಸ ಸಿಗದಿರುವುದು, ಕಡಿಮೆ ಸಂಬಳಕ್ಕೆ ಕೆಲಸ ಮಾಡುವುದು ಅಥವಾ ಕೌಶಲ್ಯಕ್ಕೆ ಅನುಗುಣವಾಗಿ ಬಡ್ತಿ ಸಿಗದಿರುವ ಸಮಸ್ಯೆಗಳಿಗೆ ನಾಲ್ಕು ಆಧ್ಯಾತ್ಮಿಕ ಪರಿಹಾರಗಳನ್ನು ಈ ಪೋಸ್ಟ್‌ನಲ್ಲಿ ನೀಡಲಾಗಿದೆ. ಬನ್ನಿ ಆ ಪರಿಹಾರಗಳ ಬಗ್ಗೆ ತಿಳಿಯೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಬಡ್ತಿ ಪಡೆಯಲು ಪರಿಹಾರ ವೇತನ ಹೆಚ್ಚಳ: ಆಂಜನೇಯನೇ ಹೆಚ್ಚಿನವರಿಗೆ ಸಹಾಯ ಮಾಡುವ ದೇವರು, ಮೊದಲು ಉದ್ಯೋಗಾಕಾಂಕ್ಷಿಗಳಾಗಲಿ, ಬಡ್ತಿ ಸಿಗಲಿ. ಈತನನ್ನು ಪೂಜಿಸಿ ಹನುಮಾನ್ ಚಾಲೀಸವನ್ನು ಪ್ರತಿನಿತ್ಯ ಪಠಿಸಿದರೆ ನಮ್ಮ ಎಲ್ಲಾ ಕೆಲಸ ಸಮಸ್ಯೆಗಳು ಬೇಗ ಪರಿಹಾರವಾಗುತ್ತವೆ ಎಂದು ಹೇಳಲಾಗುತ್ತದೆ. ಮಂಗಳವಾರದಂದು ಹನುಮಾನ್ ಚಾಲೀಸಾವನ್ನು ಪಠಿಸಲು ಸಾಧ್ಯವಾಗದವರು ಮಂಗಳವಾರದಂದು ಮಾತ್ರ ಅದನ್ನು ಓದಬೇಕು ಎಂದು ಹೇಳಲಾಗುತ್ತದೆ. ಮಂಗಳವಾರದಂದು ದೇವಸ್ಥಾನಕ್ಕೆ ಹೋಗಿ ಊಟವಿಲ್ಲದೆ ದೇವಸ್ಥಾನದ ಬಳಿ ಕುಳಿತುಕೊಳ್ಳುವವರಿಗೆ ಹಳದಿ ಸಿಪ್ಪೆ…

Read More