Author: kannadanewsnow57

ಮಂಗಳೂರು : ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಐವಾನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್ ಅವರಂತಹ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ. ರಾಷ್ಟ್ರಪತಿಗಳು ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿಯೇ ಇವರಿಗೂ ಬಂದೊದಗಲಿದೆ ಎಂದು ಹೇಳಿದ್ದರು.

Read More

ಬೆಂಗಳೂರು : ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಟೂನ್ ಮೂಲಕ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗ ರಾಜ್ಯಪಾಲರು, ಮೋದಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರನ್ನೊಳಗೊಂಡ ವ್ಯಂಗ್ಯ ಚಿತ್ರ ಪ್ರಕಟಿಸಿದ್ದಾರೆ. ಗೊಂಬೆ ಆಡ್ಸೋನು ಮೇಲೆ ಕುಂತವ್ನು ಎಂದು ಟಾಂಗ್ ಕೊಟ್ಟಿದ್ದಾರೆ. ಈ ವ್ಯಂಗ್ಯ ಚಿತ್ರದಲ್ಲಿ ಮೋದಿ ರಾಜ್ಯಪಾಲರ ತಲೆಮೇಲೆ ಕೂತು ಗೊಂಬೆ ಆಡಿಸುವವರಂತೆ ಚಿತ್ರಿಸಲಾಗಿದೆ. ಇನ್ನೊಂದೆಡೆ ಕುಮಾರಸ್ವಾಮಿಯವರು ಹಗರಣಗಳ ಫೈಲ್ ಗಳ ಮೇಲೆ ನಿಂತಿರುವಂತೆ ಬಿಂಬಿಸಲಾಗಿದೆ. ಇನ್ನು ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ, ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸಾಕು ಎಂದು ಹೇಳಿದ್ದಾರೆ. ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂಬ ಕುಮಾರಸ್ವಾಮಿಯವರ ಮಾತು ಹಾಸ್ಯಾಸ್ಪದವಾಗಿದೆ. ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ ಹೊರತು ನನ್ನದಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಎಲ್ಲಿ…

Read More

ನವದೆಹಲಿ : ಬಡ್ತಿಯು ಉದ್ಯೋಗಿಯ ಜನ್ಮಸಿದ್ಧ ಹಕ್ಕಲ್ಲ, ಆದರೆ ಕಿರಿಯರನ್ನು ಪರಿಗಣಿಸಿದಾಗ ಬಡ್ತಿಗೆ ಪರಿಗಣಿಸುವ ಹಕ್ಕು ಉದ್ಭವಿಸುತ್ತದೆ ಎಂದು ಜಾರ್ಖಂಡ್ ಹೈಕೋರ್ಟ್  ತೀರ್ಪು ನೀಡಿದೆ. ಅರ್ಜಿಯ ವಿಚಾರಣೆ ನಡೆಸಿದ ಜಾರ್ಖಂಡ್ ಹೈಕೋರ್ಟ್ನ ನ್ಯಾಯಮೂರ್ತಿ ದೀಪಕ್ ರೋಷನ್ ಅವರ ನ್ಯಾಯಾಲಯವು ಬಡ್ತಿಯು ಉದ್ಯೋಗಿಯ ಜನ್ಮಸಿದ್ಧ ಹಕ್ಕಲ್ಲ, ಆದರೆ ಕಿರಿಯರನ್ನು ಪರಿಗಣಿಸಿದಾಗ ಬಡ್ತಿಗೆ ಪರಿಗಣಿಸುವ ಹಕ್ಕು ಉದ್ಭವಿಸುತ್ತದೆ ಎಂದು ತೀರ್ಪು ನೀಡಿದೆ. ನ್ಯಾಯಾಲಯವು ಮನವಿಗೆ ಅನುಮತಿ ನೀಡಿತು. ಬೇರೆ ಯಾವುದೇ ಕಾನೂನು ಅಡೆತಡೆಗಳಿಲ್ಲದಿದ್ದರೆ ಮತ್ತು ಅರ್ಜಿದಾರರು ಸಹಾಯಕ ಎಂಜಿನಿಯರ್ ಹುದ್ದೆಗೆ ಬಡ್ತಿ ಪಡೆಯಲು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸಿದರೆ ಅರ್ಜಿದಾರರ ಪ್ರಕರಣವನ್ನು ಪರಿಗಣಿಸುವಂತೆ ಅವರು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದರು. ಆದೇಶ ಸ್ವೀಕರಿಸಿದ ನಾಲ್ಕು ವಾರಗಳಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ಅರ್ಜಿದಾರ ದಯಾ ರಾಮ್ ಅವರು ಅರ್ಜಿಯನ್ನು ಸಲ್ಲಿಸಿದ್ದರು ಎಂಬುದು ಗಮನಾರ್ಹವಾಗಿದೆ. ಸಹಾಯಕ ಎಂಜಿನಿಯರ್ ಹುದ್ದೆಗೆ ಬಡ್ತಿ ನೀಡುವ ತಮ್ಮ ಪ್ರಕರಣವನ್ನು ಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅವರು ಕೋರಿದ್ದರು. ಬಡ್ತಿಗೆ…

Read More

ನಿಮ್ಮ ಮೂತ್ರಪಿಂಡಗಳು ಹಾನಿಗೊಳಗಾಗಿವೆ ಎಂದು ತಿಳಿಯುವುದು ಹೇಗೆ ಎಂಬುದು ಇಲ್ಲಿದೆ. ಮುಂಚಿತವಾಗಿ ಜಾಗರೂಕರಾಗಿರುವುದು ಉತ್ತಮ ಇತ್ತೀಚಿನ ದಿನಗಳಲ್ಲಿ, ಯುವಕರು ಮೂತ್ರಪಿಂಡದ ಸಮಸ್ಯೆಗಳಿಂದ ಹೆಚ್ಚಾಗಿ ಬಳಲುತ್ತಿದ್ದಾರೆ. ಈ ಸಮಸ್ಯೆಯು ವಯಸ್ಸನ್ನು ಲೆಕ್ಕಿಸದೆ ಅನೇಕ ಜನರನ್ನು ಕಾಡುತ್ತಿದೆ. ವೈದ್ಯಕೀಯ ತಜ್ಞರ ಪ್ರಕಾರ, ಮಧುಮೇಹ, ವೃದ್ಧಾಪ್ಯ, ಅಧಿಕ ರಕ್ತದೊತ್ತಡ ಮತ್ತು ಆನುವಂಶಿಕ ಕೊರತೆಯು ಕೆಲವು ಜನರಿಗೆ ಮೂತ್ರಪಿಂಡದ ಸಮಸ್ಯೆಗಳನ್ನು ಉಂಟುಮಾಡಬಹುದು. ದೇಶದಲ್ಲಿ ಲಕ್ಷಾಂತರ ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯುತ್ತಾರೆ. ಏಕೆಂದರೆ ಸಮಸ್ಯೆ ಹೆಚ್ಚು ತೀವ್ರವಾಗಿರುತ್ತದೆ ಮತ್ತು ಅಲ್ಲಿಯವರೆಗೆ ರೋಗಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಆದಾಗ್ಯೂ, ಈ ರೋಗವನ್ನು ಪತ್ತೆಹಚ್ಚಲು, ರೋಗನಿರ್ಣಯ ಪರೀಕ್ಷೆಯನ್ನು ಮಾಡಬೇಕು. ಅಥವಾ ಕೆಲವು ಚಿಹ್ನೆಗಳನ್ನು ಅವಲಂಬಿಸಿ, ಮೂತ್ರಪಿಂಡಗಳು ಹಾನಿಗೊಳಗಾದವು ಎಂದು ಗುರುತಿಸಬಹುದು. ಅವು ಯಾವುವು ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯೋಣ. ಕೆಲವರು ಎಷ್ಟೇ ಕೆಲಸ ಮಾಡಿದರೂ ಆಯಾಸಗೊಳ್ಳುವುದಿಲ್ಲ. ಆದಾಗ್ಯೂ, ಇತರರು ಸಣ್ಣ ಕೆಲಸಗಳನ್ನು ಮಾಡುವುದರಿಂದ ಆಯಾಸಗೊಳ್ಳುತ್ತಾರೆ. ಇವುಗಳಲ್ಲಿ ಯಾವುದಾದರೂ ಕೆಲಸವನ್ನು ಮಾಡಿ ನೀವು ಆಯಾಸಗೊಂಡಿದ್ದರೆ, ನಿಮ್ಮ ಮೂತ್ರಪಿಂಡಗಳು ಹಾನಿಗೊಳಗಾಗಿವೆ…

