Subscribe to Updates
Get the latest creative news from FooBar about art, design and business.
Author: kannadanewsnow57
ಚಿತ್ರದುರ್ಗ : ಶೀಘ್ರವೇ ಕಲ್ಯಾಣ ಕಲ್ಯಾಣ ಸೇರಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎರಡು ದಿನಗಳ “ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜೊತೆಗೆ ಅನುದಾನಿತ ಶಾಲೆಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಲ್ಲಿ ಶೇ.80 ರಷ್ಟು ಶಿಕ್ಷಕರನ್ನು ಆದಷ್ಟು ಶೀಘ್ರ ನೇಮಕಾತಿ ಮಾಡಿ, ಶಿಕ್ಷಣವನ್ನು ಮೇಲ್ದರ್ಜೆಗೆ ಕೊಂಡ್ಯೊಯುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ ಅವರು, ದ್ವಿತೀಯ…
ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಜಯ ಸಾಧಿಸುತ್ತಾ? ಬಿಜೆಪಿ 27 ವರ್ಷಗಳ ಬಳಿಕ ಗೆಲುವು ಸಾಧಿಸುತ್ತಾ ಎಂಬುದು ಮಧ್ಯಾಹ್ನದ ವೇಳೆಗೆ ತಿಳಿಯಲಿದೆ. ಈ ಚುನಾವಣೆಯಲ್ಲಿ, ಎಎಪಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬರುವ ಆಶಯವನ್ನು ಹೊಂದಿದ್ದರೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಸುಮಾರು ಮೂರು ದಶಕಗಳ ನಂತರ ತನ್ನ ಅಧಿಕಾರದ ಸ್ಥಾನವನ್ನು ಮರಳಿ ಪಡೆಯಲು ಬಯಸುತ್ತಿದೆ. ವಿವಿಧ ಎಕ್ಸಿಟ್ ಪೋಲ್ಗಳು ಬಿಜೆಪಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದರೆ, ಇನ್ನು ಕೆಲವು ಎಎಪಿ ಸ್ವಲ್ಪ ಮುನ್ನಡೆ ಸಾಧಿಸುವುದರೊಂದಿಗೆ ನಿಕಟ ಸ್ಪರ್ಧೆ ಇರುತ್ತದೆ ಎಂದು ಭವಿಷ್ಯ ನುಡಿದಿವೆ. ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಿಸಲು ವ್ಯಾಪಕ ವ್ಯವಸ್ಥೆ ಮಾಡಲಾಗಿದೆ. ಮತದಾನದ ನಂತರ, ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು (ಇವಿಎಂ) 19 ಸ್ಥಳಗಳಲ್ಲಿ ಹರಡಿರುವ ಸ್ಟ್ರಾಂಗ್ ರೂಮ್ಗಳಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ. ದೆಹಲಿ ಚುನಾವಣಾ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆಗೆ ಸಂಬಂಧಿಸಿದಂತೆ ತಿದ್ದುಪಡಿ ವಿಧೇಯಕದ ಕುರಿತು ರಾಜ್ಯ ಸರ್ಕಾರವು ರಾಜ್ಯಪತ್ರವನ್ನು ಪ್ರಕಟಿಸಿದೆ. ಅಧಿಸೂಚನೆ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012, ಇದನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕೆ ದಿನಾಂಕ: 18.01.2025ರ ಅಧಿಸೂಚನೆ ಸಂಖ್ಯೆ: ಸಿಆಸುಇ 103 ಸೇವನೆ 2024 ರಲ್ಲಿ ಪ್ರಕಟಿಸಿರುವ ಈ ಮುಂದಿನ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ: 18.01.2025ರ ಕರ್ನಾಟಕ ರಾಜ್ಯಪತ್ರದ ಭಾಗ IV-ಎ ರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14)ರ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿರುವುದರಿಂದ; ಸದರಿ ರಾಜ್ಯಪತ್ರವನ್ನು ದಿನಾಂಕ: 18.01.2025ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ; ಮತ್ತು, ಸದರಿ ಕರಡು ನಿಯಮಗಳ…
ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯಡಿಯಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದೆ. ಅದೇ ರೀತಿ 2023-24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲಮೋ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಫೆ.15 ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯಾದ್ಯಂತ ಇರುವ ಪದವಿ ಕಾಲೇಜುಗಳು ಹಾಗೂ ಡಿಪ್ಲಮೋ ಕಾಲೇಜುಗಳು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಿಶೇಷ ನೋಂದಣಿ ಕೌಂಟರ್ ತೆರೆಯಲಾಗಿದೆ. ಅಲ್ಲದೇ ಗ್ರಾಮ ಒನ್, ಕರ್ನಾಟಕ ಒನ್, ಚಿತ್ರದುರ್ಗ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲೂ ನಿರಂತರವಾಗಿ ಯುವನಿಧಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ನಿರುದ್ಯೋಗಿ ಯುವಕ-ಯುವತಿಯರು ಈ ವಿಶೇಷ ನೋಂದಣಿ ಅಭಿಯಾನದ ಸದುಪಯೋಗವನ್ನು ಪಡೆದುಕೊಂಡು, ಯುವನಿಧಿ ನೋಂದಣಿ ಮಾಡಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವೈಶಾಲಿ ಗೇಟ್, ಸ್ಟೇಡಿಯಂ ರೋಡ್, ಚಿತ್ರದುರ್ಗ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು…
ಇತ್ತೀಚಿನ ದಿನಗಳಲ್ಲಿ ಅನೇಕ ಚಿಕ್ಕ ಮಕ್ಕಳು ಮೊಬೈಲ್ ಫೋನ್ಗಳಿಗೆ ವ್ಯಸನಿಯಾಗಿದ್ದಾರೆ ಮತ್ತು ಮೊಬೈಲ್ ಇಲ್ಲದೆ ಅವರು ಸರಿಯಾಗಿ ಊಟ ಮಾಡಲು ಸಹ ಸಾಧ್ಯವಿಲ್ಲ.ಅವರಿಗೆ ಪ್ರತಿಯೊಂದು ಕೆಲಸಕ್ಕೂ ಮೊಬೈಲ್ ಬೇಕು. ಆದರೆ ಮಕ್ಕಳು ತಿಳಿಯದೆಯೇ ತಮ್ಮ ಪೋಷಕರಿಂದ ಮೊಬೈಲ್ ಫೋನ್ ಬಳಸುವ ಅಭ್ಯಾಸವನ್ನು ಪಡೆಯುತ್ತಾರೆ ಎಂಬುದೂ ಸತ್ಯ. ಈ ಅಭ್ಯಾಸ ಮಕ್ಕಳ ಜೀವನವನ್ನು ಹಾಳುಮಾಡಬಹುದು. ಅತಿಯಾದ ಮೊಬೈಲ್ ಬಳಕೆಯಿಂದಾಗಿ ಮಕ್ಕಳು ತಮ್ಮ ಸುತ್ತ ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದೇ ಅಭ್ಯಾಸ ಅವರನ್ನು ತಪ್ಪು ದಾರಿಗೆ ಕೊಂಡೊಯ್ಯುತ್ತದೆ. ಈ ಸಮಯದಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಆಘಾತಕಾರಿ ವೀಡಿಯೊವೊಂದು ವೈರಲ್ ಆಗುತ್ತಿದೆ, ಇದರಲ್ಲಿ ಮಗುವೊಂದು ಮಲಗಿರುವಾಗ ಗೊಣಗುತ್ತಿರುವುದು ಕಂಡುಬರುತ್ತದೆ. ಈ ವೀಡಿಯೊವನ್ನು @anil_karandekar ಅವರು Instagram ನಲ್ಲಿ ಹಂಚಿಕೊಂಡಿದ್ದಾರೆ, ಇದರಲ್ಲಿ ಒಂದು ಪುಟ್ಟ ಮಗು ನಿದ್ದೆ ಮಾಡುವಾಗ ಏನೋ ಗೊಣಗುತ್ತಿದೆ. ಸುತ್ತಮುತ್ತಲಿನ ಅನೇಕ ಜನರು ಅವನನ್ನು ಶಾಂತಗೊಳಿಸಲು ಅವನ ಕೈಗಳನ್ನು ಉಜ್ಜುತ್ತಾ ಮತ್ತು ತಲೆಯನ್ನು ಸವರುತ್ತಾ ಇರುವುದನ್ನು ಕಾಣಬಹುದು, ಆದರೆ ಮಗು ಮಾತನಾಡುವುದನ್ನು ನಿಲ್ಲಿಸುವುದಿಲ್ಲ.…
ದಾವಣಗೆರೆ : ಪ್ರಸಕ್ತ ಸಾಲಿನ ಬೇಸಿಗೆ ಹಂಗಾಮಿಗೆ ಕಾಲುವೆಯಲ್ಲಿ ನೀರು ಹರಿಸಲಾಗುತ್ತಿದ್ದು, ಕಾಲುವೆಗೆ ಅಳವಡಿಸಿರುವ ಅನಧಿಕೃತ ಪಂಪ್ಸೆಟ್ಗಳನ್ನು ಫೆಬ್ರವರಿ 7 ರಿಂದ ತೆರವುಗೊಳಿಸುವ ಕಾರ್ಯಚರಣೆಯನ್ನು ಪ್ರಾರಂಭಿಸಲಾಗುವುದು. ಈ ವಿಭಾಗ ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಶಾಖಾ ಕಾಲುವೆ ಹಾಗೂ ಹರಿಹರ ಶಾಲಾ ಕಾಲುವೆಯಲ್ಲಿನ ಮಲೇಬೆನ್ನೂರು ವಿಭಾಗ ವ್ಯಾಪ್ತಿಯಲ್ಲಿನ ಮಲೆಬೆನ್ನೂರು ಶಾಖಾ ಕಾಲುವೆಯಲ್ಲಿ ಅನಧಿಕೃತವಾಗಿ ಕಾಲುವೆ ನೀರನ್ನು ಎತ್ತಿಕೊಳ್ಳಲು ಅಳವಡಿಸಲಾಗಿರುವ ಪಂಪ್ಸೆಟ್ಗಳನ್ನು ತಕ್ಷಣ ತೆರವುಗೊಳಿಸಬೇಕು, ತಪ್ಪಿದಲ್ಲಿ ಕರ್ನಾಟಕ ನೀರಾವರಿ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭದ್ಯಾ ನಾಲಾ ವಿಭಾಗದ ಇಂಜಿನಿಯರ್ ತಿಳಿಸಿದ್ದಾರೆ.
ಬೆಳಗಾವಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿಯಾಗಿರುವ ಸುದ್ದಿ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಗಣೇಶಪುರಕ್ಕೆ ಧಾವಿಸಿ ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮೃತದೇಹಗಳನ್ನು ತರುವುದು ಸೇರಿದಂತೆ ಕುಟುಂಬಸ್ಥರಿಗೆ ಅಗತ್ಯ ನೆರವು ನೀಡುವದಾಗಿ ಭರವಸೆ ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸುಮಾರು 50 ಜನ ಪ್ರಯಾಗ್ರಾಜ್ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ಪೈಕಿ ಒಂದು ವಾಹನ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಹಿಳೆಯರು ಸ್ಥಳದಲ್ಲೆ ಸಾವನ್ನಪ್ಪಿದ್ದು, 16 ಮಂದಿಗೆ ಗಾಯಗಳಾಗಿವೆ. ಸ್ಥಳೀಯರ ಮೂಲಕ ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ವಿಷಯ ತಿಳಿಯಿತು. ಇದೀಗ ಸಚಿವರ ಸೂಚನೆಗೆ ಮೇರೆಗೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿರುವೆ ಎಂದು ಮೃಣಾಲ್ ಹೆಬ್ಬಾಳಕರ್ ಹೇಳಿದರು. ಮಧ್ಯಪ್ರದೇಶದ ಇಂಧೋರ್ ಆಸ್ಪತ್ರೆಯಲ್ಲಿ ಮೃತದೇಹಗಳಿದ್ದು, ಬೆಳಗಾವಿಗೆ ಮೃತದೇಹಗಳನ್ನು ತರುವ ವ್ಯವಸ್ಥೆ ಮಾಡಬೇಕು ಎಂದು ಸಚಿವರು…
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಮೊಬೈಲ್ ಅಥವಾ ಸ್ಮಾರ್ಟ್ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಪ್ರಮುಖ ಕೆಲಸಗಳಿಂದ ಹಿಡಿದು ಮನರಂಜನೆಯವರೆಗೆ ಮೊಬೈಲ್ ನಮಗೆ ತುಂಬಾ ಉಪಯುಕ್ತವಾಗಿದೆ. ಆದಾಗ್ಯೂ, ಕೆಲವೊಮ್ಮೆ ಮೊಬೈಲ್ನಲ್ಲಿನ ಸಂಗ್ರಹಣೆ ಪೂರ್ಣಗೊಂಡಾಗ, ಅದು ನಿಧಾನವಾಗುತ್ತದೆ. ಕೆಲವೊಮ್ಮೆ ಫೋನ್ ಕೂಡ ಹ್ಯಾಂಗ್ ಆಗಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ಬಳಕೆದಾರರು ತುಂಬಾ ಅಸಮಾಧಾನಗೊಳ್ಳುತ್ತಾರೆ. ಫೋನ್ ನಿಧಾನವಾಗಿರುವುದರಿಂದ, ಅಪ್ಲಿಕೇಶನ್ಗಳು ತಡವಾಗಿ ತೆರೆದುಕೊಳ್ಳುತ್ತವೆ. ಹಲವು ಬಾರಿ ವೀಡಿಯೊಗಳು ಮಧ್ಯಂತರವಾಗಿ ಪ್ಲೇ ಆಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಫೋನ್ನ ವೇಗವನ್ನು ಹೆಚ್ಚಿಸುವ ಮತ್ತು ಫೋನ್ ಸ್ಥಗಿತಗೊಳ್ಳದಂತೆ ಮಾಡುವ 7 ಸೆಟ್ಟಿಂಗ್ಗಳನ್ನು ತಿಳಿದುಕೊಳ್ಳಿ. 1 ಫೋನ್ ಹ್ಯಾಂಗ್ ಆಗುವುದನ್ನು ತಡೆಯಲು, ನೀವು ಫೋನ್ನಲ್ಲಿ ಆಟೋ ಡೌನ್ಲೋಡ್ ಅನ್ನು ಆಫ್ ಮಾಡಬೇಕು. ಇದಕ್ಕಾಗಿ, ಫೋನ್ ಸೆಟ್ಟಿಂಗ್ಗಳಿಗೆ ಹೋಗಿ ಮತ್ತು ಸಾಫ್ಟ್ವೇರ್ ನವೀಕರಣಕ್ಕೆ ಹೋಗಿ. ಇಲ್ಲಿ ನೀವು ನೋಡುವ ಯಾವುದೇ ಸ್ವಯಂ ಡೌನ್ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. 2 ನಿಮ್ಮ ಫೋನ್ನಲ್ಲಿರುವ ಅಪ್ಲಿಕೇಶನ್ಗಳ ಸ್ವಯಂ ನವೀಕರಣ ಮೋಡ್ ಅನ್ನು ಸಹ…
