Author: kannadanewsnow57

ಬಳ್ಳಾರಿ : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ತೆರಿಗೆ ಪಾವತಿಸಿ ಬಿ-ಖಾತಾ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಸರ್ಕಾರಿ ಹಾಗೂ ಸರ್ಕಾರದ ಅಧೀನ ಇಲಾಖೆ, ನಿಗಮ, ಮಂಡಳಿಗಳ ಜಾಗಗಳನ್ನು ಹೊರತುಪಡಿಸಿ, ಅನಧಿಕೃತ ಬಡಾವಣೆ, ಭೂ ಪರಿವರ್ತನೆ ಹೊಂದದೆ ಸ್ವಂತವಾಗಿ ತಮ್ಮದೇ ಮಾಲೀಕತ್ವ ಹೊಂದಿದ ನಿವೇಶನ/ಜಾಗಗಳಲ್ಲಿ ನಿರ್ಮಿಸಿಕೊಂಡಿರುವ ಅನಧಿಕೃತ ನಿವೇಶನ/ಕಟ್ಟಡಗಳನ್ನು 2024 ಸೆ.10 ರ ಒಳಗಾಗಿ ನೋಂದಾವಣೆ ಮೂಲಕ ಖರೀದಿ ಮಾಡಿದಂತಹ ಆಸ್ತಿಗಳನ್ನು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಬಿ-ಖಾತೆ ಪಡೆಯಬಹುದಾಗಿದೆ. ಒಂದು ಬಾರಿ ಮಾತ್ರ ಮೇ 10 ರೊಳಗಾಗಿ ಅರ್ಜಿ ಸಲ್ಲಿಸಿ 2024-25ನೇ ಸಾಲಿನ ಆಸ್ತಿ ತೆರಿಗೆಯ 02 ಪಟ್ಟು ದಂಡ ಪಾವತಿಸಿ, ಮಹಾನಗರ ಪಾಲಿಕೆಯಲ್ಲಿ ನಮೂನೆ-2ಎ ಮತ್ತು ಇತರೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3ಎ ಪಡೆಯಲು ಅವಕಾಶ ನೀಡಲಾಗಿದೆ. ‘ಬಿ’ ರಿಜಿಸ್ಟರ್ ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ನೀಡಲು ಪಡೆಯಬೇಕಾದ ದಾಖಲೆ: ಆಸ್ತಿಗೆ ಸಂಬAಧಿಸಿದAತೆ ಸ್ವತ್ತಿನ…

Read More

ಕೊಪ್ಪಳ : ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲೇ ಉಳಿದ ಕಂತಿನ ಸಹಾಯ ಧನ ಪಾವತಿಯಾಗಲಿದೆ ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು. ಅವರು ಬುಧವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನ ಸಾಮಾನ್ಯರ ಏಳಿಗೆಗಾಗಿ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಜೊತೆಗೆ ಕೊಪ್ಪಳ ಜಿಲ್ಲೆಯು ರಾಜ್ಯದಲ್ಲಿ ಉತ್ತಮ ಸ್ಥಾನ ಪಡೆದಿದೆ. ಕುಟುಂಬದ ಯಜಮಾನಿಗೆ ಮಾಸಿಕ ರೂ. 2000 ಸಾವಿರಗಳ ಧನ ಸಹಾಯ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಬಾಕಿ ಇರುವ ಸಹಾಯ ಧನ ಮೊತ್ತವು ಸರ್ಕಾರದಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಶೀಘ್ರವೇ ಜಮೆಯಾಗಲಿದ್ದು, ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರ…

