Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಈ ಬಾರಿ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ. ಆದರೆ ಬಜೆಟ್ ಮಂಡನೆ ದಿನಾಂಕ ಇನ್ನು ನಿಗದಿಯಾಗಿಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಆದರೆ ಬಜೆಟ್ ಮಂಡನೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ…
ಭೋಪಾಲ್ : 1984ರ ಡಿಸೆಂಬರ್ 2ರಂದು ರಾತ್ರಿ ಯೂನಿಯನ್ ಕಾರ್ಬೈಡ್ ಸ್ಥಾವರದಿಂದ ಅನಿಲ ಸೋರಿಕೆಯಾದ ನಂತರ ಇಂದಿಗೂ ಜನರಲ್ಲಿ ಆತಂಕವಿದೆ. ಈ ದುರಂತದಲ್ಲಿ 15,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು 600,000 ಕ್ಕೂ ಹೆಚ್ಚು ಜನರು ತೊಂದರೆಗೀಡಾದರು. ಇಡೀ ನಗರವೇ ಗ್ಯಾಸ್ ಚೇಂಬರ್ ಆಗಿ ಮಾರ್ಪಟ್ಟಿತ್ತು. ಅದರ ಪರಿಣಾಮ ಇಂದಿಗೂ ಹುಟ್ಟುವ ಮಕ್ಕಳ ಮೇಲೆ ಕಾಣುತ್ತಿದೆ. ಅಪಘಾತ ಸಂಭವಿಸಿ 40 ವರ್ಷಗಳ ನಂತರ ಈ ಕಂಪನಿಯಿಂದ ಕಸವನ್ನು ಹೊರ ತೆಗೆದಾಗ ಜನರ ನೆನಪುಗಳು ಮತ್ತೆ ತಾಜಾ ಆಗಿವೆ. ಈ ಕಂಪನಿಯ 40 ವಾಹನಗಳ ಬೆಂಗಾವಲು ಪಡೆ ಕಸ ವಿಲೇವಾರಿ ಮಾಡಿವೆ. ಭೋಪಾಲ್ ಅನಿಲ ದುರಂತದ ನಲವತ್ತು ವರ್ಷಗಳ ನಂತರ, ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ ಸಂಗ್ರಹವಾಗಿರುವ ಸುಮಾರು 337 ಮೆಟ್ರಿಕ್ ಟನ್ ರಾಸಾಯನಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ಪ್ರಾರಂಭಿಸಲಾಯಿತು. ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಉಸ್ತುವಾರಿಯಲ್ಲಿ ಈ ತ್ಯಾಜ್ಯವನ್ನು ತೆಗೆಯಲಾಗುತ್ತಿದೆ. ಪಿತಾಮಪುರದಲ್ಲಿ ವಿಲೇವಾರಿ ಮಾಡಲಾಗುವುದು.…
ಇಂದಿನ ಮಕ್ಕಳಿಗೆ ಮೊಬೈಲ್ ಕೊಡುವುದಕ್ಕಿಂತ ಹೆಚ್ಚೇನೂ ಬೇಕಾಗಿಲ್ಲ. ಅವರು ಇಡೀ ದಿನವನ್ನು ಕಾರ್ಟೂನ್ ವೀಡಿಯೊಗಳು ಮತ್ತು ಆಟಗಳೊಂದಿಗೆ ಕಳೆಯುತ್ತಾರೆ. ಪಾಲಕರು ತಮ್ಮ ಕೆಲಸ ಮಾಡಲು ಬಾಲ್ಯದಿಂದಲೇ ಮಕ್ಕಳನ್ನ ಮೊಬೈಲ್’ಗೆ ಒಗ್ಗಿಸಿ ಬಿಡ್ತಾರೆ. ಇದರಿಂದಾಗಿ ಮಕ್ಕಳಿಗೆ ಸ್ಮಾರ್ಟ್ ಫೋನ್ ಚಟವಾಗಿ ಪರಿಣಮಿಸಿದೆ. ಆದಾಗ್ಯೂ, ಮಕ್ಕಳು ಪದೇ ಪದೇ ಫೋನ್ ಬಳಸುವುದರಿಂದ ಒಹೆಚ್ಚು ಹಾನಿಯಾಗಬಹುದು ಎಂದು ಅನೇಕ ಅಧ್ಯಯನಗಳು ತೋರಿಸಿವೆ. ಸ್ಕ್ರೀನ್ ಟೈಮ್ ಹೆಚ್ಚಾದಂತೆ ಸ್ಥೂಲಕಾಯದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದು ಸಂಶೋಧನೆ ತೋರಿಸಿದೆ. ಯುವಕರಲ್ಲಿ ಸ್ಥೂಲಕಾಯದ ಸಮಸ್ಯೆ ತುಂಬಾ ಹೆಚ್ಚಾಗಿದೆ. ದಿನವಿಡೀ ಮೊಬೈಲ್ ಫೋನಿನತ್ತ ಕಣ್ಣು ಹಾಯಿಸುವುದು ಕ್ರೀಡೆಯಲ್ಲೂ ಹಿಂಜರಿಕೆಗೆ ಕಾರಣವಾಗುತ್ತದೆ ಎಂದು ಅಧ್ಯಯನ ತಿಳಿಸಿದೆ. ತಜ್ಞರ ಪ್ರಕಾರ, ಮೊಬೈಲ್ ಪರದೆಯನ್ನ ದೀರ್ಘಕಾಲ ನೋಡುವುದು ಮಕ್ಕಳಿಗೆ ಅಪಾಯಕಾರಿ. ಆಟದ ಸಮಯದಲ್ಲಿ ಫೋನ್’ಗಳ ಚಟದಿಂದ ಮಕ್ಕಳ ದೈಹಿಕ ಚಟುವಟಿಕೆ ಕಡಿಮೆಯಾಗುತ್ತದೆ. ಪರಿಣಾಮವಾಗಿ, ದೇಹದ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಾಧ್ಯವಾಗುದಿಲ್ಲ. ಹೀಗಾಗಿ ತೂಕ ಹೆಚ್ಚಾಗುತ್ತದೆ. ಸ್ಥೂಲಕಾಯದಂತಹ ಕಾಯಿಲೆಗಳಿಂದ ಮಕ್ಕಳನ್ನು ದೂರವಿರಿಸಲು ಕನಿಷ್ಠ 60 ನಿಮಿಷಗಳ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್ ಪಿ ಎಸ್ ನೌಕರರ ಕುಟುಂಬ ಪಿಂಚಣಿ ಪ್ರಸ್ತಾವನೆಯೊಂದಿಗೆ ಪರಿಶೀಲನಾ ಪಟ್ಟಿಯನ್ನು ಸಲ್ಲಿಸಲು ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಈ ಸಂಬಂಧ ಖಜಾನೆ ಆಯುಕ್ತಾಲಯದ ಆಯುಕ್ತರು ರಾಜ್ಯದ ಎಲ್ಲಾ ಖಜಾನೆಯ ಪ್ರಭಾರಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್.ಪಿ.ಎಸ್. ನೌಕರರ ಕುಟುಂಬ ಪಿಂಚಣಿ ಪರಿವರ್ತನೆಯ ಪ್ರಸ್ತಾವನೆಗಳನ್ನು ರಾಜ್ಯದ ಖಜಾನೆಗಳಿಂದ ಎನ್.ಪಿ.ಎಸ್. ಘಟಕಕ್ಕೆ ಸಲ್ಲಿಸುತ್ತಿರುವುದು ಸರಿಯಷ್ಟೇ, ಸದರಿ ಪುಸ್ತಾವನೆಗಳಲ್ಲಿ ಡಿ.ಡಿ.ಓ.ರವರು ಅಪೂರ್ಣ ಮಾಹಿತಿ ಹಾಗೂ ಅಪೂರ್ಣ ದಾಖಲೆಗಳನ್ನು ನೀಡುತ್ತಿದ್ದು, ಅವುಗಳನ್ನು ಗಮನಿಸದ ಖಜಾನಾಧಿಕಾರಿಗಳು ನೇರವಾಗಿ ಎನ್.ಪಿ.ಎಸ್. ಘಟಕಕ್ಕೆ ಪುಸ್ತಾವನಗಳನ್ನು ಸಲ್ಲಿಸುತ್ತಿರುವುದು ಕಂಡುಬರುತ್ತಿದೆ. ಇದರಿಂದಾಗಿ ಎನ್.ಪಿ.ಎಸ್. ಘಟಕದಲ್ಲಿ ಪ್ರಸ್ತಾವನೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಸಾಧ್ಯವಾಗದೇ, ಪೂರಕ ದಾಖಲೆಗಳ ಕೊರತೆಯಿಂದ ಪುಸ್ತಾವನೆಗಳನ್ನು ಹಿಂದಿರುಗಿಸಲಾಗುತ್ತಿದೆ ಎಂದಿದೆ. ಈ ಸಂಬಂಧ ಪತ್ರದೊಂದಿಗೆ ಲಗತ್ತಿಸಲಾಗಿರುವ ಹೊಸ ಪರಿಶೀಲನಾ ಪಟ್ಟಿ (Check List) ಯಂತ ದಾಖಲೆಗಳನ್ನು ಸಿದ್ಧಪಡಿಸಿ, ದೃಢೀಕರಿಸಿ ಕಡ್ಡಾಯವಾಗಿ ಸಲ್ಲಿಸುವಂತೆ ತಿಳಿಸಿ ಪರಿಶೀಲನಾ ಪಟ್ಟಿ (Check…
ಬಳ್ಳಾರಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ಮತ್ತು ರೋಜ್ಗಾರ್ ಮೇಳ ಅಡಿ ಜ.03 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ಕುಮಾರ್ ರಸ್ತೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಇಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಸುಮಾರು 40 ರಿಂದ 50 ಕಂಪನಿಗಳು ಭಾಗವಹಿಸಲಿದ್ದು, ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷಿಗಳು ಪೂರಕ ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರ್ಮ್ ಲಿಂಕ್ https://forms.gle/YhbVhDQqMmHRF1uV7 ರಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿ ಅಥವಾ ದೂ.08392-294230 ಮತ್ತು ಮೊ.9844444958, 6361607038 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣ್ಣೂರು : ಶಾಲಾ ಬಸ್ ಪಲ್ಟಿಯಾಗಿ 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರಿನ ವಳಕ್ಕೈನಲ್ಲಿ ನಡೆದಿದೆ. ಕಣ್ಣೂರಿನ ವಳಕೈ ಎಂಬಲ್ಲಿ ಬುಧವಾರ ಸಂಜೆ ಶಾಲಾ ಬಸ್ ಪಲ್ಟಿಯಾಗಿದ್ದು, 5ನೇ ತರಗತಿ ವಿದ್ಯಾರ್ಥಿನಿ ನೇದ್ಯ ಎಸ್ ರಾಜೇಶ್ ಪ್ರಾಣ ಕಳೆದುಕೊಂಡಿದ್ದು, ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕುರುಮತ್ತೂರು ಚಿನ್ಮಯ ಶಾಲೆಯ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಾದಾಗ ಬಸ್ಸಿನ ಮುಂದಿನ ಸೀಟಿನಲ್ಲಿದ್ದ ನೇದ್ಯ ಹೊರಕ್ಕೆ ಎಸೆಯಲ್ಪಟ್ಟು ವಾಹನದಡಿಯಲ್ಲಿ ಸಾವನ್ನಪ್ಪಿದ್ದಾಳೆ. ಅಪಘಾತದ ವೇಳೆ ಚಾಲಕನ ಫೋನ್ನಿಂದ ವಾಟ್ಸಾಪ್ ಸ್ಟೇಟಸ್ ಅಪ್ಲೋಡ್ ಆಗಿರುವುದು ಪತ್ತೆಯಾಗಿದೆ. ಆದ್ದರಿಂದ ಚಾಲಕ ವಾಹನ ಚಲಾಯಿಸುವಾಗ ಫೋನ್ ಬಳಸಿದ್ದು ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಬುಧವಾರ ಸಂಜೆ 4.03ಕ್ಕೆ ಅಪಘಾತ ಸಂಭವಿಸಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ಸ್ಪಷ್ಟವಾಗಿದೆ. ಇದೇ ವೇಳೆ ಚಾಲಕನ ವಾಟ್ಸ್ ಆಪ್ ನಿಂದ ಸ್ಟೇಟಸ್ ಅಪ್ ಲೋಡ್ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಇದಕ್ಕೆ ಸಾಕ್ಷಿ ಹೊರಬಿದ್ದಿದೆ. ಅಪಘಾತದ ಸಮಯ ಮತ್ತು ಸ್ಟೇಟಸ್ ಅಪ್ಲೋಡ್ ಮಾಡಿದ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಐಷರಾಮಿ ಬೈಕ್ ಶೋರೂಂಗೆ ಬೆಂಕಿ ಬಿದ್ದು, ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಬಿ.ನಾರಾಯಣಪುರದಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸಂಜೆ 7:30ರ ಸುಮಾರಿಗೆ ಯಮಹಾ ಬೈಕ್ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಇಡೀ ಶೋರೂಂಗೆ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಬೈಕ್ ಗಳು ಸುಟ್ಟು ಕರಕಲಾಗಿವೆ. ಶೋರೂಂನಲ್ಲಿದ್ದ ಸುಮಾರು 30 ಬೈಕ್, ಹಿಂಭಾಗ ಸರ್ವೀಸ್ ಸೆಂಟರ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲಕ್ನೋ : ಪೊಲೀಸರು ಎಫ್ ಐಆರ್ ದಾಖಲಿಸಲು ನಿರಾಕರಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಕಚೇರಿಯ ಗೇಟ್ನಲ್ಲಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಕಚೇರಿಯ ಗೇಟ್ನಲ್ಲಿ ಬೆಂಕಿ ಹಚ್ಚಿಕೊಂಡು ಗಲ್ಫಾಮ್ ಎಂಬ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ವ್ಯಕ್ತಿಯನ್ನು ರಕ್ಷಿಸಲು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಎರಡು ದಿನಗಳ ಹಿಂದೆ ನನ್ನಿಂದ ಇ-ರಿಕ್ಷಾ ಮತ್ತು 2,200 ರೂ. ಪದೇ ಪದೇ ಮನವಿ ಮಾಡಿದರೂ ಪೊಲೀಸರು ಎಫ್ಐಆರ್ ದಾಖಲಿಸಲು ನಿರಾಕರಿಸಿದರು,’’ ಎಂದು ಆರೋಪಿಸಿದರು. ಗುಲ್ಫಾಮ್ ಸರ್ಕಲ್ ಆಫೀಸರ್ (ಸಿಒ) ತನ್ನ ದೂರನ್ನು ಮುಂದುವರಿಸಿದರೆ ಡ್ರಗ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. ಘಟನೆಯ ಕುರಿತು ಪೊಲೀಸರು ಸ್ಪಷ್ಟನೆ ನೀಡಿದ್ದು, ವೈಯಕ್ತಿಕ ವಿಷಯದಿಂದಾಗಿ ಗಲ್ಫಾಮ್ ಒತ್ತಡದಲ್ಲಿದ್ದ. ಒಂದು…
ಬೆಂಗಳೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ ಕಾರ್ಯಕ್ರಮದ” ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 15, 2025ರ ವರಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಫೆಬ್ರವರಿ 15, 2025 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಕಾರ್ಯಕ್ರಮದ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು. ಇಲಾಖೆಯ ದೂರವಾಣಿ ಸಂಖ್ಯೆ : 8050770005 /080-22867628 ಇ-ಮೇಲ್ bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ಇ-ಮೇಲ್ postmetrichelpadesk@karnataka.gov.in ಅಥವಾ ತಂತ್ರಾಂಶದ ಸಹಾಯವಾಣಿ ಸಂಖ್ಯೆ 1902 ಗೆ ಸಂರ್ಪಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಆಸ್ತಿ ಘೋಷಣೆ ಮಾಡದ ಜನಪ್ರತಿನಿಧಿಗಳಿಗೆ ಚುನಾವಣಾ ಆಯೋಗವು ಬಿಗ್ ಶಾಕ್ ನೀಡಿದ್ದು, ರಾಜ್ಯದ 6 ಗ್ರಾಮಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ. ಆಸ್ತಿ ಘೋಷಣೆ ಸಂಬಂಧ ಈ ಸದಸ್ಯರಿಗೆ ನೋಟಿಸ್ ನೀಡಿದಾಗಲೂ ಯಾವುದೇ ಉತ್ತರ ನೀಡದ ಹಿನ್ನೆಲೆಯಲ್ಲಿ ಈ ಕ್ರಮ ಗೊಳ್ಳಲಾಗಿದೆ. ಸದಸ್ಯತ್ವ ರದ್ದುಗೊಂಡ ಸದಸ್ಯ ಸ್ಥಾನಗಳನ್ನು ಖಾಲಿ ಎಂದೂ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆ ಅತ್ತಿಕೊಡಿಗೆ ಗ್ರಾಮ ಪಂಚಾಯಿತಿಯ ಚೈತ್ರಾ ರಘು, ಅಜ್ಜಂಪುರ ತಾಲೂಕು ಸೊಕ್ಕೆ ಗ್ರಾಮ ಪಂಚಾಯಿತಿಯ ಎಸ್.ಎಚ್.ಚಂದ್ರಶೇಖರ್, ಕಲಬುರಗಿ ಜಿಲ್ಲೆ ಅಳಂದ ಆಲೂಕು ಅಳಂಗಾ ಗ್ರಾಮ ಪಂಚಾಯಿತಿಯ ಗಣಪತಿ, ಕಮಲಾಪೂರ ತಾಲೂಕು ವ್ಹಿ.ಕೆ.ಸಲಗರ ಗ್ರಾಮ ಪಂಚಾಯಿತಿಯ ಇಸ್ಮಾಯಿಲ್ ಸಾಬ್, ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಚಿಕ್ಕಾಂಶಿ ಹೊಸೂರು ಗ್ರಾಮ ಪಂಚಾಯಿತಿಯ ಮಂಜುಳಾ ರಾಜಪ್ಪ ಹುಳ್ಳಿ ಹಾಗೂ ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ಕಳಕೇರಿ ಗ್ರಾಮ ಪಂಚಾಯಿತಿಯ ಬಿ.ವಿ. ಪ್ರಮೀಳಾ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳಡಿ…