Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಇಂದಿನ ಡಿಜಿಟಲ್ ಯುಗದಲ್ಲಿ, ಮಕ್ಕಳು ಮತ್ತು ಹದಿಹರೆಯದವರು ನಿರಂತರವಾಗಿ ಒಂದಲ್ಲ ಒಂದು ಪರದೆಯ ಮುಂದೆ ಇರುತ್ತಾರೆ. ಕೆಲವೊಮ್ಮೆ ಅದು ಫೋನ್, ಕೆಲವೊಮ್ಮೆ ಟ್ಯಾಬ್ಲೆಟ್, ಕೆಲವೊಮ್ಮೆ ಟಿವಿ ಅಥವಾ ಗೇಮಿಂಗ್ ಕನ್ಸೋಲ್ ಆಗಿರಬಹುದು. ಆದರೆ ಹೊಸ ಸಂಶೋಧನೆಯು ಪೋಷಕರಿಗೆ ಪ್ರಮುಖ ಎಚ್ಚರಿಕೆಯನ್ನ ನೀಡಿದೆ. ಅಮೇರಿಕನ್ ಹಾರ್ಟ್ ಅಸೋಸಿಯೇಷನ್ (AHA) ಬೆಂಬಲದೊಂದಿಗೆ ಡೆನ್ಮಾರ್ಕ್ನಲ್ಲಿ ನಡೆಸಿದ ಅಧ್ಯಯನವು ಮಕ್ಕಳ ಅತಿಯಾದ ಸ್ಕ್ರೀನ್ ಸಮಯವು ಅವರ ಹೃದಯ ಮತ್ತು ಚಯಾಪಚಯ ಆರೋಗ್ಯಕ್ಕೆ ಗಂಭೀರ ಹಾನಿಯನ್ನುಂಟು ಮಾಡುತ್ತಿದೆ ಎಂದು ಬಹಿರಂಗಪಡಿಸಿದೆ. ಸಂಶೋಧನೆಯ ಪ್ರಕಾರ , ಈ ಡಿಜಿಟಲ್ ಅಭ್ಯಾಸದ ಪರಿಣಾಮವು 10 ವರ್ಷ ವಯಸ್ಸಿನಿಂದ ಹಿಡಿದು 18 ವರ್ಷ ವಯಸ್ಸಿನವರೆಗಿನ ಮಕ್ಕಳ ಮೇಲೆ ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ಪರದೆಗಳ ಮೇಲೆ ಹೆಚ್ಚು ಸಮಯ ಕಳೆಯುತ್ತಿದ್ದಂತೆ, ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ಇನ್ಸುಲಿನ್ ಪ್ರತಿರೋಧದಂತಹ ಅಪಾಯಕಾರಿ ಅಂಶಗಳು ಹೆಚ್ಚಾಗುತ್ತವೆ. ಸರಳವಾಗಿ ಹೇಳುವುದಾದ್ರೆ, ಪರದೆಗಳ ಮೇಲೆ ಕಳೆಯುವ ಪ್ರತಿ ಹೆಚ್ಚುವರಿ ಗಂಟೆಯೂ ಮಕ್ಕಳ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.…
ಇದೇ ನ.13 ರಿಂದ 18 ರ ವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ ಯಶಸ್ವಿಗೊಳಿಸಲು, ಎಲ್ಲಾ ಇಲಾಖೆಗಳ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದುಕೊಂಡು ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ಮಂಗಳವಾರ ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯ ಅಂತಿಮ ಸಿದ್ಧತೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ದೇಶದ ಸೈನ್ಯದಲ್ಲಿ ಸೇರಬಯಸುವ ಅಗ್ನಿವೀರರ ಆಯ್ಕೆ ಪ್ರಕ್ರಿಯೆಯು ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ ಮತ್ತು ನಮಗೆ ದೊರೆತ ಅವಕಾಶವಾಗಿದೆ. ಹಾಗಾಗಿ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸುವ ಮೂಲಕ ಯಾವುದೇ ರೀತಿಯಲ್ಲಿ ಅಡಚಣೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. *ಸಹಾಯವಾಣಿ ಕೇಂದ್ರ:* ನ.13 ರಿಂದ 18 ರ ವರೆಗೆ ನಡೆಯುವ ರ್ಯಾಲಿಯಲ್ಲಿ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಗ್ನಿವೀರರು ರಾಜ್ಯದ ವಿವಿಧೆಡೆಯಿಂದ ಆಗಮಿಸಲಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು. ನಗರದ ಬಸ್…