Read More

2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಮಾರ್ಚ್ 10 ರವರೆಗೆ ವಿಸ್ತರಿಸಲಾಗಿದೆ. ಮೆಟ್ರಿಕ್ ನಂತರದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಮತ್ತು ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಶುಲ್ಕ ಮರುಪಾವತಿಯ ಸದುಪಯೋಗ ಪಡಿಸಿಕೊಳ್ಳಬೇಕು. ಅರ್ಹ ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‌ಸೈಟ್ https://ssp.postmatric.karnataka.gov.in ನ್ನು ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in ಗೆ ಭೇಟಿ ನೀಡಬೇಕು. ಇಲಾಖಾ ಸಹಾಯವಾಣಿ, ದೂರವಾಣಿ ಸಂಖ್ಯೆ 8050770005, ಇ-ಮೇಲ್ bcwdhelpline@gmail.com ನ್ನು ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ನ್ನು ಹಾಗೂ ದೂರವಾಣಿ ಸಂಖ್ಯೆ: 1902 ಗೆ ಸಂಪರ್ಕಿಸುವಂತೆ ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ…

Read More

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಬೆಲೆ ಏರಿಕೆಯ ಅಂತಿಮ ನಿರ್ಧಾರ ಸಿಎಂ ಅಂಗಳದಲ್ಲಿದೆ.ಪ್ರತಿ ಲೀಟರ್ ಹಾಲಿಗೆ 5 ರೂ ಏರಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ದರ ಹೆಚ್ಚಳ, ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ಬರೆ ಕಾಯುತ್ತಿರುವ ಸಂದರ್ಭದಲ್ಲೇ ಹಾಲಿನ ದರ ಏರಿಕೆ ವಿಚಾರ ಗಮನಸೆಳೆದಿದೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಹಾಲಿನ ದರ ಲೀಟರ್‌ಗೆ 5 ರೂಪಾಯಿ ಏರಿಸುವುದಕ್ಕೆ ಸಿದ್ಧತೆ ನಡೆಸಿದೆ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ. ಜೂನ್ 2024ರಲ್ಲಿ ಪ್ರತಿ ಪ್ಯಾಕೇಟ್‌ಗೆ 50 ಮಿಲಿ ಲೀ. ಹಾಲು ಹೆಚ್ಚುವರಿಯಾಗಿ ಕೊಟ್ಟು ಮತ್ತೆ 2 ರು.ಏರಿಕೆ ಮಾಡಲಾಗಿತ್ತು. ಇದೀಗ ರಾಜ್ಯದ 16 ಹಾಲು ಒಕ್ಕೂಟಗಳಿಂದ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರು.ನಂತೆ ಏರಿಕೆ ಮಾಡಲು ಒತ್ತಡ ಹೆಚ್ಚುತ್ತಿದೆ. ಹೀಗಾಗಿ…

Read More

ನವದೆಹಲಿ: ದೆಹಲಿ ಬಿಜೆಪಿ ಶಾಸಕರು ರೇಖಾ ಗುಪ್ತಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿ ಮತ್ತು ಕೇಂದ್ರಾಡಳಿತ ಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿ ಬಿಜೆಪಿ ಶಾಸಕರಾದ ವಿಜೇಂದರ್ ಗುಪ್ತಾ ಮತ್ತು ಸತೀಶ್ ಉಪಾಧ್ಯಾಯ ಅವರು ಗುಪ್ತಾ ಅವರ ಹೆಸರನ್ನು ಪ್ರಸ್ತಾಪಿಸಿದರು. ರೇಖಾ ಗುಪ್ತಾ ಮಾಜಿ ಕೌನ್ಸಿಲರ್ ಮತ್ತು ಉಪ ಮೇಯರ್ ಆಗಿದ್ದು, ಶಾಲಿಮಾರ್ ಬಾಗ್ ವಿಧಾನಸಭಾ ಸ್ಥಾನದಿಂದ ಎಎಪಿಯ ಬಂದನಾ ಕುಮಾರಿ ಅವರನ್ನು ಸೋಲಿಸಿ ವಿಜಯಶಾಲಿಯಾಗಿ ಹೊರಹೊಮ್ಮಿದರು. ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಮತ್ತು ಅತಿಶಿ ನಂತರ ರೇಖಾ ಗುಪ್ತಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಮತ್ತು ಆರು ಕ್ಯಾಬಿನೆಟ್ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮುಖ್ಯಮಂತ್ರಿ ಮತ್ತು ಹೊಸ ಕ್ಯಾಬಿನೆಟ್ ಸಚಿವರಿಗೆ ಪ್ರಮಾಣ ವಚನ…