Read More

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಲ್ಲಲಿದೆ. ಈಗಾಗಲೇ ಹೈಕಮಾಂಡ್ ನಾಯಕರು ಬೆಂಬಲ ನಿಲ್ಲುವುದಾಗಿ ತಿಳಿಸಿದ್ದಾರೆ ಎಂದರು. ಸಿದ್ದರಾಮಯ್ಯ ರಾಜ್ಯದಲ್ಲಿನ ಬೆಳವಣಿಗೆ ಕುರಿತು ಹೈಕಮಾಂಡ್ ಮಾಹಿತಿ ನೀಡಲಿದ್ದಾರೆ. ಅದನ್ನು ಹೊರತುಪಡಿಸಿದ್ರೆ ವಿಶೇಷವೇನು ಇಲ್ಲ ಎಂದು ಹೇಳಿದ್ದಾರೆ.

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ. ಿನ್ನು ಮುಂದಿನ 24 ಗಂಟೆಯಲ್ಲಿ ದಕ್ಷಿಣ ಕನ್ನಡ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ 15 ಜಿಲ್ಲೆಗಳಲ್ಲಿ 6 ರಿಂದ  11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ DA & HRA ಹಾಗೂ ಇತರೆ ಭತ್ಯೆಗಳ ಆದೇಶ ಪ್ರಕಟಿಸಲಿದೆ. ಈ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಮಾಹಿತಿ ಹಂಚಿಕೊಂಡಿದ್ದು,  ಈಗಾಗಲೇ ರಾಜ್ಯ 7ನೇ ವೇತನ ಆಯೋಗದ fitment ಆದೇಶವನ್ನು ಸರ್ಕಾರ ಹೊರಡಿಸಿದ್ದು, DA & HRA ಹಾಗೂ ಇತರೆ ಭತ್ಯೆಗಳ ಆದೇಶವನ್ನು ಇನ್ನೆರಡು ದಿನಗಳಲ್ಲಿ ಆಗಲಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಫಿಟ್ ಮೆಂಟ್ ಮಾಹಿತಿಗಳು HRMS ನಲ್ಲಿ upload ಮಾಡುವ ಕಾರ್ಯ ಆಗಿದ್ದು, ಇನ್ನೆರಡು ದಿನಗಳಲ್ಲಿ DA & HRA ಹಾಗೂ ಇತರೆ ಭತ್ಯೆಗಳ ಆದೇಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ  ನೌಕರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ಸಿಕ್ಕಂತಾಗಿದೆ. ವರದಿ : ವಸಂತ್ ಈಶ್ವರಗೆರೆ

Read More

ಬೆಂಗಳೂರು: ದಿನಾಂಕ 22.08.2024 (ಗುರುವಾರ) ಬೆಳಿಗ್ಗೆ 10:00 ಗಂಟೆಯಿxದ ಮದ್ಯಾಹ್ನ 03:00 ಗಂಟೆಯವರೆಗೆ “ಸರ್ ಎಮ್.ವಿ 220/66/11ಕೆ.ವಿ ಜಿ.ಐ.ಎಸ್ ಇಡಿಸಿ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇಂದು  ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ರೆಸಿಡೆನ್ಸಿ ರಸ್ತೆ, ಹೊಂಡೈ ಆರ್.ಎಮ್.ಯು, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ರ‍್ಚ್ ಸ್ಟ್ರೀಟ್, ಕಸ್ತರ‍್ಬಾ ರಸ್ತೆ, ಸೇಂಟ್ ಮರ‍್ಕ್ಸ್ ರಸ್ತೆ, ಕ್ವೀನ್ಸ್ ವೃತ್ತ, ರೆಸಿಡೆನ್ಸಿ ರಸ್ತೆ ಕ್ರಾಸ್, ಐ.ಟಿ.ಸಿ ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಆ.22ರಂದು ಈ ಏರಿಯಾಗಳಲ್ಲಿಯೂ ಪವರ್ ಕಟ್  ದಿನಾಂಕ 22.08.2024 (ಗುರುವಾರ) ಬೆಳಿಗ್ಗೆ 10:30 ಗಂಟೆಯಿAದ ಮಧ್ಯಾಹ್ನ 04:00 ಗಂಟೆಯವರೆಗೆ ‘66/11ಕೆ.ವಿ ಹೆಚ್.ಬಿ.ಆರ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹೆಚ್.ಬಿ.ಆರ್. 1ನೇ ಬ್ಲಾಕ್,…

