Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಸರಳ ರಕ್ತ ಪರೀಕ್ಷೆಯು ನಿಮ್ಮನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಆದರೆ ಪೂರ್ಣ ರಕ್ತ ಪರೀಕ್ಷೆ ಎಂದರೆ ಸಿಬಿಸಿಯಲ್ಲಿ ಎಲ್ಲವೂ ತಿಳಿದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿಯೊಬ್ಬ ಮನುಷ್ಯನು 25-30 ವರ್ಷದ ನಂತರ ಪ್ರತಿ ವರ್ಷ ಕೆಲವು ವಿಶೇಷ ರಕ್ತ ಪರೀಕ್ಷೆಗಳಿಗೆ ಒಳಗಾಗಬೇಕು. ಇದನ್ನು ಮಾಡುವುದರಿಂದ, ಅನೇಕ ರೋಗಗಳನ್ನು ತಪ್ಪಿಸಬಹುದು. ಉದಾಹರಣೆಗೆ, ನೀವು ಪ್ರತಿ ವರ್ಷ ಲಿಪಿಡ್ ಪ್ರೊಫೈಲ್ ಪರೀಕ್ಷೆಯನ್ನು ಮಾಡಿಸಿಕೊಂಡರೆ, ಹೃದಯಾಘಾತದ ಅಪಾಯವು ಗಮನಾರ್ಹವಾಗಿ ಕಡಿಮೆಯಾಗುತ್ತದೆ. ಅಂತೆಯೇ, ಮೂತ್ರಪಿಂಡಗಳು ಮತ್ತು ಯಕೃತ್ತಿನಂತಹ ಪ್ರಮುಖ ಅಂಗಗಳ ಕಾರ್ಯನಿರ್ವಹಣೆಯ ಬಗ್ಗೆ ನಮಗೆ ತಿಳಿಸುವ ಇತರ ಪರೀಕ್ಷೆಗಳಿವೆ. ಆದ್ದರಿಂದ, ನೀವು 25 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ, ಪ್ರತಿ ವರ್ಷ ಈ 5 ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ. ಈ 5 ಪರೀಕ್ಷೆಗಳಿಗೆ ಒಳಗಾಗುವುದು ಕಡ್ಡಾಯವಾಗಿದೆ 1. ವಿಟಮಿನ್ ಡಿ ಮತ್ತು ವಿಟಮಿನ್ ಬಿ 12 : ವಿಟಮಿನ್ ಬಿ 12 ನಮ್ಮ ನರಗಳ ಕಾರ್ಯಕ್ಕೆ ಬಹಳ ಮುಖ್ಯ. ಇದಲ್ಲದೆ, ಇದು ಜೀವಕೋಶಗಳಲ್ಲಿ ಡಿಎನ್ಎ ಮತ್ತು ಕೆಂಪು ರಕ್ತ…
ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುನ್ನ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸುವುದು. ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ ವಿಗ್ರಹ ಬಳಸುವುದು. ಈ ಬಗ್ಗೆ ನಗರಸಭೆಯಿಂದ ಅನುಮತಿ ಪಡೆಯುವ ಮುನ್ನ ರೂ.100 ಗಳ ಛಾಪಾ ಕಾಗದದ ಮೇಲೆ ಮುಚ್ಚಳಿಕೆಯನ್ನು ಸಲ್ಲಿಸುವುದು ಸರ್ಕಾರದ ಆದೇಶದ ಪ್ರಕಾರ ಕಡ್ಡಾಯವಾಗಿದೆ. ಇಲ್ಲವಾದಲ್ಲಿ ನಿಯಂತ್ರಣ ಮಂಡಳಿಯ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಆ)ರ ಪ್ರಕಾರ ರೂ.10 ಸಾವಿರ ವರೆಗೂ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲುವಾಸ ವಿಧಿಸುವುದಾಗಿದೆ ಸಾರ್ವಜನಿಕರಿಗೆ ಹಾಗೂ…
ಮುಂಬೈ : ಭಾರತ ಕ್ರಿಕೆಟ್ ತಂಡದ ಸ್ಟಾರ್ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಕ್ರಿಕೆಟಿಗ ಶಿಖರ್ ಧವನ್ ಅಂತರರಾಷ್ಟ್ರೀಯ ಕ್ರಿಕೆಟ್ನ ಎಲ್ಲಾ ಮೂರು ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ಅವರ ಇನ್ ಸ್ಟಾಗ್ರಾಮ ಮತ್ತು ಎಕ್ಸ್ ಹ್ಯಾಂಡಲ್ಗಳಲ್ಲಿ ಇತ್ತೀಚೆಗೆ ಹಂಚಿಕೊಂಡ ವೀಡಿಯೊದಲ್ಲಿ ತಿಳಿಸಲಾಗಿದೆ. ಧವನ್ ಅವರು ಅಸಂಖ್ಯಾತ ನೆನಪುಗಳನ್ನು ತಮ್ಮೊಂದಿಗೆ ಕೊಂಡೊಯ್ಯುವುದಾಗಿ ಹೇಳಿದರು ಮತ್ತು ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಅರ್ಪಿಸಿದರು. https://twitter.com/i/status/1827164438673096764 “ನನ್ನ ಕ್ರಿಕೆಟ್ ಪ್ರಯಾಣದ ಈ ಅಧ್ಯಾಯವನ್ನು ನಾನು ಮುಗಿಸುತ್ತಿರುವಾಗ, ನಾನು ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು! ಜೈ ಹಿಂದ್!”