Read More

ಬೆಂಗಳೂರು: ಕರ್ನಾಟಕ ಸರ್ಕಾರಿ ಜೀವ ವಿಮೆ ವೇತನ ಬಿಲ್ಲುಗಳಲ್ಲಿ ಕಡ್ಡಾಯ ಜೀವ ವಿಮೆ ಕಂತುಗಳನ್ನು ಕಡಿತಗೊಳಿಸುವ ಕುರಿತು. ಆದೇಶವನ್ನು ಹೊರಡಿಸಿದೆ. ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958ಕ್ಕೆ ತಿದ್ದುಪಡಿ ಮಾಡಿ, ಆರ್ಥಿಕ ಇಲಾಖೆ ಹೊರಡಿಸಿರುವ ದಿನಾಂಕ: 23.10.2024ರ ಅಧಿಸೂಚನೆ ಸಂಖ್ಯೆ: ಅಇ/65/ಕವಿಇ/2024ರನ್ವಯ, 50 ವರ್ಷ ಮೀರದ ಎಲ್ಲಾ ಹಂತದ ಅಧಿಕಾರಿ/ನೌಕರರು ಅವರ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಗೆ ಪಾವತಿಸಬೇಕಾದ ಮಾಸಿಕ ಕನಿಷ್ಟ ವಿಮಾ ಕಂತು ಕಡಿಮೆ ಇದ್ದಲ್ಲ. ಕಡ್ಡಾಯವಾಗಿ ವಿಮೆ ಪಡೆಯುವಂತೆ ದಿನಾಂಕ:02.12.2024ರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಆದರೆ ಇದುವರೆವಿಗೂ, ಕೆಲವು ಅಧಿಕಾರಿ ಹಾಗೂ ನೌಕರರು ತಮ್ಮ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಗೆ ಪಾವತಿಸಬೇಕಾದ ಕಡ್ಡಾಯ ಮಾಸಿಕ ಕನಿಷ್ಟ ವಿಮಾ ಕಂತು ಕಡಿಮೆ ಇದ್ದರೂ. ವಿಮೆ ಪಡೆಯದಿರುವುದು ಕಂಡು ಬಂದಿರುತ್ತದೆ. ಆದುದರಿಂದ, ಈ ಕೆಳಕಂಡ ಕೋಷ್ಟಕದಲ್ಲಿ ತಿಳಿಸಿರುವ ಕನಿಷ್ಟ ವಿಮಾ ಕಂತಿಗಿಂತ ಕಡಿಮೆ ಇದ್ದಲ್ಲಿ. ಕೂಡಲೇ 28ನೇ ಫೆಬ್ರವರಿ, 2025ರೊಳಗಾಗಿ ವಿಮೆ ಪಡೆಯುವಂತೆ ಮತ್ತೊಮ್ಮೆ ತಿಳಿಸಲಾಗುತ್ತಿದೆ. ನಿಗದಿತ ದಿನಾಂಕದೊಳಗೆ…

