Author: kannadanewsnow57

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ನರ್ಸ್ ಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ನರ್ಸ್ ಗಳ ವೇತನ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ NHM ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನರ್ಸ್ ಸಿಬ್ಬಂದಿ ಪ್ರತಿನಿಧಿಗಳು ಆರೋಗ್ಯ ಸೌಧದಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಅವರು, ನರ್ಸ್ ಸಂಘಟನೆಯ ಪ್ರತಿನಿಧಿಗಳ ಅಹವಾಲುಗಳನ್ನ ಆಲಿಸಿ ವೇತನ ಹೆಚ್ಚಳ ಕುರಿತು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. NHM ಯೋಜನೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆಯಿಂದ ನಡೆಯುತ್ತಿದ್ದು, ವೇತನ ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಬೇಕಾಗುತ್ತದೆ. ಈ ಬಗ್ಗೆ ಸಭೆ ಕರೆದು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ನರ್ಸ್ ನೇಮಕಾತಿ ವೇಳೆ NHM ಅಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಕೃಪಾಂಕ ನೀಡುವ ಬಗ್ಗೆ ತೀರ್ಮಾನಿಸಲಾಗುವುದು. ಇದರೊಂದಿಗೆ…

Read More

ಬೆಂಗಳೂರು : ಮಾರ್ಚ್ 1 ರ ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಈ ಬಾರಿ 400 ಸಿನಿಮಾ ಪ್ರದರ್ಶನಗೊಳ್ಳಲಿದೆ. ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದು, ಚಿತ್ರೋತ್ಸವಕ್ಕೆ ಸಂಬಂಧಿಸಿದ ಐದು ಪುಸ್ತಕಗಳನ್ನು ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಲಿದ್ದಾರೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ ಕಿಶೋರ್ ಕುಮಾರ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 5 ಖ್ಯಾತ ಸಂಗೀತ ಸಂಯೋಜಕ ಹಾಗೂ ಪಿಟೀಲು ವಾದಕ ಪದ್ಮಭೂಷಣ ಡಾ. ಎಲ್. ಸುಬ್ರಮಣ್ಯಂ ಹಾಗೂ ಖ್ಯಾತ ಕಾಯಕಿ ಪದ್ಮಶ್ರೀ ಕವಿತಾ ಸುಬ್ರಮಣ್ಯಂ ಅವರಿಂದ ಸಂಗೀತ ರಸ ಸಂಜೆ ನಡೆಯಲಿದೆ. ಈ ಬಾರಿ ಮಹಿಳಾ ಚಲನಚಿತ್ರದ ಬಗ್ಗೆ ನಟಿ ರಮ್ಯಾ, ನಂದಿನಿ ರೆಡ್ಡಿ ಸಂವಾದ ನಡೆಸಲಿದ್ದಾರೆ. ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. 2024 ರ ಜನಪ್ರಿಯ ಸಿನಿಮಾ ‘ಅಮರನ್’ ಚಿತ್ರದ ನಿರ್ದೇಶಕರು ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವರ್ಷದ ಚಲನಚಿತ್ರೋತ್ಸವದ…

Read More

ಚಿತ್ರದುರ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-6 ನೇ ಸಾಲಿನ ಒಂದು ವರ್ಷದ ಅವಧಿಗೆ ಹಿರಿಯೂರು ತಾಲ್ಲೂಕು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರದ ಮೇರೆಗೆ ಅತಿಥಿ ಶಿಕ್ಷಕರು ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನವನ್ನು ಮಾ. 8 ರಂದು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ. ತರಬೇತಿ ಪಡೆದ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಇಂಗ್ಲೀಷ್, ಕನ್ನಡ, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಸಂಗೀತ, ಕ್ರೀಡಾ ತರಬೇತುದಾರ(ಹೆಣ್ಣು), ಕಲೆ. ಸ್ನಾತಕೋತ್ತರ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಇಂಗ್ಲೀಷ್, ಭೌತಶಾಸ್ತ್ರ, ಕನ್ನಡ, ಗಣಿತ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ, ಕಂಪ್ಯೂಟರ್ ವಿಜ್ಞಾನ ವಿಷಯಗಳ ಶಿಕ್ಷಕರು. ವಸತಿ ನಿಲಯ ಮೇಲ್ವಿಚಾರಕರು(ಮಹಿಳೆ) ಕೌನ್ಸಿಲರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ. ಪ್ರತಿ ವಿಷಯಕ್ಕೆ ಒಂದು ಹುದ್ದೆ ಮಾತ್ರ ಲಭ್ಯವಿರುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ವಸತಿ ಶಾಲೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಮೂಲ ಪ್ರಮಾಣ…

