Author: kannadanewsnow57

ಮೈಸೂರು : ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೈಸೂರಿನ ವಿಶ್ವೇಶ್ವರ ನಗರದಲ್ಲಿ ಚೇತನ್, ರೂಪಾಲಿ, ಮಗು ಹಾಗೂ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲು ಚೇತನ್ ರೂಪಾಲಿ ಹಾಗೂ ಮಗು, ತಾಯಿಗೆ ವಿಷ ನೀಡಿದ್ದಾರೆ. ಬಳಿಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗ ಕುಶಾಲ್ (15), ಚೇತನ್ (45), ರೂಪಾಯಿ (43) ಹಾಗೂ ತಾಯಿ ಪ್ರಿಯಂವಧಾ (62) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಾಷಿಂಗ್ಟನ್ : ಅಮೆರಿಕ ಇನ್ನೂ ಸಿರಿಯಾ ಮೇಲೆ ಬಾಂಬ್ ದಾಳಿ ಮಾಡುತ್ತಲೇ ಇದೆ. ವಾಯುವ್ಯ ಸಿರಿಯಾದಲ್ಲಿ ಪ್ರಮುಖ ವಾಯುದಾಳಿ ನಡೆಸಿರುವುದಾಗಿ ಅಮೆರಿಕ ಸೇನೆ ತಿಳಿಸಿದೆ. ಈ ದಾಳಿಯಲ್ಲಿ ಅಲ್ ಖೈದಾ ಜೊತೆ ಸಂಬಂಧ ಹೊಂದಿದ್ದ ಉನ್ನತ ಕಮಾಂಡರ್ ಒಬ್ಬ ಸಾವನ್ನಪ್ಪಿದ್ದಾನೆ. ಒಂದು ಹೇಳಿಕೆಯಲ್ಲಿ, ಯುಎಸ್ ಸೆಂಟ್ರಲ್ ಕಮಾಂಡ್ ಆ ವ್ಯಕ್ತಿಯನ್ನು “ಭಯೋತ್ಪಾದಕ ಸಂಘಟನೆ ಹುರ್ರಾಸ್ ಅಲ್-ದಿನ್‌ನಲ್ಲಿ ಹಿರಿಯ ಹಣಕಾಸು ಮತ್ತು ಲಾಜಿಸ್ಟಿಕ್ಸ್ ಅಧಿಕಾರಿ” ಎಂದು ಹೇಳಿದೆ. ಆದಾಗ್ಯೂ, ದಾಳಿಯ ಕುರಿತು ಅಮೆರಿಕ ಸೇನೆ ಯಾವುದೇ ಹೆಚ್ಚುವರಿ ಮಾಹಿತಿಯನ್ನು ಒದಗಿಸಲಿಲ್ಲ. ಭಯೋತ್ಪಾದಕ ಗುಂಪನ್ನು ಅಡ್ಡಿಪಡಿಸುವ ಪ್ರಯತ್ನದ ಭಾಗವಾಗಿ ಯುಎಸ್ ಸೇನೆಯು ಹುರ್ರಾಸ್ ಅಲ್-ದಿನ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡಿದೆ.

Read More

ಪಶ್ಚಿಮ ಆಫ್ರಿಕಾದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಚಿನ್ನದ ಗಣಿ ಕುಸಿದ ಪರಿಣಾಮ 42 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಪಶ್ಚಿಮ ಆಫ್ರಿಕಾದ ದೇಶವಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದು ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಆಫ್ರಿಕಾದ ಮಾಲಿ ದೇಶದಲ್ಲಿ ಚಿನ್ನದ ಗಣಿ ಕುಸಿದು 42 ಜನರು ಸಾವನ್ನಪ್ಪಿದ್ದಾರೆ ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ತಿಂಗಳ ಅವಧಿಯಲ್ಲಿ ಇಂತಹ ಘಟನೆ ಸಂಭವಿಸಿರುವುದು ಇದು ಎರಡನೇ ಬಾರಿ ಎಂಬುದು ಗಮನಾರ್ಹ. ಚೀನಾದ ಪ್ರಜೆಗಳು ನಡೆಸುತ್ತಿದ್ದ ಗಣಿಯಲ್ಲಿ 42 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸರ್ಕಾರಿ ಪ್ರತಿನಿಧಿಗಳು ಬಹಿರಂಗಪಡಿಸಿದ್ದಾರೆ. ಈ ಘಟನೆಯ ಬಗ್ಗೆ ವಿವರಗಳು ಇನ್ನೂ ತಿಳಿದುಬರಬೇಕಾಗಿದೆ.

