Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂ ರಹಿತ ಕೃಷಿ ಕಾರ್ಮಿಕರಿಗೆ ಭೂ ಖರೀದಿಸಿ ಕೃಷಿ ಜಮೀನು ಒದಗಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತಗಳಿಂದ ಅನುಷ್ಠಾನಗೊಳಿಸುತ್ತಿರುವ ಭೂ ಒಡೆತನ ಯೋಜನೆಗೆ ಸಂಬಂಧಿಸಿದಂತೆ, ಸರ್ಕಾರದ ಕಂದಾಯ ಇಲಾಖೆ (ನೋಂದಣಿ ಮತ್ತು ಮುದ್ರಾಂಕ ಇಲಾಖೆ) ವಿವಿಧ ತರಹದ ಜಮೀನುಗಳಿಗೆ ಮಾರ್ಗಸೂಚಿ ಬೆಲೆಯನ್ನು ನಿರ್ಧರಿಸಿ ಕಾಲಕಾಲಕ್ಕೆ ಹೊರಡಿಸುವ ಅಧಿಸೂಚನೆಗಳನ್ನು ಅನುಸರಿಸಿ ಪ್ರತಿ ಎಕರೆಗೆ ಮಾರ್ಗಸೂಚಿ ದರ (guidance value) ದಂತೆ ಭೂ ಒಡೆತನ ಯೋಜನೆಯಡಿಯಲ್ಲಿ ಖರೀದಿಸಲು ಅನುಮೋದನೆ ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ ಆದೇಶಿಸಿದೆ. ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತಗಳಿಂದ ಅನುಷ್ಠಾನಗೊಳಿಸುತ್ತಿರುವ ಭೂ ಒಡೆತನ…
ಬೆಂಗಳೂರು : ರಾಜ್ಯ ಸರ್ಕಾರವು ಮಹಿಳಾ ನೌಕರರಿಗೆ ಋತುಚಕ್ರ ರಜೆಗೆ ಮಹತ್ವದ ಆದೇಶ ಹೊರಡಿಸಿದ್ದು, ಇದೀಗ ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳಾ, ಲಿಂಗತ್ವ ಅಲ್ಪಸಂಖ್ಯಾತ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದರಂತೆ ವರ್ಷಕ್ಕೆ 12 ವೇತನ ಸಹಿತ ಋತುಚಕ್ರ ರಜೆ ನೀಡಲು ಮುಂದಾಗಿದೆ. ಹೌದು, ಕರ್ನಾಟಕ ಮಹಿಳಾ ಯೋಗಕ್ಷೇಮ ಕಾಯ್ದೆ-2025 ಜಾರಿಗೆ ರಾಜ್ಯ ಸರ್ಕಾರ ಸಜ್ಜಾಗಿದ್ದು, ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವ ಸಾಧ್ಯತೆಯಿದೆ. ಕಾಯ್ದೆಯಡಿ ರಾಜ್ಯದಲ್ಲಿ ಕರ್ನಾಟಕ ಯೋಗಕ್ಷೇಮ ಪ್ರಾಧಿಕಾರ ರಚಿಸಲಾಗುವುದು. ಜೊತೆಗೆ ಮುಟ್ಟು ಅವಧಿಯಲ್ಲಿ ಮಹಿಳೆಗೆ ರಜೆ ನೀಡದಿರುವುದು, ಭೇದಭಾವ ಮಾಡುವುದು, ಅಸ್ಪೃಶ್ಯರಂತೆ ಕಂಡರೆ 5,000 ರು. ದಂಡ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ. ರಾಜ್ಯದಲ್ಲಿ ಋತುಚಕ್ರ ರಜೆ ಶಿಕ್ಷಣ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ಕಾರ್ಖಾ ನೆಗಳು ಹಾಗೂ ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳಲ್ಲಿನ ಮಹಿಳಾ ಉದ್ಯೋಗಿಗಳಿಗೆ ರಜೆ ಅನ್ವಯವಾಗಲಿದೆ. ಲಿಂಗತ್ವಅಲ್ಪಸಂಖ್ಯಾತ ವ್ಯಕ್ತಿಗಳಲ್ಲಿ ಟ್ರಾನ್ಸ್ ಮೆನ್ ಹಾಗೂ ಟ್ರಾನ್ಸ್ ವುಮೆನ್ ಇಬ್ಬರಿಗೂ ಈ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಇನ್ನು…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರ್ ಅತಿ ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : `KSRTC’ ಬಸ್-ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ಉತ್ತರ, ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ…
ಬೆಳಗಾವಿ : ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಮಂಡಿಸಿದರು. ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ, ಕೋಮುಗಲಭೆ, ಕಾನೂಜು ಸುವ್ಯವಸ್ಥೆ ಹದಗೆಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕ ತಂದಿದೆ. ದ್ವೇಷ ಭಾಷಣದ ಮೂಲಕ ಸಮಾಜದ ಸಾಮರಸ್ಯ ಕದಡುವ ಕೃತ್ಯ ತಡೆಯುವ ಉದ್ದೇಶ ಹೊಂದಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ಪ್ರತಿಬಂಧಕ) ವಿಧೇಯಕವನ್ನು ಬುಧವಾರ ಸರ್ಕಾರ ಮಂಡಿಸಿತು. ದ್ವೇಷ ಹರಡುವವರಿಗೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ವಿಧಿಸುವುದು, ಸಂತ್ರಸ್ತರಿಗೆ ಪರಿಹಾರ ನೀಡುವುದು ಸೇರಿ ಹಲವು ಕಠಿಣ ಅಂಶಗಳನ್ನು ಈ ವಿಧೇಯಕ ಹೊಂದಿದೆ.…
ಬೆಳಗಾವಿ : ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಚುಕ್ಕೆ ಗುರುತಿನ ಉತ್ತರಿಸಿದ ಸಚಿವರು, ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 570 ಜನರನ್ನು ಬಂಧಿಸಲಾಗಿದೆ. ಒಟ್ಟು 29,603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ಜಪ್ತಿ ಮಾಡಲಾಗಿದೆ,ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ…
ಬೆಂಗಳೂರು : ಇ-ಸ್ವತ್ತು ಅಭಿಯಾನ ಕುರಿತಾದ ಯಾವುದೇ ಗೊಂದಲಗಳ ಪರಿಹಾರಕ್ಕೆ ರಾಜ್ಯಾದ್ಯಂತ ಜಿಲ್ಲಾ ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಲಾಗಿದೆ. ಈ ಕೆಳಗಿನ ಪೋರ್ಟಲ್ಗೆ ಲಾಗಿನ್ ಆಗಿ ನಿಮ್ಮ ಆಸ್ತಿ ವಿವರಗಳನ್ನು ತುಂಬಿಸಿ, ಅರ್ಜಿ ಸಲ್ಲಿಸಿ: https://eswathu.karnataka.gov.in/ ಈ ಯೋಜನೆಯನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಲಾಗಿದೆ. ಹೀಗಿವೆ ಜಿಲ್ಲಾವಾರು ಸಹಾಯವಾಣಿ ಸಂಖ್ಯೆಗಳು ಬಾಗಲಕೋಟೆ- 08354-200180 ಬಳ್ಳಾರಿ- 08392267453 ಬೆಳಗಾವಿ – 