Read More

ಬಳ್ಳಾರಿ : ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳ ಬಳಿಕ ಇದೀಗ ಬಳ್ಳಾರಿ ಜಿಲ್ಲೆಯಲ್ಲೂ ಹಕ್ಕಿಜ್ವರ ಆತಂಕ ಮನೆ ಮಾಡಿದ್ದು, ಜಿಲ್ಲೆಯಲ್ಲಿ 4,000 ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ್ದು, ಹಕ್ಕಿಜ್ವರದ ಶಂಕೆ ಮೂಡಿದೆ. ಕೋಳಿ ಜ್ವರ ಪತ್ತೆಯಾದ ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿಯಲ್ಲಿ ಮತ್ತೆ 8 ಕೋಳಿಗಳು ಸಾವನ್ನಪ್ಪಿದ್ದು, ಗ್ರಾಮವನ್ನು ಹಕ್ಕಿಜ್ವರ ಬಾಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ವರದಿಯಾಗಿರುವ ಹಕ್ಕಿ ಜ್ವರ (ಬರ್ಡ್ ಫ್ಲೂ) ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತೆ ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನ ಇಲಾಖೆ, ಬಿಎಮ್‌ಆರ್‌ಸಿ, ಮಹಾನಗರ ಪಾಲಿಕೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಮಾಹಿತಿ ಶಿಕ್ಷಣ ಸಂವಹನ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಹಕ್ಕಿಜ್ವರ ಕುರಿತು ಸೇರಿದಂತೆ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು…

Read More

ಬೆಂಗಳೂರು : ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನವನ್ನು ಈಡೇರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. “ರಾಜ್ಯದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿದೆ. ಸ್ಥಳೀಯವಾಗಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಬಹುದೇ ಹೊರತು ಲೋಡ್ ಶೆಡ್ಡಿಂಗ್ ಮಾಡುವ ಸಂದರ್ಭ ಉದ್ಭವವಾಗುವುದಿಲ್ಲ. ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ ಎಂದರೆ, ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುಂದುವರಿಯುತ್ತಿದೆ. ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಅರ್ಥ ಎಂದು ತಿಳಿಸಿದರು. ಇಂಧನ ಭದ್ರತೆಗೆ ಪಂಪ್ಡ್‌ ಸ್ಟೋರೇಜ್‌, ಬ್ಯಾಟರಿ…

Read More

ಚಿತ್ರದುರ್ಗ : ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಮಾ. 01 ರಂದು ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸುಮಾರು 50 ಕ್ಕೂ ಹೆಚ್ಚು ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯವಿದೆ. ಹಲವಾರು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ನೀಡಲು ಸಮ್ಮತಿಸಿ ನೊಂದಣಿ ಮಾಡಿಕೊಂಡಿವೆ. ಈ ಪೈಕಿ ಕಿರ್ಲೋಸ್ಕರ್, ಎಲ್ ಅಂಡ್ ಟಿ, ನಂತಹ ಬೃಹತ್ ಕಂಪನಿಗಳು ಸೇರಿದಂತೆ ಫೈನಾನ್ಸ್, ಐಟಿ ಕಂಪನಿಗಳು, ಮೊಬೈಲ್ ಕಂಪನಿಗಳು, ಫರ್ಟಿಲೈಜರ್, ಆಟೋಮೊಬೈಲ್, ಗಾರ್ಮೆಂಟ್ಸ್, ಫಾರ್ಮ ಕಂಪನಿಗಳು ಪ್ರಮುಖವಾಗಿವೆ. ಈ ಎಲ್ಲ ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯವಿದ್ದು, ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಲು ಸುವರ್ಣಾವಕಾಶ ಒದಗಿಬಂದಿದೆ. ಈಗಾಗಲೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಭ್ಯರ್ಥಿಗಳು…