Read More

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಂಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ಕುಮಾರ್‌ ಮಾಹಿತಿ ನೀಡಿದ್ದು,  ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಪಕ್ಷದ ನಾಯಕರಾದ ಆರ್‌.ಅಶೋಕ ಮಂಡ್ಯ, ಡಾ.ಸಿ.ಎನ್‌.ಅಶ್ವತ್ಥನಾರಾಯಣ್ ಮತ್ತು ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ರೆ. ಡಿ.ವಿ.ಸದಾನಂದಗೌಡ ತುಮಕೂರಿನಲ್ಲಿ, ಬಸವರಾಜ ಬೊಮ್ಮಾಯಿ ದಾವಣಗೆರೆ, ಗೋವಿಂದ ಕಾರಜೋಳ ಚಿತ್ರದುರ್ಗ, , ಬಿ.ಶ್ರೀರಾಮುಲು ಬಳ್ಳಾರಿ, ಸಿ.ಟಿ.ರವಿ ಚಿಕ್ಕಮಗಳೂರು, ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ.

Read More

ನೀರು ಜೀವನದ ಆಧಾರ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ನೀವು ಕುಡಿಯುವ ನೀರು ಶುದ್ಧವಾಗಿದೆಯೇ ಅಥವಾ ಇಲ್ಲವೇ ಎಂದು ನಿಮಗೆ ತಿಳಿದಿದೆಯೇ? ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಮಟ್ಟವು ತುಂಬಾ ಹೆಚ್ಚಾಗಿದೆ, ನೀರು ಸಹ ಕಲುಷಿತಗೊಳ್ಳುತ್ತಿದೆ. ಕಲುಷಿತ ನೀರನ್ನು ಕುಡಿಯುವುದರಿಂದ ಹೊಟ್ಟೆ ನೋವು, ಅತಿಸಾರ, ವಾಂತಿ, ಟೈಫಾಯಿಡ್, ಕಾಲರಾ ಮುಂತಾದ ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು. ಕಲುಷಿತ ನೀರನ್ನು ಗುರುತಿಸುವುದು ಹೇಗೆ? ಬಣ್ಣ: ಶುದ್ಧ ನೀರು ಬಣ್ಣರಹಿತವಾಗಿರುತ್ತದೆ. ನೀರಿಗೆ ಬಣ್ಣವಿದ್ದರೆ, ಅದು ಕಲುಷಿತವಾಗಬಹುದು. ವಾಸನೆ: ಶುದ್ಧ ನೀರಿಗೆ ವಾಸನೆ ಇರುವುದಿಲ್ಲ. ನೀರಿನ ವಾಸನೆ ಇದ್ದರೆ, ಅದು ಕಲುಷಿತವಾಗಬಹುದು. ರುಚಿ: ಶುದ್ಧ ನೀರು ಸಿಹಿ ರುಚಿಯನ್ನು ಹೊಂದಿರುತ್ತದೆ. ನೀರು ಕೆಟ್ಟ ರುಚಿಯನ್ನು ಹೊಂದಿದ್ದರೆ, ಅದು ಕಲುಷಿತವಾಗಬಹುದು. ಕಲ್ಮಶಗಳು: ನೀರಿನಲ್ಲಿ ತೇಲುತ್ತಿರುವ ಧೂಳು, ಮಣ್ಣು ಮುಂತಾದ ಕಣಗಳು ಕಲುಷಿತ ನೀರಿನ ಸಂಕೇತವಾಗಿರಬಹುದು. ನೀರಿನ ಮೂಲ: ನೀರಿನ ಮೂಲವು ಕಲುಷಿತವಾಗಿದ್ದರೆ, ನೀರು ಸಹ ಕಲುಷಿತಗೊಳ್ಳುವ ಸಾಧ್ಯತೆಯಿದೆ. ಕಲುಷಿತ ನೀರನ್ನು ತಪ್ಪಿಸಲು ಏನು ಮಾಡಬೇಕು? ನೀರನ್ನು ಕುದಿಸಿ: ಕನಿಷ್ಠ 1…

Read More