Author: kannadanewsnow57

ಬೆಂಗಳೂರು : ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಹಲವಾರು ಸೌಲಭ್ಯಗಳನ್ನು ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ನೀವು ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿದ್ದು, ಗುರುತಿನ ಚೀಟಿ ಹೊಂದಿದ್ದಲ್ಲಿ ಮಂಡಳಿಯು ನೀಡುವ ಹಲವಾರು ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು. ನೀವು ಮಂಡಳಿಯಲ್ಲಿ ನೀಡಿರುವ ಗುರುತಿನ ಚೀಟಿ ಹೊಂದಿದ್ದೀರಾ? : ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು * ಪಿಂಚಣಿ ಸೌಲಭ್ಯ * ಕುಟುಂಬ ಪಿಂಚಣಿ ಸೌಲಭ್ಯ * ದುರ್ಬಲತೆ ಪಿಂಚಣಿ * ಟೂಲ್ ಕಿಟ್ ಸೌಲಭ್ಯ * ಹೆರಿಗೆ ಸಹಾಯಧನ ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ * ಶೈಕ್ಷಣಿಕ ಸಹಾಯಧನ * ವೈದ್ಯಕೀಯ ಸಹಾಯಧನ * ಅಪಘಾತ ಪರಿಹಾರ * ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ * ಮದುವೆ ಸಹಾಯಧನ * ತಾಯಿ ಮಗು ಸಹಾಯಹಸ್ತ

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಫೆಬ್ರವರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬೇಸಿಗೆ ಸಾಮಾನ್ಯಕ್ಕಿಂತ ಮುಂಚಿತವಾಗಿ ಬರಬಹುದು. ಉತ್ತರ ಕನ್ನಡ ಮತ್ತು ಗದಗ ಸೇರಿದಂತೆ ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಶೀತ ಅಲೆಗಳು ಮತ್ತು ಒಣ ಹವಾಮಾನವನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ https://twitter.com/i/status/1889494962468954220

Read More

ಕೋಝಿಕ್ಕೋಡ್‌ : ಮಕ್ಕಳಿಗೆ ಆಟವಾಡಲು ಬಾಟಲಿ ಕೊಡುವ ಪೋಷಕರೇ ಎಚ್ಚರ. ಕೇರಳದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಎಂಟು ತಿಂಗಳ ಮಗುವೊಂದು ಗಂಟಲಿನಲ್ಲಿ ಶಾಂಪೂ ಬಾಟಲಿಯ ಮುಚ್ಚಳ ಸಿಲುಕಿಕೊಂಡು ಸಾವನ್ನಪ್ಪಿದೆ.  ಕೋಯಿಕ್ಕೋಡ್ ನ ಮೊಹಮ್ಮದ್ ಹಾಗೂ ಅಬಿನಾ ಎಂಬ ದಂಪತಿಯ 8 ತಿಂಗಳ ಮಗು ಮನೆಯ ಆವರಣದಲ್ಲಿ ಶಾಂಪೂ ಬಾಟಲಿ ಹಿಡಿದುಕೊಂಡು ಆಟವಾಡುತಿತ್ತು. ಮಗು ಬಾಟಲಿ ಮುಚ್ಚಳ ತೆಗೆದುಕೊಂಡು ಬಾಯಿಗೆ ಹಾಕಿಕೊಂಡಿದೆ. ಪರಿಣಾಮ ಮುಚ್ಚಳ ಗಂಟಲಿನಲ್ಲಿ ಸಿಲುಕಿಕೊಂಡು ಉಸಿರಾಡಲು ಆಗದೇ ಪ್ರಜ್ಞೆ ತಪ್ಪಿದೆ. ಪೋಷಕರು  ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿತ್ತು. ಮಗುವಿನ ಶವದ ಪೋಸ್ಟ್ ಮಾರ್ಟಮ್ ಮಾಡುವಾಗ ಗಂಟಲಿನಲ್ಲಿದ್ದ ಮುಚ್ಚಳವನ್ನು ತೆಗೆಯಲಾಗಿದೆ.

Read More

ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (SGPGIMS) ನಿಧನರಾದರು ಎಂದು ಸಂಸ್ಥೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಫೆಬ್ರವರಿ 2 ರಂದು ಮೆದುಳು ಪಾರ್ಶ್ವವಾಯುವಿಗೆ ಒಳಗಾದ ನಂತರ ಆಚಾರ್ಯ ಸತ್ಯೇಂದ್ರ ದಾಸ್ ಅವರನ್ನು ಫೆಬ್ರವರಿ 3 ರಂದು ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಯಿತು, ಅವರ ಸ್ಥಿತಿ ಗಂಭೀರವಾಗಿತ್ತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಫೆಬ್ರವರಿ 4 ರಂದು ಆಚಾರ್ಯ ಸತ್ಯೇಂದ್ರ ದಾಸ್ ಅವರ ಆರೋಗ್ಯವನ್ನು ಪರಿಶೀಲಿಸಲು SGPGI ಗೆ ಭೇಟಿ ನೀಡಿದ್ದರು. ಬಾಬರಿ ಮಸೀದಿಯನ್ನು ಕೆಡವಿದಾಗಲೂ ದಾಸ್ ಡಿಸೆಂಬರ್ 6, 1992 ರಂದು ಅರ್ಚಕರಾಗಿದ್ದರು. ಧ್ವಂಸಕ್ಕೆ ಮೊದಲು ವಿಗ್ರಹಗಳನ್ನು ಹತ್ತಿರದ ಫಕೀರ್ ಮಂದಿರಕ್ಕೆ ಸ್ಥಳಾಂತರಿಸಿದವರು ಮತ್ತು ಧ್ವಂಸದ ನಂತರ, ಅವರು ರಾಮ ಜನ್ಮಭೂಮಿಯಲ್ಲಿ ತಾತ್ಕಾಲಿಕ ದೇವಾಲಯದಲ್ಲಿ ವಿಗ್ರಹಗಳನ್ನು ಇರಿಸಿದರು. ಮತ್ತು ಅಯೋಧ್ಯೆಯಲ್ಲಿ ಹೊಸ ರಾಮ ದೇವಾಲಯದ ಪವಿತ್ರೀಕರಣ…

Read More

ಬೆಂಗಳೂರು: ಪ್ರತಿಯೊಬ್ಬ ನಾಗರಿಕನು ತನ್ನ ಬಿಬಿಎಂಪಿ ಇ-ಖಾತೆ ಯನ್ನು ಸರಾಗವಾಗಿ, ಉಚಿತವಾಗಿ ತಾನೇ ಸ್ವಂತವಾಗಿ ಪಡೆಯುವುದನ್ನು ಸಕ್ರಿಯಗೊಳಿಸಲು ಈ ಕೆಳಗಿನಂತೆ ಸ್ಪಷ್ಟೀಕರಿಸಿದೆ. 1. ಅಂತಿಮ ಇ-ಖಾತೆ ಪಡೆಯಲು ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರದ ಅಗತ್ಯವಿಲ್ಲ. 2. ಕೇವಲ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ ತಕ್ಷಣದ ಮಾರಾಟ ಅಥವಾ ವಹಿವಾಟಿಗೆ ಮಾಡುವವರು ಮಾತ್ರ ಬಿಬಿಎಂಪಿ ಇ-ಖಾತೆ ವ್ಯವಸ್ಥೆಯಲ್ಲಿ ಒಂದು ಬಾರಿಗೆ ಮಾತ್ರ ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರ (EC) ಅನ್ನು ನೀಡಬೇಕಾಗುತ್ತದೆ. ಇದು ಒಟ್ಟು ಆಸ್ತಿಯಲ್ಲಿ ಕೇವಲ 5% ಆಗಿರುತ್ತದೆ. 3. ಮೇಲಿನ ವಿಶೇಷ ಪ್ರಕರಣದಲ್ಲಿ ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರವನ್ನು(EC), I. “ಯಾವ ದಿನಾಂಕದಿಂದ”- ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರವು(EC) ಹಾಲಿ ಹಕ್ಕು ಹೊಂದಿರುವ ಮಾಲೀಕನು ಕ್ರಯ/ನೋಂದಾಯಿತ ಪತ್ರದ ಮೂಲಕ ಪಡೆದ ದಿನಾಂಕದ ಕನಿಷ್ಟ ಒಂದು ದಿನದ ಹಿಂದಿನ ದಿನಾಂಕದಿಂದ ಮತ್ತು II. “ಯಾವ ದಿನಾಂಕದವರೆಗೆ”- ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರವು(EC) ದಿನಾಂಕ: 31.10.2024 ರ ವರೆಗೆ ಇರಬೇಕು 4. ಆಸ್ತಿ ಋಣಭಾರ ರಾಹಿತ್ಯ…

