Subscribe to Updates
Get the latest creative news from FooBar about art, design and business.
Author: kannadanewsnow57
ವಾಷಿಂಗ್ಟನ್ :ಅಮೆರಿಕದ ವೀಸಾ ಮತ್ತು ಗ್ರೀನ್ ಕಾರ್ಡ್ಗಳಿಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಭಾರಿ ಪರಿಹಾರ ಸಿಕ್ಕಿದೆ. ಜನ್ಮಸಿದ್ಧ ಪೌರತ್ವವನ್ನು ರದ್ದುಗೊಳಿಸುವ ಅಧ್ಯಕ್ಷ ಟ್ರಂಪ್ ಅವರ ಕಾರ್ಯನಿರ್ವಾಹಕ ಆದೇಶವನ್ನು ಮತ್ತೊಂದು ಫೆಡರಲ್ ನ್ಯಾಯಾಲಯ ರದ್ದುಗೊಳಿಸಿದೆ.ಇದಲ್ಲದೆ, ಟ್ರಂಪ್ ಕಾನೂನು ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಮತ್ತು ಸಂವಿಧಾನದ ತತ್ವಗಳೊಂದಿಗೆ ಆಟವಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ನ್ಯಾಯಾಲಯವು ಆಕ್ರೋಶ ವ್ಯಕ್ತಪಡಿಸಿತು. ಮೇರಿಲ್ಯಾಂಡ್ ಫೆಡರಲ್ ನ್ಯಾಯಾಲಯವೂ ಟ್ರಂಪ್ ಅವರ ಆದೇಶವನ್ನು ರದ್ದುಗೊಳಿಸಿದೆ ಎಂದು ತಿಳಿದಿದೆ. ನಮ್ಮ ಅಧ್ಯಕ್ಷರು ಕಾನೂನಿನ ಆಳ್ವಿಕೆಯನ್ನು ತಮ್ಮ ನೀತಿ ಗುರಿಗಳಿಗೆ ಕೇವಲ ಒಂದು ಅಡಚಣೆಯಾಗಿ ನೋಡುತ್ತಾರೆ ಎಂದು ಯುಎಸ್ ಜಿಲ್ಲಾ ನ್ಯಾಯಾಧೀಶ ಜಾನ್ ಕೆಫೆನೌರ್ ಹೇಳಿದರು. “ಕಾನೂನಿನ ನಿಯಮವು ವೈಯಕ್ತಿಕ ಅಥವಾ ರಾಜಕೀಯ ಲಾಭಕ್ಕಾಗಿ ಎಂಬುದು ಅವರ ಅಭಿಪ್ರಾಯವಾಗಿದ್ದರೂ ಸಹ, ಸಂವಿಧಾನದ ನಿಬಂಧನೆಗಳನ್ನು ಉಲ್ಲಂಘಿಸಲು ಅನುಮತಿ ಇಲ್ಲ” ಎಂದು ಅವರು ಹೇಳಿದರು. ಸರ್ಕಾರವು ನೀತಿಗಳಲ್ಲಿ ಹಸ್ತಕ್ಷೇಪ ಮಾಡಲು ಸಂವಿಧಾನವು ಸ್ಥಳವಲ್ಲ ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದರು. “ಜನ್ಮಸಿದ್ಧ ಹಕ್ಕು ಪೌರತ್ವದ ಹಕ್ಕನ್ನು ಬದಲಾಯಿಸಲು ನಾವು ಬಯಸಿದರೆ, ನಾವು…
ಪಾವಗಡ : ಹಾಲು ಉತ್ಪಾದಕರಿಗೆ ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಸಿಹಿಸುದ್ದಿ ನೀಡಿದದು, ಹಾಲು ಉತ್ಪಾದಕ ರೈತರಿಗೆ ಪ್ರತಿ ಲೀಟರ್ ಹಾಲಿಗೆ 2 ರೂ. ಪ್ರೋತ್ಸಾಹಧನ ನೀಡಲಾಗುವುದು ಎಮದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಹಾಲು ಉತ್ಪಾದಕ ರೈತರಿಗೆ 11 ರಿಂದ ಪ್ರತಿ ಲೀಟರ್ ಹಾಲಿಗೆ ಹೆಚ್ಚಳವಾಗಿ 2 ರೂ. ಪ್ರೋತ್ಸಾಹಧನ ನೀಡಲಾಗುವುದು. ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಹೆಚ್ಚು ಡೇರಿಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ರೈತರು ಖಾಸಗಿ ಡೇರಿಗಳಿಗೆ ಹಾಲು ನೀಡದೇ ಸರ್ಕಾರದಿ ಡೇರಿಗಳಿಗೆ ಹಾಕಿದಾಗ ಪ್ರೋತ್ಸಾಹಧನ, ಹಸುಗಳಿಗೆ ವಿಮೆ ಸೇರಿ ವಿವಿಧ ಸೌಲತ್ತುಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಹೆಚ್ಚಿನ ಶೇಕಡಾವಾರು ಜನರು ಸಾಮಾನ್ಯ ನೀರಿಗಿಂತ ಫಿಲ್ಟರ್ ಮಾಡಿದ ನೀರನ್ನು ಕುಡಿಯುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರು ಸಹ ಫಿಲ್ಟರ್ ಮಾಡಿದ ನೀರಿಗೆ ಒಗ್ಗಿಕೊಳ್ಳುತ್ತಿದ್ದಾರೆ. ಈಗ, ನಾವು ಹೊರಗೆ ಹೋದಾಗಲೆಲ್ಲಾ, ನೀರಿನ ಬಾಟಲಿಗಳನ್ನು ಖರೀದಿಸಿ ಕುಡಿಯುತ್ತೇವೆ. ಆದರೆ, ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುವುದು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಇದಲ್ಲದೆ, ಫಿಲ್ಟರ್ ಮಾಡಿದ ನೀರನ್ನು ಕುಡಿಯುವುದು ಸಹ ಒಳ್ಳೆಯದಲ್ಲ. ದೀರ್ಘಕಾಲದವರೆಗೆ ಫಿಲ್ಟರ್ ಮಾಡಿದ ನೀರನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಈಗ ನೀವು ಹೆಚ್ಚು ಫಿಲ್ಟರ್ ಮಾಡಿದ ನೀರನ್ನು ಕುಡಿದರೆ ಏನಾಗುತ್ತದೆ ಮತ್ತು ಯಾವ ಸಮಸ್ಯೆಗಳು ಉಂಟಾಗಬಹುದು ಎಂಬುದನ್ನು ಕಂಡುಹಿಡಿಯೋಣ. ಶುದ್ಧೀಕರಿಸಿದ ನೀರಿನಲ್ಲಿ ಅನೇಕ ವಿಷಕಾರಿ ಅಂಶಗಳು ಮತ್ತು ಲೋಹಗಳಿವೆ. ಇದು ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ನಂತಹ ಖನಿಜಗಳಿಂದ ತುಂಬಿದೆ ಎಂದು ಹೇಳಲಾಗುತ್ತದೆ. ಇದು ದೇಹದಲ್ಲಿನ ಹೆಚ್ಚುವರಿ ಸೋಡಿಯಂ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಸಾಕಷ್ಟು ಫಿಲ್ಟರ್ ಮಾಡಿದ ನೀರನ್ನು ಕುಡಿಯುವುದರಿಂದ ಮೂಳೆ ಹಾನಿ ಮತ್ತು ಮೂತ್ರಪಿಂಡದ ಕಲ್ಲುಗಳ ಅಪಾಯ ಕಡಿಮೆಯಾಗುತ್ತದೆ.…
ನವದೆಹಲಿ : ನೀಟ್ ಯುಜಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು NEET UG 2025 ಪರೀಕ್ಷೆಗೆ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.NEET UG ಪರೀಕ್ಷೆ 2025 ಬರೆಯಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ neet.nta.nic.in ನಲ್ಲಿ ನೋಂದಾಯಿಸಿಕೊಳ್ಳಬಹುದು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ತನ್ನ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ನೀಟ್ ಯುಜಿ ನೋಂದಣಿ ವಿಂಡೋವನ್ನು ತೆರೆಯುವ ಬಗ್ಗೆ ತಿಳಿಸಿದೆ. ವೈದ್ಯಕೀಯ ಕಾಲೇಜಿನ MBBS, BDS ಇತ್ಯಾದಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು NEET UG ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗುತ್ತದೆ. ವಿದ್ಯಾರ್ಥಿಗಳು NTA ಯ ಅಧಿಕೃತ ವೆಬ್ಸೈಟ್ನಲ್ಲಿ ಮಾಹಿತಿ ಬುಲೆಟಿನ್ ಅನ್ನು ಪರಿಶೀಲಿಸಬಹುದು. ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭವಾಗುವುದು ಈ ಪ್ರವೇಶ ಪರೀಕ್ಷೆಯಿಂದ. NEET UG 2025 ನೋಂದಣಿ NTA NEET UG ವೇಳಾಪಟ್ಟಿಯ ಪ್ರಕಾರ, ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಮಾರ್ಚ್ 7, 2025 ರಂದು ರಾತ್ರಿ 11.50 ರವರೆಗೆ ನೋಂದಣಿ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ನೋಂದಣಿಗೆ 1…