9187082089 ಬೆಂಗಳೂರು ಗ್ರಾಮಾಂತರ- 080-29781057 ಬೆಂಗಳೂರು -080-26710580 ಬೆಂಗಳೂರು ದಕ್ಷಿಣ-080-27276714 ಬೀದರ್-08482-231494 ಚಿಕ್ಕಬಳ್ಳಾಪುರ-08156-277016 ಚಿಕ್ಕಮಗಳೂರು- 9480528888 ಚಾಮರಾಜನಗರ-0822-224015 ಗದಗ-08372-234364 ದಾವಣಗೆರೆ-8192261825 ಧಾರವಾಡ- 0836-2448481 ಚಿತ್ರದುರ್ಗ-18004251978 ದಕ್ಷಿಣ ಕನ್ನಡ- 0824-2451036
ಬೆಂಗಳೂರು : ಮಧ್ಯಾಹ್ನ ಉಪಹಾರ ಯೋಜನೆಯಡಿ ಕರ್ತವ್ಯ ನಿರ್ವಹಿಸಿ 60 ವರ್ಷಗಳ ವಯೋಮಾನ ಪೂರೈಸಿ ಕೆಲಸದಿಂದ ಬಿಡುಗಡೆ ಹೊಂದಿರುವ ಅಡುಗೆ ಸಿಬ್ಬಂದಿಗಳಿಗೆ ಇಡಿಗಂಟು ಸೌಲಭ್ಯ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಪಿ.ಎಂ.ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸಿ ದಿನಾಂಕ 31-03-2022 ಮತ್ತು ನಂತರ ನವೆಂಬರ್-2025ರ ಅಂತ್ಯದ ವರೆಗೆ 60 ವರ್ಷಗಳ ವಯೋಮಾನ ಪೂರೈಸಿ ಕೆಲಸದಿಂದ ಬಿಡುಗಡೆ ಹೊಂದಿರುವ ಅಡುಗೆ ಸಿಬ್ಬಂದಿಗಳಿಗೆ ಇಡಿಗಂಟು ಸೌಲಭ್ಯವನ್ನು ಉಲ್ಲೇಖ (1) ಮತ್ತು (2) ರಲ್ಲಿ ಮಂಜೂರು ಮಾಡಿ ಆದೇಶಿಸಿರುತ್ತಾರೆ. ಆದರೂ ಸಹ ಈವರೆಗೆ ಅಡುಗೆ ಸಿಬ್ಬಂದಿಗಳಿಗೆ ಪಾವತಿಯಾಗಿರುವ ಬಗ್ಗೆ ಈ ಕಛೇರಿ ಪೂರ್ಣವಾದ ಮಾಹಿತಿ ತಲುಪಿರುವುದಿಲ್ಲ. ಆದ್ದರಿಂದ ಈ ಪತ್ರ ತಲುಪಿದ 3 ದಿನಗಳಲ್ಲಿ ಮಾಹಿತಿಯನ್ನು ತಾಲ್ಲೂಕುವಾರು ಕೆಳಕಂಡ ನಮೂನೆಯಲ್ಲಿ ನುಡಿ 6.1 ಅಥವಾ ನುಡಿ 6 ರನಲ್ಲಿ ಭರ್ತಿ ಮಾಡಿ ಕ್ರೋಢೀಕರಿಸಿ ರಾಜ್ಯ ಕಛೇರಿಯ ಎಂ3 ವಿಭಾಗದ ಇ-ಮೇಲ್ ವಿಳಾಸಕ್ಕೆ…
ಬೆಂಗಳೂರು : ರಾಜ್ಯದ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಒಂದೇ ಸೂರಿನಡಿ ಜನತೆಗೆ ಎಲ್ಲ ಇಲಾಖೆಗಳ ಈ ಎಲ್ಲಾ ಸೇವೆ ಸಿಗಲಿವೆ. ಕಟ್ಟಡ ಸಂಬಂಧಿತ 1 ಕಟ್ಟಡ ಅನುಮತಿ ವಿತರಣೆ 2ತೆರಿಗೆ ನಿರ್ಧರಣಾ ಪಟ್ಟಿ ವಿತರಣೆ 3 ಬೇಡಿಕೆ/ಕಂದಾಯ ನಕಲು ಪಟ್ಟಿ 4 ಆಸ್ತಿ ತೆರಿಗೆ ಮನ್ನಾ ಅರ್ಜಿ 5 ಕಟ್ಟಡ ಕಾಮಗಾರಿಯ ಮುಕ್ತಾಯ ಪ್ರಮಾಣ ಪತ್ರ ವಿತರಣೆ 6 ಹೊಸ ನೀರಿನ ಸಂಪರ್ಕಕ್ಕಾಗಿ ಅರ್ಜಿ 7 ಕೊಳವೆ ಬಾವಿ ನಿರ್ಮಾಣದ ವಿವರ ತಿಳಿಸುವುದು 8 ನೀರಿನ ಸಂಪರ್ಕ ಕಡಿತ 9 ಕೊಳವೆ ಬಾವಿ ನಿರ್ಮಾಣ ಮುಕ್ತಾಯ ವ್ಯಾಪಾರ ಪರವಾನಗಿ ಸಂಬಂಧಿತ 10 ವ್ಯಾಪಾರ ಪರವಾನಗಿ ವಿತರಣೆ 11 ಕಾರ್ಖಾನೆ ಪರವಾನಗಿ ವಿತರಣೆ 12 ಜಾಹೀರಾತು ಪರವಾನಗಿ ವಿತರಣೆ…