ಸರ್ಕಾರವು 2025-26 ನೇ ಸಾಲಿನಲ್ಲಿ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಬಿಳಿ ಜೋಳ ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿ ಏಜೆನ್ಸಿಯಾಗಿ ನೇಮಕವಾಗಿದ್ದು, ಜಿಲ್ಲೆಯಲ್ಲಿ ಮೂರು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಬಿಳಿಜೋಳ(ಹೈಬ್ರಿಡ್) ರೂ.3699/- ಹಾಗೂ ಬಿಳಿಜೋಳ(ಮಾಲ್ದಂಡಿ) ರೂ.3749/- ರಂತೆ ದರ ನಿಗದಿಪಡಿಸಲಾಗಿದೆ. ಕೊಪ್ಪಳ, ಕುಷ್ಟಗಿ ಹಾಗೂ ಯಲಬುರ್ಗಾಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಮೂರೂ ಖರೀದಿ ಕೇಂದ್ರಗಳಿಗೆ ಖರೀದಿ ಅಧಿಕಾರಿಯನ್ನಾಗಿ ಕೊಪ್ಪಳ ಎಪಿಎಂಸಿ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆಯ ಮಳಿಗೆ ವ್ಯವಸ್ಥಾಪಕ ಮೃತ್ಯುಂಜಯ ಕೋನಾಪುರ ಅವರನ್ನು ನೇಮಕ ಮಾಡಲಾಗಿದೆ. ಪ್ರತಿ ರೈತರಿಂದ ಹಿಡುವಳಿಯನ್ನು ಆಧಾರಿಸಿ ಪ್ರತಿ ಎಕರೆಗೆ 15 ಕ್ವಿಂ. ನಂತೆ ಗರಿಷ್ಟ 150 ಕ್ವಿಂ. ಬಿಳಿ ಜೋಳವನ್ನು ಖರೀದಿಸಲಾಗುವುದು. ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಬಯೋಮೆಟ್ರಿಕ್ ಆಧಾರದಲ್ಲಿ ಕೈಗೊಳ್ಳಲಿದ್ದು, ನವೆಂಬರ್ 15 ರಿಂದ 2026 ರ ಮಾರ್ಚ್ 30 ರವರೆಗೆ ರೈತರ ನೋಂದಣಿಯನ್ನು ನಡೆಸಲಾಗುವುದು. ಹಾಗೂ 2026 ರ ಜನವರಿ 1 ರಿಂದ ಮಾರ್ಚ್…
ಫರಿದಾಬಾದ್: ಹರಿಯಾಣದ ಫರಿದಾಬಾದ್ನಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದ ವೆಬ್ ಸೈಟ್ ಅನ್ನು ಹ್ಯಾಕ್ ಮಾಡಲಾಗಿದೆ. ವೆಬ್ ಸೈಟ್ ಅನ್ನು ಕ್ಲಿಕ್ ಮಾಡಿದಾಗ ಭಾರತದ ನೆಲದಲ್ಲಿ ಅಂತಹ ಇಸ್ಲಾಮಿಕ್ ವಿಶ್ವವಿದ್ಯಾಲಯಕ್ಕೆ ಸ್ಥಳವಿಲ್ಲ. ನೀವು ಭಾರತದಲ್ಲಿ ವಾಸಿಸಲು ಬಯಸಿದರೆ, ನೀವು ಶಾಂತಿಯುತವಾಗಿ ಇರಬೇಕು. ಇಲ್ಲದಿದ್ದರೆ, ಇಸ್ಲಾಮಿಕ್ ಜಿಹಾದ್ ನಲ್ಲಿ ತೊಡಗಿರುವವರು ಭಾರತವನ್ನು ತೊರೆದು ಪಾಕಿಸ್ತಾನಕ್ಕೆ ಹೋಗಬೇಕು. ಇದನ್ನು ಎಚ್ಚರಿಕೆ ಎಂದು ಪರಿಗಣಿಸಿ, ಏಕೆಂದರೆ ನಾವು ನಿಮ್ಮ ರಾಷ್ಟ್ರವಿರೋಧಿ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಇದನ್ನು ನಿಲ್ಲಿಸಿ, ಇಲ್ಲದಿದ್ದರೆ ನಾವು ನಿಮ್ಮನ್ನು ನಾಶಪಡಿಸುತ್ತೇವೆ ಎಂದು ಬರೆಯಲಾಗಿದೆ. ಆದಾಗ್ಯೂ, ಸ್ವಲ್ಪ ಸಮಯದ ನಂತರ ವೆಬ್ಸೈಟ್ ಅನ್ನು ಪುನಃಸ್ಥಾಪಿಸಲಾಯಿತು. ಅಲ್-ಫಲಾಹ್ಗೆ 2014 ರಲ್ಲಿ ವಿಶ್ವವಿದ್ಯಾಲಯದ ಸ್ಥಾನಮಾನವನ್ನು ನೀಡಲಾಯಿತು ಮತ್ತು ಇದನ್ನು ಅಲ್-ಫಲಾಹ್ ಚಾರಿಟೇಬಲ್ ಟ್ರಸ್ಟ್ ನಿರ್ವಹಿಸುತ್ತದೆ. ವಿಶ್ವವಿದ್ಯಾಲಯದ ಸಂಪೂರ್ಣ ಕ್ಯಾಂಪಸ್ 70 ಎಕರೆಗಳಿಗಿಂತ ಹೆಚ್ಚು ವ್ಯಾಪಿಸಿದೆ. ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿನ ಫರಿದಾಬಾದ್ ಭಯೋತ್ಪಾದನಾ ಮಾಡ್ಯೂಲ್ ಅನ್ನು ಫರಿದಾಬಾದ್ ಪೊಲೀಸರು, ವಿಶ್ವವಿದ್ಯಾಲಯದಲ್ಲಿ ಡಾ. ಮುಜಮ್ಮಿಲ್ ಅವರೊಂದಿಗೆ ಕೆಲಸ ಮಾಡುವ ಅಧ್ಯಾಪಕರು, ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು…
ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಆಸ್ತಿಗಾಗಿ ಸಾಕು ಮಗಳೇ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಡಿಮಠದಲ್ಲಿ ಈ ಘಟನೆ ನಡೆದಿದ್ದು, ತಾಯಿ ಕುಸುಮ (62) ಕೊಲೆಯಾದ ದುರ್ದೈವಿ. ಮಗಳು ಸುಧಾ (34) ಕೊಲೆ ಮಾಡಿರುವ ಆರೋಪಿ. ಮಕ್ಕಳಿಲ್ಲದ ಕಾರಣ ತನ್ನ ತಂಗಿಯ ಮಗಳನ್ನೇ ದತ್ತು ಪಡೆದು ಸುಧಾಳನ್ನು ಮದುವೆ ಮಾಡಿಕೊಡಲಾಗಿತ್ತು. ಆದರೆ ಮಗಳು ಸುಧಾ ತಾಯಿಯ ಮನೆ, ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಪೀಡಿಸುತ್ತಿದ್ದಳು. ತಾಯಿ ಒಪ್ಪದಿದ್ದಾಗ ದಿಂಬಿನಿಂದ ಉಸಿರುಗಟ್ಟಿಸಿ ತಾಯಿಯನ್ನು ಕೊಲೆ ಮಾಡಿದ್ದಾಳೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ಸೇರಿದಂತೆ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಆಗಿರುತ್ತದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪಳ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಳ್ಳಾರಿ ರೀಡ್ಸ್ ಸಂಸ್ಥೆ ಹಾಗೂ ಬೆಳಗಾವಿ ಸ್ಪಂದನಾ ಸೊಸೈಟಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿದ್ದ “ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ-2016 ಹಾಗೂ ಹದಿಹರೆಯದ ಮಕ್ಕಳ ಸಬಲೀಕರಣ ಕುರಿತು ವಿವಿಧ ಭಾಗೀದಾರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಬಾಲ್ಯವಿವಾಹವನ್ನು ಮಾಡಿಸಿದ ಪಾಸ್ಟರ್(ಪಾದ್ರಿ)ರವರಿಗೆ ಶಿಕ್ಷೆಯಾಗಿದೆ. ಕಲ್ಯಾಣ…