Read More

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ನಾಳೆ ಮಧ್ಯಾಹ್ನ 12 :30 ಕ್ಕೆ ನಡೆಯಲಿದ್ದು,  ಸಮಾರಂಭಕ್ಕೆ ಇಲ್ಲಿನ ಐತಿಹಾಸಿಕ ರಾಮ್ ಲೀಲಾ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿದ್ದು, ವಿಧಾನಸಭಾ ಚುನಾವಣೆಯ ನಂತರ ಹೊಸ ಮುಖ್ಯಮಂತ್ರಿಗಾಗಿ ದೆಹಲಿಯ ಕಾಯುವಿಕೆ ಬುಧವಾರ ಕೊನೆಗೊಳ್ಳಲಿದ್ದು, ಬಿಜೆಪಿ ಶಾಸಕಾಂಗ ಪಕ್ಷವು ಸದನದ ನಾಯಕನನ್ನು ಆಯ್ಕೆ ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಇತರ ಗಣ್ಯರು ಭಾಗವಹಿಸುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿ ಮತ್ತು ಇಡೀ ಕ್ಯಾಬಿನೆಟ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರಿ ಜನಸಂದಣಿಯನ್ನು ನಿರೀಕ್ಷಿಸಲಾಗಿದೆ ಮತ್ತು ಸುಮಾರು 40 ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ, ಸಮಾರಂಭವು ಸಂಜೆ 4.30 ರ ಬದಲು ಮಧ್ಯಾಹ್ನದ ವೇಳೆಗೆ ನಡೆಯಲಿದೆ ಎಂದು ಪಕ್ಷದ ಮುಖಂಡರು ಈ ಹಿಂದೆ ತಿಳಿಸಿದ್ದರು. ರಾಮಲೀಲಾ ಮೈದಾನದಲ್ಲಿ ಸಮಾರಂಭದ ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಬಿಜೆಪಿ ಸಂಸದ ಯೋಗೇಂದರ್ ಚಂದೋಲಿಯಾ ಹೇಳಿದ್ದಾರೆ. “ಪಕ್ಷದ ಕಾರ್ಯಕರ್ತರು,…

Read More

ಬೆಂಗಳೂರು : ಫೆಬ್ರವರಿಯಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಫೆಬ್ರವರಿಯಿಂದ ಅನ್ನಭಾಗ್ಯ ಯೋಜನೆಯಡಿ ಹಣದ ಬದಲು 10 ಕೆಜಿ ಅಕ್ಕಿ ವಿತರಣೆ ಮಾಡಲಾಗವುದು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮಹತ್ವದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲು ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ್ದು, ನಂತರದ ದಿನಗಳಲ್ಲಿ ಅಕ್ಕಿಯ ಲಭ್ಯವಾಗದ ಕಾರಣ ನಮ್ಮ ಸರ್ಕಾರ ಸಾರ್ವಜನಿಕರಿಗೆ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನೇತೃತ್ವದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿಯ ಜೊತೆಗೆ ಉಳಿದ 5 ಕೆ.ಜಿ ಅಕ್ಕಿಗೆ ರೂ. 170 ರಂತೆ ನೇರ ನಗದು ವರ್ಗಾವಣೆ ಮಾಡುತ್ತಿದೆ. ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 5 ಕೆ.ಜಿ…

Read More

ಬೆಂಗಳೂರು : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ನಿರ್ಧರಿಸಲಾಗಿದೆ. ಫೆಬ್ರವರಿ ತಿಂಗಳಿನಿಂದಲೇ 10 ಕೆಜಿ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ನಿಗದಿತ ಸಮಯಕ್ಕೆ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಪಡಿತರದ ಅಕ್ಕಿ ಹಣ ಜಮಾ ಮಾಡುತ್ತಿಲ್ಲ. ಕೆಲವು ತಿಂಗಳು ತಾಂತ್ರಿಕತೆಯ ಸಮಸ್ಯೆ ನೆಪವೊಡ್ಡಿ ವಿಳಂಬ ಆಗಿದೆ. ಇದೀಗ ಹಣದ ಬದಲಿಗೆ ಅಕ್ಕಿ ಕೊಡಲು ಚಿಂತನೆ ನಡೆದಿದೆ. ಆದರೆ ಅಕ್ಕಿ, ಹಣ ಎರಡು ಕೂಡ ಫಲಾನುಭವಿಗಳಿಗೆ ಸಿಗದೇ ತೊಂದರೆಯಾಗಿದೆ. ಇದನ್ನು ಮನಗಂಡು ಹೆಚ್ಚುವರಿ ಐದು ಕೆಜಿ ಅಕ್ಕಿಯನ್ನೇ ನೀಡಲು ಸರ್ಕಾರ ಚಿಂತನೆ ನಡೆಸಿದೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಹಣದ ಬದಲು ಅಕ್ಕಿ ವಿತರಿಸುವ ಸಾಧ್ಯತೆ ಇದೆ. ಅಕ್ಕಿ ಪಡೆಯಲು ಆಹಾರ ಇಲಾಖೆ ಪ್ರಯತ್ನಿಸಿದ್ದು,…