Read More

ಪಾಕಿಸ್ತಾನದ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯನ್ನು ಹೊಲಕ್ಕೆ ಕರೆದುಕೊಂಡು ಹೋಗಿ ದೈಹಿಕ ಸಂಬಂಧ ಹೊಂದಿದ್ದರು. ಹುಡುಗಿಯ ಕಿರುಚಾಟ ಕೇಳಿ, ಹತ್ತಿರದಲ್ಲಿ ವಾಸಿಸುತ್ತಿದ್ದ ಯುವಕನೊಬ್ಬ ಅವಳನ್ನು ರಕ್ಷಿಸಲು ಬಂದನು, ಆದರೆ ಪೊಲೀಸರು ಅವನ ಮೇಲೆ ಗುಂಡು ಹಾರಿಸಿದರು. ಮಾಹಿತಿಯ ಪ್ರಕಾರ, ಮುಹಮ್ಮದ್ ಅಹ್ಮದ್ ಎಂಬ ಪೊಲೀಸ್ ಅಧಿಕಾರಿ ಒಬ್ಬ ಮಹಿಳೆಯನ್ನು ಹಿಡಿದು ಬಂದೂಕು ತೋರಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದ. ನಂತರ ಅವನು ಅವಳನ್ನು ತನ್ನೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಲು ಪ್ರಾರಂಭಿಸಿದನು. ಆ ಮಹಿಳೆ ಕಿರುಚಲು ಪ್ರಾರಂಭಿಸಿದಳು. ಮಹಿಳೆಯ ಕಿರುಚಾಟ ಕೇಳಿ, ಒಬ್ಬ ಯುವಕ ಅಲ್ಲಿಗೆ ಬಂದು ಘಟನೆಯ ವಿಡಿಯೋ ಮಾಡಲು ಪ್ರಾರಂಭಿಸಿದನು. ಅಷ್ಟರಲ್ಲಿ, ಪೊಲೀಸ್ ಅಧಿಕಾರಿ ಆತನ ಮೇಲೆ ಗುಂಡು ಹಾರಿಸಿದ. https://twitter.com/i/status/1890647429717835883 ಗುಂಡು ಹಾರಿಸಿದ ನಂತರ ಯುವಕ ಗಾಯಗೊಂಡಿದ್ದಾನೆ. ಗುಂಡುಗಳ ಶಬ್ದ ಕೇಳಿ ಹತ್ತಿರದ ಜನರು ಕೂಡ ಅಲ್ಲಿಗೆ ಬಂದು ಯುವಕನನ್ನು ಆಸ್ಪತ್ರೆಗೆ ಕರೆದೊಯ್ದರು. ಪೊಲೀಸರ ಈ ಹೇಯ…

Read More

ಬೆಂಗಳೂರು : ಮಾವನ ಆಸ್ತಿಗಳಿಗೆ ಅಳಿಯ ಉತ್ತರಾಧಿಕಾರಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕಾನೂನುಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ ಎಂದು ತಿಳಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಬಸವರಾಜು ಸಲ್ಲಿಸಿಸದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನಗಂಟಿ ಅವರ ಪೀಠ ಈ ಆದೇಶ ನೀಡಿದೆ. ಮೃತ ಮಾವನಿಗೆ ನಾಲ್ಕು ಹೆಣ್ಣು ಮಕ್ಕಳಿರುವುದರಿಂದ ತನ್ನನ್ನೇ ಮೃತನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ ವ್ಯಕ್ತಿಯೋರ್ವ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕಾನೂನು ಬದ್ದ ಉತ್ತರಾಧಿಕಾರಿ ಮಾತ್ರ ಮೃತಪಟ್ಟ ವ್ಯಕ್ತಿಯ ಆಸ್ತಿ ಪ್ರತಿನಿಧಿಸುವ ಮತ್ತು ಹಿತಾಸಕ್ತಿ ರಕ್ಷಣೆ ಮಾಡುವ ಜವಾಬ್ದಾರಿ ಹೊಂದಿರುತ್ತಾನೆ. ಆದರೆ ಈ ಪ್ರಕರಣದಲ್ಲಿ ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಮೃತರ ಆಸ್ತಿಯಲ್ಲಿ ಭಾಗಕ್ಕೆ ಅರ್ಹರಾಗಿದ್ದಾರೆಯೇ ಹೊರತು ಉತ್ತರಾಧಿಕಾರಿಯಾಗುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕೋರ್ಟ್ ತಿಳಿಸಿದೆ. ತನ್ನದೇ ಗ್ರಾಮದ ಮಹಿಳೆಯನ್ನು ವಿವಾಹವಾಗಿ ವ್ಯಕ್ತಿಯೊಬ್ಬರು ಮಾವನ ಆಸ್ತಿಯಲ್ಲಿ ಪತ್ನಿಗೆ…