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಕಾರ್ಯಕ್ರಮಗಳಡಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ www.sw.kar.nic.in ಅಥವಾ https://ssp.postmatric.karnataka.gov.in/homepage.aspx ಲಿಂಕ್ ನಲ್ಲಿ ಅರ್ಜಿ ಸಲ್ಲಿಸಬಹುದು. ಸೂಚನೆಗಳು: ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಿ ಪ್ರಥಮ ಬಾರಿಗೆ, ಪ್ರಥಮ ಪ್ರಯತ್ನದಲ್ಲಿ ಪಾಸಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾಥಿವೇತನ ಪಡೆದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿಗೆ ಅರ್ಜಿ ಸಲ್ಲಿಸಬಹುದು. ಕಳೆದ ಸಾಲಿನಲ್ಲಿ ವಿವಿಧ ಕಾರಣಗಳಿಂದ ವಿದ್ಯಾರ್ಥಿ ವೇತನ ಮಂಜೂರಾಗದ ಹಾಗೂ ರಿಜೆಕ್ಟ್…
ಸರ್ಕಾರದ ಆದೇಶದಂತೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ 35 ವಾರ್ಡ್ಗಳಲ್ಲಿ ಇ-ಆಸ್ತಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು ನ.11 ರಿಂದ ಡಿ.03 ರವರೆಗೆ ವಿವಿಧ ವಾರ್ಡುಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಮಹಾನಗರಪಾಲಿಕೆ ಆಯುಕ್ತರು ಕೋರಿದ್ದಾರೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಆಸ್ತಿ(ಇ-ಖಾತಾ) ಪಡೆಯುವುದು ಕಡ್ಡಾಯವಾಗಿದ್ದು ಆಸ್ತಿ ಮಾಲೀಕರು ಕರ್ನಾಟಕ ಒನ್/ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಪಾಲಿಕೆಯ 3 ವಲಯ ಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು, ಪಾಲಿಕೆ ಸಿಬ್ಬಂದಿಗಳು ಮನೆ-ಮನೆಗೆ ಭೇಟಿ ನೀಡಿದಾಗ ಸೂಕ್ತ ದಾಖಲೆಗಳನ್ನು ಒದಗಿಸಿ ಪಡೆಯಬಹುದು, ವಾರ್ಡ್ವಾರು ‘ಇ-ಖಾತಾ ಮೇಳ’ ದಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ Citizen Portal Link : https//eaasthi.karnataka.gov.in ಇಲ್ಲಿ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಕಂದಾಯ ವಾರ್ಡ್ ಸಂಖ್ಯೆ 35 ಗಾಡಿಕೊಪ್ಪ ದಿ: 11-11-2025 ಅಗಮುಡಿ ಸಮಾಜ ಸೇವಾ ಸಂಘ, ಆಲ್ಕೋಳ ವೃತ್ತ. ವಾರ್ಡ್ ಸಂಖ್ಯೆ 34 ವಿನೋಬನಗರ ದಿ: 13-11-2025 ಆಟೋ ಕಾಂಪ್ಲೆಕ್ಸ್, ಪ್ಲಾಟ್ ನಂ 61,…