ಪ್ರಯಾಗರಾಜ್ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಇದರಲ್ಲಿ ಎಲ್ಲಾ ಸಂತರು ಮತ್ತು ಭಕ್ತರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಸಂಗಮದಲ್ಲಿ ಸ್ನಾನ ಮಾಡಿದರು. ಮಹಾ ಕುಂಭಮೇಳವನ್ನು ಹೊರತುಪಡಿಸಿ ಜನರು ಹೆಚ್ಚಾಗಿ ಗಂಗಾ ಸ್ನಾನ ಮಾಡುತ್ತಾರೆ, ಆದರೆ ಗಂಗಾ ಸ್ನಾನ ಮಾಡುವಾಗ ಎಷ್ಟು ಮುಳಗಬೇಕೆಂದು ನಿಮಗೆ ತಿಳಿದಿದೆಯೇ? ಇದನ್ನು ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಇದಲ್ಲದೆ, ಗಂಗಾ ನದಿಯಲ್ಲಿ ಸ್ನಾನ ಮಾಡುವ ಇತರ ನಿಯಮಗಳನ್ನು ಸಹ ಉಲ್ಲೇಖಿಸಲಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗಂಗಾ ಸ್ನಾನವು ಬಹಳ ಮಹತ್ವದ್ದಾಗಿದೆ. ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ಮನುಷ್ಯನ ಎಲ್ಲಾ ಪಾಪಗಳು ನಾಶವಾಗುತ್ತವೆ. ಗಂಗಾನದಿಯಲ್ಲಿ ಸ್ನಾನ ಮಾಡುವುದು ಎಷ್ಟು ಪವಿತ್ರವೆಂದು ಪರಿಗಣಿಸಲಾಗಿದೆಯೆಂದರೆ ಅದು ಮೋಕ್ಷವನ್ನು ಪಡೆಯಲು ಸಹಾಯ ಮಾಡುತ್ತದೆ. ಪೂರ್ಣಿಮೆ, ಗಂಗಾ ದಸರಾ ಮತ್ತು ಅಮವಾಸ್ಯೆಯಂತಹ ಸಂದರ್ಭಗಳಲ್ಲಿ ಗಂಗಾ ಸ್ನಾನ ಮಾಡಬೇಕು. ಈ ಸಂದರ್ಭಗಳಲ್ಲಿ, ಗಂಗಾ ನದಿಯಲ್ಲಿ ಸ್ನಾನ ಮಾಡುವುದು ವಿಶೇಷವಾಗಿ ಪುಣ್ಯಕರವೆಂದು ಪರಿಗಣಿಸಲಾಗುತ್ತದೆ. ಗಂಗಾ ಸ್ನಾನ…
ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2023-24ನೇ ಸಾಲಿನಲ್ಲಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು, ಪದವೀಧರರಿಗೆ ಪ್ರತಿ ತಿಂಗಳಿಗೆ ರೂ.3 ಸಾವಿರ ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1500 ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳು ಪೂರೈಸಿ ಹೆಸರನ್ನು ನೋಂದಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಅನುಕೂಲವಾಗುವಂತೆ ವಿಶೇಷ ನೋಂದಣಿ ಅಭಿಯಾನವನ್ನು ಫೆಬ್ರವರಿ, 15 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ನೋಂದಣಿ ಅಭಿಯಾನವು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ ಕಚೇರಿಯ ಆವರಣದಲ್ಲಿ ನಡೆಯಲಿದೆ. ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಂಗಳೂರು. ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು. ಸಿಓಇ ಕಟ್ಟಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗ ವಿನಿಮಯ ಕಛೇರಿಗಳು ಮತ್ತು…