Read More

ನವದೆಹಲಿ: ರೈಲ್ವೆಯಲ್ಲಿ 32,438 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ನಡೆಯುತ್ತಿದೆ. ಈಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 1 ರ ಇಂದು ಕೊನೆಯ ದಿನವಾಗಿದೆ. ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ತಮ್ಮ ಅರ್ಜಿ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಬೇಕು ಏಕೆಂದರೆ ಕೊನೆಯ ದಿನಾಂಕದ ನಂತರ ರೈಲ್ವೆ ನೇಮಕಾತಿ ಮಂಡಳಿಯು ಅರ್ಜಿ ವಿಂಡೋವನ್ನು ಮುಚ್ಚುತ್ತದೆ. ಪ್ರಮುಖ ದಿನಾಂಕಗಳು: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-01-2025 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01-03-2025 ರೈಲ್ವೆ ಗ್ರೂಪ್‌ ಡಿ ಹುದ್ದೆಗಳ ವಿವರ ಹೀಗಿದೆ ಟ್ರ್ಯಾಕ್ ಮೇಂಟೆನರ್ ಗ್ರೇಡ್‌ IV ತಾಂತ್ರಿಕ ವಿಭಾಗದ ಸಹಾಯಕ ಅಸಿಸ್ಟಂಟ್‌ ಪಾಯಿಂಟ್ಸ್‌ಮನ್ ಟ್ರ್ಯಾಕ್‌ ಮನ್ ಅಸಿಸ್ಟಂಟ್ ಬ್ರಿಡ್ಜ್‌ ಇತರೆ ಹಲವು ವಿಭಾಗಗಳ ಲೆವೆಲ್‌ 1 ಪೋಸ್ಟ್‌ಗಳು: ಆರ್ಆರ್ಬಿ ಗ್ರೂಪ್ ಡಿ ಅರ್ಹತಾ 2025 ಎನ್ಸಿವಿಟಿ / ಎಸ್ಸಿವಿಟಿಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರೌಢಶಾಲಾ (10 ನೇ ತರಗತಿ) ಪೂರ್ಣಗೊಳಿಸಿದ ಅಥವಾ ಎನ್ಸಿವಿಟಿ ಒದಗಿಸಿದ…

Read More

ನವದೆಹಲಿ : ಮಾರ್ಚ್ ಆರಂಭವು ದೈನಂದಿನ ಜೀವನದ ಹಲವಾರು ಅಂಶಗಳ ಮೇಲೆ ಪರಿಣಾಮ ಬೀರುವ ಹಲವಾರು ಮಹತ್ವದ ಬದಲಾವಣೆಗಳನ್ನ ತರುತ್ತದೆ. ನಾಮನಿರ್ದೇಶನಗಳು, ಎಲ್ಪಿಜಿ ಸಿಲಿಂಡರ್ ಬೆಲೆಗಳು, ಎಫ್ಡಿ ದರಗಳು, ಯುಪಿಐ ಪಾವತಿಗಳು, ತೆರಿಗೆ ಹೊಂದಾಣಿಕೆಗಳು ಮತ್ತು ಜಿಎಸ್ಟಿ ಭದ್ರತೆಗೆ ಸಂಬಂಧಿಸಿದ ನಿಯಮಗಳಿಗೆ ನವೀಕರಣಗಳು ಮಾರ್ಚ್ 1, 2025 ರಿಂದ ಜಾರಿಗೆ ಬರಲಿವೆ. ಪ್ರಮುಖ ಬದಲಾವಣೆಗಳ ವಿವರ ಇಲ್ಲಿದೆ.! ಮಾರ್ಚ್’ನಿಂದ ಸೆಬಿಯ ಹೊಸ ನಿಯಮ : ಮ್ಯೂಚುವಲ್ ಫಂಡ್ ಫೋಲಿಯೊಗಳು ಮತ್ತು ಡಿಮ್ಯಾಟ್ ಖಾತೆಗಳಿಗೆ ನಾಮನಿರ್ದೇಶನ ಪ್ರಕ್ರಿಯೆಯನ್ನು ಪುನರುಜ್ಜೀವನಗೊಳಿಸುವ ಸಲುವಾಗಿ, ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಹೊಸ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದೆ. ಮಾರ್ಚ್ 1, 2025 ರಿಂದ ಜಾರಿಗೆ ಬರುವ ಪರಿಷ್ಕೃತ ನಿಯಮಗಳು ಆಸ್ತಿ ವರ್ಗಾವಣೆಯನ್ನ ಸುಲಭಗೊಳಿಸುವ ಉದ್ದೇಶವನ್ನು ಹೊಂದಿವೆ, ವಿಶೇಷವಾಗಿ ಹೂಡಿಕೆದಾರರ ಅನಾರೋಗ್ಯ ಅಥವಾ ಸಾವಿನ ಸಂದರ್ಭದಲ್ಲಿ. ಹೂಡಿಕೆದಾರರು ತಿಳಿದುಕೊಳ್ಳಬೇಕಾದ ಪ್ರಮುಖ ಬದಲಾವಣೆಗಳು.! * ಹೂಡಿಕೆದಾರರು ಈಗ ಮ್ಯೂಚುವಲ್ ಫಂಡ್ ಮತ್ತು ಡಿಮ್ಯಾಟ್ ಖಾತೆಗಳಿಗೆ 10 ವ್ಯಕ್ತಿಗಳನ್ನು…