ಟರ್ಕಿ : ಟರ್ಕಿಶ್ ಸರಕು ವಿಮಾನ ಅಜೆರ್ಬೈಜಾನ್-ಜಾರ್ಜಿಯಾ ಗಡಿಯ ಬಳಿ ಪತನಗೊಂಡಿದ್ದು, 20 ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಅಪಘಾತದ ಬಗ್ಗೆ ಟರ್ಕಿಶ್ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ ಅವರು ಹುತಾತ್ಮರಿಗೆ ಸಂತಾಪ ಸೂಚಿಸಿದರು, ಏಕೆಂದರೆ ಶೋಧ ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ತೆರಳಿದವು. ಆದಾಗ್ಯೂ, ಈವರೆಗೂ 20 ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಂಕಾರಾದಲ್ಲಿ ಭಾಷಣ ಮುಗಿಸುವಾಗ, ಎರ್ಡೋಗನ್ ಅವರಿಗೆ ಅವರ ಸಹಾಯಕರು ಒಂದು ಟಿಪ್ಪಣಿಯನ್ನು ನೀಡಿದರು, ನಂತರ ಅವರು ವಿಮಾನ ಅಪಘಾತದ ಬಗ್ಗೆ ಕೇಳಿ ದುಃಖಿತರಾದರು ಎಂದು ಹೇಳಿದರು. https://twitter.com/EternalGlory0/status/1988229199933636663?s=20
ಬೆಂಗಳೂರು: ಪಾಲಿಕೆಗಳ ಅಧಿಕಾರಿಗಳನ್ನು ಭೇಟಿ ಮಾಡದೆ, ʼಫೇಸ್ಲೆಸ್, ಸಂಪರ್ಕರಹಿತ, ಆನ್ಲೈನ್ ಇ-ಖಾತಾʼ ಪಡೆಯುವ ವ್ಯವಸ್ಥೆಯನ್ನು ಜಿಬಿಎ ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ನಾಗರಿಕರಿಗೆ ಆಗುತ್ತಿದ್ದ ಕಿರುಕುಳ ತಪ್ಪುತ್ತದೆ, ಭ್ರಷ್ಟಾಚಾರ ಇಲ್ಲದಂತಾಗುತ್ತದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ. ಬಿಬಿಎಂಪಿಯಲ್ಲಿ ಹಳೆಯ ಭೌತಿಕ ಖಾತಾ ವ್ಯವಸ್ಥೆಯಲ್ಲಿ ಸಮಸ್ಯೆ ಏನು ? * ಪ್ರತಿಯೊಬ್ಬ ನಾಗರಿಕರು ತಮ್ಮ ಖಾತಾಗಳನ್ನು ಪಡೆಯಲು ಮತ್ತು ರೂಪಾಂತರಗಳಿಗಾಗಿ ARO ಕಚೇರಿಗಳಿಗೆ ಭೇಟಿ ನೀಡಬೇಕಾಗಿತ್ತು * ದಾಖಲೆಗಳನ್ನು ಭೌತಿಕವಾಗಿ ಸ್ಥಳೀಯವಾಗಿ ಪರಿಶೀಲಿಸಲಾಗಿದ್ದರಿಂದ ಹಿರಿಯ ಅಧಿಕಾರಿಗಳ ಅಥವಾ ವ್ಯವಸ್ಥೆಯ ಮೇಲ್ವಿಚಾರಣೆ ಸಾಧ್ಯವಾಗಲಿಲ್ಲ. * ಮಧ್ಯವರ್ತಿಗಳು ನಾಗರಿಕರಿಂದ ಹಣವನ್ನು ಸಂಗ್ರಹಿಸಿ ಅಧಿಕಾರಿಗಳನ್ನು ಪ್ರಭಾವಿಸಿದರು ಮತ್ತು ಭ್ರಷ್ಟಾಚಾರವು ತುಂಬಾ ಹೆಚ್ಚಾಗಿತ್ತು * ನಾಗರಿಕರು ಸಂಪೂರ್ಣವಾಗಿ ಮಧ್ಯವರ್ತಿ ಮತ್ತು ಅಧಿಕಾರಿಗಳ ಮೇಲೆ ಅವಲಂಬಿತರಾಗಿದ್ದರು. ಫೇನ್ಲೆಸ್, ಸಂಪರ್ಕರಹಿತ ಮತ್ತು ಆನ್ಲೈನ್ ಇಖಾತಾ ವ್ಯವಸ್ಥೆ – ಒಂದು ಕ್ರಾಂತಿ: * ಎಲ್ಲಾ ಬೆಂಗಳೂರು ನಗರ ಖಾತಾಗಳನ್ನು (25 ಲಕ್ಷಕ್ಕೂ ಹೆಚ್ಚು) https://BBMPeAasthi.karnataka.gov.in ನಾಗರಿಕರು ಯಾವುದೇ ಸಮಯದಲ್ಲಿ…