Read More

ಕರಾಚಿ : ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನದ ಕರಾಚಿ ಕ್ರೀಡಾಂಗಣದಲ್ಲಿ ಭಾರತದ ಧ್ವಜವನ್ನು ಹಾರಿಸದಿರುವ ಬಗ್ಗೆ ಕಳೆದ ಹಲವು ದಿನಗಳಿಂದ ವಿವಾದ ನಡೆಯುತ್ತಿತ್ತು. ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ವೈರಲ್ ಆಗಿತ್ತು, ಈ ವಿಡಿಯೋ ಕರಾಚಿ ಕ್ರೀಡಾಂಗಣದ್ದಾಗಿದ್ದು, ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳ ಧ್ವಜಗಳು ಬೀಸಲ್ಪಟ್ಟವು ಆದರೆ ಇಲ್ಲಿ ಭಾರತದ ಧ್ವಜ ಕಾಣೆಯಾಗಿತ್ತು. ಇದರಿಂದಾಗಿ ಭಾರತೀಯ ಅಭಿಮಾನಿಗಳು ತುಂಬಾ ಕೋಪಗೊಂಡಿದ್ದರು ಆದರೆ ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಪ್ಪನ್ನು ಸರಿಪಡಿಸಿಕೊಳ್ಳಲು ಕ್ರಮ ಕೈಗೊಂಡಿದೆ. https://twitter.com/sajalsinha4/status/1891873424630313436?ref_src=twsrc%5Etfw%7Ctwcamp%5Etweetembed%7Ctwterm%5E1891873424630313436%7Ctwgr%5E7f27e2277565007506081b1be724077ce46d1c3f%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fabplivehindi-epaper-dh280f81350c1b4ce8bd566c530306062e%2Fanchedaphonsehaibadakhataralogokohorahiyahdikkatrisarchmesamaneaaibat-newsid-n652610285 ಈ ಬಾರಿ ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸುತ್ತಿದೆ, ಆದರೆ ಟೀಮ್ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಹೈಬ್ರಿಡ್ ಮಾದರಿಯಲ್ಲಿ ಆಡಲಿದೆ. ವಾಸ್ತವವಾಗಿ, ಪಾಕಿಸ್ತಾನದಲ್ಲಿ ಆಡುವ ತಂಡಗಳ ಧ್ವಜಗಳನ್ನು ಮಾತ್ರ ಕರಾಚಿ ಕ್ರೀಡಾಂಗಣದಲ್ಲಿ ಹಾರಿಸಲಾಗಿತ್ತು. ಈ ಬಗ್ಗೆ ಸಾಕಷ್ಟು ವಿವಾದಗಳು ನಡೆದಿದ್ದವು. ಅದೇ ಸಮಯದಲ್ಲಿ, ಕರಾಚಿ ಕ್ರೀಡಾಂಗಣದಲ್ಲಿ ಇತರ ದೇಶಗಳ ಧ್ವಜಗಳ ಜೊತೆಗೆ ಭಾರತೀಯ ಧ್ವಜವೂ ಕಾಣಿಸಿಕೊಂಡಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್…

Read More