Read More

ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇದನ್ನು ಹೊರತುಪಡಿಸಿ ನೀರಾವರಿ ಫೀಡರ್ ಗಳ ಮೂಲಕ ತೋಟದ ಮನೆಗಳಿಗೆ ಗೃಹೊಪಯೋಗಿ ಬಳಕೆಗೆ ಮಾತ್ರ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿ ಯನ್ನು ಗಮನದಲ್ಲಿರಿಸಿಕೊಂಡು ಸಿಂಗಲ್ ಫೇಸ್ ವಿದ್ಯುತ್ ಅನ್ನು ಸಂಜೆ 6 ರಿಂದ ಬೆಳಗ್ಗೆ 6ರವರೆಗೆ (ಮೂರು ಗಂಟೆಗಳ ಮೂರು ಫೇಸ್ ವಿದ್ಯುತ್ ಹೊರತಾಗಿ ) ಫೀಡರ್ ಗಳಿಗೆ ಓಪನ್ ಡೆಲ್ಟಾ ಮೂಲಕ ನೀಡಲಾಗುವುದು. ಆದರೆ ರಾತ್ರಿ ವೇಳೆ ಕೆಲವರು ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗಳನ್ನು ನೀರಾವರಿ ಫೀಡರ್ ಗಳ ಮೂಲಕ ಬಳಸುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಆದ್ದರಿಂದ ಈ ಸಮಯದಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಒಂದು ವೇಳೆ ತೆರೆದಿದ್ರೆ ಶೈಕ್ಷಣಿಕ ಸಂಸ್ಥೆಗಳಿಂದ ಅಬಕಾರಿ ಇಲಾಖೆಗೆ ದೂರು ನೀಡಲು ಸೂಚಿಸಿದೆ. ಈ ಕುರಿತಂತೆ ಪ್ರೌಢ ಶಿಕ್ಷಣದ ನಿರ್ದೇಶಕರು ರಾಜ್ಯದ ಎಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಅದರಲ್ಲಿ  ಮಾನ್ಯ ಆಯುಕ್ತರು ಅಬಕಾರಿ ಇಲಾಖೆಯವರು ಸರ್ಕಾರಕ್ಕೆ ಬರೆದಿರುವ ತಮ್ಮ ಪತ್ರದಲ್ಲಿ ಉಪ ಕಾರ್ಯದರ್ಶಿಗಳು, ಜುವಿನೈಲ್ ಜಹೀ ಕಮಿಟಿ, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ರವರು ದಿನಾಂಕ: 12.10.2023 ರಂದು ನಡೆಸಿರುವ ಸಭೆಯಲ್ಲಿ, ವುಸ್ತಾಪಿಸಿರುವ ಅಂಶಗಳಂತೆ ಎಂದಿದ್ದಾರೆ. ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಲು ತಿಳಿಸುತ್ತಾ ಈ ಕುರಿತು ಅಬಕಾರಿ ಇಲಾಖೆಯಿಂದ ಕಮಕೈಗೊಳ್ಳಲಾಗುವುದೆಂದು ತಿಳಿಸಿರುತ್ತಾರೆ ಎಂದು ಹೇಳಿದ್ದಾರೆ. ವ್ಯಸನ ಮುಕ್ತಗೊಳಿಸುವ ಬಗ್ಗೆ ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ…

