Subscribe to Updates
Get the latest creative news from FooBar about art, design and business.
Author: kannadanewsnow57
ಬೆಳಗಾವಿ: ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಪತ್ನಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ಘಟನೆ ನಡೆದಿದೆ. ದುರ್ಗಾ ಕಾಲೋನಿಯಲ್ಲಿ ಸುನಿಲ್ ಮೂಲಿಮನಿ(33) ತನ್ನ ಕಂಪ್ಯೂಟರ್ ಶಾಪ್ ನಲ್ಲಿ ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಸುನಿಲ್ ಮಾಡಿಕೊಂಡಿದ್ದಾರೆ. 4 ವರ್ಷದ ಹಿಂದೆ ಪೂಜಾ ಎಂಬಾಕೆಯನ್ನು ಸುನಿಲ್ ಮದುವೆಯಾಗಿದ್ದರು. ದಂಪತಿಗೆ ಮೂರು ವರ್ಷದ ಒಂದು ಮಗು ಇದೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಇ-ಖಾತಾದ್ದೇ ಸದ್ದು. ಅದರಲ್ಲೂ ನಮ್ಮದು ಎ-ಖಾತಾ, ನನ್ನದು ಬಿ-ಖಾತಾ ಎಂಬುದಾಗಿ ಮಾತುಗಳು ಕೇಳಿ ಬರುತ್ತಿದೆ. ಸಾರ್ವಜನಿಕರಾದಂತ ನಿಮಗೆ ಏನಿದು ಎ-ಖಾತಾ ಅಂದ್ರೆ? ಏನಿದು ಬಿ-ಖಾತಾ ಅಂದ್ರೆ ಅನ್ನೋದು ಕೆಲವರಿಗೆ ಗೊತ್ತಿದ್ದರೇ, ಮತ್ತೆ ಕೆಲವರಿಗೆ ಗೊತ್ತಿಲ್ಲ. ಅವರಿಗೆ ಮಾಹಿತಿಗಾಗಿ ಏನಿದರು ಎರಡರ ನಡುವಿನ ವ್ಯತ್ಯಾಸ ಅಂತ ಮುಂದೆ ಓದಿ. ಸಾರ್ವಜನಿಕರಿಗೆ ಸರಳವಾಗಿ ಎ, ಬಿ-ಖಾತಾ ನಡುವಿನ ವ್ಯತ್ಯಾಸವನ್ನು ಹೇಳಬಹುದಾದರೇ ಎ-ಖಾತಾ ಅಂದ್ರೆ ಡಿಸಿ ಕನ್ವರ್ಷನ್ ಲೇಔಟ್ ಆದರೇ, ಬಿ-ಖಾತಾ ಅಂದ್ರೆ ಕಂದಾಯ ಭೂಮಿ, ತಹಶೀಲ್ದಾರ್ ಲೇಔಟ್ ಆಗಿದೆ. ಎ-ಖಾತಾ ಮಾಲೀಕರಿಗೆ ಬ್ಯಾಂಕ್ ಮೂಲಕ ಶೀಘ್ರವೇ ಸಾಲ ಸೌಲಭ್ಯಗಳು ದೊರೆತದರೇ, ಬಿ-ಖಾತಾ ನಿವೇಶನಗಳಿಗೆ ಇದು ಸ್ವಲ್ಪ ಕಷ್ಟವೇ ಎಂದು ಹೇಳಲಾಗುತ್ತಿದೆ. ಆದರೂ ಬ್ಯಾಂಕ್ ಮ್ಯಾನೇಜರ್ ಮೇಲೆ ಇದು ನಿರ್ಧಾರವಾಗಿದೆ ಎಂಬುದಾಗಿಯೂ ತಿಳಿದು ಬಂದಿದೆ. ಒಟ್ಟಾರೆಯಾಗಿ ಎ-ಖಾತ ನಿವೇಶನ ಅಂದ್ರೆ ಅದು ಡಿಸಿ ಕನ್ವರ್ಷನ್ ಲೇಔಟ್. ಸರಳವಾಗಿ ಹೇಳುವುದಾದರೆ, ಆಸ್ತಿಯು ಸಂಪೂರ್ಣವಾಗಿ ಕಾನೂನುಬದ್ಧವಾಗಿದ್ದರೆ, ಅವುಗಳನ್ನು ಎ ಖಾತಾ ಎಂದು ವರ್ಗೀಕರಿಸಲಾಗುತ್ತದೆ. ಆಸ್ತಿ…
ಶ್ರೀನಗರ : ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಹಲವೆಡೆ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮ್ಮು-ಕಾಶ್ಮೀರದ ಶೋಪಿಯಾನ, ಕುಪ್ವಾರ, ಶ್ರೀನಗರದ ಹಲವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಉಗ್ರರ ಜೊತೆಗೆ ನಂಟು ಹೊಂದಿರುವವರ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಎಲ್ಲಾ ಮೋಟಾರ್ ಬೈಕ್ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ ವಿ.ಜೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಭಾರತೀಯ ಮೋಟಾರು ವಾಹನ ಕಾಯ್ದೆ 1989 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ ಪ್ರಕಾರ ಪ್ರತಿಯೊಬ್ಬ ಮೋಟಾರ್ ಸೈಕಲ್ ವಾಹನ ಸವಾರ (Rider) ಹಾಗೂ ಹಿಂಬದಿ ಸವಾರನು (Pillion Rider) ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳಲ್ಲಿ ತಲೆಗೆ ತೀವ್ರಗಾಯಗಳಾಗಿ ಸಾವಿಗೀಡಾಗಿರುತ್ತಿರುವುದು ಕಂಡುಬರುತ್ತಿದ್ದು, ಹಾಗಾಗಿ ಪ್ರತಿಯೊಬ್ಬ ಸಾರ್ವಜನಿಕರು ವಾಹನ ಚಲಾಯಿಸುವಾಗ ಸವಾರ ಮತ್ತು ಹಿಂಬದಿ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನ ಚಲಾಯಿಸುವ ತಮ್ಮ ಕುಟುಂಬದ ಎಲ್ಲಾ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಡ್ಡಾಯವಾಗಿ ಐ.ಎಸ್.ಐ ಮಾರ್ಕ್ ಹೊಂದಿದ ಹೆಲ್ಮೆಟ್ ನ್ನು ಧರಿಸಬೇಕು. ಮುಖ್ಯವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಬೇಕು. ಪ್ರಸ್ತುತ ಜಿಲ್ಲೆಯ ಎಲ್ಲಾ ಸಾರ್ವಜನಿಕ ರಸ್ತೆಯಲ್ಲಿ ಪೊಲೀಸ್ ಇಲಾಖೆಯಿಂದ…
ಬೆಂಗಳೂರು: ಕಿರಿಕ್ ಪಾರ್ಟಿ, ಅಮೆರಿಕಾ ಅಮೆರಿಕಾ ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಕನ್ನಡದ ಖ್ಯಾತ ಸಾಹಿತಿ ಎಚ್ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಎಚ್.ಎಸ್. ವೆಂಕಟೇಶಮೂರ್ತಿ (ಎಚ್ಎಸ್ವಿ ) ಕನ್ನಡ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಎಚ್ಎಸ್ವಿ ಅವರು 100ಕ್ಕೂ ಹೆಚ್ಚು ಕನ್ನಡ ಕೃತಿಗಳನ್ನು ರಚಿಸಿದ್ದಾರೆ. ಪರಿವೃತ್ತ, ಬಾಗಿಲು ಬಡಿವ ಜನಗಳು, ಸೌಗಂಧಿಕ, “ಮೂವತ್ತು ಮಳೆಗಾಲ” ಇತ್ಯಾದಿ ಸೇರಿವೆ. ಅವರು “ಹೆಜ್ಜೆಗಳು”, “ಒಂದು ಸೈನಿಕ ವೃತ್ತಾಂತ”, “ಅಗ್ನಿವರ್ಣ” ಮುಂತಾದ ನಾಟಕಗಳನ್ನು ರಚಿಸಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೂ ತಮ್ಮ ಕೊಡುಗೆ ನೀಡಿದ್ದಾರೆ. ಅವರು ಚಿನ್ನಾರಿ ಮುತ್ತ, ಕೋಟ್ರೇಶಿ ಕನಸು”, “ಅಮೆರಿಕಾ ಅಮೆರಿಕಾ”, “ಮೈತ್ರಿ”, “ಕಿರಿಕ್ ಪಾರ್ಟಿ” ಮುಂತಾದ ಚಿತ್ರಗಳಿಗೆ ಹಾಡುಗಳು ಮತ್ತು ಸಂಭಾಷಣೆಗಳನ್ನು ರಚಿಸಿದ್ದಾರೆ. “ಮುಕ್ತ”, “ಮಹಾಪರ್ವ” ಮುಂತಾದ ಧಾರಾವಾಹಿಗಳಿಗೆ ಶೀರ್ಷಿಕೆ ಹಾಡುಗಳನ್ನು ಬರೆದಿದ್ದಾರೆ. ಜೀವನ ಚರಿತ್ರೆ • ‘ಸಿ.ವಿ.ರಾಮನ್'(೧೯೭೪) • ‘ಹೋಮಿ…