Read More

ನವದೆಹಲಿ : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 2024-25ನೇ ಸಾಲಿಗೆ SC ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಇವುಗಳ ಮೂಲಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಈ ವಿದ್ಯಾರ್ಥಿವೇತನಗಳು ಈಗಾಗಲೇ ಈ ಶಿಕ್ಷಣವನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಅರ್ಹತೆ: ಈ ವಿದ್ಯಾರ್ಥಿವೇತನಗಳನ್ನು ಪಡೆಯಲು, ನೀವು 2 ಅರ್ಹತೆಗಳನ್ನು ಪೂರೈಸಬೇಕು. 1. ಪೋಷಕರು ಅಥವಾ ಪೋಷಕರ ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಬಾರದು. 2. ಮಾನ್ಯತೆ ಪಡೆದ ಕಾಲೇಜುಗಳು ಮತ್ತು ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿರಬೇಕು. ಶ್ರೇಣಿ: * 11 ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ತರಗತಿಗಳಲ್ಲಿ ಎಲ್ಲಾ ಮಾನ್ಯತೆ ಪಡೆದ ಕೋರ್ಸ್‌ಗಳನ್ನು ಕಲಿಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಲಭ್ಯವಿದೆ. * ಪ್ರತಿ ಶೈಕ್ಷಣಿಕ ವರ್ಷಕ್ಕೆ 2,500 ರೂ.ಗಳಿಂದ 13,500 ರೂ.ಗಳವರೆಗೆ ನೀಡಲಾಗುವುದು. * ಅಂಗವಿಕಲ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಶೇ. 10 ರಷ್ಟು ಭತ್ಯೆ ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ:…

Read More

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಫೆಬ್ರವರಿ ಅಂತ್ಯದವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಫೆಬ್ರವರಿ ಅಂತ್ಯದವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಮದುವೆ ಪ್ರಮಾಣ ಪತ್ರ ಪೋಷಕರ ಪಡಿತರ ಚೀಟಿ ಅಗತ್ಯ. ಪಡಿತರ ಚೀಟಿಗೆ ಮಗುವಿನ ಹೆಸರು…

Read More

ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಮಾನ ಇಲಾಖೆ ಮತ್ತೊಂದು ಶಾಕ್ ನೀಡಿದೆ. ರಾಜ್ಯದಲ್ಲಿ ಈ ವಾರ ಬಿಸಿಲಿನ ಝಳ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ತಾಪಮಾನದಿಂದ ಜನರು ಹೈರಾಣಾಗಿದ್ದಾರೆ. ಫೆಬ್ರವರಿಯಲ್ಲೇ ಕೆಲವು ಜಿಲ್ಲೆಗಳಲ್ಲಿ 30-35 ಡಿಗ್ರೀ ಸೆ.ತಾಪಮಾನ ದಾಖಲಾಗುತ್ತಿದೆ. ಬಾಗಲಕೋಟೆ , ಬೆಳಗಾವಿ, ಬೀದರ್. ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಹಾವೇರಿ. ಕೊಪ್ಪಳ, ಯಾದಗಿರಿಯಲ್ಲಿ ಭಾರಿ ಹವಾಮಾನ ಬದಲಾವಣೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ. ಬಳ್ಳಾರಿ. ಬೆಂಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು. ದಾವಣಗೆರೆ, ಹಾಸನ, ಕೊಡಗು, ಕೋಲಾರ. ಮಂಡ್ಯ. ಮೈಸೂರು, ಶಿವಮೊಗ್ಗದಲ್ಲಿ ಕೂಡ ಬಿಸಿಲಿನ ಝಳ ಹೆಚ್ಚಾಗಲಿದೆ. ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು: ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12:00 ರಿಂದ 3.00 ರವರೆಗೆ). (heat wave) ತಡೆಗಟ್ಟುವ ಕಿಟ್‌ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು. ಕಾಲಕಾಲಕ್ಕೆ,…