ಬೆಂಗಳೂರು : ಆನ್ಲೈನ್ನಲ್ಲಿ ಆಸ್ತಿ ನೋಂದಣಿ ಸಂಬಂಧ ಅಭಿವೃದ್ಧಿಪಡಿಸಿರುವ ಕಾವೇರಿ 2.0 ತಂತ್ರಾಂಶದ ಮೇಲೆ ದುಷ್ಕರ್ಮಿಗಳು ಸೈಬರ್ ದಾಳಿ ನಡೆಸಿದ್ದು, ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪನೋಂದಣಿ ಕಚೇರಿಗಳಲ್ಲಿ ಈ 5 ಕಾವೇರಿ 2.0ತ್ರಾಂಶದ ಮುಖಾಂತರ ಸ್ಥಿರಾಸ್ತಿಗಳ ದಸ್ತಾವೇಜು ನೋಂದಣಿ, ಋಣಭಾರ ಪ್ರಮಾಣ ಪತ್ರ (ಇಸಿ), ಸರ್ಟಿಫಿಕೇಟ್ ಕಾಪಿ (ಸಿಸಿ) ಮತ್ತು ಇತರ ಸೇವೆಗಳನ್ನು ನೀಡಲಾಗುತ್ತಿದೆ. ಸೈಬರ್ ವಂಚಕರು ದಾಳಿ ನಡೆಸಿದ್ದು, ಸ್ವಯಂಚಾಲಿತ ಟೂಲ್ಮ ಳನ್ನು ಬಳಸಿ ನಕಲಿ ಖಾತೆಗಳನ್ನು ತೆರೆದು ತಂತ್ರಾಂಶಕ್ಕೆ 7. ಪ್ರವೇಶ ಪಡೆದಿದ್ದರು. ಹೀಗಾಗಿ ಸರ್ವರ್ ಡೌನ್ ಆಗಿತ್ತು. ಸಿಎಂಜಿ ತಜ್ಞರ ತಂಡವು ಪರಿಶೀಲಿಸಿ ದಾಗ ಡಿಡಿಒಎಸ್ ಸೈ ಬರ್ ದಾಳಿ ನಡೆದಿರುವುದು ಗೊತ್ತಾಗಿತ್ತು. ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತ ದಯಾನಂದ್ ನೀಡಿದ ದೂರಿನ ಮೇರೆಗೆ ಎಫ್ ಐಆರ್ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ನವಗ್ರಹ’ ಸಿನಿಮಾದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಹೃದಯಾಘಾತದಿಂದ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿತು. ಏಕಾಏಕಿ ಕುಸಿದು ಬಿದ್ದ ಗಿರಿ ದಿನೇಶ್ ಅವರನ್ನ ಕೂಡಲೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಗಿರಿ ದಿನೇಶ್ ನಿಧನರಾಗಿದ್ದಾರೆ. ಗಿರಿ ದಿನೇಶ್ ಅವರು ನವಗ್ರಹ, ವಜ್ರ ಹಾಗೂ ‘ಚಮ್ಕಾಯ್ಸಿ ಚಿಂದಿ ಉಡಾಯ್ಸಿ’ ಚಿತ್ರಗಳಲ್ಲಿ ನಟಿಸಿದ್ದರು. ಇಂದು ಗಿರಿ ದಿನೇಶ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದ ಬೆನ್ನಲ್ಲೇ ಕರ್ನಾಟಕದಲ್ಲೂ ಸೋಮವಾರದಿಂದ ಕುಂಭಮೇಳ ನಡೆಯಲಿದೆ. ಭಕ್ತರಿಗೆ ಪುಣ್ಯ ಸ್ನಾನ ಮಾಡಲು 5 ಕಡೆ ಸ್ಥಳ ಗುರುತು ಮಾಡಲಾಗಿದೆ. ಮೈಸೂರು ಜಿಲ್ಲಾಡಳಿತ ಹಾಗೂ ಕುಂಭಮೇಳ ಆಚರಣಾ ಸಮಿತಿ ಸಹಯೋಗದೊಂದಿಗೆ 13ನೇ ಕುಂಭಮೇಳವನ್ನು ಫೆ.10, 11 ಮತ್ತು 12 ರಂದು ಜಿಲ್ಲೆಯ ಟಿ. ನರಸೀಪುರದ ಶ್ರೀ ಕ್ಷೇತ್ರ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದೆ. ಫೆ.10ರ ಬೆಳಗ್ಗೆ 8.30ಕ್ಕೆ ಶ್ರೀ ಅಗಸ್ತ್ಯೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅನುಜ್ಞಾ ಕಾರ್ಯಕ್ರಮ, ಅಂಕುರಾರ್ಪಣೆ ಮತ್ತು ಧ್ವಜಾರೋಹಣ ನೆರವೇರಲಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ .ಸಿ.ಮಹದೇವಪ್ಪ ಧ್ವಜಾರೋಹಣನೆರವೇರಿಸಿ, ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಫೆ.11ರಬೆಳಗ್ಗೆ 11ಕ್ಕೆಧಾರ್ಮಿಕಸಭೆಯನ್ನು ಏರ್ಪಡಿಸಲಾಗಿದ್ದು, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಉದ್ಘಾಟಿಸುವರು. ಸಚಿವರಾದ ಮಹದೇವಪ್ಪ, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಡಾ.ಎಂ.ಸಿ.ಸುಧಾಕರ್ ಭಾಗವಹಿಸುವರು. ಫೆ.12ರ ಮಧ್ಯಾಹ್ನ 12ಕ್ಕೆ ಧರ್ಮಸಭೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸಮಾರೋಪ ಭಾಷಣ ಮಾಡುವರು.