Read More

ನವದೆಹಲಿ : ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಫಾಸ್ಟ್‌ಟ್ಯಾಗ್‌ಗೆ ಎರಡು ಹೊಸ ಪ್ರಮುಖ ಬದಲಾವಣೆಗಳನ್ನು ಹೊರಡಿಸಿವೆ. ಟೋಲ್ ಪಾವತಿಗಳನ್ನು ಸುಗಮಗೊಳಿಸುವ ಮತ್ತು ವಿವಾದಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಸರ್ಕಾರಿ ಸಂಸ್ಥೆಯು ವಹಿವಾಟುಗಳು ಮತ್ತು ಚಾರ್ಜ್‌ಬ್ಯಾಕ್‌ಗಳನ್ನು ಪ್ರಕ್ರಿಯೆಗೊಳಿಸಲು ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತರಲು ಸಜ್ಜಾಗಿದೆ. ಫೆಬ್ರವರಿ 17 ರ ಇಂದಿನಿಂದ ಹೊಸ ಫಾಸ್ಟ್‌ಟ್ಯಾಗ್ ನಿಯಮಗಳು ಪಾವತಿಗಳನ್ನು ವಿಳಂಬ ಮಾಡುವ ಅಥವಾ ಕಪ್ಪುಪಟ್ಟಿಗೆ ಸೇರಿಸಲಾದ ಟ್ಯಾಗ್‌ಗಳನ್ನು ಹೊಂದಿರುವ ಬಳಕೆದಾರರ ಮೇಲೆ ಪರಿಣಾಮ ಬೀರುತ್ತವೆ. ಇದರ ಹೊರತಾಗಿ, ಟೋಲ್ ಪಾವತಿಗಳನ್ನು ಸುಗಮಗೊಳಿಸಲು ಮತ್ತು ವಿವಾದಗಳನ್ನು ಕಡಿಮೆ ಮಾಡಲು ಚಾರ್ಜ್‌ಬ್ಯಾಕ್ ಪ್ರಕ್ರಿಯೆ ಮತ್ತು ಕೂಲಿಂಗ್ ಅವಧಿ ಹಾಗೂ ವಹಿವಾಟು ನಿರಾಕರಣೆ ನಿಯಮಗಳ ವಿಷಯದಲ್ಲಿ ಬದಲಾವಣೆಗಳಿವೆ. ವಿಳಂಬವಾದ ವಹಿವಾಟುಗಳು ದಂಡಕ್ಕೆ ಕಾರಣವಾಗಬಹುದು ವಾಹನವು ಟೋಲ್ ರೀಡರ್ ಅನ್ನು ಹಾದುಹೋಗುವ ಸಮಯದಿಂದ 15 ನಿಮಿಷಗಳನ್ನು ಮೀರಿ ತಮ್ಮ ಟೋಲ್ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸಿದರೆ ಫಾಸ್ಟ್‌ಟ್ಯಾಗ್ ಬಳಕೆದಾರರು ಹೆಚ್ಚುವರಿ ಶುಲ್ಕಗಳನ್ನು ವಿಧಿಸಬಹುದು. ನವೀಕರಿಸಿದ…

Read More

ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಶಾಕ್ ನೀಡಿದ್ದು, ಮಾರ್ಚ್ ನಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ತಿಳಿಸಿದೆ. ಈ ಕುರಿತು ಹವಾಮಾನ ತಜ್ಞರು ಮಾಹಿತಿ ನೀಡಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಈಗಾಗಲೇ ಗರಿಷ್ಠ ಉಷ್ಣಾಂಶ ಬೆಂಗಳೂರಿನಲ್ಲಿ 32 ಡಿ.ಸೆ. ದಾಟಿದೆ. ಅದರಲ್ಲೂ ಮಾರ್ಚ್ ನಿಂದ ಬೇಸಿಗೆ ಆರಂಭಗೊಳ್ಳಲಿದ್ದು ಆಗ ಬಿಸಿಲ ಗರಿಷ್ಠ ಉಷ್ಣಾಂಶ ಇನ್ನಷ್ಟು ಏರಿಕೆ ದಾಖಲಾಗಲಿದೆ ಎಂದು ತಿಳಿಸಿದ್ದಾರೆ. ರಾಝ್ಯದಲ್ಲಿ ಈ ಬಾರಿ ಮಳೆ, ಅದೇ ರೀತಿ ಚಳ ಪ್ರಮಾಣವೂ ಹೆಚ್ಚಾಗಿತ್ತು. ಇನ್ನು ಬೇಸಿಗೆಯ ಬಿಸಿಲು, ಸೆಕೆಯೂ ಅಧಿಕವಾಗಿರಲಿದೆ. ಈಗಾಗಲೇ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹಾಗೂ ಕನಿಷ್ಠ ಉಷ್ಣಾಂಶ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆ ಕನಿಷ್ಠ ಉಷ್ಣಾಂಶ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 4 ಡಿ.ಸೆ. ವರೆಗೆ ಕಡಿಮೆ ದಾಖಲಾಗಿದೆ. ದಕ್ಷಿಣ ಒಳನಾಡು, ಕರಾವಳಿಯ…

Read More

ನವದೆಹಲಿ : ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ನವದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ಇಂದು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. https://twitter.com/ANI/status/1891279675172782292?ref_src=twsrc%5Egoogle%7Ctwcamp%5Eserp%7Ctwgr%5Etweet ಭೂಕಂಪದ ಮಾಹಿತಿ: ತೀವ್ರತೆ: 4.3 ದಿನಾಂಕ ಮತ್ತು ಸಮಯ: 17ನೇ ಫೆಬ್ರವರಿ 2025, 05:36:55 IST ಸ್ಥಳ: ನವದೆಹಲಿ, ದೆಹಲಿ ನಿರ್ದೇಶಾಂಕಗಳು: ಅಕ್ಷಾಂಶ 28.59° N, ರೇಖಾಂಶ 77.16° E ಆಳ: 5 ಕಿ.ಮೀ

Read More