Read More

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ನಿಧಿಯಾಸೆಗಾಗಿ ವ್ಯಕ್ತಿಯನ್ನೇ ನರಬಲಿ ಕೊಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಆಂದ್ರ ಮೂಲದ ಆನಂದ ರೆಡ್ಡಿ ಎಂಬಾತ ಪಾವಗಡದ ಜ್ಯೋತಿಷಿಯೊಬ್ಬರ ಮಾತು ನಂಬಿ ನಿಧಿಯಾಸೆಗಾಗಿ ನರಬಲಿ ಕೊಟ್ಟಿರುವ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲಿಯುತ್ತಿದ್ದ ಪ್ರಭಾಕರ ಎಂಬಾತನನ್ನು ಕರೆದೊಯ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜ್ಯೋತಿಷಿ ರಾಮಕೃಷ್ಣ ಹಾಗೂ ಆರೋಪಿ ಆನಂದ ರೆಡ್ಡಿ ಇಬ್ಬರನ್ನೂ ಬಂಧಿಸಿದ್ದಾರೆ. ಪಾವಗಡದ ಜ್ಯೋತಿಷಿ ರಾಮಕೃಷ್ಣನ ಬಳಿ ಜ್ಯೋತಿಷಿ ಮಾತು ಕೇಳಿದ ಡಾಬಾವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆನಂದ್ ರೆಡ್ಡಿ ನಿಧಿ ಸಿಗಬೇಕು ಎಂದರೆ ಪರಶುರಾಮಪುರ ಪಶ್ಚಿಮದಲ್ಲಿ ನರಬಲಿ ಕೊಡಬೇಕು ಎಂದು ಹೇಳಿದ್ದಾನೆ. ಇದನ್ನು ನಂಬಿ ನರಬಲಿ ಕೊಡಲಾಗಿದ್ದು, ಬಳಿಕ ಬಸ್ ನಿಲ್ದಾಣದ ಬಳಿ ಚಪ್ಪಲಿ ಹೊಲಿಯುವ ಕೆಲಸ ಮಾಡುತ್ತಿದ್ದ ಪ್ರಭಾಕರ ಎಂಬಾತನನ್ನು ಆನಂದ ರೆಡ್ಡಿ ಬೈಕ್ ನಿಲ್ಲಿಸಿ ಡ್ರಾಪ್ ಕೊಡುತ್ತೇನೆ ಬನ್ನಿ ಎಂದು ಕರೆದೊಯ್ದು…

Read More

ಸೋಶಿಯಲ್ ಮೀಡಿಯಾದಲ್ಲಿ ಪ್ರತಿದಿನ ಒಂದಿಲ್ಲೊಂದು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಈ ನಡುವೆ ಪ್ರಿಯಕರನೊಂದಿಗೆ ಮಾತನಾಡುತ್ತ ರೈಲ್ವೆ ಹಳಿ ಮೇಲೆ ಮಲಗಿದ್ದ ಯುವತಿ ಮೇಲೆ ರೈಲು ಹಾದು ಹೋಗಿರುವ ವಿಡಿಯೋ ವೈರಲ್ ಆಗಿದೆ. ಹೌದು, ಪ್ರೇಮಿಗಳ ವಾರ ಎಂದರೆ ಪ್ರೇಮಿಗಳ ವಾರ. ರೋಸ್ ಡೇಯಿಂದ ಪ್ರಪೋಸ್ ಡೇ, ಕಿಸ್ ಡೇ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಲು ಹಲವು ಮಾರ್ಗಗಳು. ಯಾರಾದರೂ ಪ್ರೀತಿಯಲ್ಲಿ ಬಿದ್ದಾಗ, ಅವರು ಹಗಲು ಮತ್ತು ರಾತ್ರಿಯ ನಡುವಿನ ವ್ಯತ್ಯಾಸವನ್ನು ಮರೆತುಬಿಡುತ್ತಾರೆ ಎಂದು ಹೇಳಲಾಗುತ್ತದೆ. ಪ್ರೇಮಿಗಳು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ವಿಶೇಷ ಸ್ಥಳವಿಲ್ಲ. ಅವಕಾಶಗಳು ಎಲ್ಲಿ ಒದಗಿ ಬರುತ್ತವೆಯೋ ಅಲ್ಲಿಂದಲೇ ಅವರ ಪ್ರೇಮಕಥೆ ಪ್ರಾರಂಭವಾಗುತ್ತದೆ. ಪ್ರೀತಿಸುತ್ತಿರುವ ಹುಡುಗಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ತನ್ನ ಪ್ರೇಮಿಯೊಂದಿಗೆ ಮಾತನಾಡುವಾಗ, ಈ ಹುಡುಗಿಗೆ ತಾನು ರೈಲ್ವೆ ಹಳಿಗಳ ಮೇಲೆ ಮಲಗಿ ಮಾತನಾಡುತ್ತಿದ್ದೇನೆಂದು ತಿಳಿದಿರಲಿಲ್ಲ. ಅವನಿಗೆ ಅದು ಅರ್ಥವಾಗುವ ಹೊತ್ತಿಗೆ ತುಂಬಾ ತಡವಾಗಿತ್ತು. ಯುವತಿ ಮಾತನಾಡುತ್ತಿದ್ದ ವೇಳೆಯೇ ರೈಲು ಬಂದಿದೆ. ಈ ವೇಳೆ ಯುವತಿ ಅಲ್ಲೇ…

Read More