ಮುಂಬೈ : ಭಾರತ ಕ್ರಿಕೆಟ್ ತಂಡದ ಸ್ಟಾರ್ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಕ್ರಿಕೆಟಿಗ ಶಿಖರ್ ಧವನ್ ಅಂತರರಾಷ್ಟ್ರೀಯ ಕ್ರಿಕೆಟ್ನ ಎಲ್ಲಾ ಮೂರು ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ಅವರ ಇನ್ ಸ್ಟಾಗ್ರಾಮ ಮತ್ತು ಎಕ್ಸ್ ಹ್ಯಾಂಡಲ್ಗಳಲ್ಲಿ ಇತ್ತೀಚೆಗೆ ಹಂಚಿಕೊಂಡ ವೀಡಿಯೊದಲ್ಲಿ ತಿಳಿಸಲಾಗಿದೆ. ಧವನ್ ಅವರು ಅಸಂಖ್ಯಾತ ನೆನಪುಗಳನ್ನು ತಮ್ಮೊಂದಿಗೆ ಕೊಂಡೊಯ್ಯುವುದಾಗಿ ಹೇಳಿದರು ಮತ್ತು ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಅರ್ಪಿಸಿದರು. https://twitter.com/i/status/1827164438673096764 “ನನ್ನ ಕ್ರಿಕೆಟ್ ಪ್ರಯಾಣದ ಈ ಅಧ್ಯಾಯವನ್ನು ನಾನು ಮುಗಿಸುತ್ತಿರುವಾಗ, ನಾನು ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು! ಜೈ ಹಿಂದ್!”
ಕೆಎನ್ಎನ್ಡಿಜಿಟಲ್ ಡೆಸ್ಕ್ : ಪದವಿ ಉತ್ತೀರ್ಣರಾಗಿ ಬ್ಯಾಂಕ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ವಿವಿಧ ಬ್ಯಾಂಕ್’ಗಳ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು ಇದೀಗ 21-08-2028 ರಿಂದ 28-08-2028 ರ ವರೆಗೆ ವಿಸ್ತರಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ IBPS ಒಟ್ಟು 4455 ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನ ಭರ್ತಿ ಮಾಡುತ್ತದೆ. ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಯುಕೋ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈ ಎಲ್ಲಾ ಹುದ್ದೆಗಳನ್ನ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಅರ್ಹತೆಯ ಮಾನದಂಡಗಳು ಯಾವುವು.? PO ಪೋಸ್ಟ್’ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, 2014ರಲ್ಲಿ ಸಿದ್ದರಾಮಯ್ಯ ಪತ್ನಿ ಮುಡಾಗೆ ಮನವಿ ಸಲ್ಲಿಸಿ, ನನ್ನ ಜಮೀನಿನಲ್ಲಿ ಮುಡಾ ನಿವೇಶನ ಮಾಡಿ ಹಂಚಿದೆ. ಇದಕ್ಕೆ ಪರಿಹಾರ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪತ್ನಿ ಬರೆದ ಪತ್ರ ಬಹಿರಂಗವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ನಾನು ಮುಡಾಕ್ಕೆ ಸೈಟು ಕೊಡಿ ಅಂತ ಪತ್ರಾನೇ ಬರ್ದಿಲ್ಲ, ನನ್ನ ಶ್ರೀಮತಿ ಕೂಡಾ ಬರ್ದಿಲ್ಲ, ನನ್ನ ಆಫೀಸಿಂದ ಕೂಡಾ ಪತ್ರ ಬರ್ದಿಲ್ಲ” ಎಂದಿದ್ದ ಸಿಎಂ ಸಿದ್ದರಾಮಯ್ಯನವರೆ, ನಿಮ್ಮ ಹೆಸರನ್ನು “ಸುಳ್ಳುರಾಮಯ್ಯ” ಎಂದು ಬದಲಾಯಿಸಿಕೊಳ್ಳಿ ಎಂದು ಹೇಳಿದೆ. 40:60 ಅನುಪಾತದಡಿ ನಿವೇಶನ ನೀಡಲು ಮುಡಾ ಒಪ್ಪಿದ್ದರೂ, ಬೇಡ ನಮಗೆ 50:50 ಅನುಪಾತದಲ್ಲಿ ಸೈಟು ನೀಡಲೇಬೇಕು ಎಂದು ಒತ್ತಾಯಿಸಿದ್ದು ನಿಮ್ಮ ಶ್ರೀಮತಿ ಪಾರ್ವತಿಯವರೇ ಎಂದು ದಾಖಲೆಗಳು ಸಾರಿ ಹೇಳುತ್ತಿವೆ ಎಂದು ತಿಳಿಸಿದೆ. ನೀವು ಕಟ್ಟಿರುವ ಕಪ್ಪು ಚುಕ್ಕೆಗಳ ಸುಳ್ಳಿನ ಮಹಲು ಸಂಪೂರ್ಣ ಕುಸಿಯುವ ಮುನ್ನ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ…
ನವದೆಹಲಿ : ಆಯುಷ್ ಪ್ರವೇಶ ಕೇಂದ್ರ ಕೌನ್ಸೆಲಿಂಗ್ ಸಮಿತಿ (ಎಎಸಿಸಿಸಿ) ಆಯುಷ್ ನೀಟ್ ಯುಜಿ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೌನ್ಸೆಲಿಂಗ್ಗೆ ಸೇರಲು ಸಿದ್ಧರಿರುವ ಅಭ್ಯರ್ಥಿಗಳು aaccc.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ಕೌನ್ಸೆಲಿಂಗ್ ಸುತ್ತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಲ್ಲಿ ನೀಡಲಾದ ಹಂತಗಳನ್ನು ಅನುಸರಿಸಬಹುದು. ಆಯುಷ್ ನೀಟ್ ಯುಜಿ ರೌಂಡ್ 1 ಕೌನ್ಸೆಲಿಂಗ್ಗಾಗಿ ನೋಂದಣಿ ಮತ್ತು ಪಾವತಿ ವಿಂಡೋ ಆಗಸ್ಟ್ 28 ರಂದು ತೆರೆಯುತ್ತದೆ. ಈ ವಿಂಡೋ ಸೆಪ್ಟೆಂಬರ್ 2 ರಂದು ಮಧ್ಯಾಹ್ನ 2 ಗಂಟೆಗೆ ಮುಚ್ಚುತ್ತದೆ. ಆಯುಷ್ ನೀಟ್ ಯುಜಿ ಕೌನ್ಸೆಲಿಂಗ್ನ ಮೊದಲ ಸುತ್ತಿನ ಆಯ್ಕೆ ಭರ್ತಿ / ಲಾಕಿಂಗ್ ಸೌಲಭ್ಯವು ಆಗಸ್ಟ್ 29 ರಿಂದ ಸೆಪ್ಟೆಂಬರ್ 2, 2024 ರವರೆಗೆ ರಾತ್ರಿ 11:55 ರವರೆಗೆ ಲಭ್ಯವಿರುತ್ತದೆ. ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಸೆಪ್ಟೆಂಬರ್ 5, 2024 ರಂದು ಪ್ರಕಟಿಸಲಾಗುವುದು. ಅರ್ಜಿದಾರರು ತಮ್ಮ ಆಯ್ಕೆಗಳನ್ನು ಸಮಯಕ್ಕೆ ಸರಿಯಾಗಿ ಭರ್ತಿ ಮಾಡಲು ಮತ್ತು ಲಾಕ್…
ಬೆಂಗಳೂರು : ಕೃಷಿ ನೀರಾವರಿ ಪಂಪ್ಸೆಟ್ ಬಳಕೆದಾರರು ತಮ್ಮ ನೀರಾವರಿ ಪಂಪ್ಸೆಟ್ನ ವಿದ್ಯುತ್ ಆರ್.ಆರ್.ಸಂಖ್ಯೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ 2024-25ನೇ ಸಾಲಿನಲ್ಲಿ ದರ ಪರಿಷ್ಕರಣೆ ಮಾಡುವ ಆದೇಶದಲ್ಲಿ ಕೃಷಿ ಪಂಪ್ ಸೆಟ್ಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಮಾಡಿದೆ. ಆದ್ದರಿಂದ ಹೆಸ್ಕಾಂಗಳು 10 ಹೆಚ್ಪಿ ಪಂಪ್ ಸೆಟ್ ಹೊಂದಿರುವ ರೈತರ ಆಧಾರ್ ಸಂಖ್ಯೆ ಸಂಗ್ರಹ ಮಾಡುತ್ತಿದೆ. ಹಾಲಿ ಇರುವ ಕೃಷಿ ಪಂಪ್ಸೆಟ್ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, ಛಾಪಾಕಾಗದ ಹಾಗೂ ಪಹಣಿಯಲ್ಲಿ ಜಂಟಿ ಖಾತೆಯಾಗಿದ್ದರೆ ಉಳಿದವರ ಒಪ್ಪಿಗೆ ಪತ್ರ, ಕ್ರಯಪತ್ರದ ದಾಖಲೆಯನ್ನು ಸಮೀಪದ ಬೆಸ್ಕಾಂ ಶಾಖಾ ಕಚೇರಿ ಅಥವಾ ಸಂಬಂಧಿಸಿದ ಪವರ್ ಮ್ಯಾನ್ ಅಥವಾ ಮೀಟರ್ ರೀಡರ್ಗಳಿಗೆ ಸಲ್ಲಿಸಿ ಹಾಲಿ ಆರ್.ಆರ್.ಸಂಖ್ಯೆಯಲ್ಲಿರುವ ಹೆಸರನ್ನು ಬದಲಾವಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 27 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಟಿಪ್ಪರ್ ಚಾಲಕ ಎಡವಟ್ಟು ಮಾಡಿಕೊಂಡಿದ್ದು, ಟಿಪ್ಪರ್ ಲಾರಿಗೆ ವಿದ್ಯುತ್ ತಂತಿ ಸಿಲುಕಿದ ಪರಿಣಾಮ 20 ಕ್ಕೂ ಹೆಚ್ಚು ಲೈಟ್ ಕಂಬಗಳು ರಸ್ತೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಚಿಕ್ಕಬಾಣವಾರ-ಹೆಸರಘಟ್ಟ ಮುಖ್ಯ ರಸ್ತೆಯಲ್ಲಿ ಈ ಘಟನ ನಡೆದಿದೆ. ಟಿಪ್ಪರ್ ಲಾರಿಯಲ್ಲಿ ಹೈಡ್ರಾಲಿಕ್ ಸಾಗಿಸುತ್ತಿದ್ದ ವೇಳೆ ಟಾಪ್ ಗೆ ವಿದ್ಯುತ್ ತಂತಿ ಸಿಲುಕಿದ್ರೂ ನಿರ್ಲಕ್ಷ್ಯ ತೋರಿದ ಚಾಲಕ ಹಾಗೇ ಲಾರಿ ಚಲಾಯಿಸಿಕೊಂಡು ಹೋಗಿದ್ದಾನೆ. ಈ ವೇಳೆ 20 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿಬಿದ್ದಿವೆ. ರಸ್ತೆಯಲ್ಲಿ ಯಾರು ಇಲ್ಲದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಸದ್ಯ ಲೈಟ್ ಕಂಬಗಳನ್ನು ತೆರವು ಮಾಡಲಾಗಿದ್ದು, ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.