ಬೆಂಗಳೂರು : ಕೆಪಿಎಸ್ ಸಿ ಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸೂಚಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈವರೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಆದರೀಗ ಸೂಚನೆಯಲ್ಲಿ ಮಾರ್ಪಾಡು ಮಾಡಿ ಫೆ.16ರಿಂದ ಕೆಪಿಎಸ್ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್ಸಿ ಪ್ರಕಟಣೆಯಲ್ಲಿ ತಿಳಿಸಿದೆ. ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ, ಕೆಪಿಎಸ್ಸಿ ಪರೀಕ್ಷೆಗೆ ಮಾತ್ರ ಕಪ್ಪು ಬಣ್ಣದ ಪೆನ್ ಬಳಕೆಗೆ ನಿರ್ದೇಶನ ನೀಡುವುದರಿಂದ ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗುತ್ತಾರೆ. ಆಯೋಗದ ಸದಸ್ಯರು ಸಾಮಾನ್ಯವಾಗಿ ಬಳಕೆಯಲ್ಲಿರುವ ನೀಲಿ ಪೆನ್ ಬಳಕೆಗೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ. ತೆಗೆದುಕೊಳಲಾಗಿದೆ.
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆ.25 ರಿಂದ ಮಾ. 4ರವರೆಗೆ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯೂ ಏಕ ರೂಪದ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ ನೀಡಲು ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯು ಎಲ್ಲಾ ಜಿಲ್ಲಾ ಉಪ ನಿರ್ದೇಶಕರಿಗೆ ಆನ್ಲೈನ್ ಮೂಲಕ ಕಳುಹಿಸಲಿದೆ. SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಹೀಗಿದೆ ಫೆ.25- ಪ್ರಥಮ ಭಾಷೆ ಫೆ.27- ಗಣಿತ ಫೆ.28 – ದ್ವಿತೀಯ ಭಾಷೆ ಮಾ.1- ತೃತೀಯ ಭಾಷೆ, ಮಾ.3 – ವಿಜ್ಞಾನ ಮಾ.4-ಸಮಾಜ ವಿಜ್ಞಾನ ಎಲ್ಲ ಪರೀಕ್ಷೆಗಳೂ ಬೆಳಗ್ಗೆ 10ಕ್ಕೆ ಆರಂಭವಾಗಲಿದ್ದು, ದ್ವಿತೀಯ ಮತ್ತು ತೃತೀಯ ಭಾಷಾ ಪರೀಕ್ಷೆಗಳು ಮಧ್ಯಾಹ್ನ -1 ಗಂಟೆವರೆಗೆ, ಉಳಿದ ಪರೀಕ್ಷೆಗಳು ಮಾಧ್ಯಾಹ್ನ 1.15ರವರೆಗೆ ನಡೆಯಲಿವೆ.
ಬೆಂಗಳೂರು: 66/11 kV ನಂದಿನಿ ಲೇಔಟ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 09.02.2025 (ಭಾನುವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ ಕೃಷ್ಣಾನಂದ ನಗರ, RMC ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಆಪ್ಮಾ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ಟೆಂಪಲ್ರೋಡ್, ಸರಸ್ವತಿ ಪುರಂ, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್ ಕೈಗಾರಿಕಾ ಪ್ರದೇಶ, ಜೆ.ಎಸ್.ನಗರ, ಜೆ.ಸಿ.ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, 9ನೇ, 10ನೇ, 11ನೇ, 12ನೇ, 13ನೇ, 14ನೇ ಮತ್ತು 15ನೇ ಮುಖ್ಯ, ಜೆ.ಸಿ.ನಗರ, ಸಾರ್ವಜನಿಕ ರಸ್ತೆ, ಇವ್ಸ್, ರಾಜ್ಕುಮಾರ್ ಸಮಾಧಿ ರಸ್ತೆಗಳು, ಕ್ವಾಟ್ರಸ್ ಸುತ್ತಮುತ್ತ ಪ್ರದೇಶಗಳು̤