Read More

ಬೆಂಗಳೂರು : ಮಾರ್ಚ್ 1 ರ ಇಂದಿನಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ನಿಗದಿತ ದಿನದಂದು ಪರೀಕ್ಷೆಗಳ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ಪರೀಕ್ಷಾ ಅಕ್ರಮ ತಡೆಗೆ ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಾರಿಗೊಳಿಸಿದ್ದ ವೆಬ್ ಕಾಸ್ಟಿಂಗ್ ಕಣ್ಗಾವಲನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿಸ್ತರಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷೆ ಗೌಪ್ಯತೆ, ಪರೀಕ್ಷೆಯ ಪಾವಿತ್ರ್ಯತೆ ಮತ್ತು ಸಮಗ್ರತೆಗೆ ಧಕ್ಕೆಯಾಗದಂತೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ. 1171 ಕೇಂದ್ರಗಳ ಪ್ರತಿ ಕೊಠಡಿಯಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಯಾವುದೇ ಕೊಠಡಿಯಲ್ಲಿ ವಿದ್ಯಾರ್ಥಿ ಮಾತನಾಡುವುದು, ನಕಲು ಮಾಡುವುದು, ಕಾಪಿ ಚೀಟಿ ಇಟ್ಟುಕೊಂಡು ಪರೀಕ್ಷೆ ಬರೆಯುವುದು ಇತರೆ ಯಾವುದೇ ಅಕ್ರಮ ನಡೆದರೆ ಅದನ್ನು ವೆಬ್ ಕಾಸ್ಟಿಂಗ್ ಮೂಲಕ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪಿಸಿರುವ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಲ್ಲಿ ಒಂದು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂಬುದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮೊದಲ ಆದೇಶವೊಂದು ಹೊರಬಿದ್ದಿದೆ. ಅದೇನು ಅಂತ ಮುಂದೆ ಓದಿ. ದಿನಾಂಕ: 1.4.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಸರ್ಕಾರಿ ಆದೇಶವನ್ನು ಹೊರಡಿಸಲಾಗಿರುತ್ತದೆ. ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ: 30.6.2024 ರೊಳಗೆ ಅಭಿಮತವನ್ನು ಪಡೆದು ಕ್ರೋಢೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿತ್ತು ಎಂದಿದ್ದಾರೆ. ಮುಂದುವರೆದು ದಿನಾಂಕ: 24.1.2024 ರ ಸರ್ಕಾರಿ ಆದೇಶದನ್ವಯ ಡಿಫೆನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿ ಜಮೆಯಾಗಿರುವ ಸರ್ಕಾರದ ಹಾಗೂ…

Read More