ಚೆಕ್ ಬೌನ್ಸ್ಗೆ ಸಂಬಂಧಿಸಿದ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರವು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆ, 1881 ರಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಇವು ಏಪ್ರಿಲ್ 1, 2025 ರಿಂದ ಜಾರಿಗೆ ಬಂದಿವೆ. ಈ ಬದಲಾವಣೆಗಳು ವಂಚನೆಯನ್ನು ತಡೆಗಟ್ಟುವುದು, ಪಾವತಿ ವ್ಯವಸ್ಥೆಯನ್ನು ಪಾರದರ್ಶಕಗೊಳಿಸುವುದು ಮತ್ತು ದೂರುಗಳನ್ನು ತ್ವರಿತವಾಗಿ ಪರಿಹರಿಸುವ ಗುರಿಯನ್ನು ಹೊಂದಿವೆ. ಈ ಬದಲಾವಣೆಗಳು ಮತ್ತು ಜನರ ಮೇಲೆ ಅವುಗಳ ಪರಿಣಾಮದ ಬಗ್ಗೆ ತಿಳಿದುಕೊಳ್ಳೋಣ. ಹೊಸ ಕಾನೂನಿನ ಪ್ರಕಾರ.. ಚೆಕ್ ಬೌನ್ಸ್ ಪ್ರಕರಣಗಳಲ್ಲಿ, ಅಪರಾಧಿ ಈಗ ಮೊದಲಿಗಿಂತ ಕಠಿಣ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. NI ಕಾಯ್ದೆಯ ಸೆಕ್ಷನ್ 138 ರ ಪ್ರಕಾರ.. ಚೆಕ್ ಬೌನ್ಸ್ ಆಗಿದ್ದರೆ, ಆರೋಪಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಚೆಕ್ನ ಎರಡು ಪಟ್ಟು ದಂಡ ವಿಧಿಸಬಹುದು. ಇದರೊಂದಿಗೆ, ನ್ಯಾಯಾಲಯದಲ್ಲಿ ಬಾಕಿ ಇರುವ ಚೆಕ್ ಬೌನ್ಸ್ ಪ್ರಕರಣಗಳ ವಿಚಾರಣೆಯೂ ಮೊದಲಿಗಿಂತ ವೇಗವಾಗಿರುತ್ತದೆ. ಅಂತಹ ಪ್ರಕರಣಗಳನ್ನು ತ್ವರಿತವಾಗಿ ಪರಿಹರಿಸಲು ಸರ್ಕಾರವು ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಸಹ ಜಾರಿಗೆ ತಂದಿದೆ. ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ…
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, : ರಾಜ್ಯದಲ್ಲಿ 2029 ರ ವೇಳೆಗೆ 3.5 ಲಕ್ಷ ಹೊಸ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಕೇವಲ ಎರಡು ವರ್ಷಗಳಲ್ಲಿ ದಿಟ್ಟ, ವಲಯ ಕೇಂದ್ರಿತವಾದ ಪರಿಣಾಮಕಾರಿ ನೀತಿಗಳನ್ನು ಪರಿಚಯಿಸಿದೆ. ಇದು ವಿಶ್ವದ 4ನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್ ಆಗಿ ನಮ್ಮ ಸ್ಥಾನವನ್ನು ಭದ್ರಪಡಿಸಿದೆ ಎಂದು ತಿಳಿಸಿದ್ದಾರೆ. ಜಿಸಿಸಿ ನೀತಿ: ಭಾರತದಲ್ಲಿ ಈ ರೀತಿಯ ನೀತಿ ಮೊದಲನೆಯದು. ಕರ್ನಾಟಕವು 900+ ಜಿಸಿಸಿಗಳಿಗೆ ನೆಲೆಯಾಗಿದೆ. 2029ರ ವೇಳೆಗೆ ಇನ್ನೂ 500ಕ್ಕೂ ಅಧಿಕ ಜಿಸಿಸಿಗಳನ್ನು ಸೇರ್ಪಡೆ ಮಾಡುವ, 3.5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು $50 ಬಿಲಿಯನ್ ಆರ್ಥಿಕತೆಯನ್ನು ಸಾಧಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಬಯೋಟೆಕ್ ನೀತಿ: ಕರ್ನಾಟಕವು 2030ರ ವೇಳೆಗೆ ಭಾರತದ ಜೈವಿಕ ಆರ್ಥಿಕತೆಯ ಮೂರನೇ ಒಂದು ಭಾಗದಷ್ಟು ಕೊಡುಗೆ ನೀಡಲು ಸಜ್ಜಾಗಿದೆ. ಈ ನೀತಿಯು 30,000 ಉನ್ನತ ಕೌಶಲ್ಯ ಉದ್ಯೋಗಗಳನ್ನು ಸೃಷ್ಟಿಸುತ್ತದೆ,…
ಬೆಂಗಳೂರು : ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ.ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದರು. 1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ…
ಮಂಗಳೂರು: ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೆಸರಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿಗೆ ಜೀವ ಬೆದರಿಕೆ ಹಾಕಲಾಗಿದೆ. ಹೌದು, ಪಾಕಿಸ್ತಾನ, ಅಫ್ಘಾನಿಸ್ತಾನ, ಸೌದಿ ಅರೇಬಿಯಾ ಮೊಬೈಲ್ ಸಂಖ್ಯೆಯಿಂದ ಉರ್ದು ಭಾಷೆಯಲ್ಲಿ ವಾಟ್ಸಾಪ್ ಮೂಲಕ ಆಡಿಯೋ ಮೆಸೇಜ್ ಕಳುಹಿಸಲಾಗಿದೆ. ಹಿಂದೂ ಜಾಗರಣ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ನರಸಿಂಹ ಮಾಣಿ ಅವರಿಗೆ ಬೆದರಿಕೆ ಹಾಕಲಾಗಿದೆ. ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಿನ್ನ ಹೆಸರು ಕೂಡ ಲಿಸ್ಟ್ ನಲ್ಲಿ ಇದೆ. ಚಲನವಲನ ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡ ನಮ್ಮ ಲಿಸ್ಟ್ ನಲ್ಲಿದ್ದ. ಆದರೆ, ಯಾರೋ ಒಳ್ಳೆಯ ಜನ ಅವನನ್ನು ಕೊಂದು ಹಾಕಿದ್ದಾರೆ.ನಿನ್ನ ಸ್ನೇಹಿತ ರಂಜಿತ್ ಎಂಬುವನನ್ನು ಕ್ರೂರವಾಗಿ ಕೊಲ್ಲುತ್ತೇವೆ. ರಂಜಿತ್ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದಿದ್ದೇವೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ ಎಂದು ಹೇಳಲಾಗಿದೆ. ನಿಮ್ಮನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾಗೆ ಗೊತ್ತಿಲ್ಲ. ನಿನ್ನ ಕೊಂದ…
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಜೂನ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ. ಮಹಾಮಳೆಗೆ ರಾಜ್ಯದ ಹಲವೆಡೆ ಸಾವು-ನೋವುಗಳು ಸಂಭವಿಸಿದ್ದಾವೆ. ಅಲ್ಲಲ್ಲೇ ಮನೆ, ಧನದ ಕೊಟ್ಟಿಗೆಗಳು ಬಿದ್ದು ಹಾನಿಗೊಂಡಿದ್ದಾವೆ. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಪರಿಹಾರ ನೀಡುವಂತ ಕಾರ್ಯವನ್ನು ಸ್ಥಳೀಯ ಆಡಳಿತಗಳು ಮಾಡುತ್ತಿವೆ.